Connect with us

ದೇಶ

ನಾಳೆ ದೇಶದಲ್ಲಿ ಯುದ್ಧದ ಡ್ರಿಲ್‌! – ಮಾಕ್‌ ಡ್ರಿಲ್‌ ಹೇಗಿರಲಿದೆ?

ನವದೆಹಲಿ: ಬರೋಬ್ಬರಿ 54 ವರ್ಷದ ಬಳಿಕ ಭಾರತದಲ್ಲಿ ಮಾಕ್‌ ಡ್ರಿಲ್‌ ನಡೆಯಲಿದೆ. ಪಹಲ್ಗಾಮ್‌ ಪ್ರತೀಕಾರಕ್ಕೆ (Pahalgam Terror Attack) ಭಾರತ (India) ಸನ್ನದ್ಧವಾಗುತ್ತಿದ್ದಂತೆ ದೇಶದ 244 ಸಿವಿಲ್‌ ಡಿಫೆನ್ಸ್‌ ಜಿಲ್ಲೆಗಳಲ್ಲಿ (Civil Defence District) ನಾಳೆ ನಾಗರಿಕರ ರಕ್ಷಣೆ ಸಂಬಂಧ ಭದ್ರತಾ ತಾಲೀಮು ನಡೆಸುವಂತೆ ಕೇಂದ್ರ ಗೃಹ ಸಚಿವಾಲಯ ರಾಜ್ಯಗಳಿಗೆ ಸೂಚನೆ ಕೊಟ್ಟಿದೆ.

ಯುದ್ಧದ (War) ದಾಳಿ ಸಂದರ್ಭದಲ್ಲಿ ಜನರು ತಮ್ಮನ್ನು ತಾವು ಹೇಗೆ ರಕ್ಷಿಸಿಕೊಳ್ಳಬೇಕು ಎನ್ನುವುದರ ಬಗ್ಗೆ ಅಣಕು ತಾಲೀಮಿಗೆ ಸೂಚಿಸಲಾಗಿದೆ. ವಿದ್ಯಾರ್ಥಿಗಳು, ನಾಗರಿಕರ ರಕ್ಷಣೆಗಾಗಿ ಪ್ರಾತ್ಯಕ್ಷಿಕೆ ಕೊಡುವಂತೆ ಸಿವಿಲ್ ಡಿಫೆನ್ಸ್‌ಗಳಿಗೆ ಸೂಚನೆ ನೀಡಲಾಗಿದೆ.

ಸಾಧಾರಣವಾಗಿ ಒಂದು ದೇಶ ಯುದ್ಧಕ್ಕೆ ಸಿದ್ಧಗೊಳ್ಳುತ್ತಿದ್ದಾಗ ಮಾಕ್‌ ಡ್ರಿಲ್‌ ಮಾಡಲು ಕರೆ ನೀಡುತ್ತದೆ. 1971ರಲ್ಲಿ ಭಾರತ-ಪಾಕ್ ಯುದ್ಧ ನಡೆಯುವ ಮೊದಲು ರಕ್ಷಣಾ ಮಾಕ್ ಡ್ರಿಲ್ ನಡೆದಿತ್ತು. ಕಳೆದ ಭಾನುವಾರ ಪಂಜಾಬ್‌ನ ಫಿರೋಜ್‌ಪುರ್ ಕಂಟೋನ್ಮೆಂಟ್‌ನಲ್ಲಿ ರಾತ್ರಿ 9 ರಿಂದ 9:30ರವರೆಗೆ ವಿದ್ಯುತ್‌ ದೀಪ ಆರಿಸಿ ಮಾಕ್ ಡ್ರಿಲ್ ನಡೆದಿತ್ತು. ಇದರ ಬೆನ್ನಲ್ಲೇ ಎಲ್ಲ ರಾಜ್ಯಗಳಿಗೆ ಮಾಕ್ ಡ್ರಿಲ್‌ಗೆ ಕೇಂದ್ರ ಗೃಹ ಸಚಿವಾಲಯ ಸೂಚನೆ ನೀಡಿದೆ.

