Connect with us

ರಾಜ್ಯ

18 ವರ್ಷಗಳ ಹಿಂದೆ ಒಟ್ಟಿಗೆ ಅಭಿನಯಿಸಿದ ನೆನಪುಗಳ ಬಿಚ್ಚಿಟ್ಟ​ ರವಿಚಂದ್ರನ್​, ಶಿಲ್ಪಾ ಶೆಟ್ಟಿ

ಕ್ರೇಜಿಸ್ಟಾರ್ ರವಿಚಂದ್ರನ್ ಹಾಗೂ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕನ್ನಡ ಚಿತ್ರರಂಗದಲ್ಲಿ ಹಿಟ್ ಜೋಡಿ. ‘ಪ್ರಿತ್ಸೋದ್ ತಪ್ಪಾ’ ಹಾಗೂ ‘ಒಂದಾಗೋಣ ಬಾ’ ಸಿನಿಮಾಗಳ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದರು. ಇದೀಗ ರವಿಚಂದ್ರನ್ ಹಾಗೂ ಶಿಲ್ಪಾ ಶೆಟ್ಟಿ ಅವರು ಬರೋಬ್ಬರಿ 18 ವರ್ಷಗಳ ಬಳಿಕ ಮುಖಾಮುಖಿಯಾಗಿದ್ದಾರೆ. ಈ ವೇಳೆ ತಮ್ಮ ಚಿತ್ರಗಳ ಶೂಟಿಂಗ್ ಸಮಯದ ನೆನಪುಗಳನ್ನು ಮೆಲುಕು ಹಾಕಿದ್ದಾರೆ.

ಅಂದಹಾಗೆ, ರವಿಚಂದ್ರನ್ ಹಾಗು ಶಿಲ್ಪಾ ಶೆಟ್ಟಿ ಒಟ್ಟಿಗೆ ವೇದಿಕೆ ಹಂಚಿಕೊಳ್ಳುವುದಕ್ಕೆ ಕಾರಣ ಆಗಿದ್ದು ಧ್ರುವ ಸರ್ಜಾ ಅಭಿನಯದ ನಿರ್ದೇಶಕ ಪ್ರೇಮ್ ನಿರ್ದೇಶನದ ‘ಕೆಡಿ’ ಚಿತ್ರದ ಟೀಸರ್ ಲಾಂಚ್ ಕಾರ್ಯಕ್ರಮ. ಈಗಾಗಲೇ ಮುಂಬೈ, ಹೈದರಾಬಾದ್, ಚೆನ್ನೈ ಹಾಗು ಕೊಚ್ಚಿಯಲ್ಲಿ ಚಿತ್ರದ ಟೀಸರ್ ಲಾಂಚ್ ಈವೆಂಟ್ ಮುಗಿಸಿಬಂದ ಕೆಡಿ ಚಿತ್ರತಂಡ ಬೆಂಗಳೂರಿನ ಮಾಲ್​ವೊಂದರಲ್ಲಿ ಕನ್ನಡ ವರ್ಷನ್ ಟೀಸರ್ ಅನಾವರಣ ಮಾಡಿದೆ. 

ಈ ಮೂಲಕ ಒಂದೇ ವೇದಿಕೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ರವಿಚಂದ್ರನ್ ಹಾಗೂ ಶಿಲ್ಪಾ ಶೆಟ್ಟಿ ತಾವು ಅಭಿನಯಿಸಿದ ಪ್ರಿತ್ಸೋದ್ ತಪ್ಪಾ ಚಿತ್ರದ ನೆನಪುಗಳನ್ನು ಹಂಚಿಕೊಂಡರು.

