ಅಪರಾಧ
ಮಹಿಳಾ ಪೇದೆಗೆ ಬೂಟುಗಾಲಿನಿಂದ ಒದ್ದ ಹೆಡ್ ಕಾನ್ಸ್ಟೇಬಲ್!

ಬೆಂಗಳೂರು: ಪೊಲೀಸ್ ಠಾಣೆಯೊಂದರಲ್ಲೇ ಸಿಬ್ಬಂದಿಗಳು ಹೊಡೆದಾಡಿಕೊಂಡಿರುವ ಘಟನೆ ನಗರದ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ನಡೆದಿದೆ, ಠಾಣೆಯ ಹೆಡ್ ಕಾನ್ಸ್ಟೇಬಲ್ ಮಹಿಳಾ ಪೇದೆಗೆ ಬೂಟುಗಾಲಿನಿಂದ ಒದ್ದ ಆರೋಪ ಹೊರಿಸಲಾಗಿದ್ದು ಈ ಬಗ್ಗೆ ದೂರು ದಾಖಲಾಗಿದೆ,
ಠಾಣೆಯಲ್ಲಿ ಕೆಲಸ ಮಾಡ್ತಿದ್ದ ಮಹಿಳಾ ಪೇದೆಗೆ ಅಲ್ಲೇ ಹೆಡ್ ಕಾನ್ಸ್ಟೇಬಲ್ ಆಗಿರುವ ಬಿಜಿ ಗೋವಿಂದರಾಜು ಎಂಬುವವರು ಬೂಟುಗಾಲಿನಲ್ಲಿ ಒದ್ದಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ, ಜೂನ್ 10 ರಂದು ಈ ಘಟನೆ ನಡೆದಿದೆ, ರಾತ್ರಿ ಕಂಪ್ಯೂಟರ್ ವಿಭಾಗದಲ್ಲಿ ಮಹಿಳಾ ಪೇದೆ ರೇಣುಕಾ ಕರ್ತವ್ಯ ನಿರ್ವಹಿಸುತ್ತಿದ್ದರು,
ಈ ವೇಳೆ ರೇಣುಕಾ ಮನೆ ಬಿಟ್ಟು ಹೋಗಿ ಠಾಣೆ ಸೇರಿದ್ದ ಇಬ್ಬರು ಹೆಣ್ಣುಮಕ್ಕಳಿಗೆ ಊಟ ಮಾಡಿಸುತ್ತಿದ್ದರು, ಆಗ ಹೆಡ್ ಕಾನ್ಸ್ಟೇಬಲ್ ಗೋವಿಂದರಾಜು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ, ಮಾತ್ರವಲ್ಲದೇ ಮೂರ್ನಾಲ್ಕು ಬಾರಿ ಬೂಟುಗಾಲಿನಿಂದ ಒದ್ದಿದ್ದಾರೆ ಎಂದು ಆರೋಪಸಲಾಗಿದೆ,
ಕಾನ್ಸ್ಟೇಬಲ್ ರೇಣುಕಾ ದೂರು ಆಧರಿಸಿ ಹೆಡ್ ಕಾನ್ಸಟೇಬಲ್ ಗೋವಿಂದರಾಜು ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,
ಅಪರಾಧ
ಎಸ್ಪಿಗೆ ರಿಲೀವ್, ನಿಂಗಪ್ಪನ ಮೊಬೈಲ್ನಲ್ಲಿ ರಹಸ್ಯ?

