Connect with us

ದೇಶ

 99 ಸಹೋದರರ ಹತ್ಯೆ ಮಾಡಿ ಇಲ್ಲಿ ಹಾಕಿದ್ದನಂತೆ ಚಕ್ರವರ್ತಿ ಅಶೋಕ!? ಏನು ಹೇಳುತ್ತೆ ಇತಿಹಾಸ? 

Published

on

ಪಾಟ್ನಾ: ಬಿಹಾರದಲ್ಲಿದೆ ಒಂದು ನಿಗೂಢವಾದ ಬಾವಿ. ಸದಾ ಜೀವಂತಿಕೆಯಿಂದ ಇರುವ ಈ ಬಾವಿಯಲ್ಲಿ ಇದುವರೆಗೆ ನೀರು ಬತ್ತಿದ್ದೇ ಇಲ್ಲವಂತೆ. ಸ್ವತಃ ಚಕ್ರವರ್ತಿ ಅಶೋಕನೂ ಈ ಬಾವಿಯ ನೀರು ಖಾಲಿ ಮಾಡಲು ವಿಫಲನಾಗಿದ್ದ ಎನ್ನುತ್ತವೆ ಇಲ್ಲಿನ ಸ್ಥಳೀಯರ ದಂತಕಥೆಗಳು. ಹಾಗಾದರೆ ಈ ಬಾವಿ ಬಿಹಾರದಲ್ಲಿ ಎಲ್ಲಿದೆ? ಏನಿದರ ವಿಶೇಷತೆ? ಇತಿಹಾಸ ಏನು ಹೇಳುತ್ತದೆ? ಇಲ್ಲಿದೆ ಮಾಹಿತಿ..

ಚಕ್ರವರ್ತಿ ಸಾಮ್ರಾಟ್​ ಅಶೋಕನನ್ನು ಭಾರತದ ಅತ್ಯಂತ ಪ್ರಭಾವಶಾಲಿ ಆಡಳಿತಗಾರರಲ್ಲಿ ಒಬ್ಬ ಎನ್ನುತ್ತದೆ ಇತಿಹಾಸ. ಮೌರ್ಯ ರಾಜವಂಶದ ಮೂರನೇ ದೊರೆ. ಮೌರ್ಯ ರಾಜವಂಶದ ಸ್ಥಾಪಕ ಚಂದ್ರಗುಪ್ತ ಮೌರ್ಯನ ಮಗ ಬಿಂದುಸಾರನ ಮಗ. ಅಶೋಕನ ಜನ್ಮ ದಿನವನ್ನು ಬಿಹಾರದಲ್ಲಿ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಕ್ರಿಸ್ತಪೂರ್ವ 304ರಲ್ಲಿ ಜನಿಸಿ, ಕ್ರಿ.ಪೂ. 269 ರಿಂದ 232 ರವರೆಗೆ ಆಡಳಿತ ನಡೆಸಿದ ಅಶೋಕನ ಜನ್ಮದಿನವನ್ನು ಏಪ್ರಿಲ್​ 14 ರಂದು ಆಚರಿಸಲು ಬಿಹಾರ ಸರ್ಕಾರ ನಿರ್ಧರಿಸಿತ್ತು. ಆದರೆ, ಅಶೋಕ ಚೈತ್ರಮಾಸದ ಅಷ್ಟಮಿಯ ದಿನ ಹುಟ್ಟಿದ ಕಾರಣ, ಬಿಹಾರದಲ್ಲಿ ಚೈತ್ರ ಅಷ್ಟಮಿಯನ್ನು ಅಶೋಕ ಅಷ್ಟಮಿ ಎಂದೂ ಕೊಂಡಾಡಲಾಗುತ್ತದೆ.

ಈ ಸಂದರ್ಭದಲ್ಲಿ ಚಕ್ರವರ್ತಿ ಅಶೋಕ ನಿರ್ಮಿಸಿದ ಎಂದು ಹೇಳುವ ಬಿಹಾರದ ಪಾಟ್ನಾದ ಕುಮ್ರಾರ್ ಪುರಾತತ್ವ ಸ್ಥಳದಲ್ಲಿರುವ ಈ ನಿಗೂಢ ಬಾವಿಯ ಬಗ್ಗೆ ತಿಳಿಯೋಣ ಬನ್ನಿ..

