ಸೋಶಿಯಲ್ ಮೀಡಿಯಾ

ಗೋ ಹತ್ಯೆ ಹೇಳಿಕೆ:ಇಸ್ಕಾನ್‌ ಸಮಿತಿಯಿಂದ ಮನೇಕಾ ಗಾಂಧಿಗೆ 100 ಕೋಟಿ ರೂ.ಮಾನನಷ್ಟ ಮೊಕದ್ದಮೆ ನೋಟಿಸ್‌!

ಒಂದು ತಿಂಗಳ ಹಿಂದೆ ನಡೆದ ಸಂದರ್ಶನದ ಒಂದು ತುಣುಕು ಮೇನಕಾ ಗಾಂಧಿ ಒಂದು ತಿಂಗಳ ಹಿಂದೆ ಸಂದರ್ಶನವೊಂದರಲ್ಲಿ ನೀಡಿದ್ದ ಹೇಳಿಕೆ ಈಗ ವೈರಲ್ ಆಗುತ್ತಿದೆ.ಆ ವೀಡಿಯೊದಲ್ಲಿ ಮೇನಕಾ ಗಾಂಧಿ ಅವರು ಇಸ್ಕಾನ್‌ ಹಸುಗಳನ್ನು ಕಟುಕರಿಗೆ ಮಾರುತ್ತಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದರು. ಅಷ್ಟೇ ಅಲ್ಲ, ಇಸ್ಕಾನ್ ದೇಶದ ಅತಿ ದೊಡ್ಡ ಮೋಸದ ಸಂಸ್ಥೆ ಎಂದು ಬಣ್ಣಿಸಿದ್ದರು. “ಇಸ್ಕಾನ್ ಗೋಶಾಲೆಗಳನ್ನು ಸ್ಥಾಪಿಸಿ,ಸರ್ಕಾರದಿಂದ ಅಪಾರ ಪ್ರಮಾಣದ ಭೂಮಿಯನ್ನು ತೆಗೆದುಕೊಳ್ಳುತ್ತದೆ ಮತ್ತು ದೊಡ್ಡ ಲಾಭವನ್ನು ಗಳಿಸುತ್ತದೆ” ಎಂದು ಹೇಳಿದ್ದಾರು.

ಬಿಜೆಪಿ ಸಂಸದೆ ಹಾಗೂ ಕೇಂದ್ರ ಸಚಿವೆ ಮನೇಕಾ ಗಾಂಧಿರವರ ಈ ವಿಡಿಯೋ ವೈರಲ್‌ ಆದ ಬೆನ್ನಲ್ಲಿಯೇ ಇಸ್ಕಾನ್‌ ದೇವಸ್ಥಾನಗಳ ಸಮಿತಿ ಮನೇಕಾ ಗಾಂಧಿಗೆ 100 ಕೋಟಿ ರೂಪಾಯಿಯ ಮಾನನಷ್ಟ ನೋಟಿಸ್‌ ಕಳುಹಿಸಿದ್ದು,ನೀವು ಮಾಡಿರುವ ಎಲ್ಲಾ ಆರೋಪಗಳು ನಿರಾಧಾರ ಹೇಳಿಕೆ ಎಂದು ಹೇಳಿದೆ.ಈ ದುರುದ್ದೇಶಪೂರಿತ ಆರೋಪಗಳಿಂದ ಇಸ್ಕಾನ್ ಭಕ್ತರು ಮತ್ತು ಬೆಂಬಲಿಗರು ತೀವ್ರ ದುಃಖಿತರಾಗಿದ್ದಾರೆ ಎಂದು ಇಸ್ಕಾನ್ ಕೋಲ್ಕತ್ತಾದ ಉಪಾಧ್ಯಕ್ಷ ರಾಧಾರಮಣ್‌ ದಾಸ್ ಹೇಳಿದ್ದಾರೆ. ಇಸ್ಕಾನ್‌ ವಿರುದ್ಧ ಮಾಡಿರುವ ಈ ಪಿತೂರಿಯ ವಿರುದ್ಧ ನಮಗೆ ನ್ಯಾಯ ಸಿಗಬೇಕು. ಅದಕ್ಕಾಗಿ ಎಲ್ಲಿ ಬೇಕಾದರೂ ಹೋರಾಟ ಮಾಡುತ್ತೇವೆ ಎಂದಿದ್ದಾರೆ.
ಇಸ್ಕಾನ್​ನ ರಾಷ್ಟ್ರೀಯ ವಕ್ತಾರ ಯುಧಿಷ್ಠಿರ್ ಗೋವಿಂದ್ ದಾಸ್ ಮಾತನಾಡಿ, ಗೋವುಗಳು ಹಾಗೂ ಗೂಳಿಗಳ ಸಂರಕ್ಷಣೆಗಾಗಿ ಭಾರತ ಮಾತ್ರವಲ್ಲದೆ ವಿಶ್ವಾದ್ಯಂತ ಕೆಲಸ ಮಾಡುತ್ತಿದೆ. ಹಸುಗಳು ಮತ್ತು ಗೂಳಿಗಳು ಇಸ್ಕಾನ್​ನ ಗೋಶಾಲೆಯಲ್ಲಿ ಬದುಕಿರುವವರೆಗೂ ಇರುತ್ತವೆ ಒಂದೇ ಒಂದು ಹಸು, ಎತ್ತು ಅಥವಾ ಕರುವನ್ನು ಕಟುಕರಿಗೆ ಮಾರುವುದಿಲ್ಲ.

Trending

Exit mobile version