ಬೆಂಗಳೂರು
ಕಾಂಗ್ರೆಸ್ ಗ್ಯಾರಂಟಿ: ಸರ್ಕಾರಕ್ಕೆ ಭಾರವಾಯ್ತಾ? ಪಿಂಚಣಿ ಸೇರಿ ಈ ಯೋಜನೆಗಳಿಗೆ ಬೀಳುತ್ತೆ ಕತ್ತರಿ!

ಕರ್ನಾಟಕದ ಕಾಂಗ್ರೆಸ್ ಸರ್ಕಾರಕ್ಕೆ ಗ್ಯಾರಂಟಿ ಯೋಜನೆಗಳು ಆರ್ಥಿಕ ಭಾರವಾಗಿರುವಂತೆ ಕಾಣುತ್ತಿದೆ. ಚುನಾವಣೆಯ ಸಮಯದಲ್ಲಿ ಘೋಷಿಸಿದ ಈ ಯೋಜನೆಗಳನ್ನು ಜಾರಿಗೊಳಿಸಲು ರಾಜ್ಯದ ಖಜಾನೆಯ ಮೇಲೆ ಒತ್ತಡ ಹೆಚ್ಚಾಗಿದ್ದು, ವೃದ್ಧಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ಯೋಜನೆಗಳಂತಹ ಸಾಮಾಜಿಕ ಭದ್ರತಾ ಯೋಜನೆಗಳಿಗೆ ಕತ್ತರಿ ಹಾಕಲು ಸರ್ಕಾರ ಮುಂದಾಗಿದೆ.
ಕಾಂಗ್ರೆಸ್ ಸರ್ಕಾರವು ಚುನಾವಣೆಯ ವೇಳೆ ಘೋಷಿಸಿದ ಗ್ಯಾರಂಟಿ ಯೋಜನೆಗಳು ರಾಜ್ಯದ ಆರ್ಥಿಕ ಸ್ಥಿತಿಯ ಮೇಲೆ ಗಂಭೀರ ಪರಿಣಾಮ ಬೀರಿವೆ. ಈ ಯೋಜನೆಗಳಿಗೆ ಹಣ ಒದಗಿಸಲು ಸರ್ಕಾರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದೆ.
ವೃದ್ಧಾಪ್ಯ ವೇತನ
ರಾಜ್ಯ ಸರ್ಕಾರವು ವೃದ್ಧಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ಯೋಜನೆಗಳ ಅನರ್ಹ ಫಲಾನುಭವಿಗಳನ್ನು ಗುರ್ತಿಸಿ, ಅವರ ಪಿಂಚಣಿಯನ್ನು ರದ್ದುಗೊಳಿಸಲು ಯೋಜಿಸಿದೆ. ಈ ಕ್ರಮವು ರಾಜ್ಯದ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ಗುರಿಯನ್ನು ಹೊಂದಿದೆ. ಕಂದಾಯ ಇಲಾಖೆಯು ಈ ಪ್ರಕ್ರಿಯೆಗಾಗಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ.
ವೃದ್ಧಾಪ್ಯ ವೇತನ ಯೋಜನೆಯಡಿ 21.87 ಲಕ್ಷ ಫಲಾನುಭವಿಗಳು ಮತ್ತು ಸಂಧ್ಯಾ ಸುರಕ್ಷಾ ಯೋಜನೆಯಡಿ 31.33 ಲಕ್ಷ ಫಲಾನುಭವಿಗಳು ಪಿಂಚಣಿಯನ್ನು ಪಡೆಯುತ್ತಿದ್ದಾರೆ. ಆದರೆ, ಈ ಫಲಾನುಭವಿಗಳ ಪೈಕಿ ಗಣನೀಯ ಸಂಖ್ಯೆಯವರು ಅನರ್ಹರಾಗಿರುವ ಸಾಧ್ಯತೆಯನ್ನು ಸರ್ಕಾರ ಗುರ್ತಿಸಿದೆ. ಇದಕ್ಕಾಗಿ, ಕುಟುಂಬದ ದತ್ತಾಂಶಗಳೊಂದಿಗೆ ಫಲಾನುಭವಿಗಳ ಮಾಹಿತಿಯನ್ನು ಹೋಲಿಕೆ ಮಾಡಲಾಗಿದೆ. ಈ ಪ್ರಕ್ರಿಯೆಯಲ್ಲಿ.
