Connect with us

ದೇಶ

ಭಾರತಕ್ಕೆ ಟೆಸ್ಲಾ ಎಂಟ್ರಿ | ಮೈಲೇಜ್‌ ಎಷ್ಟು? ಬೇರೆ ದೇಶದಲ್ಲಿ ದರ ಎಷ್ಟಿದೆ? ಭಾರತದಲ್ಲಿ ದುಬಾರಿ ಯಾಕೆ?

ಮುಂಬೈ: ವಿಶ್ವದ ಎಲೆಕ್ಟ್ರಿಕ್‌ ಕಾರು (Electric Car) ದಿಗ್ಗಜ ಕಂಪನಿ ಟೆಸ್ಲಾ (Tesla) ಭಾರತಕ್ಕೆ ಅಧಿಕೃತವಾಗಿ ಎಂಟ್ರಿಯಾಗಿದೆ. ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ ಜಿಲ್ಲೆಯಲ್ಲಿ ದೇಶದ ಮೊದಲ ಶೋ ರೂಮ್‌ ಇಂದು ಉದ್ಘಾಟನೆಯಾಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ (Devendra Fadnavis) ಟೆಸ್ಲಾ ಕಾರು ಶೋ ರೂಮ್‌ ಅನ್ನು ಉದ್ಘಾಟಿಸಿದರು.

ಕಾರು ಬುಕ್ಕಿಂಗ್‌ ಮಾಡುವ ಗ್ರಾಹಕರು ಮುಂಗಡವಾಗಿ 22,220 ರೂ. ಹಣವನ್ನು ಪಾವತಿಸಬೇಕಾಗುತ್ತದೆ. ಕಾರುಗಳನ್ನು ಈ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ವಿತರಣೆ ಮಾಡಲಾಗುತ್ತದೆ.

ಆಸ್ತಿ ನೋಂದಣಿ ದಾಖಲೆಗಳ ಪ್ರಕಾರ, ಟೆಸ್ಲಾ ಫೆಬ್ರವರಿ 2025 ರಲ್ಲಿ ಭಾರತದ ಅತ್ಯಂತ ದುಬಾರಿ ವಾಣಿಜ್ಯ ಜಿಲ್ಲೆಯಾದ ಮುಂಬೈನ BKC ಯಲ್ಲಿ 4,000 ಚದರ ಅಡಿ ಶೋರೂಮ್ ಜಾಗಕ್ಕೆ ಐದು ವರ್ಷಗಳ ಅವಧಿಗೆ 23.38 ಕೋಟಿ ರೂ. ಪಾವತಿಸಿದೆ.

ಕಾರಿನ ಬೆಲೆ ಎಷ್ಟು?
ಟೆಸ್ಲಾ ಮಾಡೆಲ್‌ ವೈ (Model Y) ಎರಡು ಮಾದರಿಯ ಕಾರನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. Model Y Rear-Wheel Drive (RWD) 60 ಲಕ್ಷ ರೂ., Model Y Long Range RWD 68 ಲಕ್ಷ ರೂ. ದರವನ್ನು ನಿಗದಿ ಮಾಡಿದೆ.

ಯಾವ ಬಣ್ಣಕ್ಕೆ ಎಷ್ಟು ದರ?

ಪಿಯರ್ ವೈಟ್ ಮತ್ತು ಡೈಮಂಡ್ ಬ್ಲಾಕ್ : 95,000 ರೂ.
ನೀಲಿ: 1.25 ಲಕ್ಷ ರೂ.
ಕ್ವಿಕ್ ಸಿಲ್ವರ್ ಮತ್ತು ಅಲ್ಟ್ರಾ ರೆಡ್: 1.85 ಲಕ್ಷ ರೂ

ಮೈಲೇಜ್‌ ಎಷ್ಟು?
ಮಾಡೆಲ್‌ ವೈ ರಿಯರ್‌ ವೀಲ್‌ ಡ್ರೈವ್‌ ಕಾರನ್ನು ಒಂದು ಬಾರಿ ಫುಲ್‌ ಚಾರ್ಜ್‌ ಮಾಡಿದರೆ 500 ಕಿ.ಮೀ ಪ್ರಯಾಣಿಸಬಹುದು. 201 ಕಿಮೀ/ಗಂ ಟಾಪ್‌ ಸ್ಫೀಡ್‌ ಆಗಿದ್ದು 5.9 ಸೆಕೆಂಡಿನಲ್ಲಿ 0 ಯಿಂದ 100 ಕಿ.ಮೀ ವೇಗವನ್ನು ತಲುಪುವ ಸಾಮರ್ಥ್ಯ ಹೊಂದಿದೆ.

