ಸಿನಿಮಾ
ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾದ ಖ್ಯಾತ ನಟಿ ವಹೀದಾ ರೆಹಮಾನ್ಗೆ ಅಭಿನಂದನೆಗಳ ಮಹಾಪೂರ
ವಹೀದಾ ರೆಹಮಾನ್ರ ವೃತ್ತಿಜೀವನ ಆರಂಭ ಆಗಿದ್ದು 1955ರಲ್ಲಿ.ತೆಲುಗಿನ ರೋಜುಲು ಮಾರಾಯಿ,ಸಿನಿಮಾ ಮೂಲಕ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ದೇವ್ ಆನಂದ್ ನಟನೆಯ ಸಿಐಡಿ,ಸಿನಿಮಾ ಮೂಲಕ ವಹೀದಾ ರೆಹಮಾನ್ ಅವರು ಬಾಲಿವುಡ್ಗೆ ಎಂಟ್ರಿ ಪಡೆದರು.ಬಳಿಕ ಪ್ಯಾಸಾ,ಕಾಗಜ್ ಕೆ ಫೂಲ್, ಸಾಹಿಬ್ ಬಿಬಿ ಔರ್ ಗುಲಾಮ್ ಮುಂತಾದ ಸಿನಿಮಾಗಳ ಮೂಲಕ ಅವರು ಅಪಾರ ಜನಪ್ರಿಯತೆ ಗಳಿಸಿದರು.ಬಣ್ಣದ ಲೋಕದಲ್ಲಿ 5 ದಶಕಗಳ ಕಾಲ ಸಕ್ರಿಯವಾಗಿದ್ದ ವಹೀದಾ ರೆಹಮಾನ್ ಅವರು 90ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.ಮನಮೋಹಕವಾದ ತಮ್ಮ ಅಭಿನಯದ ಮೂಲಕ ಅವರು ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ.ಹೆಚ್ಚಾಗಿ ಹಿಂದಿ ಸಿನಿಮಾಗಳಲ್ಲಿ ನಟಿಸಿದ ಅವರು ತೆಲುಗು, ಮಲಯಾಳಂ, ತಮಿಳು, ಬೆಂಗಾಲಿ ಚಿತ್ರಗಳಲ್ಲೂ ಅಭಿನಯಿಸಿದ್ದಾರೆ.ಭಾರತೀಯ ಚಿತ್ರರಂಗದ ಜನಪ್ರಿಯ ನಟಿ ವಹೀದಾ ರೆಹಮಾನ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಚಿತ್ರರಂಗದಲ್ಲಿ ಸಾಧನೆ ಮಾಡಿದವರಿಗೆ ಭಾರತ ಸರ್ಕಾರ ನೀಡುವ ಅತ್ಯುನ್ನತ ಪ್ರಶಸ್ತಿ ಇದಾಗಿದ್ದು, ಹಿರಿಯ ನಟಿಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ. ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ ಆದ ಬಳಿಕ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ವಹೀದಾ ರೆಹಮಾನ್ ಅವರಿಗೆ ಅಭಿನಂದನೆ ತಿಳಿಸುತ್ತಿದ್ದಾರೆ.ಈಗಾಗಲೇ ರಾಷ್ಟ್ರ ಪ್ರಶಸ್ತಿ,ಫಿಲ್ಮ್ ಫೇರ್ ಪ್ರಶಸ್ತಿ,ಪದ್ಮಶ್ರೀ,ಪದ್ಮ ಭೂಷಣ ಮುಂತಾದ ಗೌರವಗಳು ಅವರಿಗೆ ಸಂದಿವೆ.ಭಾರತೀಯ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ ವಹೀದಾ ರೆಹಮಾನ್ ಅವರಿಗೆ ಈ ವರ್ಷದ ದಾದಾ ಸಾಹೇಬ್ ಫಾಲ್ಕೆ ಅವಾರ್ಡ್ ಘೋಷಣೆ ಮಾಡಲು ನನಗೆ ಅತೀವ ಸಂತಸ ಆಗುತ್ತಿದೆ. ಬಾಲಿವುಡ್ನ ಅನೇಕ ಸಿನಿಮಾಗಳಲ್ಲಿ ಅವರು ಮನೋಜ್ಞವಾಗಿ ಅಭಿನಯಿಸಿದ್ದಾರೆ. ದಾದಾ ಸಾಹೇಬ್ ಫಾಲ್ಕೆ ಪಡೆಯಲಿರುವ ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ’ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.ಇಂದಿನ ಅನೇಕ ನಟಿಯರಿಗೆ ಅವರು ಮಾದರಿ ಆಗಿದ್ದಾರೆ.ಬಾಲಿವುಡ್ ಹಲವು ಹೀರೋಗಳ ಜೊತೆ ಅವರು ಸಿನಿಮಾ ಮಾಡಿದ್ದಾರೆ.
