Connect with us

ಕ್ರೀಡೆ

ಆರ್ ಸಿ ಬಿ ಗೆ ಶಾಕ್ ಮೇಲೆ ಶಾಕ್!

ಬೆಂಗಳೂರು ತಂಡ ಇಂದು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಅಖಾಡಕ್ಕೆ ಧುಮುಕುತ್ತಿದೆ, ಫ್ಲೇಆಫ್ ಗೆ ಎಂಟ್ರಿ ಕೊಟ್ಟಿರುವ ಆರ್‍ಸಿಬಿ ಟಾಪ್ 2 ಸ್ಧಾನ ಪಡೆಯಲೇಬೇಕು ಎಂದು ಜಿದ್ದಿಗೆ ಬಿದ್ದಿದೆ, ಇದರ ನಡುವೆ ಆರ್‍ಸಿಬಿ ಆಘಾತಕಾರಿ ಸುದ್ದಿಯೊಂದು ಹೊರ ಬಿದ್ದಿದೆ, ಸ್ಫೋಟಕ ಆರಂಭಿಕ ಆಟಗಾರ ಸಾಲ್ಟ್ ಫ್ಲೇ ಆಫ್ ಪಂದ್ಯಗಳನ್ನು ಆಡುವುದಿಲ್ಲ ಎಂದು ಹೇಳಲಾಗುತ್ತಿದೆ,
ಆರ್‍ಸಿಬಿ ಸ್ಫೋಟಕ ಬ್ಯಾಟರ್ ಸಾಲ್ಟ್ ಈಗಾಗಲೇ ಜ್ವರದಿಂದಾಗಿ ಚೆನ್ನೈ ಹಾಗೂ ಡೆಲ್ಲಿ ವಿರುದ್ಧದ ಪಂದ್ಯಗಳಿಂದ ಹೊರಗುಳಿದಿದ್ದರು, ಆದರೆ ಈಗ ಚೇತರಿಸಿಕೊಂಡಿದ್ದಾರೆ, ಮತ್ತು ವಿರಾಟ್ ಕೊಹ್ಲಿ ಜೊತೆ ಅದ್ಭುತ ಇನ್ನಿಂಗ್ಸ್ ಆರಂಭಿಸುವ ನಿರೀಕ್ಷೆಯಲ್ಲಿದ್ದಾರೆ, ಆದರೆ ಗುಜರಾತ್ ಪಂಜಾಬ್ ಹಾಗೂ ಮುಂಬೈ ವಿರುದ್ಧದ ಪ್ಲೇ ಆಫ್ ಪಂದ್ಯಗಳನ್ನು ಸಾಲ್ಟ್ ಆಡುವುದು ಅನುಮಾನವಿದೆ,
ಸಾಲ್ಟ್ ಗೆಳತಿ ಅಬಿ ಮೆಕ್ಲಾಮನ್ ಗರ್ಭಿಣಿಯಾಗಿದ್ದು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ, ಅದ್ದರಿಂದ ಸಾಲ್ಟ್ ತವರಿಗೆ ತೆರಳಿಲಿದ್ದಾರೆ, ಸಾಲ್ಟ್ ಹಾಗೂ ಅಬಿ ಮೆಕ್ಲಾವೆನ್ 2020 ರಿಂದಲೂ ಕೂಡಿ ಬಾಳುತ್ತಿದ್ದಾರೆ, ಮೆಕ್ಲಾವೆನ್ ಸೋಶಿಯಲ್ ಮೀಡಿಯಾ ಮಾರ್ಕೆಟಿಂಗ್ ನಲ್ಲಿ ಫ್ರಿಲ್ಯಾನ್ಸರ್ ಆಗಿ ಕೆಲಸ ಮಾಡುತ್ತಿದ್ದಾರೆ,
ಈಗಾಗಲೇ ಆರ್‍ಸಿಬಿ ತಂಡದ ವೇಗದ ಬೌಲರ್ ಗಳಾದ ಜೋಶ್ ಹ್ಯಾಜಲ್ವುಡ್, ಲುಂಗಿ ಎನ್‍ಗಿಡಿ ಆಡುವುದಿಲ್ಲ ಎಂದು ಹೇಳಲಾಗುತ್ತಿದೆ, ಯುವ ಬ್ಯಾಟರ್ ಜಾಕೋಬ್ ಬೆಥೆಲ್ ಕೂಡ ತಂಡದಿಂದ ಹೊರಗುಳಿದಿದ್ದಾರೆ, ನಾಯಕ ರಜತ್ ಗಾಯದಿಂದ ಬಳಲುತ್ತಿದು ಸಾಲ್ಟ್ ಕೂಡಾ ಹೋದರೆ ಆರ್‍ಸಿಬಿಗೆ ದೊಡ್ಡ ಹಿನ್ನಡೆ ಅನುಭವಿಸಲಿದೆ,

ಕ್ರೀಡೆ

ಒಂದೇ ತಿಂಗಳಲ್ಲಿ 6 ಕ್ರಿಕೆಟಿಗರು ನಿವೃತ್ತಿ-ಲಿಸ್ಟ್ ನಲ್ಲಿದ್ದಾರೆ ಭಾರತದ ದಿಗ್ಗಜರು!

ನವದೆಹಲಿ: ರೋಹಿತ್ ಶರ್ಮಾ ಟೆಸ್ಟ್ ನಿವೃತ್ತಿಯೊಂದಿಗೆ ಶುರುವಾದ ಸ್ಟಾರ್ ಆಟಗಾರರ ಗುಡ್ ಬೈ ಪರ್ವ ಮುಂದುವರೆದಿದೆ, ಅದರಲ್ಲೂ ಮೇ ಮತ್ತು ಜೂನ್ ತಿಂಗಳ ನಡುವೆ ಒಟ್ಟು 6 ಆಟಗಾರರು ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ,
ರೋಹಿತ್ ಶರ್ಮಾ: ಭಾರತದ ಸ್ಟಾರ್ ಆಟಗಾರ ರೋಹಿತ್ ಶರ್ಮಾ ಕಳೆದ ತಿಂಗಳು ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದರು, ಈಗಾಗಲೇ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿರುವ ಹಿಟ್ ಮ್ಯಾನ್ ಇನ್ಮುಂದೆ ಏಕದಿನದಲ್ಲಿ ಮಾತ್ರ ಟೀಮ್ ಇಂಡಿಯಾ ಪ್ರತಿನಿಧಿಸಲಿದ್ದಾರೆ,
ವಿರಾಟ್ ಕೊಹ್ಲಿ: ರೋಹಿತ್ ಶರ್ಮಾ ಬೆನ್ನಲ್ಲೇ ವಿರಾಟ್ ಕೊಹ್ಲಿನ ಕೂಡ ಟೆಸ್ಟ್ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದಾರೆ, ಮೇ 12 ರಂದು ಟೆಸ್ಟ್ ಗೆ ನಿವೃತ್ತಿ ಪ್ರಕಟಿಸಿದ್ರು, ಕಿಂಗ್ ಕೊಹ್ಲಿ ಇನ್ನು ಏಕದಿನ ಕ್ರಿಕೆಟ್ ನಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ,
ಏಂಜೆಲೊ ಮ್ಯಾಥ್ಯೂಸ್: ಶ್ರೀಲಂಕಾ ತಂಡದ ಸ್ಟಾರ್ ಆಲ್‍ರೌಂಡರ್ ಏಂಜೆಲೊ ಮ್ಯಾಥ್ಯೂಸ್ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ, ಆಸ್ಟ್ರೇಲಿಯಾ ತಂಡದ ಪ್ರಮುಖ ಆಟಗಾರ ಗ್ಲೆನ್ ಮ್ಯಾಕ್ಸ್‍ವೆಲ್ ಏಕದಿನ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದಾರೆ,
ಆದರೂ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಮುಂದುವರೆಯಲಿದ್ದಾರೆ,
ಹೆನ್ರಿಕ್ ಕ್ಲಾಸೆನ್: ಸೌತ್ ಆಫ್ರಿಕಾದ ಹೊಡಿಬಡಿ ದಾಂಡಿಗ ಹೆನ್ರಿಕ್ ಕ್ಲಾಸೆನ್ ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ, ಕೇವಲ 33 ವರ್ಷದ ಕ್ಲಾಸೆನ್, ಮುಂಬರುವ ದಿನಗಳಲ್ಲಿ ಟಿ20 ಲೀಗ್ ಗಳಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ,
ನಿಕೋಲಸ್ ಪೂರನ್: ವೆಸ್ಟ್ ಇಂಡೀಸ್ ನ ವಿಕೆಟ್ ಕೀಪರ್ ಬ್ಯಾಟರ್ ನಿಕೋಲಸ್ ಪೂರನ್ ಕೂಡ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ, ಅದು ಕೂಡ 29 ನೇ ವಯಸ್ಸಿನಲ್ಲಿ ಎಂಬುದು ಅಚ್ಚರಿ.

