ಅಪರಾಧ
Dr. Praveen Soni Admits Receiving 10% Commission for Coldrif Syrup Recommendations
Bhopal, Madhya Pradesh: A shocking revelation has emerged in the Bhopal Coldrif syrup tragedy, which claimed the lives of 22 children. Dr. Praveen Soni was reportedly receiving a 10% commission for recommending the syrup. Police have arrested Dr. Soni, and during interrogation, he admitted to receiving the commission from the pharmaceutical company Shreesan. The incident has caused widespread outrage across the country.
Incident Details:
Despite reports of severe urinary and kidney-related problems in children, some doctors, including Dr. Soni, continued to prescribe Coldrif syrup. The Bhopal District Court rejected Dr. Soni’s bail application. This tragedy highlights the severe ethical concerns in the commission-based promotion of medicines by some doctors.
WHO Alert:
Following the incident, the World Health Organization (WHO) issued a global alert regarding three syrups manufactured in India: Coldrif, Respifresh TR, and Reliance. Countries importing these syrups have been instructed to report any usage. The syrups have been linked to severe health complications in children, particularly kidney-related disorders.
Commission Over Children’s Lives:
The revelation that a 10% commission motivated the prescription of Coldrif syrup has sparked outrage. Doctors continued prescribing the syrup even after adverse effects in children were observed, raising serious questions about medical ethics.
Public Reaction:
The incident has intensified calls for stricter regulations to prevent doctors from receiving commissions for prescriptions that endanger children’s lives. Parents and citizens are demanding stringent actions to ensure child safety and ethical medical practices.
ಅಪರಾಧ
Latest : ನಿಪ್ಪಾಣಿಯಲ್ಲಿ ಆಶ್ರಯ ಮನೆ ಹಂಚಿಕೆ ವೇಳೆ ಗಲಾಟೆ: ಕಣ್ಣೀರಿಟ್ಟ ಶಾಸಕಿ ಶಶಿಕಲಾ ಜೊಲ್ಲೆ
ಬೆಳಗಾವಿ: ಜಿಲ್ಲೆಯ ನಿಪ್ಪಾಣಿ ತಾಲೂಕಿನ ಪಟ್ಟಣಕುಡಿ ಗ್ರಾಮದಲ್ಲಿ ಗುರುವಾರ ನಡೆದ ಆಶ್ರಯ ಮನೆ ಹಂಚಿಕೆ ಕಾರ್ಯಕ್ರಮ ರಾಜಕೀಯ ಗಲಾಟೆಯಿಂದ ಕಂಗಾಲಾಯಿತು. ಫಲಾನುಭವಿಗಳಿಗೆ ಲಾಟರಿ ಮೂಲಕ 950 ಮನೆಗಳನ್ನು ವಿತರಿಸುವ ಪ್ರಕ್ರಿಯೆ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ತೀವ್ರ ವಾಗ್ವಾದ ಹಾಗೂ ತಳ್ಳಾಟ ಸಂಭವಿಸಿ ಕಾರ್ಯಕ್ರಮವನ್ನು ಅಧಿಕಾರಿಗಳು ಅರ್ಧದಲ್ಲೇ ಮುಂದೂಡಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು.
ಆಶ್ರಯ ಸಮಿತಿ ಅಧಿಕಾರಿಗಳು ಹಾಗೂ ಸದಸ್ಯರ ಸಮ್ಮುಖದಲ್ಲಿ ನಿಯಮಾನುಸಾರ ಮನೆ ಹಂಚಿಕೆ ನಡೆಯುತ್ತಿತ್ತು. ಇದೇ ವೇಳೆ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ತಮ್ಮ ಬೆಂಬಲಿಗರೊಂದಿಗೆ ಕಾರ್ಯಕ್ರಮ ಸ್ಥಳಕ್ಕೆ ಆಗಮಿಸಿ ಆಕ್ರೋಶ ವ್ಯಕ್ತಪಡಿಸಿದರು. ಮನೆಗಳ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಹಾಗೂ ತಮ್ಮ ಬೆಂಬಲಿಗರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿದರು. ಜೊತೆಗೆ ಸ್ಥಳೀಯ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಸರ್ಕಾರಿ ಕಾರ್ಯಕ್ರಮಕ್ಕೆ ಆಹ್ವಾನಿಸದಿರುವುದೇಕೆ ಎಂದು ಪ್ರಶ್ನಿಸಿದರು.