ದೇಶ
ರಾಜಮೌಳಿ ಚಿತ್ರದಲ್ಲಿ ಜೂ. ಎನ್ಟಿಆರ್ ಪುತ್ರ ಎಂಟ್ರಿ? ‘ವಾರಣಾಸಿ’ ಬಗ್ಗೆ ಭಾರೀ ಚರ್ಚೆ
ನವದೆಹಲಿ: ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ S. S. Rajamouli ಅವರ ಸಿನಿಮಾಗಳು ವಿಶ್ವದಾದ್ಯಂತ ಅಪಾರ ಅಭಿಮಾನಿಗಳನ್ನು ಹೊಂದಿವೆ. ಅವರ ಹೊಸ ಸಿನಿಮಾ ‘ವಾರಣಾಸಿ’ ಈಗಾಗಲೇ ಭಾರೀ ನಿರೀಕ್ಷೆ ಮೂಡಿಸಿದ್ದು, ಇದಕ್ಕೆ ಸಂಬಂಧಿಸಿದ ಹೊಸ ಸುದ್ದಿಯೊಂದು ಸಿನಿ ವಲಯದಲ್ಲಿ ಸದ್ದು ಮಾಡುತ್ತಿದೆ.
ಸ್ಟಾರ್ ನಟ Jr. NTR ಅವರ ಪುತ್ರ ಭಾರ್ಗವ್ ರಾಮ್ ಈ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಚಿತ್ರದಲ್ಲಿ ನಟಿಸುತ್ತಿರುವ Mahesh Babu ಅವರ ಬಾಲ್ಯದ ಪಾತ್ರದಲ್ಲಿ ಭಾರ್ಗವ್ ರಾಮ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
ರಾಜಮೌಳಿ ಅವರ ಸಿನಿಮಾಗಳಲ್ಲಿ ನಾಯಕನ ಬಾಲ್ಯದ ಕಥೆಗೆ ವಿಶೇಷ ಮಹತ್ವವಿರುತ್ತದೆ. ಇದೇ ಶೈಲಿಯನ್ನು ‘ವಾರಣಾಸಿ’ ಸಿನಿಮಾದಲ್ಲಿಯೂ ಮುಂದುವರಿಸಲಾಗುತ್ತಿದ್ದು, ಫ್ಲ್ಯಾಶ್ಬ್ಯಾಕ್ ಸನ್ನಿವೇಶದಲ್ಲಿ ಬಾಲ್ಯದ ಪಾತ್ರ ಪ್ರಮುಖ ಪಾತ್ರವಹಿಸಲಿದೆ ಎಂದು ತಿಳಿದುಬಂದಿದೆ.
ಹೆಚ್ಚಿನ ಆಸಕ್ತಿಯ ಸಂಗತಿ ಎಂದರೆ, Jr. NTR ಕೂಡ ಬಾಲನಟನಾಗಿಯೇ ತಮ್ಮ ಸಿನಿ ಜೀವನವನ್ನು ಆರಂಭಿಸಿದ್ದರು. ‘ರಾಮಾಯಣಂ’ ಚಿತ್ರದಲ್ಲಿ ಅಭಿನಯಿಸಿ ರಾಷ್ಟ್ರೀಯ ಪ್ರಶಸ್ತಿ ಪಡೆದಿದ್ದರು. ಈಗ ಅವರ ಪುತ್ರವೂ ಅದೇ ಹಾದಿಯಲ್ಲಿ ಸಾಗುತ್ತಿರುವುದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.
ಈ ಸಿನಿಮಾದಲ್ಲಿ ನಟಿಸಲು ಅನೇಕ ದೊಡ್ಡ ನಟರು ಆಸಕ್ತಿ ತೋರಿಸುತ್ತಿದ್ದು, ಸಂಭಾವನೆ ಇಲ್ಲದಿದ್ದರೂ ಪಾತ್ರಕ್ಕಾಗಿ ಕಾಯುತ್ತಿದ್ದಾರೆ ಎನ್ನಲಾಗುತ್ತಿದೆ. ರಾಜಮೌಳಿ ನಿರ್ದೇಶನ ಮತ್ತು ಮಹೇಶ್ ಬಾಬು ನಟನೆಯ ಸಂಯೋಜನೆಯಿಂದ ‘ವಾರಣಾಸಿ’ ಈಗಾಗಲೇ ಬಹು ನಿರೀಕ್ಷಿತ ಚಿತ್ರಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ.
