Connect with us

ಬೆಂಗಳೂರು

ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆಗೆ ವಾಹನಗಳಿಗೆ ದಟ್ಟಣೆ ಶುಲ್ಕ ಶೀಘ್ರ ಜಾರಿಗೆ ತರಬೇಕು ತಜ್ಞರ ಅಭಿಮತ

ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆಗೆ ವಾಹನಗಳಿಗೆ ದಟ್ಟಣೆ ಶುಲ್ಕ ಶೀಘ್ರ ಜಾರಿಗೆ ತರಬೇಕು ತಜ್ಞರ ಅಭಿಮತ
ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆಗೆ ವಾಹನಗಳಿಗೆ ದಟ್ಟಣೆ ಶುಲ್ಕ ಶೀಘ್ರ ಜಾರಿಗೆ ತರಬೇಕು ತಜ್ಞರ ಅಭಿಮತ

ಬೆಂಗಳೂರು: ಐಟಿ ಸಿಟಿ ಬೆಂಗಳೂರಿನ ಸಂಚಾರ ದಟ್ಟಣೆ ಮತ್ತು ನಿಧಾನಗತಿಯ ವಾಹನ ಸಂಚಾರಕ್ಕೆ ಬಹುಶಃ ಬೆಂಗಳೂರಿಗೆ ಕಾಲಿಟ್ಟವರು ಅದರ ನರಕಯಾತನೆಯನ್ನು ಅನುಭವಿಸದೆ ಇರಲಿಕ್ಕಿಲ್ಲ ಎನಿಸುತ್ತದೆ. ನಿತ್ಯ ಬೆಂಗಳೂರಿನಲ್ಲಿ ಸಂಚರಿಸುವವರ ಪಾಡಂತೂ ಹೇಳತೀರದು.

ಈ ಸಮಸ್ಯೆಗೆ ಪರಿಹಾರವಾಗಿ ವಾಹನಗಳ ಮೇಲೆ ‘ದಟ್ಟಣೆ ಶುಲ್ಕ’ ವಿಧಿಸುವ ಕಲ್ಪನೆಯನ್ನು ಮೊಬಿಲಿಟಿ ತಜ್ಞರು ಮುಂದಿಟ್ಟಿದ್ದಾರೆ. ಸಾರ್ವಜನಿಕರ ಮೇಲೆ ಹೇರುವ ಶುಲ್ಕವನ್ನು ಸಾರ್ವಜನಿಕ ಸಾರಿಗೆಯನ್ನು ಒದಗಿಸಲು ಮತ್ತು ಸುಧಾರಿಸಲು ಬಳಸಬೇಕು ಎಂದು ಸಲಹೆ ನೀಡಿದ್ದಾರೆ. 

ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿವೆ, ಅದರಲ್ಲೂ ವಿಶೇಷವಾಗಿ ಕಳೆದ ವಾರದ ಹೊರ ವರ್ತುಲ ರಸ್ತೆ (ORR) ನಲ್ಲಿ ಒಂದೂವರೆ ಗಂಟೆಗಳ ಕಾಲ ಸಂಚಾರ ದಟ್ಟಣೆಯಾಗಿದ್ದು ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ಸುದ್ದಿ ಮಾಡಿತ್ತು. ಈ ಬಗ್ಗೆ ಪ್ರಸಿದ್ಧ ಸ್ಟ್ಯಾಂಡ್‌ ಅಪ್ ಹಾಸ್ಯನಟ ಟ್ರೆವರ್ ನೋಹ್‌ ಸಾಕಷ್ಟು ಹಾಸ್ಯ ಮಾಡಿದ್ದರು. 

