Connect with us

ದೇಶ

3 ವರ್ಷದ ಮಗುವಿದೆ ಎಂದು ಅಂಗಲಾಚಿದರೂ ಗುಂಡು ಹೊಡೆದೇ ಬಿಟ್ಟರು…!

ಬೆಂಗಳೂರು: 3 ವರ್ಷದ ಮಗುವಿದೆ ನಮ್ಮನ್ನು ಬಿಟ್ಟುಬಿಡಿ ಎಂದು ಅಂಗಲಾಚಿದರೂ ಕಿವಿಗೊಡದ ಉಗ್ರರು, ನಾವಿಲ್ಲಿ ಕಷ್ಟದಲ್ಲಿದ್ದೇವೆ. ನೀವು ಹೇಗೆ ಸಂಭ್ರಸಲು ಬಿಡುತ್ತೇವೆಂದು ಪತಿಗೆ ಗುಂಡು ಹೊಡೆದೇ ಬಿಟ್ಟರು ಎಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಭರತ್ ಅವರ ಪತ್ನಿ ಡಾ. ಸುಜಾತಾ ಅವರು ಕಣ್ಣೀರಿಟ್ಟಿದ್ದಾರೆ.

ಏಪ್ರಿಲ್ 18 ರಂದು ಕುಟುಂಬವು ಬೆಂಗಳೂರಿನಿಂದ ಕಾಶ್ಮೀರಕ್ಕೆ ಪ್ರವಾಸಕ್ಕೆ ಹೋಗಿತ್ತು. ಭಯೋತ್ಪಾದಕ ದಾಳಿಯ ದಿನವನ್ನು ಸುಜಾತಾ ಅವರು ಸ್ಮರಿಸಿದ್ದು, ಪತಿಯ ನೆನೆದು ಕಣ್ಣೀರಿಟ್ಟಿದ್ದಾರೆ.

ನಾವು ಮಂಗಳವಾರ ಬೆಳಿಗ್ಗೆ ಪಹಲ್ಗಾಮ್‌ಗೆ ಹೋಗಿದ್ದೆವು. ಅಲ್ಲಿಂದ ನಾವು ಪೈನ್ ಮರಗಳಿಂದ ಆವೃತವಾದ ಬೈಸರನ್ ಎಂಬ ದೊಡ್ಡ ಹುಲ್ಲುಗಾವಲು ತಲುಪಿದೆವು. ಅದು ಮಿನಿ ಸ್ವಿಟ್ಜರ್‌ಲ್ಯಾಂಡ್‌ನಂತೆ ಕಾಣುತ್ತಿತ್ತು. ಪ್ರವಾಸಿಗರು ಸಾಂಪ್ರದಾಯಿಕ ಕಾಶ್ಮೀರಿ ಉಡುಪನ್ನು ಧರಿಸಿ ಫೋಟೋಗಳನ್ನು ತೆಗೆದುಕೊಳ್ಳಲು ಹಲವಾರು ಟೆಂಟ್ ಗಳಿದ್ದವು. ಮಧ್ಯಾಹ್ನ 1.30 ಆಗಿದ್ದರಿಂದ ಹಸಿವಾಗಿತ್ತು. ಹೀಗಾಗಿ ಹಿಂತಿರುಗಲು ನಿರ್ಧರಿಸಿದ್ದೆವು. ಈ ವಏಳೆ ಇದ್ದಕ್ಕಿದ್ದಂತೆ ಗುಂಡಿನ ಮೊರೆತದ ಶಬ್ಧ ಕೇಳಿಸಲು ಆರಂಬವಾಯಿತು. ಮೊದಲಿಗೆ ಪಟಾಕಿ ಶಬ್ಧವಿರಬೇಕು, ಕಾಡು ಪ್ರಾಣಿಗಳ ಹೆದರಿಸಲು ಸಿಡಿಸುತ್ತಿರಬಹುದು ಎಂದೇ ಎಲ್ಲರೂ ಭಾವಿಸಿದ್ದೆವು. ಆದರೆ, ಶಬ್ಧ ತೀವ್ರಗೊಳ್ಳುತ್ತಿದ್ದಂತೆ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ಬಳಿಕ ದಾಳಿ ನಡೆಸಲಾಗಿದೆ ಎಂಬುದು ನಮಗೆ ತಿಳಿಯಿತು. ಅಡಗಿಕೊಳ್ಳಲು ಟೆಂಟ್ ಕಡೆಗೆ ಓಡಿದೆವು.