ಒಟ್ಟಾರೆ, ಭಾರ್ಗವ್ ರಾಮ್ ಅವರ ಎಂಟ್ರಿ ಬಗ್ಗೆ ಅಧಿಕೃತ ಘೋಷಣೆ ಇನ್ನೂ ಬಾರದಿದ್ದರೂ, ಈ ಸುದ್ದಿ ಜೂ. ಎನ್ಟಿಆರ್ ಅಭಿಮಾನಿಗಳಿಗೆ ಸಂತಸದ ಅಲೆ ಮೂಡಿಸಿದೆ.
ದೇಶ
‘ಬಡೇ ಸಾಬ್’ ಪಾತ್ರದ ಹಿಂದಿನ ಸತ್ಯ: ದಾವೂದ್ ಕುರಿತ ಚರ್ಚೆ
ಬೆಂಗಳೂರು: ಭಾರತದ ಮೋಸ್ಟ್ ವಾಂಟೆಡ್ ಅಪರಾಧಿ Dawood Ibrahim ಮತ್ತೆ ಸುದ್ದಿಯಲ್ಲಿದ್ದಾರೆ. ಬಾಲಿವುಡ್ನಲ್ಲಿ ಬಿಡುಗಡೆಯಾದ Dhurandhar 2 ಚಿತ್ರದ ಭಾರೀ ಯಶಸ್ಸಿನ ಬೆನ್ನಲ್ಲೇ ದಾವೂದ್ ಇಬ್ರಾಹಿಂ ಕುರಿತ ಚರ್ಚೆ ಮತ್ತೆ ಜೋರಾಗಿದೆ.
1990ರ ದಶಕದ 1993 Bombay bombings ದಾಳಿಗಳ ಮಾಸ್ಟರ್ ಮೈಂಡ್ ಆಗಿದ್ದ ದಾವೂದ್, ನಂತರ ಪಾಕಿಸ್ತಾನಕ್ಕೆ ಪಲಾಯನ ಮಾಡಿದನು. ಅಂದಿನಿಂದಲೇ ತನ್ನ ‘ಡಿ-ಗ್ಯಾಂಗ್’ ಕಾರ್ಯಾಚರಣೆಗಳನ್ನು ಅಲ್ಲಿಂದಲೇ ನಿರ್ವಹಿಸುತ್ತಿದ್ದಾನೆ ಎಂಬ ಆರೋಪಗಳಿವೆ.
ಸದ್ಯದ ಮಾಹಿತಿಗಳ ಪ್ರಕಾರ, ದಾವೂದ್ ಪಾಕಿಸ್ತಾನದ Karachi ನಗರದಲ್ಲಿನ ಕ್ಲಿಫ್ಟನ್ ಪ್ರದೇಶದ 13ನೇ ರಸ್ತೆಯ ‘ವೈಟ್ ಹೌಸ್’ ಎಂಬ ಐಷಾರಾಮಿ ಮನೆಯಲ್ಲಿ ವಾಸಿಸುತ್ತಿದ್ದಾನೆ ಎನ್ನಲಾಗುತ್ತಿದೆ. ಈ ಪ್ರದೇಶವು ಪಾಕಿಸ್ತಾನದ ಅತ್ಯಂತ ಭದ್ರತಾ ವ್ಯವಸ್ಥೆ ಹೊಂದಿರುವ ಪ್ರದೇಶಗಳಲ್ಲಿ ಒಂದಾಗಿದೆ.
ಇನ್ನೂ ಕೆಲವು ವರದಿಗಳ ಪ್ರಕಾರ, ಕರಾಚಿಯ ಡಿಫೆನ್ಸ್ ಹೌಸಿಂಗ್ ಏರಿಯಾ (DHA) ಹಾಗೂ ಖಯ್ಯುಮಾಬಾದ್ ಪ್ರದೇಶದಲ್ಲಿಯೂ ದಾವೂದ್ ನಿವಾಸ ಹೊಂದಿದ್ದಾನೆ ಎಂಬ ಅನುಮಾನ ವ್ಯಕ್ತವಾಗಿದೆ. ಭಾರತೀಯ ಗುಪ್ತಚರ ಸಂಸ್ಥೆಗಳಿಗೂ ಇದೇ ರೀತಿಯ ಮಾಹಿತಿ ಲಭ್ಯವಾಗಿದೆ ಎಂದು ಹೇಳಲಾಗುತ್ತಿದೆ.
