Connect with us

ದೇಶ

ರೇಷನ್ ಕಾರ್ಡ್​​ನಿಂದ ಏನೆಲ್ಲಾ ಪ್ರಯೋಜನ?: ನೀವು ಪಡೆದುಕೊಂಡಿದ್ದೀರಾ?

ಬೆಂಗಳೂರು: ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಅನುಕೂಲ ಕಲ್ಪಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ. ಅದರಲ್ಲಿ ಪ್ರಮುಖವಾಗಿ ಪಡಿತರ ಚೀಟಿಯೂ ಒಂದು.

ರೇಷನ್ ಕಾರ್ಡ್ ಇದ್ದರೆ ಆಯಾ ಕಾರ್ಡ್​​ಗಳನ್ನು ಅನುಸರಿಸಿ ಬಡ ಮತ್ತು ಮಧ್ಯಮ ವರ್ಗದವರಿಗೆ ಕಡಿಮೆ ದರದಲ್ಲಿ ಅಕ್ಕಿ, ಬೇಳೆ, ಗೋಧಿ, ಸಕ್ಕರೆ ಸೇರಿ ಹಲವು ಆಹಾರ ಪದಾರ್ಥಗಳು ದೊರೆಯುತ್ತದೆ. ಬಿಪಿಎಲ್ ಕಾರ್ಡ್​ದಾರರ ಕುಟುಂಬಕ್ಕೆ ಅಕ್ಕಿ, ಗೋಧಿ, ಸಕ್ಕರೆ ಮತ್ತಿತರ ಆಹಾರ ಪದಾರ್ಥಿಗಳು ಉಚಿತವಾಗಿ ದೊರೆತರೆ, ಎಪಿಎಲ್ ಕಾರ್ಡ್​ದಾರರಿಗೆ ಸರ್ಕಾರ ನಿಗದಿಪಡಿಸಿದ ಕಡಿಮೆ ದರದಲ್ಲಿ ಪಡಿತರ ಸಿಗುತ್ತದೆ. ಇದರಿಂದ ಹಲವಾರು ಕುಟುಂಬಗಳು ನೆಮ್ಮದಿಯ ಜೀವನ ಸಾಗಿಸಬಹುದಾಗಿದೆ. ಇಷ್ಟೇ ಅಲ್ಲದೆ, ರೇಷನ್ ಕಾರ್ಡ್ ಇದ್ದರೆ ಇನ್ನೂ ಹಲವು ಸೌಲಭ್ಯಗಳು ಸರ್ಕಾರದಿಂದ ಉಚಿತವಾಗಿ ಸಿಗುತ್ತವೆ. ಅದೆಷ್ಟೋ ಜನರಿಗೆ ಇದರ ಸರಿಯಾದ ಮಾಹಿತಿ ಇರುವುದಿಲ್ಲ.

ಕಾರ್ಡ್ ಇದ್ದರೆ ಗ್ಯಾಸ್ ಸಿಲಿಂಡರ್, ಆರೋಗ್ಯ ವಿಮೆ, ಶಿಕ್ಷಣಕ್ಕೆ ಆರ್ಥಿಕ ನೆರವು, ಉಚಿತ ಹೊಲಿಗೆ ಯಂತ್ರ ಸೇರಿದಂತೆ ಹಲವು ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಸರ್ಕಾರದಿಂದ ಯಾವೆಲ್ಲಾ ಸೌಲಭ್ಯಗಳು ಸಿಗುತ್ತವೆ ಎಂಬುದರ ಮಾಹಿತಿ ಇಲ್ಲಿದೆ.