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯ ಮೇಲೆ ಭ್ರಷ್ಟಾಚಾರದ ಆರೋಪದ ಕಳಂಕವೊಡ್ಡಿದೆ. ಸರಕಾರಿ ಅಧಿಕಾರಿಗಳಿಗೆ ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದ ಆರೋಪದಡಿ ಮಾಜಿ ಹೆಡ್ ಕಾನ್ಸ್ಟೆಬಲ್ ನಿಂಗಪ್ಪನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಆದರೆ, ಈ ಪ್ರಕರಣದಲ್ಲಿ ಲೋಕಾಯುಕ್ತದ ಕೆಲ ಪೊಲೀಸರೂ ಭಾಗಿಯಾಗಿರುವ ಆರೋಪ ಗಂಭೀರ ಆತಂಕವನ್ನುಂಟುಮಾಡಿದೆ. ಈ ಬೆಳವಣಿಗೆಯ ನಡುವೆ ಲೋಕಾಯುಕ್ತ ಬೆಂಗಳೂರು ಘಟಕದ ಎಸ್ಪಿ ಮಹದೇವ ಶ್ರೀನಾಥ ಜೋಶಿ ಅವರನ್ನು ಮಂಗಳವಾರ ಸೇವೆಯಿಂದ ರಿಲೀವ್ ಮಾಡಲಾಗಿದೆ. ಈ ಘಟನೆಯಿಂದ ಲೋಕಾಯುಕ್ತ ಸಂಸ್ಥೆಯ ವಿಶ್ವಾಸಾರ್ಹತೆಯೇ ಪ್ರಶ್ನಾರ್ಹವಾಗಿದೆ.
ಹೈಕೋರ್ಟ್ ಆದೇಶದಂತೆ ಮೂರು ವರ್ಷಗಳ ಹಿಂದೆ ಎಫ್ಐಆರ್ ದಾಖಲಿಸುವ ಅಧಿಕಾರ ಪಡೆದ ಲೋಕಾಯುಕ್ತ ಪೊಲೀಸ್ ವಿಭಾಗವು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಗುರಿಯನ್ನು ಹೊಂದಿತ್ತು. ಆದರೆ, ಈಗ ಆ ಸಂಸ್ಥೆಯೊಳಗಿನ ಕೆಲವರು ಭ್ರಷ್ಟಾಚಾರದಲ್ಲಿ ತೊಡಗಿರುವ ಆರೋಪ ಕೇಳಿಬಂದಿದೆ. ಬಿಡಿಎ, ಅಬಕಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಲೋಕಾಯುಕ್ತ ದಾಳಿಯ ಬೆದರಿಕೆ ಹಾಕಿ ಹಣ ಸುಲಿಗೆ ಮಾಡುತ್ತಿದ್ದ ಆರೋಪದಡಿ ನಿಂಗಪ್ಪನನ್ನು ಎಸ್ಪಿ ಕೋನ ವಂಶಿಕೃಷ್ಣ ನೇತೃತ್ವದ ತಂಡ ಕೆಲ ದಿನಗಳ ಹಿಂದೆ ಬಂಧಿಸಿತ್ತು.
ಪೊಲೀಸ್ ಇಲಾಖೆಯಲ್ಲಿ ಹೆಡ್ ಕಾನ್ಸ್ಟೆಬಲ್ ಆಗಿದ್ದ ನಿಂಗಪ್ಪ ಕೆಲ ವರ್ಷಗಳ ಹಿಂದೆ ಸೇವೆಯಿಂದ ವಜಾಗೊಂಡಿದ್ದ. ಬಳಿಕ ಲೋಕಾಯುಕ್ತದ ಹೆಸರಿನಲ್ಲಿ ಸರಕಾರಿ ಅಧಿಕಾರಿಗಳಿಗೆ ಬೆದರಿಕೆ ಹಾಕಿ ಹಣ ಸುಲಿಗೆಯನ್ನೇ ವೃತ್ತಿಯಾಗಿ ಮಾಡಿಕೊಂಡಿದ್ದ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಠಾಣೆಗಳಲ್ಲಿ ಆತನ ವಿರುದ್ಧ ಪ್ರಕರಣಗಳು ದಾಖಲಾಗಿದ್ದು, ಹಲವು ಬಾರಿ ಜೈಲು ಸೇರಿದ್ದ,
ನಿಂಗಪ್ಪನ ಕೃತ್ಯದಲ್ಲಿ ಲೋಕಾಯುಕ್ತದ ಕೆಲವು ಪೊಲೀಸರು ಭಾಗಿಯಾಗಿದ್ದರೆ, ಸುಲಿಗೆಯ ಹಣದಲ್ಲಿ ಪಾಲು ಪಡೆಯುತ್ತಿದ್ದರೆಂಬ ಶಂಕೆಯಿದೆ. ನಿಂಗಪ್ಪನ ಮೊಬೈಲ್ನಿಂದ ದೊರೆತ ಸಾಕ್ಷ್ಯಗಳನ್ನು ಆಧರಿಸಿ, ಆತ ಯಾರಿಗೆ ಹಣ ತಲುಪಿಸಿದ್ದ, ಯಾರ ಜೊತೆ ಸಂಪರ್ಕದಲ್ಲಿದ್ದ ಎಂಬುದನ್ನು ತನಿಖೆಯ ಮೂಲಕ ಕಂಡುಹಿಡಿಯಲಾಗುತ್ತಿದೆ. ಈ ಪ್ರಕರಣದಲ್ಲಿ ಎಸ್ಪಿ ಮಹದೇವ ಶ್ರೀನಾಥ ಜೋಶಿಯವರ ರಿಲೀವ್ಗೆ ನಿಖರ ಕಾರಣ ತಿಳಿದಿಲ್ಲವಾದರೂ, ಈ ಬೆಳವಣಿಗೆ ಲೋಕಾಯುಕ್ತದೊಳಗಿನ ಆಂತರಿಕ ಸಮಸ್ಯೆಗಳನ್ನು ಎತ್ತಿ ತೋರಿಸಿದೆ.
