Connect with us

ರಾಜಕೀಯ

ತುಂಗಭದ್ರಾ ಮಂಡಳಿಯಲ್ಲಿ ಕರ್ನಾಟಕದವರಿಗೆ ಇನ್ನೂ ನ್ಯಾಯ ಸಿಗಿಲ್ಲ! ಆಡಳಿತದಲ್ಲಿ ತೆಲುಗು ಪ್ರಾಬಲ್ಯ, ಜನರಲ್ಲಿ ಅಸಮಾಧಾನ

ಕೊಪ್ಪಳ, ಆಗಸ್ಟ್ 17:
ತುಂಗಭದ್ರಾ ಜಲಾಶಯ ನಿರ್ವಹಣೆಗಾಗಿ ಸ್ಥಾಪಿತ ತುಂಗಭದ್ರಾ ಮಂಡಳಿನಲ್ಲಿ ಈಗಾಗಲೇ ಹಲವು ದಶಕಗಳಿಂದ ಕರ್ನಾಟಕದವರಿಗೆ ಪ್ರಮುಖ ಹುದ್ದೆಗಳು ಲಭಿಸಿಲ್ಲ ಎಂಬ ಅಸಮಾಧಾನ ಆಳತಗೊಂಡಿದೆ. ಬೋರ್ಡ್‌ನ ಕಾರ್ಯದರ್ಶಿ ಹುದ್ದೆಗೆ ಯಾವುದೇ ಕನ್ನಡಿಗರು ಆಯ್ಕೆಯಾಗದಿರುವುದು, ಹಾಗೂ ನಿರಂತರವಾಗಿ ಆಂಧ್ರ ಮತ್ತು ತೆಲಂಗಾಣದ ಅಧಿಕಾರಿಗಳೇ ನೇಮಕವಾಗುತ್ತಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.


ಆಂಧ್ರ-ತೆಲಂಗಾಣದ ಅಧಿಕಾರಿ ಪ್ರಭುತ್ವ:

  • ಮಂಡಳಿ ಅಧ್ಯಕ್ಷ ಸ್ಥಾನ ಮತ್ತು ಕಾರ್ಯದರ್ಶಿ ಹುದ್ದೆ ಅತ್ಯುನ್ನತ ಅಧಿಕಾರದ ಹುದ್ದೆಗಳಾಗಿ ಪರಿಗಣಿಸಲಾಗುತ್ತಿದ್ದು, ಇವುಗಳಲ್ಲಿ ಕನ್ನಡಿಗರ ಹಾಜರಾತಿ ಶೂನ್ಯ.
  • ಮಂಡಳಿಯ ಅಧ್ಯಕ್ಷ ಸ್ಥಾನ ಮೂರು ರಾಜ್ಯಗಳ ಹೊರಗಿನವರಿಗೇ ಮೀಸಲಾಗಿದ್ದರೂ, ಹಲವು ಬಾರಿ ಈ ನಿಯಮವೂ ಮೀರಿ ಆಂಧ್ರದವರಿಗೆ ಅಧಿಕಾರ ಸಿಕ್ಕಿರುವ ಉದಾಹರಣೆಗಳಿವೆ.
  • ಕಳೆದ 2-3 ದಶಕಗಳಲ್ಲಿ ಹೊರತುಪಡಿಸಿದರೆ, ಪ್ರತಿ ಬಾರಿ ಕಾರ್ಯದರ್ಶಿಯಾಗಿ ಆಂಧ್ರಪ್ರದೇಶ ಅಥವಾ ತೆಲಂಗಾಣದವರು ನೇಮಕಗೊಂಡಿದ್ದಾರೆ.

