Connect with us

ದೇಶ

ಪಾಕಿಸ್ತಾನ ಅಣ್ವಸ್ತ್ರ ಗೋದಾಮು ಧ್ವಂಸ Egypt ನಿಂದ Boron ಆಮದು? ಏನಿದು ರಾಸಾಯನಿಕ?

Published

on

ಇಸ್ಲಾಮಾಬಾದ್: ಪಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆದ ಸೇನಾ ಸಂಘರ್ಷದಲ್ಲಿ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿರುವ ಭಾರತ ಪಾಕಿಸ್ತಾನದ ಅಣ್ವಸ್ತ್ರ ಶೇಖರಣಾ ಕೇಂದ್ರಗಳ ಮೇಲೂ ಕ್ಷಿಪಣಿ ಮಾಡಿದ್ದು, ಇದೀಗ ಇದೇ ಪ್ರದೇಶದಲ್ಲಿ ವಿಕಿರಣ ಸೋರಿಕೆಯಾಗುತ್ತಿದೆ ಎಂದು ಹೇಳಲಾಗಿದೆ.

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸರ್ಗೋಧಾದಲ್ಲಿರುವ ವಾಯುನೆಲೆಯ ಮೇಲೆ ಭಾರತ ದಾಳಿ ನಡೆಸಿದ್ದು, ಈ ವಾಯು ನೆಲೆ ಕಿರಾನಾ ಬೆಟ್ಟಗಳೊಂದಿಗೆ ಸಂಪರ್ಕ ಹೊಂದಿದೆ. ಕಿರಾನಾ ಬೆಟ್ಟದಲ್ಲಿ ಪಾಕ್‌ ಅಣ್ವಸ್ತ್ರ ನೆಲೆ ಇದೆ ಎಂಬ ಊಹಾಪೋಹಗಳು ಸಾಮಾಜಿಕ ಜಾಲತಾಣಗಳ ಚರ್ಚೆಯಾಗುತ್ತಿವೆ.

ಈ ಚರ್ಚೆಗಳ ನಡುವೆಯೇ ನಿನ್ನೆ ಸುದ್ದಿಗೋಷ್ಠಿ ನಡೆಸಿದ್ದ ಭಾರತೀಯ ಸೇನಾ ಮುಖ್ಯಸ್ಥರು ಪಾಕಿಸ್ತಾನದ ಕಿರಾನಾ ಬೆಟ್ಟದಲ್ಲಿರುವ ಅಣ್ವಸ್ತ್ರ ನೆಲೆ ಮೇಲೆ ಭಾರತ ದಾಳಿ ಮಾಡಿದೆ ಎಂಬ ವದಂತಿಗಳನ್ನು ತಳ್ಳಿ ಹಾಕಿದ್ದರು.

ಕಿರಾನಾ ಬೆಟ್ಟಗಳಲ್ಲಿ ಪಾಕಿಸ್ತಾನದ ಅಣ್ವಸ್ತ್ರ ನೆಲೆ ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ನಮ್ಮ ಗುರಿ ಉಗ್ರನೆಲೆಗಳು ಮಾತ್ರ ಆಗಿತ್ತು. ಅವುಗಳನ್ನು ಹೊಡೆದುರುಳಿಸಿದ್ದೇವೆ. ಕಿರಾನಾ ಬೆಟ್ಟಗಳಲ್ಲಿ ನಾವು ದಾಳಿ ಮಾಡಿಲ್ಲ ಎಂದು ಸೇನೆ ಮಾಹಿತಿ ನೀಡಿದೆ.

ಏತನ್ಮಧ್ಯೆ ಭಾರತೀಯ ಸೇನೆ ದಾಳಿ ಬಳಿಕ ಪಾಕಿಸ್ತಾನದ ಅಣ್ವಸ್ತ್ರ ಗೋದಾಮು ಇದೆ ಎನ್ನಲಾಗುತ್ತಿರುವ ಇದೇ ಕಿರಾನಾ ಬೆಟ್ಟದಲ್ಲಿ ವಿಕಿರಣ ಸೋರಿಕೆಯಾಗುತ್ತಿದೆ ಎಂಬ ವದಂತಿಗಳು ಬಲವಾಗಿ ಹರಡುತ್ತಿದೆ.