ರವಿಚಂದ್ರನ್ ಅವರು ಮಾತನಾಡಿ, “ಒಂದಾಗೋಣ ಬಾ ಸಿನಿಮಾ ಶೂಟಿಂಗ್ ಟೈಮಲ್ಲಿ ಮೊದಲಿಗೆ ಬೈಕ್ ಚೇಸಿಂಗ್ ಸೀನ್ ತೆಗೆಯಬೇಕಾದರೆ, ಯಾವುದೇ ರೋಪ್​ ಬಳಸದೆ ಶೂಟಿಂಗ್ ಮಾಡಿದ್ದೆ. ಆಗ ಶಿಲ್ಪಾ ಶೆಟ್ಟಿ ನನಗೆ ಒಂದು ಪ್ರಶ್ನೆ ಕೇಳಿದ್ದರು. ನಿಮ್ಮ ಸಿನಿಮಾದಲ್ಲಿ ಸ್ಟಂಟ್ ಮಾಸ್ಟರ್ ಇಲ್ವಾ ಅಂತಾ. ಆಗ ನಾನು ನಿಮಗೆ ಶೂಟಿಂಗ್ ಮಾಡಬೇಕಾದರೆ ಏನಾದರೂ ತೊಂದರೆ ಆಯಿತಾ ಅಂತ ಕೇಳಿದೆ. ಆಗ ಶಿಲ್ಪಾ ಶೆಟ್ಟಿ ಸುಮ್ಮನಾದರು” ಎಂದು ಹೇಳಿದರು.

ಇನ್ನು ಶಿಲ್ಪಾ ಶೆಟ್ಟಿ ಮಾತನಾಡಿ, “ಪ್ರಿತ್ಸೋದ್ ತಪ್ಪಾ ಚಿತ್ರದಲ್ಲಿ, ಬೈಕ್​ ಸೀನ್​ ಶೂಟಿಂಗ್ ಮಾಡುವ ಸಮಯದಲ್ಲಿ ನನಗೆ ಸ್ವಲ್ಪ ಭಯ ಆಗಿತ್ತು. ಅದರಲ್ಲಿ ರಾಜ.. ರಾಜ.. ಎಂಬ ಹಾಡಿನಲ್ಲಿ ಕಾರುಗಳು ಎಲ್ಲಿಂದಲೂ ಬರೋ ಥರ ಶೂಟಿಂಗ್ ಮಾಡುತ್ತಿದ್ದರು. ಅರ್ಧ ಟವೆಲ್ ಸುತ್ತಿಕೊಂಡು ಮಾಡುವ ಸೀನ್ ಅಂತೂ ಹೇಗೆ ಶೂಟ್ ಮಾಡಿದ್ದು ಅಂತಾ ಕೇಳಬೇಡಿ” ಎಂದು ಕಾಮಿಡಿ ಮಾಡಿದರು.

ರವಿ ಸರ್ ಒಬ್ಬರೇ ಎಲ್ಲಾ ಕೆಲಸಗಳನ್ನು ಮಾಡುವುದನ್ನು ನೋಡಿ ನನಗೆ ಥ್ರಿಲ್ ಆಗಿತ್ತು. ಆಗ ಗೊತ್ತಾಯಿತು ಹಿ ಈಸ್ ದಿ ಕ್ರೇಜಿಮ್ಯಾನ್. ರವಿ ಸರ್ ಸಿನಿಮಾ ಶೂಟಿಂಗ್ ಮಾಡಬೇಕಾದರೆ ನನ್ನನ್ನು ಯಾವುದೇ ರೀತಿ ಹೊಗಳಲಿಲ್ಲ. ಈಗ 18 ವರ್ಷ ಆದಮೇಲೆ ಹೊಗಳುತ್ತಿದ್ದಾರೆ” ಎಂದು ಶಿಲ್ಪಾ ಶೆಟ್ಟಿ ರವಿಚಂದ್ರನ್​ ಅವರಿಗೆ ಕಿಚಾಯಿಸಿದರು.

ಕೊನೆಯಲ್ಲಿ ಪ್ರಿತ್ಸೋದ್ ತಪ್ಪಾ ಚಿತ್ರದ ಬಂಗಾರದಿಂದಾ.. ಹಾಡಿಗೆ ರವಿಚಂದ್ರನ್ ಹಾಗೂ ಶಿಲ್ಪಾ ಶೆಟ್ಟಿ ಒಟ್ಟಿಗೆ ಹೆಜ್ಜೆ ಹಾಕಿ ಗಮನ ಸೆಳೆದರು.

