Connect with us

ಬೆಂಗಳೂರು

ಬ್ರಾಹ್ಮಣರು ಮೇಲೆ ನಿಂದನೆ, ಅಪಮಾನ ಸಹಿಸುವುದಿಲ್ಲ -ಎಸ್.ರಘುನಾಥ್

ಬೆಂಗಳೂರು: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ವತಿಯಿಂದ ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆದು ಪರೀಕ್ಷೆ ಬರೆಯುವಂತೆ ವಿದ್ಯಾರ್ಥಿಗೆ ಹೇಳಿದರು ಇಂತಹ ಕಹಿ ಘಟನೆಗಳು ವಿಪ್ರ ಸಮುದಾಯಕ್ಕೆ ಅಪಮಾನ ಮಾಡಿರುವ ಖಂಡನೆ ವ್ಯಕ್ತಪಡಿಸಿ ಕುರಿತು ಮಾಧ್ಯಮಗೋಷ್ಟಿ ಏರ್ಪಡಿಸಿದ್ದರು.

ಇದೇ ಸಂದರ್ಭದಲ್ಲಿ ಅಧ್ಯಕ್ಷರಾದ ಎಸ್.ರಘುನಾಥ್ ರವರು ಮಾತನಾಡಿ ಬ್ರಾಹ್ಮಣ ಸಮಾಜವನ್ನು ಹೀಯಾಳಿಸುವುದು, ನಿಂದಿಸುವುದು, ಅಪಹಾಸ್ಯಕ್ಕೆ ಒಳಪಡಿಸುವುದು ಮತ್ತು ಬ್ರಾಹ್ಮಣರ ಮೇಲೆ ದೌರ್ಜನ್ಯ ವೆಸುಗುವುದು ಸಾಮಾನ್ಯವಾಗಿದೆ, ಬ್ರಾಹ್ಮಣರು ಅಲ್ಪಸಂಖ್ಯಾತರಾಗಿದ್ದಾರೆ.

ಇಂತಹ ಕಹಿ ಘಟನೆಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರಿಗೆ ಮನವಿ ಮಾಡಲಾಗಿದೆ.

ಶಿಕ್ಷಣ ಸಚಿವರು ವಿದ್ಯಾರ್ಥಿ ಪರೀಕ್ಷೆ ಬರೆಯಲು ಅವಕಾಶ ನೀಡುತ್ತೇವೆ ಎಂದು ಹೇಳಿದ್ದಾರೆ ಮತ್ತು ಸಿ.ಇ.ಟಿ.ಪ್ರಾಧಿಕಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿರುವುದು ಸಮಾಧಾನಕರ ಸಂಗತಿ.

ಜನಿವಾರ ಕಿತ್ತು ಹಾಕಿರುವುದರಿಂದ ಬ್ರಾಹ್ಮಣ ಸಮುದಾಯವು ರಾಜ್ಯಾದ್ಯಂತ ಅಕ್ರೋಶ ವ್ಯಕ್ತಪಡಿಸುತ್ತಿದ್ದಾರೆ, ಎಲ್ಲ ಕಡೆಗಳಲ್ಲಿ ಪ್ರತಿಭಟನೆಯಾಗುತ್ತಿದೆ. ವಿಪ್ರ ಸಮುದಾಯದಕ್ಕೆ ಆಗಿರುವ ನೋವು, ಸಂಕಷ್ಟಗಳು ಎದುರಿಸುತ್ತಿರುವ ಸಮಸ್ಯೆಗಳು ಕುರಿತು ಮಹಾಸಭಾ ದಿಂದ ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಳ್ಳಲಾಗುವುದು.