ನಮ್ಮಿಂದ ಸುಮಾರು 500 ಮೀಟರ್ ದೂರದಲ್ಲಿ ಮತ್ತೊಂದು ಜೋಡಿಯಿತ್ತು. ಅಲ್ಲಿ ಒಬ್ಬ ವ್ಯಕ್ತಿಗೆ ಗುಂಡು ಹಾರಿಸಿ ಹತ್ಯೆ ಮಾಡಿದರು. ಕೆಲವು ಕ್ಷಣಗಳ ನಂತರ ಓರ್ವ ಭಯೋತ್ಪಾದಕ ನನ್ನ ಗಂಡನ ಹಿಂದೆ ನಿಂತನು. ಭರತ್ ನನಗೆ ‘ಚಿಂತಿಸಬೇಡಿ. ಶಾಂತವಾಗಿರಿ ಎಂದು ಹೇಳುತ್ತಲೇ ಇದ್ದರು. ಅವರು ನಮ್ಮನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದರು.

ನನಗೆ ಮಗುವಿದೆ, ದಯವಿಟ್ಟು ಗುಂಡು ಹಾರಿಸಬೇಡಿ’ ಎಂದು ಹೇಳಿದರು. ನಮ್ಮ ಮಗನನ್ನು ಸಹ ತೋರಿಸಿದನರು. ಆದರೆ, ಭಯೋತ್ಪಾದಕ ಭರತ್ ತಲೆಗೆ ಎರಡು ಬಾರಿ ಗುಂಡು ಹಾರಿಸಿದ. ನನ್ನ ಪತಿ ನಮ್ಮ ಕಣ್ಣ ಮುಂದೆಯೇ ನೆಲಕ್ಕುರುಳಿದರು. ನಾವಿಲ್ಲಿ ಕಷ್ಟದಲ್ಲಿರುವಾಗ ನೀವು ಹೇಗೆ ಸಂಭ್ರಮಿಸುತ್ತೀರಿ? ನೀವು ಇಲ್ಲಿಗೆ ಆನಂದಿಸಲು ಬಂದಿದ್ದೀರಿ ಎಂದು ಭಯೋತ್ಪಾದಕ ಹೇಳಿದ್ದು ನನಗೆ ಕೇಳಿಸಿತು ಎಂದು ಸುಜಾತಾ ಅವರು ಹೇಳಿದ್ದಾರೆ.