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ನ ಸಸ್ಟೈನಬಲ್ ಟ್ರಾನ್ಸ್‌ಪೋರ್ಟೇಶನ್ ಲ್ಯಾಬ್‌ನ ಸಂಚಾಲಕ ಪ್ರೊ ಆಶಿಶ್ ವರ್ಮಾ, ಕಳೆದ ವಾರ ಹೊರ ವರ್ತುಲ ರಸ್ತೆಯಲ್ಲಿ ಸಂಚಾರ ದಟ್ಟಣೆ ಬೆಂಗಳೂರಿನ ಜನದಟ್ಟಣೆ, ಸಂಚಾರ ದಟ್ಟಣೆಯನ್ನು ತೋರಿಸುತ್ತದೆ. ಪ್ರಯಾಣದ ಬೇಡಿಕೆ, ಲಭ್ಯವಿರುವ ಮೂಲಸೌಕರ್ಯ ಮತ್ತು ಸೇವಾ ಪೂರೈಕೆಯ ನಡುವಿನ ವ್ಯಾಪಕ ಅಂತರ -ಏಕರೂಪದ ರಸ್ತೆ, ಅವೈಜ್ಞಾನಿಕ ಸಂಚಾರ ನಿರ್ವಹಣೆ ಮತ್ತು ಕಾರು ಮತ್ತು ದ್ವಿಚಕ್ರ ವಾಹನ ಬಳಕೆದಾರರ ಪ್ರಾಬಲ್ಯ ಇವೆಲ್ಲವೂ ಸಂಚಾರ ದಟ್ಟಣೆಗೆ ಕಾರಣವಾಗಿದೆ. 

ಈ ಬಗ್ಗೆ ‘ಬ್ರ್ಯಾಂಡ್ ಬೆಂಗಳೂರು’ ಅಭಿಯಾನದ ‘ಮೊಬಿಲಿಟಿ ವರ್ಟಿಕಲ್’ ಅಡಿಯಲ್ಲಿ ‘ಎಜಿಲ್ & ಸಸ್ಟೈನಬಲ್ ಮೊಬಿಲಿಟಿ ಫಾರ್ ಆಲ್’ ವರದಿಯನ್ನು ಸಲ್ಲಿಸಿದ್ದಾರೆ. ದಟ್ಟಣೆಯ ಸಮಯದಲ್ಲಿ ಅಥವಾ ದಟ್ಟಣೆಯ ಪ್ರದೇಶಗಳಲ್ಲಿ ಪ್ರಯಾಣಿಸುವ ರಸ್ತೆ ಬಳಕೆದಾರರಿಗೆ ‘ದಟ್ಟಣೆ ಬೆಲೆ’ ಶಿಫಾರಸು ಮಾಡಿದ್ದಾರೆ.

“ವೈಯಕ್ತಿಕ ವಾಹನಗಳ ಬಳಕೆಯನ್ನು ಕಡಿಮೆ ಮಾಡುವುದು ಮತ್ತು ಮೂಲಸೌಕರ್ಯ ಮತ್ತು ಸೇವೆಗಳನ್ನು ಸುಧಾರಿಸುವುದು ಸುಸ್ಥಿರ ಚಲನಶೀಲತೆ ಪರಿಹಾರಗಳನ್ನು ಸಾಧಿಸಲು ಸಮಗ್ರ ಕಾರ್ಯತಂತ್ರವಾಗಿ ಮಾಡಬೇಕಾಗಿದೆ. ದಟ್ಟಣೆ ಶುಲ್ಕವು ವೈಯಕ್ತಿಕ ವಾಹನಗಳ ಬಳಕೆಯನ್ನು ನಿರುತ್ಸಾಹಗೊಳಿಸುವ ಪ್ರಮುಖ ಕಾರ್ಯತಂತ್ರವಾಗಿದೆ ಎಂದು ವರ್ಮಾ ಹೇಳುತ್ತಾರೆ.