ಸಿ.ಇ.ಟಿ ಪರೀಕ್ಷೆ ಬರೆಯಲು ಅವಕಾಶ ನೀಡದಿರುವ ಬ್ರಾಹ್ಮಣ ವಿದ್ಯಾರ್ಥಿಗೆ ಶಿಕ್ಷಣಕ್ಕೆ ಬೇಕಾದ ಆರ್ಥಿಕ ಸಹಾಯ ಮಹಾಸಭಾದಿಂದ ನೀಡಲಾಗುವುದು, ನಮ್ಮ ಸಂಪ್ರಾದಯ, ಸಂಸ್ಕೃತಿ ಎತ್ತಿಹಿಡಿದಿದ್ದಾನೆ ಎಂದು ಹೇಳಿದರು.

ಆರ್.ಲಕ್ಷ್ಮಿಕಾಂತ್ ಯಾರು ಏನು ಬೇಕಾದರು ಬ್ರಾಹ್ಮಣರ ಮೇಲೆ ದಬ್ಬಾಳಿಕೆ ಮಾಡಬಹುದು ಎಂದು ತಿಳಿದಿದ್ದಾರೆ , ಜನಿವಾರ ವಿವಾದ ಇಡಿ ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ಬಂದಿದೆ.

ಪರೀಕ್ಷೆ ಬರೆಯಲು ಲಕ್ಷಾಂತರ ವಿದ್ಯಾರ್ಥಿಗಳು ಬರುತ್ತಾರೆ, ಅದರಲ್ಲಿ ಬ್ರಾಹ್ಮಣ ವಿದ್ಯಾರ್ಥಿಗೆ ಈ ಪರೀಕ್ಷೆ ಮಾಡಬೇಕು ಎಂದರೆ ಪೂರ್ವನಿಯೋಜಿತ ಸಂಚು ಎಂದು ಕಾಣುತ್ತದೆ.

ಸಂವಿಧಾನದಲ್ಲಿ ಬ್ರಾಹ್ಮಣರಿಗೆ ಬದುಕಲು ಅವಕಾಶ ನೀಡಿದೆ.
ಬ್ರಾಹ್ಮಣರಿಗೆ ಅಪಮಾನ, ತೇಜೋವಧೆ ಮಾಡಿದರೆ ಉಗ್ರ ಪ್ರತಿಭಟನೆ ಮಾಡಲಾಗುವುದು.

ಸರ್ಕಾರ ಇಂತಹ ಘಟನೆಗಳ ವಿರುದ್ದ ತತಕ್ಷಣ ಕ್ರಮ ಕೈಗೊಳ್ಳಬೇಕು, ಹೋಂ ಗಾರ್ಡ್ ಕೆಲಸದ ಆದೇಶ ಪಾಲಿಸುತ್ತಾನೆ ಅವನನ್ನ ಬಲಿಪಶು ಮಾಡುವ ಬದಲು ಅಧಿಕಾರಿಗಳ ತಲೆದಂಡವಾಗಬೇಕು.

ನಿರ್ದೇಶಕ ಅನುರಾಗ್ ಕಶ್ಯಪ್ ರವರು ಬ್ರಾಹ್ಮಣರ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿರುವುದು ಖಂಡನೆ ವ್ಯಕ್ತಪಡಿಸುತ್ತೇವೆ ಅವರ ಮೇಲೆ ಪೊಲೀಸ್ ಠಾಣೆಗೆ ದೂರು ನೀಡಲಾಗುವುದು.

ಬ್ರಾಹ್ಮಣರು ಸಮಾಜ, ದೇಶ ಜನರಿಗೆ ಒಳ್ಳೆಯದಾಗಬೇಕು ಎಂದು ಪೂಜೆ, ಹೋಮಹವನ ಮಾಡುತ್ತಾರೆ ಎಂದು ಹೇಳಿದರು.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾದ ಎಸ್.ರಘುನಾಥ್ ರವರು, ಹಿರಿಯ ಉಪಾಧ್ಯಕ್ಷರಾದ ಆರ್.ಲಕ್ಷ್ಮಿಕಾಂತ್ ರವರು ಭಾಗವಹಿಸಿದ್ದರು. ವಿಪ್ರ ಮುಖಂಡರುಗಳಾದ ರವಿಶಂಕರ, ಶಂಕರನಾರಾಯಣ್ ಶಾಸ್ತ್ರಿ, ಶ್ರೀನಿವಾಸಮೂರ್ತಿ ಜೋಯಿಸ್ ರವರು ಉಪಸ್ಥಿತರಿದ್ದರು.

