Connect with us

ಬೆಂಗಳೂರು

ಮೆಟ್ರೋ ನಿಲ್ದಾಣಕ್ಕೆ ಫೀಲ್ಡ್ ಮಾರ್ಷಲ್ ಕಾರಿಯಪ್ಪ ಹೆಸರು-ಡಿಸಿಎಂ ಡಿಕೆಶಿ

ಬೆಂಗಳೂರು: ಮೆಟ್ರೋ ನಿಲ್ದಾಣಕ್ಕೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹೆಸರಿಡುವ ಬಗ್ಗೆ ನಾನು ಹಾಗೂ ಮುಖ್ಯಮಂತ್ರಿಗಳು ಚರ್ಚೆ ಮಾಡಿ ತೀರ್ಮಾನಿಸುತ್ತೇವೆ, ಕಾರ್ಯಪ್ಪ ಹೆಸರಿಡುವುದು ನಮ್ಮ ಭಾಗ್ಯ ಎಂದು ಡಿಸಿಎಂ ಡಿಕೆ ಶಿಮಕುಮಾರ್ ಅವರು ಹೇಳಿದರು,
ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿ ಏಳು ಎಕರೆ ಭೂಮಿ ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ಕೊಡವ ಸಮಾಜದವರು ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ಅಭಿನಂದನಾ ಸಮಾರಂಭ ಉದ್ದೇಶಿಸಿ ಡಿಸಿಎಂ ಡಿಕೆಶಿ ಅವರು ಮಾತನಾಡಿದರು,
ಈ ವಿಚಾರವಾಗಿ ನಾವು ಮುಕ್ತ ಮನಸ್ಸು ಹೊಂದಿದ್ದೇವೆ, ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಹಾಗೂ ಈ ಡಿಕೆ ಶಿವಕುಮಾರ್ ಸೇರಿ ಕಾರ್ಯಪ್ಪ ಅವರ ಹೆಸರನ್ನು ಉಳಿಸುವ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು,
ಇಡೀ ದೇಶಕ್ಕೆ ಕೊಡಗು ಹಾಗೂ ಕೊಡವರು ಆಭರಣವಿದ್ದಂತೆ, ಇತಿಹಾಸ ನೋಡಿದಾಗ ನಿಮಗೆ ಯಾವುದೇ ಜವಾಬ್ದಾರಿ ಕೊಟ್ಟರೂ ಅದನ್ನು ಸಮರ್ಥವಾಗಿ ನಿಭಾಯಿಸಿದ್ದೀರಿ, ರಾಜಕೀಯ ಮಾತ್ರವಲ್ಲ ಕ್ರೀಡೆ, ಕಾನೂನು ವ್ಯವಸ್ಧೆ ಸೇನೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಕೊಡವರ ಕೊಡುಗೆ ಅಪಾರ, ದೇಶದ ಸ್ವಾತಂತ್ರ್ಯ ಹೋರಾಟಕ್ಕೂ ನಿಮ್ಮ ಕೊಡುಗೆ ಇದೆ, ಎಂದು ಬಣ್ಣೀಸಿದರು,

ಬೆಂಗಳೂರು

ಇಂದಿನಿಂದ ಮೂರು ದಿನಗಳ ಕಾಲ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಚಿಕ್ಕಬಳ್ಳಾಪುರ: ಜೂ.19ರಂದು ನಂದಿಗಿರಿಧಾಮದಲ್ಲಿ (Nandi Hills) ರಾಜ್ಯ ಸಚಿವ ಸಂಪುಟ (Cabinet Meeting) ಸಭೆ ನಡೆಯಲಿರುವ ಹಿನ್ನೆಲೆ ಇಂದಿನಿಂದ ಮೂರು ದಿನಗಳ ಕಾಲ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಈ ಕುರಿತು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಆದೇಶ ಹೊರಡಿಸಿದ್ದು, ಇಂದು ಸಂಜೆ 5 ಗಂಟೆಯಿಂದ ಜೂ.20ರ ಬೆಳಿಗ್ಗೆ 5 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಜೊತೆಗೆ ನಂದಿಗಿರಿಧಾಮದ ಮೇಲ್ಭಾಗದಲ್ಲಿರುವ ವಸತಿ ಕೊಠಡಿಗಳ ಬುಕಿಂಗ್‌ಗೂ ನಿಷೇಧ ವಿಧಿಸಿದ್ದಾರೆ.

