ರಾಜಕೀಯ

ವಿಡಿಯೋ ಮಾಡಿದ ಪೇದೆ ಅಮಾನತು

ಮೈಸೂರು: ಬೆಳಗಾವಿ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಪೊಲೀಸ್ ಎಸ್‍ಪಿ ಗೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ ಕೇಸ್ ಗೆ ಸಂಬಂಧಿಸಿದಂತೆ ಎಲ್ಲೆಡೆ ವ್ಯಾಪಕ ಚರ್ಚೆ ಆಗ್ತಿರೋ ಬೆನ್ನಲ್ಲೇ ಈ ಬಗ್ಗೆ ವಿಡಿಯೋ ಮಾಡಿದ್ದ ಕಾನ್ಸ್ಟೇಬಲ್ ಅಮಾನತಾಗಿದ್ದಾನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹರಿಬಿಟ್ಟ ಮೈಸೂರು ಕೇಂದ್ರ ಕಾರಾಗೃಹ ವೀಕ್ಷಣೆಗಾರ ಎಚ್ ಎನ್ ಮಧು ಕುಮಾರ್ ಎಂಬಾತ ನನ್ನು ಸೇವೆಯಿಂದ ಅಮಾನತುಗೊಳಿಸಿ ಕಾರಾಗೃಹದ ಮುಖ್ಯ ಅಧೀಕ್ಷಕ ಪಿ ಎಸ್ ರಮೇಶ್ ಆದೇಶಿಸಿದ್ದಾರೆ,
ಮಧು ಅವರನ್ನು ಇಲಾಖೆ ವಿಚಾರಣೆಗೆ ಒಳಪಡಿಸಲು ಸಿದ್ಧತೆ ನಡೆಸಲಾಗಿದೆ, ಸದ್ಯ ಅವರಿಗೆ ಅಮಾನತು ಆದೇಶ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ,

Leave a Reply

Your email address will not be published. Required fields are marked *

Trending

Exit mobile version