ಬೆಂಗಳೂರು

ಯಾರ್ಯಾರಿಗೆ ಸಿಗೋಲ್ಲ ರೇಷನ್ ಕಾರ್ಡ್?

ಬೆಂಗಳೂರು: ಅಕ್ರಮವಾಗಿ ಪಡಿತರ ಕಾರ್ಡ್ ಹೊಂದಿರೋ ಜನರಿಗೆ ಸರ್ಕಾರ ಶಾಕ್ ಕೊಟ್ಟಿದ್ದು ರಾಷ್ಟ್ರೀಯ ಆಹಾರ ಕಾಯ್ದೆ ಉಲ್ಲಂಘಿಸಿರುವ ಮತ್ತು ಅನರ್ಹ ಪಡಿತರ ಚೀಟಿ ಪತ್ತೆ ಸಲುವಾಗಿ ಖಾಸಗಿ ಸಮೀಕ್ಷೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ,
ರಾಜ್ಯದಲ್ಲಿ ಹೆಚ್ಚುಕ್ಕಮ್ಮಿ 44 ಲಕ್ಷ ಅನರ್ಹ ಪಡಿತರ ಫಲಾನುಭವಿಗಳು ಇದ್ದಾರೆ ಎಂಬ ಅಂಶ ಗೊತ್ತಾಗಿದ್ದು, ಇವುಗಳನ್ನು ರದ್ದುಪಡಿಸಲು ರಾಜ್ಯ ಸರ್ಕಾರ ಥರ್ಡ್ ಪಾರ್ಟಿ ಸರ್ವೇಗೆ ನಿರ್ಧರಿಸಿದೆ,
2011 ಜನಸಂಖ್ಯೆ ದತ್ತಾಂಶದ ಪ್ರಕಾರ 4,01,93,130 ಸ್ವೀಕೃತದಾರರ ಮಿತಿ ನಿಗದಿ ಮಾಡಲಾಗಿದೆ, ಆದರೆ 44 ಲಕ್ಷ ಹೆಚ್ಚುವರಿ ಕಾರ್ಡ್ ಇರುವುದಾಗಿ ಹೇಳುತ್ತಿದೆ, ಹೀಗಾಗಿ ಕಠಿಣ ಕ್ರಮ ಜರುಗಿಸಲು ಸರ್ಕಾರ ಈ ನಿರ್ಧಾರ ಕೈಗೊಂಡಿದೆ, ರಾಜ್ಯ ಸರ್ಕಾರದ ಮೇಲೆ ಆರ್ಥಿಕ ಹೊರೆ ಬಿದ್ದಿದೆ, ಕರ್ನಾಟಕ ತೆರಿಗೆ ಸಂಗ್ರಹಣೆಯಲ್ಲಿ 2ನೇ ಸ್ಧಾನದಲ್ಲಿದ್ರೂ, ವೆಚ್ಚವನ್ನು ಸರಿದೂಗಿಸಲಾಗುತ್ತಿಲ್ಲ ಹೀಗಾಗಿ ಸರ್ವೇ ಗೆ ಸರ್ಕಾರ ಮುಂದಾಗಿದೆ,
ವ್ಯಕ್ತಿಯ ವಾರ್ಷಿಕ ಆದಾಯ 1.20 ಲಕ್ಷಗಿಂತ ಹೆಚ್ಚಿರುವ ಕುಟುಂಬ, 3 ಹೆಕ್ಟೇರ್ಗಿಂತ ಹೆಚ್ಚಿನ ಭೂಮಿ ಹೊಂದಿದವರು ಸರ್ಕಾರಿ, ಅನುದಾನಿತ, ಸರ್ಕಾರಿ ಸಂಯೋಜಿತ ಸಂಸ್ಧೆಗಳಲ್ಲಿ ನೌಕರರು ಬಿಪಿಎಲ್ ರೇಷನ್ ಕಾರ್ಡ್ ಹೊಂದಲು ಅನರ್ಹವಾಗುತ್ತಾರೆ, ಇದಲ್ಲದೆ 1 ಸಾವಿರ ಚದರಡಿ ಪಕ್ಕಾ ಮನೆ ಹೊಂದಿದ್ದರೆ ಆದಾಯ, ವೃತ್ತಿ ತೆರಿಗೆ, ಜಿಎಸ್ ಟಿ ಪಾವತಿದಾರರು ವಾಣಿಜ್ಯ ವಾಹನ ಹೊಂದಿದವರು ಕಾರ್ಡ್ ಹೊಂದಿದ್ದರೆ, ಅಂಥವರನ್ನು ಪತ್ತೆ ಹಚ್ಚಿ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತದೆ,

