ದೇಶ

ನಿತಿನ್ ಗಡ್ಕರಿ:ಈ ವರ್ಷದ ಅಂತ್ಯದ ಒಳಗೆ ಹೆದ್ದಾರಿಗಳು ಗುಂಡಿ ಮುಕ್ತವಾಗಲಿವೆ!

ಭಾರತ 2047ರ ಹೊತ್ತಿಗೆ ಕಾರ್ಬನ್ ಮುಕ್ತ ದೇಶವಾಗಬೇಕು. ಈ ಗುರಿ ಮುಟ್ಟಲು ಪ್ರಧಾನಿ ಮೋದಿ ಅವರು ಬಯಸಿದ್ದಾರೆ, ಎಂದು ಗಡ್ಕರಿ ಹೇಳಿದ್ದಾರೆ.ಹೆದ್ದಾರಿಗಳನ್ನು ಗುಂಡಿ ಮುಕ್ತ ಮಾಡುವ ಸಂಬಂಧ ಕೇಂದ್ರ ಸರ್ಕಾರ ಹೊಸ ನೀತಿ ರೂಪಿಸುತ್ತಿದೆ. ಮಳೆಯಿಂದಾಗಿ ಹೆದ್ದಾರಿಗಳಲ್ಲಿ ರಸ್ತೆ ಗುಂಡಿಗಳು ನಿರ್ಮಾಣ ಆಗುತ್ತಿವೆ ಎಂದಿದ್ದಾರೆ ಗಡ್ಕರಿ ದೇಶದ ಎಲ್ಲ ರಾಷ್ಟ್ರೀಯ ಹೆದ್ದಾರಿಗಳೂ ಶೀಘ್ರದಲ್ಲೇ ಗುಂಡಿ ಮುಕ್ತ ಆಗಲಿವೆ.ಈ ವರ್ಷದ ಅಂತ್ಯದ ಒಳಗೆ ದೇಶದ ಎಲ್ಲ ರಾಷ್ಟ್ರೀಯ ಹೆದ್ದಾರಿಗಳನ್ನು ಗುಂಡಿ ಮುಕ್ತ ಮಾಡುವಂತೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಡೆಡ್‌ಲೈನ್ ನೀಡಿದ್ದಾರೆ.ದೇಶದ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳನ್ನೂ ಗುಂಡಿ ಮುಕ್ತ ಮಾಡುವ ಸಂಬಂಧ ಕೇಂದ್ರ ಸರ್ಕಾರ ನೀತಿ ರೂಪಿಸುತ್ತಿದ್ದು, ಇದಕ್ಕಾಗಿ ಯುವ ಎಂಜಿನಿಯರ್‌ಗಳಿಗೆ ಹೊಣೆಗಾರಿಕೆ ನೀಡಲು ತೀರ್ಮಾನಿಸಿದೆ. ಇನ್ನು ಹೆದ್ದಾರಿಗಳಲ್ಲಿ ಮಳೆ ನೀರು ನಿಲ್ಲುವ ಸಮಸ್ಯೆಯೂ ಇದೆ. ಹೆದ್ದಾರಿ ಇಕ್ಕೆಲಗಳಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ಚರಂಡಿ ವ್ಯವಸ್ಥೆ ಸಮರ್ಪಕವಾಗಿ ಇಲ್ಲವಾದ ಕಾರಣ, ಸರ್ಕಾರದ ಹೊಸ ನೀತಿಯಲ್ಲಿ ಈ ಅಂಶವನ್ನೂ ಸೇರ್ಪಡೆ ಮಾಡಲು ತೀರ್ಮಾನಿಸಲಾಗಿದೆ.
ಮನೆ ಮನೆಗಳಿಂದ ಸಂಗ್ರಹಿಸುವ ಕಸದಿಂದಲೂ ರಸ್ತೆ ನಿರ್ಮಿಸುವ ಯೋಜನೆ ಕೂಡಾ ಇದೆ ಎಂದು ಕೇಂದ್ರ ಸಚಿವ ಗಡ್ಕರಿ ತಿಳಿಸಿದ್ದಾರೆ. ನಗರ, ಪಟ್ಟಣಗಳಲ್ಲಿ ಮನೆ ಮನೆಗಳಲ್ಲಿ ಸಂಗ್ರಹ ಅಗುವ ಘನ ತ್ಯಾಜ್ಯವನ್ನು ಬಳಸಿಕೊಂಡು ರಸ್ತೆ ನಿರ್ಮಿಸುವ ಯೋಜನೆ ಸಿದ್ದವಾಗುತ್ತಿದೆ. ದಿಲ್ಲಿ ಮುಂಬೈ ಎಕ್ಸ್‌ಪ್ರೆಸ್ ವೇ, ಅಹಮದಾಬಾದ್ ಧೊಲೆರಾ ಎಕ್ಸ್‌ಪ್ರೆಸ್‌ ವೇಗಳಲ್ಲಿ ಈ ಯೋಜನೆ ಈಗಾಗಲೇ ಜಾರಿಗೆ ಬಂದಿದೆ.ಮುಂದಿನ ದಿನಗಳಲ್ಲಿ ಹೆದ್ದಾರಿಯ ಇಕ್ಕೆಲಗಳಲ್ಲೂ ಸೌರ ಶಕ್ತಿ ಚಾಲಿತ ವಿದ್ಯುತ್ ದೀಪಗಳನ್ನು ಅಳವಡಿಸುವ ಯೋಜನೆಯೂ ಇದೆ. ಇದೇ ವೇಳೆ ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್ ವೇ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ನಿತಿನ್ ಗಡ್ಕರಿ ತಿಳಿಸಿದ್ದಾರೆ.ಇದಲ್ಲದೆ ಸಾಂಪ್ರದಾಯಿಕ ಇಂಧನಗಳಾದ ಪೆಟ್ರೋಲ್, ಡೀಸೆಲ್ ಬದಲಾಗಿ ಎಥೆನಾಲ್ ಬಳಕೆ ಹಾಗೂ ಜಲಜನಕ ಚಾಲಿತ ವಾಹನಗಳ ಅಭಿವೃದ್ಧಿಗೂ ಸರ್ಕಾರ ತಂತ್ರಗಾರಿಕೆ ರೂಪಿಸುತ್ತಿದೆ. ಇದಕ್ಕಾಗಿ ಪ್ರಧಾನಿ ಮೋದಿ ಅವರ ಸಾರಥ್ಯದಲ್ಲಿ ಹೊಸ ನೀತಿ ರೂಪಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Trending

Exit mobile version