ಮಕ್ಕಳ ಶಿಕ್ಷಣಕ್ಕೆ ಆರ್ಥಿಕ ನೆರವು: ಒಂದು ಕುಟುಂಬದ ಆರ್ಥಿಕ ಸ್ಥಿತಿಗತಿಯನ್ನು ರೇಷನ್ ಕಾರ್ಡ್ ತೋರಿಸುತ್ತಿರುವುದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಶಿಕ್ಷಣ ನೆರವು ಯೋಜನೆಗಳಲ್ಲಿ ಅರ್ಹತೆ ರೂಪದಲ್ಲಿ ರೇಷನ್ ಕಾರ್ಡ್​ ಬಳಕೆ ಮಾಡಬಹುದು. ಶುಲ್ಕ ಮನ್ನಾ ಹಾಗೂ ವಿದ್ಯಾರ್ಥಿ ವೇತನ ಮತ್ತಿತರ ಸೌಲಭ್ಯ ದೊರೆಯುತ್ತದೆ. ಅಷ್ಟೇ ಅಲ್ಲದೆ, ವ್ಯಕ್ತಿಯ ಹೆಸರು, ವಯಸ್ಸು ಮತ್ತು ವಿಳಾಸ, ಕುಟುಂಬದ ವಿವರಗಳನ್ನು ಒಳಗೊಂಡಿರುವ ಕಾರಣ ರೇಷನ್ ಕಾರ್ಡ್​​ ಅನ್ನು ಪ್ರಮುಖ ಗುರುತಿನ ಚೀಟಿಯಾಗಿಯೂ ಬಳಸಬಹುದು. ಮತದಾನ ಮತ್ತಿತರ ಕಡೆ ಐಡಿ ಪ್ರೂಪ್ ಆಗಿ ಈ ಕಾರ್ಡ್ ಬಳಕೆ ಮಾಡಬಹುದು. ಕೆಲವು ಪಿಂಚಣಿ ಯೋಜನೆಗಳಿಗೆ ಅಥವಾ ಬ್ಯಾಂಕ್​ನಲ್ಲಿ ಖಾತೆ ತೆರೆಯಲು ಸಹ ಪಡಿತರ ಚೀಟಿ ಬಳಸಬಹುದಾಗಿದೆ.

ಉಜ್ವಲ ಗ್ಯಾಸ್ ಸಿಲಿಂಡರ್ : ಅಡುಗೆ ಗ್ಯಾಸ್ ಇಲ್ಲದವರಿಗೆ ಕೇಂದ್ರ ಸರ್ಕಾರ ನೀಡುತ್ತಿರುವ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಸಿಲಿಂಡರ್ ಸಿಗುತ್ತದೆ. ರೇಷನ್ ಕಾರ್ಡ್ ಬಳಸಿಕೊಂಡು ಈ ಯೋಜನೆ ಪಡೆಯುಬಹುದಾಗಿದೆ.

ಶ್ರಮಿಕ್ ಕಾರ್ಡ್ : ಅಸಂಘಟಿತ ವಲಯದ ಕಾರ್ಮಿಕರಿಗೆ ಶ್ರಮಿಕ್ ಕಾರ್ಡ್ ಯೋಜನೆಯಡಿ ರೇಷನ್ ಕಾರ್ಡ್ ಆಧಾರವಾಗಿ ಕೆಲಸದ ಲಾಭ, ಉದ್ಯೋಗ ಅವಕಾಶ ಸೇರಿದಂತೆ ಹಲವು ನೆರವು ದೊರೆಯುತ್ತದೆ. ಆ ಮೂಲಕ ಕಾರ್ಮಿಕರು ಕಾನೂನುಬದ್ಧವಾಗಿ ಸರ್ಕಾರದ ಸವಲತ್ತುಗಳನ್ನು ಪಡೆಯಬಹುದು ಎನ್ನುತ್ತಾರೆ ಅಧಿಕಾರಿಗಳು.

