Connect with us

ದೇಶ

ಪೆಂಟಗಾನ್ ಮಾಜಿ ಅಧಿಕಾರಿ ಹೇಳಿದ್ದೇನು? ಅಮೆರಿಕ ಆಯ್ಕೆ ಯಾವುದು?ಕೆನಡಾ ಅಥವಾ ಭಾರತ

ಅಮೆರಿಕಕ್ಕೆ ಕೆನಡಾಕ್ಕಿಂತಲೂ ಭಾರತವು ಕಾರ್ಯತಂತ್ರದಲ್ಲಿ ಮುಖ್ಯವಾಗಿದೆ. ಭಾರತದ ಜತೆ ಕೆನಡಾ ಸಂಘರ್ಷಕ್ಕೆ ಇಳಿಯುವುದು ‘ಆನೆ ಜತೆ ಇರುವೆ ಕಾದಾಟಕ್ಕೆ ಇಳಿದಂತೆ’ ಎಂದು ಹೋಲಿಕೆ ಮಾಡಿದ್ದಾರೆ.ಜಸ್ಟಿನ್ ಟ್ರುಡೊ ಅವರ ಆರೋಪವು ಭಾರತಕ್ಕಿಂತಲೂ ಕೆನಡಾಕ್ಕೆ ‘ಹೆಚ್ಚು ಅಪಾಯ’ ಉಂಟು ಮಾಡಿದೆ ಎಂದು ಪ್ರತಿಪಾದಿಸಿರುವ ಅಮೆರಿಕದ ಮಾಜಿ ಅಧಿಕಾರಿ ಮೈಕಲ್ ರುಬಿನ್, ಕೆನಡಾ ಮತ್ತು ಭಾರತದ ನಡುವೆ ಒಂದನ್ನು ಆಯ್ಕೆ ಮಾಡಿಕೊಳ್ಳುವ ಪ್ರಸಂಗ ಅಮೆರಿಕಕ್ಕೆ ಎದುರಾದರೆ, ಅದು ಖಂಡಿತವಾಗಿಯೂ ಭಾರತವನ್ನು ಆಯ್ಕೆ ಮಾಡಲಿದೆ ಎಂದು ಹೇಳಿದ್ದಾರೆ. ಭಾರತದ ಜೊತೆಗಿನ ಸಂಬಂಧ ಅಮೆರಿಕಕ್ಕೆ ಬಹಳ ಮುಖ್ಯವಾಗಿದೆ ಎಂದಿದ್ದಾರೆ.ಪ್ರಧಾನಿ ಟ್ರುಡೊ ದೊಡ್ಡ ತಪ್ಪು ಮಾಡಿದ್ದಾರೆ. ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲದಂತಹ ಆರೋಪಗಳನ್ನು ಮಾಡಿದ್ದಾರೆ. ಅವರು ತಮ್ಮ ಮಾತುಗಳ ಕುರಿತು ಜಾಗ್ರತೆ ವಹಿಸಿಲ್ಲ ಹಾಗೂ ಸರ್ಕಾರದ ವಿರುದ್ಧ ಅವರು ಮಾಡಿರುವ ಆರೋಪಗಳನ್ನು ಬೆಂಬಲಿಸಲು ಯಾವ ಪುರಾವೆಹಳು ಕೂಡ ಇಲ್ಲ. ಈ ಸರ್ಕಾರವು ಉಗ್ರನೊಬ್ಬನಿಗೆ ಏಕೆ ಆಶ್ರಯ ನೀಡಿದೆ ಎಂಬುದನ್ನು ಅವರು ವಿವರಿಸುವ ಅಗತ್ಯವಿರುವ ಪ್ರಕರಣ ಇದು” ಎಂದು ಪೆಂಟಗಾನ್‌ನ ಮಾಜಿ ಅಧಿಕಾರಿ ತಿಳಿಸಿದ್ದಾರೆ. ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಕುರಿತಾದ ಕಳಪೆ ಅನುಮೋದನಾ ರೇಟಿಂಗ್ ಉಲ್ಲೇಖಿಸಿದ ರುಬಿನ್, ಅವರು ಪ್ರಧಾನಿಯಾಗಿ ಹೆಚ್ಚು ದೀರ್ಘ ಕಾಲ ಇರುವುದಿಲ್ಲ. ಅವರು ಅಧಿಕಾರದಿಂದ ಇಳಿದ ಬಳಿಕ ಕೆನಡಾ ಜೊತೆಗಿನ ಸಂಬಂಧವನ್ನು ಅಮೆರಿಕ ಮತ್ತೆ ಸರಿಪಡಿಸಿಕೊಳ್ಳಬಹುದು ಎಂದಿದ್ದಾರೆ.
ಭಾರತವು ಉಗ್ರ ಎಂದು ಘೋಷಿಸಿರುವ ಹರ್ದೀಪ್ ಸಿಂಗ್ ನಿಜ್ಜರ್‌ನನ್ನು ಖಲಿಸ್ತಾನ್ ಬೆಂಬಲಿಗರ ತಾಣವಾಗಿರುವ ಕೆನಡಾದ ಬ್ರಿಟಿಷ್ ಕೊಲಂಬಿಯಾದಲ್ಲಿರುವ ಸರ್ರೆಯಲ್ಲಿನ ಗುರುದ್ವಾರದ ಹೊರಗೆ ಪಾರ್ಕಿಂಗ್ ಪ್ರದೇಶದಲ್ಲಿ ಜೂನ್ 18ರಂದು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿತ್ತು.
ಅಮೆರಿಕಕ್ಕೆ ಇರಡು ಮಿತ್ರ ರಾಷ್ರಗಳ ನಡುವೆ ಆಯ್ಕೆ ಮಾಡುವ ಅಗತ್ಯ ಎದುರಾದರೆ, ಈ ವಿಚಾರದಲ್ಲಿ ಹೆಚ್ಚಿನ ಪಾಲು ನಾವು ಭಾರತವನ್ನು ಆಯ್ಕೆ ಮಾಡಲಿದ್ದೇವೆ. ಏಕೆಂದರೆ ನಿಜ್ಜರ್ ಒಬ್ಬ ಉಗ್ರ ಹಾಗೂ ಭಾರತ ಬಹಳ ಮುಖ್ಯ. ನಮ್ಮ ಸಂಬಂಧಗಳು ಸಹ ಹೆಚ್ಚು ಮುಖ್ಯ” ಎಂದು ಮೈಕಲ್ ರುಬಿನ್ ಹೇಳಿದ್ದಾರೆ.”ಜಸ್ಟಿನ್ ಟ್ರುಡೊ ಅವರು ಬಹುಶಃ ಹೆಚ್ಚಿನ ಸಮಯ ಕೆನಡಾ ಪ್ರಧಾನಿಯಾಗಿ ಇರುವುದಿಲ್ಲ. ಅವರು ಅಧಿಕಾರದಿಂದ ನಿರ್ಗಮಿಸಿದ ಬಳಿಕ ನಾವು ನಮ್ಮ ಸಂಬಂಧವನ್ನು ಮರು ಸುಧಾರಿಸಬಹುದು” ಎಂದಿದ್ದಾರೆ.”