ಬೆಂಗಳೂರು
ತಂದೆ ಹೆಸರಲ್ಲಿ ಸ್ವಂತ ಖರ್ಚಿನಲ್ಲಿ 101 ಜನರಿಗೆ ಕಾಶಿಯಾತ್ರೆ ಮಾಡಿಸುತ್ತಿರುವ ನಟ ಜಿಮ್ ರವಿ

ಕೋಲಾರ ಮೂಲದ ಎ.ಕೆ.ರವಿ ಅವರು ಜಿಮ್ ರವಿ ಎಂದೇ ಖ್ಯಾತರು. ದೇಹದಾರ್ಢ್ಯ ಪಟುವಾಗಿ ದೇಶ, ವಿದೇಶಗಳಲ್ಲಿ ಜನಪ್ರಿಯರಾಗಿರುವ ಜಿಮ್ ರವಿ ಇತ್ತೀಚೆಗೆ “ಪುರುಷೋತ್ತಮ” ಎಂಬ ಚಿತ್ರದಲ್ಲಿ ನಾಯಕನಾಗಿಯೂ ಕಾಣಿಸಿಕೊಂಡಿದ್ದರು. ಅಲ್ಲದೇ, ಸಾಮಾಜಿಕ ಕಾರ್ಯಗಳ ಮೂಲಕವೂ ಹೆಸರು ಸಂಪಾದಿಸಿದ್ದಾರೆ.
ಆದರೆ, ತಾವು ಮಾಡುವ ಸಾಮಾಜಿಕ ಕೆಲಸಕ್ಕೆ ಸಂಬಂಧಿಸಿದಂತೆ ಒಂದು ದಿನವೂ ಪ್ರಚಾರ ಬಯಸಿದವರಲ್ಲ. ಅವರೀಗ ಮತ್ತೊಂದು ಮಹತ್ತರ ಕಾರ್ಯಕ್ಕೆ ಮುಂದಾಗಿದ್ದಾರೆ. ಸ್ನೇಹಿತರ ಒತ್ತಾಯಕ್ಕೆ ಮಣಿದ ರವಿ ಅವರು ಈ ಕಾರ್ಯ ಇತರರಿಗೂ ಮಾದರಿಯಾಗಲಿ ಎಂಬ ಉದ್ದೇಶದಿಂದ ಇತ್ತೀಚೆಗೆ ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು
ಕೋಲಾರದಿಂದ ಬೆಂಗಳೂರಿಗೆ ಬಂದು ಟೌನ್ ಹಾಲ್ನಲ್ಲಿ ನಡೆದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಮೊದಲ ಬಹುಮಾನ ಗಳಿಸಿದ ವಿಷಯದೊಂದಿಗೆ ಮಾತು ಆರಂಭಿಸಿದ ಜಿಮ್ ರವಿ, ”ನಮ್ಮದು ಮಧ್ಯಮವರ್ಗ ಕುಟುಂಬ. ಪ್ರತಿದಿನ ಮುದ್ದೆ ತಿನ್ನುತ್ತಿದ್ದ ನಾವು ಹಬ್ಬಗಳಲ್ಲೇ ಅನ್ನ ಉಣ್ಣುತ್ತಿದ್ದದ್ದು. ನನ್ನ ತಾಯಿ ನನಗೆ ಆದರ್ಶ. ಜೀವನದ ಪಾಠ ಕಲಿಸಿದ ಮಹಾತಾಯಿ ಅವರು. ಒಬ್ಬರ ಸುಖಕ್ಕೆ ನೀನು ಆಗದಿದ್ದರೂ ಪರವಾಗಿಲ್ಲ, ಕಷ್ಟದಲ್ಲಿರುವವರ ಜೊತೆಗಿರು. ಹಿರಿಯರೆದುರು ಕೈಕಟ್ಟಿ ನಿಲ್ಲೆಂದು ಅಮ್ಮ ಹೇಳಿಕೊಟ್ಟಿದ್ದಾರೆ. ಹೀಗೆ ಜೀವನ ಸಾಗುತ್ತಿದ್ದಾಗ ಅಮ್ಮ ನಮ್ಮನ್ನು ಬಿಟ್ಟು ಹೋದರು. ಅಮ್ಮನ ನಿಧನದ ಕೆಲ ತಿಂಗಳ ನಂತರ ಅಪ್ಪ, ನನ್ನ ಹತ್ತಿರ ಬಂದು ನಿಮ್ಮ ಅಮ್ಮನ ಸಾವಿನಿಂದ ಬಹಳ ದುಖವಾಗಿದೆ. ಹಾಗಾಗಿ, ನನ್ನನ್ನು ಕಾಶಿಯಾತ್ರೆಗೆ ಕರೆದುಕೊಂಡು ಹೋಗು ಎಂದರು. ನನ್ನ ಹತ್ತಿರ ಆಗ ಹಣವಿರಲಿಲ್ಲ. ಅಪ್ಪನಿಗೆ ಏರುದನಿಯಲ್ಲಿ ಈಗ ಅದೆಲ್ಲ ಆಗಲ್ಲ ಎಂದುಬಿಟ್ಟೆ”.
