ಬೆಂಗಳೂರು
ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್ ಕರ್ನಾಟಕ ಭವನ ವರ್ಷಾಂತ್ಯಕ್ಕೆ ಪೂರ್ಣ

ಬೆಂಗಳೂರು: ತಿರುಮಲದಲ್ಲಿ ನಿರ್ಮಿಸಿತ್ತಿರುವ ಕರ್ನಾಟಕ ಭವನ ಡಿಸೆಂಬರ್ನಲ್ಲಿ ಉದಾಟನೆಯಾಗುವ ಸಾಧ್ಯತೆ ಇದೇ, ಇದರಿಂದಾಗಿ ರಾಜ್ಯದ ಯಾತ್ರಾರ್ಥಿಗಳಿಗೆ ಕಡಿಮೆ ದರದಲ್ಲೇ ಕೊಠಡಿಗಳು ಲಭ್ಯವಾಗಲಿದೆ, ರಾಜ್ಯ ಧಾರ್ಮಿಕ ದತ್ತಿ ಇಲಾಖೆಯಿಂದ ನಿರ್ಮಿಸಿರುವ ಈ ಭವನದಲ್ಲಿ ಭಕ್ತರಿಗೆ, ವಿಐಪಿಗಳಿಗೆ ಸಾಕಷ್ಟು ಅನುಕುಲವಾಗುವ ಕೊಠಡಿಗಳು ನಿರ್ಮಿಸಲಾಗುತ್ತಿದೆ
ರಾಜ್ಯ ಸರ್ಕಾರ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಅವರ ನೇತೃತ್ವದ ಸರ್ಕಾರ 220 ಕೋಟಿ ವೆಚ್ಚದಲ್ಲಿ ಟಿಟಿಡಿ, ಆಂಧ್ರ ಸರ್ಕಾರದ ಸಹಕಾರದೊಂದಿಗೆ ಕಾಮಗಾರಿ ಆರಂಭಿಸಿತ್ತು, 24 ತಿಂಗಳ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳ್ಳುವ ಹಂತಕ್ಕೆ ಬಂದಿದ್ದು, ಡಿಸೆಂಬರ್ ವೇಳೆಗೆ ಉದ್ಘಾಟನೆಯಾಗುವ ಸಾಧ್ಯತೆ ಇದೇ, ಕರ್ನಾಟಕ ಭವನದಲ್ಲಿ ವಸತಿ ಕೊಠಡಿಗಳೊಂದಿಗೆ ಕಲ್ಯಾಣ ಮಂಟಪ, ಊಟದ ಹಾಲ್ ಕೂಡ ನಿರ್ಮಿಸಲಾಗಿದೆ,
ಬೆಂಗಳೂರು
ಇಂದಿನಿಂದ ಮೂರು ದಿನಗಳ ಕಾಲ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಚಿಕ್ಕಬಳ್ಳಾಪುರ: ಜೂ.19ರಂದು ನಂದಿಗಿರಿಧಾಮದಲ್ಲಿ (Nandi Hills) ರಾಜ್ಯ ಸಚಿವ ಸಂಪುಟ (Cabinet Meeting) ಸಭೆ ನಡೆಯಲಿರುವ ಹಿನ್ನೆಲೆ ಇಂದಿನಿಂದ ಮೂರು ದಿನಗಳ ಕಾಲ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಈ ಕುರಿತು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಆದೇಶ ಹೊರಡಿಸಿದ್ದು, ಇಂದು ಸಂಜೆ 5 ಗಂಟೆಯಿಂದ ಜೂ.20ರ ಬೆಳಿಗ್ಗೆ 5 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಜೊತೆಗೆ ನಂದಿಗಿರಿಧಾಮದ ಮೇಲ್ಭಾಗದಲ್ಲಿರುವ ವಸತಿ ಕೊಠಡಿಗಳ ಬುಕಿಂಗ್ಗೂ ನಿಷೇಧ ವಿಧಿಸಿದ್ದಾರೆ.
