ರಾಜಕೀಯ
ನಿಮ್ಮ ಅಡ್ಜಸ್ಟ್ಮೆಂಟ್ ರಾಜಕಾರಣ ಜಗತ್ಪ್ರಸಿದ್ಧ – ಸಿಎಂ ವಿರುದ್ಧ ಎಚ್ಡಿಕೆ ಟೀಕೆ

ಬೆಂಗಳೂರು : ಬಿಜೆಪಿ ಜೊತೆ ಮೈತ್ರಿ ಸಾಧಿಸುತ್ತಿರುವ ಜೆಡಿಎಸ್ ಪಕ್ಷವು ತಾನು ಸೆಕ್ಯುಲರ್ ಎಂದು ಹೇಳಿಕೊಳ್ಳಬಾರದು ಎಂದು ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಗೆ ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಶನಿವಾರ ತಿರುಗೇಟು ನೀಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ (ಈ ಹಿಂದಿನ ಟ್ವಿಟರ್) ನಲ್ಲಿ ಸರಣಿ ಸಂದೇಶ ಮಾಡಿರುವ ಎಚ್ಡಿಕೆ ನಿಮ್ಮ ಅಡ್ಜಸ್ಟ್ ಮೆಂಟ್ ರಾಜಕಾರಣ ಜಗತ್ಪಸಿದ್ಧ ಎಂದು ಟೀಕಿಸಿದ್ದಾರೆ.ಸಿಎಂ ಸೀಟಿನಲ್ಲಿ ಕೂತರೂ “ಸಿದ್ಧ ಸುಳ್ಳು” ಗಳಿಗೆ ಕೊರತೆಯೇನೂ ಇಲ್ಲ ಎಂದು ಲೇವಡಿ ಮಾಡಿರುವ ಎಚ್.ಡಿ.ಕುಮಾರಸ್ವಾಮಿ, ʼಜಾತ್ಯಾತೀʼ ಎನ್ನು ಟ್ಯಾಗ್ ಲೈನ್ ಇಟ್ಟುಕೊಂಡು ಜಾತಿ ಸಭೆಗಳನ್ನು ಮಾಡಿ ಕುಕ್ಕರ್, ಇಸ್ತ್ರಿ ಪೆಟ್ಟಿಗೆ ಹಂಚುವುದು ಜಾತ್ಯಾತೀತವೇ? ಎಂದು ಪ್ರಶ್ನಿಸಿರುವ ಕುಮಾರಸ್ವಾಮಿ , ಅಹಿಂದ ಎಂದು ಹೇಳಿಕೊಂಡು ಧರ್ಮಕ್ಕೊಂದು ಸಮಾವೇಶ, ಜಾತಿಗೊಂದು ಸಭೆ ನಡೆಸುವುದು ಜಾತ್ಯಾತೀತವೇ ಎಂದಿದ್ದಾರೆ.ಕೋಮುವಾದಿ ಎಂದು ಬಿಜೆಪಿಯನ್ನು ಹೀಗೆಳೆಯುತ್ತಾ ಆ ಪದದಿಂದಲೇ ರಾಜಕೀಯ ಲಾಭ ಗಿಟ್ಟಿಸಿರುವ ನೀವು ನಿಮ್ಮ ಅಡ್ಜಸ್ಟ್ ಮೆಂಟ್ ರಾಜಕಾರಣ ಜಗತ್ಪಸಿದ್ದಿ. I N D I A ಎಂಬ ಮೈತ್ರಿಕೂಟದಲ್ಲಿ ಬಿಜೆಪಿಯ ಬಿ ಟೀಂಗಳನ್ನು ಇಟ್ಟುಕೊಂಡು ಅವುಗಲ ಬಾಲಂಗೋಚಿ ಆಗಿರುವ ಕಾಂಗ್ರೆಸ್ ಪಕ್ಷ ಜಾತ್ಯಾತೀತವೇ? ಉತ್ತರಿಸಿ ಮುಖ್ಯಮಂತ್ರಿಗಳೇ ಎಂದು ಲೇವಡಿ ಮಾಡಿದ್ದಾರೆ.