Continue Reading

ಕ್ರೀಡೆ

ಬ್ಯಾಡ್ಮಿಂಟನ್ ಆಡುತ್ತಾ ಬೆಳೆದವಳಾಗಿ ಜೀವನವನ್ನು ದೈಹಿಕವಾಗಿ, ಮಾನಸಿಕವಾಗಿ ಹೇಗೆ ರೂಪಿಸುತ್ತದೆ ನಾನು ನೇರವಾಗಿ ಅನುಭವಿಸಿದ್ದೇನೆ ದೀಪಿಕಾ

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ತಮ್ಮ ತಂದೆ, ಬ್ಯಾಡ್ಮಿಂಟನ್ ಲೆಜೆಂಡ್​​ ಪ್ರಕಾಶ್ ಪಡುಕೋಣೆ ಅವರ 70ನೇ ಹುಟ್ಟುಹಬ್ಬವನ್ನಿಂದು ಬಹಳ ವಿಶೇಷವಾಗಿ ಆಚರಿಸಿದರು.

‘ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್’ (ಪಿಎಸ್​ಬಿ) ಬೆಂಗಳೂರು, ಎನ್​​ಸಿಆರ್, ಮುಂಬೈ, ಚೆನ್ನೈ, ಜೈಪುರ, ಪುಣೆ, ನಾಸಿಕ್, ಮೈಸೂರು, ಪಾಣಿಪತ್, ಡೆಹ್ರಾಡೂನ್, ಉದಯಪುರ, ಕೊಯಮತ್ತೂರು, ಸಾಂಗ್ಲಿ ಮತ್ತು ಸೂರತ್ ಸೇರಿದಂತೆ 18 ನಗರಗಳಲ್ಲಿ 75ಕ್ಕೂ ಹೆಚ್ಚು ತರಬೇತಿ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ಮಹತ್ವದ ಮೈಲಿಗಲ್ಲು ಸಾಧಿಸಿದೆ ಎಂದು ಇನ್​​​ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳಲಾದ ಮಾಧ್ಯಮ ಪ್ರಕಟಣೆ ಮೂಲಕ ಹೇಳಿದ್ದಾರೆ.

“ಬ್ಯಾಡ್ಮಿಂಟನ್‌ನ ಸಂತೋಷ ಮತ್ತು ಶಿಸ್ತನ್ನು ಎಲ್ಲಾ ವರ್ಗದ ಜನರಿಗೆ ತಲುಪಿಸುವುದು ನಮ್ಮ ಆಶಯ” ಎಂದೂ ಸಹ ದೀಪಿಕಾ ತಿಳಿಸಿದ್ದಾರೆ. ಈ ಮೂಲಕ ಕೇಂದ್ರಗಳ ಸಂಖ್ಯೆ ವಿಸ್ತರಿಸುವ ಬಗ್ಗೆ ಮಾಹಿತಿ ಒದಗಿಸಿದ್ದಾರೆ.

ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್​​ನಲ್ಲಿ, “ಬ್ಯಾಡ್ಮಿಂಟನ್ ಆಡುತ್ತಾ ಬೆಳೆದವಳಾಗಿ, ಈ ಕ್ರೀಡೆಯು ಒಬ್ಬರ ಜೀವನವನ್ನು ದೈಹಿಕವಾಗಿ, ಮಾನಸಿಕವಾಗಿ ಮತ್ತು ಭಾವನಾತ್ಮಕವಾಗಿ ಹೇಗೆ ರೂಪಿಸುತ್ತದೆ ಎಂಬುದನ್ನು ನಾನು ನೇರವಾಗಿ ಅನುಭವಿಸಿದ್ದೇನೆ. ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ (PSB) ಮೂಲಕ, ಬ್ಯಾಡ್ಮಿಂಟನ್‌ನ ಸಂತೋಷ ಮತ್ತು ಶಿಸ್ತನ್ನು ಎಲ್ಲಾ ಹಂತದ ಜನರಿಗೆ ತಲುಪಿಸಲು ಮತ್ತು ಆರೋಗ್ಯಕರ, ಫೋಕಸ್ಡ್​​ ಮತ್ತು ಕ್ರೀಡೆಯಿಂದ ಪ್ರೇರಿತವಾದ ಪೀಳಿಗೆಯನ್ನು ನಿರ್ಮಿಸಲು ನಾವು ಆಶಿಸುತ್ತೇವೆ. ಅಪ್ಪಾ, ನಿಮ್ಮನ್ನು ಚೆನ್ನಾಗಿ ತಿಳಿದಿರುವವರಿಗೆ ಈ ಕ್ರೀಡೆಯ ಬಗ್ಗೆ ನಿಮ್ಮ ಉತ್ಸಾಹವೂ ತಿಳಿದಿದೆ. 70ನೇ ವಯಸ್ಸಿನಲ್ಲಿಯೂ ನೀವು ಬ್ಯಾಡ್ಮಿಂಟನ್​ಗೆ ನಿಮ್ಮನ್ನು ಸಮರ್ಪಿಸಿದ್ದೀರಿ. ನಿಮ್ಮ ಉತ್ಸಾಹವನ್ನು ನಿಜವಾಗಿಸಲು ನಾವು ಬದ್ಧರಾಗಿದ್ದೇವೆ. ಎಲ್ಲರಿಗಾಗಿ ಬ್ಯಾಡ್ಮಿಂಟನ್! 70ನೇ ಹುಟ್ಟುಹಬ್ಬದ ಶುಭಾಶಯಗಳು ಪಪ್ಪಾ!” ಎಂದು ಬರೆದುಕೊಂಡಿದ್ದಾರೆ.

ನಟಿ ಶೇರ್ ಮಾಡಿದ ಪ್ರಕಟಣೆಯಲ್ಲಿ, ಪಿಎಸ್‌ಬಿಯ ಮಾರ್ಗದರ್ಶಕ ಮತ್ತು ಸಲಹೆಗಾರ ಪ್ರಕಾಶ್ ಪಡುಕೋಣೆ ತಮ್ಮ ಮನದಾಳವನ್ನೂ ಹಂಚಿಕೊಂಡರು. “ಕ್ರೀಡೆಯು ಬೆಳವಣಿಗೆಯ ಅವಿಭಾಜ್ಯ ಅಂಗವಾಗಿದೆ. ಇದು ಶಿಸ್ತು, ಸ್ಥಿತಿಸ್ಥಾಪಕತ್ವ ಮತ್ತು ಗೆಲುವಿನ ಮನಸ್ಥಿತಿಯನ್ನು ಹುಟ್ಟಿಸುತ್ತದೆ. ಪಿಎಸ್‌ಬಿಯೊಂದಿಗೆ, ಗುಣಮಟ್ಟದ ತರಬೇತಿಯನ್ನು ಸುಲಭವಾಗಿ ಮತ್ತು ಕೈಗೆಟುಕುವಂತೆ ಮಾಡುವುದು, ತಳಮಟ್ಟದಿಂದ ಪ್ರತಿಭೆಯನ್ನು ಪೋಷಿಸುವುದು ಮತ್ತು ಭಾರತೀಯ ಬ್ಯಾಡ್ಮಿಂಟನ್‌ನ ಭವಿಷ್ಯಕ್ಕೆ ಬಲವಾದ ಅಡಿಪಾಯವನ್ನು ಹಾಕುವುದು ನಮ್ಮ ಗುರಿ” ಎಂದು ಹೇಳಿದರು.

