ದೇಶ
ಮುಂದೆ ಸ್ನೇಹದ ಹಸ್ತ, ಹಿಂದೆ ಬೆನ್ನಿಗೆ ಚೂರಿ! ಈ ಕಾರಣಕ್ಕೆ ಭಾರತ ಅಂದ್ರೆ ಉರಿದು ಬೀಳ್ತಿರೋ ಟ್ರಂಪ್!

ಡೊನಾಲ್ಡ್ ಟ್ರಂಪ್ (Donald Trump) ಅಂದ್ರೆನೆ ವಿವಾದಗಳ ಸರದಾರ. ಅವರ ಮಾತುಗಳು, ಅವರ ನೀತಿಗಳು ಜಗತ್ತಿನ ಬಹಳಷ್ಟು ದೇಶಗಳಿಗೆ ತಲೆನೋವು ತಂದಿದೆ. ಅದರಲ್ಲೂ ಭಾರತದ (India) ಜೊತೆಗಿನ ಅವರ ಸಂಬಂಧ ಸ್ವಲ್ಪ ವಿಚಿತ್ರವಾಗಿದೆ. ಕೆಲವೊಮ್ಮೆ ಸ್ನೇಹದ ಹಸ್ತ ಚಾಚಿದ್ರೆ, ಇನ್ನೊಂದ್ಸಲ ಭಾರತದ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟು ಉರಿ ಉರಿ ಅನ್ನೋ ಹಾಗೆ ಮಾಡ್ತಾರೆ. ಭಾರತ-ಪಾಕ್ ನಡುವೆ ಬಂದು ನಾನೇ ಕದನ ವಿರಾಮ (Ceasefire) ಮಾಡಿಸಿದ್ದು ಅಂತ ಮೊದಲು ಹೇಳಿದ್ದರು. ಆದ್ರೆ ಇದ್ದಕ್ಕಿದ್ದ ಹಾಗೇ ಯೂಟರ್ನ್ ಹೊಡೆದುಬಿಟ್ರು. ನಾನು ಕದನ ವಿರಾಮ ಮಾಡಿಸಿಲ್ಲ ಅಂತ ಹೇಳಿದ್ರು. ಇದೆಲ್ಲ ನೋಡ್ತಿದ್ರೆ ಟ್ರಂಪ್ ಯಾಕೋ ಭಾರತಕ್ಕೆ ಪರೋಕ್ಷವಾಗಿ ಬೆನ್ನಿಗೆ ಚೂರಿ ಹಾಕ್ತಿದ್ದಾರೆ ಅನ್ನೋ ಪ್ರಶ್ನೆಗಳು ಎದ್ದಿವೆ.
ಡೊನಾಲ್ಡ್ ಟ್ರಂಪ್ ಅಮೆರಿಕಾದ ಅಧ್ಯಕ್ಷರಾಗಿದ್ದಾಗ ಭಾರತ ಮತ್ತೆ ಅಮೆರಿಕಾ ನಡುವಿನ ವ್ಯಾಪಾರ ಸಂಬಂಧದಲ್ಲಿ ಬಹಳಷ್ಟು ಏರಿಳಿತಗಳು ಆಗಿದ್ದವು. ಟ್ರಂಪ್ ಅವರು ಭಾರತದ ವ್ಯಾಪಾರ ನೀತಿಗಳ ಬಗ್ಗೆ ಪದೇ ಪದೇ ಟೀಕೆ ಮಾಡ್ತಿದ್ರು. ಭಾರತ ಅಮೆರಿಕಾದ ವಸ್ತುಗಳ ಮೇಲೆ ಹೆಚ್ಚು ಸುಂಕ (ಟ್ಯಾರಿಫ್) ವಿಧಿಸುತ್ತೆ ಅಂತ ಅವರ ಆರೋಪ. ಆದ್ರೆ ಭಾರತ ಮಾತ್ರ ಇದಕ್ಕೆ ತಲೆಬಾಗಲಿಲ್ಲ. ಅಮೆರಿಕಾ ಹೇಳಿದ ಹಾಗೆಲ್ಲಾ ಒಪ್ಪಿಕೊಳ್ಳಲಿಲ್ಲ.
