ದೇಶ
ಮುಂದೆ ಸ್ನೇಹದ ಹಸ್ತ, ಹಿಂದೆ ಬೆನ್ನಿಗೆ ಚೂರಿ! ಈ ಕಾರಣಕ್ಕೆ ಭಾರತ ಅಂದ್ರೆ ಉರಿದು ಬೀಳ್ತಿರೋ ಟ್ರಂಪ್!
ಡೊನಾಲ್ಡ್ ಟ್ರಂಪ್ (Donald Trump) ಅಂದ್ರೆನೆ ವಿವಾದಗಳ ಸರದಾರ. ಅವರ ಮಾತುಗಳು, ಅವರ ನೀತಿಗಳು ಜಗತ್ತಿನ ಬಹಳಷ್ಟು ದೇಶಗಳಿಗೆ ತಲೆನೋವು ತಂದಿದೆ. ಅದರಲ್ಲೂ ಭಾರತದ (India) ಜೊತೆಗಿನ ಅವರ ಸಂಬಂಧ ಸ್ವಲ್ಪ ವಿಚಿತ್ರವಾಗಿದೆ. ಕೆಲವೊಮ್ಮೆ ಸ್ನೇಹದ ಹಸ್ತ ಚಾಚಿದ್ರೆ, ಇನ್ನೊಂದ್ಸಲ ಭಾರತದ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟು ಉರಿ ಉರಿ ಅನ್ನೋ ಹಾಗೆ ಮಾಡ್ತಾರೆ. ಭಾರತ-ಪಾಕ್ ನಡುವೆ ಬಂದು ನಾನೇ ಕದನ ವಿರಾಮ (Ceasefire) ಮಾಡಿಸಿದ್ದು ಅಂತ ಮೊದಲು ಹೇಳಿದ್ದರು. ಆದ್ರೆ ಇದ್ದಕ್ಕಿದ್ದ ಹಾಗೇ ಯೂಟರ್ನ್ ಹೊಡೆದುಬಿಟ್ರು. ನಾನು ಕದನ ವಿರಾಮ ಮಾಡಿಸಿಲ್ಲ ಅಂತ ಹೇಳಿದ್ರು. ಇದೆಲ್ಲ ನೋಡ್ತಿದ್ರೆ ಟ್ರಂಪ್ ಯಾಕೋ ಭಾರತಕ್ಕೆ ಪರೋಕ್ಷವಾಗಿ ಬೆನ್ನಿಗೆ ಚೂರಿ ಹಾಕ್ತಿದ್ದಾರೆ ಅನ್ನೋ ಪ್ರಶ್ನೆಗಳು ಎದ್ದಿವೆ.
ಡೊನಾಲ್ಡ್ ಟ್ರಂಪ್ ಅಮೆರಿಕಾದ ಅಧ್ಯಕ್ಷರಾಗಿದ್ದಾಗ ಭಾರತ ಮತ್ತೆ ಅಮೆರಿಕಾ ನಡುವಿನ ವ್ಯಾಪಾರ ಸಂಬಂಧದಲ್ಲಿ ಬಹಳಷ್ಟು ಏರಿಳಿತಗಳು ಆಗಿದ್ದವು. ಟ್ರಂಪ್ ಅವರು ಭಾರತದ ವ್ಯಾಪಾರ ನೀತಿಗಳ ಬಗ್ಗೆ ಪದೇ ಪದೇ ಟೀಕೆ ಮಾಡ್ತಿದ್ರು. ಭಾರತ ಅಮೆರಿಕಾದ ವಸ್ತುಗಳ ಮೇಲೆ ಹೆಚ್ಚು ಸುಂಕ (ಟ್ಯಾರಿಫ್) ವಿಧಿಸುತ್ತೆ ಅಂತ ಅವರ ಆರೋಪ. ಆದ್ರೆ ಭಾರತ ಮಾತ್ರ ಇದಕ್ಕೆ ತಲೆಬಾಗಲಿಲ್ಲ. ಅಮೆರಿಕಾ ಹೇಳಿದ ಹಾಗೆಲ್ಲಾ ಒಪ್ಪಿಕೊಳ್ಳಲಿಲ್ಲ.
ಆದ್ರೆ ಚೀನಾ ಮಾತ್ರ ಅಮೆರಿಕಾ ಹೇಳಿದ ಹಾಗೆಲ್ಲಾ ಒಪ್ಪಿಕೊಂಡಿತ್ತು. ಟ್ರಂಪ್ ಒತ್ತಡಕ್ಕೆ ಮಣಿದು ಚೀನಾ ತನ್ನ ವ್ಯಾಪಾರ ನೀತಿಗಳಲ್ಲಿ ಬದಲಾವಣೆ ತಂದಿತ್ತು. ಆದ್ರೆ ಭಾರತ ಮಾತ್ರ ತನ್ನ ನಿಲುವಿಗೆ ಬದ್ಧವಾಗಿತ್ತು. ಇದು ಟ್ರಂಪ್ಗೆ ಸ್ವಲ್ಪ ಬೇಸರ ತರಿಸಿತ್ತು. ಅದಕ್ಕೆ ಅವರು ಪರೋಕ್ಷವಾಗಿ ಭಾರತಕ್ಕೆ ಟಾಂಗ್ ಕೊಡೋಕೆ ಶುರು ಮಾಡಿದ್ರು.
ಟ್ರಂಪ್ ಪ್ರಕಾರ, ಭಾರತ ಅಮೆರಿಕಾದ ವಸ್ತುಗಳ ಮೇಲೆ ವಿಧಿಸುವ ಸುಂಕ ತುಂಬಾನೇ ಜಾಸ್ತಿ. ಇದರಿಂದ ಅಮೆರಿಕಾದ ಕಂಪನಿಗಳು ಭಾರತದಲ್ಲಿ ವ್ಯಾಪಾರ ಮಾಡೋಕೆ ಕಷ್ಟವಾಗುತ್ತೆ ಅಂತ ಅವರು ಹೇಳ್ತಿದ್ರು. ಅಷ್ಟೇ ಅಲ್ಲ, ಭಾರತ ಅಮೆರಿಕಾದಿಂದ ಆಮದು ಮಾಡಿಕೊಳ್ಳೋ ವಸ್ತುಗಳ ಮೇಲೆ ಹೆಚ್ಚು ಸುಂಕ ವಿಧಿಸಿ, ಅಮೆರಿಕಾದ ಮಾರುಕಟ್ಟೆಗೆ ಭಾರತದ ವಸ್ತುಗಳು ಸುಲಭವಾಗಿ ಬರೋ ಹಾಗೆ ಮಾಡ್ತಿದೆ ಅಂತ ಅವರು ಆರೋಪಿಸಿದ್ರು.
ವ್ಯಾಪಾರದ ಬಗ್ಗೆ ಕಿರಿಕ್!
ಟ್ರಂಪ್ ಅವರಿಗೆ ಭಾರತದ ವ್ಯಾಪಾರ ನೀತಿಗಳು ಇಷ್ಟವಾಗಲ್ಲ. ಯಾಕಂದ್ರೆ ಅವರ ಪ್ರಕಾರ ಭಾರತ ಅಮೆರಿಕಾದ ವಸ್ತುಗಳ ಮೇಲೆ ಬಹಳಷ್ಟು ಸುಂಕ ವಿಧಿಸುತ್ತೆ. ಅಮೆರಿಕಾ-ಭಾರತದ ನಡುವಿನ ವ್ಯಾಪಾರದಲ್ಲಿ ಅಸಮತೋಲನ ಇದೆ ಅಂತ ಅವರು ಪದೇ ಪದೇ ಹೇಳ್ತಾರೆ.
ಅವರ ಆಡಳಿತದ ಟೈಮಲ್ಲಿ ಭಾರತದಿಂದ ಅಮೆರಿಕಾಗೆ ಹೋಗೋ ಕೆಲವು ವಸ್ತುಗಳ ಮೇಲೆ ಸಿಗ್ತಿದ್ದ ವ್ಯಾಪಾರ ಸೌಲಭ್ಯಗಳನ್ನ ರದ್ದು ಮಾಡಿದ್ರು. ಇದರಿಂದ ಎರಡೂ ದೇಶಗಳ ನಡುವಿನ ವ್ಯಾಪಾರ ಸಂಬಂಧದಲ್ಲಿ ಸ್ವಲ್ಪ ಬಿರುಕು ಬಿತ್ತು.
