Connect with us

ಆರೋಗ್ಯ

ದೊಡ್ಡಪತ್ರೆ:ಪುಟ್ಟ ಎಲೆಗಳ ದೊಡ್ಡ ಪ್ರಯೋಜನಗಳು!

ದೊಡ್ಡಪತ್ರೆ

ನಮ್ಮ ಮನೆಯ ಹಿತ್ತಲಲ್ಲೇ ಸಿಗುವ ಗಿಡಗಳು ಅನೇಕ ಖಾಯಿಲೆಗಳನ್ನು ಶಮನ ಮಾಡುವ ಶಕ್ತಿ ಹೊಂದಿರುತ್ತವೆ. ಹಿಂದಿನ ಕಾಲದ ಜನರು ಆಯುರ್ವೇದ ಔಷಧಗಳನ್ನು ಇಂತಹ ಗಿಡ ಗಂಟಿ, ಬೇರುಗಳಿಂದಲೇ ತಯಾರಿಸುತ್ತಿದ್ದರು. ಅಂತಹ ಒಂದು ಗಿಡಗಳಲ್ಲಿ ದೊಡ್ಡಪತ್ರೆಯೂ ಒಂದು.ಮನೆಯ ಹಿತ್ತಲಿನಲ್ಲಿರುವ ಅದೆಷ್ಟೋ ಸಸ್ಯಗಳು ಸಾಮಾನ್ಯ ಕಾಯಿಲೆಗಳಿಗೆ ಪರಿಣಾಮಕಾರಿ ಪರಿಹಾರವನ್ನು ನೀಡುತ್ತದೆ. ಹೂವಿನ ಗಿಡಗಳ ನಡುವೆಯೇ ಬೆಳೆದು ಆರೋಗ್ಯ ವೃದ್ಧಿಸುವ ಕೆಲಸ ಮಾಡುವ ಪುಟ್ಟ ಪುಟ್ಟ ಗಿಡಗಳ ಆರೋಗ್ಯ ಗುಣ ಮಾತ್ರ ಬಹು ದೊಡ್ಡದು. ಅದರಲ್ಲಿ ದೊಡ್ಡ ಪತ್ರೆ ಗಿಡ ಕೂಡ ಒಂದು. ಸಾಮಾನ್ಯವಾಗಿ ಎಲ್ಲರ ಮನೆಯ ಹಿತ್ತಲಿನಲ್ಲಿ ಈ ದೊಡ್ಡ ಪತ್ರೆ ಗಿಡ ಕಂಡು ಬರುತ್ತದೆ. ಇದನ್ನು ಪುಟ್ಟ ಪಾಟ್‌ನಲ್ಲಿಯೂ ಇಟ್ಟು ಬೆಳೆಸಬಹುದಾಗಿದೆ. ಇದನ್ನು ಸಾಂಬಾರ ಸೊಪ್ಪು ಅಥವಾ ಅಜವನ ಗಿಡ ಎಂದೂ ಕರೆಯುತ್ತಾರೆ.ದೊಡ್ಡಪತ್ರೆಯು ಸುಮಾರು ಮೂವತ್ತರಿಂದ ತೊಂಬತ್ತು ಸೆ.ಮೀ ಎತ್ತರದವರೆಗೆ ಬೆಳೆಯಬಲ್ಲದು, ಇದರ ಎಲೆಗಳು ದೊಡ್ಡ ಮತ್ತು ದಪ್ಪವಾಗಿದ್ದು ಕಡು ಸುವಾಸನೆಯನ್ನು ಹೊಂದಿರುತ್ತವೆ, ದೊಡ್ಡಪತ್ರೆಯ ರಂಬೆಗಳು ಮತ್ತು ಹೂಗಳು ಚಿಕ್ಕದಾಗಿದೆ.ಆಫ್ರಿಕಾ ದೇಶಗಳಲ್ಲಿ ಇದನ್ನು ಪುದೀನಾದ ಬದಲಿಗೆ ಖಾದ್ಯಗಳಲ್ಲಿ ಬಳಸುತ್ತಾರೆ. ದಕ್ಷಿಣಭಾರತದಲ್ಲಿ ಸಾಮಾನ್ಯವಾಗಿ ಇದನ್ನು ಜ್ವರ, ಶೀತ, ಕೆಮ್ಮುಗಳಿಗೆ ಮನೆಮದ್ದಾಗಿ ಬಳಸಲಾಗುತ್ತದೆ. ಗಾಯ ಅಥವಾ ಚೇಳು ಕಡಿತವಾದಾಗ ಪ್ರಥಮ ಚಿಕಿತ್ಸೆಯಾಗಿ ಇದರ ಎಲೆಗಳನ್ನು ಜಜ್ಜಿ ಬಳಸಲಾಗುತ್ತದೆ. ದಕ್ಷಿಣ ಕರ್ನಾಟಕದಲ್ಲಿ ದೊಡ್ಡಪತ್ರೆಯ ಚಟ್ನಿ, ತಂಬುಳಿ ಮಾಡಲಾಗುತ್ತದೆ. ಈಗ ಈ ದೊಡ್ಡ ಪತ್ರೆ ಸೊಪ್ಪು ಯಾವೆಲ್ಲಾ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ ಎನ್ನುವ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಿ ಇಲ್ಲಿದೆ ನೋಡಿ.