ನಿರ್ದೇಶಕ ಪ್ರೇಮ್ ಮಾತನಾಡಿ, ”ಸೆಪ್ಟೆಂಬರ್ ಅಥವಾ ಅಕ್ಟೋಬರ್ ತಿಂಗಳಲ್ಲಿ ಕೆಡಿ ಸಿನಿಮಾವನ್ನು ಬಿಡುಗಡೆ ಮಾಡುವುದಾಗಿ ಹೇಳಿದರು. ಚಿತ್ರದಲ್ಲಿ ಆ್ಯಕ್ಷನ್, ಸೆಂಟಿಮೆಂಟ್ ಹಾಗೂ ಲವ್ ಇದೆ. ಎಲ್ಲಾ ಪಾತ್ರಗಳು ಹೊಸ ರೀತಿ ಇವೆ” ಎಂದು ತಿಳಿಸಿದರು.

ಬೆಂಗಳೂರು

ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ ₹50,000 ಸಹಾಯಧನ: ಜಮೀರ್ ಅಹ್ಮದ್ ಘೋಷಣೆ

ಬೆಂಗಳೂರು:
ಕರ್ನಾಟಕದ ಅಲ್ಪಸಂಖ್ಯಾತ ಸಮುದಾಯದ ಸಾಮೂಹಿಕ ವಿವಾಹಗಳಿಗೆ ಇನ್ಮುಂದೆ ಸರ್ಕಾರದಿಂದ ₹50,000 ಸಹಾಯಧನ ಸಿಗಲಿದೆ ಎಂದು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಘೋಷಿಸಿರುವ ಬಜೆಟ್ ಯೋಜನೆಗೆ ಈಗ ಅನುಮೋದನೆ ಲಭಿಸಿದ್ದು, ಈ ನಿಟ್ಟಿನಲ್ಲಿ ಬಡ ಅಲ್ಪಸಂಖ್ಯಾತರಿಗೆ ಸಹಾಯ ಮಾಡಲು ಸರ್ಕಾರ ಸಜ್ಜಾಗಿದೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವು:
ಮೌಲಾನಾ ಅಬ್ದುಲ್ ಕಲಾಂ ಸ್ಕೂಲ್‌ ಸೇರಿದಂತೆ ಪ್ರತಿಭಾವಂತ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಧನ ಸಹಾಯ ನೀಡಲಾಗುತ್ತಿದೆ. ಈಗಾಗಲೇ 214 ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಲ್ಯಾಪ್‌ಟಾಪ್ ವಿತರಣೆ ನಡೆಸಲಾಗಿದೆ.

ಮದರಸಾಗಳಲ್ಲಿ ಕನ್ನಡ ಕಲಿಕೆ:
ಮದರಸಾಗಳಲ್ಲಿ ಕನ್ನಡ ಕಲಿಕೆ ಆರಂಭಿಸುವ ಯೋಜನೆಯೊಂದಿಗೆ, ಮೊದಲ ಹಂತದಲ್ಲಿ 200 ಮೌಲ್ವಿಗಳನ್ನು ಆಯ್ಕೆ ಮಾಡಲಾಗಿದೆ. ಮೂವರು ತಿಂಗಳಲ್ಲಿ ಅವರಿಗೆ ಕನ್ನಡ ಭಾಷಾ ತರಬೇತಿ ನೀಡಲಾಗುವುದು.

2,000 ಮದರಸಾಗಳಿಗೆ ಕನ್ನಡ ಪಾಠ್ಯಕ್ರಮ:
ರಾಜ್ಯದಲ್ಲಿ 2 ಸಾವಿರ ಮದರಸಾಗಳಿಗೆ ಕನ್ನಡ ಕಲಿಕೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದ್ದು, ಅಲ್ಪಸಂಖ್ಯಾತ ಆಯೋಗ ಸಂಪೂರ್ಣ ಸಹಕಾರ ನೀಡಲಿದೆ ಎಂದು ಅಧ್ಯಕ್ಷ ಯು. ನಿಸಾರ್ ಅಹಮದ್ ಹೇಳಿದ್ದಾರೆ. very soon ಈ ಪಾಠ್ಯಕ್ರಮ ಮುದ್ರಣಕ್ಕೂ ಕ್ರಮ ಜರಗಲಿದೆ.

