ದೇಶ
ಸದನದಲ್ಲಿ ಪ್ರಶ್ನೆ ಕೇಳಲು ಲಂಚ ಪಡೆಯುತ್ತಿದ್ದ ಶಾಸಕ ಅರೆಸ್ಟ್!

ರಾಜಾಸ್ಧಾನ: ಇತಿಹಾಸದಲ್ಲಿಯೇ ಮೊದಲ ಬಾರಿಗೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಶಾಸಕರೊಬ್ಬರನ್ನು ವಿಶಿಷ್ಟ ಕಾರಣವೊಂದಕ್ಕೆ ಬಂಧಿಸಿದ್ದಾರೆ, ಭಾರತ ಆದಿವಾಸಿ ಪಾರ್ಟಿಯ ಶಾಸಕ ಜೈಕ್ರಿಶ್ನ್ ಪಟೇಲ್ ಸದನದಲ್ಲಿ ಪ್ರಶ್ನೆ ಕೇಳಲು ಮೂರು ಪ್ರಶ್ನೆಗೆ 20 ಲಕ್ಷ ರೂ ಲಂಚ ಪಡೆಯುತ್ತಿದ್ದರೆಂದು ಆರೋಪಿಸಲಾಗಿದ್ದು, ಭಾನುವಾರ ಎಸಿಬಿ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದಿದ್ದಾರೆ,
ಈ ರೀತಿಯ ಪ್ರಕರಣದಲ್ಲಿ ಶಾಸಕರೊಬ್ಬರನ್ನು ಬಂಧಿಸುತ್ತಿರುವುದು ಇತಿಹಾಸದಲ್ಲಿಯೇ ಮೊದಲ ಪ್ರಕರಣವಾಗಿದೆ ಎಂದು ರಾಜಾಸ್ಧಾನದ ಎಸಿಬಿ ಮುಖ್ಯ ನಿರ್ದೇಶಕ ಪ್ರಕಾಶ್ನ ಮೆಹರ್ದ ತಿಳಿಸಿದ್ದಾರೆ,
ಬಾನಾಸ್ವರ ಜಿಲ್ಲೆಯ ಬಗಿಢೋರ ಎಸ್ಟಿ ಮೀಸಲು ಕ್ಷೇತ್ರದಿಂದ ಜೈಕ್ರಿಶ್ನ್ ಪಟೇಲ್ ಆರಿಸಿ ಬಂದಿದ್ದರು,
ಗಣಿಗಾರಿಕೆಯ ಬಗ್ಗೆ ಪ್ರಶ್ನೆ ಕೇಳಲು 10 ಕೋಟಿ ರೂ.ಗೆ ಬೇಡಿಕೆಯಿಟ್ಟಿದ್ದು ಶಾಸಕ ಮುಂಗಡವಾಗಿ 2.5 ಕೋಟಿ ರೂ ಪಡೆದಿದ್ದರು, ಇದರ ಕಂತಿನಲ್ಲಿ 20 ಲಕ್ಷ ರೂ ಪಡೆಯುವಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಸಾಕ್ಷಿ ಸಮೇತ ಬಂಧಿಸಿದ್ದಾರು,
ದೇಶ
2034ರಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿ ಆಗುವ ಸಾಧ್ಯತೆ

ನವದೆಹಲಿ: ಭಾರತದಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ (One Nation, One Election) ಯೋಜನೆಯನ್ನು 2034ರ ವೇಳೆಗೆ ಜಾರಿಗೆ ತರಲು ಸರ್ಕಾರ ಯೋಜಿಸುತ್ತಿದೆ ಎಂದು ಇತ್ತೀಚಿನ ವರದಿಯೊಂದು ತಿಳಿಸಿದೆ. ಈ ಯೋಜನೆಯು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಗುರಿಯನ್ನು ಹೊಂದಿದೆ. ಇದರಿಂದ ಚುನಾವಣಾ ವೆಚ್ಚವನ್ನು ಕಡಿಮೆ ಮಾಡುವುದು ಮತ್ತು ಆಡಳಿತದ ಸಮಯವನ್ನು ಉಳಿಸುವುದು ಸಾಧ್ಯವಾಗಲಿದೆ. ಈ ಯೋಜನೆಯನ್ನು ಸಾಂವಿಧಾನಿಕ ತಿದ್ದುಪಡಿಯ ಮೂಲಕ ಜಾರಿಗೊಳಿಸಲು ಸಂವಿಧಾನ (129ನೇ ತಿದ್ದುಪಡಿ) ಮಸೂದೆ, 2024 ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳ (ತಿದ್ದುಪಡಿ) ಮಸೂದೆ, 2024ರಲ್ಲಿ ನಿಬಂಧನೆಗಳನ್ನು ಸೇರಿಸಲಾಗಿದೆ.
