Connect with us

ದೇಶ

ದೀರ್ಘಾವಧಿ ಷೇರು ಹೂಡಿಕೆ ಇಟ್ಟರೆ ಹೆಚ್ಚು ಫಲವಾ?

ಈಕ್ವಿಟಿ ಮಾರುಕಟ್ಟೆಯಲ್ಲಿ ಷೇರುಗಳನ್ನು ಖರೀದಿಸಿ ದೀರ್ಘಾವಧಿ ಹಿಡಿದಿಟ್ಟುಕೊಂಡರೆ ಭಾರೀ ಲಾಭ ಸಿಗುತ್ತದೆ ಎಂಬುದು ಸಾಮಾನ್ಯ ಭಾವನೆ. ಆದರೆ, ಈ ಅಭಿಪ್ರಾಯವನ್ನು ಹೀಲಿಯೋಸ್ ಕ್ಯಾಪಿಟಲ್ ಸಂಸ್ಥಾಪಕ ಮತ್ತು ಫಂಡ್ ಮ್ಯಾನೇಜರ್ ಸಮೀರ್ ಅರೋರಾ ತಳ್ಳಿಹಾಕಿದ್ದಾರೆ. ಸಾವಿರಾರು ಷೇರುಗಳಲ್ಲಿ ಕೇವಲ ಶೇ.5ಕ್ಕಿಂತ ಕಡಿಮೆ ಷೇರುಗಳು ಮಾತ್ರ ದೀರ್ಘಾವಧಿಗೆ ಸೂಕ್ತವೆನಿಸುವುದರಿಂದ, ಇಂತಹ ಷೇರುಗಳನ್ನು ಗುರುತಿಸುವುದು ಬಹಳ ಕಷ್ಟಕರ ಎಂದು ಅವರು ಎಚ್ಚರಿಸುತ್ತಾರೆ.

ಕೆಲವೊಮ್ಮೆ, ದಶಕಗಳ ಹಿಂದೆ ಖರೀದಿಸಿದ ಷೇರುಗಳು ಇಂದು ಲಕ್ಷಾಂತರ ಅಥವಾ ಕೋಟ್ಯಂತರ ರುಪಾಯಿಗಳ ಮೌಲ್ಯವನ್ನು ತಲುಪಿರುವ ಸುದ್ದಿಗಳು ಮಾಧ್ಯಮಗಳಲ್ಲಿ ಕೇಳಿಬರುತ್ತವೆ. ಇಂತಹ ಕಥೆಗಳು ದೀರ್ಘಾವಧಿ ಷೇರು ಹೂಡಿಕೆಯ ಬಗ್ಗೆ ಒ ಒಂದು ಆಕರ್ಷಕ ಚಿತ್ರಣವನ್ನು ಸೃಷ್ಟಿಸಿವೆ. ಆದರೆ, ಸಮೀರ್ ಅರೋರಾ ಅವರು ಈ ಕಥೆಗಳನ್ನು ಮಿಥ್ ಎಂದು ಕರೆಯುತ್ತಾರೆ. ಅವರ ಸ್ನೇಹಿತರು ಮತ್ತು ಬಂಧುಗಳು 80 ಮತ್ತು 90ರ ದಶಕಗಳಲ್ಲಿ ಖರೀದಿಸಿದ ಷೇರುಗಳು ಇಂದು ಶೂನ್ಯ ಮೌಲ್ಯವನ್ನು ಹೊಂದಿವೆ ಎಂದು ಅವರು ಉದಾಹರಣೆ ನೀಡುತ್ತಾರೆ.

