Connect with us

ಸಿನಿಮಾ

Jr. ಕಿರೀಟಿಯಲ್ಲಿ ಅಪ್ಪುನ ಕಂಡ ಶಿವಣ್ಣ.. ಡ್ಯಾನ್ಸ್ ಧಮಾಕ

ಜೂನಿಯರ್ ರಿಲೀಸ್‌ಗೆ ಕೌಂಟ್‌ಡೌನ್ ಶುರುವಾಗಿದೆ. ಅಪ್ಪು ಹಾಗೂ ಅಪ್ಪನ ಆಶೀರ್ವಾದದಿಂದ ಹೀರೋ ಆಗಿ ಲಾಂಚ್ ಆಗ್ತಿರೋ ಗಾಲಿ ಜನಾರ್ದನ ರೆಡ್ಡಿ ಮಗ ಕಿರೀಟಿ, ಚೊಚ್ಚಲ ಚಿತ್ರದಲ್ಲಿ ಭರವಸೆ ಮೂಡಿಸಿದ್ದಾರೆ. ಇತ್ತೀಚೆಗೆ ನಡೆದ ಪ್ರೀ-ರಿಲೀಸ್ ಇವೆಂಟ್ ಹೈಲೈಟ್ಸ್ ಏನು..? ಶಿವಣ್ಣ, ಕ್ರೇಜಿಸ್ಟಾರ್, ಜೆನಿಲಿಯಾ ಹೇಳಿದ್ದೇನು ಅನ್ನೋದ್ರ ಝಲಕ್ ಇಲ್ಲಿದೆ ನೋಡಿ.

ಇದು ಜೂನಿಯರ್ ಸಿನಿಮಾದ ಟ್ರೈಲರ್ ಝಲಕ್. ಗಾಲಿ ಜನಾರ್ದನ ರೆಡ್ಡಿ ಪುತ್ರ ಕಿರೀಟಿ ನಟನೆಯ ಚೊಚ್ಚಲ ಸಿನಿಮಾ ಇದಾಗಿದ್ದು, ಇದೇ ಜುಲೈ 18ರಂದು ಗ್ರ್ಯಾಂಡ್ ಆಗಿ ತೆರೆಗಪ್ಪಳಿಸುತ್ತಿದೆ. ರಾಧಾಕೃಷ್ಣ ರೆಡ್ಡಿ ನಿರ್ದೇಶನದಲ್ಲಿ ಮೂಡಿ ಬಂದಿರೋ ಈ ಚಿತ್ರ, ಈಗಾಗ್ಲೇ ತನ್ನ ಕಂಟೆಂಟ್‌ ಮೂಲಕ ನೋಡುಗರ ನಾಡಿಮಿಡಿತ ಹೆಚ್ಚಿಸಿದೆ. ಪರ್ಫೆಕ್ಟ್ ಯೂತ್ ಅಂಡ್ ಫ್ಯಾಮಿಲಿ ಎಂಟರ್‌ಟೈನರ್ ಆಗಿರೋ ಜೂನಿಯರ್‌‌ನಿಂದ ಸ್ಯಾಂಡಲ್‌ವುಡ್‌ಗೆ ಒಬ್ಬ ಭರವಸೆಯ ನಾಯಕನಟ ಸಿಕ್ಕಿದಂತಾಗಿದೆ.

ಇತ್ತೀಚೆಗೆ ಜೂನಿಯರ್‌ ಪ್ರೀ-ರಿಲೀಸ್‌ ಇವೆಂಟ್‌ ಹಮ್ಮಿಕೊಂಡಿತ್ತು ಚಿತ್ರತಂಡ. ಕಾರ್ಯಕ್ರಮಕ್ಕೆ ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ ಕುಮಾರ್‌ ವಿಶೇಷ ಅತಿಥಿಯಾಗಿ ಆಗಮಿಸಿ, ಕಿರೀಟಿ ಚಿತ್ರಕ್ಕೆ ಸಪೋರ್ಟ್‌ ಮಾಡಿದ್ರು. ಜನಾರ್ದನ ರೆಡ್ಡಿ, ನಟಿ ಜೆನಿಲಿಯಾ ಡಿಸೋಜಾ, ರವಿಚಂದ್ರನ್, ಶ್ರೀಲೀಲಾ ಇನ್ನೂ ಹಲವಾರು ಮಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಅಪ್ಪುನ ಕಿರೀಟಿಯಲ್ಲಿ ಕಾಣ್ತಿರೋದಾಗಿ ಹೇಳಿದ ಶಿವಣ್ಣ, ಶ್ರೀಲೀಲಾ ಜೊತೆ ಕ್ಯೂಟ್ ಆಗಿ ಸ್ಟೆಪ್ ಕೂಡ ಹಾಕಿದ್ರು.