ಲಾಂಗ್‌ ರೇಂಜ್‌ ರಿಯರ್‌ ವೀಲ್‌ ಡ್ರೈವ್‌ ಕಾರನ್ನು ಒಂದು ಬಾರಿ ಫುಲ್‌ ಚಾರ್ಜ್‌ ಮಾಡಿದರೆ 622 ಕಿ.ಮೀ ಪ್ರಯಾಣಿಸಬಹುದು. 201 ಕಿಮೀ/ಗಂ ಟಾಪ್‌ ಸ್ಫೀಡ್‌ ಆಗಿದ್ದು 5.6 ಸೆಕೆಂಡಿನಲ್ಲಿ 0 ಯಿಂದ 100 ಕಿ.ಮೀ ವೇಗವನ್ನು ತಲುಪುವ ಸಾಮರ್ಥ್ಯ ಹೊಂದಿದೆ.

ಭಾರತದಲ್ಲಿ ಮಾರಾಟವಾಗುವ ಟೆಸ್ಲಾ ಕಾರುಗಳು ಚೀನಾದ ಶಾಂಘೈನಿಂದ ಆಗಮಿಸಿವೆ. ಎಲೆಕ್ಟ್ರಿಕ್‌ ಕಾರುಗಳಿಗೆ ಆಮದು ಸುಂಕ ವಿಧಿಸುವ ಕಾರಣದಿಂದಾಗಿ ಬೆಲೆ ದುಬಾರಿಯಾಗಿವೆ. ಅಮೆರಿಕ, ಚೀನಾ, ಜರ್ಮನಿಯಲ್ಲಿ ಟೆಸ್ಲಾ ತನ್ನ ಉತ್ಪದನಾ ಘಟಕವನ್ನು ತೆರೆದಿರುವ ಕಾರಣ ಅಲ್ಲಿ ಬೆಲೆ ಕಡಿಮೆಯಿದೆ.

ಕೇಂದ್ರ ಸರ್ಕಾರ ಟೆಸ್ಲಾಗೆ ಭಾರತದಲ್ಲಿ ಉತ್ಪದನಾ ಘಟಕ ತೆರೆಯುವಂತೆ ಸೂಚಿಸಿತ್ತು. ಆದರೆ ಟೆಸ್ಲಾ ಕಂಪನಿ ಭಾರತದಲ್ಲಿ ಉತ್ಪದನಾ ಘಟಕ ತೆರೆಯಲು ಆಸಕ್ತಿ ತೋರಿಲ್ಲ. ಚೀನಾದಿಂದ ಆಮದು ಮಾಡಿರುವ ಕಾರಣ ಭಾರತದಲ್ಲಿ ಟೆಸ್ಲಾ ಕಾರುಗಳ ಬೆಲೆ ಜಾಸ್ತಿಯಿದೆ. ಹತ್ತಿರ ಹತ್ತಿರ ಟೆಸ್ಲಾ ಕಾರುಗಳಿಗೆ 21 ಲಕ್ಷ ರೂ. ಆಮದು ಸುಂಕ ವಿಧಿಸಲಾಗುತ್ತಿದೆ.

ದೇಶ

ಪಿಎಂ ಮೋದಿ ಆಗಸ್ಟ್ 10ರಂದು ಬೆಂಗಳೂರಿಗೆ: ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ

ಬೆಂಗಳೂರು: ನಮ್ಮ ಮೆಟ್ರೋ (Namma Metro) ಹಳದಿ ಮಾರ್ಗದ (Yellow Line) ಉದ್ಘಾಟನೆಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು (PM Modi) ಆಗಸ್ಟ್ 10ರಂದು ಬೆಂಗಳೂರಿಗೆ ಬರುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಧಾನಿಯವರು ಆಗಸ್ಟ್ 10ರಂದು ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟನೆ ಮಾಡುವ ಉದ್ದೇಶದಿಂದ ಬರುತ್ತಿದ್ದಾರೆ. ಅವರ ಭೇಟಿಗೆ ಸಿದ್ಧತೆಗಳು ನಡೆಯುತ್ತಿವೆ. ಟೈಮ್ ಟು ಟೈಮ್ ಕಾರ್ಯಕ್ರಮಗಳ ಬಗ್ಗೆ ಇನ್ನೂ ವಿವರ ಬಾಕಿಯಿದೆ,” ಎಂದು ಹೇಳಿದರು.

