Connect with us

ಬೆಂಗಳೂರು

ಸೆ  24ಕ್ಕೆಬೆಂಗಳೂರುಹೈದರಾಬಾದ್‌ ವಂದೇಭಾರತ್‌ ರೈಲುಸಂಚಾರಶುರು TIME TABLE ಇಲ್ಲಿದೆ

ಸೆ  24ಕ್ಕೆಬೆಂಗಳೂರುಹೈದರಾಬಾದ್‌ ವಂದೇಭಾರತ್‌ ರೈಲುಸಂಚಾರಶುರು TIME TABLE ಇಲ್ಲಿದೆ

ಬೆಂಗಳೂರುದೇಶದ ಎರಡು ಐಟಿ ಹಬ್‌ಗಳನ್ನು ಜೋಡಿಸುವ ಬೆಂಗಳೂರು-ಹೈದ್ರಾಬಾದ್ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಆಗಸ್ಟ್ 24ರಂದು ಚಾಲನೆ ದೊರೆಯಲಿದೆ. ಅದಕ್ಕೆ ಪೂರ್ವಭಾವಿಯಾಗಿ ಸೆ. 21ರಂದು (ಗುರುವಾರ) ಟ್ರಯಲ್‌ ರನ್‌ ನಡೆಯುತ್ತಿದೆ. ಹಾಗಿದ್ದರೆ ಈ ರೈಲಿನ ಮಹತ್ವ, ಬೆಂಗಳೂರಿನಿಂದ ಹೈದರಾಬಾದ್‌ ತಲುಪಲು ಬೇಕಾದ ಸಮಯ, ವೇಳಾಪಟ್ಟಿ, ಮಧ್ಯೆ ಬರುವ ಸ್ಟಾಪ್‌ಗಳು ಎಲ್ಲದರ ಬಗ್ಗೆ ಇಲ್ಲಿ ವಿವರವಾಗಿ ತಿಳಿಯೋಣ. ವಂದೆ ಭಾರತ್ ಎಕ್ಸ್‌ಪ್ರೆಸ್ ರೈಲು ಹೈದ್ರಾಬಾದ್ ಮತ್ತು ಬೆಂಗಳೂರು ನಡುವಿನ 615 ಕಿ.ಮೀ ದೂರವನ್ನು 8 ಗಂಟೆ 30 ನಿಮಿಷದಲ್ಲಿ ಸಂಚರಿಸಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್‌ 24ರಂದು ಕಾಚೇಗುಡ ಸ್ಟೇಷನ್‌ನಿಂದ ಹೈದರಾಬಾದ್‌-ಬೆಂಗಳೂರು ರೈಲಿಗೆ ಚಾಲನೆಯನ್ನು ನೀಡಲಿದ್ದಾರೆ. ಅಂದೇ ಅವರು ಇತರ ಕೆಲವು ರೈಲುಗಳಿಗೆ ಚಾಲನೆಯನ್ನು ನೀಡಲಿದ್ದಾರೆ. ಇದರಲ್ಲಿ ಹೈದರಾಬಾದ್‌ (ಕಾಚಿಗುಡ)- ಬೆಂಗಳೂರು (ಯಶವಂತಪುರ) ರೈಲು ಅಲ್ಲದೆ, ಚೆನ್ನೈ- ತಿರುನಲ್ವೇಲಿ, ವಿಜಯವಾಡ- ಚೆನ್ನೈ, ಪಟನಾ- ಹೌರಾ, ರೌರ್ಕೇಲಾ- ಪುರಿ, ಕಾಸರಗೋಡು-ಅಲಪ್ಪುಳ- ತಿರುವನಂತ ಪುರಂ ಮಾರ್ಗದ ರೈಲುಗಳೂ ಇವೆ. ಮೋದಿ ಅವರು ದಿಲ್ಲಿಯಿಂದಲೇ ವಿಡಿಯೊ ಕಾನ್ಫರೆನ್ಸ್‌ ಮೂಲಕ ಚಾಲನೆ ನೀಡಲಿದ್ದಾರೆ.