ಜಂಟಿ ಸಂಸದೀಯ ಸಮಿತಿಯ ಮುಖ್ಯಸ್ಥರಾದ ಪಿ.ಪಿ. ಚೌಧರಿ ಅವರು ತಿಳಿಸಿದ ಪ್ರಕಾರ, 2029ರ ನಂತರ ಚುನಾಯಿತವಾಗುವ ರಾಜ್ಯ ವಿಧಾನಸಭೆಗಳು 2034ರ ಲೋಕಸಭಾ ಚುನಾವಣೆಯೊಂದಿಗೆ ಸಮನ್ವಯಗೊಳ್ಳಲು ಕಡಿಮೆ ಅವಧಿಯನ್ನು ಹೊಂದಿರುತ್ತವೆ. ಉದಾಹರಣೆಗೆ, ಉತ್ತರ ಪ್ರದೇಶದಂತಹ ದೊಡ್ಡ ರಾಜ್ಯದಲ್ಲಿ 2032ರಲ್ಲಿ ಚುನಾಯಿತವಾಗುವ ವಿಧಾನಸಭೆಗೆ ಕೇವಲ ಎರಡು ವರ್ಷಗಳ ಕಾಲಾವಧಿಯಿರುತ್ತದೆ. ಇದು 2034ರ ಲೋಕಸಭಾ ಚುನಾವಣೆಯೊಂದಿಗೆ ಹೊಂದಾಣಿಕೆಯಾಗುವಂತೆ ವಿನ್ಯಾಸಗೊಳಿಸಲಾಗುತ್ತದೆ. ಈ ರೀತಿಯ ಕಡಿಮೆ ಅವಧಿಯ ವಿಧಾನಸಭೆಗಳು ಏಕಕಾಲಿಕ ಚುನಾವಣೆಯ ಯಶಸ್ವಿ ಜಾರಿಗೆ ಸಹಕಾರಿಯಾಗಲಿವೆ.
ಈ ಯೋಜನೆಯ ಪ್ರಕಾರ, ಸಾರ್ವತ್ರಿಕ ಚುನಾವಣೆಯ ನಂತರ ಲೋಕಸಭೆಯ ಮೊದಲ ಅಧಿವೇಶನದ ಕುರಿತು ರಾಷ್ಟ್ರಪತಿಗಳು ಅಧಿಸೂಚನೆಯನ್ನು ಹೊರಡಿಸುವರು. ಈ ದಿನಾಂಕದ ನಂತರ ರಚನೆಯಾಗುವ ಎಲ್ಲಾ ರಾಜ್ಯ ವಿಧಾನಸಭೆಗಳ ಅಧಿಕಾರಾವಧಿಯು ಲೋಕಸಭೆಯ ಐದು ವರ್ಷಗಳ ಅವಧಿಯೊಂದಿಗೆ ಏಕಕಾಲದಲ್ಲಿ ಕೊನೆಗೊಳ್ಳುತ್ತದೆ. ಒಂದು ವೇಳೆ ಲೋಕಸಭೆ ಅಥವಾ ರಾಜ್ಯ ವಿಧಾನಸಭೆಯು ತನ್ನ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸುವ ಮೊದಲು ವಿಸರ್ಜನೆಗೊಂಡರೆ, ಉಳಿದ ಅವಧಿಯನ್ನು ಒಳಗೊಳ್ಳಲು ಪ್ರತ್ಯೇಕ ಚುನಾವಣೆಗಳನ್ನು ನಡೆಸಲಾಗುತ್ತದೆ.
