Connect with us

ಬೆಂಗಳೂರು

ಕನ್ನಡದ ಒಂದೇ ಒಂದು ಸಿನಿಮಾ (Cinema) ಹಿಟ್ ಲಿಸ್ಟ್ ಸೇರಿಲ್ಲ Special Report

ಕನ್ನಡದ ಮಾರ್ಕೆಟ್ ನ ಕಬ್ಜಾ ಮಾಡ್ಕೊತಿದ್ದಾವಾ ಪರಭಾಷೆ ಸಿನಿಮಾಗಳು? ಮಲಯಾಳಂ ಸಿನಿಮಾಗಳು (Malayalam Cinema) ಗಳಿಸ್ತಿವೆ ಕೋಟಿ ಕೋಟಿ ಹಣ? ಈ ವರ್ಷ ಕನ್ನಡದ ಒಂದೇ ಒಂದು ಸಿನಿಮಾ (Cinema) ಹಿಟ್ ಲಿಸ್ಟ್ ಸೇರಿಲ್ಲ. ಆ ಕುರಿತ ಆ ಸ್ಪೆಷಲ್ ರಿಪೋರ್ಟ್ ಇಲ್ಲಿದೆ .

ಕನ್ನಡ ನೆಲದಲ್ಲಿ ಕನ್ನಡಿಗನೇ ಸಾರ್ವಭೌಮ. ಈ ಮಾತು ಸಿನಿಮಾ ವಿಚಾರದಲ್ಲಿ ಸುಳ್ಳಾಗ್ತಿದೆ. ಕನ್ನಡಿಗರು ಕನ್ನಡ ಸಿನಿಮಾಗಳತ್ತ ಬೆನ್ನು ಮಾಡಿ ಕೂತಿದ್ದಾರೆ. ಅದರಲ್ಲೂ ಥಿಯೇಟರಿಗೆ ಬರಲು ಜಪ್ಪಯ್ಯ ಅಂದ್ರೂ ಒಪ್ಪುತ್ತಿಲ್ಲ ಕನ್ನಡ ಸಿನಿರಸಿಕರು.

ಪರಿಣಾಮ ಈ ವರ್ಷ ಶುರುವಾಗಿ ನಾಲ್ಕು ತಿಂಗಳಾದ್ರೂ ಒಂದೇ ಒಂದು ಕನ್ನಡ ಸಿನಿಮಾ ಹಿಟ್ ಲಿಸ್ಟ್ ಸೇರಿಲ್ಲ. ಬಾಕ್ಸಾಫೀಸ್ ನಲ್ಲಿ ಝಣ ಝಣ ಕಾಂಚಾಣ ಎಣಿಸಿಲ್ಲ.

ಹೌದು, 2025 ಸ್ಯಾಂಡಲ್ ವುಡ್ ಪಾಲಿಗೆ ದುಸ್ವಪ್ನವಾಗಿದೆ. ಎಷ್ಟು ಒಳ್ಳೆಯ ಸಿನಿಮಾ ಕೊಟ್ರೂ ಜನ ಬರ್ತಿಲ್ಲ. ಇನ್ನೆಂಥ ಸಿನಿಮಾ ಕೊಡಬೇಕು ಗುರು ಅಂತ ಸಿನಿಮಾ ಮಂದಿ ತಲೆ ಕೆರೆದುಕೊಳ್ಳುವಂತೆ ಮಾಡಿದೆ.

ಜನವರಿಯಿಂದ ಏಪ್ರಿಲ್ ಕೊನೆಯ ತನಕ ಕನ್ನಡದ 80 ಸಿನಿಮಾಗಳು ರಿಲೀಸ್ ಆಗಿವೆ. ಅದರಲ್ಲಿ ಛೂಮಂತರ್, ಯುದ್ಧಕಾಂಡ, ಫಾರೆಸ್ಟ್ ನಂತಹ ಸಿನಿಮಾಗಳು ಪಾಸಿಟಿವ್ ರಿಪೋರ್ಟ್ ಪಡ್ಕೊಂಡಿವೆ. ಪರ್ವಾಗಿಲ್ಲ ಒಮ್ಮೆ ನೋಡಬಹುದು ಎಂಬ ಟಾಕ್ ಪಡ್ಕೊಂಡಿವೆ.. ಆದ್ರೆ ರಿಸಲ್ಟ್ ಮಾತ್ರ ಶೂನ್ಯ.

