ರಾಜ್ಯ
ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ಜನವೋ ಜನ..!

ಮೈಸೂರು: ರಾಜ್ಯದಲ್ಲಿ ಸದ್ಯ ಹೃದಯಾಘಾತ ಪ್ರಕರಣಗಳು ಬೆಳಕಿಗೆ ಬರುತ್ತಿದೆ, ಮಕ್ಕಳು, ಯುವಕ-ಯುವಕಿಯರ ಈ ದಿಢೀರ್ ಸಾವು ಜನರನ್ನು ಆತಂಕಕ್ಕೀಡು ಮಾಡಿದೆ, ಈ ಹಿನ್ನೆಲೆಯಲ್ಲಿ ಭಯಗೊಂಡಿರುವ ಜನ ಇದೀಗ ಆಸ್ಪತ್ರೆಗಳಿಗೆ ಭೇಟಿ ನೀಡಿ ಚೆಕಪ್ ಮಾಡಿಸಿಕೊಳ್ಳುತ್ತಿದ್ದಾರೆ, ಅದರಂತೆ ಇಂದು ಮೈಸೂರಿನ ಆಸ್ಪತ್ರೆಯ ಮುಂದೆ ಕೂಡ ಸಾರ್ವಜನಿಕರು ಜಮಾಯಿಸಿದ್ದಾರೆ,
ಮೈಸೂರಿನ ಜಯದೇವ ಆಸ್ಪತ್ರೆ ಬಳಿ ಜನಜಂಗುಳಿ ನೆರೆದಿತ್ತು, ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಇಂದು ಆಸ್ಪತ್ರೆಗೆ ಬಂದಿದ್ದಾರೆ, ಹೃದಯ ಸಂಬಂಧಿ ಕಾಯಿಲೆಗಳ ತಪಾಸಣೆಗೆ ಹೊರ ರೋಗಿಗಳು ಬಂದಿದ್ದಾರೆ ,ಬೆಳ್ಳಂಬೆಳಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಜನ ತಪಾಸಣೆ ಮಾಡಿಸುತ್ತಿದ್ದಾರೆ,
ಇನ್ನು ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆಯೇ ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ದಿನೇ ದಿನ ರೋಗಿಗಳ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ,