Connect with us

ಬೆಂಗಳೂರು

ಬಹುಭಾಷಾ ನಟ ಆಂಧ್ರ, ತಮಿಳುನಾಡಿನಲ್ಲೇಕೆ ಹೋರಾಡುತ್ತಿಲ್ಲ: ಪ್ರಕಾಶ್ ರೈಗೆ ಕುಟುಕಿದ ಎಂಬಿ ಪಾಟೀಲ್‌

ಬೆಂಗಳೂರು: ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಹೋರಾಟದ ಹಕ್ಕಿದೆ. ನಾನೂ ಹೋರಾಟ ಮಾಡಿಕೊಂಡೇ ಬಂದಿರುವವನು. ಈ ವಿಷಯ ಬಹುಭಾಷಾ ನಟ ಪ್ರಕಾಶ್ ರೈಗೆ (Prakash Rai) ಗೊತ್ತಿರಲಿಕ್ಕಿಲ್ಲ. ಬರಪೀಡಿತ ವಿಜಯಪುರ ಜಿಲ್ಲೆಯನ್ನು ನಾನು ಹೋರಾಡಿಯೇ ನೀರಾವರಿ ಭೂಮಿಯನ್ನಾಗಿ ಮಾಡಿದ್ದೇನೆ. ಪ್ರಕಾಶ್ ರೈ ಅವರು ನಮಗಿಂತ ಆಂಧ್ರದಲ್ಲಿ ಹೆಚ್ಚು ಪ್ರಭಾವಿಗಳು ಮತ್ತು ಜನಪ್ರಿಯರು. ಆದ್ದರಿಂದ ಅವರು ಬೇರೆಬೇರೆ ರಾಜ್ಯಗಳಲ್ಲೂ ರೈತರ ಭೂಸ್ವಾಧೀನದ ವಿರುದ್ಧ ಹೋರಾಟ ಮಾಡಿದರೆ ಒಳ್ಳೆಯದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್‌ (MB Patil) ಕುಟುಕಿದ್ದಾರೆ.

ಮಂಗಳವಾರ ಇಲ್ಲಿನ‌ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, `ನಮ್ಮಲ್ಲಿ ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕಿಗಾಗಿ ಕೇವಲ 1,282 ಎಕರೆ ಮಾತ್ರ ಸ್ವಾಧೀನಪಡಿಸಿಕೊಳ್ಳಲು ತೀರ್ಮಾನಿಸಿದ್ದೇವೆ. ಪಕ್ಕದ ಆಂಧ್ರ ಪ್ರದೇಶದಲ್ಲಿ (Andhra Pradesh) ಇದೇ ಉದ್ದೇಶಕ್ಕಾಗಿ ನಮ್ಮ ಗಡಿಗೇ ಅಂಟಿಕೊಂಡಿರುವ ಮಡಕಶಿರಾದಿಂದ ಪೆನುಗೊಂಡದವರೆಗೆ 10 ಸಾವಿರ ಎಕರೆಯನ್ನು ಸ್ವಾಧೀನಪಡಿಸಿಕೊಂಡು, ಉಚಿತವಾಗಿ ಕೊಡುವುದಾಗಿ ಹೇಳಲಾಗುತ್ತಿದೆ. ಅಲ್ಲದ, ಆಂಧ್ರದಲ್ಲಿ ಬೇರೆಬೇರೆ ಕೈಗಾರಿಕಾ ಉದ್ದೇಶಗಳಿಗೆ 45 ಸಾವಿರ ಎಕರೆ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಇನ್ಫೋಸಿಸ್, ಕಾಗ್ನಿಜೆಂಟ್, ಟಿಸಿಎಸ್ ಮುಂತಾದ 100 ಕಂಪನಿಗಳಿಗೆ ವಿಶಾಖಪಟ್ಟಣದಲ್ಲಿ ಎಕರೆಗೆ ಬರೀ 99 ಪೈಸೆಯಂತೆ ಭೂಮಿ ಕೊಡಲಾಗಿದೆ ಎಂದು ಮಾಧ್ಯಮಗಳಲ್ಲಿ ಬಂದಿದೆ. ಪ್ರಕಾಶ್ ರೈಗೆ ಇವೆಲ್ಲ ಕಾಣಿಸುತ್ತಿಲ್ಲವೇ ಎಂದು ಪ್ರಶ್ನಿಸಿ ಕಿಡಿಕಾರಿದರು.