ಈ ವಿಚಾರವಾಗಿ ಶಾಸಕಿ ಶಶಿಕಲಾ ಜೊಲ್ಲೆ ಮತ್ತು ಕಾಂಗ್ರೆಸ್ ಮುಖಂಡರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ಪರಿಸ್ಥಿತಿ ಉದ್ವಿಗ್ನವಾಗುತ್ತಿದ್ದಂತೆ ಉಭಯ ಪಕ್ಷಗಳ ಕಾರ್ಯಕರ್ತರು ಪರಸ್ಪರ ಕೈಕೈ ಮಿಲಾಯಿಸುವ ಹಂತಕ್ಕೂ ತಲುಪಿದರು. ತಕ್ಷಣ ಮಧ್ಯಪ್ರವೇಶಿಸಿದ ಪೊಲೀಸರು ಕಾಂಗ್ರೆಸ್ ನಾಯಕ ಲಕ್ಷ್ಮಣರಾವ್ ಚಿಂಗಳೆ ಅವರನ್ನು ಸ್ಥಳದಿಂದ ತೆರವುಗೊಳಿಸಿದರು.
ಗಲಾಟೆಯಿಂದ ಕಾರ್ಯಕ್ರಮ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಮನೆ ಸಿಗುವ ನಿರೀಕ್ಷೆಯಲ್ಲಿ ಮಕ್ಕಳೊಂದಿಗೆ ಆಗಮಿಸಿದ್ದ ನೂರಾರು ಮಹಿಳೆಯರು ನಿರಾಶರಾದರು. ಈ ದೃಶ್ಯ ಕಂಡು ಭಾವುಕರಾದ ಶಾಸಕಿ ಶಶಿಕಲಾ ಜೊಲ್ಲೆ ಸ್ಥಳದಲ್ಲೇ ಕಣ್ಣೀರು ಹಾಕಿದರು. ಬಳಿಕ ಮಾತನಾಡಿದ ಅವರು, “ಬಡ ಜನರಿಗೆ ಮನೆ ಸಿಗಬಾರದು ಎಂಬ ರಾಜಕೀಯ ಸ್ವಾರ್ಥದಿಂದ ಕೆಲವರು ಕಾರ್ಯಕ್ರಮ ಹಾಳು ಮಾಡಿದ್ದಾರೆ” ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಅಪರಾಧ
ಅಡಗೂರು ವಿಶ್ವನಾಥ್ ವಿರುದ್ಧ ಎಫ್ಐಆರ್: ಸಾಲದ ಹಣ ಕೇಳಲು ಹೋದ ವ್ಯಕ್ತಿಗೆ ಹಲ್ಲೆ ಆರೋಪ
ಮೈಸೂರು: Adagur H Vishwanath ವಿರುದ್ಧ ಸಾಲದ ಹಣ ವಾಪಸ್ ಕೇಳಲು ಹೋದ ವ್ಯಕ್ತಿಗೆ ಹಲ್ಲೆ ನಡೆಸಿದ ಆರೋಪದಡಿ Devaraja Police Station ನಲ್ಲಿ ಪ್ರಕರಣ ದಾಖಲಾಗಿದೆ.
ನ್ಯಾಯಾಲಯದ ಆದೇಶದ ಮೇರೆಗೆ ಎಫ್ಐಆರ್ ದಾಖಲಾಗಿರುವುದು ಪ್ರಕರಣಕ್ಕೆ ಮಹತ್ವದ ತಿರುವು ನೀಡಿದೆ.
₹55 ಲಕ್ಷ ಹಣ ಪಡೆದ ಆರೋಪ
ಕಾಂಗ್ರೆಸ್ ಮುಖಂಡ ಕೋಟೆಹುಂಡಿ ಮಹದೇವು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.
ದೂರುದಾರರ ಪ್ರಕಾರ, 2013ರಲ್ಲಿ ಅಡಗೂರು ವಿಶ್ವನಾಥ್ ಸಂಸದರಾಗಿದ್ದ ಅವಧಿಯಲ್ಲಿ, M. T. B. Nagaraj ಅವರ ಮುಖಾಂತರ ವಿಶ್ವನಾಥ್ ಹಾಗೂ ಪುತ್ರ ಅಮಿತ್ ದೇವರಹಟ್ಟಿಗೆ ಒಟ್ಟು ₹55 ಲಕ್ಷ ಹಣ ನೀಡಲಾಗಿತ್ತು ಎಂದು ಆರೋಪಿಸಲಾಗಿದೆ.