ಸಾಮಾನ್ಯವಾಗಿ ಆಹಾರ ಸೇವನೆಯಲ್ಲಿ ಬದಲಾವಣೆ, ಹವಾಮಾನದಲ್ಲಿನ ವ್ಯತ್ಯಾಸದಿಂದ ಶ್ವಾಸಕೋಶದಲ್ಲಿ ಕಫ ಕಟ್ಟಿಕೊಳ್ಳುತ್ತದೆ. ಇದರಿಂದ ಶೀತವಾದರೆ ಎಷ್ಟು ದಿನವಾದರೂ ಕಡಿಮೆಯಾಗುವುದಿಲ್ಲ. ಇದಕ್ಕೆ ದೊಡ್ಡ ಪತ್ರೆ ಸೊಪ್ಪು ಉತ್ತಮ ಮನೆಮದ್ದಾಗಿದೆ. ದೊಡ್ಡಪತ್ರೆ ಎಲೆ, ತುಳಸಿ ಎಲೆ ಮತ್ತು ವೀಳ್ಯದೆಲೆಯನ್ನು ಅರೆದು ರಸ ತೆಗೆದು ಅದಕ್ಕೆ ಜೇನುತುಪ್ಪ ಬೆರೆಸಿ ಕುಡಿದರೆ ನೆಗಡಿ, ಕೆಮ್ಮು ದೂರವಾಗುತ್ತದೆ. ಚಿಕ್ಕ ಮಕ್ಕಳಿಗೂ ಕೂಡ ಈ ದೊಡ್ಡ ಪತ್ರೆ ಸೊಪ್ಪನ್ನು ಔಷಧವಾಗಿ ಬಳಸಬಹುದಾಗಿದೆ.ದೊಡ್ಡ ಪತ್ರೆ ಸೊಪ್ಪನ್ನು ಕೊಯ್ದು ತಂದು ಬೆಂಕಿಯಲ್ಲಿ ಸುಟ್ಟು ಅದರ ರಸವನ್ನು ತೆಗದು ಅದಕ್ಕೆ ಅರ್ಧ ಚಮಚ ಬೆಲ್ಲ ಸೇರಿಸಿ ಕುಡಿದರೆ ಒಂದೆ ದಿನದಲ್ಲಿ ಶೀತ, ಕಟ್ಟಿದ ಮೂಗಿನ ಸಮಸ್ಯೆ ನಿವಾರಣೆಯಾಗುತ್ತದೆ.ದೊಡ್ಡ ಪತ್ರೆ ಸೊಪ್ಪನ್ನು ಬೆಂಕಿಯ ಮೇಲೆ ಇಟ್ಟು ಬಾಡಿಸಿ ನಂತರ ಅದನ್ನು ನೆತ್ತಿಗೆ ಹಾಕಿದರೆ ದೇಹದಲ್ಲಿನ ತಣ್ಣನೆಯ ಅಂಶ ನಿವಾರಣೆಯಾಗಿ ಜ್ವರ, ಶೀತ ಕಡಿಮೆಯಾಗುತ್ತದೆ. ಮಕ್ಕಳಿಗೆ ಇದು ಬೆಸ್ಟ್‌ ಔಷಧವಾಗಿದೆ.ಮಕ್ಕಳಿಗೆ ಜ್ವರ ಬಂದಾಗ ದೊಡ್ಡಪತ್ರೆ ಎಲೆ ಬಾಡಿಸಿ ನೆತ್ತಿಯ ಮೇಲೆ ಇಡುತ್ತಾರೆ. ಈ ಎಲೆಗಳ ಪೇಸ್ಟ್ ತಯಾರಿಸಿ ಅದನ್ನು ಚೇಳು ಕಚ್ಚಿದ ಗಾಯಕ್ಕೆ ಹಚ್ಚಿದರೆ ನೋವು ದೂರವಾಗುತ್ತದೆ. ಒಂದು ವಾರದವರೆಗೆ ದೊಡ್ಡ ಪತ್ರೆಯ ಎಲೆಗಳನ್ನು ತಿಂದರೆ ಅರಿಶಿಣ ಕಾಮಾಲೆ ವಾಸಿಯಾಗುತ್ತದೆ. ದೊಡ್ಡಪತ್ರೆಯನ್ನು ಜೀರಿಗೆ, ಎಳ್ಳಿನೊಂದಿಗೆ ಹುರಿದು ಕಾಯಿತುರಿ ಜೊತೆ ರುಬ್ಬಿ ಅದಕ್ಕೆ ಉಪ್ಪು, ಮಜ್ಜಿಗೆ ಹಾಕಿ ತಂಬುಳಿ ಮಾಡಿ ಕುಡಿದರೆ ಪಿತ್ತದ ಖಾಯಿಲೆಗಳು ಗುಣಮುಖವಾಗುವುದು.