ಕ್ರೀಡೆ
ಆರ್ ಸಿ ಬಿ ಗೆ ಶಾಕ್ ಮೇಲೆ ಶಾಕ್!

ಬೆಂಗಳೂರು ತಂಡ ಇಂದು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಅಖಾಡಕ್ಕೆ ಧುಮುಕುತ್ತಿದೆ, ಫ್ಲೇಆಫ್ ಗೆ ಎಂಟ್ರಿ ಕೊಟ್ಟಿರುವ ಆರ್ಸಿಬಿ ಟಾಪ್ 2 ಸ್ಧಾನ ಪಡೆಯಲೇಬೇಕು ಎಂದು ಜಿದ್ದಿಗೆ ಬಿದ್ದಿದೆ, ಇದರ ನಡುವೆ ಆರ್ಸಿಬಿ ಆಘಾತಕಾರಿ ಸುದ್ದಿಯೊಂದು ಹೊರ ಬಿದ್ದಿದೆ, ಸ್ಫೋಟಕ ಆರಂಭಿಕ ಆಟಗಾರ ಸಾಲ್ಟ್ ಫ್ಲೇ ಆಫ್ ಪಂದ್ಯಗಳನ್ನು ಆಡುವುದಿಲ್ಲ ಎಂದು ಹೇಳಲಾಗುತ್ತಿದೆ,
ಆರ್ಸಿಬಿ ಸ್ಫೋಟಕ ಬ್ಯಾಟರ್ ಸಾಲ್ಟ್ ಈಗಾಗಲೇ ಜ್ವರದಿಂದಾಗಿ ಚೆನ್ನೈ ಹಾಗೂ ಡೆಲ್ಲಿ ವಿರುದ್ಧದ ಪಂದ್ಯಗಳಿಂದ ಹೊರಗುಳಿದಿದ್ದರು, ಆದರೆ ಈಗ ಚೇತರಿಸಿಕೊಂಡಿದ್ದಾರೆ, ಮತ್ತು ವಿರಾಟ್ ಕೊಹ್ಲಿ ಜೊತೆ ಅದ್ಭುತ ಇನ್ನಿಂಗ್ಸ್ ಆರಂಭಿಸುವ ನಿರೀಕ್ಷೆಯಲ್ಲಿದ್ದಾರೆ, ಆದರೆ ಗುಜರಾತ್ ಪಂಜಾಬ್ ಹಾಗೂ ಮುಂಬೈ ವಿರುದ್ಧದ ಪ್ಲೇ ಆಫ್ ಪಂದ್ಯಗಳನ್ನು ಸಾಲ್ಟ್ ಆಡುವುದು ಅನುಮಾನವಿದೆ,
ಸಾಲ್ಟ್ ಗೆಳತಿ ಅಬಿ ಮೆಕ್ಲಾಮನ್ ಗರ್ಭಿಣಿಯಾಗಿದ್ದು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ, ಅದ್ದರಿಂದ ಸಾಲ್ಟ್ ತವರಿಗೆ ತೆರಳಿಲಿದ್ದಾರೆ, ಸಾಲ್ಟ್ ಹಾಗೂ ಅಬಿ ಮೆಕ್ಲಾವೆನ್ 2020 ರಿಂದಲೂ ಕೂಡಿ ಬಾಳುತ್ತಿದ್ದಾರೆ, ಮೆಕ್ಲಾವೆನ್ ಸೋಶಿಯಲ್ ಮೀಡಿಯಾ ಮಾರ್ಕೆಟಿಂಗ್ ನಲ್ಲಿ ಫ್ರಿಲ್ಯಾನ್ಸರ್ ಆಗಿ ಕೆಲಸ ಮಾಡುತ್ತಿದ್ದಾರೆ,
ಈಗಾಗಲೇ ಆರ್ಸಿಬಿ ತಂಡದ ವೇಗದ ಬೌಲರ್ ಗಳಾದ ಜೋಶ್ ಹ್ಯಾಜಲ್ವುಡ್, ಲುಂಗಿ ಎನ್ಗಿಡಿ ಆಡುವುದಿಲ್ಲ ಎಂದು ಹೇಳಲಾಗುತ್ತಿದೆ, ಯುವ ಬ್ಯಾಟರ್ ಜಾಕೋಬ್ ಬೆಥೆಲ್ ಕೂಡ ತಂಡದಿಂದ ಹೊರಗುಳಿದಿದ್ದಾರೆ, ನಾಯಕ ರಜತ್ ಗಾಯದಿಂದ ಬಳಲುತ್ತಿದು ಸಾಲ್ಟ್ ಕೂಡಾ ಹೋದರೆ ಆರ್ಸಿಬಿಗೆ ದೊಡ್ಡ ಹಿನ್ನಡೆ ಅನುಭವಿಸಲಿದೆ,
ಕ್ರೀಡೆ
ಕುಮಾರಸ್ವಾಮಿ ಸಿಡಿಸಿದ ಬಾಂಬ್ಗೆ ಗೋವಿಂದರಾಜ್ ತಲೆದಂಡ!

ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಬೆಳಗ್ಗೆ ಸುದ್ದಿಗೋಷ್ಠಿಯಲ್ಲಿ ಸಿಡಿಸಿದ ಬಾಂಬ್ಗೆ ಗೋವಿಂದರಾಜ್ (Govindraj) ತಲೆದಂಡವಾಗಿದೆ. ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣಕ್ಕೆ (Chinnaswamy Stadium Stampede Case) ಸಂಬಂಧಿಸಿದಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್ ಅವರನ್ನು ಬಿಡುಗಡೆ ಮಾಡಲಾಗಿದೆ.

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ತಕ್ಷಣದಿಂದ ಬಿಡುಗಡೆ ಮಾಡಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಆದೇಶ ಹೊರಡಿಸಿದ್ದಾರೆ.
ಗೋವಿಂದರಾಜ್ ಅವರು ಜೂನ್ 1, 2023 ರಿಂದ ಸಿದ್ದರಾಮಯ್ಯನವರ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿತ್ತು. ಆರ್ಸಿಬಿ ಆಟಗಾರರಿಗೆ ವಿಧಾನಸೌಧದಲ್ಲಿ ಸನ್ಮಾನ ಮಾಡುವಂತೆ ಸಿದ್ದರಾಮಯ್ಯನವರಿಗೆ ಒತ್ತಡ ಹೇರಿದ್ದೇ ಗೋವಿಂದರಾಜ್ ಎಂಬ ಆರೋಪ ಈಗ ಕೇಳಿ ಬಂದಿದೆ.
ಕುಮಾರಸ್ವಾಮಿ ಹೇಳಿದ್ದೇನು?
ಜೂನ್ 4ರ ಬೆಳಗ್ಗೆ ಸಿಎಂ (CM Siddaramaiah) ಅವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ಅವರು ಪೊಲೀಸ್ ಆಯುಕ್ತರಿಗೆ ಕರೆ ಮಾಡಿ ವಿಧಾನಸೌಧದ ಕಾರ್ಯಕ್ರಮಕ್ಕೆ ಭದ್ರತೆ ನೀಡಬೇಕು ಎಂದು ಒತ್ತಡ ಹಾಕುತ್ತಾರೆ. ಇದಕ್ಕೆ ಆಯುಕ್ತರು, ಬೆಳಗ್ಗೆಯವರೆಗೆ ಪೊಲೀಸರು ನಿದ್ದೆಗೆಟ್ಟು ಕೆಲಸ ಮಾಡಿದ್ದಾರೆ. ಎರಡು ಮೂರು ಕಡೆ ಕಾರ್ಯಕ್ರಮ ಮಾಡಿದರೆ ಭದ್ರತೆ ನೀಡಲು ಕಷ್ಟವಾಗುತ್ತದೆ. ಒಂದು ಕಡೆ ಕಾರ್ಯಕ್ರಮ ಮಾಡಿದರೆ ಬಂದೋಬಸ್ತ್ ಕಲ್ಪಿಸಲು ಸಾಧ್ಯವಾಗುತ್ತದೆ. ವಿಧಾನಸೌಧದ ಕಾರ್ಯಕ್ರಮಕ್ಕೆ ಭದ್ರತೆ ನೀಡಲು ಸಾಧ್ಯವಿಲ್ಲ ಎಂದು ಹೇಳುತ್ತಾರೆ.