ಅತ್ಯಧಿಕ ಗಳಿಕೆಯೇ 6 ಕೋಟಿಯಾ?

ಕನ್ನಡದ ಸಿನಿಮಾವೊಂದು ಈ ವರ್ಷ ಹೈಯೆಸ್ಟ್ ಗಳಿಕೆ ಕಂಡಿದೆ ಅಂದ್ರೆ? ಅದು ಶರಣ್ ನಟನೆಯ ಛೂಮಂತರ್ ಸಿನಿಮಾ. ಈ ಸಿನಿಮಾ 5 ರಿಂದ 6 ಕೋಟಿ ಗಳಿಸಿದೆ ಎನ್ನಲಾಗ್ತಿದೆ. ಇದುವೆ ಈ ವರ್ಷದ ಹೈಯೆಸ್ಟ್ ಗಳಿಕೆ ಇಲ್ಲಿತನಕ ಅಂದ್ರೆ? ಅದು ನಿಜಕ್ಕೂ ದುರಂತವೇ ಸರಿ.

ಕನ್ನಡ ಸಿನಿಮಾಗಳ ಕಡೆ ಮಾತ್ರ ಯಾಕೆ ನಿರಾಸಕ್ತಿ?

ಇದು ಕನ್ನಡ ನೆಲದಲ್ಲಿ ಕನ್ನಡ ಸಿನಿಮಾಗಳಿಗೆ ಮಾತ್ರ ನಿರಾಸಕ್ತಿ. ಆದ್ರೆ ಇದೇ ಕನ್ನಡ ಮಣ್ಣಲ್ಲಿ ಪರಭಾಷೆಯ ಸಿನಿಮಾಗಳು ಕೋಟಿ ಕೋಟಿಯನ್ನ ಲೂಟಿ ಮಾಡ್ತಾ ಇವೆ.. ಅದಕ್ಕೆ ಬೆಸ್ಟ್ ಎಕ್ಸಾಂಪಲ್ ಅಂದ್ರೆ? ಮೋಹನ್ ಲಾಲ್ ನಟನೆಯ ಎಂಪುರಾನ್ ಸಿನಿಮಾ.. ಈ ಸಿನಿಮಾ ಬಗ್ಗೆ ಅಂತಹ ಪಾಸಿಟಿವ್ ಟಾಕ್ ಏನು ಕೇಳಿ ಬರಲಿಲ್ಲ.. ನೋಡಿದವರೆಲ್ಲಾ ಬಯ್ಕೊಂಡೇ ಆಚೆ ಬಂದ್ರು.. ಆದ್ರೂ ಸಹ ಈ ಸಿನಿಮಾ ಕರ್ನಾಟಕದಲ್ಲಿಯೇ 15 ಕೋಟಿ ಹಣ ಗಳಿಸಿದೆ.. ಹಂಗಂತ ಕೇವಲ ಮಲಯಾಳಿಗಳು ಮಾತ್ರ ಈ ಸಿನಿಮಾವನ್ನ ನೋಡಿಲ್ಲ.. ಕನ್ನಡಿಗರು ಸಹ ಮುಗಿಬಿದ್ದು ನೋಡಿದ್ದಾರೆ.

ಹೌಸ್​ಫುಲ್ ಪ್ರದರ್ಶನ ಕಾಣ್ತಿದೆ ಪರಭಾಷೆ ಸಿನಿಮಾ

ಅಷ್ಟೇ ಅಲ್ಲದೆ ರಿಸೆಂಟಾಗಿ ಬಿಡುಗಡೆಯಾದ ತುಡರುಮ್ ಎಂಬ ಸಿನಿಮಾ ಬೆಂಗಳೂರು, ಮಂಗಳೂರು, ಮೈಸೂರು ಸೇರಿದಂತೆ ರಾಜ್ಯದ ಹಲವು ಪ್ರಮುಖ ನಗರಗಳಲ್ಲಿ ಬಿಡುಗಡೆಯಾದ 9 ದಿನಗಳಾದ್ರೂ ಸಹ ಹೌಸ್ ಫುಲ್ ಪ್ರದರ್ಶನ ಕಾಣ್ತಿದೆ.

