Connect with us

ದೇಶ

ಪೆಂಟಗಾನ್ ಮಾಜಿ ಅಧಿಕಾರಿ ಹೇಳಿದ್ದೇನು? ಅಮೆರಿಕ ಆಯ್ಕೆ ಯಾವುದು?ಕೆನಡಾ ಅಥವಾ ಭಾರತ

Published

on

ಅಮೆರಿಕಕ್ಕೆ ಕೆನಡಾಕ್ಕಿಂತಲೂ ಭಾರತವು ಕಾರ್ಯತಂತ್ರದಲ್ಲಿ ಮುಖ್ಯವಾಗಿದೆ. ಭಾರತದ ಜತೆ ಕೆನಡಾ ಸಂಘರ್ಷಕ್ಕೆ ಇಳಿಯುವುದು ‘ಆನೆ ಜತೆ ಇರುವೆ ಕಾದಾಟಕ್ಕೆ ಇಳಿದಂತೆ’ ಎಂದು ಹೋಲಿಕೆ ಮಾಡಿದ್ದಾರೆ.ಜಸ್ಟಿನ್ ಟ್ರುಡೊ ಅವರ ಆರೋಪವು ಭಾರತಕ್ಕಿಂತಲೂ ಕೆನಡಾಕ್ಕೆ ‘ಹೆಚ್ಚು ಅಪಾಯ’ ಉಂಟು ಮಾಡಿದೆ ಎಂದು ಪ್ರತಿಪಾದಿಸಿರುವ ಅಮೆರಿಕದ ಮಾಜಿ ಅಧಿಕಾರಿ ಮೈಕಲ್ ರುಬಿನ್, ಕೆನಡಾ ಮತ್ತು ಭಾರತದ ನಡುವೆ ಒಂದನ್ನು ಆಯ್ಕೆ ಮಾಡಿಕೊಳ್ಳುವ ಪ್ರಸಂಗ ಅಮೆರಿಕಕ್ಕೆ ಎದುರಾದರೆ, ಅದು ಖಂಡಿತವಾಗಿಯೂ ಭಾರತವನ್ನು ಆಯ್ಕೆ ಮಾಡಲಿದೆ ಎಂದು ಹೇಳಿದ್ದಾರೆ. ಭಾರತದ ಜೊತೆಗಿನ ಸಂಬಂಧ ಅಮೆರಿಕಕ್ಕೆ ಬಹಳ ಮುಖ್ಯವಾಗಿದೆ ಎಂದಿದ್ದಾರೆ.ಪ್ರಧಾನಿ ಟ್ರುಡೊ ದೊಡ್ಡ ತಪ್ಪು ಮಾಡಿದ್ದಾರೆ. ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲದಂತಹ ಆರೋಪಗಳನ್ನು ಮಾಡಿದ್ದಾರೆ. ಅವರು ತಮ್ಮ ಮಾತುಗಳ ಕುರಿತು ಜಾಗ್ರತೆ ವಹಿಸಿಲ್ಲ ಹಾಗೂ ಸರ್ಕಾರದ ವಿರುದ್ಧ ಅವರು ಮಾಡಿರುವ ಆರೋಪಗಳನ್ನು ಬೆಂಬಲಿಸಲು ಯಾವ ಪುರಾವೆಹಳು ಕೂಡ ಇಲ್ಲ. ಈ ಸರ್ಕಾರವು ಉಗ್ರನೊಬ್ಬನಿಗೆ ಏಕೆ ಆಶ್ರಯ ನೀಡಿದೆ ಎಂಬುದನ್ನು ಅವರು ವಿವರಿಸುವ ಅಗತ್ಯವಿರುವ ಪ್ರಕರಣ ಇದು” ಎಂದು ಪೆಂಟಗಾನ್‌ನ ಮಾಜಿ ಅಧಿಕಾರಿ ತಿಳಿಸಿದ್ದಾರೆ. ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಕುರಿತಾದ ಕಳಪೆ ಅನುಮೋದನಾ ರೇಟಿಂಗ್ ಉಲ್ಲೇಖಿಸಿದ ರುಬಿನ್, ಅವರು ಪ್ರಧಾನಿಯಾಗಿ ಹೆಚ್ಚು ದೀರ್ಘ ಕಾಲ ಇರುವುದಿಲ್ಲ. ಅವರು ಅಧಿಕಾರದಿಂದ ಇಳಿದ ಬಳಿಕ ಕೆನಡಾ ಜೊತೆಗಿನ ಸಂಬಂಧವನ್ನು ಅಮೆರಿಕ ಮತ್ತೆ ಸರಿಪಡಿಸಿಕೊಳ್ಳಬಹುದು ಎಂದಿದ್ದಾರೆ.
ಭಾರತವು ಉಗ್ರ ಎಂದು ಘೋಷಿಸಿರುವ ಹರ್ದೀಪ್ ಸಿಂಗ್ ನಿಜ್ಜರ್‌ನನ್ನು ಖಲಿಸ್ತಾನ್ ಬೆಂಬಲಿಗರ ತಾಣವಾಗಿರುವ ಕೆನಡಾದ ಬ್ರಿಟಿಷ್ ಕೊಲಂಬಿಯಾದಲ್ಲಿರುವ ಸರ್ರೆಯಲ್ಲಿನ ಗುರುದ್ವಾರದ ಹೊರಗೆ ಪಾರ್ಕಿಂಗ್ ಪ್ರದೇಶದಲ್ಲಿ ಜೂನ್ 18ರಂದು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿತ್ತು.