ಭಾರತೀಯ ಚುನಾವಣಾ ಆಯೋಗ (ECI) ಈ ಯೋಜನೆಯ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಒಂದು ವೇಳೆ ರಾಜ್ಯ ವಿಧಾನಸಭೆಯ ಚುನಾವಣೆಯನ್ನು ಏಕಕಾಲಿಕ ಚುನಾವಣೆಯ ಭಾಗವಾಗಿ ನಡೆಸಲಾಗದೆಂದು ಆಯೋಗ ತೀರ್ಮಾನಿಸಿದರೆ, ಆ ಚುನಾವಣೆಯನ್ನು ಮುಂದೂಡಲು ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಬಹುದು. ರಾಷ್ಟ್ರಪತಿಗಳು ಆ ಶಿಫಾರಸಿನ ಆಧಾರದ ಮೇಲೆ ಚುನಾವಣೆಯನ್ನು ನಂತರದ ದಿನಾಂಕಕ್ಕೆ ನಿಗದಿಪಡಿಸಬಹುದು.
ಏಕಕಾಲಿಕ ಚುನಾವಣೆಯ ಪ್ರಯೋಜನಗಳು
ಈ ಯೋಜನೆಯು ಚುನಾವಣಾ ವೆಚ್ಚವನ್ನು ಗಣನೀಯವಾಗಿ ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. ಒಂದೇ ಬಾರಿಗೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಚುನಾವಣೆಗಳನ್ನು ನಡೆಸುವುದರಿಂದ ಸರ್ಕಾರದ ಸಂಪನ್ಮೂಲಗಳ ಒತ್ತಡ ಕಡಿಮೆಯಾಗುತ್ತದೆ. ಜೊತೆಗೆ, ಆಡಳಿತಾತ್ಮಕ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಮತ್ತು ಚುನಾವಣೆಯಿಂದಾಗಿ ಆಗುವ ಆಡಳಿತದ ಅಡಚಣೆಗಳನ್ನು ತಡೆಗಟ್ಟಲು ಈ ಯೋಜನೆ ಸಹಾಯಕವಾಗಲಿದೆ.
ದೇಶ
ರೇಷನ್ ಕಾರ್ಡ್ನಿಂದ ಏನೆಲ್ಲಾ ಪ್ರಯೋಜನ?: ನೀವು ಪಡೆದುಕೊಂಡಿದ್ದೀರಾ?

ಬೆಂಗಳೂರು: ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಅನುಕೂಲ ಕಲ್ಪಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ. ಅದರಲ್ಲಿ ಪ್ರಮುಖವಾಗಿ ಪಡಿತರ ಚೀಟಿಯೂ ಒಂದು.
ರೇಷನ್ ಕಾರ್ಡ್ ಇದ್ದರೆ ಆಯಾ ಕಾರ್ಡ್ಗಳನ್ನು ಅನುಸರಿಸಿ ಬಡ ಮತ್ತು ಮಧ್ಯಮ ವರ್ಗದವರಿಗೆ ಕಡಿಮೆ ದರದಲ್ಲಿ ಅಕ್ಕಿ, ಬೇಳೆ, ಗೋಧಿ, ಸಕ್ಕರೆ ಸೇರಿ ಹಲವು ಆಹಾರ ಪದಾರ್ಥಗಳು ದೊರೆಯುತ್ತದೆ. ಬಿಪಿಎಲ್ ಕಾರ್ಡ್ದಾರರ ಕುಟುಂಬಕ್ಕೆ ಅಕ್ಕಿ, ಗೋಧಿ, ಸಕ್ಕರೆ ಮತ್ತಿತರ ಆಹಾರ ಪದಾರ್ಥಿಗಳು ಉಚಿತವಾಗಿ ದೊರೆತರೆ, ಎಪಿಎಲ್ ಕಾರ್ಡ್ದಾರರಿಗೆ ಸರ್ಕಾರ ನಿಗದಿಪಡಿಸಿದ ಕಡಿಮೆ ದರದಲ್ಲಿ ಪಡಿತರ ಸಿಗುತ್ತದೆ. ಇದರಿಂದ ಹಲವಾರು ಕುಟುಂಬಗಳು ನೆಮ್ಮದಿಯ ಜೀವನ ಸಾಗಿಸಬಹುದಾಗಿದೆ. ಇಷ್ಟೇ ಅಲ್ಲದೆ, ರೇಷನ್ ಕಾರ್ಡ್ ಇದ್ದರೆ ಇನ್ನೂ ಹಲವು ಸೌಲಭ್ಯಗಳು ಸರ್ಕಾರದಿಂದ ಉಚಿತವಾಗಿ ಸಿಗುತ್ತವೆ. ಅದೆಷ್ಟೋ ಜನರಿಗೆ ಇದರ ಸರಿಯಾದ ಮಾಹಿತಿ ಇರುವುದಿಲ್ಲ.