ಇದೇ ಮೊದಲ ಬಾರಿಗೆ ನಂದಿಬೆಟ್ಟದಲ್ಲಿ ವಿಶೇಷ ಸಚಿವ ಸಂಪುಟ ನಡೆಯಲಿದ್ದು, ಸಭೆಗೆ ಬೇಕಾದ ಅಗತ್ಯ ಸಿದ್ಧತೆ ಸಲುವಾಗಿ ಮೂರು ದಿನಗಳ ಮೊದಲೇ ಪ್ರವಾಸಿಗರ ಪ್ರವೇಶ ಹಾಗೂ ವಾಹನಗಳ ಸಂಚಾರಕ್ಕೂ ಬ್ರೇಕ್ ಹಾಕಲಾಗಿದೆ.

ಸಚಿವ ಸಂಪುಟ ಸಭೆಗೆ ಸಿಎಂ, ಡಿಸಿಎಂ ಹಾಗೂ ಕರ್ನಾಟಕ ಸರ್ಕಾರದ ಸಚಿವ ಸಂಪುಟ ದರ್ಜೆಯ ಎಲ್ಲಾ ಮಂತ್ರಿಗಳು, ಶಾಸನ ಸಭಾ ಹಾಗೂ ವಿಧಾನಸಭಾ ಸದಸ್ಯರು, ಇಲಾಖಾ ಮುಖ್ಯಸ್ಥರು ಹಾಗೂ ಪತ್ರಕರ್ತರು ಆಗಮಿಸುತ್ತಿದ್ದಾರೆ. ಆದ್ದರಿಂದ ನಂದಿಗಿರಿಧಾಮಕ್ಕೆ ಹೋಗಲು ಮತ್ತು ಬರಲು ಒಂದೇ ರಸ್ತೆ ಇರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿರುತ್ತದೆ. ಜೊತೆಗೆ ನಂದಿಬೆಟ್ಟದಲ್ಲಿ ಕಡಿದಾದ ತಿರುವುಗಳಿಂದ ಕೂಡಿದ ರಸ್ತೆಗಳಲ್ಲಿ ವಾಹನ ಮತ್ತು ಪ್ರವಾಸಿಗರನ್ನು ನಿಯಂತ್ರಿಸುವುದು ಅತಿ ಕಷ್ಟಕರವಾಗಿರುತ್ತದೆ. ಅಪಘಾತಗಳಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

Continue Reading

ಬೆಂಗಳೂರು

ನಮ್ಮ ಹೊಟ್ಟೆಯ ಮೇಲೆ ಹೊಡೆಯಬೇಡಿ ರಾಹುಲ್ ಗಾಂಧಿಗೆ ಅಸೋಸಿಯೇಷನ್ ಪತ್ರ!