ಇದಕ್ಕೆ ಇಂಬು ನೀಡುವಂತೆ ಅಮೆರಿಕ ಮತ್ತು ಈಜಿಪ್ಟ್ ನಿಂದ 2 ವಿಶೇಷ ವಿಮಾನಗಳು ಪಾಕಿಸ್ತಾನಕ್ಕೆ ಆಗಮಿಸಿದ್ದು, ಈ ವಿಶೇಷ ವಿಮಾನಗಳು ವಿಕಿರಣ ಸೋರಿಕೆ ಮತ್ತೆ ಮಾಡುವ ವಿಮಾನಗಳಾಗಿವೆ ಎಂದು ಹೇಳಲಾಗಿದೆ.

ಅಲ್ಲದೆ ಪಾಕಿಸ್ತಾನಕ್ಕೆ ಈಜಪ್ಟಿನಿಂದ ಅಪಾರ ಪ್ರಮಾಣದ ಬೋರಾನ್ ರಾಸಾಯನಿಕವನ್ನು ಆಮದು ಮಾಡಿಕೊಳ್ಳಲಾಗುತ್ತಿದ್ದು, ವಿಕಿರಣ ಸೋರಿಕೆಯನ್ನು ತಟಸ್ಥಗೊಳಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಲಾಗಿದೆ.

ಇನ್ನು ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮ ಘೋಷಣೆಗೂ ಇದೇ ವಿಕಿರಣ ಸೋರಿಕೆ ಕಾರಣ ಎಂದು ಹೇಳಲಾಗುತ್ತಿದ್ದು ಕದನ ವಿರಾಮ ಘೋಷಣೆ ಬೆನ್ನಲ್ಲೇ ಪಾಕಿಸ್ತಾನ, ಅಮೆರಿಕ ದೇಶಗಳು ಇಲ್ಲಿನ ವಿಕಿರಣ ಸೋರಿಕೆ ತಡೆಗೆ ಹರಸಾಹಸ ಪಡುತ್ತಿವೆ ಎನ್ನಲಾಗಿದೆ.

ಫ್ಲೈಟ್‌ರಾಡಾರ್ 24 ದತ್ತಾಂಶದ ಪ್ರಕಾರ, ಈಜಿಪ್ಟ್ ವಾಯುಪಡೆಯ ಸಾರಿಗೆ ವಿಮಾನ EGY1916, ಮೇ 11 ರಂದು ಮಧ್ಯಾಹ್ನ ಭುರ್ಬನ್ ವಿಮಾನ ನಿಲ್ದಾಣದಿಂದ (BHC) ಹೊರಟು ಇದೀಗ ಪಾಕಿಸ್ತಾನ ತಲುಪಿದೆ.

ಬೋರಾನ್: ಸ್ಪೇಷಿಯಲ್ ಡಿಸ್ಟ್ರಿಬ್ಯೂಷನ್ ಇನ್ ಆನ್ ಏರಿಯಾ ಆಫ್ ನಾರ್ತ್ ನೈಲ್ ಡೆಲ್ಟಾ” ಎಂಬ ಇತ್ತೀಚಿನ ಅಧ್ಯಯನವು ಈ ಪ್ರದೇಶದಲ್ಲಿ ಮೆಟಾಲಾಯ್ಡ್‌ನ ಹೆಚ್ಚಿನ ಸಾಂದ್ರತೆಯನ್ನು ವರದಿ ಮಾಡಿದೆ. ಈಜಿಪ್ಟ್ ವಿಮಾನದ ಪಾಕಿಸ್ತಾನದ ಲ್ಯಾಂಡಿಂಗ್ ಈ ಅಂಶಕ್ಕೆ ಸಂಬಂಧಿಸಿರಬಹುದು ಎಂಬ ಊಹಾಪೋಹ ಹಬ್ಬಿದೆ. ಈ ಬೋರಾನ್ ವಿಕಿರಣವನ್ನು ಹೀರಿಕೊಳ್ಳುವ ಗುಣಲಕ್ಷಣಗಳಿಗಾಗಿ ಪರಮಾಣು ಶಕ್ತಿ ವಲಯ ಸೇರಿದಂತೆ ವ್ಯಾಪಕ ಕೈಗಾರಿಕಾ ಬಳಕೆಯಲ್ಲಿ ಹೆಚ್ಚು ಬಳಕೆ ಮಾಡಲಾಗುತ್ತದೆ.