ಇದೇ ಮೊದಲ ಬಾರಿಗೆ ನಂದಿಬೆಟ್ಟದಲ್ಲಿ ವಿಶೇಷ ಸಚಿವ ಸಂಪುಟ ನಡೆಯಲಿದ್ದು, ಸಭೆಗೆ ಬೇಕಾದ ಅಗತ್ಯ ಸಿದ್ಧತೆ ಸಲುವಾಗಿ ಮೂರು ದಿನಗಳ ಮೊದಲೇ ಪ್ರವಾಸಿಗರ ಪ್ರವೇಶ ಹಾಗೂ ವಾಹನಗಳ ಸಂಚಾರಕ್ಕೂ ಬ್ರೇಕ್ ಹಾಕಲಾಗಿದೆ.
ಸಚಿವ ಸಂಪುಟ ಸಭೆಗೆ ಸಿಎಂ, ಡಿಸಿಎಂ ಹಾಗೂ ಕರ್ನಾಟಕ ಸರ್ಕಾರದ ಸಚಿವ ಸಂಪುಟ ದರ್ಜೆಯ ಎಲ್ಲಾ ಮಂತ್ರಿಗಳು, ಶಾಸನ ಸಭಾ ಹಾಗೂ ವಿಧಾನಸಭಾ ಸದಸ್ಯರು, ಇಲಾಖಾ ಮುಖ್ಯಸ್ಥರು ಹಾಗೂ ಪತ್ರಕರ್ತರು ಆಗಮಿಸುತ್ತಿದ್ದಾರೆ. ಆದ್ದರಿಂದ ನಂದಿಗಿರಿಧಾಮಕ್ಕೆ ಹೋಗಲು ಮತ್ತು ಬರಲು ಒಂದೇ ರಸ್ತೆ ಇರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿರುತ್ತದೆ. ಜೊತೆಗೆ ನಂದಿಬೆಟ್ಟದಲ್ಲಿ ಕಡಿದಾದ ತಿರುವುಗಳಿಂದ ಕೂಡಿದ ರಸ್ತೆಗಳಲ್ಲಿ ವಾಹನ ಮತ್ತು ಪ್ರವಾಸಿಗರನ್ನು ನಿಯಂತ್ರಿಸುವುದು ಅತಿ ಕಷ್ಟಕರವಾಗಿರುತ್ತದೆ. ಅಪಘಾತಗಳಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಬೆಂಗಳೂರು
ನಮ್ಮ ಹೊಟ್ಟೆಯ ಮೇಲೆ ಹೊಡೆಯಬೇಡಿ ರಾಹುಲ್ ಗಾಂಧಿಗೆ ಅಸೋಸಿಯೇಷನ್ ಪತ್ರ!

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿಷೇಧಗೊಂಡಿದೆ, ಈ ಹಿನ್ನೆಲೆ ನಮ್ಮ ಬೈಕ್ ಟ್ಯಾಕ್ಸಿ ಅಸೋಸಿಯೇಷನ್ ಅಧ್ಯಕ್ಷ ಮೊಹಮ್ಮದ್ ಸಲೀಂ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದು ನಿಷೇಧ ಮಾಡಿದರುವಂತೆ ಮನವಿ ಮಾಡಿದ್ದಾರೆ,
ಲಕ್ಷಾಂತರ ಮಂದಿ ವಿದ್ಯಾರ್ಥಿಗಳು, ನಿರುದ್ಯೋಗಿಗಳು, ಪೋಷಕರು ಹಾಗೂ ದಿನಗೂಲಿ ಕಾರ್ಮಿಕರು ಬೈಕ್ ಟ್ಯಾಕ್ಸಿ ಸೇವೆಯಿಂದ ದಿನನಿತ್ಯ ಹೊಟ್ಟೆ ಹೊರೆದುಕೊಳ್ಳುತ್ತಿದ್ದಾರೆ, ಇವು ನಮ್ಮ ಬಿಡುವಿನ ವೇಳೆಯ ಕೆಲಸವಾಗಿರದೇ ಮೂಲ ಉದ್ಯೋಗವೇ ಆಗಿದೆ, ಈ ರೀತಿ ಏಕಾಏಕಿ ನಿಷೇಧ ಮಾಡುವುದರಿಂದ ನಮ್ಮ ಕುಟುಂಬಗಳು ಬೀದಿಗೆ ಬೀಳುತ್ತವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ,
ಸುರಕ್ಷತೆ, ವಿಮೆ ನಿಯಮ ಹಾಗೂ ತರಬೇತಿ ನಿಯಮಗಳನ್ನು ಜಾರಿಗೆ ತಂದು ನಮ್ಮನ್ನು ಅಧಿಕೃತ ಉದ್ಯೋಗಿಗಳನ್ನಾಗಿ ಮಾಡುವ ಬದಲು ನಿಷೇಧಗೊಳಿಸುವುದು ಎಷ್ಟು ಸರಿ ಎಂದು ಪತ್ರದಲ್ಲಿ ಪ್ರಶ್ನಿಸಲಾಗಿದ್ದು, ಗಿಗ್ ಕಾರ್ಮಿಕರಾದ ನಮಗೆ ನೀವು ಚುನಾವಣೆಯ ಮುನ್ನ ನೀಡಿದ್ದ ಭರವಸೆಯನ್ನು ಮರೆತಿದ್ದೀರಿ ಎಂದು ಹೇಳಲಾಗಿದೆ,
