Connect with us

ಆರೋಗ್ಯ

“ಜನರ ಸಂಜೀವಿನಿ” ಆಗಿರುವ ಜೈನ್ ಮಿಷನ್ ಆಸ್ಪತ್ರೆ: ಕೆ.ವಿ. ನವೀನ್ ಕಿರಣ್

Published

on

ಚಿಕ್ಕಬಳ್ಳಾಪುರ: ಜೈನ್ ಆಸ್ಪತ್ರೆಯ ಉಚಿತ ಡಯಾಲಿಸಿಸ್ ಸೇವೆ ನಿಜಕ್ಕೂ ಸಮಾಜಕ್ಕೆ ಮಾದರಿಯಾಗಿದೆ ಎಂದು ಕೆ.ವಿ. ನವೀನ್ ಕಿರಣ್ ಪ್ರಶಂಸಿಸಿದರು. ನಗರದ ಹೊರವಲಯದ ನಂದಿ ಕೋಲ್ಡ್ ಸ್ಟೋರೇಜ್ ಎದುರಿಗಿರುವ ಜೈನ್ ಆಸ್ಪತ್ರೆಯಲ್ಲಿ ಶನಿವಾರ ನಡೆದ ದೀಪಾವಳಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಜನರು ಆರೋಗ್ಯ ಚಿಕಿತ್ಸೆಗಾಗಿ ಬೆಂಗಳೂರಿಗೆ ತೆರಳಬೇಕಾಗುತ್ತಿತ್ತು. ಆದರೆ ಕಳೆದ ಮೂರು ವರ್ಷಗಳಿಂದ ಜೈನ್ ಮಿಷನ್ ಆಸ್ಪತ್ರೆ ಈ ಅವಲಂಬನೆಯನ್ನು ತಪ್ಪಿಸಿ ಗ್ರಾಮೀಣ ಜನರ ಸಂಜೀವಿನಿಯಂತೆ ಸೇವೆ ನೀಡುತ್ತಿದೆ. ಪ್ರತಿ ಡಯಾಲಿಸಿಸ್‌ಗೆ ರೂ.1,000 ವೆಚ್ಚವಾಗುವ ಸಂದರ್ಭದಲ್ಲೂ, ಆಸ್ಪತ್ರೆ ದಿನವೂ 30 ಮಂದಿಗೆ ಉಚಿತ ಡಯಾಲಿಸಿಸ್ ಸೇವೆ ನೀಡುತ್ತಿರುವುದು ವಿಶೇಷ.

ಇದೇ ರೀತಿ, ಆಸ್ಪತ್ರೆಯು ನಿಯಮಿತವಾಗಿ ಆರೋಗ್ಯ ಕಾರ್ಯಾಗಾರಗಳು ಮತ್ತು ಜಾಗೃತಿ ಶಿಬಿರಗಳನ್ನು ಆಯೋಜಿಸಿ ನಾಗರೀಕರಲ್ಲಿ ಆರೋಗ್ಯ ಜಾಗೃತಿ ಮೂಡಿಸುತ್ತಿದೆ. ಡಾ. ಸೋಲಂಕಿ ಅವರ ನೇತೃತ್ವದಲ್ಲಿ ಉಚಿತ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಮತ್ತು ನೇತ್ರಪರೀಕ್ಷೆ ನಡೆಸುತ್ತಿರುವುದು ಹಿರಿಯ ನಾಗರಿಕರಿಗೆ ಆಶಾಕಿರಣವಾಗಿದೆ.

ಡಾ. ನರಪತ್ ಸೋಲಂಕಿ ಮಾತನಾಡಿ, “ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶೇ.40 ಮಂದಿಗೆ ಮಧುಮೇಹ ಖಾಯಿಲೆ ಇದೆ. ಇದನ್ನು ಗಮನಿಸಿ ಶೀಘ್ರದಲ್ಲೇ ಹೃದ್ರೋಗ, ನರರೋಗ ಮತ್ತು ಮಧುಮೇಹ ವಿಭಾಗ ತೆರೆಯುವ ಉದ್ದೇಶವಿದೆ. ಜನರ ಸಹಕಾರ ದೊರೆತರೆ ಬಡವರಿಗೆ ಕೈಗೆಟುಕುವ ದರದಲ್ಲಿ ಉತ್ತಮ ಚಿಕಿತ್ಸೆ ನೀಡುತ್ತೇವೆ,” ಎಂದರು.