ಭಾರತದ 18 ನಗರಗಳಲ್ಲಿ 75 ಕೇಂದ್ರಗಳು ಆರಂಭಗೊಂಡಿದ್ದು, ಈ ವರ್ಷದ ಕೊನೆಗೆ 100 ಕೇಂದ್ರಗಳು ಮತ್ತು 2027ರ ಹೊತ್ತಿಗೆ 250 ಕೇಂದ್ರಗಳಿಗೆ ವಿಸ್ತರಿಸುವ ಗುರಿಯನ್ನು ‘ಪಡುಕೋಣೆ ಸ್ಕೂಲ್​ ಆಫ್​​ ಬ್ಯಾಡ್ಮಿಂಟನ್’ ಹೊಂದಿದೆ. ದೀಪಿಕಾ ಪಡುಕೋಣೆ ಇದರ ಸಂಸ್ಥಾಪಕಿಯಾದರೆ, ಪ್ರಕಾಶ್​ ಪಡುಕೋಣೆ ಮಾರ್ಗದರ್ಶಕರಾಗಿ ಪಿಎಸ್​ಬಿಯ ಭಾಗವಾಗಿದ್ದಾರೆ

Continue Reading

ಕ್ರೀಡೆ

ಕುಮಾರಸ್ವಾಮಿ ಸಿಡಿಸಿದ ಬಾಂಬ್‌ಗೆ ಗೋವಿಂದರಾಜ್ ತಲೆದಂಡ!

ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಬೆಳಗ್ಗೆ ಸುದ್ದಿಗೋಷ್ಠಿಯಲ್ಲಿ ಸಿಡಿಸಿದ ಬಾಂಬ್‌ಗೆ ಗೋವಿಂದರಾಜ್ (Govindraj) ತಲೆದಂಡವಾಗಿದೆ. ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣಕ್ಕೆ (Chinnaswamy Stadium Stampede Case) ಸಂಬಂಧಿಸಿದಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್ ಅವರನ್ನು ಬಿಡುಗಡೆ ಮಾಡಲಾಗಿದೆ.

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ತಕ್ಷಣದಿಂದ ಬಿಡುಗಡೆ ಮಾಡಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಆದೇಶ ಹೊರಡಿಸಿದ್ದಾರೆ.

ಗೋವಿಂದರಾಜ್ ಅವರು ಜೂನ್‌ 1, 2023 ರಿಂದ ಸಿದ್ದರಾಮಯ್ಯನವರ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿತ್ತು. ಆರ್‌ಸಿಬಿ ಆಟಗಾರರಿಗೆ ವಿಧಾನಸೌಧದಲ್ಲಿ ಸನ್ಮಾನ ಮಾಡುವಂತೆ ಸಿದ್ದರಾಮಯ್ಯನವರಿಗೆ ಒತ್ತಡ ಹೇರಿದ್ದೇ ಗೋವಿಂದರಾಜ್‌ ಎಂಬ ಆರೋಪ ಈಗ ಕೇಳಿ ಬಂದಿದೆ.

