ಅಪರಾಧ
ಹೆಣ್ಣು ಮಗು ಗರ್ಭಪಾತ: ಮೈಸೂರುಲ್ಲೊಂದು ಅಮಾನುಷ ಘಟನೆಯ ಪತ್ತೆ
ಮೈಸೂರು: ಮೈಸೂರು ತಾಲ್ಲೂಕಿನ ಹನುಗನಹಳ್ಳಿಯಲ್ಲಿ ಮಾನವೀಯತೆಯನ್ನು ಬೆಚ್ಚಿಬೀಳಿಸುವ ಅಕ್ರಮ ಸ್ಕ್ಯಾನಿಂಗ್ ಕೇಂದ್ರ ಪತ್ತೆಯಾಗಿದೆ. ಐಷಾರಾಮಿ ಮನೆಯೊಂದನ್ನು ಸ್ಕ್ಯಾನಿಂಗ್ ಸೆಂಟರ್ ಆಗಿ ಮಾರ್ಪಡಿಸಿ, ಗರ್ಭಿಣಿಯ ಹೊಟ್ಟೆಯಲ್ಲಿನ ಮಗುವಿನ ಲಿಂಗ ಪತ್ತೆ ಹಾಗೂ ಹೆಣ್ಣು ಮಗುವಿದ್ದರೆ ಗರ್ಭಪಾತ ಮಾಡುವ ಕೃತ್ಯ ನಡೆಯುತ್ತಿತ್ತು.
ಆರೋಗ್ಯ ಇಲಾಖೆ ಮತ್ತು ಮೈಸೂರು ಪೊಲೀಸರ ಜಂಟಿ ತಂಡವು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದೆ. ಮನೆಯಲ್ಲಿ ಅತಿ ಉನ್ನತ ಮಟ್ಟದ ಸ್ಕ್ಯಾನಿಂಗ್ ಉಪಕರಣಗಳನ್ನು ಅಕ್ರಮವಾಗಿ ಬಳಸಿ, ಗ್ರಾಮೀಣ ಪ್ರದೇಶದ ಮಹಿಳೆಯರನ್ನು ಟಾರ್ಗೆಟ್ ಮಾಡಿ ಲಕ್ಷಾಂತರ ರೂಪಾಯಿಗಳ ವಿನಿಮಯದಲ್ಲಿ ಈ ಅಮಾನುಷ ಕೆಲಸ ಮಾಡಲಾಗುತ್ತಿತ್ತು ಎಂದು ಮಾಹಿತಿ ಸಿಕ್ಕಿದೆ.
ಆರೋಗ್ಯ ಇಲಾಖೆ ಉಪನಿರ್ದೇಶಕ ಡಾ. ವಿವೇಕ್, ಮಂಡ್ಯ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮೋಹನ್ ಮತ್ತು ಮೈಸೂರು ಡಿಎಚ್ಓ ಡಾ. ಪಿ.ಸಿ. ಕುಮಾರಸ್ವಾಮಿ ನೇತೃತ್ವದಲ್ಲಿ ತಂಡವು ಕಾರ್ಯಾಚರಣೆ ನಡೆಸಿ ಅಕ್ರಮ ಉಪಕರಣಗಳನ್ನು ವಶಪಡಿಸಿಕೊಂಡಿದೆ. ಸ್ಥಳೀಯರು ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು, ಮೈಸೂರಿನಲ್ಲಿ ಇಂತಹ ಇನ್ನಷ್ಟು ಅಕ್ರಮ ಸ್ಕ್ಯಾನಿಂಗ್ ಕೇಂದ್ರಗಳಿವೆ ಎಂಬ ಬಗ್ಗೆ ತೀವ್ರ ತನಿಖೆ ಆರಂಭಿಸಿದ್ದಾರೆ.