ಸಿಂಹಳೀಯ ಸಾಹಿತ್ಯದಲ್ಲಿರುವ ಇತಿಹಾಸ ಏನು ಹೇಳುತ್ತೆ?: ಈಟಿವಿ ಭಾರತ ಜೊತೆಗೆ ಮಾತನಾಡಿದ ಇತಿಹಾಸಕಾರ ಪ್ರೊ.ಆದಿತ್ಯ ನಾರಾಯಣ್​ ಝಾ, “ಕ್ರಿಸ್ತಪೂರ್ವ 269ರಲ್ಲಿ ತಂದೆ ಬಿಂದುಸಾರನ ಮರಣಾನಂತರ ಉತ್ತರಾಧಿಕಾರಿಯಾಗಿ ಪಟ್ಟವೇರಿದ ಅಶೋಕ ನಂತರ ರಾಜನಾಗಿ ಆಳ್ವಿಕೆ ನಡೆಸುತ್ತಾನೆ. ಉತ್ತರಾಧಿಕಾರಿಯಾಗಿ ಸಿಂಹಾಸನವೇರಿದ 8 ವರ್ಷಗಳವರೆಗೆ ಅಶೋಕ ಅತ್ಯಂತ ಕ್ರೂರ ಆಡಳಿತಗಾರನಾಗಿದ್ದನು. ಅದಕ್ಕಾಗಿಯೇ ಕೆಲವು ಐತಿಹಾಸಿಕ ಮೂಲಗಳಲ್ಲಿ ಅವನನ್ನು ಚಂದಾಶೋಕ ಅಥವಾ ಕಾಮಶೋಕ ಎಂದೂ ಕರೆಯಲಾಗುತ್ತದೆ. ಈ ವಿವರಣೆಗಳು ಯಾವುದೇ ಭಾರತೀಯ ಸಾಹಿತ್ಯದಲ್ಲಿ ಕಂಡು ಬರುವುದಿಲ್ಲ. ಈ ಎಲ್ಲ ವಿಷಯಗಳು ಶ್ರೀಲಂಕಾದಲ್ಲಿ ಬರೆದ ಬೌಧ ಸಾಹಿತ್ಯದಲ್ಲಿವೆ. ಸಿಂಹಳೀಯ ಸಾಹಿತ್ಯದ ದೀಪವಂಶ ಮತ್ತು ಮಹಾವಂಶದಲ್ಲಿ ಅಶೋಕನ ಬಗ್ಗೆ ಈ ರೀತಿಯ ವಿವರಣೆಗಳನ್ನು ಬರೆಯಲಾಗಿದೆ” ಎನ್ನುತ್ತಾರೆ ಅವರು. ಬಿಹಾರದ ರಾಜಧಾನಿ ಪಾಟ್ನಾದಲ್ಲಿರುವ ಈ ನಿಗೂಢ ಬಾವಿಯನ್ನು ಚಕ್ರವರ್ತಿ ಅಶೋಕನ ಕಾಲದಲ್ಲಿ ನಿರ್ಮಿಸಲಾಗಿದೆ ಎಂದು ದಂತಕಥೆಗಳು ಉಲ್ಲೇಖಿಸುತ್ತವೆ. ನಂತರದಲ್ಲಿ ಈ ಬಾವಿಯನ್ನು ಪಾಟ್ನಾದ ಆಗಮ ಕುವಾನ್​ (ಎಂದರೆ ಎಂದೂ ಬತ್ತದ ಬಾವಿ – ಆಳವರಿಯಲಾಗದ ಬಾವಿ) ಎಂದು ಗುರುತಿಸಲಾಯಿತು. ಈ ಆಗಮ ಕುವಾನ್​ ಬಗ್ಗೆ ಅನೇಕ ರೀತಿಯ ಕಥೆಗಳು ಜನರಲ್ಲಿ ಪ್ರಚಲಿತದಲ್ಲಿವೆ. ಈ ಬಾವಿಯನ್ನು ಆಳವಾದ ಬಾವಿಗಳಲ್ಲಿ ಒಂದು ಎಂದು ಪರಿಗಣಿಸಲಾಗಿದ್ದು, ಇದರ ಆಳ 105 ಅಡಿ ಎಂದು ಹೇಳಲಾಗುತ್ತದೆ.

