Connect with us

ರಾಜ್ಯ

ಕನ್ನಡ ಪರ ಸಂಘಟನೆಯ ಮುಖಂಡರಿಗೆ ನೋಟಿಸ್

ಬೆಂಗಳೂರು: ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿರುವ ಕಮಲ್ ಹಾಸನ್ ನಟನೆಯ ಥಗ್ ಲೈಫ್ ಚಿತ್ರ ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ,
ಕನ್ನಡದ ಹುಟ್ಟಿನ ಬಗ್ಗೆ ಮಾತನಾಡಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾದ ಕಮಲ್ ಹಾಸನ್ ಸಿನಿಮಾ ಬಿಡುಗಡೆಗೆ ಅವಕಾಶ ಸಿಕ್ಕ ಬೆನ್ನಲ್ಲೇ ಇದೀಗ ಕರವೇ ನಾರಾಯಣ ಗೌಡ, ಪ್ರವೀಣ್ ಶೆಟ್ಟಿ ಸೇರಿದಂತೆ ಕನ್ನಡ ಪರ ಸಂಘಟನೆಯ ಪ್ರಮುಖರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ,
ನಟ ಕಮಲ್ ಹಾಸನ್ ಸಿನಿಮಾ ಬಿಡುಗಡೆಗೆ ವಿರೋಧಿಸಿ ಪ್ರತಿಭಟನೆ ಮಾಡುವ ಹಾಗಿದ್ದರೆ ನ್ಯಾಯಾಲಯ ತಿಳಿಸಿರುವಂತೆ ಫ್ರೀಡಂ ಪಾರ್ಕ್ ನಲ್ಲಿ ಮಾತ್ರ ಪ್ರತಿಭಟನೆ ಮಾಡಬೇಕು, ಒಂದು ವೇಳೆ ನಿಯಮ ಮೀರಿ ಥಗ್ ಲೈಫ್ ಸಿನಿಮಾ ಬಿಡುಗಡೆ ಆಗಿರುವ ಚಿತ್ರಮಂದಿರ ಬಳಿ ಪ್ರತಿಭಟನೆ ಮಾಡಿದರೆ, ಕಾನೂನು ಕ್ರಮ ಕೈಗೊಳ್ಳುವುದಾಗಿ ನೋಟಿಸ್ ನಲ್ಲಿ ಪೊಲೀಸರು ತಿಳಿಸಿದ್ದಾರೆ,
ಪೊಲೀಸರ ನೋಟಿಸ್ ವಿರುದ್ಧ ಕನ್ನಡ ಪರ ಸಂಘಟನೆಯ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದು ನಮ್ಮ ರಾಜ್ಯ ಸರ್ಕಾರವೇ ನಟನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿತ್ತು, ಅದರೆ ಈಗ ಹೀಗ್ಯಾಕೆ ಮಾಡಿದ್ದಾರೋ ಗೊತ್ತಿಲ್ಲ, ಆ ಸಿನಿಮಾ ನೋಡಲು ನಮ್ಮ ಜನ ಕೂಡ ಹೋಗಲ್ಲ ಎನ್ನುವ ನಂಬಿಕೆ ಇದೆ ಎಂದಿದ್ದಾರೆ,

ಬೆಂಗಳೂರು

ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ ₹50,000 ಸಹಾಯಧನ: ಜಮೀರ್ ಅಹ್ಮದ್ ಘೋಷಣೆ

ಬೆಂಗಳೂರು:
ಕರ್ನಾಟಕದ ಅಲ್ಪಸಂಖ್ಯಾತ ಸಮುದಾಯದ ಸಾಮೂಹಿಕ ವಿವಾಹಗಳಿಗೆ ಇನ್ಮುಂದೆ ಸರ್ಕಾರದಿಂದ ₹50,000 ಸಹಾಯಧನ ಸಿಗಲಿದೆ ಎಂದು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಘೋಷಿಸಿರುವ ಬಜೆಟ್ ಯೋಜನೆಗೆ ಈಗ ಅನುಮೋದನೆ ಲಭಿಸಿದ್ದು, ಈ ನಿಟ್ಟಿನಲ್ಲಿ ಬಡ ಅಲ್ಪಸಂಖ್ಯಾತರಿಗೆ ಸಹಾಯ ಮಾಡಲು ಸರ್ಕಾರ ಸಜ್ಜಾಗಿದೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವು:
ಮೌಲಾನಾ ಅಬ್ದುಲ್ ಕಲಾಂ ಸ್ಕೂಲ್‌ ಸೇರಿದಂತೆ ಪ್ರತಿಭಾವಂತ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಧನ ಸಹಾಯ ನೀಡಲಾಗುತ್ತಿದೆ. ಈಗಾಗಲೇ 214 ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಲ್ಯಾಪ್‌ಟಾಪ್ ವಿತರಣೆ ನಡೆಸಲಾಗಿದೆ.