ಬೆಂಗಳೂರಿನಲ್ಲಿಯೇ ತುಡರುಮ್ ಮಲಯಾಳಂ ವರ್ಷನ್ 300 ಪ್ಲಸ್ ಶೋ ಪ್ರದರ್ಶನ ಕಾಣ್ತಿದೆ. ಅಷ್ಟೂ ಶೋಸ್ ಫಾಸ್ಟ್ ಫಿಲ್ಲಿಂಗ್ ಆಗ್ತಿವೆ ಅಂದ್ರೆ? ಕರ್ನಾಟಕ ನೆಲದಲ್ಲಿ ಪರಭಾಷೆ ಸಿನಿಮಾಗಳ ಅಬ್ಬರ ಹೇಗಿದೆ ಎಂಬುದಕ್ಕೆ ಸಾಕ್ಷಿ.

ಕನ್ನಡ ಸಿನಿಮಾಗೆ ಮಾತ್ರ ನೀರಸ ಪ್ರತಿಕ್ರಿಯೆ

ಹಾಗೆ ಅಜಿತ್ ನಟನೆಯ ಗುಡ್ ಬ್ಯಾಡ್ ಅಗ್ಲಿ, ವೆಂಕಟೇಶ್ ನಟನೆಯ ಸಂಕ್ರಾತಿಕಿ ವಸ್ತುನ್ನಾಮ್, ನಾನಿ ನಟನೆಯ ಹಿಟ್3 ಸಿನಿಮಾಗಳು ಸಹ ಕರ್ನಾಟಕದಲ್ಲಿ ಒಳ್ಳೆಯ ಗಳಿಕೆಯನ್ನ ಕಾಣ್ತಿವೆ.. ಆದ್ರೆ ಕನ್ನಡ ಸಿನಿಮಾಗಳು ಮಾತ್ರ ಯಾವುದೇ ಪೈಪೋಟಿಯನ್ನ ಕೊಡಲಾಗದೆ ನೀರಸ ಪ್ರತಿಕ್ರಿಯೆಯನ್ನ ಪಡ್ಕೊಳ್ತಿವೆ.

ಕರ್ನಾಟಕದ ಎಷ್ಟೋ ಸಿನಿಮಾ ಮಂದಿರಗಳು ಹಾಕಲು ಒಳ್ಳೆಯ ಕನ್ನಡ ಸಿನಿಮಾಗಳಿಲ್ಲದೆ. ಅನಿವಾರ್ಯವಾಗಿ ಪರಭಾಷೆ ಸಿನಿಮಾಗಳಿಗೆ ಮಣೆ ಹಾಕುವ ನಿರ್ಧಾರಕ್ಕೆ ಬಂದಿವೆ.. ಇಷ್ಟೆಲ್ಲಾ ಆದ್ರೂ ಸಹ ಕರ್ನಾಟಕ ಚಲನ ಚಿತ್ರ ವಾಣಿಜ್ಯ ಮಂಡಳಿಯಾಗಲಿ, ಕಲಾವಿದರ ಸಂಘವಾಗಲಿ, ನಿರ್ಮಾಪಕರ ಸಂಘವಾಗಲಿ ಮುಂದೇನು ಮಾಡಬೇಕು ಎಂಬ ಚಿಂತನೆ ನಡೆಸಿದಂತೆ ಇಲ್ಲ.