ಸಮೀರ್ ಅರೋರಾ ಅವರ ಪ್ರಕಾರ, ದೀರ್ಘಾವಧಿಗೆ ಷೇರುಗಳನ್ನು ಹಿಡಿದಿಟ್ಟುಕೊಳ್ಳುವುದಕ್ಕಿಂತ ಸರಿಯಾದ ಷೇರುಗಳ ಆಯ್ಕೆ ಮಾಡುವುದು ಮುಖ್ಯ. ಒಂದು ಕಂಪನಿಯ ಷೇರು ದೀರ್ಘಾವಧಿಗೆ ಲಾಭದಾಯಕವಾಗಿರಬೇಕಾದರೆ, ಆ ಕಂಪನಿಯು ನಿರಂತರ ಬೆಳವಣಿಗೆಯನ್ನು ಕಾಯ್ದುಕೊಳ್ಳಬೇಕು. ಇದಕ್ಕೆ ಕಂಪನಿಯ ವ್ಯವಹಾರ ಕ್ಷೇತ್ರ, ಮ್ಯಾನೇಜ್‌ಮೆಂಟ್ ತಂಡ, ಮತ್ತು ಮಾರುಕಟ್ಟೆಯ ಪರಿಸ್ಥಿತಿಗಳನ್ನು ಎಚ್ಚರಿಕೆಯಿಂದ ವಿಶ್ಲೇಷಿಸಬೇಕಾಗುತ್ತದೆ.

ಅರೋರಾ ಅವರ ಪ್ರಕಾರ, ಷೇರು ಮಾರುಕಟ್ಟೆಯಲ್ಲಿ ಸಾವಿರಾರು ಕಂಪನಿಗಳ ಷೇರುಗಳಿವೆ, ಆದರೆ ದೀರ್ಘಾವಧಿಗೆ ಲಾಭದಾಯಕವಾದ ಷೇರುಗಳು ಕೇವಲ ಶೇ.5ಕ್ಕಿಂತ ಕಡಿಮೆ. ಇಂತಹ ಷೇರುಗಳನ್ನು ಗುರುತಿಸುವುದು ಬಹಳ ಸವಾಲಿನ ಕೆಲಸ. ಕಂಪನಿಯ ಮ್ಯಾನೇಜ್‌ಮೆಂಟ್ ತಂಡಕ್ಕೆ ಕೂಡ ತಮ್ಮ ಕಂಪನಿಯ ಭವಿಷ್ಯದ ಬೆಳವಣಿಗೆಯ ಬಗ್ಗೆ ಸ್ಪಷ್ಟತೆ ಇರದಿರಬಹುದು ಎಂದು ಅವರು ಎಚ್ಚರಿಕೆ ನೀಡುತ್ತಾರೆ. ಆದ್ದರಿಂದ, ದೀರ್ಘಾವಧಿ ಲಾಭಕ್ಕಾಗಿ ಷೇರುಗಳನ್ನು ಆಯ್ಕೆ ಮಾಡುವಾಗ ವಿಶ್ಲೇಷಣೆ ಮತ್ತು ನಿರಂತರ ಗಮನ ಅಗತ್ಯ ಎಂದು ಸಮೀರ್ ಅರೋರಾ ಸಲಹೆ ನೀಡುತ್ತಾರೆ

ದೇಶ

ಪಿಎಂ ಮೋದಿ ಆಗಸ್ಟ್ 10ರಂದು ಬೆಂಗಳೂರಿಗೆ: ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ

ಬೆಂಗಳೂರು: ನಮ್ಮ ಮೆಟ್ರೋ (Namma Metro) ಹಳದಿ ಮಾರ್ಗದ (Yellow Line) ಉದ್ಘಾಟನೆಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು (PM Modi) ಆಗಸ್ಟ್ 10ರಂದು ಬೆಂಗಳೂರಿಗೆ ಬರುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಧಾನಿಯವರು ಆಗಸ್ಟ್ 10ರಂದು ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟನೆ ಮಾಡುವ ಉದ್ದೇಶದಿಂದ ಬರುತ್ತಿದ್ದಾರೆ. ಅವರ ಭೇಟಿಗೆ ಸಿದ್ಧತೆಗಳು ನಡೆಯುತ್ತಿವೆ. ಟೈಮ್ ಟು ಟೈಮ್ ಕಾರ್ಯಕ್ರಮಗಳ ಬಗ್ಗೆ ಇನ್ನೂ ವಿವರ ಬಾಕಿಯಿದೆ,” ಎಂದು ಹೇಳಿದರು.