- ಕಡಿಮೆ ವಯಸ್ಸಿನವರು
- ಆದಾಯ ಮಿತಿಯನ್ನು ಮೀರಿದವರು
- ಎಪಿಎಲ್ ಕಾರ್ಡ್ದಾರರು
- ಆದಾಯ ತೆರಿಗೆ ಪಾವತಿಸುವವರು
- ಸರ್ಕಾರಿ ಉದ್ಯೋಗಿಗಳ HRMS ವಿವರಗಳು
- ಈ ಹೋಲಿಕೆಯ ಫಲಿತಾಂಶವಾಗಿ, ವೃದ್ಧಾಪ್ಯ ವೇತನ ಯೋಜನೆಯ 9.04 ಲಕ್ಷ ಮತ್ತು ಸಂಧ್ಯಾ ಸುರಕ್ಷಾ ಯೋಜನೆಯ 14.15 ಲಕ್ಷ ಫಲಾನುಭವಿಗಳು ಅನರ್ಹರೆಂದು ಗುರ್ತಿಸಲ್ಪಟ್ಟಿದ್ದಾರೆ.
- ಪಿಂಚಣಿ ರದ್ದತಿ
ಸರ್ಕಾರವು ಗುರುತಿಸಲಾದ ಅನರ್ಹ ಫಲಾನುಭವಿಗಳ ಪಿಂಚಣಿಯನ್ನು ರದ್ದುಗೊಳಿಸುವ ಮೊದಲು ಭೌತಿಕ ಪರಿಶೀಲನೆ ನಡೆಸಲು ಯೋಜಿಸಿದೆ. ಈ ಪರಿಶೀಲನೆಯ ನಂತರ, ಅನರ್ಹರೆಂದು ದೃಢಪಡಿಸಿದವರ ಪಿಂಚಣಿಯನ್ನು ತಕ್ಷಣವೇ ಕಡಿತಗೊಳಿಸಲಾಗುವುದು. ಈ ಕ್ರಮವು ವೃದ್ಧಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ಯೋಜನೆಗಳ ಫಲಾನುಭವಿಗಳಿಗೆ ಕತ್ತರಿಯಂತೆ ಕಾಣುತ್ತಿದೆ, - ಈ ಕ್ರಮವು ಕೇವಲ ಸಾಮಾಜಿಕ ಭದ್ರತಾ ಯೋಜನೆಗಳಿಗೆ ಸೀಮಿತವಾಗಿಲ್ಲ. ರಾಜ್ಯ ಸರ್ಕಾರವು ಇತರ ಇಲಾಖೆಗಳಲ್ಲಿಯೂ ಅನರ್ಹ ಫಲಾನುಭವಿಗಳನ್ನು ಗುರ್ತಿಸುವ ಕಾರ್ಯಕ್ಕೆ ಮುಂದಾಗಿದೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಒತ್ತಡ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ಮಾತ್ರ ಸೀಮಿತಗೊಳಿಸಲು ಸರ್ಕಾರ ಉದ್ದೇಶಿಸಿದೆ.