ಬೋರೇಟ್‌ಗಳು, ವಿಶೇಷವಾಗಿ ಐಸೊಟೋಪ್ ಬೋರಾನ್-10, ಪರಮಾಣು ವಿದ್ಯುತ್ ಸ್ಥಾವರಗಳ ಸುರಕ್ಷಿತ ಕಾರ್ಯಾಚರಣೆಗೆ ಅತ್ಯಗತ್ಯ. ಯುರೇನಿಯಂ ವಿದಳನದಿಂದ ಉಷ್ಣ ನ್ಯೂಟ್ರಾನ್‌ಗಳನ್ನು ಹೀರಿಕೊಳ್ಳುವ ಸಾಮರ್ಥ್ಯದಿಂದಾಗಿ, ಒತ್ತಡಕ್ಕೊಳಗಾದ ಮತ್ತು ಕುದಿಯುವ ನೀರಿನ ರಿಯಾಕ್ಟರ್‌ಗಳನ್ನು ನಿಯಂತ್ರಿಸಲು ಮತ್ತು ಸ್ಥಿರಗೊಳಿಸಲು ಬೋರಾನ್-10 ಅನ್ನು ವ್ಯಾಪಕವಾಗಿ ಬಳಸಲಾಗುತ್ತದೆ.

ಬೋರಾನ್ ಎಂಬುದು ವಿಶೇಷ ರಾಸಾಯನಿಕವಾಗಿದ್ದು, ಈ ಬೋರಾನ್ ಬಿ ಚಿಹ್ನೆ ಮತ್ತು ಪರಮಾಣು ಸಂಖ್ಯೆ 5 ಅನ್ನು ಹೊಂದಿದ್ದು, ಸ್ಫಟಿಕ ರೂಪದಲ್ಲಿ ದೊರೆಯುವ ಇದು ಸುಲಭವಾಗಿ, ಗಾಢವಾದ, ಹೊಳಪಿನ ಲೋಹವಾಗಿದೆ. ಇದರ ಪರಿಣಾಮವಾಗಿ ಬೋರಿಕ್ ಆಮ್ಲ, ಖನಿಜ ಸೋಡಿಯಂ ಬೋರೇಟ್ ಮತ್ತು ಬೋರಾನ್ ಕಾರ್ಬೈಡ್ ಮತ್ತು ಬೋರಾನ್ ನೈಟ್ರೈಡ್‌ನ ಅಲ್ಟ್ರಾ-ಹಾರ್ಡ್ ಸ್ಫಟಿಕಗಳಂತಹ ಅನೇಕ ಸಂಯುಕ್ತಗಳು ಉಂಟಾಗುತ್ತವೆ.

ಸಾಮಾನ್ಯವಾಗಿ ಇದನ್ನು ವಿಕಿರಣ ಸೋರಿಕೆಯಂತಹ ಕ್ಲಿಷ್ಠ ಪರಿಸ್ಥಿತಿಗಳಲ್ಲಿ ತಟಸ್ಛಗೊಳಿಸಲು ಬಳಸಲಾಗುತ್ತದೆ. ಈ ಹಿಂದೆ 1986ರ ಚೆರ್ನೋಬಿಲ್ ದುರಂತದ ಸಮಯದಲ್ಲಿ, ವಿಕಿರಣಶೀಲ ಹೊರಸೂಸುವಿಕೆಯನ್ನು ನಿಗ್ರಹಿಸಲು ಮರಳು, ಬೋರಾನ್ ಮತ್ತು ಸೀಸದ ಮಿಶ್ರಣವನ್ನು ತೆರೆದ ರಿಯಾಕ್ಟರ್ ಮೇಲೆ ಬಿಡಲಾಯಿತು. ಬಳಿಕ ಕ್ರಮೇಣ ಇಲ್ಲಿ ವಿಕಿರಣ ಪ್ರಭಾವ ಕಡಿಮೆಯಾಗಿತ್ತು ಎಂದು ಹೇಳಲಾಗಿದೆ.

ದೇಶ

ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ ಹಿನ್ನಡೆ: ದೆಹಲಿ ಕೋರ್ಟ್ ಮಹತ್ವದ ತೀರ್ಪು

Published

on

ನವದೆಹಲಿ: ಬಾಲಿವುಡ್ ನಟ ಹಾಗೂ ಹಾಸ್ಯ ಕಲಾವಿದ ರಾಜ್‌ಪಾಲ್ ಯಾದವ್ (Rajpal Yadav) ವಿರುದ್ಧದ ಚೆಕ್ ಬೌನ್ಸ್ (Cheque Bounce Case) ಪ್ರಕರಣದಲ್ಲಿ ದೆಹಲಿಯ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಮಾಧ್ಯಮ ವರದಿಗಳ ಪ್ರಕಾರ, ಪ್ರಕರಣದಲ್ಲಿ ದೋಷಿ ಎಂದು ತೀರ್ಮಾನಿಸಿರುವ ನ್ಯಾಯಾಲಯವು ಅವರಿಗೆ ಮೂರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿದೆ.

ವರದಿಗಳ ಪ್ರಕಾರ, ರಾಜ್‌ಪಾಲ್ ಯಾದವ್ ವಿರುದ್ಧ ದಾಖಲಾಗಿದ್ದ ಏಳು ಚೆಕ್ ಬೌನ್ಸ್ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಪ್ರತಿ ಪ್ರಕರಣಕ್ಕೂ ₹1.05 ಕೋಟಿ ದಂಡದಂತೆ ಒಟ್ಟು ₹7.35 ಕೋಟಿ ಪಾವತಿಸಲು ಸೂಚಿಸಲಾಗಿದೆ. ಜೊತೆಗೆ ದೂರುದಾರರಿಗೆ ₹1,04,75,000 ಪರಿಹಾರ ನೀಡುವಂತೆ ಹಾಗೂ ಪ್ರತಿ ಪ್ರಕರಣಕ್ಕೆ ₹25,000 ರಾಜ್ಯಕ್ಕೆ ದಂಡ ಪಾವತಿಸುವಂತೆ ಆದೇಶಿಸಿರುವುದಾಗಿ ವರದಿಯಾಗಿದೆ.

ಈ ಪ್ರಕರಣದ ಹಿನ್ನೆಲೆ 2010ರಲ್ಲಿ ನಿರ್ಮಾಣಗೊಂಡ ‘ಅತಾ ಪತಾ ಲಾಪತಾ’ ಸಿನಿಮಾಗೆ ಸಂಬಂಧಿಸಿದೆ. ಈ ಚಿತ್ರ ನಿರ್ಮಾಣ ಮತ್ತು ನಿರ್ದೇಶನಕ್ಕಾಗಿ ರಾಜ್‌ಪಾಲ್ ಯಾದವ್ ಮುರಳಿ ಪ್ರಾಜೆಕ್ಟ್ಸ್ ಸಂಸ್ಥೆಯಿಂದ ₹5 ಕೋಟಿ ಸಾಲ ಪಡೆದಿದ್ದರು ಎಂದು ಹೇಳಲಾಗಿದೆ. ಸಿನಿಮಾ ವಾಣಿಜ್ಯವಾಗಿ ಯಶಸ್ಸು ಕಾಣದ ಕಾರಣ ಸಾಲ ಮರುಪಾವತಿಯಲ್ಲಿ ವಿಳಂಬವಾಗಿದ್ದು, ಬಳಿಕ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತು.

ಈ ಹಿಂದೆ ಸಂಬಂಧಿಕರ ಮದುವೆ ಹಿನ್ನೆಲೆಯಲ್ಲಿ ರಾಜ್‌ಪಾಲ್ ಯಾದವ್ ಅವರಿಗೆ ತಾತ್ಕಾಲಿಕ ಜಾಮೀನು ದೊರೆತಿತ್ತು. ಇತ್ತೀಚೆಗೆ ಬಿಡುಗಡೆಯಾದ ‘ವೆಲ್ಕಮ್ ಟು ಜಂಗಲ್’ ಚಿತ್ರದಲ್ಲಿಯೂ ಅವರು ಅಭಿನಯಿಸಿದ್ದರು.

ಗಮನಿಸಿ: ಈ ಸುದ್ದಿ ವಿವಿಧ ಮಾಧ್ಯಮ ವರದಿಗಳ ಆಧಾರಿತವಾಗಿದೆ. ಪ್ರಕರಣದ ಕುರಿತು ಸಂಬಂಧಿತ ನ್ಯಾಯಾಲಯದ ಅಧಿಕೃತ ಆದೇಶ ಹಾಗೂ ದಾಖಲೆಗಳ ಆಧಾರದ ಮೇಲೆ ಮುಂದಿನ ಮಾಹಿತಿ ಪ್ರಕಟವಾಗುವ ಸಾಧ್ಯತೆ ಇದೆ.