ನಟ ರವಿಚಂದ್ರನ್ ಹಾಗೂ ನನ್ನದು ಎರಡು ದೇಹ ಒಂದೇ ಆತ್ಮ ಅಂತ ಶಿವಣ್ಣ ತಮ್ಮ ಗೆಳೆತನದ ಬಗ್ಗೆ ಕೂಡ ಮಾತನಾಡಿದ್ರು.

ರವಿಚಂದ್ರನ್‌ ಮಾತನಾಡಿ, ಶಿವ ಇರುವಾಗ ನನಗೆ ಏಕೆ ಭಯ. ಇವತ್ತು ಎಮೋಷನಲ್‌ ಅನಿಸುತ್ತದೆ. ಈ ಸಿನಿಮಾ ಅಪ್ಪನ ಕನಸು. ಇದು ತೆರೆ ಹಿಂದಿನ ಕಥೆ. ಆನ್‌ ಸ್ಕ್ರೀನ್‌ ನನ್ನ ಜೂನಿಯರ್.‌ ನನ್ನ ಕನಸು. ಈ ಸಿನಿಮಾ ಮೂರು ವರ್ಷದ ಜರ್ನಿ. ಅಷ್ಟು ಸಿಂಪಲ್‌ ಆಗಿ ನಡೆದ ಸಿನಿಮಾ ಇದಲ್ಲ. ಪ್ರತಿ ಕುಟುಂಬದಲ್ಲಿ ನಡೆದ ಎಮೋಷನ್, ನೋವು ಇದರಲ್ಲಿದೆ. ಈ ಸಿನಿಮಾವನ್ನು ಮೊನ್ನೆ ಪತ್ನಿ ಜೊತೆ ನೋಡಿದೆ. ಈ ಚಿತ್ರ ನೋಡಿದಾಗ ಮಾಣಿಕ್ಯ ನೆನಪಾಯ್ತು. ನಾನು ಈ ಚಿತ್ರದಲ್ಲಿ ತಂದೆ ರೋಲ್‌ ಪ್ಲೇ ಮಾಡಿದ್ದೇನೆ ಎಂದರು.

ತಂದೆ ಮಗನ ಎಮೋಷನ್‌ ಈ ಚಿತ್ರದ ಮೂಲಕ ತಲುಪುತ್ತದೆ. ಈ ಚಿತ್ರ ಕಣ್ಣೀರು ಹಾಕಿಸುತ್ತದೆ. ಕಿರೀಟಿ ನೂರರಷ್ಟು ಎಫರ್ಟ್‌ ಹಾಕಿದ್ದಾನೆ. ಎಂದಿಗೂ ಜನಾರ್ಧನ ರೆಡ್ಡಿ ಮಗ ತರ ವರ್ತನೆ ಮಾಡಿಲ್ಲ. ಅವನು ತನ್ನ ಪಾತ್ರದಲ್ಲಿ ಜೀವಿಸಿದ್ದಾನೆ ಅಂದ್ರು ಕ್ರೇಜಿಸ್ಟಾರ್.