ದೊಡ್ಡಪತ್ರೆ ಎಲೆಯನ್ನು ಉಪ್ಪಿನ ಸಹಿತ ತಿಂದರೆ ಜೀರ್ಣಶಕ್ತಿ ಅಧಿಕವಾಗುತ್ತದೆ. ದೊಡ್ಡ ಪತ್ರೆ ಎಲೆಯನ್ನು ಹುಳುಕಡ್ಡಿಯ ಭಾಗಕ್ಕೆ ತಿಕ್ಕುತ್ತಿದ್ದರೆ ಹುಳುಕಡ್ಡಿಯ ನಿವಾರಣೆಯಾಗುತ್ತದೆ. ದೊಡ್ಡ ಪತ್ರೆಯಲ್ಲಿ ವಿಟಮಿನ್‌ ಸಿ, ಫೈಬರ್‌ ಮತ್ತು ಕ್ಯಾಲ್ಸಿಯಂ ಗುಣ ಹೇರಳವಾಗಿದೆ. ಇದು ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಬಲಗೊಳಿಸಲು ಸಹಾಯ ಮಾಡುತ್ತದೆ.ದೊಡ್ಡ ಪತ್ರೆಯ ಗಿಡದ ಎಲೆಯನ್ನು ತಂದು ಬಾಡಿಸಿ ರಸ ತೆಗೆದು ಜೇನುತುಪ್ಪ ಸೇರಿಸಿ ಕುಡಿದರೆ ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ. ಅರಿಸಿನ ಕಾಮಾಲೆ ಇದ್ದವರಿಗೂ ದೊಡ್ಡ ಪತ್ರೆ ಸೊಪ್ಪು ಉತ್ತಮ ಮನೆ ಮದ್ದಾಗಿದೆ. ಈ ಎಲೆಯನ್ನು ಆಹಾರ ರೂಪದಲ್ಲಿ ಅಂದರೆ ಚಟ್ನಿ, ತಂಬುಳಿ ಮಾಡಿ ಸೇವಿಸಿದರೆ ಕೆಲವೇ ದಿನಗಳಲ್ಲಿ ಕಾಯಿಲೆ ಚೇತರಿಕೆಯನ್ನು ಕಾಣುತ್ತದೆ. ಕಂಬಳಿ ಹುಳ, ಇಸುಬು ಇಂತಹ ಕೀಟಗಳು ಕಚ್ಚಿದ್ದರೆ ಸಹಿಸಲಾರದ ಉರಿ ಚರ್ಮಕ್ಕಾಗುತ್ತದೆ. ಇದನ್ನು ತಡೆಯಲು ಈ ದೊಡ್ಡ ಪತ್ರೆ ಸೊಪ್ಪು ಸಹಾಯಕವಾಗಿದೆ.
ದೊಡ್ಡ ಪತ್ರೆ ಎಲೆಯ ರಸಕ್ಕೆ ಬೆಲ್ಲ ಸೇರಿಸಿ ಕುಡಿದಾಗ ಬೆಲ್ಲ ಕೂಡ ದೇಹಕ್ಕೆ ಒಳ್ಳೆಯ ಪದಾರ್ಥವಾಗಿದೆ. ಇದು ದೇಹದಿಂದ ವಿಷಯುಕ್ತ ಪದಾರ್ಥವನ್ನು ಹೊರಹಾಕಲು ನೆರವಾಗುತ್ತದೆ. ಆದ್ದರಿಂದ ನಿಮ್ಮ ಮನೆಯ ಹಿತ್ತಲಿನಲ್ಲಿ ದೊಡ್ಡ ಪತ್ರೆ ಸೊಪ್ಪಿದ್ದರೆ ಜೋಪಾನ ಮಾಡಿ ಉಳಿಸಿಕೊಳ್ಳ.

