ಸಿನಿಮಾ
2023ರ ಸೈಮಾ ಅರ್ವಾಡ್:ಒಟ್ಟೊಟ್ಟಿಗೆ 10 ಪ್ರಶಸ್ತಿ ತನ್ನದಾಗಿಸಿಕೊಂಡ ಕಾಂತರ ಸಿನಿಮಾ!
ಕಾಂತಾರ’ ಸಿನಿಮಾಗೆ 10 ಸೈಮಾ ಪ್ರಶಸ್ತಿ ಬಂದಿದೆ. ರಿಷಬ್ ಶೆಟ್ಟಿ ಅವರು ಈ ಖುಷಿಯನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.ರಿಷಬ್ ಶೆಟ್ಟಿ ನಿರ್ದೇಶನ ಹಾಗೂ ನಟನೆಯ ‘ಕಾಂತಾರ’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಮಾತ್ರವಲ್ಲದೇ ಪ್ರಶಸ್ತಿ ಬಾಚಿಕೊಳ್ಳುವಲ್ಲಿಯೂ ಮುಂಚೂಣಿಯಲ್ಲಿದೆ.ಕನ್ನಡದ ಕಾಂತಾರ ಸಿನಿಮಾ ಇಡೀ ದೇಶದಾದ್ಯಂತ ಕಮಾಲ್ ಮಾಡಿತ್ತು. ಬಾಲಿವುಡ್ ಅಂಗಳದಲ್ಲೂ ಭರ್ಜರಿ ಪ್ರದರ್ಶನ ಕಂಡು ದಾಖಲೆ ಬರೆಯಿತು.ಕನ್ನಡ ಸೂಪರ್ ಹಿಟ್ ಸಿನಿಮಾ ಕಾಂತಾರ ಇತರ ಭಾಷೆಗಳಲ್ಲೂ ಭರ್ಜರಿ ಸದ್ದು ಮಾಡಿತ್ತು. ಈ ಸಿನಿಮಾ ರಿಷಬ್ ಲಕ್ ಅನ್ನೇ ಬದಲಿಸಿದೆ. ಕಾಂತಾರ ಸಿನಿಮಾ ಮೂಲಕ ನಟ, ನಿರ್ದೇಶಕ ರಿಷಬ್ ಶೆಟ್ಟಿ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಇತ್ತೀಚೆಗೆ ನಡೆದ ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬರೋಬ್ಬರಿ 10 ವಿಭಾಗಗಳಲ್ಲಿ ಕಾಂತಾರ ಸಿನಿಮಾಗೆ ಅವಾರ್ಡ್ ಸಿಕ್ಕಿರುವುದು ವಿಶೇಷ. ಅತ್ಯುತ್ತಮ ನಟ, ಅತ್ಯುತ್ತಮ ನಟಿ, ಅತ್ಯುತ್ತಮ ನಿರ್ದೇಶನ, ಅತ್ಯುತ್ತಮ ಹಾಸ್ಯ ನಟ, ಅತ್ಯುತ್ತಮ ಸಂಗೀತ ನಿರ್ದೇಶನ ಮುಂತಾದ ವಿಭಾಗಗಳಲ್ಲಿ ‘ಕಾಂತಾರ’ ಚಿತ್ರಕ್ಕೆ ಪ್ರಶಸ್ತಿ ಸಿಕ್ಕಿರುವುದನ್ನು ರಿಷಬ್ ಶೆಟ್ಟಿ ಅವರು ಸಂಭ್ರಮಿಸುತ್ತಿದ್ದಾರೆ. ಜನರ ಮನ್ನಣೆಯಿಂದ ಸಿಕ್ಕ ಪ್ರೀತಿಯೇ ಕಾಂತಾರ ಸಿನಿಮಾದ ಯಶಸ್ಸಿಗೆ ಕಾರಣ ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು.ತುಳುನಾಡಿನ ಸಂಸ್ಕೃತಿ ಮತ್ತು ಆಚರಣೆಗಳ ಬಗ್ಗೆ ‘ಕಾಂತಾರ’ ಸಿನಿಮಾದಲ್ಲಿ ತೋರಿಸಲಾಗಿದೆ. 2022ರ ಸೆಪ್ಟೆಂಬರ್ 30ರಂದು ಬಿಡುಗಡೆ ಆದ ಈ ಸಿನಿಮಾದಲ್ಲಿನ ರಿಷಬ್ ಶೆಟ್ಟಿ ಅವರ ನಟನೆಗೆ ಫಿದಾ ಆಗದವರಿಲ್ಲ.ಅದರಲ್ಲೂ ಕ್ಲೈಮ್ಯಾಕ್ಸ್ ದೃಶ್ಯ ಹೆಚ್ಚು ಗಮನ ಸೆಳೆದಿತ್ತು. ಬೇರೆ ಭಾಷೆಗಳಿಗೆ ಡಬ್ ಆಗಿ ತೆರೆಕಂಡು ಹಲವು ರಾಜ್ಯಗಳಲ್ಲಿ ಈ ಸಿನಿಮಾ ಹೌಸ್ಫುಲ್ ಪ್ರದರ್ಶನ ಕಂಡಿತ್ತು. ಬಾಲಿವುಡ್ ಮಟ್ಟದಲ್ಲಿ ರಿಷಬ್ ಶೆಟ್ಟಿ ಅವರಿಗೆ ಜನಪ್ರಿಯತೆ ಸಿಕ್ಕಿತು. ‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆಗೆ ಭರ್ಜರಿ ಲಾಭ ಆಯಿತು. ಮನ ತುಂಬಿ ಬಂದಿದೆ, ಜವಾಬ್ದಾರಿ ಹೆಚ್ಚಿಸಿದೆ. ನಿಮ್ಮ ಪ್ರೀತಿ, ಆಶೀರ್ವಾದ ಹೀಗೇ ಇರಲಿ. ಈ ಎಲ್ಲಾ ಯಶಸ್ಸನ್ನು ದೈವ ನರ್ತಕರು, ಅಪ್ಪು ಸರ್ ಹಾಗೂ ಕನ್ನಡಿಗರಿಗೆ ಸಮರ್ಪಣೆ ಮಾಡುವುದಾಗಿ ನಟ, ನಿರ್ದೇಶಕ ರಿಷಬ್ ಶೆಟ್ಟಿ ಬರೆದುಕೊಂಡಿದ್ದಾರೆ.ಕಾಂತಾರ ಸಿನಿಮಾ 10 ಪ್ರಶಸ್ತಿಯನ್ನು ಗೆದ್ದಿದೆ ಎಂದಿದ್ದಾರೆ.ಇನ್ನು ರಿಷಬ್ ಪತ್ನಿ ಪ್ರಗತಿರವರು ನನ್ನ ಪತಿಗಾಗಿ ನಾನು ಫ್ಯಾಷನ್ ಡಿಸೈನ್ ಮಾಡಿದೆ ಕೆಲಸವನ್ನು ಬಹಳ ಹೆಮ್ಮೆಯಿಂದ ಮಾಡಿದ್ದೇನೆ ಎಂದು ಬರೆದುಕೊಂಡಿದ್ದಾರೆ. ರಿಷಬ್ ಹಾಗೂ ಪ್ರಗತಿ ಇಬ್ಬರೂ ಸೈಮಾ ಸಮಾರಂಭದಲ್ಲಿ ಮಿಂಚಿದ್ರು. ಈಗ ‘ಕಾಂತಾರ 2’ ಸಿನಿಮಾಗೆ ಸಿದ್ಧತೆಗಳು ನಡೆಯುತ್ತಿವೆ.ಸೈಮಾ ಅವಾರ್ಡ್ಸ್ನಲ್ಲಿ ರಿಷಬ್ ಶೆಟ್ಟಿ ಡ್ರೆಸ್ ಕೂಡ ಎಲ್ಲರ ಗಮನ ಸೆಳೆದಿತ್ತು. ಈ ಉಡುಗೆಯನ್ನು ಪತ್ನಿ ಪ್ರಗತಿಯೇ ಡಿಸೈನ್ ಮಾಡಿದ್ದಾರೆ.
ದೇಶ
ತಮಿಳು ಚಿತ್ರರಂಗಕ್ಕೆ ಸಿಎಂ ವಿಜಯ್ ಬಂಪರ್ ಗಿಫ್ಟ್: ದಿನಕ್ಕೆ 5 ಶೋಗಳಿಗೆ ಗ್ರೀನ್ ಸಿಗ್ನಲ್!