‘ಧುರಂಧರ್ 2’ ಸಿನಿಮಾದಲ್ಲಿ ‘ಬಡೇ ಸಾಬ್’ ಎಂಬ ಪಾತ್ರದ ಮೂಲಕ ದಾವೂದ್ ಇಬ್ರಾಹಿಂನಂತೆ ಕಾಣುವ ಪಾತ್ರವನ್ನು ಚಿತ್ರಿಸಲಾಗಿದೆ. ನೈಜ ಘಟನೆಗಳನ್ನು ಆಧರಿಸಿದ ಕಥಾಹಂದರ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದ್ದು, ಈ ಪಾತ್ರ ಭಾರೀ ಚರ್ಚೆಗೆ ಕಾರಣವಾಗಿದೆ.
ಆದಾಗ್ಯೂ, ದಾವೂದ್ ಇಬ್ರಾಹಿಂ ನಿಖರವಾಗಿ ಎಲ್ಲಿದ್ದಾನೆ ಎಂಬುದು ಇನ್ನೂ ಅಧಿಕೃತವಾಗಿ ದೃಢಪಟ್ಟಿಲ್ಲ. ಆದರೆ ಸಿನಿಮಾ ಮತ್ತು ಗುಪ್ತಚರ ಮಾಹಿತಿಗಳ ಹಿನ್ನೆಲೆ, ದಾವೂದ್ ಕುರಿತ ಚರ್ಚೆ ಮತ್ತೆ ಜಾಗತಿಕ ಮಟ್ಟದಲ್ಲಿ ತೀವ್ರವಾಗಿದೆ
ದೇಶ
ಲಾಸ್ ಏಂಜಲೀಸ್ನಲ್ಲಿ ‘ರಾಮಾಯಣ’ ಟೀಸರ್ ಸದ್ದು: ರಣಬೀರ್ ಲುಕ್ಗೆ ಭಾರೀ ಚಪ್ಪಾಳೆ
-
ಚುನಾವಣೆ15 hours agoDavangere By Election 2026 : 25 ಅಭ್ಯರ್ಥಿಗಳ ಕಣ: ಮುಸ್ಲಿಂ ಅಭ್ಯರ್ಥಿಗಳೇ ಗೇಮ್ಚೇಂಜರ್?
-
ದೇಶ16 hours agoX ನಲ್ಲಿ ವೈರಲ್ ಆದ CA ಕಥೆ: ನಂಬಲೇಬೇಕಾ ಅಥವಾ ಕೇವಲ ಕಥೆಯಾ?
-
ಚುನಾವಣೆ16 hours agoಎಐಎಡಿಎಂಕೆ vs ಡಿಎಂಕೆ: ಸೀಟ್ ಶೇರಿಂಗ್ನಲ್ಲಿ ಭಾರಿ ಪೈಪೋಟಿ
-
ದೇಶ15 hours agoಗಡಿಯಲ್ಲಿ ಹಾವು-ಮೊಸಳೆ ಕಾವಲು?: ಬಿಎಸ್ಎಫ್ ಹೊಸ ಯೋಜನೆ ಚರ್ಚೆಯಲ್ಲಿ
-
ದೇಶ13 hours agoಬಾಹ್ಯಾಕಾಶದಲ್ಲಿ ಡೇಟಾ ಸೆಂಟರ್?: AI ರೇಸ್ನಲ್ಲಿ ಟೆಕ್ ದೈತ್ಯರ ಹೊಸ ಹೆಜ್ಜೆ
-
ದೇಶ18 hours agoತಾಲಿಬಾನ್ ವಿರುದ್ಧ ಪಾಕಿಸ್ತಾನದ ಆಪರೇಷನ್: ನೂರಾರು ಉಗ್ರರು ಸಾವು
-
ದೇಶ18 hours agoಇರಾನ್ಗೆ ಟ್ರಂಪ್ ಮತ್ತೊಂದು ಗಡುವು: 24 ಗಂಟೆ ವಿಸ್ತರಣೆ ಘೋಷಣೆ
-
ದೇಶ14 hours agoವೀರಕುಮಾರರ ತಪಸ್ಸು, ಭಕ್ತಿಯ ತೇಜಸ್ಸು: ಕೆಂಗೇರಿ ಕರಗದ ವೈಶಿಷ್ಟ್ಯ