  1. ಬೆಂಗಳೂರು-ಹೈದರಾಬಾದ್‌ ರೈಲು ಕ್ರಮಿಸಲಿರುವ ದೂರ : 609.81 ಕಿ.ಮೀ. ಅದರಲ್ಲಿ 355.03 ಕಿ.ಮೀ. ಡಬಲ್‌ ಲೈನ್‌ ಇದ್ದರೆ, 254.78 ಕಿ.ಮೀ. ಸಿಂಗಲ್‌ ಲೈನ್‌ ಇರುತ್ತದೆ.
  2. ಬೆಂಗಳೂರಿನಿಂದ ಹೈದರಾಬಾದ್‌ಗೆ ಪ್ರಯಾಣದ ಅವಧಿ 8.30 ಗಂಟೆ. ಅಂದರೆ ಬೆಂಗಳೂರಿನಿಂದ ಸಂಜೆ 2.45ಕ್ಕೆ ಹೊರಡುವ ರೈಲು ರಾತ್ರಿ 11.15ಕ್ಕೆ ಹೈದರಾಬಾದ್‌ ತಲುಪಲಿದೆ.
  3. ಈ ರೈಲಿನಲ್ಲಿ 14 ಚಯರ್‌ ಕಾರ್‌ಗಳು ಮತ್ತು 2 ಎಕ್ಸಿಕ್ಯುಟಿವ್‌ ಕ್ಲಾಸ್‌ ಬೋಗಿಗಳು ಇರುತ್ತವೆ.
  4. ವಾರದ ಆರು ದಿನಗಳಲ್ಲಿ ಈ ರೈಲಿನ ಕಾರ್ಯಾಚರಣೆ ಇರುತ್ತದೆ. ಬುಧವಾರ ರೈಲು ಇರುವುದಿಲ್ಲ.

ಬೆಂಗಳೂರುಹೈದರಾಬಾದ್ರೈಲು

1.ಯಶವಂತಪುರ ರೈಲು ನಿಲ್ದಾಣ: ಮಧ್ಯಾಹ್ನ 2.45
2. ಧರ್ಮಾವರಂ ಸ್ಟೇಷನ್‌: ಸಂಜೆ 5.20
3. ಅನಂತಪುರ ನಿಲ್ದಾಣ: ಸಂಜೆ 5.41
4. ಕರ್ನೂಲು ನಗರ ನಿಲ್ದಾಣ: ಸಂಜೆ 7.51
5. ಮೆಹಬೂಬ್‌ ನಗರ: ರಾತ್ರಿ 9.40
6. ಕಾಚೆಗುಡ ಸ್ಟೇಷನ್‌: ರಾತ್ರಿ 11.15

ಹೈದರಾಬಾದ್‌ಗೆ ವಂದೇ ಭಾರತ್‌ ರೈಲು ಆರಂಭ ಎಂಬ ಸುದ್ದಿ ಕೇಳಿದಾಗ ಹೆಚ್ಚಿನವರು ಇದು ರಾಯಚೂರಿನ ಮೂಲಕ ಸಾಗುತ್ತದೆ ಎಂದು ಭಾವಿಸಿದ್ದರು. ಆದರೆ, ಇದು ಆ ರೂಟ್‌ನಲ್ಲಿ ಹೋಗುವುದಿಲ್ಲ. ನಿಜ ಹೇಳಬೇಕು ಎಂದರೆ ಕರ್ನಾಟಕದಿಂದ ಅದರು ನೇರವಾಗಿ ಹೋಗುವುದು ಧರ್ಮಾವರಂಗೆ. ಕರ್ನಾಟಕದಲ್ಲಿ ಯಶವಂತಪುರ ನಿಲ್ದಾಣ ಬಿಟ್ಟರೆ ಬೇರೆ ಯಾವ ಸ್ಟಾಪ್‌ ಕೂಡಾ ಇಲ್ಲ!

ಇಂದು ಪ್ರಾಯೋಗಿಕ ಸಂಚಾರ ಬೆಂಗಳೂರು ಹಾಗೂ ಹೈದರಾಬಾದ್‌ ನಡುವಿನ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನ ಪ್ರಾಯೋಗಿಕ ಸಂಚಾರ ಸೆಪ್ಟೆಂಬರ್‌ 21ರಂದು ಕಾಚಿಗುಡದಿಂದ ಆರಂಭಗೊಂದಿದೆ. ಗುರುವಾರ ಬೆಳಿಗ್ಗೆ ಹೈದರಾಬಾದ್‌ನ ಕಾಚಿಗುಡದಿಂದ ಈ ರೈಲು ಹೊರಟು ಮಧಾಹ್ನ 2 ಗಂಟೆಗೆ ಯಶವಂತಪುರಕ್ಕೆ ಬರಲಿದೆ. ಇನ್ನು ಹಿಂದಿರುಗಿ 2.45ಕ್ಕೆ ಯಶವಂತಪುರದಿಂದ ಹೊರಟು ರಾತ್ರಿ 11.15ಕ್ಕೆ ಕಾಚಿಗುಡ ತಲುಪಲಿದೆ.