ಚೆನ್ನೈ: Vijay ನೇತೃತ್ವದ ತಮಿಳುನಾಡು ಸರ್ಕಾರ ಚಿತ್ರೋದ್ಯಮಕ್ಕೆ ಮಹತ್ವದ ಸಿಹಿಸುದ್ದಿ ನೀಡಿದೆ. ಹೊಸ ಸಿನಿಮಾ ಬಿಡುಗಡೆಯಾದ ಮೊದಲ ಒಂದು ವಾರದವರೆಗೆ ದಿನಕ್ಕೆ 5 ಪ್ರದರ್ಶನಗಳನ್ನು ನಡೆಸಲು ಸರ್ಕಾರ ಅಧಿಕೃತ ಅನುಮತಿ ನೀಡಿದ್ದು, ನಿರ್ಮಾಪಕರು ಹಾಗೂ ಚಿತ್ರಮಂದಿರ ಮಾಲೀಕರಲ್ಲಿ ಸಂತಸ ಮೂಡಿಸಿದೆ.
ಚಿತ್ರರಂಗದ ಪ್ರತಿನಿಧಿಗಳು, ಚಲನಚಿತ್ರ ಮಂಡಳಿಯ ಪದಾಧಿಕಾರಿಗಳು ಹಾಗೂ ಚಿತ್ರೋದ್ಯಮದ ಪ್ರಮುಖರು ಮೇ 16ರಂದು ಮುಖ್ಯಮಂತ್ರಿ ವಿಜಯ್ ಅವರನ್ನು ಭೇಟಿ ಮಾಡಿ ಹಲವು ಬೇಡಿಕೆಗಳನ್ನೊಳಗೊಂಡ ಮನವಿ ಪತ್ರ ಸಲ್ಲಿಸಿದ್ದರು. ಚಿತ್ರಮಂದಿರಗಳ ಆರ್ಥಿಕ ಚೇತರಿಕೆ ಮತ್ತು ಪ್ರೇಕ್ಷಕರ ಅನುಕೂಲಕ್ಕಾಗಿ ದಿನಕ್ಕೆ ಐದು ಶೋಗಳಿಗೆ ಅವಕಾಶ ನೀಡಬೇಕು ಎಂಬುದು ಪ್ರಮುಖ ಬೇಡಿಕೆಯಾಗಿತ್ತು.
ಈ ಮನವಿಯನ್ನು ಪರಿಗಣಿಸಿದ ಸರ್ಕಾರ, ಚಿತ್ರೋದ್ಯಮದ ಹಿತದೃಷ್ಟಿಯಿಂದ ಹೊಸ ಆದೇಶ ಹೊರಡಿಸಿದೆ. ಈ ಕುರಿತು Tamil Nadu Chief Minister’s Office ತನ್ನ ಅಧಿಕೃತ ‘ಎಕ್ಸ್’ ಖಾತೆಯ ಮೂಲಕ ಮಾಹಿತಿ ಹಂಚಿಕೊಂಡಿದೆ.
ಈ ಮೊದಲು ಜಾರಿಯಲ್ಲಿದ್ದ ಚಿತ್ರಮಂದಿರಗಳ ನಿಯಮ 14-ಎ ಪ್ರಕಾರ, ತಮಿಳುನಾಡಿನಲ್ಲಿ ದಿನಕ್ಕೆ ಕೇವಲ ನಾಲ್ಕು ಪ್ರದರ್ಶನಗಳಿಗೆ ಮಾತ್ರ ಅವಕಾಶವಿತ್ತು. ಹಬ್ಬ-ಹರಿದಿನಗಳು ಅಥವಾ ಸಾರ್ವಜನಿಕ ರಜಾದಿನಗಳಲ್ಲಿ ಮಾತ್ರ ವಿಶೇಷ ಅನುಮತಿ ಪಡೆದು ಐದನೇ ಪ್ರದರ್ಶನ ನಡೆಸಲಾಗುತ್ತಿತ್ತು.
ಆದರೆ ಹೊಸ ನಿಯಮದಂತೆ, ಯಾವುದೇ ಹೊಸ ಸಿನಿಮಾ ಬಿಡುಗಡೆಯಾದ ಬಳಿಕ ಮೊದಲ ಏಳು ದಿನಗಳವರೆಗೆ ಪ್ರತಿದಿನ ಐದು ಪ್ರದರ್ಶನಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗಿದೆ. ಈ ಕ್ರಮದಿಂದ ಹೊಸ ಸಿನಿಮಾಗಳಿಗೆ ಹೆಚ್ಚಿನ ಆದಾಯ ಸಾಧ್ಯವಾಗಲಿದ್ದು, ಚಿತ್ರಮಂದಿರಗಳ ವ್ಯವಹಾರಕ್ಕೂ ಉತ್ತೇಜನ ಸಿಗಲಿದೆ ಎಂದು ನಿರೀಕ್ಷಿಸಲಾಗಿದೆ.