ಕಾರ್ಯಕ್ರಮದಲ್ಲಿ ಉತ್ತಮ್‌ಚಂದ್ ಜೈನ್, ರಾಕೇಶ್ ಜೈನ್, ವೈದ್ಯರು ಹಾಗೂ ನರ್ಸಿಂಗ್ ಸಿಬ್ಬಂದಿ ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

ಥೈರಾಯ್ಡ್‌ಗೆ ಕೊತ್ತಂಬರಿ ಬೀಜ ಮತ್ತು ತ್ರಿಕಾಟು ಚೂರ್ಣ: ಆಯುರ್ವೇದದ ಪರಿಣಾಮಕಾರಿ ಮನೆಮದ್ದು

Published

on

1. ಥೈರಾಯ್ಡ್ ಸಮಸ್ಯೆ ಏಕೆ ಕಾಡುತ್ತದೆ?

ಕುತ್ತಿಗೆಯಲ್ಲಿರುವ ಸಣ್ಣ ಗ್ರಂಥಿಯಾದ ಥೈರಾಯ್ಡ್, ದೇಹದ ಪ್ರಮುಖ ಕಾರ್ಯಗಳನ್ನು ನಿಯಂತ್ರಿಸುತ್ತದೆ. ಹಾರ್ಮೋನ್ ಅಸಮತೋಲನ ತೂಕ ಏರುಪೇರು, ಆಯಾಸ, ಕೂದಲು ಉದುರುವಿಕೆ ಮತ್ತು ಮನಸ್ಥಿತಿ ಬದಲಾವಣೆಗೆ ಕಾರಣವಾಗುತ್ತದೆ.

2. ಕೊತ್ತಂಬರಿ ಬೀಜದ ಔಷಧೀಯ ಗುಣಗಳು

ಪೋಷಕಾಂಶ ಮತ್ತು ಉತ್ಕರ್ಷಣ ನಿರೋಧಕ ಗುಣಗಳಿಂದ ಸಮೃದ್ಧವಾದ ಕೊತ್ತಂಬರಿ ಬೀಜಗಳು ಜೀರ್ಣಕ್ರಿಯೆ ಸುಧಾರಿಸಿ, ದೇಹ ತಂಪಾಗಿಸಿ, ಚಯಾಪಚಯ ಸಮತೋಲನ ಕಾಪಾಡಲು ನೆರವಾಗುತ್ತವೆ ಎಂದು ಆಯುರ್ವೇದ ಹೇಳುತ್ತದೆ.

3. ತ್ರಿಕಾಟು ಚೂರ್ಣದ ಶಕ್ತಿ ಏನು?

ಒಣ ಶುಂಠಿ, ಕರಿಮೆಣಸು ಮತ್ತು ಉದ್ದ ಮೆಣಸು ಸೇರಿ ತಯಾರಾಗುವ ತ್ರಿಕಾಟು ಚೂರ್ಣ ಜೀರ್ಣ ಶಕ್ತಿ ಹೆಚ್ಚಿಸಿ, ಅನಿಲ-ಉಬ್ಬರ ಸಮಸ್ಯೆ ಕಡಿಮೆ ಮಾಡುತ್ತದೆ ಎಂದು ಸಾಂಪ್ರದಾಯಿಕ ವೈದ್ಯ ಪದ್ಧತಿ ತಿಳಿಸುತ್ತದೆ.

4. ಈ ಮಿಶ್ರಣ ತಯಾರಿಸುವುದು ಹೇಗೆ?

ಒಂದು ಟೀಚಮಚ ಕೊತ್ತಂಬರಿ ಬೀಜವನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿ, ಬೆಳಿಗ್ಗೆ ಕುದಿಸಿ ಸೋಸಿ ತಣ್ಣಗಾದ ಬಳಿಕ ಒಂದು ಚಿಟಿಕೆ ತ್ರಿಕಾಟು ಚೂರ್ಣ ಬೆರೆಸಿ ಕುಡಿಯಬಹುದು.

