ದೇಶ

ಆಪರೇಷನ್ ಸಿಂಧೂರ್ ಬಗ್ಗೆ ಅವಹೇಳನಕಾರಿ ಹೇಳಿಕೆ- ಶಾಸಕ ಕೊತ್ತೂರು ಮಂಜು ವಿರುದ್ದ ದೂರು ದಾಖಲು!

ಬೆಂಗಳೂರು: ಆಪರೇಷನ್ ಸಿಂಧೂರ್ ಹಾಗೂ ಭಾರತೀಯ ಸೇನೆ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿರುವ ದೂರಿನಲ್ಲಿ ಕಾಶ್ಮೀರದ ಪಹಲ್ಗಾಮ್ ನಲ್ಲಿ 26 ಮಂದಿ ಹಿಂದೂ ಪುರಷರನ್ನು ಅವರ ಕುಟುಂಬದವರ ಸಮ್ಮುಖದಲ್ಲೇ ಹತ್ಯೆ ಮಾಡಿದ್ದ ಪಾಕಿಸ್ತಾನ ಉಗ್ರರಿಗೆ ಸಂಬಂಧಿಸಿದಂತೆ ಭಾರತವು ಆಪರೇಷನ್ ಸಿಂಧೂರ್ ಹೆಸರಿನಲ್ಲಿ ನಡೆಸಿದ ಮಿಲಿಟರಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ 09 ಉಗ್ರ ನೆಲೆಗಳನ್ನು ಮತ್ತು 08 ವಾಯು ನೆಲೆಗಳನ್ನು ನಾಶ ಮಾಡಿದ್ದಲ್ಲದೇ ಪಾಕಿಸ್ತಾನಕ್ಕೆ ಸೇರಿದ ಎಫ್ 16 ಯುದ್ಧ ವಿಮಾನ ಹಾಗೂ ಚೀನಾ ದೇಶದ ಕ್ಷಿಪಣಿಗಳನ್ನು ಮತ್ತು ಡ್ರೋನ್ ಗಳನ್ನ ನಾಶ ಮಾಡಿದ ಭಾರತೀಯ ಸೇನೆಯ ಪರಾಕ್ರಮಕ್ಕೆ ಇಡೀ ವಿಶ್ವದಾದ್ಯಂತ ಪ್ರಶಂಸೆ ವ್ಯಕ್ತವಾಗುತ್ತಿರುವ ಈ ಸನ್ನಿವೇಶದಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೊತ್ತೂರು ಮಂಜುನಾಥ್ ರವರು ದಿನಾಂಕ 16/5/2025 ರ ಶುಕ್ರವಾರದಂದು ಮಾಧ್ಯಮಗಳೊಂದಿಗೆ ಮಾತನಾಡುತ್ತ ಭಾರತೀಯ ಸೇನೆ 4 ವಿಮಾನಗಳನ್ನು ಅತ್ತಿಂದ ಇತ್ತ ಅತ್ತ ಹಾರಾಡಿಸಿ ಬಡಾಯಿಕೊಚ್ಚಿಕೊಳ್ಳುತ್ತಿದೆ, ಪಾಕಿಸ್ತಾನದ ಮೇಲೆ ಭಾರತೀಯ ಸೇನೆ ನಡೆಸಿರುವ ದಾಳಿಗೆ ಸಾಕ್ಷ್ಯಗಳೇನು? ಎಂಬ ಹೇಳಿಕೆ ನೀಡುವ ಮೂಲಕ ಭಾರತ ದೇಶಕ್ಕೆ ಮತ್ತು ಭಾರತೀಯ ಸೇನೆಗೆ ಕಳಂಕ ಹಚ್ಚುವ ಮಾತುಗಳನ್ನಾಡಿ ದೇಶದ್ರೋಹದ ಕಾರ್ಯವನ್ನು ಎಸಗಿರುತ್ತಾರೆ ಎಂದು ಆರೋಪಿಸಲಾಗಿದೆ,
ತಮ್ಮ ದೇಶದ್ರೋಹದ ಮಾತುಗಳ ಮೂಲಕ 140 ಕೋಟಿ ಭಾರತೀಯರ ಭಾವನೆಗಳಿಗೆ ದಕ್ಕೆ ತಂದಿರುವ ಹಾಗೂ ಬಹಿರಂಗವಾಗಿ ಭಾರತ ದೇಶ ಮತ್ತು ಭಾರತೀಯ ಸೇನೆಗೆ ಅವಮಾನಕರ ಮಾತುಗಳನ್ನಾಡಿ ದೇಶದ್ರೋಹದ ಕಾರ್ಯವನ್ನೆಸಗಿರುವ ಶಾಸಕ ಕೊತ್ತೂರು ಮಂಜುನಾಥ್ ಅವರ ವಿರುದ್ಧ ಕೂಡಲೇ ದೇಶದ್ರೋಹದ ಪ್ರಕರಣ ಮತ್ತು ಕ್ರಿಮಿನಲ್ ಪ್ರಕರಣವನ್ನು ದಾಖಲಿಸುವ ಸಂಬಂಧ ಕಾನೂನು ರೀತಿ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸಮಿತಿ ಆಗ್ರಹಿಸಿದೆ,

Leave a Reply

Your email address will not be published. Required fields are marked *

Trending

Exit mobile version