ದೇಶ

ಜನರ ಹಿತದೃಷ್ಟಿಯಿಂದ ನಡೆದುಕೊಳ್ಳಿ ನ್ಯಾಯಾಲಯದ ಆದೇಶ ಪಾಲಿಸದಿರಿ ಹೆಚ್’ಡಿಕೆ ಆಗ್ರಹ

ಜನರ ಹಿತದೃಷ್ಟಿಯಿಂದ ನಡೆದುಕೊಳ್ಳಿ ನ್ಯಾಯಾಲಯದ ಆದೇಶ ಪಾಲಿಸದಿರಿ ಹೆಚ್'ಡಿಕೆ ಆಗ್ರಹ

ಬೆಂಗಳೂರು: ತಮಿಳುನಾಡಿಗೆ ನೀರು ಬಿಡುವುದನ್ನು ವಿರೋಧಿಸಿ ಮಂಡ್ಯ ಜನತೆ ಕರೆ ನೀಡಿರುವ ಬಂದ್‌ಗೆ ಜೆಡಿಎಸ್ ನಾಯಕ ಹೆಚ್’ಡಿ.ಕುಮಾರಸ್ವಾಮಿಯವರು ಬೆಂಬಲ ನೀಡಿದ್ದಾರೆ.

ಕಾವೇರಿ ವಿವಾದ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶನಿವಾರ ಬೆಳಗ್ಗೆ ದೆಹಲಿಯಿಂದ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದು, ನೇರವಾಗಿ ಮಂಡ್ಯಗೆ ತೆರಳಿ ರೈತರ ಪ್ರತಿಭಟನೆಯಲ್ಲಿ ಭಾಗಿಯಾಗುತ್ತೇನೆಂದು ಹೇಳಿದರು.

ಕಾವೇರಿ ವಿವಾದ ಸಂಬಂಧ  ಗೃಹ ಸಚಿವ  ಅಮಿತ್ ಶಾ ಅವರಿಗೆ ರಾಜ್ಯದ ವಾಸ್ತವಿಕ ಸ್ಥಿತಿಯನ್ನು ವಿವರಿಸಿದ್ದೇನೆ. ರಾಜ್ಯ ಸರ್ಕಾರ ತಡವಾಗಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜನರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡಬಾರದು. ನ್ಯಾಯಾಲಯ ಕಟ್ಟುನಿಟ್ಟಾದ ಆದೇಶವನ್ನು ಜಾರಿಗೊಳಿಸಿದರೆ ಅದನ್ನು ಅನುಸರಿಸಲು ಸಾಧ್ಯವಿಲ್ಲ, ಜನರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರದ ನಿರ್ಧಾರ ಕೈಗೊಳ್ಳಬೇಕು. ಜನರ ಹಿತದೃಷ್ಟಿಯಿದ ನ್ಯಾಯಾಲಯದ ಆದೇಶ ಪಾಲನೆ ಮಾಡದಿದ್ದರೆ ಅದು ಉಲ್ಲಂಘನೆಯಾಗುವುದಿಲ್ಲ ಎಂದು ತಿಳಿಸಿದರು.

Trending

Exit mobile version