ಆದ್ರೆ ಚೀನಾ ಮಾತ್ರ ಅಮೆರಿಕಾ ಹೇಳಿದ ಹಾಗೆಲ್ಲಾ ಒಪ್ಪಿಕೊಂಡಿತ್ತು. ಟ್ರಂಪ್ ಒತ್ತಡಕ್ಕೆ ಮಣಿದು ಚೀನಾ ತನ್ನ ವ್ಯಾಪಾರ ನೀತಿಗಳಲ್ಲಿ ಬದಲಾವಣೆ ತಂದಿತ್ತು. ಆದ್ರೆ ಭಾರತ ಮಾತ್ರ ತನ್ನ ನಿಲುವಿಗೆ ಬದ್ಧವಾಗಿತ್ತು. ಇದು ಟ್ರಂಪ್ಗೆ ಸ್ವಲ್ಪ ಬೇಸರ ತರಿಸಿತ್ತು. ಅದಕ್ಕೆ ಅವರು ಪರೋಕ್ಷವಾಗಿ ಭಾರತಕ್ಕೆ ಟಾಂಗ್ ಕೊಡೋಕೆ ಶುರು ಮಾಡಿದ್ರು.
ಟ್ರಂಪ್ ಪ್ರಕಾರ, ಭಾರತ ಅಮೆರಿಕಾದ ವಸ್ತುಗಳ ಮೇಲೆ ವಿಧಿಸುವ ಸುಂಕ ತುಂಬಾನೇ ಜಾಸ್ತಿ. ಇದರಿಂದ ಅಮೆರಿಕಾದ ಕಂಪನಿಗಳು ಭಾರತದಲ್ಲಿ ವ್ಯಾಪಾರ ಮಾಡೋಕೆ ಕಷ್ಟವಾಗುತ್ತೆ ಅಂತ ಅವರು ಹೇಳ್ತಿದ್ರು. ಅಷ್ಟೇ ಅಲ್ಲ, ಭಾರತ ಅಮೆರಿಕಾದಿಂದ ಆಮದು ಮಾಡಿಕೊಳ್ಳೋ ವಸ್ತುಗಳ ಮೇಲೆ ಹೆಚ್ಚು ಸುಂಕ ವಿಧಿಸಿ, ಅಮೆರಿಕಾದ ಮಾರುಕಟ್ಟೆಗೆ ಭಾರತದ ವಸ್ತುಗಳು ಸುಲಭವಾಗಿ ಬರೋ ಹಾಗೆ ಮಾಡ್ತಿದೆ ಅಂತ ಅವರು ಆರೋಪಿಸಿದ್ರು.
ವ್ಯಾಪಾರದ ಬಗ್ಗೆ ಕಿರಿಕ್!
ಟ್ರಂಪ್ ಅವರಿಗೆ ಭಾರತದ ವ್ಯಾಪಾರ ನೀತಿಗಳು ಇಷ್ಟವಾಗಲ್ಲ. ಯಾಕಂದ್ರೆ ಅವರ ಪ್ರಕಾರ ಭಾರತ ಅಮೆರಿಕಾದ ವಸ್ತುಗಳ ಮೇಲೆ ಬಹಳಷ್ಟು ಸುಂಕ ವಿಧಿಸುತ್ತೆ. ಅಮೆರಿಕಾ-ಭಾರತದ ನಡುವಿನ ವ್ಯಾಪಾರದಲ್ಲಿ ಅಸಮತೋಲನ ಇದೆ ಅಂತ ಅವರು ಪದೇ ಪದೇ ಹೇಳ್ತಾರೆ.
ಅವರ ಆಡಳಿತದ ಟೈಮಲ್ಲಿ ಭಾರತದಿಂದ ಅಮೆರಿಕಾಗೆ ಹೋಗೋ ಕೆಲವು ವಸ್ತುಗಳ ಮೇಲೆ ಸಿಗ್ತಿದ್ದ ವ್ಯಾಪಾರ ಸೌಲಭ್ಯಗಳನ್ನ ರದ್ದು ಮಾಡಿದ್ರು. ಇದರಿಂದ ಎರಡೂ ದೇಶಗಳ ನಡುವಿನ ವ್ಯಾಪಾರ ಸಂಬಂಧದಲ್ಲಿ ಸ್ವಲ್ಪ ಬಿರುಕು ಬಿತ್ತು.