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿಷೇಧಗೊಂಡಿದೆ, ಈ ಹಿನ್ನೆಲೆ ನಮ್ಮ ಬೈಕ್ ಟ್ಯಾಕ್ಸಿ ಅಸೋಸಿಯೇಷನ್ ಅಧ್ಯಕ್ಷ ಮೊಹಮ್ಮದ್ ಸಲೀಂ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದು ನಿಷೇಧ ಮಾಡಿದರುವಂತೆ ಮನವಿ ಮಾಡಿದ್ದಾರೆ,
ಲಕ್ಷಾಂತರ ಮಂದಿ ವಿದ್ಯಾರ್ಥಿಗಳು, ನಿರುದ್ಯೋಗಿಗಳು, ಪೋಷಕರು ಹಾಗೂ ದಿನಗೂಲಿ ಕಾರ್ಮಿಕರು ಬೈಕ್ ಟ್ಯಾಕ್ಸಿ ಸೇವೆಯಿಂದ ದಿನನಿತ್ಯ ಹೊಟ್ಟೆ ಹೊರೆದುಕೊಳ್ಳುತ್ತಿದ್ದಾರೆ, ಇವು ನಮ್ಮ ಬಿಡುವಿನ ವೇಳೆಯ ಕೆಲಸವಾಗಿರದೇ ಮೂಲ ಉದ್ಯೋಗವೇ ಆಗಿದೆ, ಈ ರೀತಿ ಏಕಾಏಕಿ ನಿಷೇಧ ಮಾಡುವುದರಿಂದ ನಮ್ಮ ಕುಟುಂಬಗಳು ಬೀದಿಗೆ ಬೀಳುತ್ತವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ,
ಸುರಕ್ಷತೆ, ವಿಮೆ ನಿಯಮ ಹಾಗೂ ತರಬೇತಿ ನಿಯಮಗಳನ್ನು ಜಾರಿಗೆ ತಂದು ನಮ್ಮನ್ನು ಅಧಿಕೃತ ಉದ್ಯೋಗಿಗಳನ್ನಾಗಿ ಮಾಡುವ ಬದಲು ನಿಷೇಧಗೊಳಿಸುವುದು ಎಷ್ಟು ಸರಿ ಎಂದು ಪತ್ರದಲ್ಲಿ ಪ್ರಶ್ನಿಸಲಾಗಿದ್ದು, ಗಿಗ್ ಕಾರ್ಮಿಕರಾದ ನಮಗೆ ನೀವು ಚುನಾವಣೆಯ ಮುನ್ನ ನೀಡಿದ್ದ ಭರವಸೆಯನ್ನು ಮರೆತಿದ್ದೀರಿ ಎಂದು ಹೇಳಲಾಗಿದೆ,

Continue Reading

ಬೆಂಗಳೂರು

ನಗರದ ಕಸ ಸಮಸ್ಯೆ ದೂರಾಗಿಸಲು BBMP ಕ್ರಮ: ದೂರು ನೀಡಲು ಪ್ರತ್ಯೇಕ ಕೇಂದ್ರ ಸ್ಥಾಪನೆ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಪೌರಕಾರ್ಮಿಕರು ಸದಾ ಶ್ರಮವಹಿಸಿತ್ತಾರೆ. ಆದರೂ, ನಗರದಲ್ಲಿನ ಕಸದ ಸಮಸ್ಯೆ ಮಾತ್ರ ದೂರಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಈ ಹಿನ್ನೆಲೆಯಲ್ಲಿ ಎಲ್ಲೆಂದರಲ್ಲಿ ಕಸ ಎಸೆದು ಹೋಗುವವರನ್ನು ಹಿಡಿದುಕೊಡಲು ಬಿಬಿಎಂಪಿ ಕ್ರಮ ಕೈಗೊಂಡಿದ್ದು, ವಾಟ್ಸಪ್ ಸಂಖ್ಯೆಯೊಂದನ್ನು ಜನತೆಗೆ ನೀಡಿದೆ.

ಕಸ ಎಸೆಯುವವರ ಫೋಟೋ ತೆಗೆದು 9448197197 ಈ ನಂಬರ್‌ಗೆ ಕಳಿಸಿದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಪಾಲಿಕೆ ಹೇಳಿದೆ,

