ರಾಜಕೀಯ

ಕಲಬುರಿಗಿ ಜಿಲ್ಲಾಧಿಕಾರಿ ವಿರುದ್ದ ಆಕ್ಷೇಪಾರ್ಹ ಹೇಳಿಕೆ- ಬಿಜೆಪಿ ವಿರುದ್ದ ಡಿಕೆಶಿ ಗರಂ!

ಬೆಂಗಳೂರು: ಕಲಬುರಿಗಿ ಡಿಸಿ ವಿರುದ್ಧ ಎಂಎಲ್‍ಸಿ ರವಿಕುಮಾರ್ ಆಕ್ಷೇಪಾರ್ಹ ಹೇಳಿಕೆಗೆ ಎಲ್ಲೆಡೆ ತೀವ್ರ ಟೀಕೆ ವ್ಯಕ್ತವಾಗಿದೆ, ಈ ನಡುವೆ ಡಿಸಿಎಂ ಡಿಕೆಶಿ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ,
ಬೆಂಗಳೂರಲ್ಲಿ ಮಾತನಾಡಿದ ಅವರು ಇದೊಂದು ಗಂಭೀರ ವಿಚಾರವಾಗಿದ್ದು, ಉನ್ನತ ಹುದ್ದೆಯಲ್ಲಿರುವ ಅಧಿಕಾರಿಗೆ ಮಾಡಿದಂತಹ ಅವಮಾನವಾಗಿದೆ ಎಂದು ಹೇಳಿದರು,
ಈವರೆಗೂ 6 ಕ್ಕೂ ಹೆಚ್ಚು ಅಧಿಕಾರಿಗಳು ತಮ್ಮನ್ನು ಭೇಟಿ ಮಾಡಿ ಇದೇ ವಿಚಾರವನ್ನು ಚರ್ಚೆ ಮಾಡಿದ್ದಾರೆ, ಅವರೆಲ್ಲರು ತಳಮಳಗೊಂಡಿದ್ದಾರೆ, ಸಾಕಷ್ಟು ಗೊಂದಲದಲ್ಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವರು ಈ ಬಗ್ಗೆ ಪ್ರತಿಕ್ರಿಯೆ ಕೊಡಬೇಕು ಎಂದು ಅಗ್ರಹಿಸಿದ್ದಾರೆ,
ಕಳೆದ ಕೆಲ ದಿನಗಳ ಹಿಂದೆ ಬಿಜೆಪಿ ಪ್ರತಿಭಟನೆಯ ಭಾಷಣೆದಲ್ಲಿ ಕಲಬುರಿಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ಪಾಕಿಸ್ತಾನದವರೋ ಅಥವಾ ಭಾರತದವರೋ ಎಂಬುದು ಖಚಿತವಾಗಿಲ್ಲ, ಶಹಾಬಾದ್ ಡಿವೈಎಸ್‍ಪಿ ಶಂಕರಗೌಡ ಪಾಟೀಲ, ಸಿಪಿಐಗಳಾದ ಚಂದ್ರಶೇಖರ ತಿಗಡಿ ಮತ್ತು ನಟರಾಜ ಲಾಡೆ ಅವರು ಕರ್ತವ್ಯ ನಿರ್ವಹಿಸಲು ಅಸಮರ್ಥರಾಗಿದ್ದಾರೆ ಎಂದು ರವಿಕುಮಾರ್ ಹೇಳಿಕೆ ಕೊಟ್ಟಿದ್ದರು, ಇದು ಬಾರಿ ವಿವಾದಕ್ಕೆ ಕಾರಣವಾಗಿತ್ತು.

Leave a Reply

Your email address will not be published. Required fields are marked *

Trending

Exit mobile version