1971ರ ಸಂದರ್ಭದಲ್ಲೂ ಮೊದಲಿಗೆ ಪಂಜಾಬ್‌ನಲ್ಲೇ ಮೊದಲ ಬಾರಿ ಮಾಕ್ ಡ್ರಿಲ್ ಮಾಡಲಾಗಿತ್ತು. ಈ ಬಾರಿಯೂ ಮೊದಲು ಪಂಜಾಬ್ ನಲ್ಲಿ ನಡೆಸಿ ಬಳಿಕ ಎಲ್ಲ ರಾಜ್ಯಗಳಿಗೆ ಸೂಚನೆ ನೀಡಿರುವುದು ವಿಶೇಷ. ಹೀಗಾಗಿ 1971 ರೀತಿ ಮತ್ತೊಮ್ಮೆ ಭಾರತ ಪಾಕ್‌ ಮಧ್ಯೆ ಯುದ್ಧ ನಡೆಯುತ್ತಾ ಎಂಬ ಪ್ರಶ್ನೆ ಎದ್ದಿದೆ.

ಮಾಕ್ ಡ್ರಿಲ್ ಎಂದರೇನು?
ಒಂದು ಕಾಲ್ಪನಿಕ ತುರ್ತು ಪರಿಸ್ಥಿತಿಯ ಸೃಷ್ಟಿ ಮಾಡಲಾಗುತ್ತದೆ. ಸರ್ಕಾರ, ಭದ್ರತಾ ಸಿಬ್ಬಂದಿ, ಸಾರ್ವಜನಿಕರ ಸಿದ್ಧತೆ ಪರೀಕ್ಷಿಸುವ ಅಭ್ಯಾಸ ಇದಾಗಿದ್ದು ನೈಜ ಘಟನೆಯಂತೆಯೇ ನಡೆಯುತ್ತದೆ. ಯಾವುದೇ ಹಾನಿಯಾಗದಂತೆ ಎಚ್ಚರಿಕೆ ವಹಿಸಲಾಗುತ್ತದೆ.

ಸಂಕಷ್ಟದ ಸನ್ನಿವೇಶಗಳನ್ನು ಅಣಕುಪ್ರದರ್ಶನ ಮಾಡಿ ಅಭ್ಯಾಸ ಮಾಡಲಾಗುತ್ತದೆ. ಸಾರ್ವಜನಿಕ ಸ್ಥಳಗಳಲ್ಲಿ ಭದ್ರತೆ, ಜನರ ರಕ್ಷಣೆಯ ಸಾಮರ್ಥ್ಯ ಬಲಪಡಿಸುವ ಉದ್ದೇಶದ ಜೊತೆಗೆ ಶತ್ರು ದಾಳಿ ವೇಳೆ ಸಾರ್ವಜನಿಕ ಸುರಕ್ಷತೆಯನ್ನು ಖಾತ್ರಿ ಪಡಿಸಲು ಅಗತ್ಯ ಸಿದ್ಧತೆ ಮಾಡಲು ಈ ಅಭ್ಯಾಸ ಮಾಡಲಾಗುತ್ತದೆ.

ಯಾವುದೇ ತುರ್ತು ಸಂದರ್ಭದಲ್ಲಿ ರಾಜ್ಯ ಸರ್ಕಾರಗಳು, ಪೊಲೀಸ್, ಆರೋಗ್ಯ ಇಲಾಖೆ ಮತ್ತು ಇತರ ಸಂಸ್ಥೆಗಳ ಸಮನ್ವಯ ಬೇಕಾಗುತ್ತದೆ. ಜನರಲ್ಲಿ ತುರ್ತು ಸನ್ನಿವೇಶದ ಬಗ್ಗೆ ಜಾಗೃತಿ ಮೂಡಿಸಿ ಸುರಕ್ಷಿತವಾಗಿರಲು ತರಬೇತಿ ನೀಡಲಾಗುತ್ತದೆ.