ಇತ್ತ ತಮಿಳುನಾಡಿನ (Tamil Nadu) ಹೊಸೂರು ನಮ್ಮಿಂದ ಕೇವಲ 50 ಕಿ.ಮೀ. ದೂರದಲ್ಲಿದೆ. ಅಲ್ಲಿನ ಸರ್ಕಾರ ಈಗ ಆ ಪ್ರದೇಶವನ್ನು ಕೇಂದ್ರೀಕರಿಸಿ ಕೈಗಾರಿಕಾ ಬೆಳವಣಿಗೆಯನ್ನು ವಿಸ್ತರಿಸುತ್ತಿದೆ. ಜತೆಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನೂ ನಿರ್ಮಿಸಲು ಮುಂದಾಗಿದೆ. ಇದಕ್ಕೆಲ್ಲ ಅದೂ ಸಹ ಅಗ್ಗದ ದರದಲ್ಲಿ ಭೂಮಿ ಕೊಡುತ್ತಿದೆ. ಆಂಧ್ರ ಮತ್ತು ತಮಿಳುನಾಡಿನಲ್ಲಿ ಉದ್ಯಮ ನಡೆಸುತ್ತಿರುವವರಿಗೆ ಬೆಂಗಳೂರು ಬರೀ ಆಶ್ರಯತಾಣವಾಗಿ ಕಾಣುತ್ತಿದೆ. ಆಂಧ್ರದ ಯೋಜನೆ ಗೆದ್ದರೆ, ನಮ್ಮ ರಕ್ಷಣಾ ಮತ್ತು ಏರೋಸ್ಪೇಸ್ ಕಂಪನಿಗಳು ಅಲ್ಲಿಗೆ ಹೋಗಬಹುದು. ಇದರಿಂದ ರಾಜ್ಯಕ್ಕೆ ಆಗುವ ನಷ್ಟವನ್ನು ಅಂದಾಜು ಮಾಡಲೂ ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕವು (Karnataka) ದೇಶದ ರಕ್ಷಣೆ ಮತ್ತು ವೈಮಾಂತರಿಕ್ಷ ವಹಿವಾಟಿನಲ್ಲಿ ಶೇಕಡ 65ರಷ್ಟು ಪಾಲು ಹೊಂದಿದ್ದು, ಈ ವಲಯದಲ್ಲಿನ ನಮ್ಮ ಕಾರ್ಯ ಪರಿಸರವು ಜಾಗತಿಕವಾಗಿ ತೃತೀಯ ಸ್ಥಾನದಲ್ಲಿದೆ. ನಮ್ಮಲ್ಲಿ ಈ ವಲಯದ ಎಚ್ಎಎಲ್, ಸ್ಯಾಫ್ರಾನ್, ಬೋಯಿಂಗ್, ಏರ್ ಬಸ್, ಕಾಲಿನ್ಸ್, ಲಾಕ್ ಹೀಡ್ ಮಾರ್ಟಿನ್ ಮುಂತಾದ ದೈತ್ಯ ಕಂಪನಿಗಳಿವೆ. ದೇವನಹಳ್ಳಿಯಲ್ಲಿರುವ ವಿಮಾನ ನಿಲ್ದಾಣದ ಪಕ್ಕದಲ್ಲೇ ಏರೋಸ್ಪೇಸ್ ಪಾರ್ಕ್ ಇದೆ. ಇದಕ್ಕೆ ಮತ್ತಷ್ಟು ಬಲ ತುಂಬಲೆಂದೇ ಈಗ ಅದರ ಸನಿಹದಲ್ಲೇ ಉದ್ದೇಶಿತ ಪಾರ್ಕ್ ಸ್ಥಾಪಿಸುವ ಚಿಂತನೆ ಇದೆ. ಸಂತ್ರಸ್ತ ರೈತರಿಗೆ 2013ರ ಭೂಸ್ವಾಧೀನ ಕಾಯ್ದೆಯ ಪ್ರಕಾರವೇ ನ್ಯಾಯಯುತ ಪರಿಹಾರ ಕೊಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಪ್ರಕಾಶ್ ರೈ ಬಗ್ಗೆ ವೈಯಕ್ತಿಕವಾಗಿ ಯಾವ ಸಿಟ್ಟೂ ಇಲ್ಲ. ಹಿಂದೆ ನಾನು ನೀರಾವರಿ ಸಚಿವನಾಗಿದ್ದಾಗಲೂ ಒಳ್ಳೆಯ ಕೆಲಸಗಳನ್ನೇ ಮಾಡಿದ್ದೇನೆ. ರೈತ ಮುಖಂಡ ಬಯ್ಯಾರೆಡ್ಡಿ ಅವರೇ ಇದನ್ನು ಮೆಚ್ಚಿಕೊಂಡು ಮಾತನಾಡಿದ್ದರು. ದುರದೃಷ್ಟವಶಾತ್ ಇವತ್ತು ಅವರು ನಮ್ಮೊಂದಿಗಿಲ್ಲ. ಅವರು ನಿಜವಾದ ರೈತ ನಾಯಕರಾಗಿದ್ದರು. ಈಗ ನಮ್ಮ ವಿರುದ್ಧ ಮಾತನಾಡುತ್ತಿರುವವರು ಇದನ್ನೆಲ್ಲ ಅರಿಯಬೇಕು ಎಂದು ಅವರು ಪ್ರತಿಕ್ರಿಯಿಸಿದ್ದಾರೆ

