Connect with us

ದೇಶ

ಪಾಕಿಸ್ತಾನ ಅಣ್ವಸ್ತ್ರ ಗೋದಾಮು ಧ್ವಂಸ Egypt ನಿಂದ Boron ಆಮದು? ಏನಿದು ರಾಸಾಯನಿಕ?

Published

on

ಇಸ್ಲಾಮಾಬಾದ್: ಪಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆದ ಸೇನಾ ಸಂಘರ್ಷದಲ್ಲಿ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿರುವ ಭಾರತ ಪಾಕಿಸ್ತಾನದ ಅಣ್ವಸ್ತ್ರ ಶೇಖರಣಾ ಕೇಂದ್ರಗಳ ಮೇಲೂ ಕ್ಷಿಪಣಿ ಮಾಡಿದ್ದು, ಇದೀಗ ಇದೇ ಪ್ರದೇಶದಲ್ಲಿ ವಿಕಿರಣ ಸೋರಿಕೆಯಾಗುತ್ತಿದೆ ಎಂದು ಹೇಳಲಾಗಿದೆ.

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸರ್ಗೋಧಾದಲ್ಲಿರುವ ವಾಯುನೆಲೆಯ ಮೇಲೆ ಭಾರತ ದಾಳಿ ನಡೆಸಿದ್ದು, ಈ ವಾಯು ನೆಲೆ ಕಿರಾನಾ ಬೆಟ್ಟಗಳೊಂದಿಗೆ ಸಂಪರ್ಕ ಹೊಂದಿದೆ. ಕಿರಾನಾ ಬೆಟ್ಟದಲ್ಲಿ ಪಾಕ್‌ ಅಣ್ವಸ್ತ್ರ ನೆಲೆ ಇದೆ ಎಂಬ ಊಹಾಪೋಹಗಳು ಸಾಮಾಜಿಕ ಜಾಲತಾಣಗಳ ಚರ್ಚೆಯಾಗುತ್ತಿವೆ.

ಈ ಚರ್ಚೆಗಳ ನಡುವೆಯೇ ನಿನ್ನೆ ಸುದ್ದಿಗೋಷ್ಠಿ ನಡೆಸಿದ್ದ ಭಾರತೀಯ ಸೇನಾ ಮುಖ್ಯಸ್ಥರು ಪಾಕಿಸ್ತಾನದ ಕಿರಾನಾ ಬೆಟ್ಟದಲ್ಲಿರುವ ಅಣ್ವಸ್ತ್ರ ನೆಲೆ ಮೇಲೆ ಭಾರತ ದಾಳಿ ಮಾಡಿದೆ ಎಂಬ ವದಂತಿಗಳನ್ನು ತಳ್ಳಿ ಹಾಕಿದ್ದರು.

ಕಿರಾನಾ ಬೆಟ್ಟಗಳಲ್ಲಿ ಪಾಕಿಸ್ತಾನದ ಅಣ್ವಸ್ತ್ರ ನೆಲೆ ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ನಮ್ಮ ಗುರಿ ಉಗ್ರನೆಲೆಗಳು ಮಾತ್ರ ಆಗಿತ್ತು. ಅವುಗಳನ್ನು ಹೊಡೆದುರುಳಿಸಿದ್ದೇವೆ. ಕಿರಾನಾ ಬೆಟ್ಟಗಳಲ್ಲಿ ನಾವು ದಾಳಿ ಮಾಡಿಲ್ಲ ಎಂದು ಸೇನೆ ಮಾಹಿತಿ ನೀಡಿದೆ.

ಏತನ್ಮಧ್ಯೆ ಭಾರತೀಯ ಸೇನೆ ದಾಳಿ ಬಳಿಕ ಪಾಕಿಸ್ತಾನದ ಅಣ್ವಸ್ತ್ರ ಗೋದಾಮು ಇದೆ ಎನ್ನಲಾಗುತ್ತಿರುವ ಇದೇ ಕಿರಾನಾ ಬೆಟ್ಟದಲ್ಲಿ ವಿಕಿರಣ ಸೋರಿಕೆಯಾಗುತ್ತಿದೆ ಎಂಬ ವದಂತಿಗಳು ಬಲವಾಗಿ ಹರಡುತ್ತಿದೆ.