ನಮ್ಮ ಯೋಜನೆ ಒಂದಾದರೆ, ವಿಧಿ ಮತ್ತೊಂದು: ”ಅದಾದ ಕೆಲ ತಿಂಗಳ ಬಳಿಕ ಮತ್ತೆ ಕೇಳಿದರು. ಆಗ ನಾನು ಅವರಿಗೆ ವಿಮಾನದಲ್ಲಿ ಕರೆದುಕೊಂಡು ಹೋಗುತ್ತೇನೆಂದು ಹೇಳಿ ಸಮಾಧಾನಪಡಿದೆ. ಕೆಲ ದಿನಗಳ ನಂತರ ಗೆಳೆಯರ ಹತ್ತಿರ ಸಾಲ ಮಾಡಿ ಅಪ್ಪನ ಕಾಶಿಯಾತ್ರೆಗೆ ವಿಮಾನದ ಟಿಕೆಟ್ ಬುಕ್ ಮಾಡಿದೆ. ಆ ವಿಷಯವನ್ನು ಅಪ್ಪನಿಗೆ ಫೋನ್ ಮಾಡಿ ತಿಳಿಸಿದೆ. ಅವರು ಖುಷಿಯಾಗುತ್ತಾರೆ. ಆದರೆ ವಿಧಿ ಬೇರೆಯದ್ದಾಗಿತ್ತು,
ಅಪ್ಪನ ಹೆಸರಿನಲ್ಲಿ ಕಾಶಿಯಾತ್ರೆ: ”ನಾನು ಈ ವಿಷಯ ತಿಳಿಸಿದ ಕೆಲವೇ ಗಂಟೆಗಳಲ್ಲೇ ಅಪ್ಪ ನಮ್ಮನ್ನು ಬಿಟ್ಟು ಹೋದರು. ಅವರ ಕಾಶಿಯಾತ್ರೆಯ ಆಸೆಯೂ ಅವರ ಜೊತೆಗೆ ಹೋಗಿ ಬಿಡ್ತು. ಅದೇ ದಿನ ನಾನು ನಿರ್ಧಾರ ಮಾಡಿದೆ. ನಮ್ಮ ಅಪ್ಪನ ಆಸೆ ಈಡೇರಿಸಲು, ಕಾಶಿಯಾತ್ರೆ ಮಾಡಲು ಸಾಧ್ಯವಿಲ್ಲದ ಕೆಲ ಅಶಕ್ತರಿಗೆ ಅಪ್ಪನ ಹೆಸರಿನಲ್ಲಿ ಕಾಶಿಯಾತ್ರೆ ಮಾಡಿಸಬೇಕು ಎಂದು ನಿರ್ಧರಿಸಿದೆ” ಎಂದು ತಿಳಿಸಿದರು.