ವು ಎಲ್ಲಿಂದ ಬಂದವರು ಅಥವಾ ಯಾವ ಧರ್ಮಕ್ಕೆ ಸೇರಿದವರು ಎಂದು ಭಯೋತ್ಪಾದಕ ಕೇಳಲಿಲ್ಲ. ಅವನು ನನ್ನ ಗಂಡನಿಗೆ ಗುಂಡು ಹಾರಿಸಿದನು. ಪತಿ ನೆಲಕ್ಕುರುಳುತ್ತಿದ್ದಂತೆಯೇ ಮಗನನ್ನು ಉಳಿಸಿಕೊಳ್ಳಲು ಪತಿಯ ಜೇಬಿನಲ್ಲಿದ್ದ ದಾಖಲೆಗಳು ಮತ್ತು ಮೊಬೈಲ್ ಫೋನ್ ತೆಗೆದುಕೊಂಡು ಓಡಿಹೋದೆ. ನಮ್ಮ ಸುತ್ತಲೂ ಗುಂಡಿನ ಮೊರೆತದ ಶಬ್ಧ ಕೇಳಿಸುತ್ತಲೇ ಇತ್ತು. ಎಲ್ಲಿ ನೋಡಿದರೂ ಶವಗಳು ಬಿದ್ದಿರುವುದು ಕಂಡು ಬರುತ್ತಿತ್ತು. ನಾವು ಮೂವರು ಭಯೋತ್ಪಾದಕರನ್ನು ನೋಡಿದ್ದೇನೆ. ಪಹಲ್ಗಾಮ್ ಪಟ್ಟಣದಲ್ಲಿ ಭಾರೀ ಭದ್ರತೆ ಇತ್ತು, ಆದರೆ ಬೆಟ್ಟದ ತುದಿಯಲ್ಲಿರುವ ಬೈಸರನ್‌ನಲ್ಲಿ ಯಾವುದೇ ಭದ್ರತೆ ಇರಲಿಲ್ಲ ಎಂದು ತಿಳಿಸಿದ್ದಾರೆ

ದೇಶ

ಎಪ್ಸ್ಟೀನ್ ಫೈಲ್ಸ್‌ನಲ್ಲಿ ಹರ್ದೀಪ್ ಪುರಿ ಹೆಸರು? ಸಂಸತ್ತಿನಲ್ಲಿ ಗದ್ದಲ, ಸಚಿವರ ಸ್ಪಷ್ಟನೆ

ಹೊಸದಿಲ್ಲಿ: ಜಗತ್ತಿನಾದ್ಯಂತ ಸಂಚಲನ ಮೂಡಿಸಿರುವ ಜೆಫ್ರಿ ಎಪ್ಸ್ಟೀನ್‌ (Jeffrey Epstein) ಲೈಂಗಿಕ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೆರಿಕದ ನ್ಯಾಯಾಂಗ ಇಲಾಖೆ ಬಿಡುಗಡೆಗೊಳಿಸಿರುವ ಮಿಲಿಯನ್‌ಗಟ್ಟಲೆ ಇಮೇಲ್‌ಗಳು ಮತ್ತು ದಾಖಲೆಗಳು ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿವೆ. ಈ ದಾಖಲೆಗಳಲ್ಲಿ ಕೆಲವು ಭಾರತೀಯರ ಹೆಸರುಗಳು ಕಾಣಿಸಿಕೊಂಡಿರುವುದು ಸಂಸತ್ತಿನಲ್ಲೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಈ ಪಟ್ಟಿಯಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ (Hardeep Singh Puri) ಅವರ ಹೆಸರು ಉಲ್ಲೇಖವಾಗಿರುವುದಾಗಿ ವರದಿಯಾಗುತ್ತಿದ್ದಂತೆಯೇ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಸಂಸತ್ತಿನೊಳಗೂ ಹೊರಗೂ ಮಾತನಾಡಿದ ಅವರು, ಎಪ್ಸ್ಟೀನ್ ಪ್ರಕರಣದ ಉಲ್ಲೇಖದೊಂದಿಗೆ ಕೇಂದ್ರ ಸರ್ಕಾರವನ್ನು ಟೀಕಿಸಿದರು.

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಹರ್ದೀಪ್ ಪುರಿ, “ನಾನು ಜೆಫ್ರಿ ಎಪ್ಸ್ಟೀನ್ ಅವರನ್ನು ಕೆಲವೇ ಬಾರಿ, ಅದೂ ಔಪಚಾರಿಕ ಸಂದರ್ಭಗಳಲ್ಲಿ ಮಾತ್ರ ಭೇಟಿ ಮಾಡಿದ್ದೇನೆ. ಅವರ ಅಕ್ರಮ ಚಟುವಟಿಕೆಗಳಿಗೆ ನನ್ನೊಂದಿಗೆ ಯಾವುದೇ ಸಂಬಂಧವಿಲ್ಲ” ಎಂದು ಸ್ಪಷ್ಟಪಡಿಸಿದರು.