ಸಾಲವಾಗಿ ಪಡೆದ ಹಣವನ್ನು ಹಿಂತಿರುಗಿಸುವುದಾಗಿ ಹೇಳಿದ್ದರೂ ಹಲವು ವರ್ಷಗಳಿಂದ ಹಣ ಮರಳಿಸಿಲ್ಲ ಎಂದು ಮಹದೇವು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಹಣ ಕೇಳಲು ಹೋದ ವೇಳೆ ಹಲ್ಲೆ?
ಫೆಬ್ರವರಿ 2026ರಲ್ಲಿ ವಿಶ್ವನಾಥ್ ಅವರು ಜಲದರ್ಶಿನಿಯಲ್ಲಿ ಇದ್ದ ವೇಳೆ ಹಣದ ವಿಚಾರವಾಗಿ ಭೇಟಿ ಮಾಡಿದಾಗ, ಅವಾಚ್ಯ ಶಬ್ದಗಳಿಂದ ನಿಂದಿಸಿ ತಲೆಗೆ ಹೊಡೆದು ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ನ್ಯಾಯಾಲಯದ ಆದೇಶದ ಬಳಿಕ ಎಫ್ಐಆರ್
ಘಟನೆಯ ನಂತರ ಕೋಟೆಹುಂಡಿ ಮಹದೇವು ಅವರು ಮೊದಲು ಎನ್ಸಿಆರ್ ದಾಖಲಿಸಿದ್ದರು. ಬಳಿಕ ನ್ಯಾಯಾಲಯದ ಮೊರೆ ಹೋಗಿ ಪ್ರಕರಣ ದಾಖಲಿಸುವಂತೆ ಆದೇಶ ಪಡೆದಿದ್ದರು.
ಈ ಹಿನ್ನೆಲೆಯಲ್ಲಿ ಇದೀಗ ಅಡಗೂರು ವಿಶ್ವನಾಥ್ ವಿರುದ್ಧ ಅಧಿಕೃತವಾಗಿ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ರಾಜಕೀಯ ವಲಯದಲ್ಲಿ ಚರ್ಚೆ
ಈ ಪ್ರಕರಣ ಇದೀಗ ರಾಜಕೀಯ ವಲಯದಲ್ಲೂ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
ಆರೋಪಗಳಿಗೆ ಸಂಬಂಧಿಸಿದಂತೆ ಅಡಗೂರು ವಿಶ್ವನಾಥ್ ಅವರ ಪ್ರತಿಕ್ರಿಯೆ ಇನ್ನೂ ಲಭ್ಯವಾಗಿಲ್ಲ.
ಅಪರಾಧ
ಸಸಾರಾಮ್ನಲ್ಲಿ ಹೊತ್ತಿ ಉರಿದ ಪ್ಯಾಸೆಂಜರ್ ರೈಲು ಬೋಗಿ
ಪಾಟ್ನಾ: Bihar ರಾಜ್ಯದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪ್ಯಾಸೆಂಜರ್ ರೈಲಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಒಂದು ಬೋಗಿ ಸಂಪೂರ್ಣವಾಗಿ ಸುಟ್ಟುಹೋಗಿದೆ. ಘಟನೆಯಿಂದ ಕೆಲಕಾಲ ರೈಲು ನಿಲ್ದಾಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಪಾಟ್ನಾಗೆ ತೆರಳಲು ಸಜ್ಜಾಗಿದ್ದ ರೈಲಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ದಟ್ಟ ಹೊಗೆ ಆವರಿಸಿತು. ಬೆಂಕಿಯ ತೀವ್ರತೆಗೆ ಒಂದು ಬೋಗಿ ಸಂಪೂರ್ಣ ಸುಟ್ಟು ಕರಕಲಾಗಿದ್ದು, ರೈಲ್ವೆ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಘಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರೈಲು ಬೋಗಿಯಿಂದ ಹೊಗೆ ಆವರಿಸಿರುವ ದೃಶ್ಯಗಳು ಜನರಲ್ಲಿ ಆತಂಕ ಮೂಡಿಸಿವೆ.
ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್ ಸರ್ಕ್ಯೂಟ್ನಿಂದ ಈ ಅಗ್ನಿ ಅವಘಡ ಸಂಭವಿಸಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಆದರೆ ನಿಖರ ಕಾರಣ ಪತ್ತೆಹಚ್ಚಲು ರೈಲ್ವೆ ಇಲಾಖೆ ತನಿಖೆ ಆರಂಭಿಸಿದೆ.
ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂಬುದು ಸಮಾಧಾನದ ಸಂಗತಿಯಾಗಿದೆ. ಪ್ಲಾಟ್ಫಾರ್ಮ್ನಲ್ಲಿ ಇದ್ದ ಪ್ರಯಾಣಿಕರು ಬೆಂಕಿಯ ಜ್ವಾಲೆಗಳನ್ನು ಕಂಡು ಕೆಲಕಾಲ ಭಯಭೀತರಾಗಿದ್ದರು. ರೈಲ್ವೆ ಸಿಬ್ಬಂದಿಯ ತ್ವರಿತ ಕ್ರಮದಿಂದ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು.
ಇದಕ್ಕೂ ಮುನ್ನ ಮಧ್ಯಪ್ರದೇಶದ Ratlam ನಲ್ಲಿ ದೆಹಲಿಗೆ ತೆರಳುತ್ತಿದ್ದ Rajdhani Express ರೈಲಿನ ಎಸಿ ಕೋಚ್ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಅದರ ಮರುದಿನವೇ ಬಿಹಾರದಲ್ಲಿ ಮತ್ತೊಂದು ರೈಲು ಅಗ್ನಿ ಅವಘಡ ಸಂಭವಿಸಿರುವುದು ಪ್ರಯಾಣಿಕರಲ್ಲಿ ಆತಂಕ ಹೆಚ್ಚಿಸಿದೆ.
ರೈಲುಗಳಲ್ಲಿ ನಿರಂತರವಾಗಿ ಸಂಭವಿಸುತ್ತಿರುವ ಅಗ್ನಿ ಅವಘಡಗಳ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮಗಳನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ ಎಂಬ ಅಭಿಪ್ರಾಯಗಳು ಕೇಳಿಬರುತ್ತಿವೆ.
ಹೆಚ್ಚಿನ ಸುದ್ದಿಗಳಿಗಾಗಿ Hosa Suddi Kannada News Portal ಓದಿ.
-
ಕ್ರೀಡೆ8 hours agoಹಾಂಗ್ ಕಾಂಗ್ನಲ್ಲಿ ನಡೆಯುವ ಏಷ್ಯನ್ ಚಾಂಪಿಯನ್ಶಿಪ್ಗೆ ಕರ್ನಾಟಕದ ಇಬ್ಬರು ಆಯ್ಕೆ
-
ದೇಶ12 hours ago59 ವರ್ಷಗಳ ಬಳಿಕ ತಮಿಳುನಾಡು ಸಚಿವ ಸಂಪುಟಕ್ಕೆ ಕಾಂಗ್ರೆಸ್ ಎಂಟ್ರಿ! ಇಂದು ವಿಜಯ್ ಕ್ಯಾಬಿನೆಟ್ ವಿಸ್ತರಣೆ
-
ದೇಶ11 hours agoಬಿಜೆಪಿಗಿಂತ ವೇಗವಾಗಿ ಬೆಳೆದ ‘Cockroach Janta Party’!
-
ದೇಶ6 hours ago“ನಾವು ಯಾರೂ ಸುರಕ್ಷಿತರಲ್ಲ”: ಮುಂದಿನ ಮಹಾಮಾರಿಯ ಬಗ್ಗೆ ಜಾಗತಿಕ ವರದಿ ಆತಂಕ
-
ದೇಶ6 hours agoCockroach Janata Party ಖಾತೆ ತಡೆ: ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆ
-
ಅಪರಾಧ10 hours agoLatest : ನಿಪ್ಪಾಣಿಯಲ್ಲಿ ಆಶ್ರಯ ಮನೆ ಹಂಚಿಕೆ ವೇಳೆ ಗಲಾಟೆ: ಕಣ್ಣೀರಿಟ್ಟ ಶಾಸಕಿ ಶಶಿಕಲಾ ಜೊಲ್ಲೆ
-
ದೇಶ10 hours agoಮೆಲೊಡಿ ಟ್ರೆಂಡ್ಗೆ ಎಂಟ್ರಿ ಕೊಟ್ಟ ಬಾಲಿವುಡ್ ಜೋಡಿ: ಸೋನಾಕ್ಷಿ ವಿಡಿಯೋ ಸದ್ದು
-
ದೇಶ10 hours ago‘ಒಂದು ರಾಷ್ಟ್ರ, ಒಂದು ಚುನಾವಣೆ’ ಜಾರಿಯಾದರೆ ₹7 ಲಕ್ಷ ಕೋಟಿ ಉಳಿತಾಯ: ಜೆಪಿಸಿ ಸಮಿತಿ