ಎಂದೂ ಬತ್ತದ ಬಾವಿ: ಅಶೋಕ ತನ್ನ ಆಳ್ವಿಕೆ ಅವಧಿಯಲ್ಲಿ ಈ ಬಾವಿಯನ್ನು ಕೊರೆಯಿಸಿದ್ದನು ಎಂದು ಪ್ರತೀತಿ ಇದೆ. ಇದರ ನೀರು ಎಂದೂ ಬತ್ತುವುದಿಲ್ಲ. ದೇಶದಲ್ಲಿ ಅನೇಕ ಕ್ಷಾಮಗಳು ಬಂದು ಹೋಗಿವೆ. ಆದರೆ ಆ ಕಾಲದಲ್ಲೂ ಈ ಬಾವಿಯ ನೀರುವ ಬತ್ತಿರಲಿಲ್ಲ. ಸ್ವತಃ ಅಶೋಕನೂ ಈ ಬಾವಿಯ ನೀರು ಖಾಲಿ ಮಾಡುವಲ್ಲಿ ವಿಫಲನಾಗಿದ್ದನು ಎಂದು ಹೇಳಲಾಗುತ್ತದೆ. ಈ ಬಾವಿಯನ್ನು ಬ್ರಿಟಿಷ್​ ಪರಿಶೋಧಕ ಲಾರೆನ್ಸ್​ ವಾಡೆಲ್​ ಕಂಡು ಹಿಡಿದನು.

ಅಶೋಕನ ಕಾಲದ ಬಾವಿಯ ಇತಿಹಾಸ: ಚಕ್ರವರ್ತಿ ಅಶೋಕನ ಆರಂಭದ ಆಳ್ವಿಕೆ ಹಾಗೂ ಆತನ ಪಟ್ಟಾಭಿಷೇಕಕ್ಕೂ ಮೊದಲು ಕ್ರೂರ ಆಡಳಿತ ನಡೆಸಿದ್ದ ಎಂಬ ಇತಿಹಾಸ ಇದೆ. ಈ ಅವಧಿಯಲ್ಲಿ ತನ್ನ 99 ಸಹೋದರರು ಮತ್ತು ಸಂಬಂಧಿಕರನ್ನು ಕೊಂದು ಅವರ ದೇಹಗಳನ್ನು ಈ ಬಾವಿಗೆ ಎಸೆದಿದ್ದನು ಎನ್ನುವ ಜಾನಪದ ಇತಿಹಾಸ ಇಲ್ಲಿ ಜನಪ್ರಿಯವಾಗಿದೆ. ಈ ಬಗ್ಗೆ ಯಾವುದೇ ಅಧಿಕೃತ ಐತಿಹಾಸಿಕ ಪುರಾವೆಗಳು ಇನ್ನೂ ಕಂಡು ಬಂದಿಲ್ಲ. ಆದರೆ ಸಿಂಹಳೀಯ ಸಾಹಿತ್ಯದಲ್ಲಿರುವ ಇತಿಹಾಸದಲ್ಲಿ ಇದನ್ನು ಉಲ್ಲೇಖಿಸಲಾಗಿದೆ. ಚಕ್ರವರ್ತಿ ಅಶೋಕನ ಮರಣದ ಸುಮಾರು 400 ವರ್ಷಗಳ ನಂತರ ಇತಿಹಾಸದಲ್ಲಿ ಆಗಮ ಕುವಾನ್​ ಬಗ್ಗೆ ಬರೆದ ಸಾಹಿತ್ಯದಲ್ಲಿ ಕಂಡು ಬರುತ್ತವೆ. ಅಶೋಕನ ಅವಧಿಯಲ್ಲಿ ಬರೆದ ಐತಿಹಾಸಿಕ ಪುಸ್ತಕಗಳಲ್ಲಿ ಅಥವಾ ಅವನ ಮರಣದ ಕೆಲವು ದಿನಗಳ ನಂತರದಲ್ಲಿ ಬರೆದಂತಹ ಸಾಹಿತ್ಯಗಳಲ್ಲಿ ಈ ಬಗ್ಗೆ ಯಾವುದೇ ಉಲ್ಲೇಖವಿಲ್ಲ ಎನ್ನುತ್ತಾರೆ ಪ್ರೊ.ಆದಿತ್ಯ ನಾರಾಯಣ್​ ಝಾ.