ಇದಕ್ಕೆ ಇಂಬು ನೀಡುವಂತೆ ಅಮೆರಿಕ ಮತ್ತು ಈಜಿಪ್ಟ್ ನಿಂದ 2 ವಿಶೇಷ ವಿಮಾನಗಳು ಪಾಕಿಸ್ತಾನಕ್ಕೆ ಆಗಮಿಸಿದ್ದು, ಈ ವಿಶೇಷ ವಿಮಾನಗಳು ವಿಕಿರಣ ಸೋರಿಕೆ ಮತ್ತೆ ಮಾಡುವ ವಿಮಾನಗಳಾಗಿವೆ ಎಂದು ಹೇಳಲಾಗಿದೆ.

ಅಲ್ಲದೆ ಪಾಕಿಸ್ತಾನಕ್ಕೆ ಈಜಪ್ಟಿನಿಂದ ಅಪಾರ ಪ್ರಮಾಣದ ಬೋರಾನ್ ರಾಸಾಯನಿಕವನ್ನು ಆಮದು ಮಾಡಿಕೊಳ್ಳಲಾಗುತ್ತಿದ್ದು, ವಿಕಿರಣ ಸೋರಿಕೆಯನ್ನು ತಟಸ್ಥಗೊಳಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಲಾಗಿದೆ.

ಇನ್ನು ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮ ಘೋಷಣೆಗೂ ಇದೇ ವಿಕಿರಣ ಸೋರಿಕೆ ಕಾರಣ ಎಂದು ಹೇಳಲಾಗುತ್ತಿದ್ದು ಕದನ ವಿರಾಮ ಘೋಷಣೆ ಬೆನ್ನಲ್ಲೇ ಪಾಕಿಸ್ತಾನ, ಅಮೆರಿಕ ದೇಶಗಳು ಇಲ್ಲಿನ ವಿಕಿರಣ ಸೋರಿಕೆ ತಡೆಗೆ ಹರಸಾಹಸ ಪಡುತ್ತಿವೆ ಎನ್ನಲಾಗಿದೆ.

ಫ್ಲೈಟ್‌ರಾಡಾರ್ 24 ದತ್ತಾಂಶದ ಪ್ರಕಾರ, ಈಜಿಪ್ಟ್ ವಾಯುಪಡೆಯ ಸಾರಿಗೆ ವಿಮಾನ EGY1916, ಮೇ 11 ರಂದು ಮಧ್ಯಾಹ್ನ ಭುರ್ಬನ್ ವಿಮಾನ ನಿಲ್ದಾಣದಿಂದ (BHC) ಹೊರಟು ಇದೀಗ ಪಾಕಿಸ್ತಾನ ತಲುಪಿದೆ.

ಬೋರಾನ್: ಸ್ಪೇಷಿಯಲ್ ಡಿಸ್ಟ್ರಿಬ್ಯೂಷನ್ ಇನ್ ಆನ್ ಏರಿಯಾ ಆಫ್ ನಾರ್ತ್ ನೈಲ್ ಡೆಲ್ಟಾ” ಎಂಬ ಇತ್ತೀಚಿನ ಅಧ್ಯಯನವು ಈ ಪ್ರದೇಶದಲ್ಲಿ ಮೆಟಾಲಾಯ್ಡ್‌ನ ಹೆಚ್ಚಿನ ಸಾಂದ್ರತೆಯನ್ನು ವರದಿ ಮಾಡಿದೆ. ಈಜಿಪ್ಟ್ ವಿಮಾನದ ಪಾಕಿಸ್ತಾನದ ಲ್ಯಾಂಡಿಂಗ್ ಈ ಅಂಶಕ್ಕೆ ಸಂಬಂಧಿಸಿರಬಹುದು ಎಂಬ ಊಹಾಪೋಹ ಹಬ್ಬಿದೆ. ಈ ಬೋರಾನ್ ವಿಕಿರಣವನ್ನು ಹೀರಿಕೊಳ್ಳುವ ಗುಣಲಕ್ಷಣಗಳಿಗಾಗಿ ಪರಮಾಣು ಶಕ್ತಿ ವಲಯ ಸೇರಿದಂತೆ ವ್ಯಾಪಕ ಕೈಗಾರಿಕಾ ಬಳಕೆಯಲ್ಲಿ ಹೆಚ್ಚು ಬಳಕೆ ಮಾಡಲಾಗುತ್ತದೆ.