ಭಾರತ ಮತ್ತೆ ಪಾಕಿಸ್ತಾನದ ನಡುವೆ ಕಾಶ್ಮೀರ ವಿವಾದದ ಬಗ್ಗೆ ಟ್ರಂಪ್ ಕೊಡುವ ಹೇಳಿಕೆಗಳು ಭಾರತದಲ್ಲಿ ಬಹಳಷ್ಟು ವಿವಾದ ಸೃಷ್ಟಿಸಿವೆ. ಅದರಲ್ಲೂ ಅವರು ಈ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸೋಕೆ ಬಂದಾಗ ಭಾರತಕ್ಕೆ ಉರಿ ಉರಿ ಅನ್ನೋ ಹಾಗಾಯಿತು. ಯಾಕಂದ್ರೆ ಕಾಶ್ಮೀರ ಭಾರತ ಮತ್ತೆ ಪಾಕಿಸ್ತಾನದ ನಡುವಿನ ದ್ವಿಪಕ್ಷೀಯ ವಿಷಯ, ಇದರಲ್ಲಿ ಮೂರನೇ ವ್ಯಕ್ತಿ ತಲೆ ಹಾಕೋದು ಭಾರತಕ್ಕೆ ಇಷ್ಟವಿಲ್ಲ.
ಇತ್ತೀಚೆಗೆ ಟ್ರಂಪ್ ಭಾರತದ ವ್ಯಾಪಾರ ನೀತಿಗಳ ಬಗ್ಗೆ ಮತ್ತೆ ಮಾತಾಡಿದ್ದಾರೆ. ಭಾರತದ ಸುಂಕಗಳು ಮತ್ತೆ ಆಪಲ್ ಕಂಪನಿ ಭಾರತದಲ್ಲಿ ಉತ್ಪಾದನೆ ಮಾಡ್ತಿರೋದರ ಬಗ್ಗೆ ಅವರ ಅಭಿಪ್ರಾಯಗಳನ್ನ ವ್ಯಕ್ತಪಡಿಸಿದ್ದಾರೆ. ಈ ಮಾತುಗಳು ಭಾರತದಲ್ಲಿ ಬಹಳಷ್ಟು ಚರ್ಚೆಗೆ ಕಾರಣವಾಗಿವೆ. ಇವೆಲ್ಲಾ ಕಾರಣಗಳಿಂದ ಭಾರತದ ಕೆಲವರಿಗೆ ಟ್ರಂಪ್ ಬಗ್ಗೆ ಅಸಮಾಧಾನ ಇದೆ. ಆದ್ರೆ ಟ್ರಂಪ್ ಅವರ ಮಾತುಗಳು ಕೆಲವೊಮ್ಮೆ ರಾಜಕೀಯ ಲಾಭಕ್ಕೋಸ್ಕರ ಇರುತ್ತೆ. ಆದ್ರೆ ಭಾರತದ ಜೊತೆಗಿನ ಸಂಬಂಧ ಅವರಿಗೆ ಮುಖ್ಯ ಅನ್ನೋದು ಕೂಡಾ ನಿಜ.
ಹಾಗಾಗಿ ಟ್ರಂಪ್ ಅವರ ಮಾತುಗಳನ್ನ ಬಹಳಷ್ಟು ಜನ ಗಂಭೀರವಾಗಿ ತಗೊಳಲ್ಲ. ಯಾಕಂದ್ರೆ ಅವರ ಮಾತುಗಳು ಯಾವಾಗ ಬೇಕಾದ್ರೂ ಬದಲಾಗಬಹುದು ಅನ್ನೋದು ಎಲ್ಲರಿಗೂ ಗೊತ್ತಿದೆ. ಆದ್ರೆ ಭಾರತದ ಜೊತೆಗಿನ ಅವರ ವ್ಯಾಪಾರ ಸಂಬಂಧಗಳು ಮಾತ್ರ ಯಾವಾಗ್ಲೂ ಚರ್ಚೆಗೆ ಗ್ರಾಸವಾಗ್ತಾನೆ ಇರುತ್ತೆ.