ಬೆಂಗಳೂರು

ಸು ಫ್ರಮ್ ಸೋ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಕಲೆಕ್ಷನ್ ಸೆನ್ಸೇಷನ್: ಶ್ರಾವಣದ ಹಬ್ಬಕ್ಕೂ ಮುನ್ನ ಧನಲಕ್ಷ್ಮೀ ವರ!

ಬೆಂಗಳೂರು: ಶ್ರಾವಣ ತಿಂಗಳು ಅಂದ್ರೆ ಬಂಗಾರದ ತಿಂಗಳು. ಮನೆಮಾಲೀಕರಿಗೆ ವರಮಹಾಲಕ್ಷ್ಮೀ ಹಬ್ಬ, ಕನ್ನಡ ಚಿತ್ರರಂಗಕ್ಕೆ “ಸು ಫ್ರಮ್ ಸೋ” ಚಿತ್ರದ ಯಶಸ್ಸು! ರಾಜ್ ಬಿ.ಶೆಟ್ಟಿ ಅಭಿನಯದ ಈ ಹಾರರ್-ಕಾಮಿಡಿ ಸಿನಿಮಾ ಇದೀಗ ಮೂರನೇ ವಾರದಲ್ಲೂ ಭರ್ಜರಿಯಾಗಿ ಓಡುತ್ತಿದ್ದು, ಬಾಕ್ಸ್ ಆಫೀಸ್‌ನಲ್ಲಿ ಹವಾ ಸೃಷ್ಟಿಸಿದೆ.

ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಉತ್ತಮ ಕಂಟೆಂಟ್ ಹೊಂದಿರುವ ಸಿನಿಮಾಗಳಿಗೆ ಅಭಿಮಾನಿಗಳ ಮೆಚ್ಚುಗೆ ಹೆಚ್ಚಾಗುತ್ತಿದೆ. ‘ಎಕ್ಕ’, ‘ಜೂನಿಯರ್’ ನಂತರ ‘ಸು ಫ್ರಮ್ ಸೋ’ ಕೂಡ ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
75 ಲಕ್ಷ ಬಜೆಟ್‌ನಲ್ಲಿ ತಯಾರಾದ ಈ ಸಿನಿಮಾ ಈಗಾಗಲೇ ₹25 ಕೋಟಿ ಕಲೆಕ್ಷನ್ ಮಾಡಿದ್ದು, ಶೀಘ್ರದಲ್ಲೇ ₹50 ಕೋಟಿ ಕ್ಲಬ್ ಸೇರುವ ಲಕ್ಷಣವಿದೆ.

ಮುಂಬೈ, ದೆಹಲಿ, ಚೆನ್ನೈ, ಹೈದರಾಬಾದ್, ಕೇರಳ ಹಾಗೂ ವಿದೇಶಗಳಲ್ಲೂ ರಿಲೀಸ್ ಆದ ಈ ಸಿನಿಮಾ ಎಲ್ಲೆಡೆ ಹೌಸ್‌ಫುಲ್ ಪ್ರದರ್ಶನ ಪಡೆಯುತ್ತಿದೆ. ರಾಜ್ ಬಿ.ಶೆಟ್ಟಿ ಹಾಗೂ ನಿರ್ದೇಶಕ ಜೆ.ಪಿ. ತುಮಿನಾಡ್ ಅವರ ಶ್ರದ್ಧೆ ಫಲ ನೀಡಿದ್ದು, “ಬಂದರೋ ಬಂದರು.. ಬಾವ ಬಂದರು” ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗುತ್ತಿದೆ.

