ದೇಶ
ಪಾಕಿಸ್ತಾನ ಅಣ್ವಸ್ತ್ರ ಗೋದಾಮು ಧ್ವಂಸ Egypt ನಿಂದ Boron ಆಮದು? ಏನಿದು ರಾಸಾಯನಿಕ?

ಇಸ್ಲಾಮಾಬಾದ್: ಪಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆದ ಸೇನಾ ಸಂಘರ್ಷದಲ್ಲಿ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿರುವ ಭಾರತ ಪಾಕಿಸ್ತಾನದ ಅಣ್ವಸ್ತ್ರ ಶೇಖರಣಾ ಕೇಂದ್ರಗಳ ಮೇಲೂ ಕ್ಷಿಪಣಿ ಮಾಡಿದ್ದು, ಇದೀಗ ಇದೇ ಪ್ರದೇಶದಲ್ಲಿ ವಿಕಿರಣ ಸೋರಿಕೆಯಾಗುತ್ತಿದೆ ಎಂದು ಹೇಳಲಾಗಿದೆ.
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸರ್ಗೋಧಾದಲ್ಲಿರುವ ವಾಯುನೆಲೆಯ ಮೇಲೆ ಭಾರತ ದಾಳಿ ನಡೆಸಿದ್ದು, ಈ ವಾಯು ನೆಲೆ ಕಿರಾನಾ ಬೆಟ್ಟಗಳೊಂದಿಗೆ ಸಂಪರ್ಕ ಹೊಂದಿದೆ. ಕಿರಾನಾ ಬೆಟ್ಟದಲ್ಲಿ ಪಾಕ್ ಅಣ್ವಸ್ತ್ರ ನೆಲೆ ಇದೆ ಎಂಬ ಊಹಾಪೋಹಗಳು ಸಾಮಾಜಿಕ ಜಾಲತಾಣಗಳ ಚರ್ಚೆಯಾಗುತ್ತಿವೆ.
ಈ ಚರ್ಚೆಗಳ ನಡುವೆಯೇ ನಿನ್ನೆ ಸುದ್ದಿಗೋಷ್ಠಿ ನಡೆಸಿದ್ದ ಭಾರತೀಯ ಸೇನಾ ಮುಖ್ಯಸ್ಥರು ಪಾಕಿಸ್ತಾನದ ಕಿರಾನಾ ಬೆಟ್ಟದಲ್ಲಿರುವ ಅಣ್ವಸ್ತ್ರ ನೆಲೆ ಮೇಲೆ ಭಾರತ ದಾಳಿ ಮಾಡಿದೆ ಎಂಬ ವದಂತಿಗಳನ್ನು ತಳ್ಳಿ ಹಾಕಿದ್ದರು.
ಕಿರಾನಾ ಬೆಟ್ಟಗಳಲ್ಲಿ ಪಾಕಿಸ್ತಾನದ ಅಣ್ವಸ್ತ್ರ ನೆಲೆ ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ನಮ್ಮ ಗುರಿ ಉಗ್ರನೆಲೆಗಳು ಮಾತ್ರ ಆಗಿತ್ತು. ಅವುಗಳನ್ನು ಹೊಡೆದುರುಳಿಸಿದ್ದೇವೆ. ಕಿರಾನಾ ಬೆಟ್ಟಗಳಲ್ಲಿ ನಾವು ದಾಳಿ ಮಾಡಿಲ್ಲ ಎಂದು ಸೇನೆ ಮಾಹಿತಿ ನೀಡಿದೆ.
ಏತನ್ಮಧ್ಯೆ ಭಾರತೀಯ ಸೇನೆ ದಾಳಿ ಬಳಿಕ ಪಾಕಿಸ್ತಾನದ ಅಣ್ವಸ್ತ್ರ ಗೋದಾಮು ಇದೆ ಎನ್ನಲಾಗುತ್ತಿರುವ ಇದೇ ಕಿರಾನಾ ಬೆಟ್ಟದಲ್ಲಿ ವಿಕಿರಣ ಸೋರಿಕೆಯಾಗುತ್ತಿದೆ ಎಂಬ ವದಂತಿಗಳು ಬಲವಾಗಿ ಹರಡುತ್ತಿದೆ.