ಕಳಿಂಗ ಯುದ್ಧದ ನಂತರ ಮನ ಪರಿವರ್ತನೆ: ಕ್ರಿ.ಪೂ 261ರಲ್ಲಿ ಕಳಿಂಗ ಯುದ್ಧ ನಡೆದಿತ್ತು. ಆ ಬಹುದೊಡ್ಡ ಯುದ್ಧದಲ್ಲಿ ಲಕ್ಷಾಂತರ ಸಾಮಾನ್ಯ ಜನರು ಪ್ರಾಣ ಕಳೆದುಕೊಂಡಿದ್ದರು. ಕಳಿಂಗ ಯುದ್ಧ ಕೇವಲ ಎರಡು ರಾಜ್ಯಗಳ ನಡುವಿನ ಯುದ್ಧವಾಗಿರದೇ, ಮೊದಲ ನರಮೇಧವಾಗಿತ್ತು. ಈ ಯುದ್ಧದ ಬಳಿಕ ಅಶೋಕನ ಮನಸ್ಸು ಪರಿವರ್ತನೆಯಾಯಿತು. ನಂತರ ಈತ ಅನುಸರಿಸಿದ ಧಮ್ಮನೀತಿ ಭಾರತದಲ್ಲಿ ಮಾತ್ರವಲ್ಲದೇ, ಭಾರತದ ಹೊರಗೂ ಶಾಂತಿಯ ಸಂದೇಶವನ್ನು ಸಾರಿತ್ತು. ಆದ್ದರಿಂದಲೇ ಈತನನ್ನು ಇತಿಹಾಸದ ಪುಟಗಳಲ್ಲಿ ಸನ್ಯಾಸಿ ರಾಜ ಎಂದು ಕರೆಯಲಾಗುತ್ತದೆ.

ಕಳಿಂಗ ಯುದ್ಧಕ್ಕೂ ಮುನ್ನ ಶೈವ ಸಿದ್ಧಾಂತವನ್ನು ಪಾಲಿಸುತ್ತಿದ್ದ. ಆದರೆ ಕಳಿಂಗ ಯುದ್ಧಾ ನಂತರ ಶಾಂತಿಯ ಸಂಕೇತವಾದ ಬೌದ್ಧ ಧರ್ಮವನ್ನು ಅಳವಡಿಸಿಕೊಂಡನು. ಇದಾದ ಬಳಿಕ ಅಹಿಂಸಾ ಮಾರ್ಗದಲ್ಲಿ ಸಾಗಿ ಇಡೀ ಜಗತ್ತಿಗೆ ಅಹಿಂಸೆಯ ಸಂದೇಶವನ್ನು ಸಾರಿದ್ದನು. ನಂತರ ಯುದ್ಧಗಳನ್ನು ತ್ಯಜಿಸುವುದಾಗಿ ಘೋಷಿಸಿದ್ದನು. ಮಾತ್ರವಲ್ಲದೇ ಆತನ ನಂತರದ ಮೌರ್ಯ ಪೀಳಿಗೆ ಕೂಡ ಎಂದಿಗೂ ಯುದ್ಧ ಮಾಡುವುದಿಲ್ಲ. ಧಮ್ಮನೀತಿಯನ್ನು ಪಾಲಿಸುತ್ತಾರೆ ಎನ್ನುವ ವಾಗ್ಧಾನವನ್ನು ಮಾಡಿದ್ದನು. ಕಳಿಂಗ ಯುದ್ಧದ ನಂತರವೂ ಚಕ್ರವರ್ತಿ ಅಶೋಕ ರಾಜ್ಯಾಡಳಿತ ನಡೆಸಿದ್ದನು. ರಾಜನಾಗಿದ್ದರೂ, ಸಕಲ ವೈಯಕ್ತಿಕ ಭೋಗಗಳನ್ನು ತ್ಯಜಿಸಿ, ಸನ್ಯಾಸಿ ರಾಜನಾಗಿ ಅಂದರೆ ಏನೂ ಇಲ್ಲದ ರಾಜನಾಗಿ, ಹಳದಿ ಬಟ್ಟೆ ಧರಿಸಿ ಬೌದ್ಧ ಯೋಗಿಯಾಗಿದ್ದ. ಉಳಿದ ಅಧಿಕಾರಾವಧಿಯಲ್ಲಿ ದೇಶದ ಇತರ ಭಾಗಗಳಲ್ಲಿ ಧಾರ್ಮಿಕ ಸಾಮರಸ್ಯವನ್ನು ಸ್ಥಾಪಿಸುವ ಕೆಲಸ ಮಾಡಿದ್ದ ಎನ್ನುತ್ತಾರೆ ಆದಿತ್ಯ ನಾರಾಯಣ್​.