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಟೋ ಟಿಪ್ಪರ್ ಗಳ ಮೂಲಕ ಪ್ರತಿನಿತ್ಯ ಮನೆ-ಮನೆ ಭೇಟಿ ನೀಡಿ ತ್ಯಾಜ್ಯ ಸಂಗ್ರಹಿಸಲಾಗುತ್ತಿದೆ. ಆದರೂ ಕೂಡಾ ನಾಗರಿಕರು ಆಟೋ ಟಿಪ್ಪರ್ ಗಳಿಗೆ ತ್ಯಾಜ್ಯವನ್ನು ನೀಡದೇ ರಾತ್ರಿ ವೇಳೆ ಅಥವಾ ಕೆಲಸಕ್ಕೆ ಹೋಗುವ ಸಮಯದಲ್ಲಿ ರಸ್ತೆ ಬದಿ, ಪಾದಚಾರಿ ಮಾರ್ಗ, ಖಾಲಿ ಸ್ಥಳ ಹಾಗೂ ರಾಜಕಾಲುವೆ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಕಸ ಬಿಸಾಡಿ ಹೋಗುತ್ತಾರೆ. ಇದರಿಂದ ನಗರದ ಸೌಂದರ್ಯಕ್ಕೆ ಧಕ್ಕೆಯುಂಟಾಗುತ್ತದೆ.

ತ್ಯಾಜ್ಯ ಬಿಸಾಡುವುದರ ಜೊತೆಗೆ ಕಟ್ಟಡಗಳ ಭಗ್ನಾವಶೇಷಗಳನ್ನು ಕೂಡಾ ರಸ್ತೆ ಬದಿ, ಖಾಲಿ ಜಾಗದಲ್ಲಿ ಸುರಿದು ಹೋಗುತ್ತಾರೆ. ಅದಲ್ಲದೆ ಅನುಪಯುಕ್ತ ವಸ್ತುಗಳನ್ನು ಕೂಡ ಎಲ್ಲೆಂದರಲ್ಲಿ ಬಿಸಾಡಿ ಹೋಗುತ್ತಾರೆ. ಆದ್ದರಿಂದ ಪಾಲಿಕೆಯ 8 ವಲಯಗಳಲ್ಲಿ ಬರುವ ಎಲ್ಲಾ ವಾರ್ಡ್‌ಗಳಲ್ಲಿ ಎಲ್ಲೆಂದರಲ್ಲಿ ಕಸ ಬಿಸಾಡುವುದನ್ನು ಶಾಶ್ವತವಾಗಿ ತಪ್ಪಿಸಲು ಕ್ರಮ ಕೈಗೊಂಡಿದೆ.

ನಗರದಲ್ಲಿ ಕಸ ಸುರಿಯುವ ಸ್ಥಳ (ಬ್ಲಾಕ್ ಸ್ಪಾಟ್) ಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡುವ ಗುರಿ ಹೊಂದಿರುವ ಬಿಬಿಎಂಪಿ, ಇದಕ್ಕಾಗಿ ದೂರು ಕೇಂದ್ರ ಸ್ಥಾಪಿಸಿ ಪ್ರತ್ಯೇಕವಾಗಿ ವಾಟ್ಸಪ್ ಸಂಖ್ಯೆಯನ್ನು ನೀಡಿದೆ. ಜನರು ಸದರಿ ವಾಟ್ಸಪ್ ಸಂಖ್ಯೆಗೆ ಸಂದೇಶದ ಮೂಲಕ ದೂರು ದಾಖಲಿಸಬಹುದಾಗಿದೆ.

ಜನರಪು 9448197197 ಈ ಸಂಖ್ಯೆಗೆ ಛಾಯಾಚಿತ್ರದೊಂದಿಗೆ ಸಂದೇಶ ಕಳುಹಿಸುವ ಮೂಲಕ ದೂರು ದಾಖಲಿಸಬಹುದು. ಆ ಬಳಿಕ ಸಂಬಂಧಪಟ್ಟ ಅಧಿಕಾರಿಗಳು ನಿಗದಿತ ಅವಧಿಯಲ್ಲಿ ತ್ಯಾಜ್ಯ/ಕಸ ವಿಲೇವಾರಿ ಮಾಡಿ ಸಮಸ್ಯೆ ಬಗೆಹರಿಸಲಿದ್ದಾರೆ.

Continue Reading

Trending