ಇದಕ್ಕೆ ಇಂಬು ನೀಡುವಂತೆ ಅಮೆರಿಕ ಮತ್ತು ಈಜಿಪ್ಟ್ ನಿಂದ 2 ವಿಶೇಷ ವಿಮಾನಗಳು ಪಾಕಿಸ್ತಾನಕ್ಕೆ ಆಗಮಿಸಿದ್ದು, ಈ ವಿಶೇಷ ವಿಮಾನಗಳು ವಿಕಿರಣ ಸೋರಿಕೆ ಮತ್ತೆ ಮಾಡುವ ವಿಮಾನಗಳಾಗಿವೆ ಎಂದು ಹೇಳಲಾಗಿದೆ.
ಅಲ್ಲದೆ ಪಾಕಿಸ್ತಾನಕ್ಕೆ ಈಜಪ್ಟಿನಿಂದ ಅಪಾರ ಪ್ರಮಾಣದ ಬೋರಾನ್ ರಾಸಾಯನಿಕವನ್ನು ಆಮದು ಮಾಡಿಕೊಳ್ಳಲಾಗುತ್ತಿದ್ದು, ವಿಕಿರಣ ಸೋರಿಕೆಯನ್ನು ತಟಸ್ಥಗೊಳಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಲಾಗಿದೆ.
ಇನ್ನು ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮ ಘೋಷಣೆಗೂ ಇದೇ ವಿಕಿರಣ ಸೋರಿಕೆ ಕಾರಣ ಎಂದು ಹೇಳಲಾಗುತ್ತಿದ್ದು ಕದನ ವಿರಾಮ ಘೋಷಣೆ ಬೆನ್ನಲ್ಲೇ ಪಾಕಿಸ್ತಾನ, ಅಮೆರಿಕ ದೇಶಗಳು ಇಲ್ಲಿನ ವಿಕಿರಣ ಸೋರಿಕೆ ತಡೆಗೆ ಹರಸಾಹಸ ಪಡುತ್ತಿವೆ ಎನ್ನಲಾಗಿದೆ.
ಫ್ಲೈಟ್ರಾಡಾರ್ 24 ದತ್ತಾಂಶದ ಪ್ರಕಾರ, ಈಜಿಪ್ಟ್ ವಾಯುಪಡೆಯ ಸಾರಿಗೆ ವಿಮಾನ EGY1916, ಮೇ 11 ರಂದು ಮಧ್ಯಾಹ್ನ ಭುರ್ಬನ್ ವಿಮಾನ ನಿಲ್ದಾಣದಿಂದ (BHC) ಹೊರಟು ಇದೀಗ ಪಾಕಿಸ್ತಾನ ತಲುಪಿದೆ.
ಬೋರಾನ್: ಸ್ಪೇಷಿಯಲ್ ಡಿಸ್ಟ್ರಿಬ್ಯೂಷನ್ ಇನ್ ಆನ್ ಏರಿಯಾ ಆಫ್ ನಾರ್ತ್ ನೈಲ್ ಡೆಲ್ಟಾ” ಎಂಬ ಇತ್ತೀಚಿನ ಅಧ್ಯಯನವು ಈ ಪ್ರದೇಶದಲ್ಲಿ ಮೆಟಾಲಾಯ್ಡ್ನ ಹೆಚ್ಚಿನ ಸಾಂದ್ರತೆಯನ್ನು ವರದಿ ಮಾಡಿದೆ. ಈಜಿಪ್ಟ್ ವಿಮಾನದ ಪಾಕಿಸ್ತಾನದ ಲ್ಯಾಂಡಿಂಗ್ ಈ ಅಂಶಕ್ಕೆ ಸಂಬಂಧಿಸಿರಬಹುದು ಎಂಬ ಊಹಾಪೋಹ ಹಬ್ಬಿದೆ. ಈ ಬೋರಾನ್ ವಿಕಿರಣವನ್ನು ಹೀರಿಕೊಳ್ಳುವ ಗುಣಲಕ್ಷಣಗಳಿಗಾಗಿ ಪರಮಾಣು ಶಕ್ತಿ ವಲಯ ಸೇರಿದಂತೆ ವ್ಯಾಪಕ ಕೈಗಾರಿಕಾ ಬಳಕೆಯಲ್ಲಿ ಹೆಚ್ಚು ಬಳಕೆ ಮಾಡಲಾಗುತ್ತದೆ.