Continue Reading

ದೇಶ

ಮೈಸೂರು ದಸರಾ ದಿನಾಂಕ ಘೋಷಣೆ: ಸಿಎಂ ನೇತೃತ್ವದ ಸಭೆಯಲ್ಲಿ ಮಹತ್ವದ ನಿರ್ಧಾರ

Published

on

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) 2026 ಉತ್ಸವದ ದಿನಾಂಕವನ್ನು ರಾಜ್ಯ ಸರ್ಕಾರ ಅಂತಿಮಗೊಳಿಸಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K. Shivakumar) ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ದಸರಾ ಉತ್ಸವದ ಸಿದ್ಧತೆಗಳು ಹಾಗೂ ಕಾರ್ಯಕ್ರಮಗಳ ವೇಳಾಪಟ್ಟಿಗೆ ಅನುಮೋದನೆ ನೀಡಲಾಗಿದೆ.

ಸಭೆಯಲ್ಲಿ ಕೈಗೊಂಡ ನಿರ್ಧಾರದಂತೆ, ಅಕ್ಟೋಬರ್ 11ರಂದು ಮೈಸೂರು ದಸರಾ ಉತ್ಸವಕ್ಕೆ ಅಧಿಕೃತ ಚಾಲನೆ ದೊರೆಯಲಿದ್ದು, ಇದೇ ದಿನದಿಂದ ನವರಾತ್ರಿ (Navaratri) ಆಚರಣೆ ಆರಂಭವಾಗಲಿದೆ. ಹತ್ತು ದಿನಗಳ ಕಾಲ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಕಲಾ ಕಾರ್ಯಕ್ರಮಗಳು ನಡೆಯಲಿವೆ.

ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾಗಿರುವ **ಜಂಬೂಸವಾರಿ (Jumboo Savari)**ಯನ್ನು ಅಕ್ಟೋಬರ್ 21ರಂದು ವಿಜಯದಶಮಿ ದಿನ ಅದ್ದೂರಿಯಾಗಿ ಆಯೋಜಿಸಲು ಸರ್ಕಾರ ತೀರ್ಮಾನಿಸಿದೆ. ಸಂಪ್ರದಾಯದಂತೆ ಅಲಂಕೃತ ಅಂಬಾರಿಯಲ್ಲಿ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿ ಮೆರವಣಿಗೆಯಲ್ಲಿ ಸಾಗಲಿದ್ದು, ಸಾವಿರಾರು ಭಕ್ತರು ಹಾಗೂ ದೇಶ-ವಿದೇಶಗಳಿಂದ ಆಗಮಿಸುವ ಪ್ರವಾಸಿಗರು ಈ ಐತಿಹಾಸಿಕ ಉತ್ಸವಕ್ಕೆ ಸಾಕ್ಷಿಯಾಗಲಿದ್ದಾರೆ.

ಸಭೆಯಲ್ಲಿ ಭದ್ರತೆ, ಸಂಚಾರ ವ್ಯವಸ್ಥೆ, ಪ್ರವಾಸೋದ್ಯಮ, ಸ್ವಚ್ಛತೆ, ವಿದ್ಯುತ್, ಕುಡಿಯುವ ನೀರು ಹಾಗೂ ಸಾರ್ವಜನಿಕ ಸೌಲಭ್ಯಗಳ ಕುರಿತು ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಲಾಗಿದೆ. ಪ್ರವಾಸಿಗರಿಗೆ ಯಾವುದೇ ತೊಂದರೆಯಾಗದಂತೆ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.

ಮೈಸೂರು ದಸರಾ ಕರ್ನಾಟಕದ ಅತ್ಯಂತ ದೊಡ್ಡ ಸಾಂಸ್ಕೃತಿಕ ಉತ್ಸವಗಳಲ್ಲಿ ಒಂದಾಗಿದ್ದು, ರಾಜ್ಯದ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವ ಮಹತ್ವದ ವೇದಿಕೆಯಾಗಿದೆ. ಈ ಬಾರಿ ಉತ್ಸವವನ್ನು ಇನ್ನಷ್ಟು ವೈಭವದಿಂದ ಆಯೋಜಿಸಲು ಸರ್ಕಾರ ಸಿದ್ಧತೆ ಆರಂಭಿಸಿದೆ.