ಅಪರಾಧ
ಹಸಿ–ಒಣ ಕಸ ಬೇರ್ಪಡಿಸಲು ಸೂಚನೆ: ದಾವಣಗೆರೆಯಲ್ಲಿ ಪೌರ ಕಾರ್ಮಿಕರ ಮೇಲೆ ಹಲ್ಲೆ
ದಾವಣಗೆರೆ: ಹಸಿ ಕಸ ಮತ್ತು ಒಣ ಕಸ ಬೇರ್ಪಡಿಸಿ ನೀಡಲು ತಿಳಿಸಿದ್ದ ಕಾರಣಕ್ಕೆ ಪೌರ ಕಾರ್ಮಿಕರ ಮೇಲೆ ಹಲ್ಲೆ ನಡೆದ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ಮೆಹಬೂಬ್ ನಗರದಲ್ಲಿ ನಡೆದ ಈ ಘಟನೆಗೆ ಸಂಬಂಧಿಸಿದಂತೆ ಕಾರ್ಮಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಲ್ಲೆಗೊಳಗಾದವರು ಕರಿಬಸಪ್ಪ ಎಂಬ ಪೌರ ಕಾರ್ಮಿಕ ಹಾಗೂ ವಾಹನ ಚಾಲಕ ಎಂದು ತಿಳಿದುಬಂದಿದೆ. ಪ್ರತಿದಿನ ಮನೆಮನೆಗೆ ತೆರಳಿ ತ್ಯಾಜ್ಯ ಸಂಗ್ರಹಣೆ ಮಾಡುವ ವೇಳೆ ಸ್ಥಳೀಯ ನಿವಾಸಿಯೊಬ್ಬರೊಂದಿಗೆ ವಾಗ್ವಾದ ಉಂಟಾಗಿ, ಅದು ಹಲ್ಲೆಗೆ ತಿರುಗಿದೆ.
ಘಟನೆ ಹೇಗೆ ನಡೆದಿದೆ?
ಪೌರ ಕಾರ್ಮಿಕರು ಬೆಳಗ್ಗೆ ಕಸ ಸಂಗ್ರಹಣೆಗೆ ಮೆಹಬೂಬ್ ನಗರಕ್ಕೆ ತೆರಳಿದ್ದರು. ಈ ವೇಳೆ ಒಬ್ಬ ನಿವಾಸಿ ಹಸಿ ಕಸ ಮತ್ತು ಒಣ ಕಸವನ್ನು ಒಂದೇ ಬಕೆಟ್ನಲ್ಲಿ ನೀಡಿದ್ದಾನೆ. ಜೊತೆಗೆ ಮಗುವಿನ ಡೈಪರ್ ಕೂಡ ಸೇರಿಸಿದ್ದಾನೆ.
“ಡೈಪರ್ ಅನ್ನು ಪ್ರತ್ಯೇಕವಾಗಿ ಕೊಡಿ” ಎಂದು ಪೌರ ಕಾರ್ಮಿಕರು ತಿಳಿಸಿದಾಗ ಮಾತಿನ ಚಕಮಕಿ ಉಂಟಾಗಿದೆ. ಮಾತಿಗೆ ಮಾತು ಬೆಳೆದು ಸ್ಥಳೀಯರು ಪೌರ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಪೊಲೀಸ್ ಠಾಣೆ ಎದುರು ಪ್ರತಿಭಟನೆ
ಘಟನೆ ಖಂಡಿಸಿ ಪೌರ ಕಾರ್ಮಿಕರು ಮತ್ತು ಕಸ ಸಂಗ್ರಹಿಸುವ ವಾಹನ ಚಾಲಕರು Azad Nagar Police Station ಮುಂಭಾಗ ಜಮಾಯಿಸಿ ಪ್ರತಿಭಟನೆ ನಡೆಸಿದರು. ಹಲ್ಲೆ ಮಾಡಿದವರನ್ನು ಬಂಧಿಸುವವರೆಗೂ ಸ್ಥಳದಿಂದ ತೆರಳುವುದಿಲ್ಲ ಎಂದು ಪಟ್ಟು ಹಿಡಿದರು.
“ನಮ್ಮ ಮೇಲೆ ಪದೇಪದೇ ಹಲ್ಲೆ ನಡೆಯುತ್ತಿದೆ. ಕೆಲಸ ಮಾಡಲು ಭಯವಾಗುತ್ತಿದೆ. ನಮಗೆ ಭದ್ರತೆ ಒದಗಿಸಬೇಕು” ಎಂದು ಕಾರ್ಮಿಕರು ಆಗ್ರಹಿಸಿದರು.
ಮೆಹಬೂಬ್ ನಗರ, ಅಜಾದ್ ನಗರ, ಶಿವನಗರ ಸೇರಿದಂತೆ ಕೆಲ ಪ್ರದೇಶಗಳಲ್ಲಿ ಕೆಲಸ ಮಾಡಲು ಆತಂಕವಿದೆ ಎಂದು ತಿಳಿಸಿದ್ದಾರೆ. ಕೂಡಲೇ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಅಪರಾಧ
KANPUR ಲ್ಯಾಂಬೋರ್ಗಿನಿ ಅಪಘಾತ: ಕೆಕೆ ಮಿಶ್ರಾ ಪುತ್ರ ಶಿವಂ ಬಂಧನ
ಲಕ್ನೋ: ಕಾನ್ಪುರದಲ್ಲಿ ಇತ್ತೀಚೆಗೆ ನಡೆದ ಲ್ಯಾಂಬೋರ್ಗಿನಿ (Lamborghini Revuelto) ಕಾರು ಅಪಘಾತ ಪ್ರಕರಣದಲ್ಲಿ ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಅವರ ಪುತ್ರ ಶಿವಂ ಮಿಶ್ರಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನದ ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಶೀಘ್ರದಲ್ಲೇ ಕೋರ್ಟ್ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಕಾನ್ಪುರದ ವಿಐಪಿ ರಸ್ತೆಯಲ್ಲಿ ಶಿವಂ ಮಿಶ್ರಾ ಚಲಾಯಿಸುತ್ತಿದ್ದ ಲ್ಯಾಂಬೋರ್ಗಿನಿ ರೆವೆಲ್ಟೊ ಕಾರು ಪಾದಚಾರಿಗಳು ಹಾಗೂ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿತ್ತು. ಈ ಅಪಘಾತದಲ್ಲಿ ಆರು ಮಂದಿ ಗಾಯಗೊಂಡಿದ್ದರು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಶಿವಂ ಮಿಶ್ರಾ ಕುಡಿದ ಮತ್ತಿನಲ್ಲಿ ಅತಿ ವೇಗದಲ್ಲಿ ಕಾರು ಚಲಾಯಿಸುತ್ತಿದ್ದರು ಎನ್ನಲಾಗಿದೆ.
ವೇಗವಾಗಿ ಬಂದ ಕಾರು ಮೊದಲು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು, ಬಳಿಕ ನಿಲ್ಲಿಸಿದ್ದ ರಾಯಲ್ ಎನ್ಫೀಲ್ಡ್ ಬೈಕ್ಗೆ ಗುದ್ದಿತ್ತು. ಬೈಕ್ ಕಾರಿನ ಕೆಳಗೆ ಸಿಲುಕಿ ಕೆಲ ಅಂತರ ಎಳೆದುಕೊಂಡು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಿಂತಿತ್ತು. ಗಾಯಗೊಂಡವರಲ್ಲಿ ತೌಫಿಕ್ ಅಹ್ಮದ್ ಅವರ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಇತರರಿಗೆ ಮೂಳೆ ಮುರಿತ ಉಂಟಾಗಿದೆ.
ಪ್ರಾರಂಭದಲ್ಲಿ ಕುಟುಂಬದ ವಕೀಲರು ಡ್ರೈವರ್ ಮೋಹನ್ ಕಾರು ಚಲಾಯಿಸುತ್ತಿದ್ದರೆಂದು ಹೇಳಿದ್ದರೂ, ಸಿಸಿಟಿವಿ ದೃಶ್ಯಾವಳಿ ಚಾಲಕನ ಸೀಟಿನಲ್ಲಿ ಶಿವಂ ಮಿಶ್ರಾ ಇದ್ದುದನ್ನು ಸ್ಪಷ್ಟಪಡಿಸಿದೆ. ಇ-ರಿಕ್ಷಾ ಚಾಲಕ ಮೊಹಮ್ಮದ್ ತೌಫೀಕ್ ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಅಪರಾಧ
BAIRATHI BASAVARJU BREAKING NEWS : ಸಿಐಡಿ ಲುಕ್ಔಟ್ ನೋಟಿಸ್ ಜಾರಿ, ತನಿಖೆ ತೀವ್ರ
ಬೆಂಗಳೂರು: ರೌಡಿಶೀಟರ್ ಬಿಲ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಅವರಿಗೆ ಮತ್ತೊಂದು ಕಾನೂನು ಹಿನ್ನಡೆ ಎದುರಾಗಿದೆ. ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಅವರ ಬಂಧನದ ಭೀತಿ ಮತ್ತಷ್ಟು ಗಟ್ಟಿಯಾಗಿದೆ.