ಕನ್ನಡ ಸಿನಿಮಾಗಳ ಈ ಸ್ಥಿತಿಗೆ ಈ ಗತಿಗೆ ಪ್ಯಾನ್ ಇಂಡಿಯಾ ಎಂಬ ಟ್ರೆಂಡ್ ನ ಹಿಂದೆ ಬಿದ್ದಿದ್ದೇ ಕಾರಣ. ಸ್ಟಾರ್ ನಟರು ಮೂರು ವರ್ಷಕ್ಕೆ ಒಂದು ಸಿನಿಮಾ ಮಾಡ್ಕಂಡು ಕಾಲಹರಣ ಮಾಡ್ತಿರೋದೆ ಕಾರಣ ಎಂಬುದು ಸಿನಿರಂಗದಲ್ಲಿಯೇ ಕೇಳಿ ಬರ್ತಿರೋ ಅಪಸ್ವರ. ಸದ್ಯಕ್ಕಂತೂ ಕನ್ನಡ ಚಿತ್ರರಂಗಕ್ಕೆ ಯಾವುದೇ ಆಶಕಿರಣ ಕಾಣಿಸ್ತಾ ಇಲ್ಲ. ಸದ್ಯದ ಪರಿಸ್ಥಿತಿ ಕಂಡು ದೊಡ್ಡ ದೊಡ್ಡವರೇ ಹೆದರುವಂತಹ ಪರಿಸ್ತಿತಿ ಇದೆ. ಹಾಗೆ ಕನ್ನಡ ಸಿನಿಮಾಗಳು ಅಂದ್ರೆ ಸ್ಯಾಟ್ ಲೈಟ್ ರೈಟ್ಸ್ ಸೇಲಾಗ್ತಿಲ್ಲ. ಒಟಿಟಿಗೆ ಕೇಳೋರೆ ಇಲ್ಲ.

ಹಿಂಗಾದ್ರೆ ಹೆಂಗೆ ಗುರು? ಇದಕ್ಕೆ ಶಾಸ್ವತ ಪರಿಹಾರ ಕಂಡು ಹಿಡಿಯೋ ನಿಟ್ಟಿನಲ್ಲಿ ಚಿತ್ರರಂಗ ಒಮ್ಮತದಿಂದ ಕಾರ್ಯಕ್ರಮವನ್ನ ರೂಪಿಸಬೇಕಿದೆ.

ದೇಶ

HAL ಠಾಣೆ ಇನ್ಸ್‌ಪೆಕ್ಟರ್ ವಿರುದ್ಧ ಗಂಭೀರ ಆರೋಪ: ಅರವಿಂದ್ ರೆಡ್ಡಿ ಕಾಲಿಗೆ ಬೀಳಲು ಬೆದರಿಕೆ?

ಬೆಂಗಳೂರು: ತನಗೆ ಹಾಗೂ ಸ್ನೇಹಿತೆಯಾಗಿರುವ ನಟಿಗೆ ಉದ್ಯಮಿ ಅರವಿಂದ್ ರೆಡ್ಡಿಯ ಕಾಲು ಹಿಡಿಯುವಂತೆ ಎಚ್‌ಎಎಲ್ ಠಾಣೆಯ ಇನ್ಸ್‌ಪೆಕ್ಟರ್ ಬೆದರಿಸಿದ್ದಾರೆ ಎಂದು ಆರೋಪಿಸಿ ಬಿ.ಕೆ. ವೈಶಾಕ್ ಕರ್ನಾಟಕ ಹೈಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಿದ್ದಾರೆ.

ಉದ್ಯಮಿ ಅರವಿಂದ್ ರೆಡ್ಡಿಗೆ ಬೆದರಿಕೆ ಪತ್ರ ಕಳುಹಿಸಿದ ಪ್ರಕರಣದಲ್ಲಿ ಎಚ್‌ಎಎಲ್ ಠಾಣಾ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸಬೇಕು ಹಾಗೂ ಇನ್ಸ್‌ಪೆಕ್ಟರ್ ಅಜರುದ್ದೀನ್ ವಿರುದ್ಧ ವಿಚಾರಣೆ ನಡೆಸಲು ಸಕ್ಷಮ ಪ್ರಾಧಿಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ವೈಶಾಕ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಇನ್ಸ್‌ಪೆಕ್ಟರ್ ಅಜರುದ್ದೀನ್ ಹಾಗೂ ಅರವಿಂದ್ ರೆಡ್ಡಿಯನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಕಾಲಿಗೆ ಬೀಳುವಂತೆ ಸೂಚನೆ?

