Connect with us

ಬೆಂಗಳೂರು

ಗ್ರೇಟರ್ ಬೆಂಗಳೂರು ಪ್ರಾಧಿಕಾರದಡಿ 5 ಪಾಲಿಕೆ ರಚನೆ, ಶೀಘ್ರ ಚುನಾವಣೆ: ಡಿಸಿಎಂ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಧಿಕಾರದ ಅಡಿಯಲ್ಲಿ ಐದು ಪಾಲಿಕೆ ರಚನೆ ಮಾಡಿ ಶೀಘ್ರ ಚುನಾವಣೆ ನಡೆಸುತ್ತೇವೆ ಎಂದು ಡಿಸಿಎಂ ಡಿಕೆಶಿ ಅವರು ತಿಳಿಸಿದರು,
ಕೆಪಿಸಿಸಿ ಕಚೇರಿ ಭಾರತ್ ಜೋಡೋ ಭವನದಲ್ಲಿ ಮಂಗಳವಾರ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಜಿಲ್ಲೆ, ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿಕೆಶಿ ಅವರು ಮಾತನಾಡಿದರು,
ಜೆಬಿಐ ರಚನೆ ಮಾಡಲಾಗಿದೆ ಈ ಮೂಲಕ ಐದು ಪಾಲಿಕೆಗಳನ್ನು ನಾವು ಮಾಡಿಯೇ ತೀರುತ್ತೇವೆ, ಈ ಕುರಿತು ಶಾಸಕ ರಿಜ್ವಾನ್ ನೇತೃತ್ವದಲ್ಲಿ ಸಮಿತಿ ಮಾಡಲಾಗಿದೆ, ಕೆಲವರು ಸಾರ್ವಜನಿಕವಾಗಿ ವಿರೋಧ ಮಾಡಬಹುದು ಆದರೆ ಆಡಳಿತ ದೃಷ್ಟಿಯಿಂದ ಇದನ್ನು ಮಾಡಲೇಬೇಕಾಗಿದೆ, ಪಾಲಿಕೆಗಳು ರಚನೆಯಾದರೆ ನಮ್ಮ ಕಾರ್ಯಕರ್ತರಿಗೆ ಹೆಚ್ಚಿನ ಸ್ಧಾನ ಮಾನ ನೀಡಲೇಬೇಕು ಎಂದು ನಾವು ತೀರ್ಮಾನಿಸಿದ್ದೇವೆ, ಇದಕ್ಕೆ ಅಡಿಪಾಯ ತಯಾರು ಮಾಡಬೇಕಿದೆ, ಏಕೆಂದರೆ ಡಿ.ಕೆ.ಶಿವಕುಮಾರ್ ಒಬ್ಬನೇ ಸರ್ಕಾರ ತರಲು ಆಗುವುದಿಲ್ಲ, ಕಾರ್ಯಕರ್ತರೇ ಇಲ್ಲ ಜೀವಾಳ, ನಾವು ವಿಧಾನಸೌಧದಲ್ಲಿ ತೀರ್ಮಾನ ಮಾಡಬಹುದು ಆದರೆ ಸರ್ಕಾರದ ರಾಯಭಾರಿಗಳು ನೀವು, ನಮ್ಮ ಭವಿಷ್ಯ ಬೆಂಗಳೂರು ಭವಿಷ್ಯ, ನಿಮ್ಮ ಕೈ ಯಲ್ಲಿದೆ ಎಂದರು.
ನಮ್ಮ ಸರ್ಕಾರ ಸಮಾಜ ಹಾಗೂ ಬಡವರ ಕಲ್ಯಾಣಕ್ಕಾಗಿ 1 ಲಕ್ಷ ಕೋಟಿ ರೋಪಾಯಿ ಹಣ ನೀಡಿದೆ, 50 ಸಾವಿರ ಕೋಟಿ ಗ್ಯಾರಂಟಿಗಳಿಗೆ ವೆಚ್ಚವಾದರೆ, 19 ಸಾವಿರ ಕೋಟಿ ಹಣವನ್ನು ರೈತರ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್, ಸುಮಾರು 