ವಾಯುದಾಳಿಯ ಸಂದರ್ಭದಲ್ಲಿ ನಗರಗಳು ಮತ್ತು ಹಳ್ಳಿಗಳಲ್ಲಿ ಸಂಪೂರ್ಣ ವಿದ್ಯುತ್‌ ಕಡಿತ ಮಾಡಲಾಗುತ್ತದೆ. ರಾತ್ರಿ ವಾಹನಗಳ ಸಂಚಾರವನ್ನೂ ಸ್ಥಗಿತಗೊಳಿಸಲಾಗುತ್ತದೆ. ವೈರಿ ದೇಶಗಳಿಗೆ ಊರುಗಳ ಗುರುತು ಪತ್ತೆ ತಡೆಯಲು ಈ ಕ್ರಮ ಕೈಗೊಳ್ಳಲಾಗುತ್ತದೆ.

1999 ರಲ್ಲಿ ನಡೆದ ಕಾರ್ಗಿಲ್‌ ಯುದ್ಧದ ವೇಳೆ ಈ ರೀತಿಯ ಮಾಕ್‌ ಡ್ರಿಲ್‌ ನಡೆದಿರಲಿಲ್ಲ. ಈ ಸಂದರ್ಭದಲ್ಲಿ ಪಾಕಿಸ್ತಾನವೇ ನೇರವಾಗಿ ಯುದ್ಧಕ್ಕೆ ಧುಮುಕಿದ್ದರಿಂದ ಮಾಕ್‌ ಡ್ರಿಲ್‌ ಮಾಡಲು ಸಮಯ ಸಿಕ್ಕಿರಲಿಲ್ಲ.

ದೇಶ

ದೆಹಲಿ ತಲುಪಿದ DCM ಡಿಕೆ.ಶಿವಕುಮಾರ್: ಹೈಕಮಾಂಡ್ ಭೇಟಿ, ಊಹಾಪೋಹ ಶುರು..!

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಕಾಂಗ್ರೆಸ್‌ ವರಿಷ್ಠರನ್ನು ಭೇಟಿ ಮಾಡುವ ಸಾಧ್ಯತೆಯಿದ್ದು, ಭಾನುವಾರ ಸಂಜೆಯೇ ದೆಹಲಿ ತಲುಪಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ರಾಜಕೀಯ ವಲಯದಲ್ಲಿ ಊಹಾಪೋಹಗಳು ಶುರುವಾಗಿವೆ.

ಡಿಕೆ.ಶಿವಕುಮಾರ್ ಅವರ ದೆಹಲಿ ಭೇಟಿ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಕೂಡ ಜೂ.13ರಂದು ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಲಿದ್ದಾರೆಂದು ತಿಳಿದುಬಂದಿದೆ.

ರಾಜ್ಯದ ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ಇಬ್ಬರೂ ನಾಯಕರ ವರಿಷ್ಠರ ಭೇಟಿ ಮಾಡುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ.

ಇಂದು ಬೆಳಗ್ಗೆ 11ಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳೊದಿಗೆ ದೆಹಲಿ ಮಹಾನಗರ ಪಾಲಿಕೆ ಅಧಿಕಾರಿಗಳ ಜತೆ ಆಡಳಿತ ಹಾಗೂ ಘನ ತ್ಯಾಜ್ಯ ನಿರ್ವಹಣೆ ಕುರಿತು ಡಿ.ಕೆ.ಶಿವಕುಮಾರ್‌ ಸಭೆ ನಡೆಸಲಿದ್ದಾರೆ.ಬಳಿಕ ಜಲಶಕ್ತಿ ಸಚಿವರು, ಇಂಧನ ಸಚಿವರನ್ನು ಭೇಟಿ ಮಾಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಇದರ ನಡುವೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಸೇರಿ ಇತ್ತೀಚಿನ ರಾಜ್ಯದ ಬೆಳವಣಿಗೆಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ.