Continue Reading

ಅಪರಾಧ

ಧರ್ಮಸ್ಥಳ ಶವ ಹೂತು ಪ್ರಕರಣ: ಮೂರು ಅಸ್ಥಿಪಂಜರ ಪತ್ತೆ, ಎಸ್‌ಐಟಿ ತನಿಖೆಗೆ ಹೊಸ ತಿರುವು!

ದಕ್ಷಿಣ ಕನ್ನಡ, ಆಗಸ್ಟ್ 5 – ಧರ್ಮಸ್ಥಳದ ಸುತ್ತಮುತ್ತಲ ಶವ ಹೂತು ಪ್ರಕರಣಕ್ಕೆ ದಿನೇ ದಿನೆ ನ್ಯೂ ಟ್ವಿಸ್ಟ್ ಸಿಗುತ್ತಿದ್ದು, ಇದೀಗ ಮೂರು ಅಸ್ಥಿಪಂಜರಗಳು ಪತ್ತೆಯಾಗಿವೆ ಎಂಬ ಸುದ್ದಿ ಚಕ್ಕರಿಗೊಳ್ಳುತ್ತಿದೆ. ಈ ಕುರಿತು ದೂರುದಾರ ಸುಜಾತಾ ಭಟ್ ಪರ ವಕೀಲ ಮಂಜುನಾಥ್ ಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಎಸ್‌ಐಟಿ ತಂಡದ ಶೋಧ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಿನ್ನೆ ನಡೆದ ಉತ್ಖನನದ ವೇಳೆ:

  • ಸ್ಟಾಟ್ ನಂಬರ್ 12ರ ಬಳಿ ಕಾರ್ಮಿಕರಿಂದ ಅಗೆಸಿದಾಗ, ಮೂರು ಅಸ್ಥಿಪಂಜರಗಳು ಹಾಗೂ ಮಹಿಳೆಯ ಸೀರೆ ಪತ್ತೆಯಾಗಿವೆ.
  • ಸುಮಾರು 140 ಮೂಳೆಗಳ ತುಂಡುಗಳು ಪತ್ತೆಯಾದ ಕುರಿತು ವರದಿ ಇದೆ.
  • ಅಸ್ಥಿಪಂಜರಗಳನ್ನು ತಕ್ಷಣವೇ ಕೆಎಂಸಿ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ.

ಇಂದಿನ ಉತ್ಖನನ:

  • ನೇತ್ರಾವತಿ ನದಿಯ ದಡದ ಬಳಿ 11ನೇ ಪಾಯಿಂಟ್‌ನಲ್ಲಿ ಅಗೆತ ಕೆಲಸ ನಡೆಯುತ್ತಿದೆ.
  • 6 ಅಡಿಯವರೆಗೆ ಶೋಧ ನಡೆದ ಬಳಿಕ ಸಾಕ್ಷ್ಯ ಸಿಕ್ಕದರೆ ಮುಂದಿನ ಪಾಯಿಂಟ್‌ಗೆ ಹೋಗುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಪೂರ್ವ ಘಟನೆ:

  • ಜುಲೈ 31ರಂದು 6ನೇ ಗುರುತುಸ್ಥಳದಲ್ಲಿ ಅಸ್ಥಿಪಂಜರ ಪತ್ತೆಯಾದ ಹಿನ್ನೆಲೆ, ಎಸ್‌ಐಟಿ ಅಧಿಕಾರಿಗಳಾದ ಐಪಿಎಸ್ ಜಿತೇಂದ್ರ ಕುಮಾರ್ ದಯಾಮ ಅವರು ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದು, ಆಧಾರದ ಮೇಲೆ UDR ಪ್ರಕರಣ ದಾಖಲಾಗಿದೆ.
Continue Reading

ಬೆಂಗಳೂರು

ಸು ಫ್ರಮ್ ಸೋ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಕಲೆಕ್ಷನ್ ಸೆನ್ಸೇಷನ್: ಶ್ರಾವಣದ ಹಬ್ಬಕ್ಕೂ ಮುನ್ನ ಧನಲಕ್ಷ್ಮೀ ವರ!