ದೇಶ
ನವರಾತ್ರಿ ಸಮಯದಲ್ಲಿ ವಿಮಾನ ನಿಲ್ದಾಣಗಳಲ್ಲಿ ಭಯೋತ್ಪಾದಕ ದಾಳಿ ಎಚ್ಚರಿಕೆ – ಭದ್ರತೆ ಬಿಗಿ ಕ್ರಮ
ಭಾರತದ ಪ್ರಮುಖ ವಿಮಾನ ನಿಲ್ದಾಣಗಳ ಮೇಲೆ ನವರಾತ್ರಿಯ ವೇಳೆ ಭಯೋತ್ಪಾದಕ ದಾಳಿಯ ಅಪಾಯವಿರುವ ಬಗ್ಗೆ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿದ್ದು, ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮ ಜಾರಿಯಲ್ಲಿದೆ.
ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ (BCAS) ಆಗಸ್ಟ್ 4ರಂದು ಎಚ್ಚರಿಕೆ ಪ್ರಕಟಿಸಿ, ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ ಭಯೋತ್ಪಾದನೆ ಅಥವಾ ಸಮಾಜ ವಿರೋಧಿ ಶಕ್ತಿಗಳಿಂದ ದಾಳಿ ಸಂಭವಿಸಬಹುದೆಂದು ಸೂಚಿಸಿದೆ.
🕵️ ಗುಪ್ತಚರ ಮೂಲದ ಮಹತ್ವದ ಎಚ್ಚರಿಕೆ:
ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳು ದಾಳಿಗೆ ಸಿದ್ಧತೆ ನಡೆಸುತ್ತಿವೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಎಲ್ಲಾ ವಿಮಾನ ನಿಲ್ದಾಣಗಳು, ಏರ್ಸ್ಟ್ರಿಪ್ಗಳು, ಹೆಲಿಪ್ಯಾಡ್ಗಳು ಮತ್ತು ತರಬೇತಿ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳಾಗಿ ಈ ಕೆಳಗಿನ ಕ್ರಮಗಳು ಜಾರಿಗೆ ಬಂದಿವೆ:
- ಸಿಬ್ಬಂದಿ ಮತ್ತು ಸಂದರ್ಶಕರ ಗುರುತಿನ ಪರಿಶೀಲನೆ
- ಸಿಸಿಟಿವಿ ಕಣ್ಗಾವಲು ಬಿಗಿತ
- ಸರಕು, ಪಾರ್ಸೆಲ್ ಮತ್ತು ಮೇಲ್ಗಳ ತಪಾಸಣೆ
- ಸ್ಥಳೀಯ ಪೊಲೀಸ್ ಮತ್ತು ಭದ್ರತಾ ಸಂಸ್ಥೆಗಳೊಂದಿಗೆ ಸಹಕಾರ
🇮🇳 ರಾಷ್ಟ್ರೀಯ ಭದ್ರತೆಗೆ ಒತ್ತು:
ದೆಹಲಿ, ಮುಂಬೈ, ಬೆಂಗಳೂರು ಮತ್ತು ಚೆನ್ನೈ ಸೇರಿದಂತೆ ಪ್ರಮುಖ ವಿಮಾನ ನಿಲ್ದಾಣಗಳು ಈ ಕ್ರಮಗಳನ್ನು ಜಾರಿಗೊಳಿಸುತ್ತಿದ್ದು, ಪ್ರಯಾಣಿಕರು ತಮ್ಮ ಗುರುತಿನ ದಾಖಲೆಗಳನ್ನು ಸಿದ್ಧವಾಗಿಡಬೇಕು. ತಪಾಸಣೆ ವಿಳಂಬದ ಸಾಧ್ಯತೆಯಿರುವುದರಿಂದ ಸಹಕಾರ ನೀಡುವಂತೆ BCAS ಮನವಿ ಮಾಡಿದೆ.
ದೇಶ
ಅಮೆರಿಕ-ರಷ್ಯಾ ವ್ಯವಹಾರ: ಭಾರತದ ಟೀಕೆಗೆ ಟ್ರಂಪ್ ನುಣುಚು ಪ್ರತಿಕ್ರಿಯೆ
ವಾಷಿಂಗ್ಟನ್: ರಷ್ಯಾದಿಂದ ಈಗಲೂ ವ್ಯವಹಾರ ನಡೆಸುತ್ತಿರುವ ಅಮೆರಿಕದ ಕುರಿತಾಗಿ ಭಾರತ ಮಾಡಿರುವ ಗಂಭೀರ ಆರೋಪಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನುಣುಚು ಪ್ರತಿಕ್ರಿಯೆ ನೀಡಿದ್ದಾರೆ.
ಭಾರತ ಆರೋಪಿಸಿದಂತೆ, ಅಮೆರಿಕ 2024ರಲ್ಲಿ 1.1 ಶತಕೋಟಿ ಡಾಲರ್ ಮೌಲ್ಯದ ರಸಗೊಬ್ಬರ, 878 ಮಿಲಿಯನ್ ಡಾಲರ್ ಮೌಲ್ಯದ ಪಲ್ಲಾಡಿಯಮ್ ಸೇರಿದಂತೆ ಹಲವು ಅಮೂಲ್ಯ ಲೋಹಗಳನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಯುರೇನಿಯಂ ಹೆಕ್ಸಾಫ್ಲೋರೈಡ್ನಂತಹ ಪರಮಾಣು ಉತ್ಪನ್ನಗಳ ಆಮದು ಕೂಡ ಮುಂದುವರಿದಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಟ್ರಂಪ್, “ನನಗೆ ಈ ವ್ಯಾಪಾರದ ವಿವರಗಳು ತಿಳಿದಿಲ್ಲ, ನಾನು ಪರಿಶೀಲನೆ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.
ಭಾರತದ ಖಡಕ್ ಪ್ರತಿಕ್ರಿಯೆ:
ಭಾರತ, ತನ್ನ ರಷ್ಯಾ ತೈಲ ಆಮದು ಬಗ್ಗೆ ಅಮೆರಿಕದ ಟೀಕೆಗೆ ಅಂಕಿ-ಅಂಶಗಳೊಂದಿಗೆ ತಿರುಗೇಟು ನೀಡಿದೆ. ಯುರೋಪ್ ದೇಶಗಳೇ ರಷ್ಯಾದಿಂದ ಭಾರಿ ಪ್ರಮಾಣದಲ್ಲಿ ಎಲ್ಎನ್ಜಿ, ರಸಗೊಬ್ಬರ, ಲೋಹಗಳನ್ನು ಆಮದು ಮಾಡಿಕೊಳ್ಳುತ್ತಿವೆ. 2024ರಲ್ಲಿ ಯುರೋಪಿಯನ್ ಒಕ್ಕೂಟವು 67.5 ಬಿಲಿಯನ್ ಯುರೋಗಳಷ್ಟು ಸರಕು ವ್ಯಾಪಾರ ಹಾಗೂ 17.2 ಬಿಲಿಯನ್ ಯುರೋಗಳಷ್ಟು ಸೇವಾ ವ್ಯಾಪಾರವನ್ನು ರಷ್ಯಾ ಜೊತೆ ನಡೆಸಿದೆ.
ಟ್ರಂಪ್ ಅವರ ಆರೋಪ:
ಟ್ರಂಪ್ ಹೇಳುವಂತೆ, ಭಾರತ ರಷ್ಯಾದ ತೈಲವನ್ನು ಖರೀದಿ ಮಾಡುತ್ತಿದ್ದು, ಅದನ್ನು ಮುಕ್ತ ಮಾರುಕಟ್ಟೆಯಲ್ಲಿ ಲಾಭಕ್ಕಾಗಿ ಮಾರಾಟ ಮಾಡುತ್ತಿದೆ. ಅವರು ಈ ಕಾರಣಕ್ಕಾಗಿ ಭಾರತದಿಂದ ಸಂಗ್ರಹಿಸಬೇಕಾದ ಸುಂಕವನ್ನು ಹೆಚ್ಚಿಸುವುದಾಗಿ ಹೇಳಿದ್ದಾರೆ.
ಭಾರತದ ನಿಲುವು:
ಭಾರತ, ತನ್ನ ರಾಷ್ಟ್ರೀಯ ಹಿತಾಸಕ್ತಿಗಳನ್ನು ಕಾಪಾಡುವ ಸಲುವಾಗಿ ಕಚ್ಚಾ ತೈಲವನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಇಂಧನದ ದರಗಳನ್ನು ಜನತೆಗೆ ಕೈಗೆಟುಕುವಂತೆ ಇರಿಸಲು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಕ್ರೀಡೆ
ರಿಷಭ್ ಪಂತ್ ಮಾನವೀಯತೆ: ಬಡ ವಿದ್ಯಾರ್ಥಿನಿಗೆ BCA ಪ್ರವೇಶಕ್ಕೆ ₹40,000 ನೆರವು!
ಬಾಗಲಕೋಟೆ: ಟೀಂ ಇಂಡಿಯಾದ ವಿಕೆಟ್ ಕೀಪರ್ ಹಾಗೂ ತೀಕ್ಷ್ಣ ಬ್ಯಾಟ್ಸ್ಮನ್ ರಿಷಭ್ ಪಂತ್ ಅವರು ಕ್ರೀಡಾಕ್ಷೇತ್ರದಷ್ಟೇ ದಾನಶೀಲತೆಯಲ್ಲೂ ಮಾದರಿಯಾಗಿದ್ದಾರೆ. ಇತ್ತೀಚೆಗೆ ಅವರು ಬಾಗಲಕೋಟೆ ಜಿಲ್ಲೆಯ ಬಡ ವಿದ್ಯಾರ್ಥಿನಿಯೊಬ್ಬಳಿಗೆ ಆರ್ಥಿಕ ನೆರವು ನೀಡಿ ಜನಮನ ಗೆದ್ದಿದ್ದಾರೆ.
ಬೀಳಗಿ ತಾಲ್ಲೂಕಿನ ರಬಕವಿ ಗ್ರಾಮದ ಜ್ಯೋತಿ ಕಣಬೂರಮಠ ದ್ವಿತೀಯ ಪಿಯುಸಿಯಲ್ಲಿ 85% ಅಂಕ ಗಳಿಸಿದ್ದರೂ, ಮನೆ ಪರಿಸ್ಥಿತಿಯಿಂದ BCA ಕೋರ್ಸ್ಗೆ ಸೇರುವ ಕನಸು ತೊಡೆತಗೊಂಡಿತ್ತು. ತಂದೆ ಚಿಕ್ಕ ಟೀ ಅಂಗಡಿ ನಡೆಸುವವರಾಗಿದ್ದು ಶುಲ್ಕ ಪಾವತಿಸಲು ಸಾಧ್ಯವಾಗಿರಲಿಲ್ಲ.
ಇದನ್ನು ಗುತ್ತಿಗೆದಾರ ಅನಿಲ್ ಹುಣಸಿಕಟ್ಟಿ ಅವರು ಗಮನಿಸಿ, ತಮ್ಮ ಸಂಪರ್ಕಗಳಿಂದ ರಿಷಭ್ ಪಂತ್ ಅವರ ಗಮನಕ್ಕೆ ತಂದರು. ಇದನ್ನು ಕೇಳಿದ ಪಂತ್, ಜುಲೈ 17ರಂದು ₹40,000 ನೇರವಾಗಿ BLDE ಕಾಲೇಜಿನ ಖಾತೆಗೆ ವರ್ಗಾಯಿಸಿ, ಜ್ಯೋತಿಯ ಮೊದಲ ಸೆಮಿಸ್ಟರ್ ಶುಲ್ಕವನ್ನು ಭರಿಸಿದರು.
ಜ್ಯೋತಿ ಎಮೋಶನಲ್ ಆಗಿ, “ರಿಷಭ್ ಪಂತ್ ಸಹಾಯದಿಂದ ನನ್ನ ಕನಸು ಸಾಧ್ಯವಾಯಿತು. ಅವರಿಗೆ ದೇವರು ಆಯುಷ್ಯ ಕೊಡಲಿ,” ಎಂದಿದ್ದಾರೆ.
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು2 years ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು8 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ಕ್ರೀಡೆ2 months ago
ಇಂದು ಐಪಿಎಲ್ ಫೈನಲ್- ಆರ್ಸಿಬಿಗೆ ಶುಭಕೋರಿದ ಎಸ್ಟಿಎಸ್!