ವೈಭವದಿಂದ ಕಾರ್ಯಕ್ರಮ?
ಆದರೆ, ಮೂಲ ಯೋಜನೆಗೆ ಬದಲಾವಣೆ ಆಗಿದೆ. ಈಗ ಪ್ರಧಾನಿಯವರು ಕೇವಲ ಹಳದಿ ಮಾರ್ಗದ ಮೆಟ್ರೋ ಮತ್ತು ವಂದೇ ಭಾರತ್ ರೈಲು ಉದ್ಘಾಟನೆಗೆ ಮಾತ್ರ ಭಾಗಿಯಾಗಲಿದ್ದಾರೆ. ಬಿಜೆಪಿ ಕಾರ್ಯಕರ್ತರ ಸಮಾವೇಶ ಮತ್ತು ರೋಡ್ ಶೋ ಕಾರ್ಯಾಚರಣೆಗಳು ರದ್ದುಪಡಿಸಲಾಗಿದೆ.

ಇದರ ಪರಿಣಾಮವಾಗಿ, ಒಂದು ವರ್ಷದಿಂದ ಮೋದಿಯವರ ಆಗಮನದ ನಿರೀಕ್ಷೆಯಲ್ಲಿದ್ದ ಬಿಜೆಪಿ ಕಾರ್ಯಕರ್ತರು ನಿರಾಸೆಗೊಳಗಾಗಿದ್ದಾರೆ ಎಂದು ವರದಿಯಾಗಿದೆ.

Continue Reading

ದೇಶ

ಭಾರತ vs ಅಮೆರಿಕ: ರಷ್ಯಾದ ತೈಲದ ಬಗ್ಗೆ ಉದ್ವಿಗ್ನತೆ, ಸೇನೆಯಿಂದ ತಿರುಗೇಟು

ಬೆಂಗಳೂರು: ರಷ್ಯಾದಿಂದ ಕಚ್ಚಾ ತೈಲ ಖರೀದಿಯ ಕುರಿತು ಭಾರತ-ಅಮೆರಿಕ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವಂತಾಗಿದೆ. ಭಾರತ ರಷ್ಯಾದಿಂದ ತೈಲ ಆಮದು ಮಾಡುತ್ತಿರುವುದಕ್ಕೆ ಅಮೆರಿಕ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, ಭಾರತೀಯ ಸೇನೆ ಅಮೆರಿಕದ ದ್ವೇಧಾಚರಣೆ ವಿರುದ್ಧ ತಿರುಗೇಟು ನೀಡಿದೆ.

ಸೋಷಿಯಲ್ ಮೀಡಿಯಾದಲ್ಲಿ “ಈ ದಿನ ಆ ವರ್ಷ – ಯುದ್ಧದ ನಿರ್ಮಾಣ – 05 ಆಗಸ್ಟ್ 1971” ಎಂಬ ಶೀರ್ಷಿಕೆಯಡಿ ಸೇನೆಯು 1971ರ ಯುದ್ಧದ ಕಾಲದ ಪತ್ರಿಕಾ ಕಟಿಂಗ್‌ ಹಂಚಿಕೊಂಡಿದೆ. 1954ರಿಂದ 1971ರವರೆಗೆ ಅಮೆರಿಕ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರ ಪೂರೈಸಿದ ಬಗ್ಗೆ ಪೇಪರ್ ಕಟಿಂಗ್‌ ಉಲ್ಲೇಖಿಸುತ್ತಾ, “ಅಮೆರಿಕ ಪಾಕ್ ಪರ ಕೆಲಸ ಮಾಡಿತ್ತಲ್ಲವೆ?” ಎಂದು ಪ್ರಶ್ನಿಸಿದೆ.

ಇದು ಉಕ್ರೇನ್ ವಿರುದ್ಧದ ಯುದ್ಧಕ್ಕೆ ಭಾರತ ಹಣ ಒದಗಿಸುತ್ತಿದೆ ಎಂಬ ಅಮೆರಿಕದ ಆರೋಪಕ್ಕೆ ಪ್ರತಿಕ್ರಿಯೆಯಾಗಿದೆ. ಭಾರತವು ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟದ ಟೀಕೆಗಳನ್ನು ‘ಅಸಮರ್ಥನೀಯ ಹಾಗೂ ಅಸಮಂಜಸ’ವೆಂದು ತಿರಸ್ಕರಿಸಿದೆ. ಭಾರತ ತನ್ನ ತೈಲ ನೀತಿಯನ್ನು ಆರ್ಥಿಕ ಶಕ್ತಿಯ ದೃಷ್ಟಿಯಿಂದ ಮುಂದುವರಿಸುತ್ತಿದೆ.