ಭಾರತ ಮತ್ತೆ ಪಾಕಿಸ್ತಾನದ ನಡುವೆ ಕಾಶ್ಮೀರ ವಿವಾದದ ಬಗ್ಗೆ ಟ್ರಂಪ್ ಕೊಡುವ ಹೇಳಿಕೆಗಳು ಭಾರತದಲ್ಲಿ ಬಹಳಷ್ಟು ವಿವಾದ ಸೃಷ್ಟಿಸಿವೆ. ಅದರಲ್ಲೂ ಅವರು ಈ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸೋಕೆ ಬಂದಾಗ ಭಾರತಕ್ಕೆ ಉರಿ ಉರಿ ಅನ್ನೋ ಹಾಗಾಯಿತು. ಯಾಕಂದ್ರೆ ಕಾಶ್ಮೀರ ಭಾರತ ಮತ್ತೆ ಪಾಕಿಸ್ತಾನದ ನಡುವಿನ ದ್ವಿಪಕ್ಷೀಯ ವಿಷಯ, ಇದರಲ್ಲಿ ಮೂರನೇ ವ್ಯಕ್ತಿ ತಲೆ ಹಾಕೋದು ಭಾರತಕ್ಕೆ ಇಷ್ಟವಿಲ್ಲ.
ಇತ್ತೀಚೆಗೆ ಟ್ರಂಪ್ ಭಾರತದ ವ್ಯಾಪಾರ ನೀತಿಗಳ ಬಗ್ಗೆ ಮತ್ತೆ ಮಾತಾಡಿದ್ದಾರೆ. ಭಾರತದ ಸುಂಕಗಳು ಮತ್ತೆ ಆಪಲ್ ಕಂಪನಿ ಭಾರತದಲ್ಲಿ ಉತ್ಪಾದನೆ ಮಾಡ್ತಿರೋದರ ಬಗ್ಗೆ ಅವರ ಅಭಿಪ್ರಾಯಗಳನ್ನ ವ್ಯಕ್ತಪಡಿಸಿದ್ದಾರೆ. ಈ ಮಾತುಗಳು ಭಾರತದಲ್ಲಿ ಬಹಳಷ್ಟು ಚರ್ಚೆಗೆ ಕಾರಣವಾಗಿವೆ. ಇವೆಲ್ಲಾ ಕಾರಣಗಳಿಂದ ಭಾರತದ ಕೆಲವರಿಗೆ ಟ್ರಂಪ್ ಬಗ್ಗೆ ಅಸಮಾಧಾನ ಇದೆ. ಆದ್ರೆ ಟ್ರಂಪ್ ಅವರ ಮಾತುಗಳು ಕೆಲವೊಮ್ಮೆ ರಾಜಕೀಯ ಲಾಭಕ್ಕೋಸ್ಕರ ಇರುತ್ತೆ. ಆದ್ರೆ ಭಾರತದ ಜೊತೆಗಿನ ಸಂಬಂಧ ಅವರಿಗೆ ಮುಖ್ಯ ಅನ್ನೋದು ಕೂಡಾ ನಿಜ.
ಹಾಗಾಗಿ ಟ್ರಂಪ್ ಅವರ ಮಾತುಗಳನ್ನ ಬಹಳಷ್ಟು ಜನ ಗಂಭೀರವಾಗಿ ತಗೊಳಲ್ಲ. ಯಾಕಂದ್ರೆ ಅವರ ಮಾತುಗಳು ಯಾವಾಗ ಬೇಕಾದ್ರೂ ಬದಲಾಗಬಹುದು ಅನ್ನೋದು ಎಲ್ಲರಿಗೂ ಗೊತ್ತಿದೆ. ಆದ್ರೆ ಭಾರತದ ಜೊತೆಗಿನ ಅವರ ವ್ಯಾಪಾರ ಸಂಬಂಧಗಳು ಮಾತ್ರ ಯಾವಾಗ್ಲೂ ಚರ್ಚೆಗೆ ಗ್ರಾಸವಾಗ್ತಾನೆ ಇರುತ್ತೆ.