5. ಎಚ್ಚರಿಕೆ ವಹಿಸಬೇಕಾದ ಅಂಶಗಳು

ಇದು ವೈದ್ಯರು ಶಿಫಾರಸು ಮಾಡಿದ ಥೈರಾಯ್ಡ್ ಔಷಧಿಗಳಿಗೆ ಪರ್ಯಾಯವಲ್ಲ. ತ್ರಿಕಾಟು ಚೂರ್ಣದ ಪ್ರಮಾಣ ಹೆಚ್ಚಾದರೆ ಹೊಟ್ಟೆ ಉರಿ ಉಂಟಾಗಬಹುದು. ಸಮತೋಲಿತ ಆಹಾರ, ಆರೋಗ್ಯಕರ ಜೀವನಶೈಲಿ ಜೊತೆಗೆ ವೈದ್ಯರ ಸಲಹೆ ಪಡೆದು ಮಾತ್ರ ಈ ಮನೆಮದ್ದು ಅನುಸರಿಸುವುದು ಸೂಕ್ತ.

(ಇದು ಸಾಮಾನ್ಯ ಮಾಹಿತಿಗಾಗಿ ಮಾತ್ರ. ಥೈರಾಯ್ಡ್ ಸಮಸ್ಯೆ ಇರುವವರು ಈ ಮನೆಮದ್ದು ಪ್ರಯತ್ನಿಸುವ ಮೊದಲು ವೈದ್ಯರನ್ನು ಸಂಪರ್ಕಿಸಬೇಕು.)

Continue Reading

ಆರೋಗ್ಯ

Bengaluru ಹೆಚ್‌ಸಿಜಿ ಆಸ್ಪತ್ರೆಗೆ ಕೇಂದ್ರದ ಕಠಿಣ ಶಾಕ್: 2 ವರ್ಷ ಹೊಸ ಕ್ಲಿನಿಕಲ್ ಟ್ರಯಲ್‌ಗೆ ಬ್ರೇಕ್!

Published

on

ಬೆಂಗಳೂರು: ನಗರದ ಪ್ರತಿಷ್ಠಿತ ಹೆಚ್‌ಸಿಜಿ (HCG) ಕ್ಯಾನ್ಸರ್ ಆಸ್ಪತ್ರೆಯ ನೈತಿಕ ಸಮಿತಿಗೆ (Ethics Committee) ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ (CDSCO) ಭಾರೀ ಆಘಾತ ನೀಡಿದೆ. ಮಾನವ ಪ್ರಯೋಗಗಳ (Clinical Trials) ವೇಳೆ ಗಂಭೀರ ನಿಯಮ ಉಲ್ಲಂಘನೆಗಳು ಹಾಗೂ ಸುರಕ್ಷತಾ ಲೋಪಗಳು ಕಂಡುಬಂದ ಹಿನ್ನೆಲೆಯಲ್ಲಿ, ಮುಂದಿನ 24 ತಿಂಗಳುಗಳ ಕಾಲ ಯಾವುದೇ ಹೊಸ ಕ್ಲಿನಿಕಲ್ ಟ್ರಯಲ್‌ಗಳನ್ನು ನಡೆಸದಂತೆ ಕೇಂದ್ರ ಸರ್ಕಾರ ನಿಷೇಧ ಹೇರಿದೆ.

ಆಸ್ಪತ್ರೆಯ ನೈತಿಕ ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ನಿವೃತ್ತ ನ್ಯಾಯಮೂರ್ತಿ ಪಿ. ಕೃಷ್ಣಭಟ್ ಸಲ್ಲಿಸಿದ್ದ ಲಿಖಿತ ದೂರಿನ ಆಧಾರದ ಮೇಲೆ ಕೇಂದ್ರ ಮತ್ತು ರಾಜ್ಯ ಔಷಧ ನಿಯಂತ್ರಣ ಸಂಸ್ಥೆಗಳು ಜಂಟಿ ತನಿಖೆ ನಡೆಸಿದ್ದವು. ತನಿಖೆಯಲ್ಲಿ ಹಲವು ಗಂಭೀರ ಅಕ್ರಮಗಳು ಬೆಳಕಿಗೆ ಬಂದಿದ್ದು, ನೈತಿಕ ಸಮಿತಿಯು ನಿಯಮಾವಳಿಗಳನ್ನು ಪಾಲಿಸದಿರುವುದು ದೃಢಪಟ್ಟಿದೆ.