11 ಸಾವಿರ ಕೋಟಿಯನ್ನು ಪಿಂಚಣಿಗಳಿಗೆ ವೆಚ್ಚ ಮಾಡಲಾಗುತ್ತಿದೆ, ರಾಜ್ಯ ಬಜೆಟ್ಟಿನ 25% ಹಣವನ್ನು ಜನರಿಗೆ ನೀಡುತ್ತಿದ್ದೇವೆ, ಈ ಉಪಕಾರ ಸ್ಮರಣೆಯನ್ನು ಜನರಿಗೆ ಮನದಟ್ಟು ಮಾಡಬೇಕಿರುವುದು ನಿಮ್ಮ ಕರ್ತವ್ಯ ಎಂದರು,
ದೇಶದ ಇತಿಹಾಸದಲ್ಲಿಯೇ ಹೊಸ ಅಧ್ಯಾಯನವನ್ನು ನಮ್ಮ ಸರ್ಕಾರ ಪ್ರಾರಂಭ ಮಾಡಿದೆ, ಬಿಜೆಪಿಯವರು ಭಾವನೆ ಮೇಲೆ ರಾಜಕಾರಣ ಮಾಡಿದರೆ ನಾವು ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ, ರಣದೀಪ್ ಸುರ್ಜೇವಾಲಾ ಅವರಿಗೆ ನಾವು ಮೊದಲು ಧನ್ಯವಾದಗಳನ್ನು ತಿಳಿಸಬೇಕು, ಏಕೆಂದರೆ ಗ್ಯಾರಂಟಿ ಸಮಿತಿಗಳನ್ನು ರಚನೆ ಮಾಡಿ ಕಾರ್ಯಕರ್ತರು ಸರ್ಕಾರದ ಈ ಯೋಜನೆಯ ಭಾಗವಾಗಬೇಕು, ಸರ್ಕಾರ ಮುಖವಾಣಿಯಾಗಿ ಕೆಲಸ ಮಾಡಬೇಕು ಎಂದು ಅವರು ಸೂಚನೆ ನೀಡಿದ ಕಾರಣಕ್ಕೆ ನೀವು ಅತ್ಯತ್ತಮ ಸ್ಧಾನದಲ್ಲಿ ಕುಳಿತ್ತಿದ್ದೀರಿ ಎಂದು ಹೇಳಿದರು,
ನಮ್ಮ ಸರ್ಕಾರ ಐದು ಗ್ಯಾರಂಟಿ ಜೊತೆಗೆ ಭೂ ಗ್ಯಾರಂಟಿ ನೀಡಿದೆ, ಈಗ ಬೆಂಗಳೂರು ನಗರದಲ್ಲಿ ಎಲ್ಲಾ ಆಸ್ತಿ ಖಾತಾ ದಾಖಲೆಗಳನ್ನು ಮನೆ ಬಾಗಿಲಿಗೆ ತಲುಪಿಸಲು ಕಾರ್ಯಕ್ರಮ ರೂಪಿಸಲಾಗಿದೆ, ಅನೇಕ ಆಸ್ತಿ ಮಾಲೀಕರಿಗೆ ತಮ್ಮ ಆಸ್ತಿ ಯಾರ ಹೆಸರಲ್ಲಿದೆ ಎಂಬುದೇ ಗೊತ್ತಿಲ್ಲ, ಅವರ ತಾತ, ಮುತ್ತಾತನ ಹೆಸರಿನಲ್ಲಿ ಖಾತೆಗಳಿವೆ, ಇದನ್ನು ಸರಿಪಡಿಸಿ ದಾಖಲೆಗಳನ್ನು ನೀಡಲು ಮುಂದಾಗಿದೆ, ಕೃಷ್ಣಭೈರೇಗೌಡ ಅವರ ಕ್ಷೇತ್ರದಲ್ಲಿ ಈ ಕಾರ್ಯಕ್ರಮ ಮಾಡಿದ್ದು, ಅಲ್ಲಿ ಪ್ರತಿ ವಾರ್ಡ್ ನಲ್ಲಿ 20-30 ಕಾರ್ಯಕರ್ತರಂತೆ ಇಡೀ ಕ್ಷೇತ್ರದಲ್ಲಿ ಸಾವಿರಾರು ಕಾರ್ಯಕರ್ತರು ಸ್ಧಳೀಯರ ಮನೆಮನೆಗೆ ಹೋಗಿ ಅರ್ಜಿ ಕೊಟ್ಟು ಅದನ್ನು ತುಂಬಿಸಿ ಈ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಿದರು.

ಬೆಂಗಳೂರು

ಸು ಫ್ರಮ್ ಸೋ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಕಲೆಕ್ಷನ್ ಸೆನ್ಸೇಷನ್: ಶ್ರಾವಣದ ಹಬ್ಬಕ್ಕೂ ಮುನ್ನ ಧನಲಕ್ಷ್ಮೀ ವರ!

ಬೆಂಗಳೂರು: ಶ್ರಾವಣ ತಿಂಗಳು ಅಂದ್ರೆ ಬಂಗಾರದ ತಿಂಗಳು. ಮನೆಮಾಲೀಕರಿಗೆ ವರಮಹಾಲಕ್ಷ್ಮೀ ಹಬ್ಬ, ಕನ್ನಡ ಚಿತ್ರರಂಗಕ್ಕೆ “ಸು ಫ್ರಮ್ ಸೋ” ಚಿತ್ರದ ಯಶಸ್ಸು! ರಾಜ್ ಬಿ.ಶೆಟ್ಟಿ ಅಭಿನಯದ ಈ ಹಾರರ್-ಕಾಮಿಡಿ ಸಿನಿಮಾ ಇದೀಗ ಮೂರನೇ ವಾರದಲ್ಲೂ ಭರ್ಜರಿಯಾಗಿ ಓಡುತ್ತಿದ್ದು, ಬಾಕ್ಸ್ ಆಫೀಸ್‌ನಲ್ಲಿ ಹವಾ ಸೃಷ್ಟಿಸಿದೆ.

ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಉತ್ತಮ ಕಂಟೆಂಟ್ ಹೊಂದಿರುವ ಸಿನಿಮಾಗಳಿಗೆ ಅಭಿಮಾನಿಗಳ ಮೆಚ್ಚುಗೆ ಹೆಚ್ಚಾಗುತ್ತಿದೆ. ‘ಎಕ್ಕ’, ‘ಜೂನಿಯರ್’ ನಂತರ ‘ಸು ಫ್ರಮ್ ಸೋ’ ಕೂಡ ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
75 ಲಕ್ಷ ಬಜೆಟ್‌ನಲ್ಲಿ ತಯಾರಾದ ಈ ಸಿನಿಮಾ ಈಗಾಗಲೇ ₹25 ಕೋಟಿ ಕಲೆಕ್ಷನ್ ಮಾಡಿದ್ದು, ಶೀಘ್ರದಲ್ಲೇ ₹50 ಕೋಟಿ ಕ್ಲಬ್ ಸೇರುವ ಲಕ್ಷಣವಿದೆ.

ಮುಂಬೈ, ದೆಹಲಿ, ಚೆನ್ನೈ, ಹೈದರಾಬಾದ್, ಕೇರಳ ಹಾಗೂ ವಿದೇಶಗಳಲ್ಲೂ ರಿಲೀಸ್ ಆದ ಈ ಸಿನಿಮಾ ಎಲ್ಲೆಡೆ ಹೌಸ್‌ಫುಲ್ ಪ್ರದರ್ಶನ ಪಡೆಯುತ್ತಿದೆ. ರಾಜ್ ಬಿ.ಶೆಟ್ಟಿ ಹಾಗೂ ನಿರ್ದೇಶಕ ಜೆ.ಪಿ. ತುಮಿನಾಡ್ ಅವರ ಶ್ರದ್ಧೆ ಫಲ ನೀಡಿದ್ದು, “ಬಂದರೋ ಬಂದರು.. ಬಾವ ಬಂದರು” ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗುತ್ತಿದೆ.

ಇನ್ನು ಮಲಯಾಳಂ ಡಬ್ಬಿಂಗ್ ಆಗಿ ಆಗಸ್ಟ್ 1ರಂದು ಬಿಡುಗಡೆಗೊಂಡ ‘ಸು ಫ್ರಮ್ ಸೋ’ ಚಿತ್ರ, ಕೊಚ್ಚಿಯಲ್ಲಿ ಒಂದೇ ದಿನ 8 ಸಾವಿರ ಟಿಕೆಟ್ ಮಾರಾಟ ಮಾಡಿದ ದಾಖಲೆ ಸ್ಥಾಪಿಸಿದೆ. ಆದುದರಿಂದ, ಚಿತ್ರದ ಬಯೋಪಿಕ್ ಮತ್ತಷ್ಟು ಭಾಷೆಗಳಿಗೆ ವಿಸ್ತರಿಸುವ ಸಾಧ್ಯತೆ ಇದೆ.

Continue Reading

ಬೆಂಗಳೂರು

ವೇತನ ವಿವಾದದಲ್ಲಿ ಸಿಎಂ ಸ್ಪಷ್ಟನೆ: 14 ತಿಂಗಳ ಹಿಂಬಾಕಿಗೆ ಮಾತ್ರ ಸರ್ಕಾರ ಸಿದ್ಧ

ಬೆಂಗಳೂರು: ಸಾರಿಗೆ ನೌಕರರ 38 ತಿಂಗಳ ವೇತನ ಹಿಂಬಾಕಿ ಪಾವತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. “ಈ ಬೇಡಿಕೆ ಸಮಂಜಸವಲ್ಲ. ಸರ್ಕಾರ ಕೇವಲ 14 ತಿಂಗಳ ಹಿಂಬಾಕಿಗೆ ಸಿದ್ಧ” ಎಂದು ಅವರು ಮಂಗಳವಾರ ವಿಧಾನಸೌಧದಲ್ಲಿ ನಡೆದ ಸಂಧಾನ ಸಭೆಯಲ್ಲಿ ತಿಳಿಸಿದ್ದಾರೆ.

2020ರಿಂದ 2023ರ ಫೆಬ್ರವರಿವರೆಗಿನ ಬಾಕಿ ವೇತನ ಪಾವತಿಗೆ ನೌಕರ ಸಂಘಗಳು ಒತ್ತಾಯಿಸಿದ್ದರೊಂದಿಗೆ, 2024ರಿಂದ ನೂತನ ವೇತನವನ್ನೂ ಜಾರಿಗೆ ತರುವಂತೆ ಒತ್ತಾಯಿಸಲಾಗಿದೆ. ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, “ನಿಗಮಗಳ ಆರ್ಥಿಕ ಪರಿಸ್ಥಿತಿ ಮತ್ತು ಹಿಂದಿನ ಸರ್ಕಾರದ ಆದೇಶಗಳ ದೋಷಗಳನ್ನು ಪರಿಗಣಿಸಿ 14 ತಿಂಗಳ ವೇತನ ಹಿಂಬಾಕಿಗೆ ಸಮ್ಮತಿಯಿದೆ,” ಎಂದು ಸ್ಪಷ್ಟಪಡಿಸಿದರು.

ವೇತನ ಪರಿಷ್ಕರಣೆ ಪಶ್ಚಾತ್ಪಟ
2016ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ 12.5% ವೇತನ ಹೆಚ್ಚಳ ಜಾರಿಗೆ ಬಂದಿತ್ತು. ಆದರೆ 2020ರ ಕೋವಿಡ್ ಕಾರಣದಿಂದ ಆ ವೇಳೆಗೆ ಯಾವುದೇ ಪರಿಷ್ಕರಣೆ ಆಗಿರಲಿಲ್ಲ. ನಂತರದ ಕಾಂಗ್ರೆಸ್ ಸರ್ಕಾರದಲ್ಲಿ ಶ್ರೀನಿವಾಸ ಮೂರ್ತಿ ಸಮಿತಿ ಶಿಫಾರಸ್ಸಿನಂತೆ 2022ರ ಜೂನ್‌ 01ರಿಂದ 2023ರ ಫೆಬ್ರವರಿವರೆಗೆ ಹಿಂಬಾಕಿ ಪಾವತಿ ಮಾಡಲು ತೀರ್ಮಾನಿಸಲಾಗಿತ್ತು.