ತಮಿಳು ಚಿತ್ರರಂಗದ ನಿರ್ಮಾಪಕರು, ವಿತರಕರು ಮತ್ತು ಥಿಯೇಟರ್ ಮಾಲೀಕರು ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದು, ಇದು ಚಿತ್ರೋದ್ಯಮಕ್ಕೆ “ಬೂಸ್ಟರ್ ಡೋಸ್” ಆಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ದೇಶ
ಬಸ್ ಕಂಡಕ್ಟರ್ನಿಂದ ಸೂಪರ್ ಸ್ಟಾರ್ ತನಕ: ರಜನಿಕಾಂತ್ ಅಪರೂಪದ ಫೋಟೋ ವೈರಲ್
ಬೆಂಗಳೂರು: ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ Rajinikanth ಅವರ ಹಳೆಯ ದಿನಗಳ ಅಪರೂಪದ ಗುರುತಿನ ಚೀಟಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಸಿನಿಮಾಗಳಿಗೆ ಬರುವ ಮೊದಲು ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಸಂದರ್ಭದ ಈ ಐಡಿ ಕಾರ್ಡ್ ಅಭಿಮಾನಿಗಳ ಗಮನ ಸೆಳೆಯುತ್ತಿದೆ.
ಬೆಂಗಳೂರು ಸಾರಿಗೆ ಸಂಸ್ಥೆಯ ಡಿಪೋ ಸಂಖ್ಯೆ 4ರಲ್ಲಿ ಕಂಡಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ರಜನಿಕಾಂತ್ ಅವರ ಅಧಿಕೃತ ಐಡಿ ಕಾರ್ಡ್ ಇಂಟರ್ನೆಟ್ನಲ್ಲಿ ಹರಿದಾಡುತ್ತಿದ್ದು, ಅದರಲ್ಲಿ ಅವರ ಮೂಲ ಹೆಸರು ‘ಶಿವಾಜಿ ರಾವ್ ಗಾಯಕ್ವಾಡ್’ ಎಂದು ಉಲ್ಲೇಖಿಸಲಾಗಿದೆ. ಜೊತೆಗೆ ಯುವಕನಾಗಿದ್ದ ಸಂದರ್ಭದ ಫೋಟೋ ಕೂಡ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.
ಒಂದು ಕಾಲದಲ್ಲಿ ಮೆಜೆಸ್ಟಿಕ್ನಿಂದ ಶ್ರೀನಗರ ಮಾರ್ಗದ ರೂಟ್ ನಂ.10ಎ ಬಸ್ನಲ್ಲಿ ಟಿಕೆಟ್ ನೀಡುತ್ತಿದ್ದ ರಜನಿಕಾಂತ್, ತಮ್ಮ ವಿಶಿಷ್ಟ ಸ್ಟೈಲ್ ಹಾಗೂ ಸಿಳ್ಳೆ ಮೂಲಕ ಪ್ರಯಾಣಿಕರ ಗಮನ ಸೆಳೆಯುತ್ತಿದ್ದರು ಎನ್ನುವ ನೆನಪುಗಳನ್ನು ಈ ಫೋಟೋ ಮತ್ತೆ ಜೀವಂತಗೊಳಿಸಿದೆ.
ಕೇವಲ ₹275 ಸಂಬಳದಿಂದ ಜೀವನ ಆರಂಭಿಸಿದ್ದ ಶಿವಾಜಿ ರಾವ್ ಗಾಯಕ್ವಾಡ್ ಅವರು ಇಂದು ಭಾರತೀಯ ಸಿನಿರಂಗದ ಅತಿ ದೊಡ್ಡ ತಾರೆಯರಲ್ಲಿ ಒಬ್ಬರಾಗಿರುವುದು ಅಭಿಮಾನಿಗಳಿಗೆ ಪ್ರೇರಣೆಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು “ಇದೇ ನಿಜವಾದ ಲೆಜೆಂಡ್ ಪಯಣ” ಎಂದು ಕಾಮೆಂಟ್ ಮಾಡುತ್ತಿದ್ದು, ಹಳೆಯ ಫೋಟೋಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
ರಜನಿಕಾಂತ್ ಅವರ ಸರಳ ಜೀವನದಿಂದ ಆರಂಭವಾದ ಯಶೋಗಾಥೆ ಮತ್ತೆ ವೈರಲ್ ಆಗುತ್ತಿದ್ದಂತೆ, ಅವರ ಅಭಿಮಾನಿಗಳು ನೆಚ್ಚಿನ ನಟನ ಹಳೆಯ ನೆನಪುಗಳನ್ನು ಹಂಚಿಕೊಳ್ಳುತ್ತಾ ಸಂಭ್ರಮಿಸುತ್ತಿದ್ದಾರೆ.