ಈ ನಿಗೂಢ ಬಾವಿ ಬಗೆಗಿದೆ ಧಾರ್ಮಿಕ ನಂಬಿಕೆ: ಈ ಬಾವಿ ಮಾತಾ ಶೀತಲ ದೇವಾಲಯದ ಅಂಗಳದಲ್ಲಿದೆ. ಇದು ಪಾಟ್ನಾದ ಅತ್ಯಂತ ಹಳೆಯ ದೇವಾಲಯ. ಇಲ್ಲಿಗೆ ಭಕ್ತಿಯಿಂದ ಬರುವ ಭಕ್ತರು ಯಾವುದೇ ಇಷ್ಟಾರ್ಥ ಇದ್ದರೂ ಈಡೇರುತ್ತವೆ ಎಂದು ಹೇಳಲಾಗುತ್ತದೆ. ಈ ಬಾವಿಯ ನೀರನ್ನು ಶೀತಲ ಮಾತೆಯ ಪೂಜೆಗೆ ಬಳಸಲಾಗುತ್ತದೆ. ಈ ಬಾವಿಗೆ ನೈವೇದ್ಯ ಸಲ್ಲಿಸಿದರೆ ಇಷ್ಟಾರ್ಥಗಳು ನೆರವೇರುತ್ತವೆ. ಜೊತೆಗೆ ಬಾವಿಯ ನೀರು ದೇಹದ ಪ್ರತಿಯೊಂದು ಕಾಯಿಲೆಯನ್ನು ಗುಣಪಡಿಸುತ್ತದೆ ಎಂಬ ನಂಬಿಕೆ ಇಲ್ಲಿನ ಜನರಲ್ಲಿದೆ.

ಕ್ರೀಡೆ

ಕೃಣಾಲ್ ಪಾಂಡ್ಯ ಬೌಲಿಂಗ್‌ಗೆ ಕಾವ್ಯ ಮಾರನ್ ಆಕ್ಷೇಪ? ವೈರಲ್ ಆಯ್ತು SRH ಮಾಲಕಿಯ ರಿಯಾಕ್ಷನ್‌

Published

on

ಹೈದರಾಬಾದ್: Indian Premier League 2026ನಲ್ಲಿ ಶುಕ್ರವಾರ ನಡೆದ Sunrisers Hyderabad ಹಾಗೂ Royal Challengers Bengaluru ನಡುವಿನ ಹೈವೋಲ್ಟೇಜ್ ಪಂದ್ಯ ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ. ಆರ್‌ಸಿಬಿ ಸ್ಪಿನ್ನರ್ Krunal Pandya ಎಸೆದ ಬೌನ್ಸರ್‌ಗಳಿಗೆ ಸನ್‌ರೈಸರ್ಸ್‌ ತಂಡದ ಸಿಇಒ ಹಾಗೂ ಮಾಲಕಿ Kavya Maran ಆಕ್ಷೇಪ ವ್ಯಕ್ತಪಡಿಸಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಕೃಣಾಲ್ ಪಾಂಡ್ಯ ಸತತವಾಗಿ ವೇಗದ ಬೌನ್ಸರ್‌ಗಳನ್ನು ಎಸೆದರು. ಸ್ಪಿನ್ನರ್ ಆಗಿದ್ದರೂ ಗಂಟೆಗೆ 120-130 ಕಿ.ಮೀ ವೇಗದಲ್ಲಿ ಚೆಂಡು ಎಸೆಯುತ್ತಿರುವುದರ ಬಗ್ಗೆ ಈಗಾಗಲೇ ಹಲವು ಮಾಜಿ ಕ್ರಿಕೆಟಿಗರು ಪ್ರಶ್ನೆ ಎತ್ತಿದ್ದರು. Ravichandran Ashwin ಸೇರಿ ಕೆಲ ದಿಗ್ಗಜರು ಅವರ ಬೌಲಿಂಗ್ ಶೈಲಿಯನ್ನು ಪರಿಶೀಲಿಸಬೇಕೆಂದು ಅಭಿಪ್ರಾಯಪಟ್ಟಿದ್ದರು.