ಅಪ್ಪ ನಿಧನರಾಗಿ 14 ವರ್ಷಗಳಾಯಿತು. ಅಂದಿನಿಂದ ಈವರೆಗೂ ಅದಕ್ಕೋಸ್ಕರ ಹುಂಡಿ ಇಟ್ಟು ಹಣ ಕೂಡಿಸುತ್ತಿದ್ದೆ. ಯಾವುದೇ ದುಂದು ವೆಚ್ವ ಮಾಡದೇ ಹತ್ತು, ಇಪ್ಪತ್ತು ರೂಪಾಯಿಯಿಂದ ಹಿಡಿದು ಸಾವಿರ ರೂಪಾಯಿಗಳವರೆಗೂ ಹುಂಡಿಯಲ್ಲಿ ಹಾಕುತ್ತಿದ್ದೆ. ಈಗದಕ್ಕೆ ಕಾಲ ಕೂಡಿ ಬಂದಿದೆ. ವಾಣಿಜ್ಯ ತೆರೆಗೆ ಅಧಿಕಾರಿಗಳಾದ ಜಗನ್ನಾಥ್ ಹಾಗೂ ಕುಟುಂಬದವರ ಮಾರ್ಗದರ್ಶನದಲ್ಲಿ ರಾಜ್ಯದ ವಿವಿಧ ಕಡೆಗಳಿಂದ ಸುಮಾರು 80 ಜನ ಅಸಕ್ತರನ್ನು ನಾನೇ ಖುದ್ದಾಗಿ ಭೇಟಿ ಮಾಡಿದ್ದು, ಅವರ ಜೊತೆ 101 ಜನರ ತಂಡ ಜುಲೈ 2ರಂದು ಪಯಣ ಬೆಳೆಸುತ್ತಿದ್ದೇವೆ” ಎಂದು ತಿಳಿಸಿದರು.
ಅವರ ಊರಿನಿಂದ ಬರುವ ಪ್ರಯಾಣದ ವೆಚ್ಚದಿಂದ ಹಿಡಿದು ಎಲ್ಲ ವ್ಯವಸ್ಥೆಯನ್ನೂ ನಾವೇ ಮಾಡುತ್ತಿದ್ದೇವೆ. ಜುಲೈ 2ರ ಬೆಳಗ್ಗೆ ಬೆಂಗಳೂರು ವಿಮಾನ ನಿಲ್ದಾಣದಿಂದ ರಾಮ ಜನ್ಮಭೂಮಿ ಅಯೋಧ್ಯೆಗೆ ಪಯಣ ಕೈಗೊಳ್ಳಲಿದ್ದೇವೆ. ಅಲ್ಲಿಂದ ಪ್ರಯಾಗರಾಜ. ಅಲ್ಲಿಂದ ಕಾಶಿ. ಒಟ್ಟು 3 ದಿನಗಳ ಯಾತ್ರೆ. ಎಲ್ಲಾ ಕಡೆ ಎಸಿ ವಾಹನ ಹಾಗೂ ಎಸಿ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ನಮ್ಮ ಜೊತೆ ವೈದ್ಯರು ಹಾಗೂ ಸ್ವಯಂ ಸೇವಕರಿರುತ್ತಾರೆ. ಆಹ್ವಾನಿಸಿದ ಅತಿಥಿಗಳಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮದು. ನನಗೆ ಈ ವಿಚಾರ ಪ್ರಚಾರ ಮಾಡುವ ಉದ್ದೇಶವಿರಲಿಲ್ಲ. ಸ್ನೇಹಿತರೋರ್ವರು, ನೀವು ಈ ವಿಷಯ ಜನರಿಗೆ ತಿಳಿಸಿ, ಅದು ಎಷ್ಟೋ ಜನರಿಗೆ ಆದರ್ಶವಾಗಬಹುದು ಎಂದರು. ಹಾಗಾಗಿ, ನಿಮ್ಮ ಮುಂದೆ ಈ ವಿಷಯ ತಿಳಿಸಿದ್ದೇನೆ. ದೇವರು ಅನುಕೂಲ ಮಾಡಿಕೊಟ್ಟರೆ ಮುಂದೆಯೂ ಇದೇ ರೀತಿಯ ಕಾರ್ಯಕ್ರಮ ಹಮ್ಮಿಕೊಳ್ಳುವ ಯೋಜನೆ ಇದೆ ಎಂದು ಮಾಹಿತಿ ನೀಡಿದರು
ಬೆಂಗಳೂರು
ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ ₹50,000 ಸಹಾಯಧನ: ಜಮೀರ್ ಅಹ್ಮದ್ ಘೋಷಣೆ
ಬೆಂಗಳೂರು:
ಕರ್ನಾಟಕದ ಅಲ್ಪಸಂಖ್ಯಾತ ಸಮುದಾಯದ ಸಾಮೂಹಿಕ ವಿವಾಹಗಳಿಗೆ ಇನ್ಮುಂದೆ ಸರ್ಕಾರದಿಂದ ₹50,000 ಸಹಾಯಧನ ಸಿಗಲಿದೆ ಎಂದು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.