ಕರ್ನಾಟಕದ ಇಂಜಿನಿಯರ್ಸ್ ತೋರದ ಆಸಕ್ತಿ:

  • ಕೇಂದ್ರ ಜಲ ಆಯೋಗ ಕಾರ್ಯದರ್ಶಿಯ ನೇಮಕಕ್ಕೆ ಅರ್ಜಿ ಆಹ್ವಾನಿಸುತ್ತಿರುವುದರಿಂದ, ಆಸಕ್ತ ಅಭ್ಯರ್ಥಿಗಳಿಂದಲೇ ಆಯ್ಕೆ ಮಾಡಲಾಗುತ್ತಿದೆ.
  • ಆದರೆ ಕರ್ನಾಟಕದ ಇಂಜಿನಿಯರ್ಸ್ “ನಮ್ಮಿಂದ ಏನು ಆಗಲ್ಲ” ಎಂಬ ಮನಸ್ಥಿತಿಯಿಂದ ಮುಕ್ತ ಮನಸ್ಸಿನಿಂದ ಸ್ಪರ್ಧಿಸುತ್ತಿಲ್ಲ ಎಂದು ಅಭಿಪ್ರಾಯ ವ್ಯಕ್ತವಾಗಿದೆ.
  • ಸುಪರಿಟೆಂಡೆಂಟ್ ಎಂಜಿನಿಯರ್ ಹುದ್ದೆಯೂ ಆಂಧ್ರದವರೇ ಕಾಯಂ ಅಧಿಕಾರದಲ್ಲಿ ಇದ್ದ ಕಾರಣ, ಈ ನಿರಾಸೆ ಮೂಡಿದಂತಾಗಿದೆ.

ಅಗತ್ಯ ಮುನ್ನೆಚ್ಚರಿಕೆ ಇಲ್ಲದೆ ಜಲ ಬಿಡುಗಡೆ: ಆತಂಕದಲ್ಲಿ ಜನತೆ

  • ತುಂಗಭದ್ರಾ ಜಲಾಶಯದಿಂದ ಮುನ್ಸೂಚನೆಯಿಲ್ಲದೆ 14 ಕ್ರಸ್ಟ್‌ಗೇಟ್‌ಗಳ ಮೂಲಕ ಜಲ ಬಿಡುಗಡೆ ಮಾಡಲಾಗಿದೆ.
  • ಶುಕ್ರವಾರ 3 ಗೇಟ್‌ಗಳು, ಶನಿವಾರ ಮತ್ತಷ್ಟು 14 ಗೇಟ್‌ಗಳ ಮೂಲಕ ಅಪಾರ ಪ್ರಮಾಣದ ನೀರು ನದಿಗೆ ಹರಿಸಲಾಗಿದೆ.
  • ಡ್ಯಾಂನ 19ನೇ ಗೇಟ್ ಹಾನಿಯಾದ ಹಿನ್ನೆಲೆ, ಎಲ್ಲಾ ಗೇಟ್‌ಗಳ ಬದಲಾವಣೆಯ ಅಗತ್ಯವಿದೆ ಎಂಬ ವರದಿಯೊಂದಿಗೆ ಜನರಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ.

ರಾಜ್ಯಕ್ಕೆ ನ್ಯಾಯ ದೊರಕಿಸುವಲ್ಲಿ ನಿರ್ಲಕ್ಷತೆ?

  • 1953ರಲ್ಲಿ ಸ್ಥಾಪನೆಯಾದ ಮಂಡಳಿಯಲ್ಲಿ ಇಷ್ಟು ವರ್ಷಗಳ ಬಳಿಕವೂ ಕರ್ನಾಟಕದವರಿಗೆ ಸಮರ್ಪಕ ಪ್ರತಿನಿಧನೆ ಇಲ್ಲದಿರುವುದು ಜನತೆ ಹಾಗೂ ರಾಜ್ಯದ ನೇತಾರರ ಆತಂಕಕ್ಕೆ ಕಾರಣವಾಗಿದೆ.
  • ಮುಂದಿನ ನೇಮಕಾತಿಗಳಲ್ಲಿ ಕರ್ನಾಟಕದವರನ್ನು ಪ್ರಾಮುಖ್ಯತೆಯಿಂದ ಪರಿಗಣಿಸಬೇಕು ಎಂಬ ಜನಾಶಯ ಹೆಚ್ಚುತ್ತಿದೆ.