ಕುಮಾರಸ್ವಾಮಿ ಹೇಳಿದ್ದೇನು?
ಜೂನ್‌ 4ರ ಬೆಳಗ್ಗೆ ಸಿಎಂ (CM Siddaramaiah) ಅವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್‌ ಅವರು ಪೊಲೀಸ್‌ ಆಯುಕ್ತರಿಗೆ ಕರೆ ಮಾಡಿ ವಿಧಾನಸೌಧದ ಕಾರ್ಯಕ್ರಮಕ್ಕೆ ಭದ್ರತೆ ನೀಡಬೇಕು ಎಂದು ಒತ್ತಡ ಹಾಕುತ್ತಾರೆ. ಇದಕ್ಕೆ ಆಯುಕ್ತರು, ಬೆಳಗ್ಗೆಯವರೆಗೆ ಪೊಲೀಸರು ನಿದ್ದೆಗೆಟ್ಟು ಕೆಲಸ ಮಾಡಿದ್ದಾರೆ. ಎರಡು ಮೂರು ಕಡೆ ಕಾರ್ಯಕ್ರಮ ಮಾಡಿದರೆ ಭದ್ರತೆ ನೀಡಲು ಕಷ್ಟವಾಗುತ್ತದೆ. ಒಂದು ಕಡೆ ಕಾರ್ಯಕ್ರಮ ಮಾಡಿದರೆ ಬಂದೋಬಸ್ತ್‌ ಕಲ್ಪಿಸಲು ಸಾಧ್ಯವಾಗುತ್ತದೆ. ವಿಧಾನಸೌಧದ ಕಾರ್ಯಕ್ರಮಕ್ಕೆ ಭದ್ರತೆ ನೀಡಲು ಸಾಧ್ಯವಿಲ್ಲ ಎಂದು ಹೇಳುತ್ತಾರೆ.

ಆಯುಕ್ತರ ಪ್ರತಿಕ್ರಿಯೆ ಬಳಿಕ ಗೋವಿಂದರಾಜ್‌ ಅವರು ಸಿಎಂ ಬಳಿಗೆ ಹೋಗುತ್ತಾರೆ. ಸಿಎಂ ಅವರು ಆಯುಕ್ತರನ್ನು ಕರೆಸಿ, ನಾನು ಈ ರಾಜ್ಯದ ಸಿಎಂ. ಆದೇಶ ಮಾಡುತ್ತಿದ್ದೇನೆ ವಿಧಾನಸೌಧದ ಕಾರ್ಯಕ್ರಮಕ್ಕೆ ಭದ್ರತೆ ಕೊಡಿ ಎಂದು ಸೂಚಿಸುತ್ತಾರೆ. ಅನಿವಾರ್ಯವಾಗಿ ಪೊಲೀಸ್ ಕಮಿಷನರ್ ವಿಧಾನಸೌಧಕ್ಕೆ ಬಿಗಿ ಭದ್ರತೆ ಹಾಕುತ್ತಾರೆ. ಆದರೆ ಯಾರಿಗೂ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸೂಚನೆ ಕೊಟ್ಟಿರುವುದಿಲ್ಲ. ಕಾಟಾಚಾರಕ್ಕೆ ಮೂರ್ನಾಲ್ಕು ತುಕಡಿ ಭದ್ರತೆ ಹಾಕಿರುತ್ತಾರೆ. ವಿಧಾನಸೌಧದಲ್ಲೇ ಕಾರ್ಯಕ್ರಮ ಮಾಡಬೇಕು, ನಾನು ಚಿನ್ನಸ್ವಾಮಿಗೆ ಹೋಗುವುದಿಲ್ಲ ಎಂದು ಸಿಎಂ ಹೇಳಿದ್ದರಿಂದ ಹೆಚ್ಚಿನ ಸಂಖ್ಯೆ ಪೊಲೀಸರನ್ನು ನಿಯೋಜಿಸಲಾಗುತ್ತದೆ ಎಂದು ಗಂಭೀರವಾದ ಆರೋಪ ಮಾಡಿದ್ದರು.

Continue Reading

Trending