ವರದಿಗಳ ಪ್ರಕಾರ, ಔಷಧ ಸಂಶೋಧನಾ ಪ್ರಯೋಗಗಳ ಸಂದರ್ಭದಲ್ಲಿ ಕೆಲವು ರೋಗಿಗಳು ಮೃತಪಟ್ಟಿದ್ದರೂ, ಆ ಮಾಹಿತಿಯನ್ನು ನಿಯಂತ್ರಣ ಸಂಸ್ಥೆಗೆ ನಿಗದಿತ ಅವಧಿಯಲ್ಲಿ ಸಲ್ಲಿಸಲಾಗಿಲ್ಲ. ಕೆಲವು ಪ್ರಕರಣಗಳಲ್ಲಿ ಸಾವಿನ ವರದಿಗಳನ್ನೇ ದಾಖಲಿಸದೇ ಮುಚ್ಚಿಡಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಅಲ್ಲದೆ, ಪ್ರಯೋಗಗಳಿಂದ ಹಾನಿಗೊಳಗಾದ ಅಥವಾ ಮೃತಪಟ್ಟ ರೋಗಿಗಳ ಕುಟುಂಬಗಳಿಗೆ ನೀಡಬೇಕಾದ ಪರಿಹಾರ ಧನ ವಿತರಣೆ ಕುರಿತು ಅಗತ್ಯ ದಾಖಲೆಗಳ ಕೊರತೆಯೂ ಕಂಡುಬಂದಿದೆ.

ಹೊಸ ಔಷಧ ಪ್ರಯೋಗಗಳಿಗೆ ಒಳಗಾಗುವ ರೋಗಿಗಳ ಸುರಕ್ಷತೆ ಮತ್ತು ವೈದ್ಯಕೀಯ ಆರೈಕೆಯನ್ನು ಖಚಿತಪಡಿಸುವಲ್ಲಿ ಆಸ್ಪತ್ರೆ ವಿಫಲವಾಗಿದೆ ಎಂದು ತನಿಖಾ ವರದಿ ಉಲ್ಲೇಖಿಸಿದೆ. ಇದರ ಹಿನ್ನೆಲೆಯಲ್ಲಿ ಸಿಡಿಎಸ್‌ಸಿಒ ಕಠಿಣ ಕ್ರಮ ಕೈಗೊಂಡಿದೆ.

ಆದರೆ, ಈ ನಿಷೇಧವು ಕೇವಲ ಹೊಸ ಕ್ಲಿನಿಕಲ್ ಟ್ರಯಲ್‌ಗಳಿಗೆ ಮಾತ್ರ ಅನ್ವಯವಾಗುತ್ತದೆ. ಆಸ್ಪತ್ರೆಯ ಸಾಮಾನ್ಯ ಕ್ಯಾನ್ಸರ್ ಚಿಕಿತ್ಸೆ, ತಪಾಸಣೆ ಹಾಗೂ ಈಗಾಗಲೇ ನಡೆಯುತ್ತಿರುವ ಪ್ರಯೋಗಗಳು ಮುಂದುವರಿಯಲಿವೆ. ಆದರೆ ಚಾಲ್ತಿಯಲ್ಲಿರುವ ಎಲ್ಲಾ ಪ್ರಯೋಗಗಳ ಕುರಿತು ಪ್ರತಿ ತಿಂಗಳು ರೋಗಿಗಳ ಸುರಕ್ಷತಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವುದು ಕಡ್ಡಾಯವಾಗಿದೆ.

ಸಿಡಿಎಸ್‌ಸಿಒ ಆದೇಶವನ್ನು ಪರಿಶೀಲಿಸುತ್ತಿರುವ ಹೆಚ್‌ಸಿಜಿ ಆಡಳಿತ ಮಂಡಳಿ, ಮುಂದಿನ ಕಾನೂನು ಕ್ರಮಗಳ ಕುರಿತು ತಜ್ಞರೊಂದಿಗೆ ಸಮಾಲೋಚನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