ರೈತರ ಬೆಳೆ ವಿಮೆಗೆ ಕಾರ್ಡ್ ಬಳಕೆ : ರೈತರ ಬೆಳೆ ವಿಮೆಗೂ ಈ ಕಾರ್ಡ್ ಬಳಕೆಯಾಗುತ್ತದೆ. ಕೃಷಿಯಲ್ಲಿ ನಷ್ಟ ಸಂಭವಿಸಿದರೆ ರೈತರು ರೇಷನ್ ಕಾರ್ಡ್ ಮೂಲಕ ಈ ಯೋಜನೆಗೆ ಅರ್ಜಿ ಸಲ್ಲಿಸಿ ಬೆಳೆ ನಷ್ಟ ಪರಿಹಾರ ಪಡೆಯಬಹುದು. ವಿಶೇಷವಾಗಿ ಬರ, ಪ್ರವಾಹ, ಮಳೆಹಾನಿ ವೇಳೆ ಗುರುತಿಗಾಗಿ ರೇಷನ್ ಕಾರ್ಡ್ ನೀಡಬಹುದು.

ಮನೆ ನಿರ್ಮಾಣಕ್ಕೂ ನೆರವು : ಎಷ್ಟೋ ಜನರಿಗೆ ಮನೆ ನಿರ್ಮಾಣಕ್ಕೆ ಸರ್ಕಾರದಿಂದ ಆರ್ಥಿಕ ನೆರವು ಸಿಗುತ್ತದೆ ಎಂಬುದೇ ಗೊತ್ತಿರುವುದಿಲ್ಲ. ರೇಷನ್ ಕಾರ್ಡ್​​ದಾರರು ಮನೆಗೆ ಅರ್ಜಿ ಸಲ್ಲಿಸಿ ಹಣದ ಸಹಾಯ ಪಡೆದು ತಮ್ಮ ಸ್ವಂತ ಮನೆ ಕಟ್ಟಿಕೊಳ್ಳಬಹುದು. ಪ್ರಧಾನ ಮಂತ್ರಿ ಅವಾಜ್ ಯೋಜನೆ (ರಾಜ್ಯ ಸರ್ಕಾರದಲ್ಲೂ ಈ ಯೋಜನೆ ಇದೆ) ಬಳಕೆ ಆಗುತ್ತದೆ. ಜೊತೆಗೆ ಕಾರ್ಡ್ ಇದ್ದರೆ ಮನೆ ಸಾಲದ ಮೇಲಿನ ಸಬ್ಸಿಡಿ ಸಹ ಸಿಗುತ್ತದೆ.

ಮಹಿಳೆಯರಿಗೆ ಹೊಲಿಗೆ ಯಂತ್ರ : ಮಹಿಳೆಯರು ಸ್ವಾವಲಂಬಿ ಆಗಲು ರಾಜ್ಯ ಸರ್ಕಾರ ನೀಡುತ್ತಿರುವ ಮತ್ತೊಂದು ಯೋಜನೆ ಎಂದರೆ ಅದು ಉಚಿತ ಹೊಲಿಗೆ ಯಂತ್ರ ವಿತರಣೆ. ಪಡಿತರ ಚೀಟಿ ಹೊಂದಿರುವ ಮಹಿಳೆಯರು ಹೊಲಿಗೆ ಯಂತ್ರವನ್ನು ಉಚಿತವಾಗಿ ಪಡೆದು ಸ್ವಂತ ಉದ್ಯೋಗ ಪ್ರಾರಂಭಿಸಬಹುದು. ಮಹಿಳೆಯರ ಸ್ವಾವಲಂಬಿ ಬದುಕಿಗೆ ಈ ಯೋಜನೆ ಪ್ರಮುಖವಾಗಿದೆ.

ದೇಶ

ನವರಾತ್ರಿ ಸಮಯದಲ್ಲಿ ವಿಮಾನ ನಿಲ್ದಾಣಗಳಲ್ಲಿ ಭಯೋತ್ಪಾದಕ ದಾಳಿ ಎಚ್ಚರಿಕೆ – ಭದ್ರತೆ ಬಿಗಿ ಕ್ರಮ

ಭಾರತದ ಪ್ರಮುಖ ವಿಮಾನ ನಿಲ್ದಾಣಗಳ ಮೇಲೆ ನವರಾತ್ರಿಯ ವೇಳೆ ಭಯೋತ್ಪಾದಕ ದಾಳಿಯ ಅಪಾಯವಿರುವ ಬಗ್ಗೆ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿದ್ದು, ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮ ಜಾರಿಯಲ್ಲಿದೆ.

ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ (BCAS) ಆಗಸ್ಟ್ 4ರಂದು ಎಚ್ಚರಿಕೆ ಪ್ರಕಟಿಸಿ, ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ ಭಯೋತ್ಪಾದನೆ ಅಥವಾ ಸಮಾಜ ವಿರೋಧಿ ಶಕ್ತಿಗಳಿಂದ ದಾಳಿ ಸಂಭವಿಸಬಹುದೆಂದು ಸೂಚಿಸಿದೆ.

🕵️ ಗುಪ್ತಚರ ಮೂಲದ ಮಹತ್ವದ ಎಚ್ಚರಿಕೆ:

ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳು ದಾಳಿಗೆ ಸಿದ್ಧತೆ ನಡೆಸುತ್ತಿವೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಎಲ್ಲಾ ವಿಮಾನ ನಿಲ್ದಾಣಗಳು, ಏರ್‌ಸ್ಟ್ರಿಪ್‌ಗಳು, ಹೆಲಿಪ್ಯಾಡ್‌ಗಳು ಮತ್ತು ತರಬೇತಿ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳಾಗಿ ಈ ಕೆಳಗಿನ ಕ್ರಮಗಳು ಜಾರಿಗೆ ಬಂದಿವೆ:

  • ಸಿಬ್ಬಂದಿ ಮತ್ತು ಸಂದರ್ಶಕರ ಗುರುತಿನ ಪರಿಶೀಲನೆ
  • ಸಿಸಿಟಿವಿ ಕಣ್ಗಾವಲು ಬಿಗಿತ
  • ಸರಕು, ಪಾರ್ಸೆಲ್ ಮತ್ತು ಮೇಲ್‌ಗಳ ತಪಾಸಣೆ
  • ಸ್ಥಳೀಯ ಪೊಲೀಸ್ ಮತ್ತು ಭದ್ರತಾ ಸಂಸ್ಥೆಗಳೊಂದಿಗೆ ಸಹಕಾರ

🇮🇳 ರಾಷ್ಟ್ರೀಯ ಭದ್ರತೆಗೆ ಒತ್ತು:

ದೆಹಲಿ, ಮುಂಬೈ, ಬೆಂಗಳೂರು ಮತ್ತು ಚೆನ್ನೈ ಸೇರಿದಂತೆ ಪ್ರಮುಖ ವಿಮಾನ ನಿಲ್ದಾಣಗಳು ಈ ಕ್ರಮಗಳನ್ನು ಜಾರಿಗೊಳಿಸುತ್ತಿದ್ದು, ಪ್ರಯಾಣಿಕರು ತಮ್ಮ ಗುರುತಿನ ದಾಖಲೆಗಳನ್ನು ಸಿದ್ಧವಾಗಿಡಬೇಕು. ತಪಾಸಣೆ ವಿಳಂಬದ ಸಾಧ್ಯತೆಯಿರುವುದರಿಂದ ಸಹಕಾರ ನೀಡುವಂತೆ BCAS ಮನವಿ ಮಾಡಿದೆ.

Continue Reading

ದೇಶ

ಅಮೆರಿಕ-ರಷ್ಯಾ ವ್ಯವಹಾರ: ಭಾರತದ ಟೀಕೆಗೆ ಟ್ರಂಪ್ ನುಣುಚು ಪ್ರತಿಕ್ರಿಯೆ

ವಾಷಿಂಗ್ಟನ್: ರಷ್ಯಾದಿಂದ ಈಗಲೂ ವ್ಯವಹಾರ ನಡೆಸುತ್ತಿರುವ ಅಮೆರಿಕದ ಕುರಿತಾಗಿ ಭಾರತ ಮಾಡಿರುವ ಗಂಭೀರ ಆರೋಪಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನುಣುಚು ಪ್ರತಿಕ್ರಿಯೆ ನೀಡಿದ್ದಾರೆ.