ಮೂರು ಮಿಲಿಯನ್‌ ಇಮೇಲ್‌ಗಳಲ್ಲಿ ತಮ್ಮ ಹೆಸರು ಕೇವಲ 3-4 ಬಾರಿ ಮಾತ್ರ ಉಲ್ಲೇಖವಾಗಿದೆ. ನಿಯೋಗದ ಭಾಗವಾಗಿ ಕೆಲ ಸಂದರ್ಭಗಳಲ್ಲಿ ಭೇಟಿಯಾಗಿದ್ದು, ಕೇವಲ ಒಂದು ಇಮೇಲ್ ವಿನಿಮಯ ಮಾಡಿಕೊಂಡಿದ್ದೇನೆ ಅಷ್ಟೇ ಹೊರತು, ಯಾವುದೇ ಅಕ್ರಮ ಸಂಬಂಧ ಇಲ್ಲ ಎಂದು ಹೇಳಿದರು.

ಇದೇ ವೇಳೆ, 2017ರಲ್ಲಿ ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ ಭೇಟಿ ಕುರಿತ ಉಲ್ಲೇಖಗಳನ್ನೂ ವಿದೇಶಾಂಗ ಸಚಿವಾಲಯ ತಳ್ಳಿಹಾಕಿದೆ. “ಇದು ಅಧಿಕೃತ ಭೇಟಿಯೇ ಹೊರತು, ಉಳಿದ ಉಲ್ಲೇಖಗಳು ಶಿಕ್ಷೆಗೊಳಗಾದ ಅಪರಾಧಿಯ ವ್ಯರ್ಥ ಕಲ್ಪನೆಗಳಾಗಿವೆ” ಎಂದು ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.

ಎಪ್ಸ್ಟೀನ್ ಫೈಲ್ಸ್ ಪ್ರಕರಣ ಇದೀಗ ಭಾರತೀಯ ರಾಜಕೀಯದಲ್ಲೂ ಚರ್ಚೆಯ ಕೇಂದ್ರಬಿಂದುವಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ರಾಜಕೀಯ ಪ್ರತಿಕ್ರಿಯೆಗಳು ಎದುರಾಗುವ ಸಾಧ್ಯತೆ ಇದೆ.

Continue Reading

ಕ್ರೀಡೆ

JAIN UNIVERSITY : ಜೈನ್ ಯುನಿವರ್ಸಿಟಿಯಲ್ಲಿ ಮಹಿಳಾ ಬಾಸ್ಕೆಟ್‌ಬಾಲ್ ಹಬ್ಬ

ಬೆಂಗಳೂರು, ಫೆ.11: ಕನಕಪುರ ರಸ್ತೆಯ ಜೈನ್ ಯುನಿವರ್ಸಿಟಿ ಗ್ಲೋಬಲ್ ಕ್ಯಾಂಪಸ್‌ನಲ್ಲಿ ನಡೆಯುತ್ತಿರುವ ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಮಹಿಳಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ (All India Inter University Women’s Basketball Championship) ಎರಡನೇ ದಿನದ ಲೀಗ್ ಪಂದ್ಯಗಳು ರೋಚಕತೆಯಿಂದ ಸಾಗಿದವು.

ಮೊದಲ ಪಂದ್ಯದಲ್ಲಿ ಚಂಡೀಗಢ ವಿಶ್ವವಿದ್ಯಾಲಯ 70-59 ಅಂತರದಲ್ಲಿ ಡಿಎವಿ ಇಂಡೋರ್ ತಂಡವನ್ನು ಮಣಿಸಿತು. ಕುಸುಭು (25) ಮತ್ತು ದೀಪ್ಷಿಖಾ (19) ಚಂಡೀಗಢ ತಂಡದ ಪರ ಮಿಂಚಿದರು.