ಸಿಎಂ ಸಿದ್ದರಾಮಯ್ಯ ಘೋಷಿಸಿರುವ ಬಜೆಟ್ ಯೋಜನೆಗೆ ಈಗ ಅನುಮೋದನೆ ಲಭಿಸಿದ್ದು, ಈ ನಿಟ್ಟಿನಲ್ಲಿ ಬಡ ಅಲ್ಪಸಂಖ್ಯಾತರಿಗೆ ಸಹಾಯ ಮಾಡಲು ಸರ್ಕಾರ ಸಜ್ಜಾಗಿದೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವು:
ಮೌಲಾನಾ ಅಬ್ದುಲ್ ಕಲಾಂ ಸ್ಕೂಲ್ ಸೇರಿದಂತೆ ಪ್ರತಿಭಾವಂತ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಧನ ಸಹಾಯ ನೀಡಲಾಗುತ್ತಿದೆ. ಈಗಾಗಲೇ 214 ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಲ್ಯಾಪ್ಟಾಪ್ ವಿತರಣೆ ನಡೆಸಲಾಗಿದೆ.
ಮದರಸಾಗಳಲ್ಲಿ ಕನ್ನಡ ಕಲಿಕೆ:
ಮದರಸಾಗಳಲ್ಲಿ ಕನ್ನಡ ಕಲಿಕೆ ಆರಂಭಿಸುವ ಯೋಜನೆಯೊಂದಿಗೆ, ಮೊದಲ ಹಂತದಲ್ಲಿ 200 ಮೌಲ್ವಿಗಳನ್ನು ಆಯ್ಕೆ ಮಾಡಲಾಗಿದೆ. ಮೂವರು ತಿಂಗಳಲ್ಲಿ ಅವರಿಗೆ ಕನ್ನಡ ಭಾಷಾ ತರಬೇತಿ ನೀಡಲಾಗುವುದು.
2,000 ಮದರಸಾಗಳಿಗೆ ಕನ್ನಡ ಪಾಠ್ಯಕ್ರಮ:
ರಾಜ್ಯದಲ್ಲಿ 2 ಸಾವಿರ ಮದರಸಾಗಳಿಗೆ ಕನ್ನಡ ಕಲಿಕೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದ್ದು, ಅಲ್ಪಸಂಖ್ಯಾತ ಆಯೋಗ ಸಂಪೂರ್ಣ ಸಹಕಾರ ನೀಡಲಿದೆ ಎಂದು ಅಧ್ಯಕ್ಷ ಯು. ನಿಸಾರ್ ಅಹಮದ್ ಹೇಳಿದ್ದಾರೆ. very soon ಈ ಪಾಠ್ಯಕ್ರಮ ಮುದ್ರಣಕ್ಕೂ ಕ್ರಮ ಜರಗಲಿದೆ.
ಬೆಂಗಳೂರು
ಸು ಫ್ರಮ್ ಸೋ’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಕಲೆಕ್ಷನ್ ಸೆನ್ಸೇಷನ್: ಶ್ರಾವಣದ ಹಬ್ಬಕ್ಕೂ ಮುನ್ನ ಧನಲಕ್ಷ್ಮೀ ವರ!
ಬೆಂಗಳೂರು: ಶ್ರಾವಣ ತಿಂಗಳು ಅಂದ್ರೆ ಬಂಗಾರದ ತಿಂಗಳು. ಮನೆಮಾಲೀಕರಿಗೆ ವರಮಹಾಲಕ್ಷ್ಮೀ ಹಬ್ಬ, ಕನ್ನಡ ಚಿತ್ರರಂಗಕ್ಕೆ “ಸು ಫ್ರಮ್ ಸೋ” ಚಿತ್ರದ ಯಶಸ್ಸು! ರಾಜ್ ಬಿ.ಶೆಟ್ಟಿ ಅಭಿನಯದ ಈ ಹಾರರ್-ಕಾಮಿಡಿ ಸಿನಿಮಾ ಇದೀಗ ಮೂರನೇ ವಾರದಲ್ಲೂ ಭರ್ಜರಿಯಾಗಿ ಓಡುತ್ತಿದ್ದು, ಬಾಕ್ಸ್ ಆಫೀಸ್ನಲ್ಲಿ ಹವಾ ಸೃಷ್ಟಿಸಿದೆ.
ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಉತ್ತಮ ಕಂಟೆಂಟ್ ಹೊಂದಿರುವ ಸಿನಿಮಾಗಳಿಗೆ ಅಭಿಮಾನಿಗಳ ಮೆಚ್ಚುಗೆ ಹೆಚ್ಚಾಗುತ್ತಿದೆ. ‘ಎಕ್ಕ’, ‘ಜೂನಿಯರ್’ ನಂತರ ‘ಸು ಫ್ರಮ್ ಸೋ’ ಕೂಡ ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
75 ಲಕ್ಷ ಬಜೆಟ್ನಲ್ಲಿ ತಯಾರಾದ ಈ ಸಿನಿಮಾ ಈಗಾಗಲೇ ₹25 ಕೋಟಿ ಕಲೆಕ್ಷನ್ ಮಾಡಿದ್ದು, ಶೀಘ್ರದಲ್ಲೇ ₹50 ಕೋಟಿ ಕ್ಲಬ್ ಸೇರುವ ಲಕ್ಷಣವಿದೆ.
ಮುಂಬೈ, ದೆಹಲಿ, ಚೆನ್ನೈ, ಹೈದರಾಬಾದ್, ಕೇರಳ ಹಾಗೂ ವಿದೇಶಗಳಲ್ಲೂ ರಿಲೀಸ್ ಆದ ಈ ಸಿನಿಮಾ ಎಲ್ಲೆಡೆ ಹೌಸ್ಫುಲ್ ಪ್ರದರ್ಶನ ಪಡೆಯುತ್ತಿದೆ. ರಾಜ್ ಬಿ.ಶೆಟ್ಟಿ ಹಾಗೂ ನಿರ್ದೇಶಕ ಜೆ.ಪಿ. ತುಮಿನಾಡ್ ಅವರ ಶ್ರದ್ಧೆ ಫಲ ನೀಡಿದ್ದು, “ಬಂದರೋ ಬಂದರು.. ಬಾವ ಬಂದರು” ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗುತ್ತಿದೆ.
ಇನ್ನು ಮಲಯಾಳಂ ಡಬ್ಬಿಂಗ್ ಆಗಿ ಆಗಸ್ಟ್ 1ರಂದು ಬಿಡುಗಡೆಗೊಂಡ ‘ಸು ಫ್ರಮ್ ಸೋ’ ಚಿತ್ರ, ಕೊಚ್ಚಿಯಲ್ಲಿ ಒಂದೇ ದಿನ 8 ಸಾವಿರ ಟಿಕೆಟ್ ಮಾರಾಟ ಮಾಡಿದ ದಾಖಲೆ ಸ್ಥಾಪಿಸಿದೆ. ಆದುದರಿಂದ, ಚಿತ್ರದ ಬಯೋಪಿಕ್ ಮತ್ತಷ್ಟು ಭಾಷೆಗಳಿಗೆ ವಿಸ್ತರಿಸುವ ಸಾಧ್ಯತೆ ಇದೆ.
ಬೆಂಗಳೂರು
ವೇತನ ವಿವಾದದಲ್ಲಿ ಸಿಎಂ ಸ್ಪಷ್ಟನೆ: 14 ತಿಂಗಳ ಹಿಂಬಾಕಿಗೆ ಮಾತ್ರ ಸರ್ಕಾರ ಸಿದ್ಧ
ಬೆಂಗಳೂರು: ಸಾರಿಗೆ ನೌಕರರ 38 ತಿಂಗಳ ವೇತನ ಹಿಂಬಾಕಿ ಪಾವತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. “ಈ ಬೇಡಿಕೆ ಸಮಂಜಸವಲ್ಲ. ಸರ್ಕಾರ ಕೇವಲ 14 ತಿಂಗಳ ಹಿಂಬಾಕಿಗೆ ಸಿದ್ಧ” ಎಂದು ಅವರು ಮಂಗಳವಾರ ವಿಧಾನಸೌಧದಲ್ಲಿ ನಡೆದ ಸಂಧಾನ ಸಭೆಯಲ್ಲಿ ತಿಳಿಸಿದ್ದಾರೆ.