ಕಾರ್ಡ್ ಇದ್ದರೆ ಗ್ಯಾಸ್ ಸಿಲಿಂಡರ್, ಆರೋಗ್ಯ ವಿಮೆ, ಶಿಕ್ಷಣಕ್ಕೆ ಆರ್ಥಿಕ ನೆರವು, ಉಚಿತ ಹೊಲಿಗೆ ಯಂತ್ರ ಸೇರಿದಂತೆ ಹಲವು ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಸರ್ಕಾರದಿಂದ ಯಾವೆಲ್ಲಾ ಸೌಲಭ್ಯಗಳು ಸಿಗುತ್ತವೆ ಎಂಬುದರ ಮಾಹಿತಿ ಇಲ್ಲಿದೆ.
ಮಕ್ಕಳ ಶಿಕ್ಷಣಕ್ಕೆ ಆರ್ಥಿಕ ನೆರವು: ಒಂದು ಕುಟುಂಬದ ಆರ್ಥಿಕ ಸ್ಥಿತಿಗತಿಯನ್ನು ರೇಷನ್ ಕಾರ್ಡ್ ತೋರಿಸುತ್ತಿರುವುದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಶಿಕ್ಷಣ ನೆರವು ಯೋಜನೆಗಳಲ್ಲಿ ಅರ್ಹತೆ ರೂಪದಲ್ಲಿ ರೇಷನ್ ಕಾರ್ಡ್ ಬಳಕೆ ಮಾಡಬಹುದು. ಶುಲ್ಕ ಮನ್ನಾ ಹಾಗೂ ವಿದ್ಯಾರ್ಥಿ ವೇತನ ಮತ್ತಿತರ ಸೌಲಭ್ಯ ದೊರೆಯುತ್ತದೆ. ಅಷ್ಟೇ ಅಲ್ಲದೆ, ವ್ಯಕ್ತಿಯ ಹೆಸರು, ವಯಸ್ಸು ಮತ್ತು ವಿಳಾಸ, ಕುಟುಂಬದ ವಿವರಗಳನ್ನು ಒಳಗೊಂಡಿರುವ ಕಾರಣ ರೇಷನ್ ಕಾರ್ಡ್ ಅನ್ನು ಪ್ರಮುಖ ಗುರುತಿನ ಚೀಟಿಯಾಗಿಯೂ ಬಳಸಬಹುದು. ಮತದಾನ ಮತ್ತಿತರ ಕಡೆ ಐಡಿ ಪ್ರೂಪ್ ಆಗಿ ಈ ಕಾರ್ಡ್ ಬಳಕೆ ಮಾಡಬಹುದು. ಕೆಲವು ಪಿಂಚಣಿ ಯೋಜನೆಗಳಿಗೆ ಅಥವಾ ಬ್ಯಾಂಕ್ನಲ್ಲಿ ಖಾತೆ ತೆರೆಯಲು ಸಹ ಪಡಿತರ ಚೀಟಿ ಬಳಸಬಹುದಾಗಿದೆ.