ಅಮೆರಿಕಕ್ಕೆ ಇರಡು ಮಿತ್ರ ರಾಷ್ರಗಳ ನಡುವೆ ಆಯ್ಕೆ ಮಾಡುವ ಅಗತ್ಯ ಎದುರಾದರೆ, ಈ ವಿಚಾರದಲ್ಲಿ ಹೆಚ್ಚಿನ ಪಾಲು ನಾವು ಭಾರತವನ್ನು ಆಯ್ಕೆ ಮಾಡಲಿದ್ದೇವೆ. ಏಕೆಂದರೆ ನಿಜ್ಜರ್ ಒಬ್ಬ ಉಗ್ರ ಹಾಗೂ ಭಾರತ ಬಹಳ ಮುಖ್ಯ. ನಮ್ಮ ಸಂಬಂಧಗಳು ಸಹ ಹೆಚ್ಚು ಮುಖ್ಯ” ಎಂದು ಮೈಕಲ್ ರುಬಿನ್ ಹೇಳಿದ್ದಾರೆ.”ಜಸ್ಟಿನ್ ಟ್ರುಡೊ ಅವರು ಬಹುಶಃ ಹೆಚ್ಚಿನ ಸಮಯ ಕೆನಡಾ ಪ್ರಧಾನಿಯಾಗಿ ಇರುವುದಿಲ್ಲ. ಅವರು ಅಧಿಕಾರದಿಂದ ನಿರ್ಗಮಿಸಿದ ಬಳಿಕ ನಾವು ನಮ್ಮ ಸಂಬಂಧವನ್ನು ಮರು ಸುಧಾರಿಸಬಹುದು” ಎಂದಿದ್ದಾರೆ.”ಗುಪ್ತಚರ ಮಾಹಿತಿಗಳನ್ನು ಪರಿಶೀಲಿಸುತ್ತಿದ್ದವನಾಗಿ, ದೂರವಾಣಿ ಸಂಭಾಷಣೆ ಅಥವಾ ಬೇರೆ ಯಾವುದಾದರೂ ಗುಪ್ತಚರ ಸಂಗತಿಗಳು ಹೆಚ್ಚಿನ ಸಮಯ ಸ್ಪಷ್ಟವಾಗಿರುವುದಿಲ್ಲ, ಸಂಪೂರ್ಣ ವಿಶ್ವಾಸಾರ್ಹವೂ ಅಲ್ಲ ಎಂದು ನಾನು ಹೇಳಬಲ್ಲೆ. ಇರಾಕ್ ಯುದ್ಧಕ್ಕೆ ಸಂಬಂಧಿಸಿದಂತೆ ನನಗೆ ಇದು ಚೆನ್ನಾಗಿ ಅನುಭವಕ್ಕೆ ಬಂದಿತ್ತು” ಎಂದು ತಿಳಿಸಿದ್ದಾರೆ.
ಬಹುಶಃ ಪ್ರಧಾನಿ ಟ್ರುಡೊ ಸಮಸ್ಯೆಯನ್ನು ಪ್ರಸ್ತಾಪಿಸಿರಬಹುದು. ಆದರೆ ಅವರ ಹೇಳಿಕೆಯ ಅರ್ಥಕ್ಕೆ ಅಗತ್ಯ ಸಹಮತ ಇರಲಿಲ್ಲ. ಅಲ್ಲದೆ, ನಾವು ಸ್ವತಃ ಮೂರ್ಖರಾಗುವುದು ಬೇಡ. ನಿಜ್ಜರ್ ಒಬ್ಬ ಸಾಮಾನ್ಯ ಪ್ಲಂಬರ್ ಆಗಿರಲಿಲ್ಲ. ಮಿಗಿಲಾಗಿ ಒಸಾಮಾ ಬಿನ್ ಲ್ಯಾಡೆನ್ ಒಬ್ಬ ನಿರ್ಮಾಣ ಎಂಜಿನಿಯರ್ ಆಗಿದ್ದ. ಅನೇಕ ದಾಳಿಗಳಿಂದ ಆತ ಕೈಗಳಿಗೆ ರಕ್ತ ಮೆತ್ತಿಸಿಕೊಂಡಿದ್ದ” ಎಂದು ಭಾರತದ ಪರ ಬ್ಯಾಟ್ ಬೀಸಿದ್ದಾರೆ. ಕೆನಡಾ ಸಂಘರ್ಷವನ್ನು ಬಯಸಿದ್ರೆ, ಆನೆ ಜತೆ ಇರುವೆ ಯುದ್ಧಕ್ಕೆ ಇಳಿದಂತೆ ಆಗಲಿದೆ. ಭಾರತವು ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ಎನ್ನುವುದು ವಾಸ್ತವ. ಚೀನಾ ಹಾಗೂ ಹಿಂದೂ ಮಹಾಸಾಗರದ ಪ್ರದೇಶ ಮತ್ತು ಪೆಸಿಫಿಕ್‌ನ ಇತರೆ ವಿಚಾರಗಳಲ್ಲಿನ ಆತಂಕಕಾರಿ ಸನ್ನಿವೇಶಗಳಿಗೆ ಸಂಬಂಧಿಸಿದಂತೆ ಕೆನಡಾಕ್ಕಿಂತಲೂ ಭಾರತವು ವ್ಯೂಹಾತ್ಮಕವಾಗಿ ಹೆಚ್ಚು ಮುಖ್ಯವಾಗಿದೆ ಎಂದಿದ್ದಾರೆ.