ವೈಭವದಿಂದ ಕಾರ್ಯಕ್ರಮ?
ಆದರೆ, ಮೂಲ ಯೋಜನೆಗೆ ಬದಲಾವಣೆ ಆಗಿದೆ. ಈಗ ಪ್ರಧಾನಿಯವರು ಕೇವಲ ಹಳದಿ ಮಾರ್ಗದ ಮೆಟ್ರೋ ಮತ್ತು ವಂದೇ ಭಾರತ್ ರೈಲು ಉದ್ಘಾಟನೆಗೆ ಮಾತ್ರ ಭಾಗಿಯಾಗಲಿದ್ದಾರೆ. ಬಿಜೆಪಿ ಕಾರ್ಯಕರ್ತರ ಸಮಾವೇಶ ಮತ್ತು ರೋಡ್ ಶೋ ಕಾರ್ಯಾಚರಣೆಗಳು ರದ್ದುಪಡಿಸಲಾಗಿದೆ.

ಇದರ ಪರಿಣಾಮವಾಗಿ, ಒಂದು ವರ್ಷದಿಂದ ಮೋದಿಯವರ ಆಗಮನದ ನಿರೀಕ್ಷೆಯಲ್ಲಿದ್ದ ಬಿಜೆಪಿ ಕಾರ್ಯಕರ್ತರು ನಿರಾಸೆಗೊಳಗಾಗಿದ್ದಾರೆ ಎಂದು ವರದಿಯಾಗಿದೆ.

Continue Reading

ದೇಶ

ಭಾರತ vs ಅಮೆರಿಕ: ರಷ್ಯಾದ ತೈಲದ ಬಗ್ಗೆ ಉದ್ವಿಗ್ನತೆ, ಸೇನೆಯಿಂದ ತಿರುಗೇಟು

ಬೆಂಗಳೂರು: ರಷ್ಯಾದಿಂದ ಕಚ್ಚಾ ತೈಲ ಖರೀದಿಯ ಕುರಿತು ಭಾರತ-ಅಮೆರಿಕ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವಂತಾಗಿದೆ. ಭಾರತ ರಷ್ಯಾದಿಂದ ತೈಲ ಆಮದು ಮಾಡುತ್ತಿರುವುದಕ್ಕೆ ಅಮೆರಿಕ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, ಭಾರತೀಯ ಸೇನೆ ಅಮೆರಿಕದ ದ್ವೇಧಾಚರಣೆ ವಿರುದ್ಧ ತಿರುಗೇಟು ನೀಡಿದೆ.

ಸೋಷಿಯಲ್ ಮೀಡಿಯಾದಲ್ಲಿ “ಈ ದಿನ ಆ ವರ್ಷ – ಯುದ್ಧದ ನಿರ್ಮಾಣ – 05 ಆಗಸ್ಟ್ 1971” ಎಂಬ ಶೀರ್ಷಿಕೆಯಡಿ ಸೇನೆಯು 1971ರ ಯುದ್ಧದ ಕಾಲದ ಪತ್ರಿಕಾ ಕಟಿಂಗ್‌ ಹಂಚಿಕೊಂಡಿದೆ. 1954ರಿಂದ 1971ರವರೆಗೆ ಅಮೆರಿಕ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರ ಪೂರೈಸಿದ ಬಗ್ಗೆ ಪೇಪರ್ ಕಟಿಂಗ್‌ ಉಲ್ಲೇಖಿಸುತ್ತಾ, “ಅಮೆರಿಕ ಪಾಕ್ ಪರ ಕೆಲಸ ಮಾಡಿತ್ತಲ್ಲವೆ?” ಎಂದು ಪ್ರಶ್ನಿಸಿದೆ.

ಇದು ಉಕ್ರೇನ್ ವಿರುದ್ಧದ ಯುದ್ಧಕ್ಕೆ ಭಾರತ ಹಣ ಒದಗಿಸುತ್ತಿದೆ ಎಂಬ ಅಮೆರಿಕದ ಆರೋಪಕ್ಕೆ ಪ್ರತಿಕ್ರಿಯೆಯಾಗಿದೆ. ಭಾರತವು ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟದ ಟೀಕೆಗಳನ್ನು ‘ಅಸಮರ್ಥನೀಯ ಹಾಗೂ ಅಸಮಂಜಸ’ವೆಂದು ತಿರಸ್ಕರಿಸಿದೆ. ಭಾರತ ತನ್ನ ತೈಲ ನೀತಿಯನ್ನು ಆರ್ಥಿಕ ಶಕ್ತಿಯ ದೃಷ್ಟಿಯಿಂದ ಮುಂದುವರಿಸುತ್ತಿದೆ.