ಸರ್ಕಾರದ ಆರ್ಥಿಕ ಹೊಣೆಗಾರಿಕೆ
ಸಿದ್ದರಾಮಯ್ಯ ಅವರು ಹೇಳಿದ್ದಾರೆ: “ನಾವು ಅಧಿಕಾರಕ್ಕೆ ಬಂದಾಗ ನಿಗಮಗಳಿಗೆ ಒಟ್ಟಾರೆ ₹4000 ಕೋಟಿ ಸಾಲ ಇತ್ತು. 2018 ರಲ್ಲಿ ಈ ಮೊತ್ತ ಕೇವಲ ₹14 ಕೋಟಿ ಮಾತ್ರ ಇತ್ತು. ಯಾವುದೇ ನಿಗಮ ಲಾಭದಲ್ಲಿ ಇಲ್ಲ.” ಅಂತಹ ಪರಿಸ್ಥಿತಿಯಲ್ಲಿ ಎಲ್ಲಾ ನೌಕರರ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

ಸಂಘದ ಚುನಾವಣೆ ಮತ್ತು ಮುಂದಿನ ಕ್ರಮ
ಸಾರಿಗೆ ನೌಕರರ ಸಂಘದ ಚುನಾವಣೆ ಹಾಗೂ ಬೇಡಿಕೆಗಳ ಕುರಿತಂತೆ ಸರ್ಕಾರ ಪರಿಶೀಲನೆ ನಡೆಸಲಿದ್ದು, ಮಾತುಕತೆ ಮೂಲಕ ಎಲ್ಲ ಅಹವಾಲುಗಳನ್ನು ಬಗೆಹರಿಸಲು ಸಿದ್ಧವಾಗಿದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

Continue Reading

ಬೆಂಗಳೂರು

ಸಾರಿಗೆ ನೌಕರರ ಮುಷ್ಕರ ಆರಂಭ: ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ – “ಹಠವಿಲ್ಲದೆ ಸಹಕಾರ ನೀಡಿ”

ಬೆಂಗಳೂರು: ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ ಸಾರಿಗೆ ನೌಕರರು ಮುಷ್ಕರಕ್ಕೆ (Transport Employees Strike) ಇಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ಸಾರಿಗೆ ನೌಕರರು ಕೇಳಿರುವ ಬೇಡಿಕೆಯಲ್ಲಿ ತಪ್ಪಿಲ್ಲ. ಆದರೆ ಸರ್ಕಾರದ ಪರಿಸ್ಥಿತಿಯನ್ನೂ ಅವರು ಗಮನದಲ್ಲಿಟ್ಟುಕೊಳ್ಳಬೇಕು. ಹಠವಿಲ್ಲದೆ ಸಹಕಾರ ನೀಡಬೇಕು” ಎಂದು ಹೇಳಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಸಚಿವರು ನೌಕರರೊಂದಿಗೆ ಸಭೆ ನಡೆಸಿದ್ದಾರೆ ಎಂಬುದನ್ನು ಅವರು ನೆನಪಿಸಿದ್ದಾರೆ.

“ಸಾರ್ವಜನಿಕರ ಹಿತವೇ ಮೊದಲಾದ್ದು. ಕೆಲವು ನೌಕರರು ಈಗಾಗಲೇ ಕೆಲಸಕ್ಕೆ ಹಾಜರಾಗಿದ್ದಾರೆ. ಅವರಿಗೆ ಅಭಿನಂದನೆ” ಎಂದು ಡಿಸಿಎಂ ಹೇಳಿದ್ದಾರೆ.

ಇತ್ತ, ಹಳದಿ ಮೆಟ್ರೊ ಮಾರ್ಗದ (Yellow Metro Line) ಉದ್ಘಾಟನೆಯ ಕುರಿತು ಮಾತನಾಡಿದ ಡಿ.ಕೆ.ಶಿವಕುಮಾರ್, “ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಸ್ಟ್ 10ರಂದು ಬರುವ ಸಾಧ್ಯತೆ ಇದೆ. ನಾವು ಈಗಾಗಲೇ ತಯಾರಿ ಪರಿಶೀಲನೆ ಆರಂಭಿಸಿದ್ದೇವೆ. ಕಾರ್ಯಕ್ರಮದ ಅಧಿಕೃತ ಸಮಯ ಇನ್ನೂ ಘೋಷಣೆಯಾಗಿಲ್ಲ” ಎಂದು ತಿಳಿಸಿದ್ದಾರೆ.

ಇದೇ ದಿನ ಬಿಜೆಪಿ ವತಿಯಿಂದ ರೈಲ್ವೆ ಸಂಬಂಧಿತ ಕಾರ್ಯಕ್ರಮವೂ ನಡೆಯಲಿದೆ ಎಂದು ಅವರು ಹೇಳಿದ್ದಾರೆ.

Continue Reading

Trending