- ಸರ್ಕಾರದ ಈ ನಿರ್ಧಾರವು ಜನರಲ್ಲಿ ಮಿಶ್ರ ಪ್ರತಿಕ್ರಿಯೆಗೆ ಕಾರಣವಾಗಿದೆ. ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಪ್ರಯೋಜನ ಸರಿಯಾಗಿ ತಲುಪಲು ಈ ಕ್ರಮ ಸಹಕಾರಿಯಾಗಿದೆ ಎಂದು ಕೆಲವರು ಒಪ್ಪಿದ್ದಾರೆ. ಆದರೆ, ಭೌತಿಕ ಪರಿಶೀಲನೆಯ ಸಂದರ್ಭದಲ್ಲಿ ತೊಂದರೆಯಾಗಬಹುದು ಎಂದು ಇತರರು ಆತಂಕ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು
ಅಕ್ಟೋಬರ್ ತಿಂಗಳಲ್ಲೇ ಈ ಸರ್ಕಾರದ ಕಥೆ ಮುಗಿಯಲಿದೆ : ಆರ್.ಅಶೋಕ್

ಬೆಂಗಳೂರು: ಯುವ ಜನರ ಸಾವಿನ ಶಾಪ ತಟ್ಟಿ ಈ ಸರ್ಕಾರ ಬಹಳ ದಿನ ಉಳಿಯುವುದಿಲ್ಲ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಇಂದು ಬಿಜೆಪಿ ವತಿಯಿಂದ ಆಯೋಜಿಸಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಆರ್ಸಿಬಿ ಗೆದ್ದದ್ದು ಸಿದ್ದರಾಮಯ್ಯ ಮತ್ತು ತಂಡವೇ ಅಥವಾ ಡಿ.ಕೆ.ಶಿವಕುಮಾರ್ ಮತ್ತವರ ತಂಡವೇ ಎಂಬಂತೆ ವಿಜಯೋತ್ಸವ ಮಾಡಿದ್ದಾರೆ ಎಂದು ಕಿಡಿಕಾರಿದರು.
ಕಾಲ್ತುಳಿತ ಪ್ರಕರಣದಲ್ಲಿ ರಾಜ್ಯ ಸರ್ಕಾರ ತಪ್ಪು ಮಾಡಿಲ್ಲದಿದ್ದರೆ ಸರಿಯಾಗಿ ತನಿಖೆ ನಡೆಸಬೇಕಿತ್ತು. ಈಗ ಹೈಕೋರ್ಟ್ ಸ್ವಯಂ ಪ್ರೇರಣೆಯ ಪ್ರಕರಣ ದಾಖಲಿಸಿಕೊಂಡಿದೆ. ಇದಕ್ಕೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಎಂದರೆ, ಕೋರ್ಟ್ ಸರ್ಕಾರವನ್ನು ನಂಬುತ್ತಿಲ್ಲ ಎಂದರ್ಥ. ಮೃತ 11 ಜನರ ಕುಟುಂಬದವರನ್ನೇ ಕೇಳಿ ತನಿಖೆಗೆ ನೀಡಬಹುದಿತ್ತು. ಮೊದಲು ಜಿಲ್ಲಾಧಿಕಾರಿ, ಆ ನಂತರ ನಿವೃತ್ತ ನ್ಯಾಯಾಧೀಶರು, ಆ ಬಳಿಕ ಎಸ್ಐಟಿ ತನಿಖೆ ಎಂದು ಹೇಳಿದ್ದಾರೆ. ಯಾವುದರಲ್ಲೂ ಖಚಿತತೆ ಇಲ್ಲ ಎಂದರು.
ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬದವರು ಕ್ರಿಕೆಟಿಗರ ಜೊತೆಗೆ ಫೋಟೋ ಶೂಟ್ ಮಾಡಿಕೊಂಡಿದ್ದರಿಂದಲೇ 11 ಜನರು ಮೃತರಾಗಿದ್ದಾರೆ. ಬಿಜೆಪಿ ಎಲ್ಲ ಬಗೆಯ ಹೋರಾಟಗಳನ್ನು ಮಾಡಿದೆ. ಇನ್ನು ಮುಂದೆಯೂ ಹೋರಾಟ ಮಾಡಲಿದೆ. ಸರ್ಕಾರವೇ ಜನರನ್ನು ವಿಧಾನಸೌಧಕ್ಕೆ ಆಹ್ವಾನಿಸಿದೆ. ಹಾಗೆ ಆಹ್ವಾನ ನೀಡದೇ ಹೋಗಿದ್ದರೆ ಈ ದುರಂತ ನಡೆಯುತ್ತಿರಲಿಲ್ಲ. ನಾವು ಪ್ರತಿಭಟನೆ ಮಾಡಿದಾಗ ನೂರಾರು ಪೊಲೀಸರು ಬಂದಿದ್ದರು. ಅದೇ ರೀತಿ ಎರಡು ಲಕ್ಷ ಜನರನ್ನು ನಿಯಂತ್ರಣ ಮಾಡಲು ಹೆಚ್ಚು ಪೊಲೀಸರನ್ನು ನಿಯೋಜಿಸಬೇಕಿತ್ತು ಎಂದು ಹೇಳಿದರು.
ಡಿಕೆಶಿ ಚಿಂತೆಯಲ್ಲಿದ್ದಾರೆ ಅಶೋಕ್ ವ್ಯಂಗ್ಯ: ಇದಕ್ಕಾಗಿಯೇ ಮೂರು ದಿನದ ಅಧಿವೇಶನ ಕರೆಯಲು ಆಗ್ರಹಿಸಿದ್ದೇನೆ. ಸರ್ಕಾರದ ತಪ್ಪಿಲ್ಲ ಎಂದಾದರೆ ಯಾರ ತಪ್ಪು ಎಂದು ಸರಿಯಾಗಿ ತಿಳಿಸಲಿ. ಅಕ್ಟೋಬರ್ ತಿಂಗಳಲ್ಲೇ ಈ ಸರ್ಕಾರದ ಕಥೆ ಮುಗಿಯಲಿದೆ. ಎಲ್ಲ ಶಾಸಕರು ನಾವೇ ಮುಖ್ಯಮಂತ್ರಿ ಎಂದು ಹೇಳಿಕೊಳ್ಳುತ್ತಿದ್ದಾರೆ. ಇನ್ನು 2028 ಕ್ಕೆ ಇವರು ಅಧಿಕಾರಕ್ಕೆ ಬರಲು ಹೇಗೆ ಸಾಧ್ಯ? ಡಿ.ಕೆ.ಶಿವಕುಮಾರ್ ಬಹಳ ಚಿಂತೆಯಲ್ಲಿದ್ದಾರೆ ಎಂದು ವ್ಯಂಗ್ಯವಾಡಿದರು.
ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಅಲ್ಲಿ ಬನ್ನಿ, ಇಲ್ಲಿ ಬನ್ನಿ ಎಂದು ಕರೆದಿದ್ದಾರೆ. ಹೀಗೆ ಕರೆದು 11 ಜನರ ಪ್ರಾಣ ತೆಗೆದಿದ್ದಾರೆ. ಕಪ್ ಆರ್ಸಿಬಿಯದು. ಆದರೆ, ತಪ್ಪು ಸರ್ಕಾರದ್ದು. ಪೊಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಿದ್ದಾರೆ. ಇಂಟೆಲಿಜೆನ್ಸ್ ಮುಖ್ಯಸ್ಥರಾದವರನ್ನು ಅಮಾನತು ಮಾಡಿಲ್ಲವೇಕೆ? ಎಂದು ಪ್ರಶ್ನಿಸಿದರು.
ಸಿಎಂ, ಡಿಸಿಎಂ ಇಮೇಜ್ಗೆ 11 ಬಲಿ: ವಿಜಯೇಂದ್ರ
ಮುಖ್ಯಮಂತ್ರಿಗಳ ಜನಪ್ರಿಯತೆ ಹೆಚ್ಚಿಸಲು ಮತ್ತು ಇಮೇಜ್ ವೃದ್ಧಿಗೆ ಆರ್ಸಿಬಿ ವಿಜಯೋತ್ಸವದ ಕಾರ್ಯಕ್ರಮ ಏರ್ಪಡಿಸಿದ್ದಾರೆ ಹಾಗೂ 11 ಜನರ ಸಾವಿಗೆ ಕಾರಣವಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.