ಉಜ್ವಲ ಗ್ಯಾಸ್ ಸಿಲಿಂಡರ್ : ಅಡುಗೆ ಗ್ಯಾಸ್ ಇಲ್ಲದವರಿಗೆ ಕೇಂದ್ರ ಸರ್ಕಾರ ನೀಡುತ್ತಿರುವ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಸಿಲಿಂಡರ್ ಸಿಗುತ್ತದೆ. ರೇಷನ್ ಕಾರ್ಡ್ ಬಳಸಿಕೊಂಡು ಈ ಯೋಜನೆ ಪಡೆಯುಬಹುದಾಗಿದೆ.
ಶ್ರಮಿಕ್ ಕಾರ್ಡ್ : ಅಸಂಘಟಿತ ವಲಯದ ಕಾರ್ಮಿಕರಿಗೆ ಶ್ರಮಿಕ್ ಕಾರ್ಡ್ ಯೋಜನೆಯಡಿ ರೇಷನ್ ಕಾರ್ಡ್ ಆಧಾರವಾಗಿ ಕೆಲಸದ ಲಾಭ, ಉದ್ಯೋಗ ಅವಕಾಶ ಸೇರಿದಂತೆ ಹಲವು ನೆರವು ದೊರೆಯುತ್ತದೆ. ಆ ಮೂಲಕ ಕಾರ್ಮಿಕರು ಕಾನೂನುಬದ್ಧವಾಗಿ ಸರ್ಕಾರದ ಸವಲತ್ತುಗಳನ್ನು ಪಡೆಯಬಹುದು ಎನ್ನುತ್ತಾರೆ ಅಧಿಕಾರಿಗಳು.
ರೈತರ ಬೆಳೆ ವಿಮೆಗೆ ಕಾರ್ಡ್ ಬಳಕೆ : ರೈತರ ಬೆಳೆ ವಿಮೆಗೂ ಈ ಕಾರ್ಡ್ ಬಳಕೆಯಾಗುತ್ತದೆ. ಕೃಷಿಯಲ್ಲಿ ನಷ್ಟ ಸಂಭವಿಸಿದರೆ ರೈತರು ರೇಷನ್ ಕಾರ್ಡ್ ಮೂಲಕ ಈ ಯೋಜನೆಗೆ ಅರ್ಜಿ ಸಲ್ಲಿಸಿ ಬೆಳೆ ನಷ್ಟ ಪರಿಹಾರ ಪಡೆಯಬಹುದು. ವಿಶೇಷವಾಗಿ ಬರ, ಪ್ರವಾಹ, ಮಳೆಹಾನಿ ವೇಳೆ ಗುರುತಿಗಾಗಿ ರೇಷನ್ ಕಾರ್ಡ್ ನೀಡಬಹುದು.
ಮನೆ ನಿರ್ಮಾಣಕ್ಕೂ ನೆರವು : ಎಷ್ಟೋ ಜನರಿಗೆ ಮನೆ ನಿರ್ಮಾಣಕ್ಕೆ ಸರ್ಕಾರದಿಂದ ಆರ್ಥಿಕ ನೆರವು ಸಿಗುತ್ತದೆ ಎಂಬುದೇ ಗೊತ್ತಿರುವುದಿಲ್ಲ. ರೇಷನ್ ಕಾರ್ಡ್ದಾರರು ಮನೆಗೆ ಅರ್ಜಿ ಸಲ್ಲಿಸಿ ಹಣದ ಸಹಾಯ ಪಡೆದು ತಮ್ಮ ಸ್ವಂತ ಮನೆ ಕಟ್ಟಿಕೊಳ್ಳಬಹುದು. ಪ್ರಧಾನ ಮಂತ್ರಿ ಅವಾಜ್ ಯೋಜನೆ (ರಾಜ್ಯ ಸರ್ಕಾರದಲ್ಲೂ ಈ ಯೋಜನೆ ಇದೆ) ಬಳಕೆ ಆಗುತ್ತದೆ. ಜೊತೆಗೆ ಕಾರ್ಡ್ ಇದ್ದರೆ ಮನೆ ಸಾಲದ ಮೇಲಿನ ಸಬ್ಸಿಡಿ ಸಹ ಸಿಗುತ್ತದೆ.