ಇದು ಎಲ್ಲರಿಗೂ ಲಾಭವಾಗಿದೆ ಎನ್ನುತ್ತಾರೆ ಅರ್ಬನ್ ಮೊಬಿಲಿಟಿ ತಜ್ಞೆ ಶ್ರೇಯಾ ಗಡೇಪಲ್ಲಿ. ಹಣ ಪಾವತಿಸಲು ಸಿದ್ಧರಿರುವವರು ತಾವು ತಲುಪಬೇಕಾದ ಸ್ಥಳವನ್ನು ತಲುಪಲು ಸಂಚಾರ ಮುಕ್ತ ರಸ್ತೆಯನ್ನು ಪಡೆಯುತ್ತಾರೆ. ಟ್ರಾಫಿಕ್ ಮುಕ್ತ ರಸ್ತೆಗಳು ತ್ವರಿತ ಬಸ್ ಸೇವೆಗಳಿಗೆ ದಾರಿ ಮಾಡಿಕೊಡುತ್ತವೆ, ಇಷ್ಟವಿಲ್ಲದವರಿಗೆ ಅಥವಾ ಪಾವತಿಸಲು ಸಾಧ್ಯವಾಗದವರಿಗೆ ವಿಶ್ವಾಸಾರ್ಹ ಪರ್ಯಾಯವನ್ನು ನೀಡುತ್ತದೆ ಎನ್ನುತ್ತಾರೆ. 

ಲಂಡನ್‌ನಲ್ಲಿ, ದಟ್ಟಣೆಯ ಬೆಲೆ ವಲಯಕ್ಕೆ ಪ್ರವೇಶಿಸುವ ಕಾರುಗಳ ಸಂಖ್ಯೆಯು ಶೇಕಡಾ 33 ರಷ್ಟು ಕಡಿಮೆಯಾಗಿದೆ. ಬಸ್ ಸವಾರರು ಶೇಕಡಾ 38 ರಷ್ಟು ಹೆಚ್ಚಾಗಿದೆ. ಸಿಂಗಾಪುರ ನಗರ ರಸ್ತೆಗಳಲ್ಲಿ ಸರಾಸರಿ ಟ್ರಾಫಿಕ್ ವೇಗವನ್ನು ಗಂಟೆಗೆ 20-30 ಕಿಲೋಮೀಟರ್‌ನಲ್ಲಿ ಇರಿಸುವಲ್ಲಿ ಯಶಸ್ವಿಯಾಗಿದೆ ಎಂದು ಅವರು ಹೇಳಿದರು, ಮಹಾನಗರಗಳಾದ ಮುಂಬೈ, ದೆಹಲಿ, ಬೆಂಗಳೂರು, ಚೆನ್ನೈ ಮತ್ತು ಹೈದರಾಬಾದ್ – ದಟ್ಟಣೆ ಬೆಲೆಯನ್ನು ಜಾರಿಗೆ ತರಲು ಸೂಕ್ತ ಸಮಯವಾಗಿದೆ ಎನ್ನುತ್ತಾರೆ. 

ಸರ್ಕಾರದ ಮಾಜಿ ಅಧಿಕಾರಿ ಕೆ.ಜೈರಾಜ್, ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗಳನ್ನು ಗಮನಿಸಿದರೆ ದಟ್ಟಣೆ ಶುಲ್ಕ ವಿಧಿಸುವುದು ಅನಿವಾರ್ಯವಾಗಿದೆ ಎನ್ನುತ್ತಾರೆ. 

ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಸರ್ಕಾರವು ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಾರ್ವಜನಿಕ ಚರ್ಚೆ ನಡೆಸಬೇಕು, ತನ್ನ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಇದನ್ನು ಜಾರಿಗೆ ತರಲು ನೋಡುತ್ತಿದೆ ಎಂದು ಅನಿಸುತ್ತಿದೆ ಎಂದಿದ್ದಾರೆ.

ಬೆಂಗಳೂರು

ಅಗಸ್ಟ್ 10 ರಂದು ಬೆಂಗಳೂರು ಮೆಟ್ರೋ ಫೇಸ್-3 ಶಂಕುಸ್ಥಾಪನೆ: ಪ್ರಧಾನಿ ಮೋದಿ ಉದ್ಘಾಟನೆ ನೆರವೇರಿಸಲಿದ್ದಾರೆ

ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಮತ್ತೊಂದು ಸಿಹಿ ಸುದ್ದಿ. ಬೆಂಗಳೂರು ಮೆಟ್ರೋ ಫೇಸ್-3 ಯೋಜನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಸ್ಟ್ 10ರಂದು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಪ್ರಕಟಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಆಗಸ್ಟ್ 10ರಂದು ಪ್ರಧಾನಿ ಮೋದಿ ಮೆಟ್ರೋ ಯೆಲ್ಲೋ ಲೈನ್ ಅನ್ನು ಉದ್ಘಾಟಿಸುವುದರ ಜೊತೆಗೆ ಜೆಪಿ ನಗರ ವೆಗಾಸಿಟಿ ಮಾಲ್‌ನಿಂದ ಕಡಬಗೆರೆವರೆಗೆ ವಿಸ್ತರಿಸಲಾಗಿರುವ ಮೆಟ್ರೋ ಮಾರ್ಗದ ಶಂಕುಸ್ಥಾಪನೆ ಕಾರ್ಯವನ್ನು ಸಹ ನೆರವೇರಿಸಲಿದ್ದಾರೆ,” ಎಂದು ಹೇಳಿದರು.

ಈ ಯೋಜನೆಯು ಸುಮಾರು ₹17,000 ಕೋಟಿ ವೆಚ್ಚದ ಫೇಸ್-3 ಯೋಜನೆಯ ಭಾಗವಾಗಿದೆ. ಮೊದಲೇ ಯೆಲ್ಲೋ ಲೈನ್ ಶಂಕುಸ್ಥಾಪನೆಗೆ ಮೋದಿ ಅವರೇ ಆಗಿದ್ದರೆ, ಈಗ ಉದ್ಘಾಟನೆಯ ಗೌರವವೂ ಅವರಿಗೇ ಸಲ್ಲಲಿದೆ.

ಡಿಸಿಎಂ ಹೇಳಿಕೆಗೆ ತೀವ್ರ ಪ್ರತಿಕ್ರಿಯೆ:
ಡಿಸಿಎಂ ಡಿ.ಕೆ. ಶಿವಕುಮಾರ್ ಮೆಟ್ರೋ ಯೋಜನೆಯಲ್ಲಿ ರಾಜ್ಯದ ಪಾತ್ರವಿದೆ ಎಂದು ಹೇಳಿರುವುದರ ಬಗ್ಗೆ ತೇಜಸ್ವಿ ಸೂರ್ಯ ಪ್ರತಿಕ್ರಿಯಿಸುತ್ತಾ, “ಇದುವರೆಗೆ ಈ ಯೋಜನೆಯ ಬಗ್ಗೆ ಯಾವ ರಾಜ್ಯ ಸಚಿವರೂ ಚಿಂತೆ ಮಾಡಿಲ್ಲ. ಪ್ರಧಾನಿ ಬರುವ ಸುದ್ದಿ ತಿಳಿಯುತ್ತಿದ್ದಂತೆ ಕ್ರೆಡಿಟ್ ಕಳಿಸಲು ಮುಂದಾಗಿದ್ದಾರೆ,” ಎಂದು ಟೀಕಿಸಿದರು.

ಫ್ಲೈಓವರ್ ಪ್ರಗತಿಯ ಮೇಲೂ ಟೀಕೆ:
“ಈಜಿಪುರದ 2.5 ಕಿ.ಮೀ ಫ್ಲೈಓವರ್‌ನ್ನು ಎಂಟು ವರ್ಷಗಳಿಂದ ಪೂರ್ಣಗೊಳಿಸಲಾಗಿಲ್ಲ. ಅದರೆ ಇದೀಗ 100 ಕಿ.ಮೀ ರಸ್ತೆಗಳ ಯೋಜನೆ ಪ್ರಾರಂಭಿಸಿದ್ದಾರೆ,” ಎಂದು ಹೇಳಿದ್ದಾರೆ.

ಮೆಟ್ರೋ ಯೋಜನೆಗೆ ಹಿಂದೆ ಸರ್ಕಾರದ ಕೊಡುಗೆ:
ಕೊರೋನಾ ಸಮಯದಲ್ಲೂ ಯಡಿಯೂರಪ್ಪ ಮತ್ತು ಬೊಮ್ಮಾಯಿ ಸರ್ಕಾರಗಳು ಅನುದಾನ ಒದಗಿಸಿ ಕೆಲಸ ಮುಂದುವರೆದಿದ್ದವು. ಆದರೆ ಇದೀಗ ಎಂಡಿ ನೇಮಕ ಮಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಳಂಬ ಮಾಡಿದೆ ಎಂದು ಅವರು ಆರೋಪಿಸಿದ್ದಾರೆ.

Continue Reading

ಅಪರಾಧ

Breaking News ಚಾಲಕ ಆತ್ಮಹತ್ಯೆ – ಡೆತ್ ನೋಟ್‌ನಲ್ಲಿ ಸಂಸದ ಡಾ. ಸುಧಾಕರ್ ಹೆಸರು ಉಲ್ಲೇಖ!

ಚಿಕ್ಕಬಳ್ಳಾಪುರ, ಆಗಸ್ಟ್ 7 – ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ದೈನಂದಿನ ಶಾಂತಿಯನ್ನು ಬೆಚ್ಚಿಬೀಳಿಸುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಜಿಲ್ಲಾ ಪಂಚಾಯತ್ ಕಚೇರಿಯ ಆವರಣದಲ್ಲಿ 33 ವರ್ಷದ ಗುತ್ತಿಗೆ ಚಾಲಕ ಬಾಬು ಎಂ. ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶೋಕಾಂತರವಾಗಿದೆ.

ಡೆತ್ ನೋಟ್‌ನಲ್ಲಿ ಸಂಸದ ಡಾ. ಕೆ. ಸುಧಾಕರ್ ಹೆಸರು:
8 ವರ್ಷಗಳಿಂದ ಲೆಕ್ಕಪರಿಶೋಧನೆ ವಿಭಾಗದಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ಬಾಬು, ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ಹಾಗೂ ಅವರ ಬೆಂಬಲಿಗರಾದ ನಾಗೇಶ್ ಮತ್ತು ಮಂಜುನಾಥ್ ವಿರುದ್ಧ ಗಂಭೀರ ಆರೋಪಗಳನ್ನು ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಆತ್ಮಹತ್ಯೆಗೆ ಕಾರಣವೆನಿಸಿದ ಹಣಕಾಸು ವಂಚನೆ:
ಬಾಬು ಅವರು ಡೆತ್ ನೋಟ್‌ನಲ್ಲಿ, ಸರ್ಕಾರಿ ಕೆಲಸ ಕೊಡಿಸುತ್ತೇವೆಂದು ಹಣ ಪಡೆದು ವಂಚನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದರಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಬಾಬು, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಕಚೇರಿಯ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪೊಲೀಸರು ಸ್ಥಳಕ್ಕೆ ದೌಡಾಯಿಸಿದರು:
ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ತಕ್ಷಣವೇ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ FIR ದಾಖಲಾತಿ ನಡೆಯುವ ಸಾಧ್ಯತೆ ಇದ್ದು, ತನಿಖೆ ಮುಂದುವರಿದಿದೆ.

Continue Reading

ಬೆಂಗಳೂರು

ಬೆಂಗಳೂರಿನಲ್ಲಿ ವಸತಿ ಯೋಜನೆಗಳ ಅವ್ಯವಸ್ಥೆ: ಹೊಸ ಯೋಜನೆಗಳ ಬಗ್ಗೆ ಶಾಸಕ ಎಸ್.ಟಿ. ಸೋಮಶೇಖರ್ ಅಸಮಾಧಾನ

ಬೆಂಗಳೂರು, ಆಗಸ್ಟ್ 7 – ನಗರದಲ್ಲಿ ಈಗಿನ ವಸತಿ ಯೋಜನೆಗಳು ಪೂರ್ಣವಾಗಿಲ್ಲದಿರುವಾಗ ಹೊಸ ಭೂಸ್ವಾಧೀನ ಅಧಿಸೂಚನೆಗಳನ್ನು ನೀಡುವುದು ಅರ್ಥವಿಲ್ಲ ಎಂದು ಶಾಸಕ ಎಸ್.ಟಿ. ಸೋಮಶೇಖರ್ ಕಿಡಿಕಾರಿದರು.