ಬೋರೇಟ್‌ಗಳು, ವಿಶೇಷವಾಗಿ ಐಸೊಟೋಪ್ ಬೋರಾನ್-10, ಪರಮಾಣು ವಿದ್ಯುತ್ ಸ್ಥಾವರಗಳ ಸುರಕ್ಷಿತ ಕಾರ್ಯಾಚರಣೆಗೆ ಅತ್ಯಗತ್ಯ. ಯುರೇನಿಯಂ ವಿದಳನದಿಂದ ಉಷ್ಣ ನ್ಯೂಟ್ರಾನ್‌ಗಳನ್ನು ಹೀರಿಕೊಳ್ಳುವ ಸಾಮರ್ಥ್ಯದಿಂದಾಗಿ, ಒತ್ತಡಕ್ಕೊಳಗಾದ ಮತ್ತು ಕುದಿಯುವ ನೀರಿನ ರಿಯಾಕ್ಟರ್‌ಗಳನ್ನು ನಿಯಂತ್ರಿಸಲು ಮತ್ತು ಸ್ಥಿರಗೊಳಿಸಲು ಬೋರಾನ್-10 ಅನ್ನು ವ್ಯಾಪಕವಾಗಿ ಬಳಸಲಾಗುತ್ತದೆ.

ಬೋರಾನ್ ಎಂಬುದು ವಿಶೇಷ ರಾಸಾಯನಿಕವಾಗಿದ್ದು, ಈ ಬೋರಾನ್ ಬಿ ಚಿಹ್ನೆ ಮತ್ತು ಪರಮಾಣು ಸಂಖ್ಯೆ 5 ಅನ್ನು ಹೊಂದಿದ್ದು, ಸ್ಫಟಿಕ ರೂಪದಲ್ಲಿ ದೊರೆಯುವ ಇದು ಸುಲಭವಾಗಿ, ಗಾಢವಾದ, ಹೊಳಪಿನ ಲೋಹವಾಗಿದೆ. ಇದರ ಪರಿಣಾಮವಾಗಿ ಬೋರಿಕ್ ಆಮ್ಲ, ಖನಿಜ ಸೋಡಿಯಂ ಬೋರೇಟ್ ಮತ್ತು ಬೋರಾನ್ ಕಾರ್ಬೈಡ್ ಮತ್ತು ಬೋರಾನ್ ನೈಟ್ರೈಡ್‌ನ ಅಲ್ಟ್ರಾ-ಹಾರ್ಡ್ ಸ್ಫಟಿಕಗಳಂತಹ ಅನೇಕ ಸಂಯುಕ್ತಗಳು ಉಂಟಾಗುತ್ತವೆ.

ಸಾಮಾನ್ಯವಾಗಿ ಇದನ್ನು ವಿಕಿರಣ ಸೋರಿಕೆಯಂತಹ ಕ್ಲಿಷ್ಠ ಪರಿಸ್ಥಿತಿಗಳಲ್ಲಿ ತಟಸ್ಛಗೊಳಿಸಲು ಬಳಸಲಾಗುತ್ತದೆ. ಈ ಹಿಂದೆ 1986ರ ಚೆರ್ನೋಬಿಲ್ ದುರಂತದ ಸಮಯದಲ್ಲಿ, ವಿಕಿರಣಶೀಲ ಹೊರಸೂಸುವಿಕೆಯನ್ನು ನಿಗ್ರಹಿಸಲು ಮರಳು, ಬೋರಾನ್ ಮತ್ತು ಸೀಸದ ಮಿಶ್ರಣವನ್ನು ತೆರೆದ ರಿಯಾಕ್ಟರ್ ಮೇಲೆ ಬಿಡಲಾಯಿತು. ಬಳಿಕ ಕ್ರಮೇಣ ಇಲ್ಲಿ ವಿಕಿರಣ ಪ್ರಭಾವ ಕಡಿಮೆಯಾಗಿತ್ತು ಎಂದು ಹೇಳಲಾಗಿದೆ.