ಬೆಂಗಳೂರು

ಸು ಫ್ರಮ್ ಸೋ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಕಲೆಕ್ಷನ್ ಸೆನ್ಸೇಷನ್: ಶ್ರಾವಣದ ಹಬ್ಬಕ್ಕೂ ಮುನ್ನ ಧನಲಕ್ಷ್ಮೀ ವರ!

ಬೆಂಗಳೂರು: ಶ್ರಾವಣ ತಿಂಗಳು ಅಂದ್ರೆ ಬಂಗಾರದ ತಿಂಗಳು. ಮನೆಮಾಲೀಕರಿಗೆ ವರಮಹಾಲಕ್ಷ್ಮೀ ಹಬ್ಬ, ಕನ್ನಡ ಚಿತ್ರರಂಗಕ್ಕೆ “ಸು ಫ್ರಮ್ ಸೋ” ಚಿತ್ರದ ಯಶಸ್ಸು! ರಾಜ್ ಬಿ.ಶೆಟ್ಟಿ ಅಭಿನಯದ ಈ ಹಾರರ್-ಕಾಮಿಡಿ ಸಿನಿಮಾ ಇದೀಗ ಮೂರನೇ ವಾರದಲ್ಲೂ ಭರ್ಜರಿಯಾಗಿ ಓಡುತ್ತಿದ್ದು, ಬಾಕ್ಸ್ ಆಫೀಸ್‌ನಲ್ಲಿ ಹವಾ ಸೃಷ್ಟಿಸಿದೆ.

ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಉತ್ತಮ ಕಂಟೆಂಟ್ ಹೊಂದಿರುವ ಸಿನಿಮಾಗಳಿಗೆ ಅಭಿಮಾನಿಗಳ ಮೆಚ್ಚುಗೆ ಹೆಚ್ಚಾಗುತ್ತಿದೆ. ‘ಎಕ್ಕ’, ‘ಜೂನಿಯರ್’ ನಂತರ ‘ಸು ಫ್ರಮ್ ಸೋ’ ಕೂಡ ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
75 ಲಕ್ಷ ಬಜೆಟ್‌ನಲ್ಲಿ ತಯಾರಾದ ಈ ಸಿನಿಮಾ ಈಗಾಗಲೇ ₹25 ಕೋಟಿ ಕಲೆಕ್ಷನ್ ಮಾಡಿದ್ದು, ಶೀಘ್ರದಲ್ಲೇ ₹50 ಕೋಟಿ ಕ್ಲಬ್ ಸೇರುವ ಲಕ್ಷಣವಿದೆ.

ಮುಂಬೈ, ದೆಹಲಿ, ಚೆನ್ನೈ, ಹೈದರಾಬಾದ್, ಕೇರಳ ಹಾಗೂ ವಿದೇಶಗಳಲ್ಲೂ ರಿಲೀಸ್ ಆದ ಈ ಸಿನಿಮಾ ಎಲ್ಲೆಡೆ ಹೌಸ್‌ಫುಲ್ ಪ್ರದರ್ಶನ ಪಡೆಯುತ್ತಿದೆ. ರಾಜ್ ಬಿ.ಶೆಟ್ಟಿ ಹಾಗೂ ನಿರ್ದೇಶಕ ಜೆ.ಪಿ. ತುಮಿನಾಡ್ ಅವರ ಶ್ರದ್ಧೆ ಫಲ ನೀಡಿದ್ದು, “ಬಂದರೋ ಬಂದರು.. ಬಾವ ಬಂದರು” ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗುತ್ತಿದೆ.