ಯಶವಂತಪುರ ಕ್ಷೇತ್ರದ ಚುಂಚನಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಬ್ಬರಾಯನಪಾಳ್ಯ ಎ ಹಾಗೂ ಬಿ ಗ್ರಾಮಗಳಲ್ಲಿ ಹೊಸ ಅಂಗನವಾಡಿ ಕಟ್ಟಡ ಮತ್ತು ಕಿರಿಯ ಪ್ರಾಥಮಿಕ ಶಾಲೆಯ ಲೋಕಾರ್ಪಣೆ ವೇಳೆ ಅವರು ಮಾತನಾಡಿದರು.

ಅವರು ಅಭಿಪ್ರಾಯಪಟ್ಟ ಪ್ರಮುಖ ವಿಷಯಗಳು:

  • ಬೆಂಗಳೂರಿನ ಜನಸಂಖ್ಯೆ ಈಗಾಗಲೇ 1.5 ಕೋಟಿಗೂ ಮೀರುತ್ತಿದೆ.
  • ವಸತಿ ಸಮುಚ್ಛಯಗಳಲ್ಲಿ ಇನ್ನೂ ಅನೇಕ ಅಭಿವೃದ್ಧಿ ಕೆಲಸಗಳು ಬಾಕಿಯಿವೆ.
  • ಕುಡಿಯುವ ನೀರಿನ ಕೊರತೆ, ಒಳಚರಂಡಿ ಸಮಸ್ಯೆ, ರಾಜಕಾಲುವೆಗಳ ಉಕ್ಕಿಹರಿವು ನಗರದ ಮುಖ್ಯ ಸಮಸ್ಯೆಗಳಾಗಿವೆ.
  • ಕೆಲ ಕಟ್ಟಡಗಳು ಕಳಪೆ ಗುಣಮಟ್ಟದಿಂದ ನಿರ್ಮಾಣವಾಗಿದ್ದು, ಸೋರಿಕೆ ಸಮಸ್ಯೆ ಜನರನ್ನು ಕಾಡುತ್ತಿದೆ.
  • “ಕಟ್ಟಡ ಕುಸಿದು ಅನಾಹುತವಾದರೆ ಹೊಣೆ ಯಾರು?” ಎಂದು ಅವರು ಪ್ರಶ್ನಿಸಿದರು.

ಬೇರೆ ಪ್ರಮುಖ ಅಂಶಗಳು:
ನಗರದ ವಾಹನ ಸಂಚಾರ ದಟ್ಟಣೆ, ನಿಯಂತ್ರಣ ತಪ್ಪಿದ ನಗರ ವಿಸ್ತರಣೆ, ಮೂಲಸೌಕರ್ಯದ ಕೊರತೆ ಇವುಗಳಿಂದ ನಾಗರಿಕರು ಪರದಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಬೆಂಗಳೂರಿನಿಂದ ಹೊರಗೆ ಹೊಸ ವಸತಿ ಯೋಜನೆಗಳನ್ನು ರೂಪಿಸಿ ಮೂಲಸೌಕರ್ಯ ಒದಗಿಸಿದರೆ ಜನಸಂದಣಿ ನಿಯಂತ್ರಣ ಸಾಧ್ಯವೆಂದು ಶಾಸಕ ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಹಾಜರಿದ್ದವರು:
ಪಂಚಾಯತ್ ಅಧ್ಯಕ್ಷೆ ಹೇಮಾ ನಾರಾಯಣ್, ಸದಸ್ಯರು ಸದಾನಂದ.ಡಿ, ಎನ್.ಕುಮಾರ್, ರೇವಣಸಿದ್ದಯ್ಯ, ಅಶ್ವತ್, ವೆಂಕಟಾಚಲ, ಸುನಿಲ್, ಪುಟ್ಟಮಲ್ಲು, ತಾತಪ್ಪ, ಶಿವಣ್ಣ, ಹನುಮಂತ ಹಾಗೂ ಗ್ರಾಮಸ್ಥರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Continue Reading

Trending