ಈ ಹಿಂದೆ ಇದೇ ಪ್ರಕರಣದಲ್ಲಿ ಹೈಕೋರ್ಟ್ ಕೂಡ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಅದರ ನಂತರ ಬೈರತಿ ಬಸವರಾಜ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅಲ್ಲಿ ಸಹ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ. ವಿಚಾರಣೆ ವೇಳೆ ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿರುವುದು ಗಮನಾರ್ಹ.
ಈ ಬೆಳವಣಿಗೆಯೊಂದಿಗೆ ತನಿಖಾ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಈಗಾಗಲೇ ಸಿಐಡಿ ಪೊಲೀಸರು ಬೈರತಿ ಬಸವರಾಜ್ ವಿರುದ್ಧ ಲುಕ್ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಮುಂದಿನ ದಿನಗಳಲ್ಲಿ ಕಾನೂನು ಕ್ರಮಗಳು ಮತ್ತಷ್ಟು ಗಟ್ಟಿಯಾಗುವ ಸಾಧ್ಯತೆಗಳಿವೆ.
ರಾಜಕೀಯ ವಲಯದಲ್ಲೂ ಈ ವಿಚಾರ ಚರ್ಚೆಗೆ ಗ್ರಾಸವಾಗಿದ್ದು, ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಪ್ರಕರಣ ಹೊಸ ತಿರುವು ಪಡೆದಿದೆ.
-
ಚುನಾವಣೆ12 hours agoGBA ವಾರ್ಡ್ಗಳಲ್ಲಿ ಬೂತ್ ಹಂಚಿಕೆ ಗೊಂದಲ: ತಿದ್ದುಪಡಿಸದಿದ್ದರೆ ಸುಪ್ರೀಂ ಕೋರ್ಟ್ಗೆ ಮನವಿ – ಸಿ.ಎಂ. ಸತ್ಯನಾರಾಯಣ ಎಚ್ಚರಿಕೆ
-
ದೇಶ18 hours agoಫುಟ್ಪಾತ್ನಲ್ಲಿ ಬೈಕ್ಗೆ ಮಹಿಳೆಯ ಅಡ್ಡಿ: ಕೇರಳದಲ್ಲಿ ವೈರಲ್ ವಿಡಿಯೋ
-
ದೇಶ17 hours agoRBI : ಸಾಲ ವಸೂಲಿಗೆ ಹೊಸ ನಿಯಮಗಳು: ಆರ್ಬಿಐ ಕಟ್ಟುನಿಟ್ಟಿನ ಮಾರ್ಗಸೂಚಿ
-
ದೇಶ18 hours agoSHAKTI SCHEME : ಶಕ್ತಿ ಯೋಜನೆಗೆ ಸ್ಮಾರ್ಟ್ ಕಾರ್ಡ್: ಸಚಿವ ಸಂಪುಟದ ಮಹತ್ವದ ನಿರ್ಧಾರ
-
ದೇಶ19 hours agoBangladesh Election 2026: ಬಿಎನ್ಪಿ ಭರ್ಜರಿ ಗೆಲುವು, ತಾರಿಖ್ ರೆಹಮಾನ್ ಮುಂದಿನ ಪ್ರಧಾನಿ
-
ಕ್ರೀಡೆ16 hours agoBENGALURU : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ಗೆ ಒಪ್ಪಿಗೆ: 35 ಸಾವಿರ ಜನ ಮಿತಿ, ಭದ್ರತೆಗೆ ಸಮಿತಿ
-
ದೇಶ14 hours agoBENGALURU : ಮಹಾಶಿವರಾತ್ರಿ ಪ್ರಯುಕ್ತ ಬೆಂಗಳೂರು ನಗರದಲ್ಲಿ ಮಾಂಸ ಮಾರಾಟ ನಿಷೇಧ
-
ದೇಶ18 hours agoದೇವನಹಳ್ಳಿ ಸಮೀಪ ಭೀಕರ ರಸ್ತೆ ಅಪಘಾತ: 7 ಮಂದಿ ದುರ್ಮರಣ