ಮಹಿಳೆಯರಿಗೆ ಹೊಲಿಗೆ ಯಂತ್ರ : ಮಹಿಳೆಯರು ಸ್ವಾವಲಂಬಿ ಆಗಲು ರಾಜ್ಯ ಸರ್ಕಾರ ನೀಡುತ್ತಿರುವ ಮತ್ತೊಂದು ಯೋಜನೆ ಎಂದರೆ ಅದು ಉಚಿತ ಹೊಲಿಗೆ ಯಂತ್ರ ವಿತರಣೆ. ಪಡಿತರ ಚೀಟಿ ಹೊಂದಿರುವ ಮಹಿಳೆಯರು ಹೊಲಿಗೆ ಯಂತ್ರವನ್ನು ಉಚಿತವಾಗಿ ಪಡೆದು ಸ್ವಂತ ಉದ್ಯೋಗ ಪ್ರಾರಂಭಿಸಬಹುದು. ಮಹಿಳೆಯರ ಸ್ವಾವಲಂಬಿ ಬದುಕಿಗೆ ಈ ಯೋಜನೆ ಪ್ರಮುಖವಾಗಿದೆ.
ದೇಶ
ದೆಹಲಿ ತಲುಪಿದ DCM ಡಿಕೆ.ಶಿವಕುಮಾರ್: ಹೈಕಮಾಂಡ್ ಭೇಟಿ, ಊಹಾಪೋಹ ಶುರು..!

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಕಾಂಗ್ರೆಸ್ ವರಿಷ್ಠರನ್ನು ಭೇಟಿ ಮಾಡುವ ಸಾಧ್ಯತೆಯಿದ್ದು, ಭಾನುವಾರ ಸಂಜೆಯೇ ದೆಹಲಿ ತಲುಪಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ರಾಜಕೀಯ ವಲಯದಲ್ಲಿ ಊಹಾಪೋಹಗಳು ಶುರುವಾಗಿವೆ.
ಡಿಕೆ.ಶಿವಕುಮಾರ್ ಅವರ ದೆಹಲಿ ಭೇಟಿ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಕೂಡ ಜೂ.13ರಂದು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲಿದ್ದಾರೆಂದು ತಿಳಿದುಬಂದಿದೆ.
ರಾಜ್ಯದ ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ಇಬ್ಬರೂ ನಾಯಕರ ವರಿಷ್ಠರ ಭೇಟಿ ಮಾಡುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ.
ಇಂದು ಬೆಳಗ್ಗೆ 11ಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳೊದಿಗೆ ದೆಹಲಿ ಮಹಾನಗರ ಪಾಲಿಕೆ ಅಧಿಕಾರಿಗಳ ಜತೆ ಆಡಳಿತ ಹಾಗೂ ಘನ ತ್ಯಾಜ್ಯ ನಿರ್ವಹಣೆ ಕುರಿತು ಡಿ.ಕೆ.ಶಿವಕುಮಾರ್ ಸಭೆ ನಡೆಸಲಿದ್ದಾರೆ.ಬಳಿಕ ಜಲಶಕ್ತಿ ಸಚಿವರು, ಇಂಧನ ಸಚಿವರನ್ನು ಭೇಟಿ ಮಾಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಇದರ ನಡುವೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಸೇರಿ ಇತ್ತೀಚಿನ ರಾಜ್ಯದ ಬೆಳವಣಿಗೆಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ.
ಇದರ ಬೆನ್ನಲ್ಲೇ ಜೂ.12ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಜೂ.13 ರಂದು ಹಣಕಾಸು ಆಯೋಗದ ಸಭೆಯಲ್ಲಿ ಭಾಗವಹಿಸಲಿದ್ದು, ಬಳಿಕ ಎಐಸಿಸಿ ವರಿಷ್ಠರನ್ನು ಭೇಟಿ ಮಾಡಲಿದ್ದಾರೆ. ಈ ವೇಳೆ ರಾಜ್ಯದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಚರ್ಚಿಸ ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ನಡುವೆ ದೆಹಲಿ ಭೇಟಿ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ.ಶಿವಕುಮಾರ್ ಅವರು, ದೆಹಲಿ ಭೇಟಿ ಸಂಪೂರ್ಣವಾಗಿ ತಾಂತ್ರಿಕವಾಗಿದೆ ಎಂದು ಹೇಳಿದರು.