ಇದರ ಬೆನ್ನಲ್ಲೇ ಜೂ.12ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಜೂ.13 ರಂದು ಹಣಕಾಸು ಆಯೋಗದ ಸಭೆಯಲ್ಲಿ ಭಾಗವಹಿಸಲಿದ್ದು, ಬಳಿಕ ಎಐಸಿಸಿ ವರಿಷ್ಠರನ್ನು ಭೇಟಿ ಮಾಡಲಿದ್ದಾರೆ. ಈ ವೇಳೆ ರಾಜ್ಯದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಚರ್ಚಿಸ ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ನಡುವೆ ದೆಹಲಿ ಭೇಟಿ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ.ಶಿವಕುಮಾರ್ ಅವರು, ದೆಹಲಿ ಭೇಟಿ ಸಂಪೂರ್ಣವಾಗಿ ತಾಂತ್ರಿಕವಾಗಿದೆ ಎಂದು ಹೇಳಿದರು.

ಹೈದರಾಬಾದ್, ಚೆನ್ನೈ ಮತ್ತು ಈಗ ದೆಹಲಿಯಲ್ಲಿ ಈಗಾಗಲೇ ಜಾರಿಯಲ್ಲಿರುವ ಘನತ್ಯಾಜ್ಯ ನಿರ್ವಹಣಾ ತಂತ್ರಜ್ಞಾನಗಳನ್ನು ಪರಿಶೀಲಿಸಲು ನಿರ್ಧರಿಸಿದ್ದೆ. ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ಬಳಸಲಾಗುತ್ತಿರುವ ತಂತ್ರಜ್ಞಾನವನ್ನು ವೀಕ್ಷಿಸಲು ನಾನು ಹಾಗೂ ಬೆಂಗಳೂರು ಪಾಲಿಕೆಯಿಂದ ಸುಮಾರು 15 ಸದಸ್ಯರ ತಂಡ ದೆಹಲಿಗೆ ಆಗಮಿಸಿದ್ದೇವೆ. ಇಲ್ಲಿ ನಗರದ ಹೊರಭಾಗದಲ್ಲಿ ವಾಸನೆ ರಹಿತವಾಗಿ ತ್ಯಾಜ್ಯ ವಿಲೇವಾರಿ ಕೇಂದ್ರ ಮಾಡಿದ್ದಾರೆ ಎಂದು ಕೇಳಿದ್ದೇನೆ.

ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಂಬಂಧ ಟೆಂಡರ್ ಕರೆಯಲಾಗಿದ್ದು, ಕಸದಿಂದ ಇಂಧನ, ಅನಿಲ ಉತ್ಪಾದನೆ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ಈಗಾಗಲೇ ಹೈದರಾಬಾದ್ ಹಾಗೂ ಚೆನ್ನೈಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದ್ದೇನೆ. ದೆಹಲಿಯಲ್ಲಿನ ತಂತ್ರಜ್ಞಾನ ಅಳವಡಿಕೆ ಬಗ್ಗೆ ನಮಗೆ ಪ್ರಸ್ತಾವನೆ ಬಂದಿದ್ದು, ಹೀಗಾಗಿ ಅದನ್ನು ವೀಕ್ಷಣೆ ಮಾಡುತ್ತೇವೆ. ದೆಹಲಿಯಲ್ಲಿ ನಗರ ಯೋಜನಾ ಪ್ರಾಧಿಕಾರದಲ್ಲಿ ರಸ್ತೆ ವಿಚಾರವಾಗಿ ಪ್ರತ್ಯೇಕ ನೀತಿ ಹೊಂದಿದ್ದು, ಇದನ್ನು ಪರಿಶೀಲನೆ ಮಾಡಲಾಗುವುದು ಎಂದು ತಿಳಿಸಿದರು.

