ದೇಶ
ಸೆ 26ರಂದು ಬೆಂಗಳೂರು ಬಂದ್ 150ಕ್ಕೂ ಅಧಿಕ ಸಂಘಟನೆಗಳ ಜಂಟಿ ಕರೆ
ಬೆಂಗಳೂರು: ಕಾವೇರಿ ನೀರಿನ ಉಳಿವಿಗಾಗಿ ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್ಗೆ ಕರೆ ನೀಡಲಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಶನಿವಾರ ನಡೆದ ಬೃಹತ್ ಪ್ರತಿಭಟನಾ ಮತ್ತು ಸಮಾಲೋಚನಾ ಸಭೆಯಲ್ಲಿ ಸೆಪ್ಟೆಂಬರ್ 26ರಂದು ಬಂದ್ಗೆ ಕರೆ ನೀಡಲು ನಿರ್ಧರಿಸಲಾಯಿತು. ಸುಮಾರು 150ಕ್ಕೂ ಅಧಿಕ ಸಂಘಟನೆಗಳು ಈ ಬಂದ್ಗೆ ಬೆಂಬಲ ನೀಡಲಿದೆ ಎಂದು ಪ್ರಕಟಿಸಲಾಗಿದೆ.
ಕರ್ನಾಟಕ ಜಲಸಂರಕ್ಷಣಾ ಸಮಿತಿಯಿಂದ ಫ್ರೀಡಂ ಪಾರ್ಕ್ನಲ್ಲಿ ನಡೆದ ಮಹತ್ವದ ಸಭೆಯಲ್ಲಿ ಬೆಂಗಳೂರಿನ ಪ್ರಮುಖ ಅಪಾರ್ಟ್ ಮೆಂಟ್ ಅಸೋಸಿಯೇಷನ್, ಲೇಔಟ್ ಅಸೋಸಿಯೇಷನ್, ಹೋಟೆಲ್ ಮಾಲೀಕರ ಸಂಘ, ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು, ಐಟಿ ಕಂಪನಿಗಳು ಭಾಗಿಯಾಗಿದ್ದವು.
ಆಮ್ ಆದ್ಮಿ ಪಾರ್ಟಿಯ ಮುಖ್ಯಮಂತ್ರಿ ಚಂದ್ರು, ರೈತ ಮುಖಂಡ ಕುರುಬೂರು ಶಾಂತಕುಮಾರ್ ಬಿಬಿಎಂಪಿ ನೌಕರರ ಸಂಘದ ಅಧ್ಯಕ್ಷ ಅಮೃತ್ ರಾಜ್, ಜಯ ಕರ್ನಾಟಕ ಸಂಘಟನೆ ಮುಖಂಡರು, ಶಾಶ್ವತ ನೀರಾವರಿ ಹೋರಾಟ ಸಮಿತಿ, ಜಲ ಸಂರಕ್ಷಣಾ ಸಮಿತಿ ಮುಖಂಡರಿಂದ ಅಭಿಪ್ರಾಯ ಮಂಡನೆಯಾದ ಬಳಿಕ ಸೆ. 26ರಂದು ಬಂದ್ಗೆ ಕರೆ ನೀಡಲು ನಿರ್ಧರಿಸಲಾಯಿತು.
ಸಂಘಟನೆಗಳ ನಾಯಕರು ಮಾಡಿರುವ ಪ್ರಕಾರ ಮುಂದಿನ ಮಂಗಳವಾರ ಎಲ್ಲಾ ಸಾರ್ವಜನಿಕ ಸೇವೆಗಳು ಸ್ಥಗಿತವಾಗಲಿವೆ.
-ಅಂಗಡಿ ಮುಂಗಟ್ಟುಗಳು ಬಂದ್
– ಎಲ್ಲ ರೀತಿಯ ಸಂಚಾರ ವ್ಯವಸ್ಥೆ ಸ್ಥಗಿತ
-ಶಾಲಾ ಕಾಲೇಜ್, ಸರ್ಕಾರಿ ಕಚೇರಿ ಕಾರ್ಯ ಚಟುವಟಿಕೆ ಸ್ಥಗಿತ
– ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಂದ್
ಹೀಗೆ ಹಾಲು, ತರಕಾರಿ, ಪತ್ರಿಕೆ, ಆಸ್ಪತ್ರೆ, ಮೆಡಿಕಲ್ ಸೇರಿದಂತೆ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಉಳಿದೆಲ್ಲವೂ ಬಂದ್ ಆಗಬೇಕು ಎನ್ನುವುದು ಸಂಘಟಕರ ನಿರೀಕ್ಷೆಯಾಗಿದೆ.