ಗುಪ್ತಚರ ಮಾಹಿತಿಗಳನ್ನು ಪರಿಶೀಲಿಸುತ್ತಿದ್ದವನಾಗಿ, ದೂರವಾಣಿ ಸಂಭಾಷಣೆ ಅಥವಾ ಬೇರೆ ಯಾವುದಾದರೂ ಗುಪ್ತಚರ ಸಂಗತಿಗಳು ಹೆಚ್ಚಿನ ಸಮಯ ಸ್ಪಷ್ಟವಾಗಿರುವುದಿಲ್ಲ, ಸಂಪೂರ್ಣ ವಿಶ್ವಾಸಾರ್ಹವೂ ಅಲ್ಲ ಎಂದು ನಾನು ಹೇಳಬಲ್ಲೆ. ಇರಾಕ್ ಯುದ್ಧಕ್ಕೆ ಸಂಬಂಧಿಸಿದಂತೆ ನನಗೆ ಇದು ಚೆನ್ನಾಗಿ ಅನುಭವಕ್ಕೆ ಬಂದಿತ್ತು” ಎಂದು ತಿಳಿಸಿದ್ದಾರೆ.
ಬಹುಶಃ ಪ್ರಧಾನಿ ಟ್ರುಡೊ ಸಮಸ್ಯೆಯನ್ನು ಪ್ರಸ್ತಾಪಿಸಿರಬಹುದು. ಆದರೆ ಅವರ ಹೇಳಿಕೆಯ ಅರ್ಥಕ್ಕೆ ಅಗತ್ಯ ಸಹಮತ ಇರಲಿಲ್ಲ. ಅಲ್ಲದೆ, ನಾವು ಸ್ವತಃ ಮೂರ್ಖರಾಗುವುದು ಬೇಡ. ನಿಜ್ಜರ್ ಒಬ್ಬ ಸಾಮಾನ್ಯ ಪ್ಲಂಬರ್ ಆಗಿರಲಿಲ್ಲ. ಮಿಗಿಲಾಗಿ ಒಸಾಮಾ ಬಿನ್ ಲ್ಯಾಡೆನ್ ಒಬ್ಬ ನಿರ್ಮಾಣ ಎಂಜಿನಿಯರ್ ಆಗಿದ್ದ. ಅನೇಕ ದಾಳಿಗಳಿಂದ ಆತ ಕೈಗಳಿಗೆ ರಕ್ತ ಮೆತ್ತಿಸಿಕೊಂಡಿದ್ದ” ಎಂದು ಭಾರತದ ಪರ ಬ್ಯಾಟ್ ಬೀಸಿದ್ದಾರೆ. ಕೆನಡಾ ಸಂಘರ್ಷವನ್ನು ಬಯಸಿದ್ರೆ, ಆನೆ ಜತೆ ಇರುವೆ ಯುದ್ಧಕ್ಕೆ ಇಳಿದಂತೆ ಆಗಲಿದೆ. ಭಾರತವು ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ಎನ್ನುವುದು ವಾಸ್ತವ. ಚೀನಾ ಹಾಗೂ ಹಿಂದೂ ಮಹಾಸಾಗರದ ಪ್ರದೇಶ ಮತ್ತು ಪೆಸಿಫಿಕ್‌ನ ಇತರೆ ವಿಚಾರಗಳಲ್ಲಿನ ಆತಂಕಕಾರಿ ಸನ್ನಿವೇಶಗಳಿಗೆ ಸಂಬಂಧಿಸಿದಂತೆ ಕೆನಡಾಕ್ಕಿಂತಲೂ ಭಾರತವು ವ್ಯೂಹಾತ್ಮಕವಾಗಿ ಹೆಚ್ಚು ಮುಖ್ಯವಾಗಿದೆ ಎಂದಿದ್ದಾರೆ.