ಇನ್ನು ಮಲಯಾಳಂ ಡಬ್ಬಿಂಗ್ ಆಗಿ ಆಗಸ್ಟ್ 1ರಂದು ಬಿಡುಗಡೆಗೊಂಡ ‘ಸು ಫ್ರಮ್ ಸೋ’ ಚಿತ್ರ, ಕೊಚ್ಚಿಯಲ್ಲಿ ಒಂದೇ ದಿನ 8 ಸಾವಿರ ಟಿಕೆಟ್ ಮಾರಾಟ ಮಾಡಿದ ದಾಖಲೆ ಸ್ಥಾಪಿಸಿದೆ. ಆದುದರಿಂದ, ಚಿತ್ರದ ಬಯೋಪಿಕ್ ಮತ್ತಷ್ಟು ಭಾಷೆಗಳಿಗೆ ವಿಸ್ತರಿಸುವ ಸಾಧ್ಯತೆ ಇದೆ.

Continue Reading

ಬೆಂಗಳೂರು

ವೇತನ ವಿವಾದದಲ್ಲಿ ಸಿಎಂ ಸ್ಪಷ್ಟನೆ: 14 ತಿಂಗಳ ಹಿಂಬಾಕಿಗೆ ಮಾತ್ರ ಸರ್ಕಾರ ಸಿದ್ಧ

ಬೆಂಗಳೂರು: ಸಾರಿಗೆ ನೌಕರರ 38 ತಿಂಗಳ ವೇತನ ಹಿಂಬಾಕಿ ಪಾವತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. “ಈ ಬೇಡಿಕೆ ಸಮಂಜಸವಲ್ಲ. ಸರ್ಕಾರ ಕೇವಲ 14 ತಿಂಗಳ ಹಿಂಬಾಕಿಗೆ ಸಿದ್ಧ” ಎಂದು ಅವರು ಮಂಗಳವಾರ ವಿಧಾನಸೌಧದಲ್ಲಿ ನಡೆದ ಸಂಧಾನ ಸಭೆಯಲ್ಲಿ ತಿಳಿಸಿದ್ದಾರೆ.

2020ರಿಂದ 2023ರ ಫೆಬ್ರವರಿವರೆಗಿನ ಬಾಕಿ ವೇತನ ಪಾವತಿಗೆ ನೌಕರ ಸಂಘಗಳು ಒತ್ತಾಯಿಸಿದ್ದರೊಂದಿಗೆ, 2024ರಿಂದ ನೂತನ ವೇತನವನ್ನೂ ಜಾರಿಗೆ ತರುವಂತೆ ಒತ್ತಾಯಿಸಲಾಗಿದೆ. ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, “ನಿಗಮಗಳ ಆರ್ಥಿಕ ಪರಿಸ್ಥಿತಿ ಮತ್ತು ಹಿಂದಿನ ಸರ್ಕಾರದ ಆದೇಶಗಳ ದೋಷಗಳನ್ನು ಪರಿಗಣಿಸಿ 14 ತಿಂಗಳ ವೇತನ ಹಿಂಬಾಕಿಗೆ ಸಮ್ಮತಿಯಿದೆ,” ಎಂದು ಸ್ಪಷ್ಟಪಡಿಸಿದರು.

ವೇತನ ಪರಿಷ್ಕರಣೆ ಪಶ್ಚಾತ್ಪಟ
2016ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ 12.5% ವೇತನ ಹೆಚ್ಚಳ ಜಾರಿಗೆ ಬಂದಿತ್ತು. ಆದರೆ 2020ರ ಕೋವಿಡ್ ಕಾರಣದಿಂದ ಆ ವೇಳೆಗೆ ಯಾವುದೇ ಪರಿಷ್ಕರಣೆ ಆಗಿರಲಿಲ್ಲ. ನಂತರದ ಕಾಂಗ್ರೆಸ್ ಸರ್ಕಾರದಲ್ಲಿ ಶ್ರೀನಿವಾಸ ಮೂರ್ತಿ ಸಮಿತಿ ಶಿಫಾರಸ್ಸಿನಂತೆ 2022ರ ಜೂನ್‌ 01ರಿಂದ 2023ರ ಫೆಬ್ರವರಿವರೆಗೆ ಹಿಂಬಾಕಿ ಪಾವತಿ ಮಾಡಲು ತೀರ್ಮಾನಿಸಲಾಗಿತ್ತು.