Continue Reading

ಆರೋಗ್ಯ

ಫಾಸ್ಟ್ ಲೈಫ್‌ನಲ್ಲಿ ಯೋಗದ ಮಹತ್ವ ಹೆಚ್ಚಳ: ಆರೋಗ್ಯಕರ ಬದುಕಿಗೆ ಯೋಗವೇ ಮಂತ್ರ

Published

on

By

ನಾಳೆ ಜಗತ್ತಿನಾದ್ಯಂತ International Day of Yogaವನ್ನು ಆಚರಿಸಲಾಗುತ್ತಿದೆ. ಆಧುನಿಕ ಜೀವನಶೈಲಿಯಲ್ಲಿ ಕೆಲಸದ ಒತ್ತಡ, ಸಮಯದ ಕೊರತೆ, ಮಾನಸಿಕ ಆತಂಕ ಹಾಗೂ ಅನಾರೋಗ್ಯಕರ ಆಹಾರ ಪದ್ಧತಿಗಳಿಂದ ಜನರು ವಿವಿಧ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಯೋಗವು ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡುವ ಪರಿಣಾಮಕಾರಿ ಮಾರ್ಗವಾಗಿ ಹೊರಹೊಮ್ಮಿದೆ.ತಜ್ಞರ ಪ್ರಕಾರ, ಪ್ರತಿದಿನ ಕೇವಲ 20 ರಿಂದ 30 ನಿಮಿಷಗಳ ಯೋಗಾಭ್ಯಾಸವು ದೇಹದ ಲವಚಿಕತೆಯನ್ನು ಹೆಚ್ಚಿಸುವುದರ ಜೊತೆಗೆ ಮನಸ್ಸಿಗೆ ಶಾಂತಿ ನೀಡುತ್ತದೆ. ಯೋಗದ ಮೂಲಕ ಒತ್ತಡವನ್ನು ಕಡಿಮೆ ಮಾಡಬಹುದು, ಏಕಾಗ್ರತೆಯನ್ನು ವೃದ್ಧಿಸಬಹುದು ಹಾಗೂ ಉತ್ತಮ ನಿದ್ರೆಯನ್ನು ಪಡೆಯಬಹುದು.ಇಂದಿನ ವೇಗದ ಬದುಕಿನಲ್ಲಿ ಮೊಬೈಲ್, ಕಂಪ್ಯೂಟರ್ ಮತ್ತು ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದ ಯುವಜನರಲ್ಲಿ ಮಾನಸಿಕ ಒತ್ತಡ ಹೆಚ್ಚಾಗುತ್ತಿದೆ. ಯೋಗ ಮತ್ತು ಪ್ರಾಣಾಯಾಮ ಅಭ್ಯಾಸಗಳು ಈ ಸಮಸ್ಯೆಗಳನ್ನು ನಿಯಂತ್ರಿಸಲು ನೆರವಾಗುತ್ತವೆ ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.ನಾಳೆಯ ಯೋಗ ದಿನಾಚರಣೆಯ ಅಂಗವಾಗಿ ದೇಶದ ವಿವಿಧ ನಗರಗಳಲ್ಲಿ ಸಾಮೂಹಿಕ ಯೋಗ ಪ್ರದರ್ಶನ, ಆರೋಗ್ಯ ಜಾಗೃತಿ ಕಾರ್ಯಕ್ರಮಗಳು ಹಾಗೂ ವಿಶೇಷ ಕಾರ್ಯಾಗಾರಗಳು ನಡೆಯಲಿವೆ. ಶಾಲೆಗಳು, ಕಾಲೇಜುಗಳು ಮತ್ತು ವಿವಿಧ ಸಂಸ್ಥೆಗಳು ಯೋಗದ ಮಹತ್ವದ ಬಗ್ಗೆ ಅರಿವು ಮೂಡಿಸಲು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿವೆ.

ವರದಿ: ಯೋಗವು ಕೇವಲ ವ್ಯಾಯಾಮವಲ್ಲ; ಅದು ಆರೋಗ್ಯಕರ ಮತ್ತು ಸಂತೋಷದಾಯಕ ಜೀವನದತ್ತ ಕೊಂಡೊಯ್ಯುವ ಜೀವನಶೈಲಿಯಾಗಿದೆ.

“ಆರೋಗ್ಯಕರ ದೇಹ, ಶಾಂತ ಮನಸ್ಸು ಮತ್ತು ಸಮತೋಲನಯುತ ಜೀವನಕ್ಕಾಗಿ ಯೋಗವನ್ನು ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಳ್ಳಬೇಕು” ಎಂಬ ಸಂದೇಶದೊಂದಿಗೆ ಈ ಬಾರಿಯ ಯೋಗ ದಿನವನ್ನು ಆಚರಿಸಲಾಗುತ್ತಿದೆ.

Continue Reading

Trending