ದೇಶ

ಸಿಂಧೂ ನೀರು ಪಾಕ್‌ಗೆ ಹರಿಯಬೇಕು, ಇಲ್ಲದಿದ್ರೆ ಭಾರತೀಯರ ರಕ್ತ ಹರಿಯುತ್ತೆ: ಬಿಲಾವಲ್‌ ಭುಟ್ಟೋ

ಇಸ್ಲಾಮಾಬಾದ್: ಸಿಂಧೂ (Indus) ನಮ್ಮದು. ನದಿ ನೀರು ಪಾಕಿಸ್ತಾನಕ್ಕೆ ಹರಿಯಬೇಕು. ಇಲ್ಲವಾದಲ್ಲಿ ಭಾರತೀಯರ ರಕ್ತ ಹರಿಯುತ್ತದೆ ಎಂದು ಪಾಕಿಸ್ತಾನ ಪೀಪಲ್ಸ್‌ ಪಾರ್ಟಿ ಅಧ್ಯಕ್ಷ ಬಿಲಾವಲ್‌ ಭುಟ್ಟೋ (Bilawal Bhutto) ನಾಲಿಗೆ ಹರಿಬಿಟ್ಟಿದ್ದಾರೆ.

ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಮಾರಕ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಸಿಂಧೂ ನದಿ ನೀರು ಒಪ್ಪಂದವನ್ನು ಸ್ಥಗಿತಗೊಳಿಸುವ ನಿರ್ಧಾರ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಭಾರತದ ವಿರುದ್ಧ ಭುಟ್ಟೋ ಮಾತನಾಡಿದ್ದಾರೆ.

ಪಹಲ್ಗಾಮ್ ದಾಳಿಗೆ ಪಾಕಿಸ್ತಾನವನ್ನು ಬಲಿಪಶು ಮಾಡಲಾಗುತ್ತಿದೆ. ಆ ಮೂಲಕ ಭಾರತ ತನ್ನ ಆಂತರಿಕ ಭದ್ರತಾ ಲೋಪಗಳಿಂದ ಗಮನವನ್ನು ಬೇರೆಡೆ ಸೆಳೆಯುತ್ತಿದೆ ಎಂದು ಆರೋಪಿಸಿದ್ದಾರೆ.

ಭಾರತವು ಇಸ್ಲಾಮಾಬಾದ್ ಜೊತೆಗಿನ ರಾಜತಾಂತ್ರಿಕ ಸಂಬಂಧಗಳನ್ನು ನಿಲ್ಲಿಸಿದೆ. ಪಾಕಿಸ್ತಾನಿ ಮಿಲಿಟರಿ ಅಟ್ಯಾಚ್‌ಗಳನ್ನು ಹೊರಹಾಕುವುದು, ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವುದು, ಅಟ್ಟಾರಿ ಭೂ ಸಾರಿಗೆ ಪೋಸ್ಟ್ ಅನ್ನು ಮುಚ್ಚುವುದು ಸೇರಿದಂತೆ ಹಲವಾರು ರಾಜತಾಂತ್ರಿಕ ಮತ್ತು ಆರ್ಥಿಕ ಕ್ರಮಗಳನ್ನು ಕೈಗೊಂಡಿದೆ.

Leave a Reply

Your email address will not be published. Required fields are marked *

Trending

Exit mobile version