ಭಾರತ ಆರೋಪಿಸಿದಂತೆ, ಅಮೆರಿಕ 2024ರಲ್ಲಿ 1.1 ಶತಕೋಟಿ ಡಾಲರ್‌ ಮೌಲ್ಯದ ರಸಗೊಬ್ಬರ, 878 ಮಿಲಿಯನ್ ಡಾಲರ್‌ ಮೌಲ್ಯದ ಪಲ್ಲಾಡಿಯಮ್‌ ಸೇರಿದಂತೆ ಹಲವು ಅಮೂಲ್ಯ ಲೋಹಗಳನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಯುರೇನಿಯಂ ಹೆಕ್ಸಾಫ್ಲೋರೈಡ್‌ನಂತಹ ಪರಮಾಣು ಉತ್ಪನ್ನಗಳ ಆಮದು ಕೂಡ ಮುಂದುವರಿದಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಟ್ರಂಪ್, “ನನಗೆ ಈ ವ್ಯಾಪಾರದ ವಿವರಗಳು ತಿಳಿದಿಲ್ಲ, ನಾನು ಪರಿಶೀಲನೆ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ಭಾರತದ ಖಡಕ್ ಪ್ರತಿಕ್ರಿಯೆ:
ಭಾರತ, ತನ್ನ ರಷ್ಯಾ ತೈಲ ಆಮದು ಬಗ್ಗೆ ಅಮೆರಿಕದ ಟೀಕೆಗೆ ಅಂಕಿ-ಅಂಶಗಳೊಂದಿಗೆ ತಿರುಗೇಟು ನೀಡಿದೆ. ಯುರೋಪ್ ದೇಶಗಳೇ ರಷ್ಯಾದಿಂದ ಭಾರಿ ಪ್ರಮಾಣದಲ್ಲಿ ಎಲ್‌ಎನ್‌ಜಿ, ರಸಗೊಬ್ಬರ, ಲೋಹಗಳನ್ನು ಆಮದು ಮಾಡಿಕೊಳ್ಳುತ್ತಿವೆ. 2024ರಲ್ಲಿ ಯುರೋಪಿಯನ್ ಒಕ್ಕೂಟವು 67.5 ಬಿಲಿಯನ್ ಯುರೋಗಳಷ್ಟು ಸರಕು ವ್ಯಾಪಾರ ಹಾಗೂ 17.2 ಬಿಲಿಯನ್ ಯುರೋಗಳಷ್ಟು ಸೇವಾ ವ್ಯಾಪಾರವನ್ನು ರಷ್ಯಾ ಜೊತೆ ನಡೆಸಿದೆ.

ಟ್ರಂಪ್ ಅವರ ಆರೋಪ:
ಟ್ರಂಪ್ ಹೇಳುವಂತೆ, ಭಾರತ ರಷ್ಯಾದ ತೈಲವನ್ನು ಖರೀದಿ ಮಾಡುತ್ತಿದ್ದು, ಅದನ್ನು ಮುಕ್ತ ಮಾರುಕಟ್ಟೆಯಲ್ಲಿ ಲಾಭಕ್ಕಾಗಿ ಮಾರಾಟ ಮಾಡುತ್ತಿದೆ. ಅವರು ಈ ಕಾರಣಕ್ಕಾಗಿ ಭಾರತದಿಂದ ಸಂಗ್ರಹಿಸಬೇಕಾದ ಸುಂಕವನ್ನು ಹೆಚ್ಚಿಸುವುದಾಗಿ ಹೇಳಿದ್ದಾರೆ.