ಬೆಂಗಳೂರು: ಶ್ರಾವಣ ತಿಂಗಳು ಅಂದ್ರೆ ಬಂಗಾರದ ತಿಂಗಳು. ಮನೆಮಾಲೀಕರಿಗೆ ವರಮಹಾಲಕ್ಷ್ಮೀ ಹಬ್ಬ, ಕನ್ನಡ ಚಿತ್ರರಂಗಕ್ಕೆ “ಸು ಫ್ರಮ್ ಸೋ” ಚಿತ್ರದ ಯಶಸ್ಸು! ರಾಜ್ ಬಿ.ಶೆಟ್ಟಿ ಅಭಿನಯದ ಈ ಹಾರರ್-ಕಾಮಿಡಿ ಸಿನಿಮಾ ಇದೀಗ ಮೂರನೇ ವಾರದಲ್ಲೂ ಭರ್ಜರಿಯಾಗಿ ಓಡುತ್ತಿದ್ದು, ಬಾಕ್ಸ್ ಆಫೀಸ್‌ನಲ್ಲಿ ಹವಾ ಸೃಷ್ಟಿಸಿದೆ.

ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಉತ್ತಮ ಕಂಟೆಂಟ್ ಹೊಂದಿರುವ ಸಿನಿಮಾಗಳಿಗೆ ಅಭಿಮಾನಿಗಳ ಮೆಚ್ಚುಗೆ ಹೆಚ್ಚಾಗುತ್ತಿದೆ. ‘ಎಕ್ಕ’, ‘ಜೂನಿಯರ್’ ನಂತರ ‘ಸು ಫ್ರಮ್ ಸೋ’ ಕೂಡ ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
75 ಲಕ್ಷ ಬಜೆಟ್‌ನಲ್ಲಿ ತಯಾರಾದ ಈ ಸಿನಿಮಾ ಈಗಾಗಲೇ ₹25 ಕೋಟಿ ಕಲೆಕ್ಷನ್ ಮಾಡಿದ್ದು, ಶೀಘ್ರದಲ್ಲೇ ₹50 ಕೋಟಿ ಕ್ಲಬ್ ಸೇರುವ ಲಕ್ಷಣವಿದೆ.

ಮುಂಬೈ, ದೆಹಲಿ, ಚೆನ್ನೈ, ಹೈದರಾಬಾದ್, ಕೇರಳ ಹಾಗೂ ವಿದೇಶಗಳಲ್ಲೂ ರಿಲೀಸ್ ಆದ ಈ ಸಿನಿಮಾ ಎಲ್ಲೆಡೆ ಹೌಸ್‌ಫುಲ್ ಪ್ರದರ್ಶನ ಪಡೆಯುತ್ತಿದೆ. ರಾಜ್ ಬಿ.ಶೆಟ್ಟಿ ಹಾಗೂ ನಿರ್ದೇಶಕ ಜೆ.ಪಿ. ತುಮಿನಾಡ್ ಅವರ ಶ್ರದ್ಧೆ ಫಲ ನೀಡಿದ್ದು, “ಬಂದರೋ ಬಂದರು.. ಬಾವ ಬಂದರು” ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗುತ್ತಿದೆ.

ಇನ್ನು ಮಲಯಾಳಂ ಡಬ್ಬಿಂಗ್ ಆಗಿ ಆಗಸ್ಟ್ 1ರಂದು ಬಿಡುಗಡೆಗೊಂಡ ‘ಸು ಫ್ರಮ್ ಸೋ’ ಚಿತ್ರ, ಕೊಚ್ಚಿಯಲ್ಲಿ ಒಂದೇ ದಿನ 8 ಸಾವಿರ ಟಿಕೆಟ್ ಮಾರಾಟ ಮಾಡಿದ ದಾಖಲೆ ಸ್ಥಾಪಿಸಿದೆ. ಆದುದರಿಂದ, ಚಿತ್ರದ ಬಯೋಪಿಕ್ ಮತ್ತಷ್ಟು ಭಾಷೆಗಳಿಗೆ ವಿಸ್ತರಿಸುವ ಸಾಧ್ಯತೆ ಇದೆ.

Continue Reading

Trending