ಹೈಕಮಾಂಡ್ ನಾಯಕರ ಭೇಟಿ ಸಧ್ಯಕ್ಕೆ ಇಲ್ಲ. ಸಮಯ ಸಿಕ್ಕರೆ ಭೇಟಿ ಮಾಡುತ್ತೇನೆ. ಜೂನ್.10 ರಂದು ಎತ್ತಿನಹೊಳೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ಕರೆದಿದ್ದಾರೆ. ಹೀಗಾಗಿ ನಾಳೆ ಸಂಜೆ ಬೆಂಗಳೂರಿಗೆ ವಾಪಸ್ಸಾಗುತ್ತೇವೆ ಎಂದರು

Continue Reading

ದೇಶ

ಆಪರೇಷನ್​ ಸಿಂಧೂರ್​​ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಪ್ರಧಾನಿ ಮೋದಿ!

ಪಹಲ್ಗಾಮ್ ದಾಳಿಗೆ (Pahalgam Attack) ಭಾರತ ಆಪರೇಷನ್ ಸಿಂಧೂರ್ (Operation Sindoor) ಮೂಲಕ ಪ್ರತೀಕಾರ (Revenge) ತೀರಿಸಿಕೊಂಡಿತು. ಆಪರೇಷನ್ ಸಿಂಧೂರ್ ಸಮಯದಲ್ಲಿ, ಭಾರತ ಕನಿಷ್ಠ ಆರು ಪಾಕಿಸ್ತಾನಿ ಜೆಟ್‌ಗಳು (Pakistan Jet Destroy) ಮತ್ತು ಒಂದು ಮಿಲಿಟರಿ ವಿಮಾನವನ್ನು ಹೊಡೆದುರುಳಿಸಿದೆ ಎಂದು ಉನ್ನತ ರಕ್ಷಣಾ ಮೂಲಗಳು ಮಾಹಿತಿ ನೀಡಿವೆ. ಏಪ್ರಿಲ್ 23 ರಂದು, ಅಂದರೆ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಒಂದು ದಿನದ ನಂತರ, ನರೇಂದ್ರ ಮೋದಿ ಸರ್ಕಾರ ಪಾಕಿಸ್ತಾನದ ಬಹಾವಲ್ಪುರ್ ಮತ್ತು ಮುರಿಡ್ಕೆಯಲ್ಲಿರುವ ಭಯೋತ್ಪಾದಕ ಪ್ರಧಾನ ಕಚೇರಿಗಳನ್ನು ಪ್ರಮುಖ ಗುರಿಗಳಾಗಿ ಆಯ್ಕೆ ಮಾಡಿಕೊಂಡಿತ್ತು ಎಂದು ಹೇಳಲಾಗಿದೆ.

ಇನ್ನೂ ಮೇ.10 ರಂದು ಪಾಕಿಸ್ತಾನದೊಂದಿಗೆ ಕದನ ವಿರಾಮಕ್ಕೆ ಭಾರತ ಅಮೆರಿಕ ಅಥವಾ ಡೊನಾಲ್ಡ್ ಟ್ರಂಪ್‌ನಿಂದ ಒತ್ತಡಕ್ಕೆ ಒಳಗಾಗಿತ್ತು ಎಂಬುದು ಸುಳ್ಳು ಎಂದು ಉನ್ನತ ರಕ್ಷಣಾ ಮೂಲಗಳು ತಿಳಿಸಿವೆ. “ಟ್ರಂಪ್ ಮತ್ತು ಪ್ರಧಾನಿ ಮೋದಿ ಎಂದಿಗೂ ಮಾತನಾಡಲಿಲ್ಲ ಎಂಬುದೇ ಸತ್ಯ. ಜೆಡಿ ವ್ಯಾನ್ಸ್ ಕರೆ ಮಾಡಿ ಮಾತನಾಡಿದಾಗಲೂ ಪ್ರಧಾನಿ ತುಂಬಾ ದೃಢವಾಗಿದ್ದರು ಎನ್ನಲಾಗಿದೆ.

ಆಪರೇಷನ್​ ಸಿಂಧೂರ್​​ ವಿಚಾರವಾಗಿ ಕಾಂಗ್ರೆಸ್ ಮತ್ತು ನಾಯಕ ರಾಹುಲ್ ಗಾಂಧಿ ಪ್ರಧಾನಿ ಮೋದಿಯವರನ್ನು ಗುರಿಯಾಗಿಸಿಕೊಂಡಿದ್ದಾರೆ. ಮೋದಿಯವರು ‘ಅಮೆರಿಕದ ಒತ್ತಡಕ್ಕೆ ಮಣಿದರು’ ಎಂದು ಕಾಂಗ್ರೆಸ್​​ ನಾಯಕರು ಲೇವಡಿ ಮಾಡಿದರು. ಇದೀಗ ಇದಕ್ಕೆ ಉತ್ತರ ಕೊಟ್ಟಿದ್ದು, ಯಾವುದೇ ಕಾರಣಕ್ಕೂ ನಾವು ಟ್ರಂಪ್​ ಒತ್ತಡಕ್ಕೆ ಮಣಿದಿಲ್ಲ ಎಂದು ಬಿಜೆಪಿ ಕೇಂದ್ರ ಸರ್ಕಾರ ಹೇಳಿದೆ.

ಆಪರೇಷನ್​ ಸಿಂಧೂರ್​​ ಯೋಜನೆ ಹೇಗೆ ಮಾಡಲಾಯಿತು?

ಪಹಲ್ಗಾಮ್​ನಲ್ಲಿ ಭಯೋತ್ಪಾದಕ ದಾಳಿ ನಂತರ ಮುರಿಡ್ಕೆ ಮತ್ತು ಬಹವಾಲ್ಪುರ ಭಾರತದ ಪ್ರಮುಖ ಗುರಿಗಳಾಗಿದ್ವು ಎಂದು ಮೂಲಗಳು ತಿಳಿಸಿವೆ. ಏಪ್ರಿಲ್ 23 ರ ಸಭೆಯಲ್ಲಿಯೇ ಇದನ್ನು ನಿರ್ಧರಿಸಲಾಯಿತು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಏಪ್ರಿಲ್ 23 ರ ಬೆಳಿಗ್ಗೆ ಮೂರು ಸೇನಾ ಮುಖ್ಯಸ್ಥರು, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್) ಜನರಲ್ ಅನಿಲ್ ಚೌಹಾಣ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಅವರೊಂದಿಗೆ ದೀರ್ಘ ಸಭೆ ನಡೆಸಿದರು.

ಮುರಿಡ್ಕೆ ಮತ್ತು ಬಹವಾಲ್ಪುರದ ನಾಶದ ಯೋಜನೆಯಲ್ಲಿ ಈ ಸಭೆಯಲ್ಲಿಯೇ ನಿರ್ಧರಿಸಲಾಯ್ತು. ಇದು ಪಹಲ್ಗಾಮ್ ದಾಳಿಯ ಒಂದು ದಿನದ ನಂತರವೇ ಪ್ಲಾನ್​ ಮಾಡಲಾಗಿತ್ತು. ಪಹಲ್ಗಾಮ್ ದಾಳಿಗೆ ಪ್ರತಿಕ್ರಿಯಿಸಲು ನಾವು ಸಂಪೂರ್ಣವಾಗಿ ಸಿದ್ಧರಿದ್ದೇವೆ ಎಂದು ಸೇನಾ ಮುಖ್ಯಸ್ಥರು ಈ ಸಭೆಯಲ್ಲಿ ಹೇಳಿದ್ದರು. ಏಪ್ರಿಲ್ 23ರ ಸಂಜೆ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಸಭೆಯಲ್ಲಿ ಈ ಆಯ್ಕೆಗಳನ್ನು ಮುಂದಿಡಲಾಯಿತು ಎಂದು ಹೇಳಲಾಗಿದೆ.