ಪಂದ್ಯದ ವೇಳೆ ಕೃಣಾಲ್‌ ಎಸೆದ ಬೌನ್ಸರ್ ಕಂಡು ಗ್ಯಾಲರಿಯಲ್ಲಿ ಕುಳಿತಿದ್ದ ಕಾವ್ಯ ಮಾರನ್ ಅಸಮಾಧಾನ ವ್ಯಕ್ತಪಡಿಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. “ಅವರು ಸರಿಯಾಗಿ ಬೌಲಿಂಗ್ ಮಾಡುತ್ತಿಲ್ಲ, ಚೆಂಡನ್ನು ಎಸೆಯುತ್ತಿದ್ದಾರೆ” ಎಂಬ ಅರ್ಥ ಬರುವ ರೀತಿಯಲ್ಲಿ ಸಹ ಸಿಬ್ಬಂದಿಗಳೊಂದಿಗೆ ಮಾತನಾಡುತ್ತಿರುವ ವಿಡಿಯೊ ಈಗ ಭಾರೀ ವೈರಲ್ ಆಗಿದೆ. ಕೆಲ ಅಭಿಮಾನಿಗಳು ಕಾವ್ಯ ಅವರಿಗೆ ಬೆಂಬಲ ಸೂಚಿಸಿದರೆ, ಇನ್ನೂ ಕೆಲವರು ಇದು ಕ್ರಿಕೆಟ್‌ನ ಭಾಗವೇ ಎಂದು ಪ್ರತಿಕ್ರಿಯಿಸಿದ್ದಾರೆ.

ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ 55 ರನ್‌ಗಳ ಭರ್ಜರಿ ಗೆಲುವು ಸಾಧಿಸಿತು. Abhishek Sharma (56), Ishan Kishan (79) ಮತ್ತು Heinrich Klaasen (51) ಅರ್ಧಶತಕದ ನೆರವಿನಿಂದ ಎಸ್‌ಆರ್‌ಎಚ್ 255 ರನ್‌ಗಳ ಬೃಹತ್ ಮೊತ್ತ ಪೇರಿಸಿತು.

ಗುರಿ ಬೆನ್ನಟ್ಟಿದ ಆರ್‌ಸಿಬಿಗೆ Venkatesh Iyer ವೇಗದ ಆರಂಭ ನೀಡಿದರೂ, Virat Kohli ಮತ್ತು Devdutt Padikkal ಬೇಗ ಔಟಾದರು. ನಾಯಕ Rajat Patidar ಹಾಗೂ ಕೃಣಾಲ್ ಪಾಂಡ್ಯ ಹೋರಾಟ ನಡೆಸಿದರೂ ತಂಡ 200 ರನ್‌ಗಳಿಗೆ ಸೀಮಿತವಾಯಿತು.

Continue Reading

ದೇಶ

Cockroach Janata Party ಗೆ ಬೆಂಗಳೂರು ಪೊಲೀಸರ ಶಾಕ್! ಟೌನ್ ಹಾಲ್ ಕಾರ್ಯಕ್ರಮಕ್ಕೆ ಅನುಮತಿ ಇಲ್ಲ

Published

on

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿರುವ ‘ಕಾಕ್ರೋಚ್ ಜನತಾ ಪಾರ್ಟಿ’ಗೆ ಇದೀಗ Bengaluru City Police ದೊಡ್ಡ ಶಾಕ್ ನೀಡಿದೆ. ಮೇ 24ರಂದು ಟೌನ್ ಹಾಲ್ ಬಳಿ ಆಯೋಜಿಸಲು ಯೋಜಿಸಲಾಗಿದ್ದ ಶಾಂತಿಯುತ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮಕ್ಕೆ ಅನುಮತಿ ನೀಡುವುದಿಲ್ಲ ಎಂದು ಬೆಂಗಳೂರು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ಪೋಸ್ಟ್‌ಗಳಲ್ಲಿ, ಬೆಳಗ್ಗೆ 11 ಗಂಟೆಗೆ ಟೌನ್ ಹಾಲ್ ಬಳಿ ಮಾನವ ಸರಪಳಿ ನಿರ್ಮಿಸಲು ಕರೆ ನೀಡಲಾಗಿತ್ತು. ಆದರೆ ಈ ಸಂಬಂಧ ಯಾವುದೇ ಅಧಿಕೃತ ಮನವಿ ಪೊಲೀಸ್ ಇಲಾಖೆಗೆ ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಂದು ವೇಳೆ ಅರ್ಜಿ ಸಲ್ಲಿಸಿದರೂ ಟೌನ್ ಹಾಲ್ ಪ್ರದೇಶದಲ್ಲಿ ಕಾರ್ಯಕ್ರಮ ನಡೆಸಲು ಅವಕಾಶವಿಲ್ಲ ಎಂದು ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ.

Town Hall Bengaluru ಬಳಿ ಧರಣಿ, ಪ್ರತಿಭಟನೆ ಅಥವಾ ಮೆರವಣಿಗೆಗಳಿಗೆ ಅನುಮತಿ ನೀಡಬಾರದು ಎಂಬ High Court of Karnataka ಆದೇಶ ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ Freedom Park ಹೊರತುಪಡಿಸಿ ನಗರದ ಬೇರೆ ಭಾಗಗಳಲ್ಲಿ ಪ್ರತಿಭಟನೆ ನಡೆಸಲು ಅವಕಾಶವಿಲ್ಲ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.