ಗುರುವಾರ ಅರ್ಜಿ ವಿಚಾರಣೆಗೆ ಬಂದಾಗ, ವೈಶಾಕ್ ಪರ ವಕೀಲರು ಹಾಜರಾಗಿ ಮಹತ್ವದ ಆರೋಪ ಮಂಡಿಸಿದರು. ಫೆಬ್ರವರಿ 6ರಂದು ಅರ್ಜಿದಾರರನ್ನು ಬಿಡುಗಡೆ ಮಾಡಲು ಹೈಕೋರ್ಟ್ ಸೂಚಿಸಿದ್ದರೂ, ಠಾಣೆಗೆ ಪ್ರಕರಣದಲ್ಲಿ ಹೆಸರು ಕೇಳಿಬಂದ ನಟಿಯನ್ನೂ ಕರೆಸಲಾಗಿತ್ತು. ಅಲ್ಲದೆ, ಅರವಿಂದ್ ರೆಡ್ಡಿಯ ಕಾಲಿಗೆ ಬೀಳುವಂತೆ ವೈಶಾಕ್‌ಗೆ ಸೂಚನೆ ನೀಡಲಾಗಿದೆ ಎಂದು ಪ್ರಮಾಣಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಈ ಹೇಳಿಕೆಯನ್ನು ದಾಖಲಿಸಿಕೊಂಡ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, ಪ್ರಕರಣದ ಕುರಿತು ತೀರ್ಮಾನ ಕೈಗೊಳ್ಳುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ತಿಳಿಸಿ, ವಿಚಾರಣೆಯನ್ನು ಫೆಬ್ರವರಿ 17ಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ

ಜನವರಿಯಲ್ಲಿ ವೈಶಾಕ್ ಕೊರಿಯರ್ ಮೂಲಕ ಅರವಿಂದ್ ರೆಡ್ಡಿಗೆ ಬೆದರಿಕೆ ಪತ್ರ ಕಳುಹಿಸಿ, ನಟಿಯೊಂದಿಗೆ ಇರುವ ಜಗಳ ಬಗೆಹರಿಸಿಕೊಳ್ಳಬೇಕು. ಇಲ್ಲದಿದ್ದರೆ 6ರಿಂದ 7 ಕೋಟಿ ರೂ. ಹಣವನ್ನು ಕಳುಹಿಸಬೇಕು ಎಂದು ಒತ್ತಾಯಿಸಿದ್ದರು ಎಂಬ ಆರೋಪ ಇದೆ. ಬೇಡಿಕೆ ಈಡೇರಿಸದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಸೂಚಿಸಿದ್ದಾಗಿ ದೂರಿನಲ್ಲಿ ಹೇಳಲಾಗಿದೆ.

ಈ ಕುರಿತು ಅರವಿಂದ್ ರೆಡ್ಡಿ ದೂರು ನೀಡಿದ್ದು, ಎಚ್‌ಎಎಲ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಫೆಬ್ರವರಿ 2ರಂದು ನಟಿಯ ಮನೆಯಲ್ಲಿ ವೈಶಾಕ್ ಅವರನ್ನು ಬಂಧಿಸಲಾಗಿತ್ತು.

ಪ್ರಕರಣ ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದು, ಮುಂದಿನ ವಿಚಾರಣೆ ಫೆಬ್ರವರಿ 17ರಂದು ನಡೆಯಲಿದೆ.