ಕಾಲ್ತುಳಿತ ಪ್ರಕರಣದಲ್ಲಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಬೆಂಗಳೂರಿನ ಫ್ರೀಡ್ಂ ಪಾರ್ಕ್ನಲ್ಲಿ ಇಂದು ಬಿಜೆಪಿ ವತಿಯಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ರಾಜ್ಯದ ಉಪ ಮುಖ್ಯಮಂತ್ರಿಯವರು ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾರ್ಯಕ್ರಮ ನಡೆಸಿದ್ದಾರೆ. ಮುಖ್ಯಮಂತ್ರಿ – ಉಪ ಮುಖ್ಯಮಂತ್ರಿಗಳ ನಡುವಿನ ಪೈಪೋಟಿ, ಹುಚ್ಚಾಟದಿಂದ 11 ಜನ ಅಮಾಯಕರು ಸಾವನ್ನಪ್ಪಿದ್ದಾರೆ ಎಂದು ಆಕ್ಷೇಪಿಸಿದರು.
ಇಂಥ ಭಂಡ ಸರ್ಕಾರ, ಮುಖ್ಯಮಂತ್ರಿ – ಉಪ ಮುಖ್ಯಮಂತ್ರಿಗಳು ಜನಪ್ರಿಯತೆ ಕಳೆದುಕೊಂಡಿದ್ದಾರೆ. ರಾಜ್ಯ ಸರ್ಕಾರದ ಪ್ರಾಯೋಜಕತ್ವದಲ್ಲಿ ಈ 11 ಜನರು ಸಾಯುವಂತಾಗಿದೆ. ಲಜ್ಜೆಗೆಟ್ಟ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು.
ಮಾಜಿ ಸಚಿವ ಬೈರತಿ ಬಸವರಾಜ್ ಮಾತನಾಡಿ, ಈ ಸರ್ಕಾರ ಕೂಡಲೇ ತೊಲಗಬೇಕು. ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ತಕ್ಷಣ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು
ಬೆಂಗಳೂರು
ಬಿಜೆಪಿಯವರನ್ನು ಹೆಗಲ ಮೇಲೆ ಹಾಕಿಕೊಂಡು ಹೊರೋಣ; ಡಿ.ಕೆ.ಶಿ ವ್ಯಂಗ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಲ್ಲಿ ನಮ್ಮನ್ನು ಟೀಕೆ ಮಾಡುತ್ತಿರುವ ಬಿಜೆಪಿಯವರನ್ನೂ ಹೊರೋಣ. ಹೆಗಲ ಮೇಲೆ ಕೂರಿಸಿಕೊಂಡು ಮೆರವಣಿಗೆ ಮಾಡೋಣ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವ್ಯಂಗ್ಯವಾಡಿದರು.