Continue Reading

ದೇಶ

ಸೇನೆ ಕುರಿತ ಹೇಳಿಕೆ: ಸುಪ್ರೀಂ ಕೋರ್ಟ್ ಟೀಕೆಗೆ ಪ್ರಿಯಾಂಕಾ ಗಾಂಧಿಯಿಂದ ಕಠಿಣ ಪ್ರತಿಕ್ರಿಯೆ

ನವದೆಹಲಿ: ಭಾರತೀಯ ಸೇನೆ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಇದೀಗ ಅವರ ಸಹೋದರಿ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ.

ರಾಹುಲ್ ಗಾಂಧಿಯ ವಿರುದ್ಧ ಸುಪ್ರೀಂ ಕೋರ್ಟ್ ನೀಡಿದ ಟೀಕೆಗೆ ಪ್ರತಿಕ್ರಿಯಿಸಿ ಪ್ರಿಯಾಂಕಾ ಗಾಂಧಿ,

“ಯಾರು ನಿಜವಾದ ಭಾರತೀಯರು ಎಂಬುದನ್ನು ನಿರ್ಧರಿಸಲು ನ್ಯಾಯಾಧೀಶರು ಯೋಗ್ಯರಲ್ಲ. ರಾಹುಲ್ ಗಾಂಧಿಗೆ ಭಾರತೀಯ ಸೇನೆಯ ಬಗ್ಗೆ ಅಪಾರ ಗೌರವವಿದೆ. ಅವರು ಎಂದಿಗೂ ಸೇನೆಯ ವಿರುದ್ಧ ಕೆಟ್ಟ ಮಾತುಗಳನ್ನು ಮಾತನಾಡಲ್ಲ,” ಎಂದು ತಿಳಿಸಿದ್ದಾರೆ.

ಗಲ್ವಾನ್ ಕಣಿವೆ ಸಂಘರ್ಷ ಕುರಿತು ಮಾತನಾಡಿದ ವೇಳೆ ರಾಹುಲ್ ಗಾಂಧಿ ನೀಡಿದ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ‘ಅನುಚಿತ’ ಎಂದು ಖಂಡಿಸಿದ್ದು, “ನಿಜವಾದ ಭಾರತೀಯರು ಈ ರೀತಿ ಮಾತನಾಡುವುದಿಲ್ಲ” ಎಂದು ಹೇಳಿದ್ದಾರೆ. ಇದನ್ನು ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದು, “ವಿರೋಧ ಪಕ್ಷದ ನಾಯಕರಾಗಿ ಸರ್ಕಾರವನ್ನು ಪ್ರಶ್ನಿಸುವುದು ರಾಹುಲ್ ಅವರ ಕರ್ತವ್ಯ. ನ್ಯಾಯಮೂರ್ತಿಗಳು ಇಂತಹ ಹೇಳಿಕೆ ನೀಡುವುದು ಸರಿಯಲ್ಲ,” ಎಂದಿದ್ದಾರೆ.

ಅದೇ ರೀತಿ, ಪ್ರಿಯಾಂಕಾ ಗಾಂಧಿ ಸರ್ಕಾರದ ನಡೆಗೆ ಶಂಕೆ ವ್ಯಕ್ತಪಡಿಸಿ,

“ರಾಹುಲ್ ಗಾಂಧಿಯ ಪ್ರಶ್ನೆಗಳಿಗೆ ಸರ್ಕಾರದ ಬಳಿ ಉತ್ತರಗಳಿಲ್ಲ. ಅವರು ಚರ್ಚೆಗೆ ತಯಾರಿಲ್ಲ. ಸಂಸತ್ತನ್ನು ಸರಿಯಾಗಿ ನಡೆಸಲಾಗುತ್ತಿಲ್ಲ. ಇದನ್ನೆಲ್ಲಾ ಮರೆಮಾಚಲು ಈ ರೀತಿಯ ತಂತ್ರಗಳನ್ನು ಬಳಸುತ್ತಿದ್ದಾರೆ,” ಎಂದು ವಾಗ್ದಾಳಿ ನಡೆಸಿದ್ದಾರೆ.

Continue Reading

Trending