‘ಕಾಕ್ರೋಚ್ ಜನತಾ ಪಾರ್ಟಿ’ಯನ್ನು Abhijeet Dipke ಸ್ಥಾಪಿಸಿದ್ದು, ಕೆಲವೇ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಜನಪ್ರಿಯತೆ ಗಳಿಸಿತ್ತು. ಪಕ್ಷದ ಎಕ್ಸ್ ಖಾತೆ ಒಂದೇ ವಾರದಲ್ಲಿ 10 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಪಡೆದಿತ್ತು. ನಂತರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯದ ಸೂಚನೆಯ ಮೇರೆಗೆ ಖಾತೆಯನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ.

ಇತ್ತೀಚೆಗೆ ಭಾರತದ ಮುಖ್ಯ ನ್ಯಾಯಮೂರ್ತಿ Surya Kant ಯುವಕರನ್ನು ‘ಜಿರಳೆ’ಗಳಿಗೆ ಹೋಲಿಸಿ ನೀಡಿದ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಮೀಮ್ಸ್ ಮತ್ತು ಟ್ರೋಲಿಂಗ್‌ಗಳ ನಡುವೆ ‘ಕಾಕ್ರೋಚ್ ಜನತಾ ಪಾರ್ಟಿ’ ಟ್ರೆಂಡ್ ಆಗಿತ್ತು.

ಪಕ್ಷದ ಇನ್‌ಸ್ಟಾಗ್ರಾಮ್ ಖಾತೆಗೆ 5 ಮಿಲಿಯನ್‌ಗಿಂತ ಹೆಚ್ಚು ಫಾಲೋವರ್ಸ್ ಸೇರಿದ್ದು, ವೆಬ್‌ಸೈಟ್‌ನಲ್ಲಿ ಲಕ್ಷಾಂತರ ಮಂದಿ ನೋಂದಾಯಿಸಿಕೊಂಡಿದ್ದರು. ಇದೀಗ ಟೌನ್ ಹಾಲ್ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಣೆ ಹೊಸ ಚರ್ಚೆಗೆ ಕಾರಣವಾಗಿದೆ.

Continue Reading

ದೇಶ

ಮೋದಿ ಸರ್ಕಾರದ 2025 ರಿಪೋರ್ಟ್ ಕಾರ್ಡ್ ಬಿಡುಗಡೆ! ಯಾವ ಸಚಿವಾಲಯ ಟಾಪ್‌, ಯಾವುದು ಹಿಂದುಳಿತು?

Published

on

ನವದೆಹಲಿ: Government of India ತನ್ನ ವಿವಿಧ ಸಚಿವಾಲಯಗಳು ಮತ್ತು ಕೇಂದ್ರ ಯೋಜನೆಗಳ ಕಾರ್ಯಕ್ಷಮತೆಯನ್ನು ಮೌಲ್ಯಮಾಪನ ಮಾಡಿ 2025ರ ಅಧಿಕೃತ “ರಿಪೋರ್ಟ್ ಕಾರ್ಡ್” ಬಿಡುಗಡೆ ಮಾಡಿದೆ. ಪ್ರಧಾನಿ Narendra Modi ನೇತೃತ್ವದಲ್ಲಿ ನಡೆದ ಮಹತ್ವದ ಮಂತ್ರಿಮಂಡಲ ಸಭೆಯಲ್ಲಿ ಈ ಮೌಲ್ಯಮಾಪನ ವರದಿ ಪ್ರಕಟವಾಗಿದ್ದು, ಹಲವು ಸಚಿವಾಲಯಗಳ ಸಾಧನೆಗೆ ಶ್ಲಾಘನೆ ವ್ಯಕ್ತವಾಗಿದೆ.

ಕ್ಯಾಬಿನೆಟ್ ಕಾರ್ಯದರ್ಶಿ T. V. Somanathan ಸಚಿವಾಲಯಗಳ ಕಾರ್ಯಕ್ಷಮತೆ ವರದಿ ಬಿಡುಗಡೆ ಮಾಡಿದರು. ವರದಿ ಪ್ರಕಾರ ಗ್ರಾಹಕ ವ್ಯವಹಾರಗಳು, ಕಲ್ಲಿದ್ದಲು, ವಿದ್ಯುತ್ ಹಾಗೂ ಆರೋಗ್ಯ ಸಚಿವಾಲಯಗಳು ಅತ್ಯುತ್ತಮ ಸಾಧನೆ ತೋರಿದ ಇಲಾಖೆಗಳಾಗಿ ಹೊರಹೊಮ್ಮಿವೆ. ವಿಶೇಷವಾಗಿ ಗ್ರಾಹಕ ವ್ಯವಹಾರಗಳ ಸಚಿವಾಲಯವು ಕುಂದುಕೊರತೆ ಪರಿಹಾರ ಮತ್ತು ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ ನಿರ್ವಹಣೆಯಲ್ಲಿ ಮೆಚ್ಚುಗೆ ಪಡೆದಿದೆ.

ಫೈಲ್ ವಿಲೇವಾರಿ ಮತ್ತು ಆಡಳಿತ ನಿರ್ವಹಣೆಯಲ್ಲಿ ಕಲ್ಲಿದ್ದಲು ಸಚಿವಾಲಯ ಅತ್ಯಧಿಕ ಅಂಕ ಗಳಿಸಿದ್ದು, ವಿದ್ಯುತ್ ಮತ್ತು ಆರೋಗ್ಯ ಸಚಿವಾಲಯಗಳ ಕಾರ್ಯಕ್ಷಮತೆಯೂ ಗಮನಸೆಳೆದಿದೆ. ಕೆಲವು ಇಲಾಖೆಗಳನ್ನು ಕಳಪೆ ಸಾಧನೆ ತೋರಿದ ಸಚಿವಾಲಯಗಳ ಪಟ್ಟಿಯಲ್ಲೂ ಸೇರಿಸಲಾಗಿದೆ ಎನ್ನಲಾಗಿದೆ.

ಸಭೆಯಲ್ಲಿ ಪ್ರಧಾನಿ ಮೋದಿ ಸಚಿವರು ಮತ್ತು ಅಧಿಕಾರಿಗಳಿಗೆ ವೆಚ್ಚ ನಿಯಂತ್ರಣದ ಕುರಿತು ವಿಶೇಷ ಸೂಚನೆ ನೀಡಿದ್ದಾರೆ. ದೇಶದ ಹಿತಾಸಕ್ತಿಗೆ ಅಗತ್ಯವಿಲ್ಲದ ವಿದೇಶಿ ಪ್ರವಾಸಗಳನ್ನು ತಪ್ಪಿಸಲು ಸೂಚಿಸಿದ್ದು, ದೊಡ್ಡ ಬೆಂಗಾವಲು ಪಡೆಗಳ ಬಳಕೆ ಕಡಿಮೆ ಮಾಡುವಂತೆ ಸಲಹೆ ನೀಡಿದ್ದಾರೆ. ಜೊತೆಗೆ ಹಲವು ಅಂತರರಾಷ್ಟ್ರೀಯ ಶೃಂಗಸಭೆಗಳನ್ನು ರದ್ದುಗೊಳಿಸುವ ವಿಚಾರವನ್ನೂ ಸಭೆಯಲ್ಲಿ ಪ್ರಸ್ತಾಪಿಸಲಾಗಿದೆ.

ಹಾರ್ಮುಜ್ ಜಲಸಂಧಿಯ ಬಿಕ್ಕಟ್ಟು ಹಾಗೂ ಜಾಗತಿಕ ಇಂಧನ ಪೂರೈಕೆಯ ಅಡಚಣೆ ಹಿನ್ನೆಲೆಯಲ್ಲಿ ಜೈವಿಕ ಅನಿಲ ಮತ್ತು ನವೀಕರಿಸಬಹುದಾದ ಇಂಧನ ಮೂಲಗಳ ಅಭಿವೃದ್ಧಿಗೆ ಒತ್ತು ನೀಡುವ ಅಗತ್ಯವಿದೆ ಎಂದು ಮೋದಿ ಹೇಳಿದ್ದಾರೆ.

ಜೂನ್ 9ರಂದು ಮೋದಿ ಸರ್ಕಾರದ ಮೂರನೇ ಅವಧಿಯ ಎರಡನೇ ವರ್ಷದ ಸಂಭ್ರಮಕ್ಕೆ ಮುನ್ನ ನಡೆದ ಈ ಸಭೆ ನಾಲ್ಕು ಗಂಟೆಗಳಿಗೂ ಹೆಚ್ಚು ಕಾಲ ನಡೆಯಿತು.

Continue Reading

Trending