ದಾಳಿ ರಾತ್ರಿ ವೇಳೆಯೇ ಏಕೆ ನಿರ್ಧರಿಸಲಾಯಿತು?

ರಕ್ಷಣಾ ಮೂಲಗಳ ಪ್ರಕಾರ, ಆಪರೇಷನ್ ಸಿಂಧೂರ್ ಅಡಿಯಲ್ಲಿ ದಾಳಿಗೆ ಹಲವಾರು ದಿನಾಂಕಗಳನ್ನು ಪರಿಗಣಿಸಲಾಗಿತ್ತು. ಮತ್ತು ಸಮಯವನ್ನು 12.30 ರಿಂದ 2 ರ ನಡುವೆ ನಿಗದಿಪಡಿಸಲಾಯಿತು. ರಾತ್ರಿಯ ಕತ್ತಲೆಯಲ್ಲಿಯೂ ಸಹ ಗುರಿಗಳ ಮೇಲೆ ಉಂಟಾದ ವಿನಾಶವನ್ನು ಕ್ಯಾಮೆರಾಗಳು ಸೆರೆಹಿಡಿಯಬಹುದೆಂದು ಖಚಿತಪಡಿಸಿಕೊಳ್ಳಲಾಯಿತು. ಅದಾಗ್ಯೂ, ಅಂತರರಾಷ್ಟ್ರೀಯ ಗಡಿ ಅಥವಾ ನಿಯಂತ್ರಣ ರೇಖೆಯನ್ನು (LoC) ದಾಟಬಾರದು ಎಂಬುದು ಸಭೆಯಲ್ಲಿ ನಿರ್ಧಾರವಾಗಿತ್ತು.

ಅಂತಿಮವಾಗಿ, ಭಾರತವು ಮೇ 7 ರಂದು ಬೆಳಗಿನ ಜಾವ 1.05 ರಿಂದ 1.30 ರ ನಡುವಿನ 22 ನಿಮಿಷಗಳ ಒಳಗೆ ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ ಹಲವಾರು ಭಯೋತ್ಪಾದಕ ಕೇಂದ್ರಗಳ ಮೇಲೆ ದಾಳಿ ಮಾಡಿತು. ಈ ಕಾರ್ಯಾಚರಣೆಯ ಆರಂಭಿಕ ಹಂತದಲ್ಲಿ ‘ಕಾರ್ಯತಂತ್ರದ ತಪ್ಪು’ಗಳಿಂದಾಗಿ ಭಾರತ ಕೆಲವು ಜೆಟ್‌ಗಳನ್ನು ಕಳೆದುಕೊಂಡಿದೆ ಎಂದು ಸಿಡಿಎಸ್ ಇತ್ತೀಚೆಗೆ ಒಪ್ಪಿಕೊಂಡಿತು, ಆದರೆ ಎಲ್ಲಾ ಭಾರತೀಯ ಪೈಲಟ್‌ಗಳು ಸುರಕ್ಷಿತವಾಗಿ ಮರಳಿದರು.

ಪಾಕಿಸ್ತಾನಕ್ಕೆ ಎಷ್ಟು ನಷ್ಟ?