ಎರಡನೇ ಪಂದ್ಯದಲ್ಲಿ ಆತಿಥೇಯ ಜೈನ್ ವಿಶ್ವವಿದ್ಯಾಲಯ 65-25 ಅಂತರದಲ್ಲಿ ಯುನಿವರ್ಸಿಟಿ ಆಫ್ ಕಲ್ಕತ್ತಾ ವಿರುದ್ಧ ಭರ್ಜರಿ ಗೆಲುವು ದಾಖಲಿಸಿತು. ಹರ್ಷಿತಾ (13) ಮತ್ತು ಆದ್ಯಾ ಗೌಡ (10) ಗಮನಾರ್ಹ ಆಟವಾಡಿದರು.

ಮೂರನೇ ಪಂದ್ಯದಲ್ಲಿ ಎಸ್‌ಆರ್‌ಎಂ ವಿಶ್ವವಿದ್ಯಾಲಯ 58-15 ಅಂತರದಲ್ಲಿ ಎಂಭಿಎಸ್‌ಪಿಎಸ್‌ಯು ಪಟಿಯಾಲಾ ವಿರುದ್ಧ ಜಯ ಸಾಧಿಸಿತು.

ನಾಲ್ಕನೇ ಪಂದ್ಯದಲ್ಲಿ ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ 63-58 ಅಂತರದಲ್ಲಿ ಕ್ರೈಸ್ಟ್ ವಿಶ್ವವಿದ್ಯಾಲಯವನ್ನು ರೋಚಕವಾಗಿ ಸೋಲಿಸಿತು.

ಐದನೇ ಪಂದ್ಯದಲ್ಲಿ ಐಟಿಎಂ ವಿಶ್ವವಿದ್ಯಾಲಯ 65-30 ಅಂತರದಲ್ಲಿ ಎಸ್‌ಜಿಜಿವಿಎ ಯುನಿವರ್ಸಿಟಿಯನ್ನು ಮಣಿಸಿತು.

ಆರನೇ ಪಂದ್ಯದಲ್ಲಿ ಎಲ್‌ಎನ್‌ಐಪಿಇ ವಿಶ್ವವಿದ್ಯಾಲಯ 68-28 ಅಂತರದಲ್ಲಿ ಪಂಡಿತ್ ರವಿ ಶಂಕರ್ ವಿಶ್ವವಿದ್ಯಾಲಯವನ್ನು ಸೋಲಿಸಿತು.

ಇದಕ್ಕೂ ಮೊದಲು ಫೆ.10ರ ಸಂಜೆ ನಡೆದ ಲೀಗ್ ಪಂದ್ಯಗಳಲ್ಲಿ ಚಂಡೀಗಢ ವಿಶ್ವವಿದ್ಯಾಲಯ, ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ ಹಾಗೂ ಎಂಜಿ ಯುನಿವರ್ಸಿಟಿ ಕೊಟ್ಟಾಯಂ ಜಯಗಳಿಸಿದ್ದವು.

ಟೂರ್ನಿಯ ಮುಂದಿನ ಲೀಗ್ ಪಂದ್ಯಗಳು ಹಾಗೂ ನಾಕೌಟ್ ಹಂತದ ಪಂದ್ಯಗಳಿಗೆ ಕ್ರೀಡಾಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

Continue Reading

ದೇಶ

LATEST : ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ಪ್ರಸ್ತಾವನೆ? ರಿಜುಜು ಕಿಡಿ

ನವದೆಹಲಿ: ಸದನಕ್ಕೆ ತಪ್ಪು ಮಾಹಿತಿ ನೀಡಿದ್ದು ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿರುವ ಹಿನ್ನೆಲೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧ ಹಕ್ಕುಚ್ಯುತಿ (Breach of Privilege) ಪ್ರಸ್ತಾವನೆ ಮಂಡಿಸಲಾಗುವುದು ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜುಜು (Kiren Rijiju) ತಿಳಿಸಿದ್ದಾರೆ.