ದೇಶ
‘ಡಾನ್ 3’ ತೊರೆದ ರಣವೀರ್ ಸಿಂಗ್ಗೆ ಸಂಕಷ್ಟ; FWICEನಿಂದ ಪರೋಕ್ಷ ಬ್ಯಾನ್?
ಮುಂಬೈ: ಬಾಲಿವುಡ್ ನಟ Ranveer Singh ಅವರಿಗೆ ಇದೀಗ ದೊಡ್ಡ ಸಂಕಷ್ಟ ಎದುರಾಗುವ ಸಾಧ್ಯತೆ ಕಾಣಿಸುತ್ತಿದೆ. ಬಹುನಿರೀಕ್ಷಿತ Don 3 ಸಿನಿಮಾದಿಂದ ದಿಢೀರನೆ ಹೊರನಡೆದ ಹಿನ್ನೆಲೆಯಲ್ಲಿ, ಸಿನಿಮಾ ನೌಕರರ ಒಕ್ಕೂಟವಾದ Federation of Western India Cine Employees ನಟನ ವಿರುದ್ಧ ಅಸಹಕಾರ ತೋರಲು ನಿರ್ಧರಿಸಿದೆ.
Farhan Akhtar ನಿರ್ದೇಶನದ ಈ ಚಿತ್ರವನ್ನು Excel Entertainment ನಿರ್ಮಿಸುತ್ತಿತ್ತು. ಶೂಟಿಂಗ್ ಆರಂಭವಾಗಲು ಕೆಲವೇ ದಿನಗಳು ಬಾಕಿ ಇರುವಾಗ ರಣವೀರ್ ಸಿಂಗ್ ಸಿನಿಮಾ ತೊರೆದಿರುವುದು ನಿರ್ಮಾಣ ಸಂಸ್ಥೆಗೆ ಭಾರೀ ಆರ್ಥಿಕ ನಷ್ಟ ಉಂಟುಮಾಡಿದೆ ಎಂದು ಹೇಳಲಾಗಿದೆ. ಚಿತ್ರದ ಪ್ರಿ-ಪ್ರೊಡಕ್ಷನ್ ಹಾಗೂ ಯೋಜನೆಗಳಿಗೆ ಈಗಾಗಲೇ ಕೋಟ್ಯಂತರ ರೂಪಾಯಿ ವೆಚ್ಚ ಮಾಡಲಾಗಿತ್ತು ಎನ್ನಲಾಗಿದೆ.
FWICE ಮುಖ್ಯ ಸಲಹೆಗಾರ Ashoke Pandit ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, “ಚಿತ್ರೀಕರಣಕ್ಕೆ ಕೆಲವೇ ದಿನಗಳಿರುವಾಗ ನಟರು ಸಿನಿಮಾದಿಂದ ಹೊರನಡೆಯುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಇದು ಸರಿಯಾದ ಬೆಳವಣಿಗೆ ಅಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
FWICE ಅಧ್ಯಕ್ಷ ಬಿ.ಎನ್. ತಿವಾರಿ, ಪ್ರಧಾನ ಕಾರ್ಯದರ್ಶಿ ಅಶೋಕ್ ದುಬೆ ಹಾಗೂ ಖಜಾಂಚಿ ಗಂಗೇಶ್ವರಲಾಲ್ ಶ್ರೀವಾಸ್ತವ್ ಭಾಗವಹಿಸಿದ್ದ ಉನ್ನತ ಮಟ್ಟದ ಸಭೆಯ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಈ ಮೊದಲು ವಿವಾದವನ್ನು ಪರಿಹರಿಸಲು ನಿರ್ಮಾಪಕರ ಸಂಘದ ಮಟ್ಟದಲ್ಲೂ ರಾಜಿ ಸಂಧಾನದ ಪ್ರಯತ್ನ ನಡೆದಿತ್ತು. ರಣವೀರ್ ಸಿಂಗ್ ಮತ್ತು ಎಕ್ಸೆಲ್ ಎಂಟರ್ಟೈನ್ಮೆಂಟ್ ನಡುವೆ ನಷ್ಟ ಪರಿಹಾರ ಹಾಗೂ ಸೆಟಲ್ಮೆಂಟ್ ಕುರಿತು ಮಾತುಕತೆಗಳು ನಡೆದರೂ, ಅವು ಫಲಕಾರಿಯಾಗಲಿಲ್ಲ ಎಂದು ಮೂಲಗಳು ತಿಳಿಸಿವೆ.