ಸರ್ಕಾರದ ಆರ್ಥಿಕ ಹೊಣೆಗಾರಿಕೆ
ಸಿದ್ದರಾಮಯ್ಯ ಅವರು ಹೇಳಿದ್ದಾರೆ: “ನಾವು ಅಧಿಕಾರಕ್ಕೆ ಬಂದಾಗ ನಿಗಮಗಳಿಗೆ ಒಟ್ಟಾರೆ ₹4000 ಕೋಟಿ ಸಾಲ ಇತ್ತು. 2018 ರಲ್ಲಿ ಈ ಮೊತ್ತ ಕೇವಲ ₹14 ಕೋಟಿ ಮಾತ್ರ ಇತ್ತು. ಯಾವುದೇ ನಿಗಮ ಲಾಭದಲ್ಲಿ ಇಲ್ಲ.” ಅಂತಹ ಪರಿಸ್ಥಿತಿಯಲ್ಲಿ ಎಲ್ಲಾ ನೌಕರರ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

ಸಂಘದ ಚುನಾವಣೆ ಮತ್ತು ಮುಂದಿನ ಕ್ರಮ
ಸಾರಿಗೆ ನೌಕರರ ಸಂಘದ ಚುನಾವಣೆ ಹಾಗೂ ಬೇಡಿಕೆಗಳ ಕುರಿತಂತೆ ಸರ್ಕಾರ ಪರಿಶೀಲನೆ ನಡೆಸಲಿದ್ದು, ಮಾತುಕತೆ ಮೂಲಕ ಎಲ್ಲ ಅಹವಾಲುಗಳನ್ನು ಬಗೆಹರಿಸಲು ಸಿದ್ಧವಾಗಿದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

Continue Reading

ಬೆಂಗಳೂರು

ಸಾರಿಗೆ ನೌಕರರ ಮುಷ್ಕರ ಆರಂಭ: ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ – “ಹಠವಿಲ್ಲದೆ ಸಹಕಾರ ನೀಡಿ”

ಬೆಂಗಳೂರು: ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ ಸಾರಿಗೆ ನೌಕರರು ಮುಷ್ಕರಕ್ಕೆ (Transport Employees Strike) ಇಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ಸಾರಿಗೆ ನೌಕರರು ಕೇಳಿರುವ ಬೇಡಿಕೆಯಲ್ಲಿ ತಪ್ಪಿಲ್ಲ. ಆದರೆ ಸರ್ಕಾರದ ಪರಿಸ್ಥಿತಿಯನ್ನೂ ಅವರು ಗಮನದಲ್ಲಿಟ್ಟುಕೊಳ್ಳಬೇಕು. ಹಠವಿಲ್ಲದೆ ಸಹಕಾರ ನೀಡಬೇಕು” ಎಂದು ಹೇಳಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಸಚಿವರು ನೌಕರರೊಂದಿಗೆ ಸಭೆ ನಡೆಸಿದ್ದಾರೆ ಎಂಬುದನ್ನು ಅವರು ನೆನಪಿಸಿದ್ದಾರೆ.

“ಸಾರ್ವಜನಿಕರ ಹಿತವೇ ಮೊದಲಾದ್ದು. ಕೆಲವು ನೌಕರರು ಈಗಾಗಲೇ ಕೆಲಸಕ್ಕೆ ಹಾಜರಾಗಿದ್ದಾರೆ. ಅವರಿಗೆ ಅಭಿನಂದನೆ” ಎಂದು ಡಿಸಿಎಂ ಹೇಳಿದ್ದಾರೆ.

ಇತ್ತ, ಹಳದಿ ಮೆಟ್ರೊ ಮಾರ್ಗದ (Yellow Metro Line) ಉದ್ಘಾಟನೆಯ ಕುರಿತು ಮಾತನಾಡಿದ ಡಿ.ಕೆ.ಶಿವಕುಮಾರ್, “ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಸ್ಟ್ 10ರಂದು ಬರುವ ಸಾಧ್ಯತೆ ಇದೆ. ನಾವು ಈಗಾಗಲೇ ತಯಾರಿ ಪರಿಶೀಲನೆ ಆರಂಭಿಸಿದ್ದೇವೆ. ಕಾರ್ಯಕ್ರಮದ ಅಧಿಕೃತ ಸಮಯ ಇನ್ನೂ ಘೋಷಣೆಯಾಗಿಲ್ಲ” ಎಂದು ತಿಳಿಸಿದ್ದಾರೆ.

ಇದೇ ದಿನ ಬಿಜೆಪಿ ವತಿಯಿಂದ ರೈಲ್ವೆ ಸಂಬಂಧಿತ ಕಾರ್ಯಕ್ರಮವೂ ನಡೆಯಲಿದೆ ಎಂದು ಅವರು ಹೇಳಿದ್ದಾರೆ.

Continue Reading

Trending