ದೇಶ

MYSORE : ಮನೆಮನೆ ಸಮೀಕ್ಷೆ ಫಲ: 147 ಗ್ರಾಮ ಪಂಚಾಯಿತಿಗಳು ಟಿಬಿ ಫ್ರೀ

Published

on

By

ಮೈಸೂರು: Mysuru ಜಿಲ್ಲೆಯನ್ನು ‘ಕ್ಷಯ ರೋಗ ಮುಕ್ತ’ ಪ್ರದೇಶವನ್ನಾಗಿ ರೂಪಿಸುವ ಗುರಿಯೊಂದಿಗೆ ಆರೋಗ್ಯ ಇಲಾಖೆ ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ನಗರ ಪ್ರದೇಶದಲ್ಲಿ ವಾರ್ಡ್‌ವಾರು ಸಮೀಕ್ಷೆ ನಡೆಸಲು ವಿಶೇಷ ಕ್ರಿಯಾಯೋಜನೆ ರೂಪಿಸಲಾಗಿದ್ದು, ಈಗಾಗಲೇ ಜಿಲ್ಲೆಯ 147 ಗ್ರಾಮ ಪಂಚಾಯಿತಿಗಳನ್ನು ಕ್ಷಯ ಮುಕ್ತ ಎಂದು ಘೋಷಿಸಲಾಗಿದೆ.

ಆರೋಗ್ಯ ಇಲಾಖೆಯ ನಿರಂತರ ಜಾಗೃತಿ ಅಭಿಯಾನ, ಉಚಿತ ತಪಾಸಣೆ ಹಾಗೂ ಚಿಕಿತ್ಸಾ ಯೋಜನೆಗಳಿಂದ ವರ್ಷದಿಂದ ವರ್ಷಕ್ಕೆ ಕ್ಷಯ ರೋಗಿಗಳ ಸಂಖ್ಯೆ ಇಳಿಕೆಯಾಗುತ್ತಿದೆ. ‘ನಿಕ್ಷಯ್‌ ಪೋಷಣ್‌’ ಮತ್ತು ‘ನಿಕ್ಷಯ್‌’ ಯೋಜನೆಗಳು ರೋಗ ನಿಯಂತ್ರಣದಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. ವೈದ್ಯರು, ದಾದಿಯರು ಮತ್ತು ಆಶಾ ಕಾರ್ಯಕರ್ತೆಯರು ಮನೆಮನೆಗೆ ತೆರಳಿ ಜನರಲ್ಲಿ ಅರಿವು ಮೂಡಿಸುತ್ತಿದ್ದಾರೆ.

ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ Dr. Mohammed Siraj Ahmed ಮಾಹಿತಿ ನೀಡುವಂತೆ, ಜಿಲ್ಲೆಯ 256 ಗ್ರಾಮ ಪಂಚಾಯಿತಿಗಳಲ್ಲಿ 147 ಅನ್ನು ಈಗಾಗಲೇ ಕ್ಷಯ ಮುಕ್ತವೆಂದು ಘೋಷಿಸಲಾಗಿದೆ. ಉಳಿದ ಪಂಚಾಯಿತಿಗಳನ್ನೂ ಶೀಘ್ರದಲ್ಲೇ ಕ್ಷಯ ಮುಕ್ತಗೊಳಿಸಲು ಯೋಜನೆ ರೂಪಿಸಲಾಗಿದೆ.