ಬೆಂಗಳೂರು
ಮೆಟ್ರೋ ನಿಲ್ದಾಣಕ್ಕೆ ಫೀಲ್ಡ್ ಮಾರ್ಷಲ್ ಕಾರಿಯಪ್ಪ ಹೆಸರು-ಡಿಸಿಎಂ ಡಿಕೆಶಿ

ಬೆಂಗಳೂರು: ಮೆಟ್ರೋ ನಿಲ್ದಾಣಕ್ಕೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹೆಸರಿಡುವ ಬಗ್ಗೆ ನಾನು ಹಾಗೂ ಮುಖ್ಯಮಂತ್ರಿಗಳು ಚರ್ಚೆ ಮಾಡಿ ತೀರ್ಮಾನಿಸುತ್ತೇವೆ, ಕಾರ್ಯಪ್ಪ ಹೆಸರಿಡುವುದು ನಮ್ಮ ಭಾಗ್ಯ ಎಂದು ಡಿಸಿಎಂ ಡಿಕೆ ಶಿಮಕುಮಾರ್ ಅವರು ಹೇಳಿದರು,
ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿ ಏಳು ಎಕರೆ ಭೂಮಿ ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ಕೊಡವ ಸಮಾಜದವರು ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ಅಭಿನಂದನಾ ಸಮಾರಂಭ ಉದ್ದೇಶಿಸಿ ಡಿಸಿಎಂ ಡಿಕೆಶಿ ಅವರು ಮಾತನಾಡಿದರು,
ಈ ವಿಚಾರವಾಗಿ ನಾವು ಮುಕ್ತ ಮನಸ್ಸು ಹೊಂದಿದ್ದೇವೆ, ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಹಾಗೂ ಈ ಡಿಕೆ ಶಿವಕುಮಾರ್ ಸೇರಿ ಕಾರ್ಯಪ್ಪ ಅವರ ಹೆಸರನ್ನು ಉಳಿಸುವ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು,
ಇಡೀ ದೇಶಕ್ಕೆ ಕೊಡಗು ಹಾಗೂ ಕೊಡವರು ಆಭರಣವಿದ್ದಂತೆ, ಇತಿಹಾಸ ನೋಡಿದಾಗ ನಿಮಗೆ ಯಾವುದೇ ಜವಾಬ್ದಾರಿ ಕೊಟ್ಟರೂ ಅದನ್ನು ಸಮರ್ಥವಾಗಿ ನಿಭಾಯಿಸಿದ್ದೀರಿ, ರಾಜಕೀಯ ಮಾತ್ರವಲ್ಲ ಕ್ರೀಡೆ, ಕಾನೂನು ವ್ಯವಸ್ಧೆ ಸೇನೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಕೊಡವರ ಕೊಡುಗೆ ಅಪಾರ, ದೇಶದ ಸ್ವಾತಂತ್ರ್ಯ ಹೋರಾಟಕ್ಕೂ ನಿಮ್ಮ ಕೊಡುಗೆ ಇದೆ, ಎಂದು ಬಣ್ಣೀಸಿದರು,
-
ಬಿಬಿಎಂಪಿ1 month ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು1 year ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು7 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