ದೇಶ

SIR ಎಂದರೇನು? ಕರ್ನಾಟಕದ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಸಂಪೂರ್ಣ ಮಾಹಿತಿ

Published

on

ಬೆಂಗಳೂರು: ಕರ್ನಾಟಕದಲ್ಲಿ Special Intensive Revision (SIR) ಅಥವಾ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಆರಂಭವಾಗಿದ್ದು, ಮತದಾರರ ಪಟ್ಟಿಯನ್ನು ಹೆಚ್ಚು ನಿಖರಗೊಳಿಸುವ ಉದ್ದೇಶದಿಂದ ಚುನಾವಣಾ ಆಯೋಗ (ECI) ರಾಜ್ಯಾದ್ಯಂತ ಮನೆ-ಮನೆ ಪರಿಶೀಲನೆ ನಡೆಸುತ್ತಿದೆ.

ಈ ಪ್ರಕ್ರಿಯೆಯ ಪ್ರಮುಖ ಉದ್ದೇಶ ಸತ್ತವರು, ಶಾಶ್ವತವಾಗಿ ಸ್ಥಳಾಂತರಗೊಂಡವರು, ನಕಲಿ ಹಾಗೂ ಅನರ್ಹ ಮತದಾರರ ಹೆಸರುಗಳನ್ನು ತೆಗೆದುಹಾಕುವುದು ಮತ್ತು ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದಾಗಿದೆ. ಕರ್ನಾಟಕದಲ್ಲಿ 5.54 ಕೋಟಿಗೂ ಅಧಿಕ ಮತದಾರರು ನೋಂದಾಯಿತರಾಗಿದ್ದು, ಅವರಲ್ಲಿ ಸುಮಾರು 91.61% ಮತದಾರರ ವಿವರಗಳು ಈಗಾಗಲೇ ಮ್ಯಾಪ್ ಆಗಿವೆ. ಉಳಿದ ಮತದಾರರ ಮಾಹಿತಿಯನ್ನು ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ-ಮನೆಗೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