Continue Reading

ಆರೋಗ್ಯ

ಕೊಲೆಸ್ಟ್ರಾಲ್ ಕಂಟ್ರೋಲ್ ಮಾಡಲು ಈ ಟಿಪ್ಸ್ ಫಾಲೋ ಮಾಡಿ! ಹೃದಯವನ್ನು ಆರೋಗ್ಯವಾಗಿಡಿ..!

ಕೊಲೆಸ್ಟ್ರಾಲ್ ಅನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಆರೋಗ್ಯಕರ ಜೀವನಕ್ಕೆ ಅತ್ಯಗತ್ಯ. ಹೆಚ್ಚಿನ ಕೊಲೆಸ್ಟ್ರಾಲ್ ಹೃದಯ ಕಾಯಿಲೆ, ಸ್ಟ್ರೋಕ್, ಮತ್ತು ಇತರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಔಷಧಿಗಳು ಮತ್ತು ಆಹಾರ ಕ್ರಮದ ಜೊತೆಗೆ, ಮನೆಯಲ್ಲಿಯೇ ಲಭ್ಯವಿರುವ ಕೆಲವು ವಸ್ತುಗಳನ್ನು ಬಳಸಿಕೊಂಡು ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಬಹುದು. ಈ ಲೇಖನದಲ್ಲಿ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಕೆಲವು ಸರಳ ಮತ್ತು ಪರಿಣಾಮಕಾರಿ ಸಲಹೆಗಳನ್ನು ತಿಳಿಯಿರಿ.

ಕೊಲೆಸ್ಟ್ರಾಲ್ ಎಂಬುದು ರಕ್ತದಲ್ಲಿ ಕಂಡುಬರುವ ಕೊಬ್ಬಿನಂತಹ ವಸ್ತು. ಇದು ದೇಹದ ಕಾರ್ಯನಿರ್ವಹಣೆಗೆ ಅಗತ್ಯವಾದರೂ, ಅತಿಯಾದ ಕೊಲೆಸ್ಟ್ರಾಲ್ (ವಿಶೇಷವಾಗಿ LDL ಅಥವಾ “ಕೆಟ್ಟ” ಕೊಲೆಸ್ಟ್ರಾಲ್) ರಕ್ತನಾಳಗಳಲ್ಲಿ ಸಂಗ್ರಹವಾಗಿ ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ. HDL ಅಥವಾ “ಒಳ್ಳೆಯ” ಕೊಲೆಸ್ಟ್ರಾಲ್ ದೇಹಕ್ಕೆ ಒಳಿತು ಮಾಡುತ್ತದೆ. ಆದ್ದರಿಂದ, LDL ಕಡಿಮೆ ಮಾಡುವುದು ಮತ್ತು HDL ಹೆಚ್ಚಿಸುವುದು ಮುಖ್ಯ.

ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಸರಳ ಮನೆಮದ್ದುಗಳು

ಕೊಲೆಸ್ಟ್ರಾಲ್ ನಿಯಂತ್ರಿಸಲು ಕೆಲವು ಮನೆಮದ್ದುಗಳು ಪರಿಣಾಮಕಾರಿಯಾಗಿವೆ:
1. ಬೆಳ್ಳುಳ್ಳಿ: ಬೆಳ್ಳುಳ್ಳಿಯು ಕೊಲೆಸ್ಟ್ರಾಲ್ ಕಡಿಮೆ ಮಾಡಲು ಸಹಾಯಕವಾಗಿದೆ. ದಿನಕ್ಕೆ 1-2 ಬೆಳ್ಳುಳ್ಳಿ ಎಸಳುಗಳನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿ.
2. ಶುಂಠಿ: ಶುಂಠಿಯ ರಸವನ್ನು ಜೇನುತುಪ್ಪದೊಂದಿಗೆ ಸೇವಿಸುವುದರಿಂದ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಬಹುದು.
3. ಓಟ್ಸ್: ಓಟ್ಸ್‌ನಲ್ಲಿ ಒಳಗೊಂಡಿರುವ ಫೈಬರ್ ಕೊಲೆಸ್ಟ್ರಾಲ್ ಹೀರಿಕೊಳ್ಳುವಿಕೆಯನ್ನು ಕಡಿಮೆ ಮಾಡುತ್ತದೆ. ದಿನನಿತ್ಯದ ಉಪಾಹಾರದಲ್ಲಿ ಓಟ್ಸ್ ಸೇವಿಸಿ.
4. ತುಳಸಿ: ತುಳಸಿ ಚಹಾವನ್ನು ಕುಡಿಯುವುದರಿಂದ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಬಹುದು.
5. ಬಾದಾಮಿ: ದಿನಕ್ಕೆ ಕೆಲವು ಬಾದಾಮಿಗಳನ್ನು ಸೇವಿಸುವುದರಿಂದ HDL ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಬಹುದು.

ಆರೋಗ್ಯಕರ ಆಹಾರ ಕ್ರಮ

ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಆಹಾರ ಕ್ರಮವು ಕೀಲಿಯಾಗಿದೆ:
 ಕೊಬ್ಬಿನ ಆಹಾರವನ್ನು ತಪ್ಪಿಸಿ: ಟ್ರಾನ್ಸ್ ಫ್ಯಾಟ್, ತಿಂಡಿಗಳು, ಮತ್ತು ತೈಲಯುಕ್ತ ಆಹಾರವನ್ನು ಕಡಿಮೆ ಮಾಡಿ.
 ಫೈಬರ್ ಆಹಾರ: ಹಣ್ಣುಗಳು, ತರಕಾರಿಗಳು, ಮತ್ತು ಧಾನ್ಯಗಳನ್ನು ಆಹಾರದಲ್ಲಿ ಸೇರಿಸಿ.
 ಒಮೆಗಾ-3: ಮೀನು, ಚಿಯಾ ಬೀಜಗಳು, ಮತ್ತು ಅಗಸೆ ಬೀಜಗಳಂತಹ ಒಮೆಗಾ-3 ಆಹಾರಗಳು ಹೃದಯಕ್ಕೆ ಒಳ್ಳೆಯದು.
 ಗ್ರೀನ್ ಟೀ: ಗ್ರೀನ್ ಟೀಯಲ್ಲಿರುವ ಆಂಟಿಆಕ್ಸಿಡೆಂಟ್‌ಗಳು ಕೊಲೆಸ್ಟ್ರಾಲ್ ಕಡಿಮೆ ಮಾಡಲು ಸಹಾಯಕ.
 ನೀರಿನ ಸೇವನೆ: ದಿನಕ್ಕೆ ಕನಿಷ್ಠ 8-10 ಗ್ಲಾಸ್ ನೀರನ್ನು ಕುಡಿಯಿರಿ.

ವ್ಯಾಯಾಮದ ಪ್ರಾಮುಖ್ಯತೆ

ದೈನಂದಿನ ವ್ಯಾಯಾಮವು ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಅತ್ಯಗತ್ಯ. ವಾರಕ್ಕೆ ಕನಿಷ್ಠ 150 ನಿಮಿಷಗಳ ಮಧ್ಯಮ ತೀವ್ರತೆಯ ವ್ಯಾಯಾಮವನ್ನು ಮಾಡಿ. ಇದರಲ್ಲಿ ತ್ವರಿತ ನಡಿಗೆ, ಈಜು, ಸೈಕ್ಲಿಂಗ್, ಅಥವಾ ಯೋಗವನ್ನು ಸೇರಿಸಬಹುದು. ವ್ಯಾಯಾಮವು HDL ಕೊಲೆಸ್ಟ್ರಾಲ್‌ನ್ನು ಹೆಚ್ಚಿಸುವುದರ ಜೊತೆಗೆ ಒಟ್ಟಾರೆ ಹೃದಯ ಆರೋಗ್ಯವನ್ನು ಸುಧಾರಿಸುತ್ತದೆ.

ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಜೀವನಶೈಲಿಯ ಬದಲಾವಣೆಗಳು ಮುಖ್ಯ:
 ಧೂಮಪಾನ ತ್ಯಜಿಸಿ: ಧೂಮಪಾನವು HDL ಕೊಲೆಸ್ಟ್ರಾಲ್‌ನ್ನು ಕಡಿಮೆ ಮಾಡುತ್ತದೆ.
 ತೂಕ ನಿಯಂತ್ರಣ: ದೇಹದ ತೂಕವನ್ನು ಸಮತೋಲನದಲ್ಲಿಡುವುದರಿಂದ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ.
 ಒತ್ತಡ ನಿರ್ವಹಣೆ: ಧ್ಯಾನ, ಯೋಗ, ಮತ್ತು ಶ್ವಾಸಕೋಶದ ವ್ಯಾಯಾಮಗಳು ಒತ್ತಡವನ್ನು ಕಡಿಮೆ ಮಾಡುತ್ತವೆ.
 ನಿಯಮಿತ ತಪಾಸಣೆ: ಕೊಲೆಸ್ಟ್ರಾಲ್ ಮಟ್ಟವನ್ನು ತಿಳಿಯಲು ವೈದ್ಯರ ಬಳಿ ನಿಯಮಿತ ತಪಾಸಣೆ ಮಾಡಿಸಿ.

ಕೊಲೆಸ್ಟ್ರಾಲ್ ನಿಯಂತ್ರಣವು ಕೇವಲ ಔಷಧಿಗಳಿಗೆ ಸೀಮಿತವಲ್ಲ. ಸರಿಯಾದ ಆಹಾರ ಕ್ರಮ, ವ್ಯಾಯಾಮ, ಮತ್ತು ಜೀವನಶೈಲಿಯ ಬದಲಾವಣೆಗಳ ಮೂಲಕ ಆರೋಗ್ಯಕರ ಹೃದಯವನ್ನು ಕಾಪಾಡಿಕೊಳ್ಳಬಹುದು. ಈ ಸರಳ ಮನೆಮದ್ದುಗಳನ್ನು ಅನುಸರಿಸಿ ಮತ್ತು ನಿಮ್ಮ ಆರೋಗ್ಯವನ್ನು ರಕ್ಷಿಸಿಕೊಳ್ಳಿ.

Continue Reading

ಆರೋಗ್ಯ

 ಸರಕಾರ ಹೈ ಅಲರ್ಟ್‌, ಆಸ್ಪತ್ರೆಗಳಲ್ಲಿ ಕೋವಿಡ್‌ ಬೆಡ್‌ ಹೆಚ್ಚಳ, ಆರೋಗ್ಯ ಸಿಬ್ಬಂದಿ ರಜೆ ರದ್ದು

ಬೆಂಗಳೂರು: ಕೊರೊನಾ ವೈರಸ್‌ (Corona Virus) ಹೆಚ್ಚಳ ಹಿನ್ನೆಲೆ ಸರ್ಕಾರ (karnataka Government) ಹೈ ಅಲರ್ಟ್ ಆಗಿದ್ದು, ಬೆಂಗಳೂರಿನ ಆಸ್ಪತ್ರೆಗಳಲ್ಲಿ ಕೋವಿಡ್ ಬೆಡ್ (Covid 19 beds) ಮೀಸಲಿಡಲು ಸರ್ಕಾರ ಸೂಚನೆ ನೀಡಿದೆ. ಭಾರತಕ್ಕೆ ಕೊರೋನಾ ರೂಪಾಂತರ ಹೊಸ ತಳಿ ಕಾಲಿಟ್ಟಿದ್ದು, ಇದುವರೆಗೂ ಭಾರತದಾದ್ಯಂತ ಒಂದು ಸಾವಿರಕ್ಕೂ ಹೆಚ್ಚು ಕೊರೋನಾ ಪ್ರಕರಣಗಳು ಪತ್ತೆ ಆಗಿವೆ. ಇದೀಗ ರಾಜ್ಯದಲ್ಲಿ ಇಂದು 80 ಜನರಿಗೆ ಕೊರೋನಾ ಸೋಂಕು ದೃಢವಾಗಿದೆ. ಅಲ್ಲದೆ ಬೆಂಗಳೂರಿನಲ್ಲೇ ನಿನ್ನೆ 73 ಜನರಿಗೆ ಕೊರೊನಾ ಪಾಸಿಟಿವ್ (Covid positive) ವರದಿ ಬಂದಿದೆ.