ಭಾರತದ ನಿಲುವು:
ಭಾರತ, ತನ್ನ ರಾಷ್ಟ್ರೀಯ ಹಿತಾಸಕ್ತಿಗಳನ್ನು ಕಾಪಾಡುವ ಸಲುವಾಗಿ ಕಚ್ಚಾ ತೈಲವನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಇಂಧನದ ದರಗಳನ್ನು ಜನತೆಗೆ ಕೈಗೆಟುಕುವಂತೆ ಇರಿಸಲು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

Continue Reading

ಕ್ರೀಡೆ

ರಿಷಭ್ ಪಂತ್ ಮಾನವೀಯತೆ: ಬಡ ವಿದ್ಯಾರ್ಥಿನಿಗೆ BCA ಪ್ರವೇಶಕ್ಕೆ ₹40,000 ನೆರವು!

ಬಾಗಲಕೋಟೆ: ಟೀಂ ಇಂಡಿಯಾದ ವಿಕೆಟ್ ಕೀಪರ್ ಹಾಗೂ ತೀಕ್ಷ್ಣ ಬ್ಯಾಟ್ಸ್‌ಮನ್ ರಿಷಭ್ ಪಂತ್ ಅವರು ಕ್ರೀಡಾಕ್ಷೇತ್ರದಷ್ಟೇ ದಾನಶೀಲತೆಯಲ್ಲೂ ಮಾದರಿಯಾಗಿದ್ದಾರೆ. ಇತ್ತೀಚೆಗೆ ಅವರು ಬಾಗಲಕೋಟೆ ಜಿಲ್ಲೆಯ ಬಡ ವಿದ್ಯಾರ್ಥಿನಿಯೊಬ್ಬಳಿಗೆ ಆರ್ಥಿಕ ನೆರವು ನೀಡಿ ಜನಮನ ಗೆದ್ದಿದ್ದಾರೆ.

ಬೀಳಗಿ ತಾಲ್ಲೂಕಿನ ರಬಕವಿ ಗ್ರಾಮದ ಜ್ಯೋತಿ ಕಣಬೂರಮಠ ದ್ವಿತೀಯ ಪಿಯುಸಿಯಲ್ಲಿ 85% ಅಂಕ ಗಳಿಸಿದ್ದರೂ, ಮನೆ ಪರಿಸ್ಥಿತಿಯಿಂದ BCA ಕೋರ್ಸ್‌ಗೆ ಸೇರುವ ಕನಸು ತೊಡೆತಗೊಂಡಿತ್ತು. ತಂದೆ ಚಿಕ್ಕ ಟೀ ಅಂಗಡಿ ನಡೆಸುವವರಾಗಿದ್ದು ಶುಲ್ಕ ಪಾವತಿಸಲು ಸಾಧ್ಯವಾಗಿರಲಿಲ್ಲ.

ಇದನ್ನು ಗುತ್ತಿಗೆದಾರ ಅನಿಲ್ ಹುಣಸಿಕಟ್ಟಿ ಅವರು ಗಮನಿಸಿ, ತಮ್ಮ ಸಂಪರ್ಕಗಳಿಂದ ರಿಷಭ್ ಪಂತ್ ಅವರ ಗಮನಕ್ಕೆ ತಂದರು. ಇದನ್ನು ಕೇಳಿದ ಪಂತ್, ಜುಲೈ 17ರಂದು ₹40,000 ನೇರವಾಗಿ BLDE ಕಾಲೇಜಿನ ಖಾತೆಗೆ ವರ್ಗಾಯಿಸಿ, ಜ್ಯೋತಿಯ ಮೊದಲ ಸೆಮಿಸ್ಟರ್ ಶುಲ್ಕವನ್ನು ಭರಿಸಿದರು.

ಜ್ಯೋತಿ ಎಮೋಶನಲ್ ಆಗಿ, “ರಿಷಭ್ ಪಂತ್ ಸಹಾಯದಿಂದ ನನ್ನ ಕನಸು ಸಾಧ್ಯವಾಯಿತು. ಅವರಿಗೆ ದೇವರು ಆಯುಷ್ಯ ಕೊಡಲಿ,” ಎಂದಿದ್ದಾರೆ.

Continue Reading

Trending