ಬೆಂಗಳೂರು
ತಪ್ಪು ಸರ್ಕಾರದ್ದು ನಾವಿಲ್ಲ ಬಲಿ ಕಾ ಬಕ್ರಾ ಆಗಿದ್ದೇವೆ-ರಾಜ್ಯ ಕ್ರಿಕೆಟ್ ಸಂಸ್ಧೆ ರಿಟ್ ಅರ್ಜಿ!

ಬೆಂಗಳೂರು: ಕರ್ನಾಟಕದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಸರ್ಕಾರವು ತನ್ನ ತಪ್ಪು ಮುಚ್ಚಿಟ್ಟುಕೊಳ್ಳಲು ಹಾಗೂ ಜನಾಕ್ರೋಶವನ್ನು ತಪ್ಪಿಸಿಕೊಳ್ಳಲು ನಮ್ಮನ್ನು ಬಲಿಪಶುಗಳನ್ನಾಗಿಸಿದ್ದಾರೆ ಎಂದು ಕೆಎಸ್ಸಿಎ ಪದಾಧಿಕಾರಿಗಳು ಅಳಲು ತೋಡಿಕೊಂಡಿದ್ದಾರೆ, ಕೆಎಸ್ಸಿಎ ಪದಾಧಿಕಾರಿಗಳು ಈ ಕುರಿತು ಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ,
ಪೊಲೀಸರು ಪ್ರಾಥಮಿಕ ತನಿಖೆಯನ್ನು ನಡೆಸಿಲ್ಲ, ಸರ್ಕಾರದ ಪಾತ್ರದ ಬಗ್ಗೆ ಉಲ್ಲೇಖಿಸಿಯೇ ಇಲ್ಲ, ಏಕಾಏಕಿ ನಮ್ಮಲ್ಲರ ಮೇಲೆ ಎಫ್ಐಆರ್ ದಾಖಲಿಸಿದ್ದಾರೆಂದು ಅರ್ಜಿಯಲ್ಲಿ ಹೇಳಲಾಗಿದೆ, ಹೈಕೋರ್ಟ್ ಸ್ವಯಂಪ್ರೇರಿತವಾಗಿ ವಿಚಾರಣೆ ನಡೆಸಿದ ಈ ಪ್ರಕರಣದಲ್ಲಿ ಕೆಎಸ್ಸಿಎ ಅಧ್ಯಕ್ಷ ರಘುರಾಮ್ ಭಟ್, ಕಾರ್ಯದರ್ಶಿ ಎ ಶಂಕರ್, ಖಜಾಂಚಿ ಇ.ಎಸ್.ಜಯರಾಂ ಅವರ ವಿರುದ್ದ ಎಫ್ಐಆರ್ ದಾಖಲಾಗಿತ್ತು,
ಬೆಂಗಳೂರು ಪೊಲೀಸ್ ಆಯುಕ್ತರಾದ ಬಿ ದಯಾನಂದ ಸೇರಿದಂತೆ ಐವರು ಅಧಿಕಾರಿಗಳನ್ನು ಸರ್ಕಾರ ಅಮಾನತು ಮಾಡಿರುವುದು ಸರ್ಕಾರದ ವೈಫಲ್ಯ ಹಾಗೂ ಪೊಲೀಸ್ ಇಲಾಖೆಯ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಕೆಎಸ್ಸಿಎ ವಾದಿಸಿದೆ,