ಜೋಗಿ’ ಸಿನಿಮಾದ ಹೊಡಿ ಮಗ ಸಾಂಗ್ ನಾನು ಡಾನ್ಸ್ ಮಾಡಿದ ಮೊದಲ ಸಾಂಗ್ ಅಂದ್ರು ಕಿರೀಟಿ. ನನಗೆ ಅಪ್ಪು ಅವರ ‘ಜಾಕಿ’ ಸಿನಿಮಾ ನಟನಾಗಲು ಸ್ಫೂರ್ತಿ ಕೊಟ್ಟಿತು. 13 ವರ್ಷ ಆದ್ಮೇಲೆ ಕನ್ನಡಕ್ಕೆ ಜೆನಿಲಿಯಾ ಕಮ್ ಬ್ಯಾಕ್ ಮಾಡಿದ್ದಾರೆ. ನಮ್ಮ ತಂದೆ ನನಗೋಸ್ಕರ ತುಂಬಾ ತ್ಯಾಗ ಮಾಡಿದ್ದಾರೆ. ನನಲ್ಲಿ ಛಲ ತುಂಬಿದ್ದೆ ನನ್ನ ತಂದೆ, ಅದ್ಭುತವಾದ ತಂದೆಗೆ ಮಗನಾಗಿ ಹುಟ್ಟಿದ್ದು ನನ್ನ ಪುಣ್ಯ, ಅಣ್ಣನ ಸಮಾನ ಯುವ ಅವರ ಎಕ್ಕ ಸಿನಿಮಾ ದಿನವೇ ನಮ್ಮ ಸಿನಿಮಾ ರಿಲೀಸ್ ಆಗ್ತಿದೆ. ಅವರ ಸಿನಿಮಾಗೂ ಕನ್ನಡಿಗರ ಆಶೀರ್ವಾದ ಇರಲಿ. ತಾಯಿ ಸಮಾನ ಅಶ್ವಿನಿ ಮೇಡಂ ಆಶೀರ್ವಾದ ನನ್ನ ಮೇಲಿದೆ ಅಂತಾರೆ ಕಿರೀಟಿ.

ಜೂನಿಯರ್‌ ಸಿನಿಮಾದಲ್ಲಿ ಕಿರೀಟಿ ಜೊತೆಗೆ ಕ್ರೇಜಿಸ್ಟಾರ್ ರವಿಚಂದ್ರನ್, ಜೆನಿಲಿಯಾ ಡಿಸೋಜಾ, ಶ್ರೀಲೀಲಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪುನೀತ್ ರಾಜ್‌ಕುಮಾರ್ ನಿರ್ಮಿಸಿದ್ದ ‘ಮಾಯಾಬಜಾರ್’ ಸಿನಿಮಾದ ನಿರ್ದೇಶಕ ರಾಧಾಕೃಷ್ಣ ರೆಡ್ಡಿ ಈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ಬಾಹುಬಲಿ, ಆರ್‌ಆರ್‌ಆರ್ ಅಂತಹ ಸಿನಿಮಾಗೆ ಕ್ಯಾಮರಾ ವರ್ಕ್ ಮಾಡಿರುವ ಕೆ.ಕೆ ಸೆಂಥಿಲ್ ಕುಮಾರ್ ಈ ಚಿತ್ರಕ್ಕೆ ಕೆಲಸ ಮಾಡಿದ್ದಾರೆ.

ಸಿನಿಮಾ

ಮಲಯಾಳಂ ನಟ ಶನ್ವಾಜ್ ನಿಧನ: ಸುಮಲತಾ ಅವರಿಂದ ಭಾವುಕ ಶ್ರದ್ಧಾಂಜಲಿ

ತಿರುವನಂತಪುರಂ: ಮಲಯಾಳಂ ಚಿತ್ರರಂಗದ ದಂತಕಥೆ ಪ್ರೇಮ್ ನಜೀರ್ ಅವರ ಪುತ್ರ, ಹಿರಿಯ ನಟ ಅಬ್ದುಲ್ ಶನ್ವಾಜ್ (71) ಅವರು ನಿಧನರಾಗಿದ್ದಾರೆ. ಹಲವು ದಿನಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಇಂದು ನಿಶ್ಶಬ್ದವಾಗಿ ಬದುಕು ಬಿಟ್ಟು ಬಾರದ ಲೋಕಕ್ಕೆ ಪಯಣಿಸಿದ್ದಾರೆ.