Continue Reading

ಬೆಂಗಳೂರು

ಇಂದಿನಿಂದ ಮೂರು ದಿನಗಳ ಕಾಲ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಚಿಕ್ಕಬಳ್ಳಾಪುರ: ಜೂ.19ರಂದು ನಂದಿಗಿರಿಧಾಮದಲ್ಲಿ (Nandi Hills) ರಾಜ್ಯ ಸಚಿವ ಸಂಪುಟ (Cabinet Meeting) ಸಭೆ ನಡೆಯಲಿರುವ ಹಿನ್ನೆಲೆ ಇಂದಿನಿಂದ ಮೂರು ದಿನಗಳ ಕಾಲ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಈ ಕುರಿತು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಆದೇಶ ಹೊರಡಿಸಿದ್ದು, ಇಂದು ಸಂಜೆ 5 ಗಂಟೆಯಿಂದ ಜೂ.20ರ ಬೆಳಿಗ್ಗೆ 5 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಜೊತೆಗೆ ನಂದಿಗಿರಿಧಾಮದ ಮೇಲ್ಭಾಗದಲ್ಲಿರುವ ವಸತಿ ಕೊಠಡಿಗಳ ಬುಕಿಂಗ್‌ಗೂ ನಿಷೇಧ ವಿಧಿಸಿದ್ದಾರೆ.

ಇದೇ ಮೊದಲ ಬಾರಿಗೆ ನಂದಿಬೆಟ್ಟದಲ್ಲಿ ವಿಶೇಷ ಸಚಿವ ಸಂಪುಟ ನಡೆಯಲಿದ್ದು, ಸಭೆಗೆ ಬೇಕಾದ ಅಗತ್ಯ ಸಿದ್ಧತೆ ಸಲುವಾಗಿ ಮೂರು ದಿನಗಳ ಮೊದಲೇ ಪ್ರವಾಸಿಗರ ಪ್ರವೇಶ ಹಾಗೂ ವಾಹನಗಳ ಸಂಚಾರಕ್ಕೂ ಬ್ರೇಕ್ ಹಾಕಲಾಗಿದೆ.