ದೇಶ

ನವರಾತ್ರಿ ಸಮಯದಲ್ಲಿ ವಿಮಾನ ನಿಲ್ದಾಣಗಳಲ್ಲಿ ಭಯೋತ್ಪಾದಕ ದಾಳಿ ಎಚ್ಚರಿಕೆ – ಭದ್ರತೆ ಬಿಗಿ ಕ್ರಮ

ಭಾರತದ ಪ್ರಮುಖ ವಿಮಾನ ನಿಲ್ದಾಣಗಳ ಮೇಲೆ ನವರಾತ್ರಿಯ ವೇಳೆ ಭಯೋತ್ಪಾದಕ ದಾಳಿಯ ಅಪಾಯವಿರುವ ಬಗ್ಗೆ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿದ್ದು, ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮ ಜಾರಿಯಲ್ಲಿದೆ.

ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ (BCAS) ಆಗಸ್ಟ್ 4ರಂದು ಎಚ್ಚರಿಕೆ ಪ್ರಕಟಿಸಿ, ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ ಭಯೋತ್ಪಾದನೆ ಅಥವಾ ಸಮಾಜ ವಿರೋಧಿ ಶಕ್ತಿಗಳಿಂದ ದಾಳಿ ಸಂಭವಿಸಬಹುದೆಂದು ಸೂಚಿಸಿದೆ.

🕵️ ಗುಪ್ತಚರ ಮೂಲದ ಮಹತ್ವದ ಎಚ್ಚರಿಕೆ:

ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳು ದಾಳಿಗೆ ಸಿದ್ಧತೆ ನಡೆಸುತ್ತಿವೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಎಲ್ಲಾ ವಿಮಾನ ನಿಲ್ದಾಣಗಳು, ಏರ್‌ಸ್ಟ್ರಿಪ್‌ಗಳು, ಹೆಲಿಪ್ಯಾಡ್‌ಗಳು ಮತ್ತು ತರಬೇತಿ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳಾಗಿ ಈ ಕೆಳಗಿನ ಕ್ರಮಗಳು ಜಾರಿಗೆ ಬಂದಿವೆ:

  • ಸಿಬ್ಬಂದಿ ಮತ್ತು ಸಂದರ್ಶಕರ ಗುರುತಿನ ಪರಿಶೀಲನೆ
  • ಸಿಸಿಟಿವಿ ಕಣ್ಗಾವಲು ಬಿಗಿತ
  • ಸರಕು, ಪಾರ್ಸೆಲ್ ಮತ್ತು ಮೇಲ್‌ಗಳ ತಪಾಸಣೆ
  • ಸ್ಥಳೀಯ ಪೊಲೀಸ್ ಮತ್ತು ಭದ್ರತಾ ಸಂಸ್ಥೆಗಳೊಂದಿಗೆ ಸಹಕಾರ

🇮🇳 ರಾಷ್ಟ್ರೀಯ ಭದ್ರತೆಗೆ ಒತ್ತು:

ದೆಹಲಿ, ಮುಂಬೈ, ಬೆಂಗಳೂರು ಮತ್ತು ಚೆನ್ನೈ ಸೇರಿದಂತೆ ಪ್ರಮುಖ ವಿಮಾನ ನಿಲ್ದಾಣಗಳು ಈ ಕ್ರಮಗಳನ್ನು ಜಾರಿಗೊಳಿಸುತ್ತಿದ್ದು, ಪ್ರಯಾಣಿಕರು ತಮ್ಮ ಗುರುತಿನ ದಾಖಲೆಗಳನ್ನು ಸಿದ್ಧವಾಗಿಡಬೇಕು. ತಪಾಸಣೆ ವಿಳಂಬದ ಸಾಧ್ಯತೆಯಿರುವುದರಿಂದ ಸಹಕಾರ ನೀಡುವಂತೆ BCAS ಮನವಿ ಮಾಡಿದೆ.

Continue Reading

ದೇಶ

ಅಮೆರಿಕ-ರಷ್ಯಾ ವ್ಯವಹಾರ: ಭಾರತದ ಟೀಕೆಗೆ ಟ್ರಂಪ್ ನುಣುಚು ಪ್ರತಿಕ್ರಿಯೆ

ವಾಷಿಂಗ್ಟನ್: ರಷ್ಯಾದಿಂದ ಈಗಲೂ ವ್ಯವಹಾರ ನಡೆಸುತ್ತಿರುವ ಅಮೆರಿಕದ ಕುರಿತಾಗಿ ಭಾರತ ಮಾಡಿರುವ ಗಂಭೀರ ಆರೋಪಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನುಣುಚು ಪ್ರತಿಕ್ರಿಯೆ ನೀಡಿದ್ದಾರೆ.