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದ ಹೊಣೆಯನ್ನು ಮುಖ್ಯಮಂತ್ರಿಗಳು ಹಾಗೂ ಡಿಸಿಎಂ ಹೊಣೆ ಹೊರಬೇಕು ಎಂದು ಬಿಜೆಪಿ ಪ್ರತಿಭಟನೆ ಬಗ್ಗೆ ಕೇಳಿದಾಗ ಹೀಗೆ ಉತ್ತರಿಸಿದರು. ರಾಜ್ಯ ಮಾಲಿನ್ಯ ಮಂಡಳಿ ವಿಶ್ವ ಪರಿಸರ ದಿನದ ಅಂಗವಾಗಿ ಮಂಗಳವಾರ ಹಮ್ಮಿಕೊಂಡಿದ್ದ ಮ್ಯಾರಥಾನ್ ಗೆ ವಿಧಾನಸೌಧದ ಎದುರು ಚಾಲನೆ ನೀಡಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಉತ್ತರ ಪ್ರದೇಶ, ಮಹಾರಾಷ್ಟ್ರ ಹಾಗೂ ಅನೇಕ ರೈಲ್ವೇ ನಿಲ್ದಾಣಗಳಲ್ಲಿ ಕಾಲ್ತುಳಿತ, ಉತ್ತರ ಪ್ರದೇಶದ ದೇವಸ್ಥಾನವೊಂದರಲ್ಲಿ ನೂರಾರು ಜನ ಕಾಲ್ತುಳಿತಕ್ಕೆ ಒಳಗಾಗಿ ಸತ್ತರು. ಇದಕ್ಕೆಲ್ಲಾ ಯಾರು ಹೊಣೆ? ಎರಡು ದಿನದ ಹಿಂದೆ ನಾನು ಅಹಮದಾಬಾದ್ ಗೆ ಹೋಗಿದ್ದೆ. ನಾನೇನಾದರು ಆ ಘಟನೆ ಬಗ್ಗೆ ಕೇಂದ್ರ ಸರ್ಕಾರವನ್ನು ಗುರಿ ಮಾಡಿ ಮಾತನಾಡಿದ್ದೇನೆಯೇ?” ಎಂದು ಖಡಕ್ಕಾಗಿ ಉತ್ತರಿಸಿದರು.
ಅವರು ಇರುವುದೇ ಹೆಣದ ಮೇಲೆ ರಾಜಕೀಯ ಮಾಡಲು. ಅವರು ಎಲ್ಲಾ ಕಾಲದಿಂದಲೂ ಅದೇ ಕೆಲಸ ಮಾಡುತ್ತಿದ್ದಾರೆ. ಬಂದ್ ವೇಳೆಯಲ್ಲಿ, ಗಂಗಾಧರ್ ಕೊಲೆ ಪ್ರಕರಣ ಸೇರಿದಂತೆ ಬೇಕಾದಷ್ಟು ಸಮಯದಲ್ಲಿ ಇದೇ ರೀತಿ ಮಾಡಿದ್ದಾರೆ” ಎಂದು ತಿರುಗೇಟು ನೀಡಿದರು.
ಕಾಲ್ತುಳಿತ ಪ್ರಕರಣದಲ್ಲಿ ಯಾರ್ಯಾರಿಗೆ ಶಿಕ್ಷೆ ಕೊಡಬೇಕೋ ಆ ಕೆಲಸವನ್ನು ಸರ್ಕಾರ ಮಾಡಿದೆ. ತನಿಖೆಗಾಗಿ ಏಕ ಸದಸ್ಯ ಆಯೋಗವನ್ನು ಸಹ ನೇಮಕ ಮಾಡಲಾಗಿದೆ. ಇಡೀ ದೇಶದಲ್ಲಿ ನೂರಾರು ಘಟನೆಗಳು ನಡೆದಿವೆ. ಆದರೂ ಕಾಂಗ್ರೆಸ್ ಪಕ್ಷ ಎಂದಿಗೂ ಹೆಣದ ಮೇಲೆ ರಾಜಕೀಯ ಮಾಡಿಲ್ಲ ಎಂದು ಹೇಳಿದರು.
ಅವರ ರಾಜಕೀಯ ತಳಹದಿ ಹಾಳಾಗಿರುವ ಕಾರಣಕ್ಕೆ ಈ ರೀತಿಯ ಆಪಾದನೆಗಳನ್ನು ಮಾಡುತ್ತಿದ್ದಾರೆ. ತಮ್ಮ ಅಸ್ತಿತ್ವ ಇನ್ನೂ ಇದೇ ಎಂದು ತೋರಿಸಿಕೊಳ್ಳಲು ಸರ್ಕಸ್ ಮಾಡುತ್ತಿದ್ದಾರೆ. ಜನ ಸಾಮಾನ್ಯರು ಅವರ ಜೊತೆಯಿಲ್ಲ” ಎಂದು ಲೇವಡಿ ಮಾಡಿದರು.