Continue Reading

ದೇಶ

ತಮಿಳುನಾಡು ಸರ್ಕಾರದ ಹೊಸ ಆದೇಶ: ಸರ್ಕಾರಿ ಶಾಲೆಗಳಲ್ಲಿ ರಾಜಕೀಯ ಚಟುವಟಿಕೆ ಸಂಪೂರ್ಣ ನಿಷೇಧ

Published

on

ಚೆನ್ನೈ: ತಮಿಳುನಾಡು (Tamil Nadu) ಸರ್ಕಾರವು ಸರ್ಕಾರಿ ಶಾಲೆಗಳ ಶೈಕ್ಷಣಿಕ ವಾತಾವರಣವನ್ನು ಕಾಪಾಡುವ ಉದ್ದೇಶದಿಂದ ಮಹತ್ವದ ಆದೇಶ ಹೊರಡಿಸಿದೆ. ಇನ್ನು ಮುಂದೆ ರಾಜ್ಯದ ಸರ್ಕಾರಿ ಶಾಲೆಗಳು (Government Schools) ಹಾಗೂ ತರಗತಿ ಕೊಠಡಿಗಳಲ್ಲಿ (Classrooms) ರಾಜಕೀಯ ಪಕ್ಷಗಳ ಕಾರ್ಯಕರ್ತರು ಮತ್ತು ಖಾಸಗಿ ವ್ಯಕ್ತಿಗಳ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.

ತಮಿಳುನಾಡು ಶಾಲಾ ಶಿಕ್ಷಣ ಸಚಿವ ರಾಜ್ ಮೋಹನ್ (Raj Mohan) ಹೊರಡಿಸಿರುವ ಸುತ್ತೋಲೆಯ ಪ್ರಕಾರ, ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಜನಪ್ರತಿನಿಧಿಗಳಿಗೆ ಮಾತ್ರ ಶಾಲಾ ಆವರಣ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತದೆ. ಉಳಿದ ಯಾವುದೇ ರಾಜಕೀಯ ಚಟುವಟಿಕೆ ಅಥವಾ ಖಾಸಗಿ ಕಾರ್ಯಕ್ರಮಗಳಿಗೆ ಶಾಲಾ ಆವರಣವನ್ನು ಬಳಸಲು ಅವಕಾಶ ಇರುವುದಿಲ್ಲ.

ಹೊಸ ನಿಯಮಗಳ ಅನ್ವಯ, ಶಾಲಾ ತರಗತಿ ಕೊಠಡಿಗಳನ್ನು ಯಾವುದೇ ರಾಜಕೀಯ ನಾಯಕರು ಅಥವಾ ನಿರ್ದಿಷ್ಟ ವ್ಯಕ್ತಿಗಳ ಸನ್ಮಾನ, ಹೊಗಳಿಕೆ, ಪ್ರಶಂಸಾ ಕಾರ್ಯಕ್ರಮಗಳು ಅಥವಾ ಹುಟ್ಟುಹಬ್ಬದ ಆಚರಣೆಗಳಿಗೆ ಬಳಸುವುದನ್ನು ನಿಷೇಧಿಸಲಾಗಿದೆ. ಶಿಕ್ಷಣ ಸಂಸ್ಥೆಗಳು ಸಂಪೂರ್ಣವಾಗಿ ವಿದ್ಯಾರ್ಥಿಗಳ ಕಲಿಕೆ ಮತ್ತು ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರ ಸೀಮಿತವಾಗಿರಬೇಕು ಎಂಬುದನ್ನು ಸರ್ಕಾರ ಪುನರುಚ್ಚರಿಸಿದೆ.

ಇದಲ್ಲದೆ, ಸರ್ಕಾರಿ ಶಾಲೆಗಳಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳು ರಾಜಕೀಯ ತಟಸ್ಥತೆಯನ್ನು ಕಾಯ್ದುಕೊಂಡು, ಶಿಕ್ಷಣ ಮತ್ತು ವಿದ್ಯಾರ್ಥಿಗಳ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳನ್ನಷ್ಟೇ ಒಳಗೊಂಡಿರಬೇಕು ಎಂದು ಸೂಚಿಸಲಾಗಿದೆ. ಈ ಆದೇಶದ ಅನುಷ್ಠಾನಕ್ಕಾಗಿ ಪಾಲಿಸಬೇಕಾದ ವಿವರವಾದ ಮಾರ್ಗಸೂಚಿಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಸರ್ಕಾರದ ಈ ಕ್ರಮವು ಶಾಲಾ ಆವರಣದಲ್ಲಿ ರಾಜಕೀಯ ಪ್ರಭಾವವನ್ನು ತಡೆಯುವ ಜೊತೆಗೆ, ವಿದ್ಯಾರ್ಥಿಗಳಿಗೆ ಶಾಂತ ಹಾಗೂ ತಟಸ್ಥ ಶೈಕ್ಷಣಿಕ ವಾತಾವರಣ ಒದಗಿಸುವ ಉದ್ದೇಶ ಹೊಂದಿದೆ.

Continue Reading

Trending