ರಾಜ್ಯದಲ್ಲಿ ಕೋವಿಡ್ ಆಕ್ಟಿವ್ ಪ್ರಕರಣಗಳ ಸಂಖ್ಯೆ ಇದೀಗ 80ಕ್ಕೆ ಏರಿಕೆಯಾಗಿವೆ. ದಕ್ಷಿಣ ಕನ್ನಡ ವಿಜಯನಗರ ಜಿಲ್ಲೆಯಲ್ಲಿ ತಲಾ ಒಂದೊಂದು ಪ್ರಕರಣ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಎರಡು, ಮೈಸೂರು ಜಿಲ್ಲೆಯಲ್ಲಿ ಮೂವರಿಗೆ ಕೊರೋನಾ ಪಾಸಿಟಿಟೀವ್ ವರದಿ ಬಂದಿದ್ದು, ಆರೋಗ್ಯ ಇಲಾಖೆಯಿಂದ ಕೋವಿಡ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ.

ಕೋವಿಡ್ ಪಾಸಿಟಿವ್ ಸೋಂಕಿತರು ಬೆಂಗಳೂರಿನಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದಾರೆ. ಕೋವಿಡ್ ಟೆಸ್ಟಿಂಗ್ ಕೂಡ ಬೆಂಗಳೂರಿನಲ್ಲಿ ಹೆಚ್ಚಿಸಲಾಗಿದೆ. ಇಂದಿಗೆ ರಾಜ್ಯದಲ್ಲಿ ಒಟ್ಟು 80 ಕೋವಿಡ್ ಪಾಸಿಟಿವ್ ಸಕ್ರಿಯ ಪ್ರಕರಣಗಳು ಕಂಡುಬಂದಿದ್ದು, ಬೆಂಗಳೂರಿನಲ್ಲೇ 73 ಪ್ರಕರಣಗಳಿವೆ. ಏಲ್ಲಿಯೂ ಕೋವಿಡ್ ನಿಂದಾಗಿ ಸಾವು ಸಂಭವಿಸಿಲ್ಲ. ಆರೋಗ್ಯ ಇಲಾಖೆ ಕೋವಿಡ್ ಪರಿಸ್ಥಿತಿಯನ್ನು ನಿಗಾ ವಹಿಸಿದ್ದು, ಹತೋಟಿಗೆ ತರಲು ಕ್ರಮಗಳನ್ನ ಕೈಗೊಳ್ಳುತ್ತಿದೆ. ಆತಂಕ ಪಡುವ ಪರಿಸ್ಥಿತಿ ಬಂದಿಲ್ಲವಾದರೂ, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲಿ ಎಂದು ನಾನು ಮನವಿ ಮಾಡುತ್ತೇನೆ” ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಟ್ವೀಟ್‌ ಮೂಲಕ ಸೂಚನೆ ನೀಡಿದ್ದಾರೆ.

ದಿನದಿಂದ ದಿನಕ್ಕೆ ಕರೋನಾ ಸೋಂಕಿತರ ಸಂಖ್ಯೆ ಏರಿಕೆಯಾದ ಬೆನ್ನಲ್ಲೇ, ಆರೋಗ್ಯ ಇಲಾಖೆ ಸಿಬ್ಬಂದಿ ರಜಾ ಹಾಕಿ ತೆರಳದೆ ಕೇಂದ್ರ ಸ್ಥಾನದಲ್ಲಿಯೇ ಇದ್ದು ಕಾರ್ಯ ನಿರ್ವಹಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಕೋವಿಡ್ ನಿಯಂತ್ರಣ ಸಂಬಂಧ ಬೆಂಗಳೂರಿನ ಸಿಎಂ ನಿವಾಸ ಕಾವೇರಿಯಲ್ಲಿ ನಿನ್ನೆ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕೋವಿಡ್ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಸಿಎಂ ನಿರ್ದೇಶನ ನೀಡಿದ್ದಾರೆ ಎಂದರು.‌