ಚುನಾವಣಾ ಆಯೋಗದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಸಾವಿರಾರು ಅಧಿಕಾರಿಗಳು ಹಾಗೂ 5,950 BLOಗಳು ಈ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಮತದಾರರಿಗೆ ಅಗತ್ಯ ದಾಖಲೆಗಳು ಹಾಗೂ ಪ್ರಮಾಣಪತ್ರಗಳನ್ನು ಸೇವಾ ಸಿಂಧು, ನಾಡಕಚೇರಿ, ಬೆಂಗಳೂರು ಒನ್, ಕರ್ನಾಟಕ ಒನ್ ಹಾಗೂ ಗ್ರಾಮ ಒನ್ ಕೇಂದ್ರಗಳ ಮೂಲಕ ಪಡೆಯುವ ವ್ಯವಸ್ಥೆಯನ್ನೂ ಸರ್ಕಾರ ಕಲ್ಪಿಸಿದೆ.

ಇದೀಗ SIR ಪ್ರಕ್ರಿಯೆ ರಾಜಕೀಯ ವಿವಾದಕ್ಕೂ ಕಾರಣವಾಗಿದೆ. ಕೆಲವು ರಾಜಕೀಯ ಪಕ್ಷಗಳು ಮನೆ-ಮನೆ ಪರಿಶೀಲನೆಯ ಬದಲು ಸಾರ್ವಜನಿಕ ಸ್ಥಳಗಳಲ್ಲಿ ಅರ್ಜಿ ವಿತರಣೆ, ನಿಯಮ ಉಲ್ಲಂಘನೆ ಹಾಗೂ ರಾಜಕೀಯ ಹಸ್ತಕ್ಷೇಪದ ಆರೋಪಗಳನ್ನು ಮಾಡಿವೆ. ಆದರೆ, ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರು, ಇನ್ನೂ ಮ್ಯಾಪ್ ಆಗದ ಮತದಾರರ ಹೆಸರುಗಳು ತಕ್ಷಣವೇ ಪಟ್ಟಿಯಿಂದ ಕೈಬಿಡಲಾಗುವುದಿಲ್ಲ. ಕರಡು ಪಟ್ಟಿ ಪ್ರಕಟವಾದ ಬಳಿಕ ದಾಖಲೆ ಸಲ್ಲಿಸಲು ಮತ್ತು ಆಕ್ಷೇಪಣೆ ಸಲ್ಲಿಸಲು ಸೂಕ್ತ ಅವಕಾಶ ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಮತದಾರರ ಪಟ್ಟಿಯನ್ನು ಪಾರದರ್ಶಕ ಹಾಗೂ ನಿಖರವಾಗಿಡುವ ಉದ್ದೇಶದಿಂದ ನಡೆಯುತ್ತಿರುವ ಈ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮತದಾರರು ತಮ್ಮ ವಿವರಗಳನ್ನು ಪರಿಶೀಲಿಸಿ ಅಗತ್ಯ ದಾಖಲೆಗಳನ್ನು ಸಮಯಕ್ಕೆ ಸರಿಯಾಗಿ ಸಲ್ಲಿಸುವಂತೆ ಚುನಾವಣಾ ಆಯೋಗ ಮನವಿ ಮಾಡಿದೆ.