ಬೋರೇಟ್ಗಳು, ವಿಶೇಷವಾಗಿ ಐಸೊಟೋಪ್ ಬೋರಾನ್-10, ಪರಮಾಣು ವಿದ್ಯುತ್ ಸ್ಥಾವರಗಳ ಸುರಕ್ಷಿತ ಕಾರ್ಯಾಚರಣೆಗೆ ಅತ್ಯಗತ್ಯ. ಯುರೇನಿಯಂ ವಿದಳನದಿಂದ ಉಷ್ಣ ನ್ಯೂಟ್ರಾನ್ಗಳನ್ನು ಹೀರಿಕೊಳ್ಳುವ ಸಾಮರ್ಥ್ಯದಿಂದಾಗಿ, ಒತ್ತಡಕ್ಕೊಳಗಾದ ಮತ್ತು ಕುದಿಯುವ ನೀರಿನ ರಿಯಾಕ್ಟರ್ಗಳನ್ನು ನಿಯಂತ್ರಿಸಲು ಮತ್ತು ಸ್ಥಿರಗೊಳಿಸಲು ಬೋರಾನ್-10 ಅನ್ನು ವ್ಯಾಪಕವಾಗಿ ಬಳಸಲಾಗುತ್ತದೆ.
ಬೋರಾನ್ ಎಂಬುದು ವಿಶೇಷ ರಾಸಾಯನಿಕವಾಗಿದ್ದು, ಈ ಬೋರಾನ್ ಬಿ ಚಿಹ್ನೆ ಮತ್ತು ಪರಮಾಣು ಸಂಖ್ಯೆ 5 ಅನ್ನು ಹೊಂದಿದ್ದು, ಸ್ಫಟಿಕ ರೂಪದಲ್ಲಿ ದೊರೆಯುವ ಇದು ಸುಲಭವಾಗಿ, ಗಾಢವಾದ, ಹೊಳಪಿನ ಲೋಹವಾಗಿದೆ. ಇದರ ಪರಿಣಾಮವಾಗಿ ಬೋರಿಕ್ ಆಮ್ಲ, ಖನಿಜ ಸೋಡಿಯಂ ಬೋರೇಟ್ ಮತ್ತು ಬೋರಾನ್ ಕಾರ್ಬೈಡ್ ಮತ್ತು ಬೋರಾನ್ ನೈಟ್ರೈಡ್ನ ಅಲ್ಟ್ರಾ-ಹಾರ್ಡ್ ಸ್ಫಟಿಕಗಳಂತಹ ಅನೇಕ ಸಂಯುಕ್ತಗಳು ಉಂಟಾಗುತ್ತವೆ.
ಸಾಮಾನ್ಯವಾಗಿ ಇದನ್ನು ವಿಕಿರಣ ಸೋರಿಕೆಯಂತಹ ಕ್ಲಿಷ್ಠ ಪರಿಸ್ಥಿತಿಗಳಲ್ಲಿ ತಟಸ್ಛಗೊಳಿಸಲು ಬಳಸಲಾಗುತ್ತದೆ. ಈ ಹಿಂದೆ 1986ರ ಚೆರ್ನೋಬಿಲ್ ದುರಂತದ ಸಮಯದಲ್ಲಿ, ವಿಕಿರಣಶೀಲ ಹೊರಸೂಸುವಿಕೆಯನ್ನು ನಿಗ್ರಹಿಸಲು ಮರಳು, ಬೋರಾನ್ ಮತ್ತು ಸೀಸದ ಮಿಶ್ರಣವನ್ನು ತೆರೆದ ರಿಯಾಕ್ಟರ್ ಮೇಲೆ ಬಿಡಲಾಯಿತು. ಬಳಿಕ ಕ್ರಮೇಣ ಇಲ್ಲಿ ವಿಕಿರಣ ಪ್ರಭಾವ ಕಡಿಮೆಯಾಗಿತ್ತು ಎಂದು ಹೇಳಲಾಗಿದೆ.