ಬಜೆಟ್ ಮೇಲಿನ ಚರ್ಚೆ ವೇಳೆ ರಾಹುಲ್ ಗಾಂಧಿ ಕೇಂದ್ರ ಸರ್ಕಾರವು ‘ಭಾರತ ಮಾತೆಯನ್ನು ಮಾರಿಬಿಟ್ಟಿದೆ’ ಎಂದು ಆರೋಪಿಸಿದ್ದರು. ಭಾರತ–ಅಮೆರಿಕ ವಾಣಿಜ್ಯ ಒಪ್ಪಂದವನ್ನು ‘ಸಂಪೂರ್ಣ ಶರಣಾಗತಿ’ ಎಂದು ಟೀಕಿಸಿದ ಅವರು, ದೇಶದ ಶಕ್ತಿ ಸುರಕ್ಷತೆ ಅಮೆರಿಕಕ್ಕೆ ಒಪ್ಪಿಸಲಾಗಿದೆ ಹಾಗೂ ರೈತರ ಹಿತಾಸಕ್ತಿಗಳನ್ನು ರಾಜಿ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಈ ಹೇಳಿಕೆಗಳಿಗೆ ತೀವ್ರ ಪ್ರತಿಕ್ರಿಯೆ ನೀಡಿದ ಕಿರಣ್ ರಿಜುಜು, ರಾಹುಲ್ ಗಾಂಧಿ ಸರ್ಕಾರ ಮತ್ತು ಪ್ರಧಾನಮಂತ್ರಿ ವಿರುದ್ಧ ಸುಳ್ಳು ಹಾಗೂ ಆಧಾರರಹಿತ ಆರೋಪ ಮಾಡಿದ್ದಾರೆ ಎಂದು ಆರೋಪಿಸಿದರು. “ಭಾರತವನ್ನು ಯಾರೂ ಮಾರಲಾರರು, ಖರೀದಿಸಲಾರರು. ಗಂಭೀರ ಆರೋಪ ಮಾಡಲು ನಿಯಮಾನುಸಾರ ಮುಂಚಿತ ನೋಟಿಸ್ ನೀಡಬೇಕು ಮತ್ತು ಪುರಾವೆ ಸಲ್ಲಿಸಬೇಕು. ಆದರೆ ರಾಹುಲ್ ಗಾಂಧಿ ಯಾವುದೇ ಪುರಾವೆ ಇಲ್ಲದೆ ಆರೋಪ ಮಾಡಿದ್ದಾರೆ,” ಎಂದು ರಿಜುಜು ಹೇಳಿದರು.

ಇದಲ್ಲದೆ, ರಾಹುಲ್ ಗಾಂಧಿ ಅವರ ಭಾಷಣದಲ್ಲಿ ದಾಖಲಾಗಿರುವ ತಪ್ಪು ಹೇಳಿಕೆಗಳು ಮತ್ತು ಅಸಭ್ಯ ಪದಗಳನ್ನು ಸದನದ ದಾಖಲೆಗಳಿಂದ ತೆಗೆದುಹಾಕಬೇಕು ಎಂದು ಅವರು ಒತ್ತಾಯಿಸಿದರು. ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ವಿರುದ್ಧವೂ ನೋಟಿಸ್ ಇಲ್ಲದೆ ಗಂಭೀರ ಆರೋಪ ಮಾಡಲಾಗಿದೆ ಎಂದು ರಿಜುಜು ತಿಳಿಸಿದರು.

ಈ ಬೆಳವಣಿಗೆಗಳ ನಡುವೆ ಸಂಸತ್ ಕಲಾಪದಲ್ಲಿ ಮತ್ತಷ್ಟು ರಾಜಕೀಯ ಉದ್ವಿಗ್ನತೆ ಉಂಟಾಗುವ ಸಾಧ್ಯತೆ ಇದೆ.

Continue Reading

Trending