ಈಗಾಗಲೇ ಆರೋಗ್ಯ ಇಲಾಖೆ ಕೋವಿಡ್ ಮಾರ್ಗಸೂಚಿಯನ್ನ ಹೊರಡಿಸಿದೆ.‌ ಕೇಂದ್ರ ಸರ್ಕಾರದ ಜೊತೆ ಇಲಾಖೆ ಅಧಿಕಾರಿಗಳು ನಿರಂತರ ಸಂಪರ್ಕದಲ್ಲಿದ್ದು, ಮಾನಿಟರ್ ಮಾಡುತ್ತಿದ್ದಾರೆ. ಮಕ್ಕಳಿಗೆ ಕೋವಿಡ್ ಹರಡದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ. ಈ ಹಿನ್ನೆಲೆಯಲ್ಲಿ ಜ್ವರ, ಶೀತ ಕಂಡುಬಂದ ಮಕ್ಕಳನ್ನ ಶಾಲೆಗೆ ಕಳಿಸದಂತೆ ಪೊಷಕರು ಎಚ್ಚರಿಕೆ ವಹಿಸಬೇಕು. ಅಲ್ಲದೇ ಶಾಲಾ ಆಡಳಿತ ಮಂಡಳಿಯವರು ಕೂಡಾ, ಜ್ವರ ಬಂದ ಮಕ್ಕಳಿಗೆ ರಜೆ ನೀಡಬೇಕು. ಈ ನಿಟ್ಟಿನಲ್ಲಿ ಸರ್ಕಾರ ಮಾರ್ಗಸೂಚಿ ಹೊರಡಿಸಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಮುನ್ನೆಚ್ಚರಿಕೆ ದೃಷ್ಟಿಯಿಂದ ರೆಮ್ಡಿಸೀವರ್ ಇಂಜೆಕ್ಷನ್ ಅನ್ನು ಖರೀದಿಸಲು ಸೂಚನೆ ನೀಡಲಾಗಿದೆ. ಇದು ಕೋವಿಡ್ ಒಮೆಕ್ರಾನ್ ಜೆ.ಎನ್ 1 ತಳಿಯಾಗಿದ್ದು, ಸೌಮ್ಯ ಸ್ವಭಾವದ ಲಕ್ಷಣಗಳನ್ನ ಹೊಂದಿದೆ. ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ ಸ್ವಲ್ಪ ಏರಿಕೆ ಕಂಡರು, ಗಂಭೀರವಾಗಿಲ್ಲ. ಹೀಗಾಗಿ ಜನರು ಆತಂಕ ಪಡುವ ಅಗತ್ಯವಿಲ್ಲ. ಆದರೆ ಎಚ್ಚರಿಕೆ ವಹಿಸುವುದು ಮುಖ್ಯ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು

Continue Reading

ಆರೋಗ್ಯ

ಶಾಲಾಕಾಲೇಜುಗಳಿಗೆ ಪ್ರತ್ಯೇಕ ಮಾರ್ಗಸೂಚಿ ಇಲ್ಲ-ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ, ಆದರೆ ಇದೀಗ ಮೇ.29 ರಿಂದ ಶಾಲಾ-ಕಾಲೇಜುಗಳು ಆರಂಭವಾಗಲಿದ್ದು, ಯಾವುದೇ ರೀತಿಯ ಪ್ರತ್ಯೇಕ ಮಾರ್ಗಸೂಚಿಗಳಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು,
ಈ ಬಗ್ಗೆ ಮಾತನಾಡಿದ ಅವರು ರಾಜ್ಯದಲ್ಲಿ ಕೋವಿಡ್ ಸೋಂಕುಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ, ಮೇ.29 ರಂದು ಶಾಲಾ ಕಾಲೇಜುಗಳು ಆರಂಭವಾಗಲಿದೆ, ಅದರೆ ಸದ್ಯದ ಪರಿಸ್ಧಿತಿಗೆ ಯಾವುದೇ ಮಾರ್ಗಸೂಚಿ ನೀಡಿಲ್ಲ ಎಂದರು,
ಶಾಲೆಗಳಿಗೆ ಮಾರ್ಗಸೂಚಿ ನೀಡಿಲ್ಲ ಎಂದು ಸುಮ್ಮನಾಗಬಾರದು, ಬದಲಿಗೆ ಮುಂಜಾಗರೂಕ ಕ್ರಮ ಕೈಗೊಳ್ಳಬೇಕು ಎಂದು ಗೃಹ ಸಚಿವರು ತಿಳಿಸಿದ್ದಾರೆ, ಜೊತೆಗೆ ಮುಂದಿನ ದಿನಗಳಲ್ಲಿ ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಕೊಟ್ಟರೆ ಅದನ್ನು ಅನುಷ್ಠಾನಕ್ಕೆ ತರುತ್ತೇವೆ ಎಂದು ಹೇಳಿದರು,

Continue Reading
Advertisement

Trending