ಕ್ರೀಡೆ
ಐಪಿಎಲ್ ಟಿಕೆಟ್ ದುರ್ಬಳಕೆ: ಶಾಸಕರ ಪಾಸ್ ಸ್ನೇಹಿತರ ಕೈಗೆ!
ಬೆಂಗಳೂರುದಲ್ಲಿ ಐಪಿಎಲ್ ಕ್ರೇಜ್ ಗರಿಷ್ಠ ಮಟ್ಟಕ್ಕೆ ಏರಿರುವ ನಡುವೆಯೇ, ಶಾಸಕರಿಗೆ ನೀಡಲಾದ ಉಚಿತ ಟಿಕೆಟ್ ಪಾಸ್ಗಳ ದುರ್ಬಳಕೆಯ ಆರೋಪ ದೊಡ್ಡ ವಿವಾದಕ್ಕೆ ಕಾರಣವಾಗಿದೆ. Indian Premier League ಪಂದ್ಯಗಳಿಗೆ ಸಂಬಂಧಿಸಿದ ಈ ಘಟನೆ ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ.
ಈ ಬಾರಿಯ ಐಪಿಎಲ್ ಆರಂಭಕ್ಕೂ ಮುನ್ನ ಕೆಲವು ಶಾಸಕರು ತಮ್ಮ ಹಾಗೂ ಕುಟುಂಬ ಸದಸ್ಯರಿಗೆ ಉಚಿತ ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ Karnataka State Cricket Association ವಿಶೇಷ ಅಕ್ರೆಡೆಷನ್ ಕಾರ್ಡ್ ಮಾದರಿಯ ಪಾಸ್ಗಳನ್ನು ವಿತರಿಸಿತ್ತು.
ಆದರೆ, ಈ ಪಾಸ್ಗಳು ಈಗ ಶಾಸಕರ ಕುಟುಂಬದವರಿಗಷ್ಟೇ ಸೀಮಿತವಾಗದೆ, ಅವರ ಮಕ್ಕಳ ಸ್ನೇಹಿತರ ಕೈಗೆ ಸೇರಿರುವುದು ಬೆಳಕಿಗೆ ಬಂದಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಪೊಲೀಸರು ತಪಾಸಣೆ ನಡೆಸಿದ ವೇಳೆ, ಶಾಸಕರ ಕುಟುಂಬದ ಹೆಸರಿನ ಪಾಸ್ ಹಿಡಿದು ಬಂದಿದ್ದ ಕೆಲ ಯುವಕರ ಮೇಲೆ ಅನುಮಾನ ಮೂಡಿದೆ.
ಪರಿಶೀಲನೆ ವೇಳೆ ಯುವಕರು ತಡಬಡಾಯಿಸಿದ್ದು, ಕೊನೆಯಲ್ಲಿ ತಾವು ಶಾಸಕರ ಮಗನ ಸ್ನೇಹಿತರು ಎಂದು ಒಪ್ಪಿಕೊಂಡಿದ್ದಾರೆ. ಈ ಹಿನ್ನೆಲೆ ಪೊಲೀಸರು ಅವರನ್ನು ಎಚ್ಚರಿಕೆ ನೀಡಿ ಕಳಿಸಿದ್ದಾರೆ.
ಈ ಘಟನೆ ಹಲವಾರು ಪ್ರಶ್ನೆಗಳನ್ನು ಎಬ್ಬಿಸಿದೆ. ಜನಪ್ರತಿನಿಧಿಗಳಿಗಾಗಿ ನೀಡಲಾದ ಸೌಲಭ್ಯವನ್ನು ಅನರ್ಹರು ಬಳಸುವುದು ಸರಿಯೇ? ಎಂಬ ಪ್ರಶ್ನೆ ಕೇಳಿಬರುತ್ತಿದೆ.