ದೇಶ

ಸಿಎಂ ಕುರ್ಚಿ ಉಳಿಸಿಕೊಳ್ಳಲು ಶಾಸಕರ ವಿದೇಶ ಪ್ರವಾಸ? ವಿಜಯೇಂದ್ರ ಗಂಭೀರ ಆರೋಪ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಶಾಸಕರನ್ನು ವಿದೇಶ ಪ್ರವಾಸಕ್ಕೆ ಕಳುಹಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು. ಸರ್ಕಾರ ಬಂದ ಬಳಿಕ ಅನುದಾನ ಬೇಡಿಕೆ ಇಟ್ಟಿದ್ದರೂ ಗಂಗಕಲ್ಯಾಣ ಯೋಜನೆ, ಮನೆ ನಿರ್ಮಾಣ ಸೇರಿದಂತೆ ಹಲವು ಕಾರ್ಯಗಳು ನಡೆಯದೆ ಜನರಲ್ಲಿ ಅಸಮಾಧಾನ ಮೂಡಿದೆ ಎಂದು ಆರೋಪಿಸಿದರು. ಶಾಸಕರು ತಮ್ಮ ಖರ್ಚಿನಲ್ಲಿ ವಿದೇಶಕ್ಕೆ ಹೋಗುತ್ತಿದ್ದಾರೆ ಎಂಬ ಸಿಎಂ ಹೇಳಿಕೆಯನ್ನು ಪ್ರಶ್ನಿಸಿ, “ತಮ್ಮ ಕುರ್ಚಿ ಉಳಿಸಿಕೊಳ್ಳಲು ತಾವೇ ಅವರನ್ನು ಕಳಿಸುತ್ತಿದ್ದಾರೆ” ಎಂದು ಟೀಕಿಸಿದರು.

ರೆಸಾರ್ಟ್ ರಾಜಕೀಯದ ಮೇಲೆ ಲೇವಡಿ

ಕಾಂಗ್ರೆಸ್ ಶಾಸಕರು ರೆಸಾರ್ಟ್ ಬುಕ್ ಮಾಡಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ, “ಅವರಿಗೆ ಅನುಕೂಲವಾಗಲಿ ಎಂದು ಬಿಜೆಪಿಯಿಂದ ಬಡಿಗೆ ರೆಡಿ ಮಾಡಿಸಿದ್ದೇವೆ” ಎಂದು ವ್ಯಂಗ್ಯವಾಡಿದರು. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಅಂತರದ ರಾಜಕೀಯ ನಡೆಯುತ್ತಿದೆ ಎಂದು ಹೇಳಿದರು.

₹5,000 ಕೋಟಿ ಎಲ್ಲಿಗೆ ಹೋಯ್ತು?

ಗೃಹ ಲಕ್ಷ್ಮೀ ಯೋಜನೆಯ ₹5,000 ಕೋಟಿ ಹಣದ ಬಗ್ಗೆ ಸ್ಪಷ್ಟ ಉತ್ತರ ಸಿಗಲಿಲ್ಲ ಎಂದು ಆರೋಪಿಸಿದ ಅವರು, “ಹಣ ಉಪಯೋಗ ಆಯ್ತಾ? ದುರಪಯೋಗ ಆಯ್ತಾ? ಸಿಎಂ ಉತ್ತರ ಕೊಡಬೇಕು” ಎಂದು ಆಗ್ರಹಿಸಿದರು. ಕೇಂದ್ರ ಸರ್ಕಾರಕ್ಕೆ ನಕಲಿ ದಾಖಲೆ ನೀಡಿರುವ ವಿಚಾರದಲ್ಲೂ ಮುಂದಿನ ದಿನಗಳಲ್ಲಿ ವಿವರವಾದ ಸುದ್ದಿಗೋಷ್ಠಿ ನಡೆಸುವುದಾಗಿ ತಿಳಿಸಿದರು.