ಇದೀಗ ಈ ಅಸಹಕಾರ ಕ್ರಮ ರಣವೀರ್ ಸಿಂಗ್ ಅವರ ಮುಂದಿನ ಸಿನಿಮಾಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಇತ್ತೀಚೆಗೆ ಬಿಡುಗಡೆಯಾದ ‘ಧುರಂಧರ್’ ಚಿತ್ರದ ಯಶಸ್ಸಿನ ಬಳಿಕ ಅವರ ಬೇಡಿಕೆ ಹೆಚ್ಚಾಗಿದ್ದರೂ, ಈ ಬೆಳವಣಿಗೆ ಬಾಲಿವುಡ್ನಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ರಣವೀರ್ ಸಿಂಗ್ ಯಾವ ರೀತಿಯ ಪ್ರತಿಕ್ರಿಯೆ ನೀಡಲಿದ್ದಾರೆ ಎಂಬ ಕುತೂಹಲ ಸಿನಿಪ್ರಿಯರಲ್ಲಿ ಹೆಚ್ಚಾಗಿದೆ.
-
ಆರೋಗ್ಯ22 hours agoMeditation Benefits : ಮಾನಸಿಕ ಆರೋಗ್ಯ ಕಾಪಾಡಲು ಧ್ಯಾನ ಯಾಕೆ ಅಗತ್ಯ ಗೊತ್ತಾ?
-
ದೇಶ24 hours agoಹಕಿಂಪೂರ್ ಗಡಿಯಲ್ಲಿ ಭಾರಿ ಜನಸಮೂಹ; BSF ಅನುಮತಿಗಾಗಿ ಕಾದಿರುವ ಬಾಂಗ್ಲಾ ನಿವಾಸಿಗಳು
-
ದೇಶ21 hours agoಗುರಿ ಸಾಧನೆಗೆ ಶಿಸ್ತು ಮುಖ್ಯ; ವಿದ್ಯಾರ್ಥಿಗಳಿಗೆ ನಿರ್ಮಲಾನಂದನಾಥ ಶ್ರೀಗಳ ಸಂದೇಶ
-
ಅಪರಾಧ24 hours agoಸಿಲಿಕಾನ್ ಸಿಟಿಯಲ್ಲಿ ಸೈಬರ್ ಅಟ್ಟಹಾಸ; ಪ್ಯಾರಾ ಅಥ್ಲೀಟ್ ಹಣ ಕಳವು ಪ್ರಕರಣ
-
ದೇಶ22 hours agoಸಿಎಂ ಬದಲಾವಣೆ ಚರ್ಚೆ ಕ್ಲೈಮ್ಯಾಕ್ಸ್; ದೆಹಲಿಯಲ್ಲಿ ಸಿದ್ದರಾಮಯ್ಯ ಮಾಸ್ಟರ್ಸ್ಟ್ರೋಕ್
-
ದೇಶ22 hours agoಕೇವಲ ₹5ಕ್ಕೆ ಮೀನು-ಊಟ; ಪಶ್ಚಿಮ ಬಂಗಾಳ ಸರ್ಕಾರದ ಹೊಸ ಯೋಜನೆ
-
ದೇಶ4 hours agoಬಸ್ ಕಂಡಕ್ಟರ್ನಿಂದ ಸೂಪರ್ ಸ್ಟಾರ್ ತನಕ: ರಜನಿಕಾಂತ್ ಅಪರೂಪದ ಫೋಟೋ ವೈರಲ್
-
ಬೆಂಗಳೂರು2 hours ago“ನಾಳೆ ಎಲ್ಲ ಹೇಳುತ್ತೇನೆ”: ರಾಜಕೀಯ ಪ್ರಶ್ನೆಗಳಿಗೆ ಸಿದ್ದರಾಮಯ್ಯ ಸಸ್ಪೆನ್ಸ್ ಉತ್ತರ!