ಶನ್ವಾಜ್ ಅವರ ನಿಧನಕ್ಕೆ ಹಲವು ಹಳೆಯ ಸಹನಟರು, ಅಭಿಮಾನಿಗಳು ಸಂತಾಪ ವ್ಯಕ್ತಪಡಿಸುತ್ತಿದ್ದು, ಹಿರಿಯ ನಟಿ ಹಾಗೂ ಸಂಸದೆಯಾಗಿರುವ ಸುಮಲತಾ ಅಂಬರೀಶ್ ಭಾವುಕವಾಗಿ ಪ್ರತಿಕ್ರಿಯಿಸಿದ್ದಾರೆ.

“ಅಬ್ದುಲ್ ಶನ್ವಾಜ್ ನಿಧನ ಸುದ್ದಿ ನನಗೆ ತುಂಬಾ ದುಃಖ ತಂದಿದೆ. ನಾವು 80ರ ದಶಕದಲ್ಲಿ ಅನೇಕ ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದೇವೆ. ಅವರ ತಂದೆ ಪ್ರೇಮ್ ನಜೀರ್ ಜೊತೆಗೂ ನಟನೆಗೆ ಅವಕಾಶ ಲಭ್ಯವಾಗಿತ್ತು. ಶೂಟಿಂಗ್ ಬಿಡುವಿನ ಸಮಯದಲ್ಲಿ ಶನ್ವಾಜ್ ಜತೆ ಬ್ಯಾಡ್ಮಿಂಟನ್ ಅಥವಾ ಕ್ಯಾರಮ್ ಆಡುತ್ತಿದ್ದೆವು. ಅವರು ಬಹಳ ಶ್ರದ್ಧಾ ಹಾಗೂ ಶಿಸ್ತಿನಿಂದ ಜೀವನ ನಡೆಸುತ್ತಿದ್ದವರು. ಪರಿಪೂರ್ಣ ವ್ಯಕ್ತಿತ್ವದ ಮಾದರಿ,” ಎಂದು ಸುಮಲತಾ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಚಿತ್ರರಂಗ ಹಾಗೂ ಅಭಿಮಾನಿಗಳ ಹೃದಯದಲ್ಲಿ ಶನ್ವಾಜ್ ಅವರು ಅಮರರಾಗಿದ್ದು, ಅವರ ಕೊಡುಗೆ ಸದಾ ನೆನಪಾಗಿರಲಿದೆ.

Continue Reading

ಸಿನಿಮಾ

ಆಗಸ್ಟ್ 14ರಂದು ಬಾಕ್ಸ್ ಆಫೀಸ್‌ನಲ್ಲಿ ಧಮಾಕಾ! ಹೃತಿಕ್-ತಾರಕ್‌ರ ವಾರ್ 2 ವಿರುದ್ಧ ರಜನೀಕಾಂತ್‌ರ ಕೂಲಿ ಕ್ಲ್ಯಾಶ್

ಬೆಂಗಳೂರು:
ಬಾಕ್ಸ್ ಆಫೀಸ್‌ನಲ್ಲಿ ಆಗಸ್ಟ್ 14ಕ್ಕೆ ಅಸಲಿ ಯುದ್ಧವಿದೆ! ಏಕೆಂದರೆ, ಜೂನಿಯರ್ ಎನ್‌ಟಿಆರ್ ಮತ್ತು ಹೃತಿಕ್ ರೋಷನ್ ಅಭಿನಯದ ವಾರ್ 2 ಹಾಗೂ ತಲೈವಾ ರಜನೀಕಾಂತ್ ನಟನೆಯ ಮಲ್ಟಿಸ್ಟಾರರ್ ಕೂಲಿ ಒಂದು ದಿನವೇ ರಿಲೀಸ್ ಆಗಲಿದ್ದು, ಪ್ರೇಕ್ಷಕರ ಗಮನ ಸೆಳೆಯಲು ಎರಡೂ ಚಿತ್ರಗಳು ಸಜ್ಜಾಗಿವೆ.