ಪ್ರಾದೇಶಿಕ ಅಸಮಾನತೆ ಹೆಚ್ಚಳ

ಪ್ರಾದೇಶಿಕ ಅಸಮಾನತೆ ನಿವಾರಣೆ ಸಮಿತಿ ವರದಿ ಉಲ್ಲೇಖಿಸಿ, ರಾಜ್ಯದಲ್ಲಿ ಅಸಮಾನತೆ ಶೇಕಡಾ 60ರಿಂದ 72.08ಕ್ಕೆ ಏರಿಕೆಯಾಗಿದೆ ಎಂದು ಹೇಳಿದರು. ಕಿತ್ತೂರು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿ ಹಿಂದುಳಿದಿದೆ ಎಂದು ಆರೋಪಿಸಿದರು.

ಕುರಿಗಾರರಿಗೆ ಪರಿಹಾರ ಬಾಕಿ

ಅನುಗ್ರಹ ಯೋಜನೆಯಡಿ 45 ಕೋಟಿ ರೂ. ಬಾಕಿ ಇಟ್ಟಿದ್ದು, 90 ಸಾವಿರ ಸಾವಿನ ಪೈಕಿ ಕೇವಲ 30 ಸಾವಿರ ಕುರಿಮರಿಗಳಿಗೆ ಮಾತ್ರ ಪರಿಹಾರ ನೀಡಲಾಗಿದೆ ಎಂದು ಆರೋಪಿಸಿದರು.

ಬಿಜೆಪಿ ಕಾರ್ಯಕಾರಿಣಿ ಸಭೆ

ಫೆಬ್ರವರಿ 19ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಸರ್ಕಾರದ ವೈಫಲ್ಯಗಳು ಮತ್ತು ಮುಂದಿನ ಚುನಾವಣಾ ತಂತ್ರಗಳ ಬಗ್ಗೆ ಚರ್ಚೆ ಮಾಡಲಾಗುತ್ತದೆ ಎಂದು ಹೇಳಿದರು.

Continue Reading

ದೇಶ

LATEST : “ದೆಹಲಿಗೆ ಬಂದಿರೋದೇ ರಾಜಕಾರಣಕ್ಕೆ”: ಡಿಕೆಶಿ ಹೇಳಿಕೆ ಕುತೂಹಲ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಮತ್ತೆ ತೀವ್ರಗೊಂಡಿರುವ ನಡುವೆಯೇ ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸೋನಿಯಾ ಗಾಂಧಿ ನಿವಾಸಕ್ಕೆ ಭೇಟಿ ನೀಡಿದ ಡಿಕೆಶಿ, ಅಸ್ಸಾಂ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆದಿದೆ ಎಂದು ತಿಳಿಸಿದ್ದರೂ, ಅವರ ಹೇಳಿಕೆಗಳು ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿಸಿವೆ.

“ನಾನು ದೆಹಲಿಗೆ ಬಂದಿರೋದೇ ರಾಜಕಾರಣ ಮಾಡಲು. ಏನೂ ಮಾತನಾಡದೆ ಸುಮ್ಮನೆ ಹೋಗಲು ಸಾಧ್ಯವೇ?” ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ರೂಪೇಶ್ ಬಘೇಲ್ ಜೊತೆಗೆ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿದ ಅವರು, ಅಸ್ಸಾಂ ಸೇರಿದಂತೆ ಇತರೆ ರಾಜ್ಯಗಳ ಚುನಾವಣಾ ಸ್ಥಿತಿಗತಿಗಳ ಕುರಿತು ಚರ್ಚೆ ನಡೆದಿದೆ ಎಂದರು. “ಎಲ್ಲಾ ವಿಚಾರಗಳನ್ನು ಮಾತನಾಡಲೇಬೇಕು. ಕಾಲವೇ ಎಲ್ಲಕ್ಕೂ ಉತ್ತರ ಕೊಡಲಿದೆ” ಎಂಬ ಅವರ ಮಾತುಗಳಿಗೆ ಹಲವು ಅರ್ಥಗಳು ನೀಡಲಾಗುತ್ತಿದೆ.