Continue Reading

ದೇಶ

ಸಿಎಂ ಕುರ್ಚಿ ಉಳಿಸಿಕೊಳ್ಳಲು ಶಾಸಕರ ವಿದೇಶ ಪ್ರವಾಸ? ವಿಜಯೇಂದ್ರ ಗಂಭೀರ ಆರೋಪ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಶಾಸಕರನ್ನು ವಿದೇಶ ಪ್ರವಾಸಕ್ಕೆ ಕಳುಹಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು. ಸರ್ಕಾರ ಬಂದ ಬಳಿಕ ಅನುದಾನ ಬೇಡಿಕೆ ಇಟ್ಟಿದ್ದರೂ ಗಂಗಕಲ್ಯಾಣ ಯೋಜನೆ, ಮನೆ ನಿರ್ಮಾಣ ಸೇರಿದಂತೆ ಹಲವು ಕಾರ್ಯಗಳು ನಡೆಯದೆ ಜನರಲ್ಲಿ ಅಸಮಾಧಾನ ಮೂಡಿದೆ ಎಂದು ಆರೋಪಿಸಿದರು. ಶಾಸಕರು ತಮ್ಮ ಖರ್ಚಿನಲ್ಲಿ ವಿದೇಶಕ್ಕೆ ಹೋಗುತ್ತಿದ್ದಾರೆ ಎಂಬ ಸಿಎಂ ಹೇಳಿಕೆಯನ್ನು ಪ್ರಶ್ನಿಸಿ, “ತಮ್ಮ ಕುರ್ಚಿ ಉಳಿಸಿಕೊಳ್ಳಲು ತಾವೇ ಅವರನ್ನು ಕಳಿಸುತ್ತಿದ್ದಾರೆ” ಎಂದು ಟೀಕಿಸಿದರು.

ರೆಸಾರ್ಟ್ ರಾಜಕೀಯದ ಮೇಲೆ ಲೇವಡಿ

ಕಾಂಗ್ರೆಸ್ ಶಾಸಕರು ರೆಸಾರ್ಟ್ ಬುಕ್ ಮಾಡಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ, “ಅವರಿಗೆ ಅನುಕೂಲವಾಗಲಿ ಎಂದು ಬಿಜೆಪಿಯಿಂದ ಬಡಿಗೆ ರೆಡಿ ಮಾಡಿಸಿದ್ದೇವೆ” ಎಂದು ವ್ಯಂಗ್ಯವಾಡಿದರು. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಅಂತರದ ರಾಜಕೀಯ ನಡೆಯುತ್ತಿದೆ ಎಂದು ಹೇಳಿದರು.

₹5,000 ಕೋಟಿ ಎಲ್ಲಿಗೆ ಹೋಯ್ತು?

ಗೃಹ ಲಕ್ಷ್ಮೀ ಯೋಜನೆಯ ₹5,000 ಕೋಟಿ ಹಣದ ಬಗ್ಗೆ ಸ್ಪಷ್ಟ ಉತ್ತರ ಸಿಗಲಿಲ್ಲ ಎಂದು ಆರೋಪಿಸಿದ ಅವರು, “ಹಣ ಉಪಯೋಗ ಆಯ್ತಾ? ದುರಪಯೋಗ ಆಯ್ತಾ? ಸಿಎಂ ಉತ್ತರ ಕೊಡಬೇಕು” ಎಂದು ಆಗ್ರಹಿಸಿದರು. ಕೇಂದ್ರ ಸರ್ಕಾರಕ್ಕೆ ನಕಲಿ ದಾಖಲೆ ನೀಡಿರುವ ವಿಚಾರದಲ್ಲೂ ಮುಂದಿನ ದಿನಗಳಲ್ಲಿ ವಿವರವಾದ ಸುದ್ದಿಗೋಷ್ಠಿ ನಡೆಸುವುದಾಗಿ ತಿಳಿಸಿದರು.

ಪ್ರಾದೇಶಿಕ ಅಸಮಾನತೆ ಹೆಚ್ಚಳ

ಪ್ರಾದೇಶಿಕ ಅಸಮಾನತೆ ನಿವಾರಣೆ ಸಮಿತಿ ವರದಿ ಉಲ್ಲೇಖಿಸಿ, ರಾಜ್ಯದಲ್ಲಿ ಅಸಮಾನತೆ ಶೇಕಡಾ 60ರಿಂದ 72.08ಕ್ಕೆ ಏರಿಕೆಯಾಗಿದೆ ಎಂದು ಹೇಳಿದರು. ಕಿತ್ತೂರು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿ ಹಿಂದುಳಿದಿದೆ ಎಂದು ಆರೋಪಿಸಿದರು.