ಬಿಜೆಪಿ ಕೇವಲ ಶಿವಕುಮಾರ್ ಅವರನ್ನು ಮಾತ್ರ ಗುರಿ ಮಾಡುತ್ತಿದೆಯೇ ಎಂದು ಕೇಳಿದಾಗ, “ಯಾರು ಹೆಚ್ಚು ಬಲವುಳ್ಳವರೋ ಅವರಿಗೆ ಶತ್ರುಗಳು ಜಾಸ್ತಿ. ಕಡಿಮೆ ಬಲ ಇದ್ದರೆ ಕಡಿಮೆ ಶತ್ರುಗಳು, ಬಲವೇ ಇಲ್ಲದಿದ್ದರೇ ಶತ್ರುಗಳೇ ಇಲ್ಲ. ಅವರಿಗೆ ನಮ್ಮನ್ನು ಕಂಡರೆ ಭಯ. ನೀವು (ಮಾಧ್ಯಮಗಳು) ನಮ್ಮ ಜೊತೆ ಇದ್ದರೆ 2028 ಕ್ಕೆ ಮತ್ತೆ ವಿಧಾನಸೌಧದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡುತ್ತೇವೆ” ಎಂದರು. ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡುವಿರಾ ಎಂದಾಗ, “ಕಾಂಗ್ರೆಸ್ ಸರ್ಕಾರ ಪ್ರಮಾಣ ವಚನ ಸ್ವೀಕಾರ ಮಾಡುತ್ತದೆ” ಎಂದು ಹೇಳಿದರು.
ಕಸ ವಿಲೇವಾರಿ ಮರು ಟೆಂಡರ್ ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿರುವ ಬಗ್ಗೆ ಕೇಳಿದಾಗ, ನಗರವನ್ನು ಸ್ವಚ್ಚ ಮಾಡಲಿಲ್ಲ ಎಂದರೆ ಹೇಗೆ? ಈ ತೀರ್ಪಿನ ಬಗ್ಗೆ ನಾನು ಪರಿಶೀಲನೆ ಮಾಡುತ್ತೇನೆ. ಈ ಮೊದಲು 89 ಟೆಂಡರ್ ಗಳಾಗಿದ್ದವು. ಅವರೆಲ್ಲರು ಸೇರಿ ತಮ್ಮದೇ ಗುಂಪು ಮಾಡಿಕೊಂಡಿದ್ದಾರೆ. ಇದೊಂದು ಮಾಫಿಯಾ. ಇವರುಗಳು ನಮ್ಮ ದಾರಿ ತಪ್ಪಿಸುತ್ತೇವೆ ಎಂದು ಕೊಂಡಿದ್ದಾರೆ. ಇದರ ಬಗ್ಗೆ ನ್ಯಾಯಾಲಯಕ್ಕೆ ಅರ್ಥ ಮಾಡಿಸುವ ಕೆಲಸ ಮಾಡುತ್ತೇವೆ” ಎಂದರು.
ಬೆಂಗಳೂರು
ಯಾರ್ಯಾರಿಗೆ ಸಿಗೋಲ್ಲ ರೇಷನ್ ಕಾರ್ಡ್?