ಅದಾಗ್ಯೂ, ಮೇ 7 ಮತ್ತು ಮೇ 10 ರ ಬೆಳಿಗ್ಗೆ ಭಾರತೀಯ ದಾಳಿಯಲ್ಲಿ ಆರಕ್ಕೂ ಹೆಚ್ಚು ಪಾಕಿಸ್ತಾನಿ ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆ ಎಂದು ಭಾರತ ದೃಢಪಡಿಸಿದೆ. ಪಾಕಿಸ್ತಾನಿ ಸೇನೆಯ C-130J ಮಿಲಿಟರಿ ಸಾರಿಗೆ ವಿಮಾನವನ್ನು ಸಹ ಹೊಡೆದುರುಳಿಸಲಾಗಿದೆ. ಇವುಗಳಲ್ಲಿ ಪಾಕಿಸ್ತಾನ ವಾಯುಪಡೆಯ F-16 ಮತ್ತು JF-17 ಫೈಟರ್ ಜೆಟ್‌ಗಳು ಮತ್ತು ಪಾಕಿಸ್ತಾನಿ SAAB-2000 AWACS ಸೇರಿವೆ ಎಂದು ಉನ್ನತ ರಕ್ಷಣಾ ಮೂಲಗಳು ತಿಳಿಸಿವೆ. ಭಾರತೀಯ ನೌಕಾಪಡೆಯು ವಾಸ್ತವವಾಗಿ ಯುದ್ಧಕ್ಕೆ ಪ್ರವೇಶಿಸಲಿಲ್ಲ, ಆದರೆ ಅದನ್ನು ಸಿದ್ಧಪಡಿಸಲಾಗಿತ್ತು. ಭಾರತೀಯ ನೌಕಾಪಡೆಯು ಕರಾಚಿ ಬಂದರಿನ ಮೇಲೆ ದಾಳಿ ಮಾಡಬಹುದೆಂದು ಪಾಕಿಸ್ತಾನ ಭಯಪಟ್ಟಿತ್ತು ಎಂದು ಮೂಲಗಳು ತಿಳಿಸಿವೆ.

Continue Reading

ದೇಶ

ನೀರಿಗಾಗಿ ಭಿಕ್ಷೆ ಬೇಡುತ್ತಿರುವ ಪಾಕಿಸ್ತಾನ- ಭಾರತಕ್ಕೆ 4 ಬಾರಿ ಪತ್ರ!

ನವದೆಹಲಿ: ಸಿಂಧೂ ನದಿ ನೀರು ಒಪ್ಪಂದವನ್ನು ಮರು ಸ್ಧಾಪಿಸುವಂತೆ ಬೇಡಿಕೊಂಡು ಇದುವರೆಗೂ ಪಾಕಿಸ್ತಾನ ಭಾರತಕ್ಕೆ ನಾಲ್ಕು ಬಾರಿ ಪತ್ರ ಬರೆದಿದೆ, ಪೂರ್ತಿಯಾಗಿ ನಡು ಬಗ್ಗಿಸಿರುವ ಪಾಕಿಸ್ತಾನ ಈಗ ಸಿಂಧೂ ನದಿಯ ನೀರಿಲ್ಲದೇ ಹೆಣಗಾಡುವ ಪರಿಸ್ಧಿತಿ ಎದುರಿಸುತ್ತಿದೆ,
ನಾಲ್ಕು ಪತ್ರಗಳ ಪೈಕಿ ಮೂರು ಪತ್ರಗಳು ಆಪರೇಷನ್ ಸಿಂಧೂರ್ ಬಳಿಕ ಕಳಿಸಲಾಗಿದೆ ಎಂದು ತಿಳಿದುಬಂದಿದೆ,
1960 ರಲ್ಲಿ ಭಾರತವು ಪಾಕಿಸ್ತಾನದೊಂದಿಗೆ ಸಿಂಧೂ ನದಿ ನೀರು ಹಂಚಿಕೆಯ ಬಗ್ಗೆ ದ್ವಿಪಕ್ಷೀಯ ಸೌಹಾರ್ದ ಒಪ್ಪಂದ ಮಾಡಿಕೊಂಡಿತ್ತು, ಆದರೆ ಪಾಕಿಸ್ತಾನದಲ್ಲಿ ಸೌಹಾರ್ದತೆ ಎಂಬ ಇಲ್ಲದಿದ್ದ ಕಾರಣ ಪಹಲ್ಗಾಮ್ ದಾಳಿಯ ಬಳಿಕ ಈ ಒಪ್ಪಂದವನ್ನು ರದ್ದುಪಡಿಸಲಾಯಿತು,

Continue Reading

Trending