ಅಂಕಿಅಂಶಗಳ ಪ್ರಕಾರ, 2021ರಲ್ಲಿ 3597 ಪ್ರಕರಣಗಳಿದ್ದರೆ, 2025ಕ್ಕೆ ಅದು 3386ಕ್ಕೆ ಇಳಿಕೆಯಾಗಿರುವುದು ಗಮನಾರ್ಹ. ಇದು ಆರೋಗ್ಯ ಇಲಾಖೆಯ ಕಾರ್ಯಪಟುತ್ವವನ್ನು ತೋರಿಸುತ್ತದೆ.

ಜನರು ಪ್ರತಿವರ್ಷ ಟಿಬಿ ಪರೀಕ್ಷೆ ಮಾಡಿಸಿಕೊಳ್ಳುವುದು, ಕೆಮ್ಮುವಾಗ ಬಾಯಿ ಮುಚ್ಚಿಕೊಳ್ಳುವುದು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಉಗುಳದೇ ಇರುವುದು ಅಗತ್ಯ. ಎರಡು ವಾರಕ್ಕಿಂತ ಹೆಚ್ಚು ಕಾಲ ಕೆಮ್ಮು, ಜ್ವರ, ತೂಕ ಇಳಿಕೆ ಮುಂತಾದ ಲಕ್ಷಣ ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು.

ಒಟ್ಟಿನಲ್ಲಿ, ಮೈಸೂರು ಜಿಲ್ಲೆಯಲ್ಲಿ ಕ್ಷಯ ರೋಗ ನಿಯಂತ್ರಣದತ್ತ ಮಹತ್ವದ ಹೆಜ್ಜೆಗಳು ಇಡಲಾಗುತ್ತಿದ್ದು, ಸಂಪೂರ್ಣ ‘ಕ್ಷಯ ಮುಕ್ತ ಜಿಲ್ಲೆ’ ಗುರಿ ಸಾಧನೆಗೆ ಆರೋಗ್ಯ ಇಲಾಖೆ ಸಜ್ಜಾಗಿದೆ.

Continue Reading

ದೇಶ

ಮಮತಾ ಬ್ಯಾನರ್ಜಿ ಮತ್ತೆ ಸಿಎಂ ಆಗ್ತಾರಾ? ಸಮೀಕ್ಷೆ ಹೇಳೋದು ಏನು?

Published

on

By

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಕಾವು ದಿನೇ ದಿನೇ ಜೋರಾಗುತ್ತಿದ್ದು, ಪೂರ್ವ ಸಮೀಕ್ಷೆಗಳು ರಾಜಕೀಯ ಹೋರಾಟ ತೀವ್ರವಾಗಿರುವುದನ್ನು ಸೂಚಿಸುತ್ತಿವೆ. ಏಪ್ರಿಲ್ 23 ಮತ್ತು 29 ರಂದು ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಹೊರಬಿದ್ದ ಅಭಿಪ್ರಾಯ ಸಮೀಕ್ಷೆಗಳು ಕುತೂಹಲ ಹೆಚ್ಚಿಸಿವೆ.

ಮ್ಯಾಟ್ರಿಜ್ ಸಮೀಕ್ಷೆಯ ಪ್ರಕಾರ, ಆಡಳಿತಾರೂಢ All India Trinamool Congress (ಟಿಎಂಸಿ) 140 ರಿಂದ 160 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ. ಮತ್ತೊಂದೆಡೆ Bharatiya Janata Party (ಬಿಜೆಪಿ) 130 ರಿಂದ 150 ಸ್ಥಾನಗಳನ್ನು ಗಳಿಸಬಹುದು ಎಂದು ಅಂದಾಜಿಸಲಾಗಿದೆ. ಇತರ ಪಕ್ಷಗಳು 8 ರಿಂದ 16 ಸ್ಥಾನಗಳಿಗೆ ಸೀಮಿತವಾಗುವ ಸಾಧ್ಯತೆ ಇದೆ.