ದೇಶ
ನವರಾತ್ರಿ ಸಮಯದಲ್ಲಿ ವಿಮಾನ ನಿಲ್ದಾಣಗಳಲ್ಲಿ ಭಯೋತ್ಪಾದಕ ದಾಳಿ ಎಚ್ಚರಿಕೆ – ಭದ್ರತೆ ಬಿಗಿ ಕ್ರಮ

ಭಾರತದ ಪ್ರಮುಖ ವಿಮಾನ ನಿಲ್ದಾಣಗಳ ಮೇಲೆ ನವರಾತ್ರಿಯ ವೇಳೆ ಭಯೋತ್ಪಾದಕ ದಾಳಿಯ ಅಪಾಯವಿರುವ ಬಗ್ಗೆ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿದ್ದು, ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮ ಜಾರಿಯಲ್ಲಿದೆ.
ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ (BCAS) ಆಗಸ್ಟ್ 4ರಂದು ಎಚ್ಚರಿಕೆ ಪ್ರಕಟಿಸಿ, ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ ಭಯೋತ್ಪಾದನೆ ಅಥವಾ ಸಮಾಜ ವಿರೋಧಿ ಶಕ್ತಿಗಳಿಂದ ದಾಳಿ ಸಂಭವಿಸಬಹುದೆಂದು ಸೂಚಿಸಿದೆ.
🕵️ ಗುಪ್ತಚರ ಮೂಲದ ಮಹತ್ವದ ಎಚ್ಚರಿಕೆ:
ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳು ದಾಳಿಗೆ ಸಿದ್ಧತೆ ನಡೆಸುತ್ತಿವೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಎಲ್ಲಾ ವಿಮಾನ ನಿಲ್ದಾಣಗಳು, ಏರ್ಸ್ಟ್ರಿಪ್ಗಳು, ಹೆಲಿಪ್ಯಾಡ್ಗಳು ಮತ್ತು ತರಬೇತಿ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳಾಗಿ ಈ ಕೆಳಗಿನ ಕ್ರಮಗಳು ಜಾರಿಗೆ ಬಂದಿವೆ:
- ಸಿಬ್ಬಂದಿ ಮತ್ತು ಸಂದರ್ಶಕರ ಗುರುತಿನ ಪರಿಶೀಲನೆ
- ಸಿಸಿಟಿವಿ ಕಣ್ಗಾವಲು ಬಿಗಿತ
- ಸರಕು, ಪಾರ್ಸೆಲ್ ಮತ್ತು ಮೇಲ್ಗಳ ತಪಾಸಣೆ
- ಸ್ಥಳೀಯ ಪೊಲೀಸ್ ಮತ್ತು ಭದ್ರತಾ ಸಂಸ್ಥೆಗಳೊಂದಿಗೆ ಸಹಕಾರ
🇮🇳 ರಾಷ್ಟ್ರೀಯ ಭದ್ರತೆಗೆ ಒತ್ತು:
ದೆಹಲಿ, ಮುಂಬೈ, ಬೆಂಗಳೂರು ಮತ್ತು ಚೆನ್ನೈ ಸೇರಿದಂತೆ ಪ್ರಮುಖ ವಿಮಾನ ನಿಲ್ದಾಣಗಳು ಈ ಕ್ರಮಗಳನ್ನು ಜಾರಿಗೊಳಿಸುತ್ತಿದ್ದು, ಪ್ರಯಾಣಿಕರು ತಮ್ಮ ಗುರುತಿನ ದಾಖಲೆಗಳನ್ನು ಸಿದ್ಧವಾಗಿಡಬೇಕು. ತಪಾಸಣೆ ವಿಳಂಬದ ಸಾಧ್ಯತೆಯಿರುವುದರಿಂದ ಸಹಕಾರ ನೀಡುವಂತೆ BCAS ಮನವಿ ಮಾಡಿದೆ.