ಸಾಮಾನ್ಯ ಜನರು ಟಿಕೆಟ್ಗಾಗಿ ಪರದಾಡುತ್ತಿರುವಾಗ, ಉಚಿತ ಪಾಸ್ಗಳು ದುರ್ಬಳಕೆಯಾಗುತ್ತಿರುವುದು ಜನರಲ್ಲಿ ಆಕ್ರೋಶಕ್ಕೂ ಕಾರಣವಾಗಿದೆ. ಇದೀಗ KSCA ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂಬ ಒತ್ತಡ ಹೆಚ್ಚಾಗಿದೆ.
ದೇಶ
ಎನ್ಎಂಎಸಿಸಿ ವೇದಿಕೆಯಲ್ಲಿ ನೀತಾ ಅಂಬಾನಿ ಸೀರೆ ಸದ್ದು: ಐವರಿ-ಗೋಲ್ಡ್ ಲುಕ್ ವೈರಲ್
ಮುಂಬೈನಲ್ಲಿ ನಡೆದ NMACC third anniversary ಕಾರ್ಯಕ್ರಮದಲ್ಲಿ ನೀತಾ ಅಂಬಾನಿ ಅವರು ತಮ್ಮ ವೈಭವಶಾಲಿ ಸೀರೆ ಲುಕ್ ಮೂಲಕ ಮತ್ತೆ ಗಮನ ಸೆಳೆದಿದ್ದಾರೆ. ಭಾರತೀಯ ಸಂಸ್ಕೃತಿ ಮತ್ತು ಸಾಂಪ್ರದಾಯಿಕತೆಗೆ ಪ್ರತೀಕವಾಗಿರುವ ಅವರ ಶೈಲಿ ಫ್ಯಾಷನ್ ಪ್ರಿಯರ ಮೆಚ್ಚುಗೆಗೆ ಪಾತ್ರವಾಗಿದೆ.
ಈ ವಿಶೇಷ ಕಾರ್ಯಕ್ರಮಕ್ಕೆ ಪತಿ ಮುಕೇಶ್ ಅಂಬಾನಿ ಅವರೊಂದಿಗೆ ಆಗಮಿಸಿದ ನೀತಾ, ಐವರಿ-ಗೋಲ್ಡ್ ಕಾಂಜೀವರಂ ರೇಷ್ಮೆ ಸೀರೆಯನ್ನು ಧರಿಸಿದ್ದರು. ಹೊನ್ನಿನ ನೂಲುಗಳಿಂದ ನೇಯ್ದ ಈ ಸೀರೆಗೆ ಮರೂನ್ ಕೆಂಪು ಅಂಚು ಹೆಚ್ಚುವರಿ ಶೋಭೆ ನೀಡಿತು.
ಈ ಸೀರೆ ಕೈಮಗ್ಗದಲ್ಲಿ ಪರಿಣಿತ ಕಲಾವಿದ ಆರ್. ವರಧನ್ ಅವರ ಕೈಚಳಕದಿಂದ ಮೂಡಿಬಂದಿದ್ದು, ಇದನ್ನು ತಯಾರಿಸಲು ಸುಮಾರು ನಾಲ್ಕು ತಿಂಗಳು ಸಮಯ ತೆಗೆದುಕೊಂಡಿದೆ. ಜರಿ ಕಸೂತಿ ಮತ್ತು ನಯವಾದ ಮೇಲ್ಮೈ ಈ ಸೀರೆಗೆ ವಿಶೇಷ ಮೌಲ್ಯ ನೀಡಿದೆ.
ಆಭರಣಗಳ ವಿಷಯದಲ್ಲಿ ನೀತಾ ಅಂಬಾನಿ ಬರ್ಮಾ ರೂಬಿ ಅಲಂಕೃತ ಚಿನ್ನದ ಮಾವಿನ ಸರ ಹಾಗೂ ಬಸ್ರಾ ಮುತ್ತಿನ ಕರ್ಣಾಭರಣ ಧರಿಸಿ ಸಾಂಪ್ರದಾಯಿಕತೆಗೆ ಆಧುನಿಕ ಸ್ಪರ್ಶ ನೀಡಿದ್ದಾರೆ.