ಆಯುಕ್ತರ ಪ್ರತಿಕ್ರಿಯೆ ಬಳಿಕ ಗೋವಿಂದರಾಜ್ ಅವರು ಸಿಎಂ ಬಳಿಗೆ ಹೋಗುತ್ತಾರೆ. ಸಿಎಂ ಅವರು ಆಯುಕ್ತರನ್ನು ಕರೆಸಿ, ನಾನು ಈ ರಾಜ್ಯದ ಸಿಎಂ. ಆದೇಶ ಮಾಡುತ್ತಿದ್ದೇನೆ ವಿಧಾನಸೌಧದ ಕಾರ್ಯಕ್ರಮಕ್ಕೆ ಭದ್ರತೆ ಕೊಡಿ ಎಂದು ಸೂಚಿಸುತ್ತಾರೆ. ಅನಿವಾರ್ಯವಾಗಿ ಪೊಲೀಸ್ ಕಮಿಷನರ್ ವಿಧಾನಸೌಧಕ್ಕೆ ಬಿಗಿ ಭದ್ರತೆ ಹಾಕುತ್ತಾರೆ. ಆದರೆ ಯಾರಿಗೂ ವಿಡಿಯೋ ಕಾನ್ಫರೆನ್ಸ್ ಮೂಲಕ ಸೂಚನೆ ಕೊಟ್ಟಿರುವುದಿಲ್ಲ. ಕಾಟಾಚಾರಕ್ಕೆ ಮೂರ್ನಾಲ್ಕು ತುಕಡಿ ಭದ್ರತೆ ಹಾಕಿರುತ್ತಾರೆ. ವಿಧಾನಸೌಧದಲ್ಲೇ ಕಾರ್ಯಕ್ರಮ ಮಾಡಬೇಕು, ನಾನು ಚಿನ್ನಸ್ವಾಮಿಗೆ ಹೋಗುವುದಿಲ್ಲ ಎಂದು ಸಿಎಂ ಹೇಳಿದ್ದರಿಂದ ಹೆಚ್ಚಿನ ಸಂಖ್ಯೆ ಪೊಲೀಸರನ್ನು ನಿಯೋಜಿಸಲಾಗುತ್ತದೆ ಎಂದು ಗಂಭೀರವಾದ ಆರೋಪ ಮಾಡಿದ್ದರು.
ಕ್ರೀಡೆ
2026 ರ ಫುಟ್ ಬಾಲ್ ವಿಶ್ವಕಪ್ ಗೆ ಅರ್ಹತೆ ಪಡೆದ 48 ತಂಡಗಳು, ಭಾರತದ ಕಥೆ ಏನು?

2026ರಲ್ಲಿ ನಡೆಯಲಿರುವ ವಿಶ್ವಕಪ್ ಫುಟ್ಬಾಲ್ ಪಂದ್ಯಾವಳಿಗೆ ಅಮೆರಿಕ, ಮೆಕ್ಸಿಕೊ ಮತ್ತು ಕೆನಡಾ ಜಂಟಿಯಾಗಿ ಆತಿಥ್ಯವಹಿಸಲಿವೆ, ಈ ಬಾರಿಯ ವಿಶ್ವಕಪ್ ನಲ್ಲಿ ಬರೋಬ್ಬರಿ 48 ತಂಡಗಳು ಭಾಗವಹಿಸಲಿವೆ,
2026 ಫುಟ್ಬಾಲ್ ವಿಶ್ವಕಪ್ ಅರ್ಹತಾ ಪಂದ್ಯಗಳು ಮುಗಿದ್ದು, ಉಜ್ಬಿಕಿಸ್ತಾನ್, ಜೋರ್ಡಾನ್, ಮತ್ತು ದಕ್ಷಿಣ ಕೊರಿಯಾ ಅರ್ಹತೆ ಪಡೆದಿದೆ, ಭಾರತ ಅರ್ಹತೆ ಪಡೆಯುವಲ್ಲಿ ವಿಫಲವಾಗಿದೆ,
43 ದೇಶದ ತಂಡಗಳು ಅರ್ಹತಾ ಪ್ರಕ್ರಿಯೆಯ ತಮ್ಮ ಸ್ಧಾನಗಳನ್ನು ಪಡೆಯುತ್ತವೆ, ಆರು ತಂಡಗಳನ್ನು ಅಂತಾರಾಷ್ಟ್ರೀಯ ಫ್ಲೇಆಫ್ ಗಳಲ್ಲಿ ಇನ್ನೆರಡು ತಮ್ಮ ಸ್ಧಾನವನ್ನು ಭದ್ರಪಡಿಸಿಕೊಳ್ಳುತ್ತವೆ, ಅಮೆರಿಕ, ಮೆಕ್ಸಿಕೋ, ಕೆನಡಾ ದೇಶಗಳು ಆತಿಥೇಯ ತಂಡವಾರುವುದರಿಂದ ನೇರವಾಗಿ ಅರ್ಹತೆ ಪಡೆದಿವೆ,
ಏಷ್ಯಾದ ಎಂಟು, ಆಫ್ರಿಕಾ ಖಂಡದಿಂದ ಒಂಬತ್ತು ತಂಡಗಳು ನೇರವಾಗಿ ಸ್ಧಾನ ಪಡೆದಿವೆ, ಉತ್ತರ ಮತ್ತು ಮಧ್ಯ ಅಮೆರಿಕ ಮತ್ತು ಕೆರಿಬಿಯನ್ ಮೂರು ದೇಶಗಳು ಸ್ಧಾನ ಪಡೆದಿವೆ,