ಮತಶೇಕಡಾವಾರಿಯಾಗಿ ನೋಡಿದರೆ, ಟಿಎಂಸಿ ಶೇ.43 ಮತ್ತು ಬಿಜೆಪಿ ಶೇ.41 ಮತಗಳನ್ನು ಪಡೆಯುವ ಸಾಧ್ಯತೆ ಇದೆ. ಉತ್ತರ ಬಂಗಾಳದಲ್ಲಿ ಬಿಜೆಪಿ ಮೇಲುಗೈ ಸಾಧಿಸಬಹುದು ಎಂದು ಹೇಳಲಾಗಿದ್ದು, ದಕ್ಷಿಣ ಬಂಗಾಳದಲ್ಲಿ ಟಿಎಂಸಿ ಬಲಿಷ್ಠವಾಗಿದೆ.

ಇನ್ನೊಂದೆಡೆ, ಚಾಣಕ್ಯ ಸ್ಟ್ರಾಟಜೀಸ್ ಸಮೀಕ್ಷೆಯ ಪ್ರಕಾರ, Mamata Banerjee ನೇತೃತ್ವದ ಟಿಎಂಸಿ ಸ್ಪಷ್ಟ ಬಹುಮತದೊಂದಿಗೆ 155–165 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ಬಿಜೆಪಿ 110–115 ಸ್ಥಾನಗಳಿಗೆ ಸೀಮಿತವಾಗಬಹುದು ಎಂದು ಅಂದಾಜಿಸಲಾಗಿದೆ.

294 ಸದಸ್ಯರ ವಿಧಾನಸಭೆಯಲ್ಲಿ ಬಹುಮತಕ್ಕೆ 148 ಸ್ಥಾನಗಳ ಅಗತ್ಯವಿದ್ದು, ಈ ಸಂಖ್ಯೆಯನ್ನು ಟಿಎಂಸಿ ಸುಲಭವಾಗಿ ದಾಟುವ ಸಾಧ್ಯತೆ ಇದೆ. ಆದರೆ ಮ್ಯಾಟ್ರಿಜ್ ಸಮೀಕ್ಷೆ ಪ್ರಕಾರ ಕಠಿಣ ಪೈಪೋಟಿ ಕಾಣಿಸಬಹುದು.

ಒಟ್ಟಾರೆ, ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಟಿಎಂಸಿ ಮತ್ತು ಬಿಜೆಪಿ ನಡುವೆ ಭಾರೀ ಟಕ್ಕರ್ ನಿರೀಕ್ಷೆಯಿದ್ದು, ಅಂತಿಮ ಫಲಿತಾಂಶ ರಾಜಕೀಯ ಸಮೀಕರಣಗಳನ್ನು ಬದಲಾಯಿಸುವ ಸಾಧ್ಯತೆ ಇದೆ.

Continue Reading

ದೇಶ

ಪಾಕ್‌ನಲ್ಲಿ ಎಮರ್ಜೆನ್ಸಿ ಸ್ಥಿತಿ: ರಾತ್ರಿ 8ಕ್ಕೆ ಮಾರುಕಟ್ಟೆ ಬಂದ್!

Published

on

By

ಕರಾಚಿ: ಮಧ್ಯಪ್ರಾಚ್ಯದ ಉದ್ವಿಗ್ನತೆಯ ಪರಿಣಾಮವಾಗಿ ಪಾಕಿಸ್ತಾನ ಗಂಭೀರ ಆರ್ಥಿಕ ಮತ್ತು ಇಂಧನ ಬಿಕ್ಕಟ್ಟಿನಲ್ಲಿ ಸಿಲುಕಿದೆ. ಈಗಾಗಲೇ ಹಿಟ್ಟು, ನೀರು ಮತ್ತು ವಿದ್ಯುತ್ ಕೊರತೆಯಿಂದ ಬಳಲುತ್ತಿರುವ Pakistan ಇದೀಗ ತೈಲ ಕೊರತೆಯಿಂದ ಮತ್ತಷ್ಟು ಸಂಕಷ್ಟಕ್ಕೆ ಒಳಗಾಗಿದೆ.