ಕಾರ್ಯಕ್ರಮದ ವೇಳೆ ಅವರು ಭಾರತೀಯ ಕಲೆ ಮತ್ತು ಸಂಸ್ಕೃತಿಯ ಮಹತ್ವವನ್ನು ಒತ್ತಿ ಹೇಳಿ, “ಸಂಖ್ಯೆ 3”ರ ಸಾಂಸ್ಕೃತಿಕ ಅರ್ಥವನ್ನು ತ್ರಿಮೂರ್ತಿ, ತ್ರಿದೇವಿ ಮತ್ತು ತ್ರಿವೇಣಿ ಸಂಗಮದ ಉದಾಹರಣೆಗಳ ಮೂಲಕ ವಿವರಿಸಿದರು.
ಈ ಲುಕ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಭಾರತೀಯ ಹಸ್ತಕುಶಲತೆ ಮತ್ತು ಕಾಂಜೀವರಂ ಸೀರೆಗಳಿಗೆ ಜಾಗತಿಕ ಮಟ್ಟದಲ್ಲಿ ಮತ್ತೊಮ್ಮೆ ಮೆಚ್ಚುಗೆ ವ್ಯಕ್ತವಾಗಿದೆ.
ದೇಶ
ಟ್ರಂಪ್ ದೇಶದಲ್ಲಿ ಭಾರತೀಯರ ಸದ್ದು: ಮೇಯರ್ ರೇಸ್ನಲ್ಲಿ ತಮಿಳುನಾಡಿನ ಕುವರಿ
ಅಮೆರಿಕ ರಾಜಕೀಯದಲ್ಲಿ ಭಾರತೀಯರ ಪ್ರಭಾವ ದಿನೇದಿನೇ ಹೆಚ್ಚುತ್ತಿರುವ ಹಿನ್ನೆಲೆ, ಈಗ ಮತ್ತೊಬ್ಬ ಭಾರತೀಯ ಮೂಲದ ಯುವತಿ ಹೊಸ ಇತಿಹಾಸ ಬರೆಯಲು ಮುಂದಾಗಿದ್ದಾರೆ. ರಿನಿ ಸಂಪತ್ ಅವರು ವಾಷಿಂಗ್ಟನ್ ಡಿಸಿಯ ಮೇಯರ್ ಚುನಾವಣೆಯಲ್ಲಿ ಸ್ಪರ್ಧಿಸಿ ಎಲ್ಲರ ಗಮನ ಸೆಳೆದಿದ್ದಾರೆ.
ಪ್ರಸ್ತುತ ವಾಷಿಂಗ್ಟನ್ ಡಿಸಿನಲ್ಲಿ ನಡೆಯುತ್ತಿರುವ ಚುನಾವಣೆಯಲ್ಲಿ, ರಿನಿ ಸಂಪತ್ ಪ್ರಾಥಮಿಕ ಮತಪತ್ರದಲ್ಲಿ ಕಾಣಿಸಿಕೊಂಡ ಮೊದಲ ದಕ್ಷಿಣ ಏಷ್ಯಾದ ಅಭ್ಯರ್ಥಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರು ಡೆಮಾಕ್ರಟಿಕ್ ಪಕ್ಷದ ಪರವಾಗಿ ಸ್ಪರ್ಧಿಸುತ್ತಿದ್ದಾರೆ.
ತಮಿಳುನಾಡಿನ ಮೂಲದ 31 ವರ್ಷದ ರಿನಿ, ಏಳನೇ ವಯಸ್ಸಿನಲ್ಲಿ ಅಮೆರಿಕಕ್ಕೆ ವಲಸೆ ಹೋಗಿ, ಕಳೆದ ದಶಕಕ್ಕೂ ಹೆಚ್ಚು ಕಾಲ ಡಿಸಿಯಲ್ಲಿ ನೆಲೆಸಿದ್ದಾರೆ. ಪ್ರಸ್ತುತ ಸರ್ಕಾರಿ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿರುವ ಅವರು, ತಮ್ಮ ಪ್ರಚಾರವನ್ನು ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರೀಕರಿಸಿದ್ದಾರೆ.