Continue Reading

ದೇಶ

ಅಲಿ ಖಮೇನಿ ಅಂತ್ಯಕ್ರಿಯೆ ಬಗ್ಗೆ ಟ್ರಂಪ್‌ ವಿವಾದಾತ್ಮಕ ಹೇಳಿಕೆ: “ಅದು ಮೊಸಳೆ ಕಣ್ಣೀರು

Published

on

ವಾಷಿಂಗ್ಟನ್: ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ (Ali Khamenei) ಅವರ ಅಂತ್ಯಕ್ರಿಯೆ ವೇಳೆ ಸಾವಿರಾರು ಜನರು ಕಂಬನಿ ಮಿಡಿದ ಘಟನೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ಅಂತ್ಯಕ್ರಿಯೆಯಲ್ಲಿ ಜನರು ಅಳುತ್ತಿರುವುದು ನಿಜವಾದ ದುಃಖವಲ್ಲ, ಅದು “ಮೊಸಳೆ ಕಣ್ಣೀರು” ಎಂದು ಟ್ರಂಪ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಅಂತ್ಯಕ್ರಿಯೆಯಲ್ಲಿ ಇರಾನ್‌ನ ಪ್ರಮುಖ ರಾಜಕೀಯ ನಾಯಕರು, ಸಂಸದರು ಹಾಗೂ ಸಾವಿರಾರು ನಾಗರಿಕರು ಭಾಗವಹಿಸಿದ್ದರು. ಈ ದೃಶ್ಯಗಳನ್ನು ಉಲ್ಲೇಖಿಸಿದ ಟ್ರಂಪ್‌, “ಇರಾನ್‌ನ ಜನರು ಖಮೇನಿಯನ್ನು ದ್ವೇಷಿಸುತ್ತಿದ್ದರು. ಈಗ ಅವರು ಅಳುತ್ತಿರುವುದು ನಂಬಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಇದೇ ವೇಳೆ, ಇರಾನ್‌ನ ಉಳಿದಿರುವ ನಾಯಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಸಾಮರ್ಥ್ಯ ಅಮೆರಿಕಕ್ಕೆ ಇದೆ. ಆದರೆ, ಮಾತುಕತೆ ಮುಂದುವರಿಸಲು ನಾಯಕತ್ವ ಉಳಿಯಬೇಕು ಎಂಬ ಕಾರಣಕ್ಕೆ ಅಂತಹ ನಿರ್ಧಾರ ಕೈಗೊಂಡಿಲ್ಲ ಎಂದು ಟ್ರಂಪ್‌ ತಿಳಿಸಿದ್ದಾರೆ. ಇರಾನ್‌ ಪರದಿಂದ ಒಪ್ಪಂದಕ್ಕೆ ಆಸಕ್ತಿ ವ್ಯಕ್ತವಾಗಿದ್ದು, ಮಾತುಕತೆ ಮುಂದುವರಿಸಲು ಎರಡೂ ದೇಶಗಳು ಸಮ್ಮತಿಸಿವೆ ಎಂದು ಅವರು ಹೇಳಿದ್ದಾರೆ.

ಖಮೇನಿ ಅವರ ಅಂತ್ಯಕ್ರಿಯೆ ಪೂರ್ಣಗೊಳ್ಳುವವರೆಗೆ ಅಮೆರಿಕ ಹಾಗೂ ಇರಾನ್‌ ನಡುವೆ ನಡೆಯಬೇಕಿದ್ದ ಮಾತುಕತೆಗೆ ಒಂದು ವಾರ ವಿರಾಮ ನೀಡಲು ನಿರ್ಧರಿಸಲಾಗಿದೆ. ಈ ಅವಧಿಯಲ್ಲಿ ಯಾವುದೇ ಕಡೆಯಿಂದಲೂ ದಾಳಿ ನಡೆಯುವುದಿಲ್ಲ ಎಂದು ಟ್ರಂಪ್‌ ಸ್ಪಷ್ಟಪಡಿಸಿದ್ದಾರೆ.

36 ವರ್ಷಗಳ ಕಾಲ ಇರಾನ್‌ನ ಸರ್ವೋಚ್ಚ ನಾಯಕತ್ವ ವಹಿಸಿದ್ದ ಅಲಿ ಖಮೇನಿ, ಅಮೆರಿಕ ಮತ್ತು ಇಸ್ರೇಲ್‌ ನಡೆಸಿದ ಜಂಟಿ ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಯುದ್ಧದ ಪರಿಸ್ಥಿತಿಯಿಂದಾಗಿ ಅವರ ಅಂತ್ಯಕ್ರಿಯೆ ತಡವಾಗಿ ನಡೆಯುತ್ತಿರುವುದು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ. ಈ ಬೆಳವಣಿಗೆ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸುವ ಸಾಧ್ಯತೆ ಇದೆ.

Continue Reading

ದೇಶ

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅವ್ಯವಸ್ಥೆ? ಬಿಎಲ್‌ಒಗಳ ಮೇಲೆ ಒತ್ತಡ ಆರೋಪಿಸಿದ ವಿಜಯೇಂದ್ರ

Published

on

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯಲ್ಲಿ ಗಂಭೀರ ಅವ್ಯವಸ್ಥೆ ನಡೆಯುತ್ತಿದ್ದು, ರಾಜ್ಯ ಸರ್ಕಾರ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಬೂತ್ ಮಟ್ಟದ ಅಧಿಕಾರಿಗಳ (BLO) ಮೇಲೆ ಒತ್ತಡ ಹೇರುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.

ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಧಿಕಾರಿಗಳು ಮನೆ ಮನೆಗೆ ತೆರಳಿ ನಮೂನೆಗಳನ್ನು ವಿತರಿಸುವ ಬದಲು ಕಲ್ಯಾಣ ಮಂಟಪ, ಚೌಲ್ಟ್ರಿ ಹಾಗೂ ಮಸೀದಿಗಳಲ್ಲಿ ಕುಳಿತು ಅರ್ಜಿಗಳನ್ನು ಹಂಚುತ್ತಿರುವುದು ನಿಯಮ ಉಲ್ಲಂಘನೆಯಾಗಿದೆ ಎಂದು ದೂರಿದರು. ಕೆಲವು ಶಾಸಕರ ಕಚೇರಿಗಳಲ್ಲೇ ಬಿಎಲ್‌ಒಗಳನ್ನು ಕೂರಿಸಿ ಕೆಲಸ ಮಾಡಿಸಲಾಗುತ್ತಿದೆ ಎಂದು ಆರೋಪಿಸಿ, ಈ ಕುರಿತು ಸಾಕ್ಷ್ಯ ಸಮೇತ ದೂರು ಸಲ್ಲಿಸಿರುವುದಾಗಿ ತಿಳಿಸಿದರು.

ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ವಿತರಿಸಲಾಗುತ್ತಿರುವ ಅರ್ಜಿಗಳ ಮೇಲೆ ಕಾಂಗ್ರೆಸ್ ಮುಖಂಡರ ಫೋಟೋಗಳು ಮುದ್ರಣಗೊಂಡಿರುವ ವಿಚಾರವನ್ನೂ ಚುನಾವಣಾ ಆಯೋಗದ ಗಮನಕ್ಕೆ ತಂದಿರುವುದಾಗಿ ವಿಜಯೇಂದ್ರ ಹೇಳಿದರು. ಎಸ್‌ಐಆರ್ ಪ್ರಕ್ರಿಯೆಯಲ್ಲಿ ಗೊಂದಲ ಉಂಟಾಗಿರುವ ಎಲ್ಲೆಡೆ ಮರುಪರಿಷ್ಕರಣೆ ನಡೆಸುವಂತೆ ಆಗ್ರಹಿಸಿದರು.

ಮೈಸೂರು ಸಂಸದ ಯದುವೀರ್ ಒಡೆಯರ್ ಮಾತನಾಡಿ, ನರಸಿಂಹರಾಜ ಕ್ಷೇತ್ರದಲ್ಲಿ ಮತದಾರರ ಸಂಖ್ಯೆಯಲ್ಲಿ ಅಸಹಜ ಏರಿಕೆ ಕಂಡುಬಂದಿದ್ದು, ಮನೆಗಳ ಸಂಖ್ಯೆ ಹೆಚ್ಚಳವಾಗದೆ ಮತದಾರರ ಸಂಖ್ಯೆ ಮಾತ್ರ ಹೆಚ್ಚಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದರು. ಅಕ್ರಮ ಮತದಾರರನ್ನು ತಡೆಯಲು ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸುವುದು ಅಗತ್ಯ ಎಂದು ಒತ್ತಾಯಿಸಿದರು.

ಇದೇ ವೇಳೆ, ಬರ ಪರಿಸ್ಥಿತಿಯಲ್ಲಿ ಮೈಸೂರು ದಸರಾ ಸಂದರ್ಭದಲ್ಲಿ ಕಂಬಳ ಆಯೋಜನೆಗೆ ಕೋಟಿ ಕೋಟಿ ರೂಪಾಯಿ ವೆಚ್ಚ ಮಾಡುವ ಬದಲು ಸರಳ ಹಾಗೂ ಸಾಂಪ್ರದಾಯಿಕ ದಸರಾ ಆಚರಣೆ ನಡೆಸುವುದು ಸೂಕ್ತ ಎಂದು ಯದುವೀರ್ ಒಡೆಯರ್ ಅಭಿಪ್ರಾಯಪಟ್ಟರು.

Continue Reading

Trending