ಸಚಿವ ಸಂಪುಟ ಸಭೆಗೆ ಸಿಎಂ, ಡಿಸಿಎಂ ಹಾಗೂ ಕರ್ನಾಟಕ ಸರ್ಕಾರದ ಸಚಿವ ಸಂಪುಟ ದರ್ಜೆಯ ಎಲ್ಲಾ ಮಂತ್ರಿಗಳು, ಶಾಸನ ಸಭಾ ಹಾಗೂ ವಿಧಾನಸಭಾ ಸದಸ್ಯರು, ಇಲಾಖಾ ಮುಖ್ಯಸ್ಥರು ಹಾಗೂ ಪತ್ರಕರ್ತರು ಆಗಮಿಸುತ್ತಿದ್ದಾರೆ. ಆದ್ದರಿಂದ ನಂದಿಗಿರಿಧಾಮಕ್ಕೆ ಹೋಗಲು ಮತ್ತು ಬರಲು ಒಂದೇ ರಸ್ತೆ ಇರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿರುತ್ತದೆ. ಜೊತೆಗೆ ನಂದಿಬೆಟ್ಟದಲ್ಲಿ ಕಡಿದಾದ ತಿರುವುಗಳಿಂದ ಕೂಡಿದ ರಸ್ತೆಗಳಲ್ಲಿ ವಾಹನ ಮತ್ತು ಪ್ರವಾಸಿಗರನ್ನು ನಿಯಂತ್ರಿಸುವುದು ಅತಿ ಕಷ್ಟಕರವಾಗಿರುತ್ತದೆ. ಅಪಘಾತಗಳಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

Continue Reading

ಬೆಂಗಳೂರು

ನಮ್ಮ ಹೊಟ್ಟೆಯ ಮೇಲೆ ಹೊಡೆಯಬೇಡಿ ರಾಹುಲ್ ಗಾಂಧಿಗೆ ಅಸೋಸಿಯೇಷನ್ ಪತ್ರ!

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿಷೇಧಗೊಂಡಿದೆ, ಈ ಹಿನ್ನೆಲೆ ನಮ್ಮ ಬೈಕ್ ಟ್ಯಾಕ್ಸಿ ಅಸೋಸಿಯೇಷನ್ ಅಧ್ಯಕ್ಷ ಮೊಹಮ್ಮದ್ ಸಲೀಂ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದು ನಿಷೇಧ ಮಾಡಿದರುವಂತೆ ಮನವಿ ಮಾಡಿದ್ದಾರೆ,
ಲಕ್ಷಾಂತರ ಮಂದಿ ವಿದ್ಯಾರ್ಥಿಗಳು, ನಿರುದ್ಯೋಗಿಗಳು, ಪೋಷಕರು ಹಾಗೂ ದಿನಗೂಲಿ ಕಾರ್ಮಿಕರು ಬೈಕ್ ಟ್ಯಾಕ್ಸಿ ಸೇವೆಯಿಂದ ದಿನನಿತ್ಯ ಹೊಟ್ಟೆ ಹೊರೆದುಕೊಳ್ಳುತ್ತಿದ್ದಾರೆ, ಇವು ನಮ್ಮ ಬಿಡುವಿನ ವೇಳೆಯ ಕೆಲಸವಾಗಿರದೇ ಮೂಲ ಉದ್ಯೋಗವೇ ಆಗಿದೆ, ಈ ರೀತಿ ಏಕಾಏಕಿ ನಿಷೇಧ ಮಾಡುವುದರಿಂದ ನಮ್ಮ ಕುಟುಂಬಗಳು ಬೀದಿಗೆ ಬೀಳುತ್ತವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ,
ಸುರಕ್ಷತೆ, ವಿಮೆ ನಿಯಮ ಹಾಗೂ ತರಬೇತಿ ನಿಯಮಗಳನ್ನು ಜಾರಿಗೆ ತಂದು ನಮ್ಮನ್ನು ಅಧಿಕೃತ ಉದ್ಯೋಗಿಗಳನ್ನಾಗಿ ಮಾಡುವ ಬದಲು ನಿಷೇಧಗೊಳಿಸುವುದು ಎಷ್ಟು ಸರಿ ಎಂದು ಪತ್ರದಲ್ಲಿ ಪ್ರಶ್ನಿಸಲಾಗಿದ್ದು, ಗಿಗ್ ಕಾರ್ಮಿಕರಾದ ನಮಗೆ ನೀವು ಚುನಾವಣೆಯ ಮುನ್ನ ನೀಡಿದ್ದ ಭರವಸೆಯನ್ನು ಮರೆತಿದ್ದೀರಿ ಎಂದು ಹೇಳಲಾಗಿದೆ,

Continue Reading

Trending