ದಕ್ಷಿಣ ಅಮೆರಿಕಾ ಆರು ತಂಡಗಳು ನೇರವಾಗಿ ಆರ್ಹತೆ ಪಡೆದಿದ್ದರೆ, ಇನ್ನೊಂದು ತಂಡವನ್ನು ಇಂಟರ್ ಕಾಂಟಿನೆಂಟಲ್ ಫ್ಲೇಆಫ್ ಗೆ ಕಳುಹಿಸುತ್ತದೆ, ನ್ಯೂಜಿಲ್ಯಾಂಡ್ ಜೊತೆಗೆ ಯುರೋಪ್ ನ 16 ತಂಡಗಳು ವಿಶ್ವಕಪ್ ಆಡಲಿವೆ
ಕ್ರೀಡೆ
ಬೆಂಗಳೂರು ಕಾಲ್ತುಳಿತ ದುರಂತ; RCB ಮಾರ್ಕೆಟಿಂಗ್ ಹೆಡ್ ಸೇರಿ ನಾಲ್ವರ ಬಂಧನ

ಬೆಂಗಳೂರು: ಆರ್ಸಿಬಿ ಸಂಭ್ರಮಾಚರಣೆಯ (Bengaluru Stampede) ವೇಳೆ ಉಂಟಾದ ಕಾಲ್ತುಳಿದಲ್ಲಿ 11 ಜನರು ಮೃತಪಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಸಿಬಿ,ಡಿಎನ್ ಎ,ಕೆಎಸ್ ಸಿಎ ಪ್ರತಿನಿಧಿಸುವವರನ್ನ ಅರೆಸ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದರು. ಸಿಎಂ ಆದೇಶದ ಬೆನ್ನಲ್ಲೇ ಇದೀಗ ಪೊಲೀಸರು ಇದೀಗ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಆರ್ ಸಿ ಬಿ ಮಾನ್ಯೇಜ್ ಮೆಂಟ್ ನ ಇಬ್ಬರು ಆಯೋಜಕರನ್ನು ಬಂಧಿಸಿದ್ದಾರೆ.
ಆರ್ ಸಿಬಿ ಮ್ಯಾನೇಜ್ಮೆಂಟ್ ಸಿಬ್ಬಂದಿ ನಿಖಲ್ ಸೋಸಲೆ, DNA ಮ್ಯಾನೇಜ್ಮೆಂಟ್ ಸಿಬ್ಬಂದಿ ಸುನೀಲ್ ಮ್ಯಾಥ್ಯೂ ಲಾಕ್ ಸೇರಿದಂತೆ ಇನ್ನಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ KSCA ಕಾಯರ್ದರ್ಶಿ, ಖಜಾಂಚಿ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ನಿನ್ನೆ ರಾತ್ರಿ KSCA ಕಾಯರ್ದರ್ಶಿ ಶಂಕರ್ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. KSCA ಖಜಾಂಚಿ ಜಯರಾಮ್ ಮನೆ ಮೇಲೂ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ಇಬ್ಬರೂ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
-
ಬಿಬಿಎಂಪಿ4 weeks ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು1 year ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು7 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