ಇನ್ನು ಮಲಯಾಳಂ ಡಬ್ಬಿಂಗ್ ಆಗಿ ಆಗಸ್ಟ್ 1ರಂದು ಬಿಡುಗಡೆಗೊಂಡ ‘ಸು ಫ್ರಮ್ ಸೋ’ ಚಿತ್ರ, ಕೊಚ್ಚಿಯಲ್ಲಿ ಒಂದೇ ದಿನ 8 ಸಾವಿರ ಟಿಕೆಟ್ ಮಾರಾಟ ಮಾಡಿದ ದಾಖಲೆ ಸ್ಥಾಪಿಸಿದೆ. ಆದುದರಿಂದ, ಚಿತ್ರದ ಬಯೋಪಿಕ್ ಮತ್ತಷ್ಟು ಭಾಷೆಗಳಿಗೆ ವಿಸ್ತರಿಸುವ ಸಾಧ್ಯತೆ ಇದೆ.

Continue Reading

ಬೆಂಗಳೂರು

ವೇತನ ವಿವಾದದಲ್ಲಿ ಸಿಎಂ ಸ್ಪಷ್ಟನೆ: 14 ತಿಂಗಳ ಹಿಂಬಾಕಿಗೆ ಮಾತ್ರ ಸರ್ಕಾರ ಸಿದ್ಧ

ಬೆಂಗಳೂರು: ಸಾರಿಗೆ ನೌಕರರ 38 ತಿಂಗಳ ವೇತನ ಹಿಂಬಾಕಿ ಪಾವತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. “ಈ ಬೇಡಿಕೆ ಸಮಂಜಸವಲ್ಲ. ಸರ್ಕಾರ ಕೇವಲ 14 ತಿಂಗಳ ಹಿಂಬಾಕಿಗೆ ಸಿದ್ಧ” ಎಂದು ಅವರು ಮಂಗಳವಾರ ವಿಧಾನಸೌಧದಲ್ಲಿ ನಡೆದ ಸಂಧಾನ ಸಭೆಯಲ್ಲಿ ತಿಳಿಸಿದ್ದಾರೆ.

2020ರಿಂದ 2023ರ ಫೆಬ್ರವರಿವರೆಗಿನ ಬಾಕಿ ವೇತನ ಪಾವತಿಗೆ ನೌಕರ ಸಂಘಗಳು ಒತ್ತಾಯಿಸಿದ್ದರೊಂದಿಗೆ, 2024ರಿಂದ ನೂತನ ವೇತನವನ್ನೂ ಜಾರಿಗೆ ತರುವಂತೆ ಒತ್ತಾಯಿಸಲಾಗಿದೆ. ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, “ನಿಗಮಗಳ ಆರ್ಥಿಕ ಪರಿಸ್ಥಿತಿ ಮತ್ತು ಹಿಂದಿನ ಸರ್ಕಾರದ ಆದೇಶಗಳ ದೋಷಗಳನ್ನು ಪರಿಗಣಿಸಿ 14 ತಿಂಗಳ ವೇತನ ಹಿಂಬಾಕಿಗೆ ಸಮ್ಮತಿಯಿದೆ,” ಎಂದು ಸ್ಪಷ್ಟಪಡಿಸಿದರು.

ವೇತನ ಪರಿಷ್ಕರಣೆ ಪಶ್ಚಾತ್ಪಟ
2016ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ 12.5% ವೇತನ ಹೆಚ್ಚಳ ಜಾರಿಗೆ ಬಂದಿತ್ತು. ಆದರೆ 2020ರ ಕೋವಿಡ್ ಕಾರಣದಿಂದ ಆ ವೇಳೆಗೆ ಯಾವುದೇ ಪರಿಷ್ಕರಣೆ ಆಗಿರಲಿಲ್ಲ. ನಂತರದ ಕಾಂಗ್ರೆಸ್ ಸರ್ಕಾರದಲ್ಲಿ ಶ್ರೀನಿವಾಸ ಮೂರ್ತಿ ಸಮಿತಿ ಶಿಫಾರಸ್ಸಿನಂತೆ 2022ರ ಜೂನ್‌ 01ರಿಂದ 2023ರ ಫೆಬ್ರವರಿವರೆಗೆ ಹಿಂಬಾಕಿ ಪಾವತಿ ಮಾಡಲು ತೀರ್ಮಾನಿಸಲಾಗಿತ್ತು.