ಇಂಧನ ಬಿಕ್ಕಟ್ಟನ್ನು ನಿಯಂತ್ರಿಸಲು ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದು, ಏಪ್ರಿಲ್ 7ರಿಂದ ರಾತ್ರಿ 8 ಗಂಟೆಯೊಳಗೆ ಮಾರುಕಟ್ಟೆಗಳು ಮತ್ತು ಶಾಪಿಂಗ್ ಮಾಲ್‌ಗಳನ್ನು ಮುಚ್ಚುವಂತೆ ಆದೇಶಿಸಿದೆ. ಗ್ಯಾಸ್ ಮತ್ತು ತೈಲ ಬಳಕೆಯನ್ನು ಕಡಿತಗೊಳಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಇದರ ಮಧ್ಯೆ ಪೆಟ್ರೋಲ್ ಬೆಲೆಗಳು ಭಾರೀ ಏರಿಕೆ ಕಂಡಿದ್ದು, ಲೀಟರ್‌ಗೆ ₹458ರವರೆಗೆ ಏರಿಕೆಯಾಗಿತ್ತು. ಜನರ ಆಕ್ರೋಶದ ನಂತರ ಅದು ₹378ಕ್ಕೆ ಇಳಿದರೂ, ಸಾಮಾನ್ಯ ಜನರ ಮೇಲಿನ ಆರ್ಥಿಕ ಹೊರೆ ಕಡಿಮೆಯಾಗಿಲ್ಲ. ಹೆಚ್ಚುತ್ತಿರುವ ಹಣದುಬ್ಬರ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಜನರನ್ನು ಹೈರಾಣಾಗಿಸಿದೆ.

ಈ ಬಿಕ್ಕಟ್ಟಿಗೆ Iran–United States ನಡುವಿನ ಉದ್ವಿಗ್ನತೆ ಹಾಗೂ Strait of Hormuz ನಲ್ಲಿ ಉಂಟಾದ ಅಡಚಣೆ ಪ್ರಮುಖ ಕಾರಣ ಎಂದು ಪಾಕ್ ಸರ್ಕಾರ ಹೇಳಿಕೊಂಡಿದೆ. ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ ಪರಿಸ್ಥಿತಿ ಹದಗೆಟ್ಟಿದೆ.

ಆಹಾರ ಪದಾರ್ಥಗಳಾದ ಹಿಟ್ಟು, ಅಕ್ಕಿ, ಬೇಳೆ ಮತ್ತು ಅಡುಗೆ ಎಣ್ಣೆಯ ಬೆಲೆಗಳೂ ಗಗನಕ್ಕೇರಿದ್ದು, ಜನಜೀವನ ಕಷ್ಟಕರವಾಗಿದೆ. ಜೊತೆಗೆ, ಸಾಲದ ಹೊರೆ ಹೆಚ್ಚುತ್ತಿದ್ದು, International Monetary Fund ಸೇರಿದಂತೆ ಅಂತರರಾಷ್ಟ್ರೀಯ ಸಂಸ್ಥೆಗಳಿಂದ ಪಡೆದ ಸಾಲ ಮರುಪಾವತಿ ಒತ್ತಡವೂ ಹೆಚ್ಚಾಗಿದೆ.

ಪರಿಸ್ಥಿತಿ ತೀವ್ರವಾಗಿರುವ ಹಿನ್ನೆಲೆಯಲ್ಲಿ, ಕೋವಿಡ್ ಕಾಲದಂತೆ ನಿರ್ಬಂಧಗಳನ್ನು ಜಾರಿಗೆ ತರಲು ಪಾಕ್ ಸರ್ಕಾರ ಮುಂದಾಗಿದೆ. ಒಟ್ಟಿನಲ್ಲಿ, ಪಾಕಿಸ್ತಾನದ ಆರ್ಥಿಕ ಮತ್ತು ಇಂಧನ ಬಿಕ್ಕಟ್ಟು ದೇಶವನ್ನು ಗಂಭೀರ ಸಂಕಷ್ಟದ ದಿಕ್ಕಿನಲ್ಲಿ ತಳ್ಳುತ್ತಿದೆ.

Continue Reading

Trending