ಹೈದರಾಬಾದ್, ಚೆನ್ನೈ ಮತ್ತು ಈಗ ದೆಹಲಿಯಲ್ಲಿ ಈಗಾಗಲೇ ಜಾರಿಯಲ್ಲಿರುವ ಘನತ್ಯಾಜ್ಯ ನಿರ್ವಹಣಾ ತಂತ್ರಜ್ಞಾನಗಳನ್ನು ಪರಿಶೀಲಿಸಲು ನಿರ್ಧರಿಸಿದ್ದೆ. ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ಬಳಸಲಾಗುತ್ತಿರುವ ತಂತ್ರಜ್ಞಾನವನ್ನು ವೀಕ್ಷಿಸಲು ನಾನು ಹಾಗೂ ಬೆಂಗಳೂರು ಪಾಲಿಕೆಯಿಂದ ಸುಮಾರು 15 ಸದಸ್ಯರ ತಂಡ ದೆಹಲಿಗೆ ಆಗಮಿಸಿದ್ದೇವೆ. ಇಲ್ಲಿ ನಗರದ ಹೊರಭಾಗದಲ್ಲಿ ವಾಸನೆ ರಹಿತವಾಗಿ ತ್ಯಾಜ್ಯ ವಿಲೇವಾರಿ ಕೇಂದ್ರ ಮಾಡಿದ್ದಾರೆ ಎಂದು ಕೇಳಿದ್ದೇನೆ.
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಂಬಂಧ ಟೆಂಡರ್ ಕರೆಯಲಾಗಿದ್ದು, ಕಸದಿಂದ ಇಂಧನ, ಅನಿಲ ಉತ್ಪಾದನೆ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ಈಗಾಗಲೇ ಹೈದರಾಬಾದ್ ಹಾಗೂ ಚೆನ್ನೈಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದ್ದೇನೆ. ದೆಹಲಿಯಲ್ಲಿನ ತಂತ್ರಜ್ಞಾನ ಅಳವಡಿಕೆ ಬಗ್ಗೆ ನಮಗೆ ಪ್ರಸ್ತಾವನೆ ಬಂದಿದ್ದು, ಹೀಗಾಗಿ ಅದನ್ನು ವೀಕ್ಷಣೆ ಮಾಡುತ್ತೇವೆ. ದೆಹಲಿಯಲ್ಲಿ ನಗರ ಯೋಜನಾ ಪ್ರಾಧಿಕಾರದಲ್ಲಿ ರಸ್ತೆ ವಿಚಾರವಾಗಿ ಪ್ರತ್ಯೇಕ ನೀತಿ ಹೊಂದಿದ್ದು, ಇದನ್ನು ಪರಿಶೀಲನೆ ಮಾಡಲಾಗುವುದು ಎಂದು ತಿಳಿಸಿದರು.
ಹೈಕಮಾಂಡ್ ನಾಯಕರ ಭೇಟಿ ಸಧ್ಯಕ್ಕೆ ಇಲ್ಲ. ಸಮಯ ಸಿಕ್ಕರೆ ಭೇಟಿ ಮಾಡುತ್ತೇನೆ. ಜೂನ್.10 ರಂದು ಎತ್ತಿನಹೊಳೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ಕರೆದಿದ್ದಾರೆ. ಹೀಗಾಗಿ ನಾಳೆ ಸಂಜೆ ಬೆಂಗಳೂರಿಗೆ ವಾಪಸ್ಸಾಗುತ್ತೇವೆ ಎಂದರು
-
ಬಿಬಿಎಂಪಿ4 weeks ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು1 year ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು7 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