ಭಾರತ ಆರೋಪಿಸಿದಂತೆ, ಅಮೆರಿಕ 2024ರಲ್ಲಿ 1.1 ಶತಕೋಟಿ ಡಾಲರ್‌ ಮೌಲ್ಯದ ರಸಗೊಬ್ಬರ, 878 ಮಿಲಿಯನ್ ಡಾಲರ್‌ ಮೌಲ್ಯದ ಪಲ್ಲಾಡಿಯಮ್‌ ಸೇರಿದಂತೆ ಹಲವು ಅಮೂಲ್ಯ ಲೋಹಗಳನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಯುರೇನಿಯಂ ಹೆಕ್ಸಾಫ್ಲೋರೈಡ್‌ನಂತಹ ಪರಮಾಣು ಉತ್ಪನ್ನಗಳ ಆಮದು ಕೂಡ ಮುಂದುವರಿದಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಟ್ರಂಪ್, “ನನಗೆ ಈ ವ್ಯಾಪಾರದ ವಿವರಗಳು ತಿಳಿದಿಲ್ಲ, ನಾನು ಪರಿಶೀಲನೆ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ಭಾರತದ ಖಡಕ್ ಪ್ರತಿಕ್ರಿಯೆ:
ಭಾರತ, ತನ್ನ ರಷ್ಯಾ ತೈಲ ಆಮದು ಬಗ್ಗೆ ಅಮೆರಿಕದ ಟೀಕೆಗೆ ಅಂಕಿ-ಅಂಶಗಳೊಂದಿಗೆ ತಿರುಗೇಟು ನೀಡಿದೆ. ಯುರೋಪ್ ದೇಶಗಳೇ ರಷ್ಯಾದಿಂದ ಭಾರಿ ಪ್ರಮಾಣದಲ್ಲಿ ಎಲ್‌ಎನ್‌ಜಿ, ರಸಗೊಬ್ಬರ, ಲೋಹಗಳನ್ನು ಆಮದು ಮಾಡಿಕೊಳ್ಳುತ್ತಿವೆ. 2024ರಲ್ಲಿ ಯುರೋಪಿಯನ್ ಒಕ್ಕೂಟವು 67.5 ಬಿಲಿಯನ್ ಯುರೋಗಳಷ್ಟು ಸರಕು ವ್ಯಾಪಾರ ಹಾಗೂ 17.2 ಬಿಲಿಯನ್ ಯುರೋಗಳಷ್ಟು ಸೇವಾ ವ್ಯಾಪಾರವನ್ನು ರಷ್ಯಾ ಜೊತೆ ನಡೆಸಿದೆ.

ಟ್ರಂಪ್ ಅವರ ಆರೋಪ:
ಟ್ರಂಪ್ ಹೇಳುವಂತೆ, ಭಾರತ ರಷ್ಯಾದ ತೈಲವನ್ನು ಖರೀದಿ ಮಾಡುತ್ತಿದ್ದು, ಅದನ್ನು ಮುಕ್ತ ಮಾರುಕಟ್ಟೆಯಲ್ಲಿ ಲಾಭಕ್ಕಾಗಿ ಮಾರಾಟ ಮಾಡುತ್ತಿದೆ. ಅವರು ಈ ಕಾರಣಕ್ಕಾಗಿ ಭಾರತದಿಂದ ಸಂಗ್ರಹಿಸಬೇಕಾದ ಸುಂಕವನ್ನು ಹೆಚ್ಚಿಸುವುದಾಗಿ ಹೇಳಿದ್ದಾರೆ.