ಈ ಘಟನೆಯಿಂದ ಲೋಕಾಯುಕ್ತ ಸಂಸ್ಥೆಯ ಕಾರ್ಯವೈಖರಿಯ ಬಗ್ಗೆ ಜನರಲ್ಲಿ ಅನುಮಾನ ಮೂಡಿದೆ. ಭ್ರಷ್ಟಾಚಾರದ ವಿರುದ್ಧ ಹೋರಾಡಬೇಕಾದ ಸಂಸ್ಥೆಯೇ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವುದು ಆಘಾತಕಾರಿಯಾಗಿದೆ. ಈ ಪ್ರಕರಣದ ತನಿಖೆಯಿಂದ ಸತ್ಯ ಹೊರಬಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬುದು ಜನರ ಆಗ್ರಹವಾಗಿದೆ.
ಅಪರಾಧ
ವಿರಾಟ್ ಕೊಹ್ಲಿ ಮಾಲೀಕತ್ವದ ‘One8 Commune’ ಪಬ್ ವಿರುದ್ಧ FIR ದಾಖಲು

ಬೆಂಗಳೂರು: ಪ್ರತ್ಯೇಕ ಸ್ಥಳವಿಲ್ಲದೆ ಧೂಮಪಾನಕ್ಕೆ ಅವಕಾಶ ನೀಡಿ, ನಿಯಮ ಉಲ್ಲಂಘನೆ ಮಾಡಿದ ಆರೋಪ ಹಿನ್ನೆಲೆಯಲ್ಲಿ ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲೀಕತ್ವದ ‘ಒನ್ 8 ಕಮ್ಯೂನ್’ ಪಬ್ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.
ಮೇ 29ರಂದು ಕಬ್ಬನ್ ಪಾರ್ಕ್ ಪೊಲೀಸರು ಪಬ್ ಮೇಲೆ ದಾಳಿ ಮಾಡಿ, ಸ್ವಯಂಪ್ರೇರಿತವಾಗಿ ಎನ್ಸಿಆರ್ ದಾಖಲಿಸಿಕೊಂಡಿದ್ದರು. ಇದೀಗ ನ್ಯಾಯಾಲಯದ ಅನುಮತಿ ಪಡೆದು, ಕೊಟ್ಪಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದಕ್ಕೂ ಮುನ್ನ 2024ರ ಜುಲೈನಲ್ಲಿ ಇದೇ ಬಾರ್ ಮೇಲೆ ಅವಧಿ ಮೀರಿ ಪಬ್ ನಡೆಸುತ್ತಿದ್ದರು ಎಂದು ದೂರು ದಾಖಲಾಗಿತ್ತು. ಜು.6 ರಂದು ರಾತ್ರಿ 1:20ರವರೆಗೆ ಪಬ್ ತೆರೆದಿತ್ತು. ರಾತ್ರಿ ಗಸ್ತಿನಲ್ಲಿದ್ದ ಸಿಬ್ಬಂದಿಗೆ ಪಬ್ ಓಪನ್ ಇರುವುದಾಗಿ ಮಾಹಿತಿ ಇತ್ತು. ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಅವಧಿ ಮುಗಿದಿದ್ದರೂ ಗ್ರಾಹಕರು ಇದ್ದರು. ಹೀಗಾಗಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಇದೀಗ ಪ್ರತ್ಯೇಕ ಸ್ಥಳ ಮೀಸಲಿಡದೆ ಧೂಮಪಾನಕ್ಕೆ ಅವಕಾಶ ನೀಡಿದ್ದಕ್ಕಾಗಿ ಬಾರ್ ಆ್ಯಂಡ್ ರೆಸ್ಟೋರೆಂಟ್ ಮ್ಯಾನೇಜರ್, ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಅಪರಾಧ
ಬೆಂಗಳೂರಿನಲ್ಲೊಬ್ಬ ಭಯಂಕರ ಕುಡುಕ!