Continue Reading

ದೇಶ

ಸೇನೆ ಕುರಿತ ಹೇಳಿಕೆ: ಸುಪ್ರೀಂ ಕೋರ್ಟ್ ಟೀಕೆಗೆ ಪ್ರಿಯಾಂಕಾ ಗಾಂಧಿಯಿಂದ ಕಠಿಣ ಪ್ರತಿಕ್ರಿಯೆ

ನವದೆಹಲಿ: ಭಾರತೀಯ ಸೇನೆ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಇದೀಗ ಅವರ ಸಹೋದರಿ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ.

ರಾಹುಲ್ ಗಾಂಧಿಯ ವಿರುದ್ಧ ಸುಪ್ರೀಂ ಕೋರ್ಟ್ ನೀಡಿದ ಟೀಕೆಗೆ ಪ್ರತಿಕ್ರಿಯಿಸಿ ಪ್ರಿಯಾಂಕಾ ಗಾಂಧಿ,

“ಯಾರು ನಿಜವಾದ ಭಾರತೀಯರು ಎಂಬುದನ್ನು ನಿರ್ಧರಿಸಲು ನ್ಯಾಯಾಧೀಶರು ಯೋಗ್ಯರಲ್ಲ. ರಾಹುಲ್ ಗಾಂಧಿಗೆ ಭಾರತೀಯ ಸೇನೆಯ ಬಗ್ಗೆ ಅಪಾರ ಗೌರವವಿದೆ. ಅವರು ಎಂದಿಗೂ ಸೇನೆಯ ವಿರುದ್ಧ ಕೆಟ್ಟ ಮಾತುಗಳನ್ನು ಮಾತನಾಡಲ್ಲ,” ಎಂದು ತಿಳಿಸಿದ್ದಾರೆ.

ಗಲ್ವಾನ್ ಕಣಿವೆ ಸಂಘರ್ಷ ಕುರಿತು ಮಾತನಾಡಿದ ವೇಳೆ ರಾಹುಲ್ ಗಾಂಧಿ ನೀಡಿದ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ‘ಅನುಚಿತ’ ಎಂದು ಖಂಡಿಸಿದ್ದು, “ನಿಜವಾದ ಭಾರತೀಯರು ಈ ರೀತಿ ಮಾತನಾಡುವುದಿಲ್ಲ” ಎಂದು ಹೇಳಿದ್ದಾರೆ. ಇದನ್ನು ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದು, “ವಿರೋಧ ಪಕ್ಷದ ನಾಯಕರಾಗಿ ಸರ್ಕಾರವನ್ನು ಪ್ರಶ್ನಿಸುವುದು ರಾಹುಲ್ ಅವರ ಕರ್ತವ್ಯ. ನ್ಯಾಯಮೂರ್ತಿಗಳು ಇಂತಹ ಹೇಳಿಕೆ ನೀಡುವುದು ಸರಿಯಲ್ಲ,” ಎಂದಿದ್ದಾರೆ.

ಅದೇ ರೀತಿ, ಪ್ರಿಯಾಂಕಾ ಗಾಂಧಿ ಸರ್ಕಾರದ ನಡೆಗೆ ಶಂಕೆ ವ್ಯಕ್ತಪಡಿಸಿ,

“ರಾಹುಲ್ ಗಾಂಧಿಯ ಪ್ರಶ್ನೆಗಳಿಗೆ ಸರ್ಕಾರದ ಬಳಿ ಉತ್ತರಗಳಿಲ್ಲ. ಅವರು ಚರ್ಚೆಗೆ ತಯಾರಿಲ್ಲ. ಸಂಸತ್ತನ್ನು ಸರಿಯಾಗಿ ನಡೆಸಲಾಗುತ್ತಿಲ್ಲ. ಇದನ್ನೆಲ್ಲಾ ಮರೆಮಾಚಲು ಈ ರೀತಿಯ ತಂತ್ರಗಳನ್ನು ಬಳಸುತ್ತಿದ್ದಾರೆ,” ಎಂದು ವಾಗ್ದಾಳಿ ನಡೆಸಿದ್ದಾರೆ.

Continue Reading

Trending