ಬೆಂಗಳೂರು: ಅಕ್ರಮವಾಗಿ ಪಡಿತರ ಕಾರ್ಡ್ ಹೊಂದಿರೋ ಜನರಿಗೆ ಸರ್ಕಾರ ಶಾಕ್ ಕೊಟ್ಟಿದ್ದು ರಾಷ್ಟ್ರೀಯ ಆಹಾರ ಕಾಯ್ದೆ ಉಲ್ಲಂಘಿಸಿರುವ ಮತ್ತು ಅನರ್ಹ ಪಡಿತರ ಚೀಟಿ ಪತ್ತೆ ಸಲುವಾಗಿ ಖಾಸಗಿ ಸಮೀಕ್ಷೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ,
ರಾಜ್ಯದಲ್ಲಿ ಹೆಚ್ಚುಕ್ಕಮ್ಮಿ 44 ಲಕ್ಷ ಅನರ್ಹ ಪಡಿತರ ಫಲಾನುಭವಿಗಳು ಇದ್ದಾರೆ ಎಂಬ ಅಂಶ ಗೊತ್ತಾಗಿದ್ದು, ಇವುಗಳನ್ನು ರದ್ದುಪಡಿಸಲು ರಾಜ್ಯ ಸರ್ಕಾರ ಥರ್ಡ್ ಪಾರ್ಟಿ ಸರ್ವೇಗೆ ನಿರ್ಧರಿಸಿದೆ,
2011 ಜನಸಂಖ್ಯೆ ದತ್ತಾಂಶದ ಪ್ರಕಾರ 4,01,93,130 ಸ್ವೀಕೃತದಾರರ ಮಿತಿ ನಿಗದಿ ಮಾಡಲಾಗಿದೆ, ಆದರೆ 44 ಲಕ್ಷ ಹೆಚ್ಚುವರಿ ಕಾರ್ಡ್ ಇರುವುದಾಗಿ ಹೇಳುತ್ತಿದೆ, ಹೀಗಾಗಿ ಕಠಿಣ ಕ್ರಮ ಜರುಗಿಸಲು ಸರ್ಕಾರ ಈ ನಿರ್ಧಾರ ಕೈಗೊಂಡಿದೆ, ರಾಜ್ಯ ಸರ್ಕಾರದ ಮೇಲೆ ಆರ್ಥಿಕ ಹೊರೆ ಬಿದ್ದಿದೆ, ಕರ್ನಾಟಕ ತೆರಿಗೆ ಸಂಗ್ರಹಣೆಯಲ್ಲಿ 2ನೇ ಸ್ಧಾನದಲ್ಲಿದ್ರೂ, ವೆಚ್ಚವನ್ನು ಸರಿದೂಗಿಸಲಾಗುತ್ತಿಲ್ಲ ಹೀಗಾಗಿ ಸರ್ವೇ ಗೆ ಸರ್ಕಾರ ಮುಂದಾಗಿದೆ,
ವ್ಯಕ್ತಿಯ ವಾರ್ಷಿಕ ಆದಾಯ 1.20 ಲಕ್ಷಗಿಂತ ಹೆಚ್ಚಿರುವ ಕುಟುಂಬ, 3 ಹೆಕ್ಟೇರ್ಗಿಂತ ಹೆಚ್ಚಿನ ಭೂಮಿ ಹೊಂದಿದವರು ಸರ್ಕಾರಿ, ಅನುದಾನಿತ, ಸರ್ಕಾರಿ ಸಂಯೋಜಿತ ಸಂಸ್ಧೆಗಳಲ್ಲಿ ನೌಕರರು ಬಿಪಿಎಲ್ ರೇಷನ್ ಕಾರ್ಡ್ ಹೊಂದಲು ಅನರ್ಹವಾಗುತ್ತಾರೆ, ಇದಲ್ಲದೆ 1 ಸಾವಿರ ಚದರಡಿ ಪಕ್ಕಾ ಮನೆ ಹೊಂದಿದ್ದರೆ ಆದಾಯ, ವೃತ್ತಿ ತೆರಿಗೆ, ಜಿಎಸ್ ಟಿ ಪಾವತಿದಾರರು ವಾಣಿಜ್ಯ ವಾಹನ ಹೊಂದಿದವರು ಕಾರ್ಡ್ ಹೊಂದಿದ್ದರೆ, ಅಂಥವರನ್ನು ಪತ್ತೆ ಹಚ್ಚಿ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತದೆ,
-
ಬಿಬಿಎಂಪಿ1 month ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು1 year ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು7 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