ಭಾರತದ ನಿಲುವು:
ಭಾರತ, ತನ್ನ ರಾಷ್ಟ್ರೀಯ ಹಿತಾಸಕ್ತಿಗಳನ್ನು ಕಾಪಾಡುವ ಸಲುವಾಗಿ ಕಚ್ಚಾ ತೈಲವನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಇಂಧನದ ದರಗಳನ್ನು ಜನತೆಗೆ ಕೈಗೆಟುಕುವಂತೆ ಇರಿಸಲು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

Continue Reading

ಕ್ರೀಡೆ

ರಿಷಭ್ ಪಂತ್ ಮಾನವೀಯತೆ: ಬಡ ವಿದ್ಯಾರ್ಥಿನಿಗೆ BCA ಪ್ರವೇಶಕ್ಕೆ ₹40,000 ನೆರವು!

ಬಾಗಲಕೋಟೆ: ಟೀಂ ಇಂಡಿಯಾದ ವಿಕೆಟ್ ಕೀಪರ್ ಹಾಗೂ ತೀಕ್ಷ್ಣ ಬ್ಯಾಟ್ಸ್‌ಮನ್ ರಿಷಭ್ ಪಂತ್ ಅವರು ಕ್ರೀಡಾಕ್ಷೇತ್ರದಷ್ಟೇ ದಾನಶೀಲತೆಯಲ್ಲೂ ಮಾದರಿಯಾಗಿದ್ದಾರೆ. ಇತ್ತೀಚೆಗೆ ಅವರು ಬಾಗಲಕೋಟೆ ಜಿಲ್ಲೆಯ ಬಡ ವಿದ್ಯಾರ್ಥಿನಿಯೊಬ್ಬಳಿಗೆ ಆರ್ಥಿಕ ನೆರವು ನೀಡಿ ಜನಮನ ಗೆದ್ದಿದ್ದಾರೆ.

ಬೀಳಗಿ ತಾಲ್ಲೂಕಿನ ರಬಕವಿ ಗ್ರಾಮದ ಜ್ಯೋತಿ ಕಣಬೂರಮಠ ದ್ವಿತೀಯ ಪಿಯುಸಿಯಲ್ಲಿ 85% ಅಂಕ ಗಳಿಸಿದ್ದರೂ, ಮನೆ ಪರಿಸ್ಥಿತಿಯಿಂದ BCA ಕೋರ್ಸ್‌ಗೆ ಸೇರುವ ಕನಸು ತೊಡೆತಗೊಂಡಿತ್ತು. ತಂದೆ ಚಿಕ್ಕ ಟೀ ಅಂಗಡಿ ನಡೆಸುವವರಾಗಿದ್ದು ಶುಲ್ಕ ಪಾವತಿಸಲು ಸಾಧ್ಯವಾಗಿರಲಿಲ್ಲ.

ಇದನ್ನು ಗುತ್ತಿಗೆದಾರ ಅನಿಲ್ ಹುಣಸಿಕಟ್ಟಿ ಅವರು ಗಮನಿಸಿ, ತಮ್ಮ ಸಂಪರ್ಕಗಳಿಂದ ರಿಷಭ್ ಪಂತ್ ಅವರ ಗಮನಕ್ಕೆ ತಂದರು. ಇದನ್ನು ಕೇಳಿದ ಪಂತ್, ಜುಲೈ 17ರಂದು ₹40,000 ನೇರವಾಗಿ BLDE ಕಾಲೇಜಿನ ಖಾತೆಗೆ ವರ್ಗಾಯಿಸಿ, ಜ್ಯೋತಿಯ ಮೊದಲ ಸೆಮಿಸ್ಟರ್ ಶುಲ್ಕವನ್ನು ಭರಿಸಿದರು.

ಜ್ಯೋತಿ ಎಮೋಶನಲ್ ಆಗಿ, “ರಿಷಭ್ ಪಂತ್ ಸಹಾಯದಿಂದ ನನ್ನ ಕನಸು ಸಾಧ್ಯವಾಯಿತು. ಅವರಿಗೆ ದೇವರು ಆಯುಷ್ಯ ಕೊಡಲಿ,” ಎಂದಿದ್ದಾರೆ.

Continue Reading

Trending