ದೇಶ
ಅಮೆರಿಕ-ರಷ್ಯಾ ವ್ಯವಹಾರ: ಭಾರತದ ಟೀಕೆಗೆ ಟ್ರಂಪ್ ನುಣುಚು ಪ್ರತಿಕ್ರಿಯೆ

ವಾಷಿಂಗ್ಟನ್: ರಷ್ಯಾದಿಂದ ಈಗಲೂ ವ್ಯವಹಾರ ನಡೆಸುತ್ತಿರುವ ಅಮೆರಿಕದ ಕುರಿತಾಗಿ ಭಾರತ ಮಾಡಿರುವ ಗಂಭೀರ ಆರೋಪಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನುಣುಚು ಪ್ರತಿಕ್ರಿಯೆ ನೀಡಿದ್ದಾರೆ.
ಭಾರತ ಆರೋಪಿಸಿದಂತೆ, ಅಮೆರಿಕ 2024ರಲ್ಲಿ 1.1 ಶತಕೋಟಿ ಡಾಲರ್ ಮೌಲ್ಯದ ರಸಗೊಬ್ಬರ, 878 ಮಿಲಿಯನ್ ಡಾಲರ್ ಮೌಲ್ಯದ ಪಲ್ಲಾಡಿಯಮ್ ಸೇರಿದಂತೆ ಹಲವು ಅಮೂಲ್ಯ ಲೋಹಗಳನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಯುರೇನಿಯಂ ಹೆಕ್ಸಾಫ್ಲೋರೈಡ್ನಂತಹ ಪರಮಾಣು ಉತ್ಪನ್ನಗಳ ಆಮದು ಕೂಡ ಮುಂದುವರಿದಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಟ್ರಂಪ್, “ನನಗೆ ಈ ವ್ಯಾಪಾರದ ವಿವರಗಳು ತಿಳಿದಿಲ್ಲ, ನಾನು ಪರಿಶೀಲನೆ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.
ಭಾರತದ ಖಡಕ್ ಪ್ರತಿಕ್ರಿಯೆ:
ಭಾರತ, ತನ್ನ ರಷ್ಯಾ ತೈಲ ಆಮದು ಬಗ್ಗೆ ಅಮೆರಿಕದ ಟೀಕೆಗೆ ಅಂಕಿ-ಅಂಶಗಳೊಂದಿಗೆ ತಿರುಗೇಟು ನೀಡಿದೆ. ಯುರೋಪ್ ದೇಶಗಳೇ ರಷ್ಯಾದಿಂದ ಭಾರಿ ಪ್ರಮಾಣದಲ್ಲಿ ಎಲ್ಎನ್ಜಿ, ರಸಗೊಬ್ಬರ, ಲೋಹಗಳನ್ನು ಆಮದು ಮಾಡಿಕೊಳ್ಳುತ್ತಿವೆ. 2024ರಲ್ಲಿ ಯುರೋಪಿಯನ್ ಒಕ್ಕೂಟವು 67.5 ಬಿಲಿಯನ್ ಯುರೋಗಳಷ್ಟು ಸರಕು ವ್ಯಾಪಾರ ಹಾಗೂ 17.2 ಬಿಲಿಯನ್ ಯುರೋಗಳಷ್ಟು ಸೇವಾ ವ್ಯಾಪಾರವನ್ನು ರಷ್ಯಾ ಜೊತೆ ನಡೆಸಿದೆ.
ಟ್ರಂಪ್ ಅವರ ಆರೋಪ:
ಟ್ರಂಪ್ ಹೇಳುವಂತೆ, ಭಾರತ ರಷ್ಯಾದ ತೈಲವನ್ನು ಖರೀದಿ ಮಾಡುತ್ತಿದ್ದು, ಅದನ್ನು ಮುಕ್ತ ಮಾರುಕಟ್ಟೆಯಲ್ಲಿ ಲಾಭಕ್ಕಾಗಿ ಮಾರಾಟ ಮಾಡುತ್ತಿದೆ. ಅವರು ಈ ಕಾರಣಕ್ಕಾಗಿ ಭಾರತದಿಂದ ಸಂಗ್ರಹಿಸಬೇಕಾದ ಸುಂಕವನ್ನು ಹೆಚ್ಚಿಸುವುದಾಗಿ ಹೇಳಿದ್ದಾರೆ.