ಕುರಿಗಾರರಿಗೆ ಪರಿಹಾರ ಬಾಕಿ

ಅನುಗ್ರಹ ಯೋಜನೆಯಡಿ 45 ಕೋಟಿ ರೂ. ಬಾಕಿ ಇಟ್ಟಿದ್ದು, 90 ಸಾವಿರ ಸಾವಿನ ಪೈಕಿ ಕೇವಲ 30 ಸಾವಿರ ಕುರಿಮರಿಗಳಿಗೆ ಮಾತ್ರ ಪರಿಹಾರ ನೀಡಲಾಗಿದೆ ಎಂದು ಆರೋಪಿಸಿದರು.

ಬಿಜೆಪಿ ಕಾರ್ಯಕಾರಿಣಿ ಸಭೆ

ಫೆಬ್ರವರಿ 19ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಸರ್ಕಾರದ ವೈಫಲ್ಯಗಳು ಮತ್ತು ಮುಂದಿನ ಚುನಾವಣಾ ತಂತ್ರಗಳ ಬಗ್ಗೆ ಚರ್ಚೆ ಮಾಡಲಾಗುತ್ತದೆ ಎಂದು ಹೇಳಿದರು.

Continue Reading

ದೇಶ

BESCOMಗೆ C-ರೇಟಿಂಗ್ ಶಾಕ್: ದೇಶದ 54 ಎಸ್ಕಾಂಗಳಲ್ಲಿ 51ನೇ ಸ್ಥಾನ

ಬೆಂಗಳೂರು: ದೇಶದ 54 ವಿದ್ಯುತ್ ವಿತರಣಾ ಸಂಸ್ಥೆಗಳ ಕಾರ್ಯಕ್ಷಮತೆಯನ್ನು ವಿದ್ಯುತ್ ಸಚಿವಾಲಯ ಮೌಲ್ಯಮಾಪನ ಮಾಡಿದ್ದು, ಕರ್ನಾಟಕದ ಬೆಸ್ಕಾಂ (BESCOM) 51ನೇ ಸ್ಥಾನಕ್ಕೆ ಕುಸಿದಿದೆ. 14ನೇ ವಾರ್ಷಿಕ ಸಂಯೋಜಿತ ರೇಟಿಂಗ್ ಮತ್ತು ಶ್ರೇಯಾಂಕ ವರದಿಯಲ್ಲಿ ಬೆಸ್ಕಾಂ ಕಳಪೆ ಪ್ರದರ್ಶನ ನೀಡಿದ ಸಂಸ್ಥೆಗಳ ಪಟ್ಟಿಯಲ್ಲಿ ಸೇರಿದೆ.

ವಿದ್ಯುತ್ ಸಂಸ್ಥೆಗಳ ಕಾರ್ಯಕ್ಷಮತೆಯನ್ನು ಸಂಗ್ರಹಣಾ ದಕ್ಷತೆ, ಬಿಲ್ಲಿಂಗ್ ದಕ್ಷತೆ, ಪ್ರಸರಣ ನಷ್ಟ, ಆಡಿಟ್ ಖಾತೆಗಳ ಲಭ್ಯತೆ ಸೇರಿದಂತೆ 15 ಪ್ರಮುಖ ಮಾನದಂಡಗಳ ಆಧಾರದಲ್ಲಿ ಶ್ರೇಯಾಂಕ ನೀಡಲಾಗಿದೆ. ಈ ಸಾಲಿನ ವರದಿಯಲ್ಲಿ ಬೆಸ್ಕಾಂ 100ರಲ್ಲಿ ಕೇವಲ 12.44 ಅಂಕಗಳನ್ನು ಪಡೆದು C-ರೇಟಿಂಗ್ ಮತ್ತು ‘ಕೆಂಪು ಕಾರ್ಡ್’ ಪಡೆದಿದೆ.

ವರದಿ ಪ್ರಕಾರ, ಬೆಸ್ಕಾಂ 13,819 ಕೋಟಿ ರೂ. ಸಂಚಿತ ನಷ್ಟ ಹಾಗೂ 22,611 ಕೋಟಿ ರೂ. ಸ್ಥಾಯಿ ಸಾಲವನ್ನು ಹೊಂದಿದೆ. 2025ನೇ ಹಣಕಾಸು ವರ್ಷದಲ್ಲಿ ಮಾತ್ರ 5,476 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ತಿಳಿಸಿದೆ.