ಬೆಂಗಳೂರು: ಇತ್ತೀಚೆಗೆ ಬೆಂಗಳೂರಲ್ಲಿ ಎಣ್ಣೆ ಹೊಡೆದು ಗಾಡಿ ಓಡಿಸೋರ ಸಂಖ್ಯೆ ಹೆಚ್ಚಾಗಿದ್ದು, ಆಸಾಮಿಗಳು ದೊಡ್ಡ ಅನಾಹುತಕ್ಕೆ ಕಾರಣವಾಗ್ತಿದ್ದಾರೆ,
ಬೆಂಗಳೂರಿನ ಕೋರಮಂಗಲದಲ್ಲಿ ಮದ್ಯಪಾನ ಮಾಡಿದ ವ್ಯಕ್ತಿಯೊಬ್ಬ ಒನ್ ವೇಯಲ್ಲಿ ಕಾರು ಚಾಲನೆ ಮಾಡಿ ಹಲವು ವಾಹನಗಳಿಗೆ ಹಾನಿ ಮಾಡಿದ್ದಋಎ, ಪೊಲೀಸರು ತಡೆಯಲು ಯತ್ನಿಸಿದಾಗ ಅವರ ಮೇಲೆಯೇ ಕಾರು ಹೊತ್ತಿಸಲು ಯತ್ನಿಸಿದ್ದಾನೆ, ನಂತರ ಪೊಲೀಸರು ಕಾರಿನ ಗಾಜು ಒಡೆದು ಆತನನ್ನು ಹಿಡಿದಿದ್ದಾರೆ, ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ
ಶನಿವಾರ ತಡರಾತ್ರಿ ಘಟನೆ ಸಂಭವಿಸಿದೆ, ಆರೋಪಿ ನಂದಕೃಷ್ಣ ಎಂಬಾತ ಪೊಲೀಸ್ ಬ್ಯಾರಿಕೇಡ್ ಗೆ ಕಾರು ಗುದ್ದಿಸಿದ್ದಾನೆ, ಇದರಿಂದಾಗಿ ಪೊಲೀಸರೊಬ್ಬರ ಕಾಲಿಗೆ ಗಾಯವಾಗಿದೆ, ನಂತರ ಕಾರಿನ ಬಾಗಿಲ ತೆರೆಯುವಂತೆ ಪೊಲೀಸರು ಸೂಚನೆ ನೀಡಿರೂ ನಂದಕೃಷ್ಣ ಪ್ರತಿಕ್ರಿಯಿಸುತ್ತಲೇ ಇರಲಿಲ್ಲ, ಹೀಗಾಗಿ ಕಾರಿನ ಗಾಜು ಒಡೆದು ಆತನನ್ನು ಹೊರಗೆ ಎಳೆದು ತೆಗೆದಿದ್ದಾರೆ,
ಚಾಲಕ ವಿಪರೀತ ಮದ್ಯಪಾನ ಮಾಡಿದ್ದ ಮತ್ತು ಅವನಿಗೆ ಸುತ್ತಮುತ್ತಲಿನ ಪ್ರಜ್ಞೆಯೇ ಇರಲಿಲ್ಲ ಎಂದು ಹಲವರು ಹೇಳಿದ್ದಾರೆ,
-
ಬಿಬಿಎಂಪಿ4 weeks ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು1 year ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು7 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