ಭಾರತದ ನಿಲುವು:
ಭಾರತ, ತನ್ನ ರಾಷ್ಟ್ರೀಯ ಹಿತಾಸಕ್ತಿಗಳನ್ನು ಕಾಪಾಡುವ ಸಲುವಾಗಿ ಕಚ್ಚಾ ತೈಲವನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಇಂಧನದ ದರಗಳನ್ನು ಜನತೆಗೆ ಕೈಗೆಟುಕುವಂತೆ ಇರಿಸಲು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಕ್ರೀಡೆ
ರಿಷಭ್ ಪಂತ್ ಮಾನವೀಯತೆ: ಬಡ ವಿದ್ಯಾರ್ಥಿನಿಗೆ BCA ಪ್ರವೇಶಕ್ಕೆ ₹40,000 ನೆರವು!

ಬಾಗಲಕೋಟೆ: ಟೀಂ ಇಂಡಿಯಾದ ವಿಕೆಟ್ ಕೀಪರ್ ಹಾಗೂ ತೀಕ್ಷ್ಣ ಬ್ಯಾಟ್ಸ್ಮನ್ ರಿಷಭ್ ಪಂತ್ ಅವರು ಕ್ರೀಡಾಕ್ಷೇತ್ರದಷ್ಟೇ ದಾನಶೀಲತೆಯಲ್ಲೂ ಮಾದರಿಯಾಗಿದ್ದಾರೆ. ಇತ್ತೀಚೆಗೆ ಅವರು ಬಾಗಲಕೋಟೆ ಜಿಲ್ಲೆಯ ಬಡ ವಿದ್ಯಾರ್ಥಿನಿಯೊಬ್ಬಳಿಗೆ ಆರ್ಥಿಕ ನೆರವು ನೀಡಿ ಜನಮನ ಗೆದ್ದಿದ್ದಾರೆ.
ಬೀಳಗಿ ತಾಲ್ಲೂಕಿನ ರಬಕವಿ ಗ್ರಾಮದ ಜ್ಯೋತಿ ಕಣಬೂರಮಠ ದ್ವಿತೀಯ ಪಿಯುಸಿಯಲ್ಲಿ 85% ಅಂಕ ಗಳಿಸಿದ್ದರೂ, ಮನೆ ಪರಿಸ್ಥಿತಿಯಿಂದ BCA ಕೋರ್ಸ್ಗೆ ಸೇರುವ ಕನಸು ತೊಡೆತಗೊಂಡಿತ್ತು. ತಂದೆ ಚಿಕ್ಕ ಟೀ ಅಂಗಡಿ ನಡೆಸುವವರಾಗಿದ್ದು ಶುಲ್ಕ ಪಾವತಿಸಲು ಸಾಧ್ಯವಾಗಿರಲಿಲ್ಲ.
ಇದನ್ನು ಗುತ್ತಿಗೆದಾರ ಅನಿಲ್ ಹುಣಸಿಕಟ್ಟಿ ಅವರು ಗಮನಿಸಿ, ತಮ್ಮ ಸಂಪರ್ಕಗಳಿಂದ ರಿಷಭ್ ಪಂತ್ ಅವರ ಗಮನಕ್ಕೆ ತಂದರು. ಇದನ್ನು ಕೇಳಿದ ಪಂತ್, ಜುಲೈ 17ರಂದು ₹40,000 ನೇರವಾಗಿ BLDE ಕಾಲೇಜಿನ ಖಾತೆಗೆ ವರ್ಗಾಯಿಸಿ, ಜ್ಯೋತಿಯ ಮೊದಲ ಸೆಮಿಸ್ಟರ್ ಶುಲ್ಕವನ್ನು ಭರಿಸಿದರು.
ಜ್ಯೋತಿ ಎಮೋಶನಲ್ ಆಗಿ, “ರಿಷಭ್ ಪಂತ್ ಸಹಾಯದಿಂದ ನನ್ನ ಕನಸು ಸಾಧ್ಯವಾಯಿತು. ಅವರಿಗೆ ದೇವರು ಆಯುಷ್ಯ ಕೊಡಲಿ,” ಎಂದಿದ್ದಾರೆ.
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು2 years ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು8 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ಕ್ರೀಡೆ2 months ago
ಇಂದು ಐಪಿಎಲ್ ಫೈನಲ್- ಆರ್ಸಿಬಿಗೆ ಶುಭಕೋರಿದ ಎಸ್ಟಿಎಸ್!