ಕಳೆದ ವರ್ಷಕ್ಕಿಂತ ಕುಸಿತ

ಹಿಂದಿನ 13ನೇ ವಾರ್ಷಿಕ ರೇಟಿಂಗ್‌ನಲ್ಲಿ ಬೆಸ್ಕಾಂ 100ರಲ್ಲಿ 40.43 ಅಂಕಗಳನ್ನು ಪಡೆದು B-ದರ್ಜೆಯೊಂದಿಗೆ 34ನೇ ಸ್ಥಾನದಲ್ಲಿತ್ತು. ಆದರೆ ಈ ಬಾರಿ 51ನೇ ಸ್ಥಾನಕ್ಕೆ ಜಾರಿದ್ದು ಕಾರ್ಯಕ್ಷಮತೆಯಲ್ಲಿ ಕುಸಿತ ಸ್ಪಷ್ಟವಾಗಿದೆ.

ಆಶ್ಚರ್ಯಕರವಾಗಿ, ಕರ್ನಾಟಕದ ಯಾವುದೇ ಎಸ್ಕಾಂಗಳು ಟಾಪ್ 10 ಅಥವಾ ಟಾಪ್ 20 ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ. ಆದರೆ ಮೆಸ್ಕಾಂ (MESCOM) 26ನೇ ಸ್ಥಾನ ಪಡೆದು ರಾಜ್ಯದ ಇತರ ಸಂಸ್ಥೆಗಳಿಗಿಂತ ಉತ್ತಮ ಪ್ರದರ್ಶನ ನೀಡಿದೆ.

ಸುಧಾರಣೆ ಅಗತ್ಯ

ತಜ್ಞರು ರಾಜ್ಯ ಸರ್ಕಾರವು ರಚನಾತ್ಮಕ ಸುಧಾರಣೆಗಳನ್ನು ಜಾರಿಗೆ ತರದ ಹೊರತು ಎಸ್ಕಾಂಗಳ ಪರಿಸ್ಥಿತಿ ಸುಧಾರಿಸುವುದು ಕಷ್ಟ ಎಂದು ಅಭಿಪ್ರಾಯಪಟ್ಟಿದ್ದಾರೆ. KERC ಸಲಹಾ ಸಮಿತಿಯ ಮಾಜಿ ಸದಸ್ಯ ಎಂ.ಜಿ. ಪ್ರಭಾಕರ್, “ಗುರುಚರಣ್ ಸಮಿತಿ ವರದಿ ಎಸ್ಕಾಂಗಳನ್ನು ಪುನರುಜ್ಜೀವನಗೊಳಿಸಲು ರಚನಾತ್ಮಕ ಮತ್ತು ಕ್ರಿಯಾತ್ಮಕ ಸುಧಾರಣೆಗಳನ್ನು ಸೂಚಿಸಿತ್ತು. ಇಂತಹ ಸುಧಾರಣೆಗಳನ್ನು ತ್ವರಿತವಾಗಿ ಜಾರಿಗೆ ತರುವ ಅವಶ್ಯಕತೆ ಇದೆ” ಎಂದು ಹೇಳಿದ್ದಾರೆ.

ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಪ್ರತಿಕ್ರಿಯಿಸಿ, “ಕೆಲವು ಲೆಕ್ಕಪತ್ರ ಸಮಸ್ಯೆಗಳಿವೆ. ಅವನ್ನು ಗುರುತಿಸಿ ಸರಿಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಇತರ ಅಂಶಗಳಲ್ಲಿ ಕಾರ್ಯಕ್ಷಮತೆ ತೃಪ್ತಿಕರವಾಗಿದೆ. ಆದಾಯದ ಬೆಳವಣಿಗೆ ಆರೋಗ್ಯಕರವಾಗಿದೆ” ಎಂದು ತಿಳಿಸಿದ್ದಾರೆ.

Continue Reading

Trending