ಮದರಸಾಗಳಲ್ಲಿ ಕನ್ನಡ ಕಲಿಕೆ:
ಮದರಸಾಗಳಲ್ಲಿ ಕನ್ನಡ ಕಲಿಕೆ ಆರಂಭಿಸುವ ಯೋಜನೆಯೊಂದಿಗೆ, ಮೊದಲ ಹಂತದಲ್ಲಿ 200 ಮೌಲ್ವಿಗಳನ್ನು ಆಯ್ಕೆ ಮಾಡಲಾಗಿದೆ. ಮೂವರು ತಿಂಗಳಲ್ಲಿ ಅವರಿಗೆ ಕನ್ನಡ ಭಾಷಾ ತರಬೇತಿ ನೀಡಲಾಗುವುದು.

2,000 ಮದರಸಾಗಳಿಗೆ ಕನ್ನಡ ಪಾಠ್ಯಕ್ರಮ:
ರಾಜ್ಯದಲ್ಲಿ 2 ಸಾವಿರ ಮದರಸಾಗಳಿಗೆ ಕನ್ನಡ ಕಲಿಕೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದ್ದು, ಅಲ್ಪಸಂಖ್ಯಾತ ಆಯೋಗ ಸಂಪೂರ್ಣ ಸಹಕಾರ ನೀಡಲಿದೆ ಎಂದು ಅಧ್ಯಕ್ಷ ಯು. ನಿಸಾರ್ ಅಹಮದ್ ಹೇಳಿದ್ದಾರೆ. very soon ಈ ಪಾಠ್ಯಕ್ರಮ ಮುದ್ರಣಕ್ಕೂ ಕ್ರಮ ಜರಗಲಿದೆ.

Continue Reading

ಅಪರಾಧ

ಧರ್ಮಸ್ಥಳ ಶವ ಹೂತು ಪ್ರಕರಣ: ಮೂರು ಅಸ್ಥಿಪಂಜರ ಪತ್ತೆ, ಎಸ್‌ಐಟಿ ತನಿಖೆಗೆ ಹೊಸ ತಿರುವು!

ದಕ್ಷಿಣ ಕನ್ನಡ, ಆಗಸ್ಟ್ 5 – ಧರ್ಮಸ್ಥಳದ ಸುತ್ತಮುತ್ತಲ ಶವ ಹೂತು ಪ್ರಕರಣಕ್ಕೆ ದಿನೇ ದಿನೆ ನ್ಯೂ ಟ್ವಿಸ್ಟ್ ಸಿಗುತ್ತಿದ್ದು, ಇದೀಗ ಮೂರು ಅಸ್ಥಿಪಂಜರಗಳು ಪತ್ತೆಯಾಗಿವೆ ಎಂಬ ಸುದ್ದಿ ಚಕ್ಕರಿಗೊಳ್ಳುತ್ತಿದೆ. ಈ ಕುರಿತು ದೂರುದಾರ ಸುಜಾತಾ ಭಟ್ ಪರ ವಕೀಲ ಮಂಜುನಾಥ್ ಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಎಸ್‌ಐಟಿ ತಂಡದ ಶೋಧ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಿನ್ನೆ ನಡೆದ ಉತ್ಖನನದ ವೇಳೆ:

  • ಸ್ಟಾಟ್ ನಂಬರ್ 12ರ ಬಳಿ ಕಾರ್ಮಿಕರಿಂದ ಅಗೆಸಿದಾಗ, ಮೂರು ಅಸ್ಥಿಪಂಜರಗಳು ಹಾಗೂ ಮಹಿಳೆಯ ಸೀರೆ ಪತ್ತೆಯಾಗಿವೆ.
  • ಸುಮಾರು 140 ಮೂಳೆಗಳ ತುಂಡುಗಳು ಪತ್ತೆಯಾದ ಕುರಿತು ವರದಿ ಇದೆ.
  • ಅಸ್ಥಿಪಂಜರಗಳನ್ನು ತಕ್ಷಣವೇ ಕೆಎಂಸಿ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ.

ಇಂದಿನ ಉತ್ಖನನ:

  • ನೇತ್ರಾವತಿ ನದಿಯ ದಡದ ಬಳಿ 11ನೇ ಪಾಯಿಂಟ್‌ನಲ್ಲಿ ಅಗೆತ ಕೆಲಸ ನಡೆಯುತ್ತಿದೆ.
  • 6 ಅಡಿಯವರೆಗೆ ಶೋಧ ನಡೆದ ಬಳಿಕ ಸಾಕ್ಷ್ಯ ಸಿಕ್ಕದರೆ ಮುಂದಿನ ಪಾಯಿಂಟ್‌ಗೆ ಹೋಗುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಪೂರ್ವ ಘಟನೆ:

  • ಜುಲೈ 31ರಂದು 6ನೇ ಗುರುತುಸ್ಥಳದಲ್ಲಿ ಅಸ್ಥಿಪಂಜರ ಪತ್ತೆಯಾದ ಹಿನ್ನೆಲೆ, ಎಸ್‌ಐಟಿ ಅಧಿಕಾರಿಗಳಾದ ಐಪಿಎಸ್ ಜಿತೇಂದ್ರ ಕುಮಾರ್ ದಯಾಮ ಅವರು ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದು, ಆಧಾರದ ಮೇಲೆ UDR ಪ್ರಕರಣ ದಾಖಲಾಗಿದೆ.
Continue Reading

ಬೆಂಗಳೂರು

ಸು ಫ್ರಮ್ ಸೋ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಕಲೆಕ್ಷನ್ ಸೆನ್ಸೇಷನ್: ಶ್ರಾವಣದ ಹಬ್ಬಕ್ಕೂ ಮುನ್ನ ಧನಲಕ್ಷ್ಮೀ ವರ!

ಬೆಂಗಳೂರು: ಶ್ರಾವಣ ತಿಂಗಳು ಅಂದ್ರೆ ಬಂಗಾರದ ತಿಂಗಳು. ಮನೆಮಾಲೀಕರಿಗೆ ವರಮಹಾಲಕ್ಷ್ಮೀ ಹಬ್ಬ, ಕನ್ನಡ ಚಿತ್ರರಂಗಕ್ಕೆ “ಸು ಫ್ರಮ್ ಸೋ” ಚಿತ್ರದ ಯಶಸ್ಸು! ರಾಜ್ ಬಿ.ಶೆಟ್ಟಿ ಅಭಿನಯದ ಈ ಹಾರರ್-ಕಾಮಿಡಿ ಸಿನಿಮಾ ಇದೀಗ ಮೂರನೇ ವಾರದಲ್ಲೂ ಭರ್ಜರಿಯಾಗಿ ಓಡುತ್ತಿದ್ದು, ಬಾಕ್ಸ್ ಆಫೀಸ್‌ನಲ್ಲಿ ಹವಾ ಸೃಷ್ಟಿಸಿದೆ.

ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಉತ್ತಮ ಕಂಟೆಂಟ್ ಹೊಂದಿರುವ ಸಿನಿಮಾಗಳಿಗೆ ಅಭಿಮಾನಿಗಳ ಮೆಚ್ಚುಗೆ ಹೆಚ್ಚಾಗುತ್ತಿದೆ. ‘ಎಕ್ಕ’, ‘ಜೂನಿಯರ್’ ನಂತರ ‘ಸು ಫ್ರಮ್ ಸೋ’ ಕೂಡ ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
75 ಲಕ್ಷ ಬಜೆಟ್‌ನಲ್ಲಿ ತಯಾರಾದ ಈ ಸಿನಿಮಾ ಈಗಾಗಲೇ ₹25 ಕೋಟಿ ಕಲೆಕ್ಷನ್ ಮಾಡಿದ್ದು, ಶೀಘ್ರದಲ್ಲೇ ₹50 ಕೋಟಿ ಕ್ಲಬ್ ಸೇರುವ ಲಕ್ಷಣವಿದೆ.

ಮುಂಬೈ, ದೆಹಲಿ, ಚೆನ್ನೈ, ಹೈದರಾಬಾದ್, ಕೇರಳ ಹಾಗೂ ವಿದೇಶಗಳಲ್ಲೂ ರಿಲೀಸ್ ಆದ ಈ ಸಿನಿಮಾ ಎಲ್ಲೆಡೆ ಹೌಸ್‌ಫುಲ್ ಪ್ರದರ್ಶನ ಪಡೆಯುತ್ತಿದೆ. ರಾಜ್ ಬಿ.ಶೆಟ್ಟಿ ಹಾಗೂ ನಿರ್ದೇಶಕ ಜೆ.ಪಿ. ತುಮಿನಾಡ್ ಅವರ ಶ್ರದ್ಧೆ ಫಲ ನೀಡಿದ್ದು, “ಬಂದರೋ ಬಂದರು.. ಬಾವ ಬಂದರು” ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗುತ್ತಿದೆ.

ಇನ್ನು ಮಲಯಾಳಂ ಡಬ್ಬಿಂಗ್ ಆಗಿ ಆಗಸ್ಟ್ 1ರಂದು ಬಿಡುಗಡೆಗೊಂಡ ‘ಸು ಫ್ರಮ್ ಸೋ’ ಚಿತ್ರ, ಕೊಚ್ಚಿಯಲ್ಲಿ ಒಂದೇ ದಿನ 8 ಸಾವಿರ ಟಿಕೆಟ್ ಮಾರಾಟ ಮಾಡಿದ ದಾಖಲೆ ಸ್ಥಾಪಿಸಿದೆ. ಆದುದರಿಂದ, ಚಿತ್ರದ ಬಯೋಪಿಕ್ ಮತ್ತಷ್ಟು ಭಾಷೆಗಳಿಗೆ ವಿಸ್ತರಿಸುವ ಸಾಧ್ಯತೆ ಇದೆ.

Continue Reading

Trending