ಒಂದೆಡೆಯಿಂದ ಯಶ್ ರಾಜ್ ಫಿಲಂಸ್‌ನ ಸ್ಪೈ ಯೂನಿವರ್ಸ್‌ನ ಎಕ್ಸ್‌ಟ್ರಾ ಆ್ಯಕ್ಷನ್‌ನೊಂದಿಗೆ ವಾರ್-2, ಇನ್ನೊಂದೆಡೆಯಿಂದ ರಜನಿಕಾಂತ್, ಆಮೀರ್ ಖಾನ್, ಉಪೇಂದ್ರ ಮತ್ತು ನಾಗಾರ್ಜುನ ಅವರ ಅಭಿನಯದ ಹೈಬಜ್‌ ಸಿನಿಮಾ ಕೂಲಿ — ಇವೆರಡೂ ಚಿತ್ರಗಳು ಧೂಮ್ರಪಾನದಂತೆ ಬಾಕ್ಸ್ ಆಫೀಸ್‌ನಲ್ಲಿ ಹೊತ್ತಿಕೊಳ್ಳಲಿವೆ.

ವಾರ್ 2 ವಿಶೇಷತೆ:

  • ಹೃತಿಕ್ ರೋಷನ್ – ಜೂ. ಎನ್‌ಟಿಆರ್ ಕಾಂಬಿನೇಷನ್
  • 6500+ ಸ್ಕ್ರೀನ್ಸ್‌ನಲ್ಲಿ ರಿಲೀಸ್
  • ₹90 ಕೋಟಿ ರೇಟಿಗೆ ಡಿಸ್ಟ್ರಿಬ್ಯೂಷನ್ ರೈಟ್ಸ್ ಮಾರಾಟ
  • ಪೇಟ್ರಿಯಾಟಿಕ್ ಆಕ್ಷನ್, ಕಿಯಾರಾ-ಹೃತಿಕ್ ಹಾಟ್ ಸಾಂಗ್

ಕೂಲಿ ಹೈಲೈಟ್ಸ್:

  • ರಜನೀಕಾಂತ್ ಜೊತೆ ಮಲ್ಟಿಸ್ಟಾರರ್ ಕಲಾವಿದರು
  • 700+ ಸ್ಕ್ರೀನ್ಸ್‌ನಲ್ಲಿ ವರ್ಲ್ಡ್‌ವೈಡ್ ರಿಲೀಸ್
  • ಸನ್ ಪಿಕ್ಚರ್ಸ್ ದಿಗ್ಗಜ ಬ್ಯಾನರ್
  • ಟ್ರೈಲರ್‌ನಲ್ಲಿ ಕೆಲವು ಮಿಶ್ರ ಪ್ರತಿಕ್ರಿಯೆಗಳು

ಯುದ್ಧದ ಫಲಿತಾಂಶ?
ಇದು ಕೇವಲ ಹೃತಿಕ್ ಮತ್ತು ತಾರಕ್ ನಡುವಿನ ವಾರ್ ಅಲ್ಲ, ಇದು ಬಾಕ್ಸ್ ಆಫೀಸ್‌ನಲ್ಲಿ ಇಡೀ ಇಂಡಿಯನ್ ಸಿನಿಮಾ ಇಂಡಸ್ಟ್ರಿ ಕಾದು ನೋಡುತ್ತಿರುವ “ಬಿಗ್ ಕ್ಲ್ಯಾಶ್”. ತಲೈವಾ ರಜನೀಕಾಂತ್‌ರ ವರ್ಚಸ್ಸು ಹಾಗೂ ವಾರ್-2ನ ಹೈಪ್ನ ನಡುವಿನ ಸ್ಪರ್ಧೆ ಪ್ರೇಕ್ಷಕರನ್ನು ಥಿಯೇಟರ್‌ಗೆ ಸೆಳೆಯುವಲ್ಲಿ ನಿರ್ಧಾರಕವಾಗಲಿದೆ.

Continue Reading

ಬೆಂಗಳೂರು

ಸು ಫ್ರಮ್ ಸೋ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಕಲೆಕ್ಷನ್ ಸೆನ್ಸೇಷನ್: ಶ್ರಾವಣದ ಹಬ್ಬಕ್ಕೂ ಮುನ್ನ ಧನಲಕ್ಷ್ಮೀ ವರ!