2020ರಿಂದ 2023ರ ಫೆಬ್ರವರಿವರೆಗಿನ ಬಾಕಿ ವೇತನ ಪಾವತಿಗೆ ನೌಕರ ಸಂಘಗಳು ಒತ್ತಾಯಿಸಿದ್ದರೊಂದಿಗೆ, 2024ರಿಂದ ನೂತನ ವೇತನವನ್ನೂ ಜಾರಿಗೆ ತರುವಂತೆ ಒತ್ತಾಯಿಸಲಾಗಿದೆ. ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, “ನಿಗಮಗಳ ಆರ್ಥಿಕ ಪರಿಸ್ಥಿತಿ ಮತ್ತು ಹಿಂದಿನ ಸರ್ಕಾರದ ಆದೇಶಗಳ ದೋಷಗಳನ್ನು ಪರಿಗಣಿಸಿ 14 ತಿಂಗಳ ವೇತನ ಹಿಂಬಾಕಿಗೆ ಸಮ್ಮತಿಯಿದೆ,” ಎಂದು ಸ್ಪಷ್ಟಪಡಿಸಿದರು.
ವೇತನ ಪರಿಷ್ಕರಣೆ ಪಶ್ಚಾತ್ಪಟ
2016ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ 12.5% ವೇತನ ಹೆಚ್ಚಳ ಜಾರಿಗೆ ಬಂದಿತ್ತು. ಆದರೆ 2020ರ ಕೋವಿಡ್ ಕಾರಣದಿಂದ ಆ ವೇಳೆಗೆ ಯಾವುದೇ ಪರಿಷ್ಕರಣೆ ಆಗಿರಲಿಲ್ಲ. ನಂತರದ ಕಾಂಗ್ರೆಸ್ ಸರ್ಕಾರದಲ್ಲಿ ಶ್ರೀನಿವಾಸ ಮೂರ್ತಿ ಸಮಿತಿ ಶಿಫಾರಸ್ಸಿನಂತೆ 2022ರ ಜೂನ್ 01ರಿಂದ 2023ರ ಫೆಬ್ರವರಿವರೆಗೆ ಹಿಂಬಾಕಿ ಪಾವತಿ ಮಾಡಲು ತೀರ್ಮಾನಿಸಲಾಗಿತ್ತು.
ಸರ್ಕಾರದ ಆರ್ಥಿಕ ಹೊಣೆಗಾರಿಕೆ
ಸಿದ್ದರಾಮಯ್ಯ ಅವರು ಹೇಳಿದ್ದಾರೆ: “ನಾವು ಅಧಿಕಾರಕ್ಕೆ ಬಂದಾಗ ನಿಗಮಗಳಿಗೆ ಒಟ್ಟಾರೆ ₹4000 ಕೋಟಿ ಸಾಲ ಇತ್ತು. 2018 ರಲ್ಲಿ ಈ ಮೊತ್ತ ಕೇವಲ ₹14 ಕೋಟಿ ಮಾತ್ರ ಇತ್ತು. ಯಾವುದೇ ನಿಗಮ ಲಾಭದಲ್ಲಿ ಇಲ್ಲ.” ಅಂತಹ ಪರಿಸ್ಥಿತಿಯಲ್ಲಿ ಎಲ್ಲಾ ನೌಕರರ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.
ಸಂಘದ ಚುನಾವಣೆ ಮತ್ತು ಮುಂದಿನ ಕ್ರಮ
ಸಾರಿಗೆ ನೌಕರರ ಸಂಘದ ಚುನಾವಣೆ ಹಾಗೂ ಬೇಡಿಕೆಗಳ ಕುರಿತಂತೆ ಸರ್ಕಾರ ಪರಿಶೀಲನೆ ನಡೆಸಲಿದ್ದು, ಮಾತುಕತೆ ಮೂಲಕ ಎಲ್ಲ ಅಹವಾಲುಗಳನ್ನು ಬಗೆಹರಿಸಲು ಸಿದ್ಧವಾಗಿದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು2 years ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು8 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ಕ್ರೀಡೆ2 months ago
ಇಂದು ಐಪಿಎಲ್ ಫೈನಲ್- ಆರ್ಸಿಬಿಗೆ ಶುಭಕೋರಿದ ಎಸ್ಟಿಎಸ್!