ಇದೇ ವೇಳೆ ಬಜೆಟ್ ಪೂರ್ವಸಿದ್ಧತಾ ಸಭೆಗೆ ಗೈರಾಗಿದ್ದ ಡಿಕೆಶಿ ದೆಹಲಿಗೆ ತೆರಳಿರುವುದು ಗಮನಾರ್ಹ. ಸಿಎಂ ಸಿದ್ದರಾಮಯ್ಯ ಅವರ ಅನುಮತಿ ಪಡೆದುಕೊಂಡೇ ಅವರು ತೆರಳಿದ್ದಾರೆ ಎನ್ನಲಾಗಿದ್ದರೂ, ದೆಹಲಿಯ ರಾಜಕೀಯ ಚಟುವಟಿಕೆಗಳು ಕುತೂಹಲ ಹುಟ್ಟಿಸಿವೆ. ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದರಾ? ಎಂಬ ಪ್ರಶ್ನೆಗೆ ಅವರು ಸ್ಪಷ್ಟ ಉತ್ತರ ನೀಡಿಲ್ಲ.

ರಾಜ್ಯ ನಾಯಕತ್ವ ವಿಚಾರದಲ್ಲಿ ರಾಹುಲ್ ಗಾಂಧಿಯ ನಿರ್ಧಾರವೇ ಅಂತಿಮ ಎಂಬುದು ಕಾಂಗ್ರೆಸ್ ವಲಯದ ನಿಲುವು. ಇದೀಗ ಡಿಕೆಶಿ ರಾಹುಲ್ ಗಾಂಧಿಯನ್ನು ಭೇಟಿ ಮಾಡುವ ಸಾಧ್ಯತೆಗಳೂ ಚರ್ಚೆಯಾಗುತ್ತಿವೆ. ರಾಜ್ಯ ರಾಜಕೀಯದಲ್ಲಿ ಈ ಬೆಳವಣಿಗೆ ಹೊಸ ತಿರುವು ಪಡೆಯುವ ಸೂಚನೆ ನೀಡಿದೆ.

Continue Reading

ಅಪರಾಧ

BAIRATHI BASAVARJU BREAKING NEWS : ಸಿಐಡಿ ಲುಕ್‌ಔಟ್ ನೋಟಿಸ್ ಜಾರಿ, ತನಿಖೆ ತೀವ್ರ

ಬೆಂಗಳೂರು: ರೌಡಿಶೀಟರ್ ಬಿಲ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಅವರಿಗೆ ಮತ್ತೊಂದು ಕಾನೂನು ಹಿನ್ನಡೆ ಎದುರಾಗಿದೆ. ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಅವರ ಬಂಧನದ ಭೀತಿ ಮತ್ತಷ್ಟು ಗಟ್ಟಿಯಾಗಿದೆ.

ಈ ಹಿಂದೆ ಇದೇ ಪ್ರಕರಣದಲ್ಲಿ ಹೈಕೋರ್ಟ್ ಕೂಡ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಅದರ ನಂತರ ಬೈರತಿ ಬಸವರಾಜ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅಲ್ಲಿ ಸಹ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ. ವಿಚಾರಣೆ ವೇಳೆ ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿರುವುದು ಗಮನಾರ್ಹ.

ಈ ಬೆಳವಣಿಗೆಯೊಂದಿಗೆ ತನಿಖಾ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಈಗಾಗಲೇ ಸಿಐಡಿ ಪೊಲೀಸರು ಬೈರತಿ ಬಸವರಾಜ್ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಮುಂದಿನ ದಿನಗಳಲ್ಲಿ ಕಾನೂನು ಕ್ರಮಗಳು ಮತ್ತಷ್ಟು ಗಟ್ಟಿಯಾಗುವ ಸಾಧ್ಯತೆಗಳಿವೆ.

ರಾಜಕೀಯ ವಲಯದಲ್ಲೂ ಈ ವಿಚಾರ ಚರ್ಚೆಗೆ ಗ್ರಾಸವಾಗಿದ್ದು, ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಪ್ರಕರಣ ಹೊಸ ತಿರುವು ಪಡೆದಿದೆ.

Continue Reading

Trending