ಬೆಂಗಳೂರು: ಶ್ರಾವಣ ತಿಂಗಳು ಅಂದ್ರೆ ಬಂಗಾರದ ತಿಂಗಳು. ಮನೆಮಾಲೀಕರಿಗೆ ವರಮಹಾಲಕ್ಷ್ಮೀ ಹಬ್ಬ, ಕನ್ನಡ ಚಿತ್ರರಂಗಕ್ಕೆ “ಸು ಫ್ರಮ್ ಸೋ” ಚಿತ್ರದ ಯಶಸ್ಸು! ರಾಜ್ ಬಿ.ಶೆಟ್ಟಿ ಅಭಿನಯದ ಈ ಹಾರರ್-ಕಾಮಿಡಿ ಸಿನಿಮಾ ಇದೀಗ ಮೂರನೇ ವಾರದಲ್ಲೂ ಭರ್ಜರಿಯಾಗಿ ಓಡುತ್ತಿದ್ದು, ಬಾಕ್ಸ್ ಆಫೀಸ್‌ನಲ್ಲಿ ಹವಾ ಸೃಷ್ಟಿಸಿದೆ.

ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಉತ್ತಮ ಕಂಟೆಂಟ್ ಹೊಂದಿರುವ ಸಿನಿಮಾಗಳಿಗೆ ಅಭಿಮಾನಿಗಳ ಮೆಚ್ಚುಗೆ ಹೆಚ್ಚಾಗುತ್ತಿದೆ. ‘ಎಕ್ಕ’, ‘ಜೂನಿಯರ್’ ನಂತರ ‘ಸು ಫ್ರಮ್ ಸೋ’ ಕೂಡ ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
75 ಲಕ್ಷ ಬಜೆಟ್‌ನಲ್ಲಿ ತಯಾರಾದ ಈ ಸಿನಿಮಾ ಈಗಾಗಲೇ ₹25 ಕೋಟಿ ಕಲೆಕ್ಷನ್ ಮಾಡಿದ್ದು, ಶೀಘ್ರದಲ್ಲೇ ₹50 ಕೋಟಿ ಕ್ಲಬ್ ಸೇರುವ ಲಕ್ಷಣವಿದೆ.

ಮುಂಬೈ, ದೆಹಲಿ, ಚೆನ್ನೈ, ಹೈದರಾಬಾದ್, ಕೇರಳ ಹಾಗೂ ವಿದೇಶಗಳಲ್ಲೂ ರಿಲೀಸ್ ಆದ ಈ ಸಿನಿಮಾ ಎಲ್ಲೆಡೆ ಹೌಸ್‌ಫುಲ್ ಪ್ರದರ್ಶನ ಪಡೆಯುತ್ತಿದೆ. ರಾಜ್ ಬಿ.ಶೆಟ್ಟಿ ಹಾಗೂ ನಿರ್ದೇಶಕ ಜೆ.ಪಿ. ತುಮಿನಾಡ್ ಅವರ ಶ್ರದ್ಧೆ ಫಲ ನೀಡಿದ್ದು, “ಬಂದರೋ ಬಂದರು.. ಬಾವ ಬಂದರು” ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗುತ್ತಿದೆ.

ಇನ್ನು ಮಲಯಾಳಂ ಡಬ್ಬಿಂಗ್ ಆಗಿ ಆಗಸ್ಟ್ 1ರಂದು ಬಿಡುಗಡೆಗೊಂಡ ‘ಸು ಫ್ರಮ್ ಸೋ’ ಚಿತ್ರ, ಕೊಚ್ಚಿಯಲ್ಲಿ ಒಂದೇ ದಿನ 8 ಸಾವಿರ ಟಿಕೆಟ್ ಮಾರಾಟ ಮಾಡಿದ ದಾಖಲೆ ಸ್ಥಾಪಿಸಿದೆ. ಆದುದರಿಂದ, ಚಿತ್ರದ ಬಯೋಪಿಕ್ ಮತ್ತಷ್ಟು ಭಾಷೆಗಳಿಗೆ ವಿಸ್ತರಿಸುವ ಸಾಧ್ಯತೆ ಇದೆ.

Continue Reading

Trending