“ಮೊದಲಿಗೆ ನಾನು ರಾಜಕಾರಣಿಯಲ್ಲ. ಯಾವುದೇ ಒಂದು ಪಕ್ಷದೊಂದಿಗೆ ನನಗೆ ಸಂಬಂಧವಿಲ್ಲ. ನಮ್ಮ ನಗರದ ಮೂಲಭೂತ ಸೇವೆಗಳನ್ನು ಸುಧಾರಿಸುವುದು ನನ್ನ ಗುರಿ,” ಎಂದು ಅವರು ತಮ್ಮ ವೆಬ್ಸೈಟ್ನಲ್ಲಿ ತಿಳಿಸಿದ್ದಾರೆ.
ಡಿಸಿಯ ಮೇಯರ್ ಆಗಿ ಆಯ್ಕೆಯಾದರೆ, ರಸ್ತೆಗಳಲ್ಲಿ ಇರುವ ಗುಂಡಿಗಳನ್ನು ಸರಿಪಡಿಸುವುದು, ಪೊಟೊಮ್ಯಾಕ್ ನದಿಗೆ ಕೊಳಚೆನೀರು ಸೇರುವುದನ್ನು ತಡೆಯುವುದು ಹಾಗೂ ಜೀವನ ವೆಚ್ಚವನ್ನು ಕಡಿಮೆ ಮಾಡುವುದನ್ನು ಮೊದಲ ಆದ್ಯತೆಯಾಗಿ ಇಡುವುದಾಗಿ ಹೇಳಿದ್ದಾರೆ.
ರಿನಿ ಸಂಪತ್ ಸ್ಪರ್ಧೆ, ಅಮೆರಿಕ ರಾಜಕೀಯದಲ್ಲಿ ಭಾರತೀಯ ಮೂಲದ ಮಹಿಳೆಯರ ಪ್ರಭಾವವನ್ನು ಮತ್ತಷ್ಟು ಬಲಪಡಿಸುವ ಸೂಚನೆಯಾಗಿದೆ.
-
ದೇಶ1 hour ago“ಚಾಮರಾಜಪೇಟೆಗೆ ಬಂದ್ರೆ ಸುಮ್ಮನೆ ಇರ್ತಿನಾ?”: ಜಮೀರ್ ಟಾಂಗ್, ದಾವಣಗೆರೆ ರಾಜಕೀಯ ಕುತೂಹಲ
-
ದೇಶ1 hour agoಕಾಗದ-ಇಂಕ್ ಬೆಲೆ ಏರಿಕೆ: ಪ್ರಿಂಟಿಂಗ್ ಪ್ರೆಸ್ಗಳಿಗೆ ಶಾಕ್
-
ದೇಶ37 minutes agoಎನ್ಎಂಎಸಿಸಿ ವೇದಿಕೆಯಲ್ಲಿ ನೀತಾ ಅಂಬಾನಿ ಸೀರೆ ಸದ್ದು: ಐವರಿ-ಗೋಲ್ಡ್ ಲುಕ್ ವೈರಲ್
-
ದೇಶ1 hour ago‘I Love My Daughter’ ಟೀ ಶರ್ಟ್ನಲ್ಲಿ ಸಂಭ್ರಮ: ವಿಚ್ಛೇದನಕ್ಕೆ ಹೊಸ ಅರ್ಥ ನೀಡಿದ ಕುಟುಂಬ
-
ದೇಶ1 hour agoIndian Railways: ರೈಲಲ್ಲೇ ಮದುವೆ ಸಂಭ್ರಮ: Indian Railwaysನಲ್ಲಿ ಹೊಸ ಟ್ರೆಂಡ್!
-
ದೇಶ57 minutes agoಟ್ರಂಪ್ ದೇಶದಲ್ಲಿ ಭಾರತೀಯರ ಸದ್ದು: ಮೇಯರ್ ರೇಸ್ನಲ್ಲಿ ತಮಿಳುನಾಡಿನ ಕುವರಿ
-
ಕ್ರೀಡೆ23 minutes agoಐಪಿಎಲ್ ಟಿಕೆಟ್ ದುರ್ಬಳಕೆ: ಶಾಸಕರ ಪಾಸ್ ಸ್ನೇಹಿತರ ಕೈಗೆ!