ಸರ್ಕಾರದ ಆರ್ಥಿಕ ಹೊಣೆಗಾರಿಕೆ
ಸಿದ್ದರಾಮಯ್ಯ ಅವರು ಹೇಳಿದ್ದಾರೆ: “ನಾವು ಅಧಿಕಾರಕ್ಕೆ ಬಂದಾಗ ನಿಗಮಗಳಿಗೆ ಒಟ್ಟಾರೆ ₹4000 ಕೋಟಿ ಸಾಲ ಇತ್ತು. 2018 ರಲ್ಲಿ ಈ ಮೊತ್ತ ಕೇವಲ ₹14 ಕೋಟಿ ಮಾತ್ರ ಇತ್ತು. ಯಾವುದೇ ನಿಗಮ ಲಾಭದಲ್ಲಿ ಇಲ್ಲ.” ಅಂತಹ ಪರಿಸ್ಥಿತಿಯಲ್ಲಿ ಎಲ್ಲಾ ನೌಕರರ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

ಸಂಘದ ಚುನಾವಣೆ ಮತ್ತು ಮುಂದಿನ ಕ್ರಮ
ಸಾರಿಗೆ ನೌಕರರ ಸಂಘದ ಚುನಾವಣೆ ಹಾಗೂ ಬೇಡಿಕೆಗಳ ಕುರಿತಂತೆ ಸರ್ಕಾರ ಪರಿಶೀಲನೆ ನಡೆಸಲಿದ್ದು, ಮಾತುಕತೆ ಮೂಲಕ ಎಲ್ಲ ಅಹವಾಲುಗಳನ್ನು ಬಗೆಹರಿಸಲು ಸಿದ್ಧವಾಗಿದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

Continue Reading

ಬೆಂಗಳೂರು

ಸಾರಿಗೆ ನೌಕರರ ಮುಷ್ಕರ ಆರಂಭ: ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ – “ಹಠವಿಲ್ಲದೆ ಸಹಕಾರ ನೀಡಿ”

ಬೆಂಗಳೂರು: ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ ಸಾರಿಗೆ ನೌಕರರು ಮುಷ್ಕರಕ್ಕೆ (Transport Employees Strike) ಇಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ಸಾರಿಗೆ ನೌಕರರು ಕೇಳಿರುವ ಬೇಡಿಕೆಯಲ್ಲಿ ತಪ್ಪಿಲ್ಲ. ಆದರೆ ಸರ್ಕಾರದ ಪರಿಸ್ಥಿತಿಯನ್ನೂ ಅವರು ಗಮನದಲ್ಲಿಟ್ಟುಕೊಳ್ಳಬೇಕು. ಹಠವಿಲ್ಲದೆ ಸಹಕಾರ ನೀಡಬೇಕು” ಎಂದು ಹೇಳಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಸಚಿವರು ನೌಕರರೊಂದಿಗೆ ಸಭೆ ನಡೆಸಿದ್ದಾರೆ ಎಂಬುದನ್ನು ಅವರು ನೆನಪಿಸಿದ್ದಾರೆ.

“ಸಾರ್ವಜನಿಕರ ಹಿತವೇ ಮೊದಲಾದ್ದು. ಕೆಲವು ನೌಕರರು ಈಗಾಗಲೇ ಕೆಲಸಕ್ಕೆ ಹಾಜರಾಗಿದ್ದಾರೆ. ಅವರಿಗೆ ಅಭಿನಂದನೆ” ಎಂದು ಡಿಸಿಎಂ ಹೇಳಿದ್ದಾರೆ.

ಇತ್ತ, ಹಳದಿ ಮೆಟ್ರೊ ಮಾರ್ಗದ (Yellow Metro Line) ಉದ್ಘಾಟನೆಯ ಕುರಿತು ಮಾತನಾಡಿದ ಡಿ.ಕೆ.ಶಿವಕುಮಾರ್, “ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಸ್ಟ್ 10ರಂದು ಬರುವ ಸಾಧ್ಯತೆ ಇದೆ. ನಾವು ಈಗಾಗಲೇ ತಯಾರಿ ಪರಿಶೀಲನೆ ಆರಂಭಿಸಿದ್ದೇವೆ. ಕಾರ್ಯಕ್ರಮದ ಅಧಿಕೃತ ಸಮಯ ಇನ್ನೂ ಘೋಷಣೆಯಾಗಿಲ್ಲ” ಎಂದು ತಿಳಿಸಿದ್ದಾರೆ.

ಇದೇ ದಿನ ಬಿಜೆಪಿ ವತಿಯಿಂದ ರೈಲ್ವೆ ಸಂಬಂಧಿತ ಕಾರ್ಯಕ್ರಮವೂ ನಡೆಯಲಿದೆ ಎಂದು ಅವರು ಹೇಳಿದ್ದಾರೆ.

Continue Reading

Trending