Connect with us

ಕ್ರೀಡೆ

ಐಪಿಎಲ್ 2026: RCB ಅಭಿಮಾನಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಅಭಿಮಾನಿಗಳಲ್ಲಿ ಕೆಲವು ದಿನಗಳಿಂದ ಇದ್ದ ಆತಂಕಕ್ಕೆ ಇಂದು ಸ್ಪಷ್ಟನೆ ಸಿಕ್ಕಿದೆ. 2026ರ ಐಪಿಎಲ್‌ನ ಎಲ್ಲಾ ಪಂದ್ಯಗಳು ಬೆಂಗಳೂರಿನಲ್ಲೇ ನಡೆಯಲಿವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಣೆ ಮಾಡಿದ್ದಾರೆ.
ಕೆಎಸ್‌ಸಿಎ (KSCA) ಚುನಾವಣೆಯ ಮತದಾನದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಾನು ಕ್ರಿಕೆಟ್ ಲವರ್. RCB ನಮ್ಮ ಹೆಮ್ಮೆ. ಯಾವುದೇ ಕಾರಣಕ್ಕೂ ಐಪಿಎಲ್ ಬೆಂಗಳೂರಿನಿಂದ ಎತ್ತಂಗಡಿ ಆಗುವುದಿಲ್ಲ. ಎಲ್ಲ ಮ್ಯಾಚ್‌ಗಳನ್ನೂ ಬೆಂಗಳೂರಲ್ಲೇ ನಡೆಸುತ್ತೇವೆ,” ಎಂದು ಭರವಸೆ ನೀಡಿದರು.

ನಗರದಲ್ಲಿ ಇತ್ತೀಚೆಗೆ ನಡೆದ ಕಾಲ್ತುಳಿತ ದುರಂತ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತCrowd Control ಸಮಸ್ಯೆಗಳ ಕಾರಣದಿಂದ RCB ಪಂದ್ಯಗಳು ಪುಣೆಗೆ ಶಿಫ್ಟ್ ಆಗಬಹುದು ಎಂಬ ವದಂತಿ ಹಬ್ಬಿತ್ತು. ಇದೇ ಕುರಿತಾಗಿ ಮಾತನಾಡಿದ ಡಿಕೆಶಿ, “ಬೆಂಗಳೂರು ಗೌರವ ಮುಖ್ಯ. ಕಾನೂನು ಚೌಕಟ್ಟಿನೊಳಗೆ Crowd Management ಬಲಪಡಿಸುತ್ತೇವೆ. ಅಗತ್ಯವಿದ್ದರೆ ಹೊಸ ದೊಡ್ಡ ಸ್ಟೇಡಿಯಂ ನಿರ್ಮಿಸುವ ಕ್ರಮವನ್ನು ಕೈಗೊಳ್ಳುತ್ತೇವೆ,” ಎಂದರು.

ಆರ್‌ಸಿಬಿ ಚಾಂಪಿಯನ್ ಆಗಿ ಹೊರಹೊಮ್ಮಿದ ಕಾರಣ ಮುಂದಿನ ಆವೃತ್ತಿಯ ಐಪಿಎಲ್ ಉದ್ಘಾಟನೆ ಬೆಂಗಳೂರಿನಲ್ಲಿ ನಡೆಯಬೇಕು ಎಂಬ ಅಭಿಮಾನಿಗಳ ಬೇಡಿಕೆ ಹಿಂದೆ ಬಿದ್ದಿತ್ತು. ಅದರ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಿಂದಲೇ ಉದ್ಘಾಟನಾ ಮ್ಯಾಚ್ ಶಿಫ್ಟ್ ಆಗುವ ಸುದ್ದಿಗಳು RCB ಪ್ರೇಮಿಗಳನ್ನು ನಿರಾಶೆಯಲ್ಲಿಟ್ಟಿದ್ದವು. ಆದರೆ ಡಿಕೆ ಶಿವಕುಮಾರ್ ಅವರ ಈ ಘೋಷಣೆ ಅಭಿಮಾನಿಗಳಲ್ಲಿ ಹೊಸ ಹುರುಪು ತಂದಿದೆ.

“ಇನ್ನು ಮುಂದೆ ಯಾವುದೇ ಐಪಿಎಲ್ ಬೆಂಗಳೂರಿನಿಂದ ಹೊರಕ್ಕೆ ಹೋಗೋದಿಲ್ಲ. ಇದು ಬೆಂಗಳೂರಿನ ಗೌರವ. ಅದನ್ನು ಕಾಪಾಡಲು ಸರ್ಕಾರ ಪೂರ್ಣ ಸಹಕಾರ ನೀಡುತ್ತದೆ,” ಎಂದು ಡಿಕೆಶಿ ಖಚಿತಪಡಿಸಿದರು.

ಈ ಹೇಳಿಕೆ RCB ಅಭಿಮಾನಿಗಳಿಗೆ ಹೊಸ ವರ್ಷದ ಮೊದಲ ದೊಡ್ಡ ‘ಗುಡ್ ನ್ಯೂಸ್’ ಆಗಿ ಪರಿಣಮಿಸಿದೆ.

Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 WORLD CUP : ಡಬಲ್ ಸೂಪರ್ ಓವರ್‌ನಲ್ಲಿ ದಕ್ಷಿಣ ಆಫ್ರಿಕಾದ ರೋಚಕ ಗೆಲುವು

ಅಹಮದಾಬಾದ್: ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಆಫ್ರಿಕಾ ಹಾಗೂ ಅಫ್ಘಾನಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯ ಕ್ರಿಕೆಟ್ ಅಭಿಮಾನಿಗಳಿಗೆ ನಿಜವಾದ ಥ್ರಿಲ್ಲರ್ ಅನುಭವ ನೀಡಿತು. ಕೊನೆಯ ಕ್ಷಣದವರೆಗೂ ರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ‘ಡಬಲ್ ಸೂಪರ್ ಓವರ್’ನಲ್ಲಿ 4 ರನ್‌ಗಳ ಅಂತರದಿಂದ ಗೆಲುವು ಸಾಧಿಸಿತು.

ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 187 ರನ್ ಗಳಿಸಿತು. 188 ರನ್‌ಗಳ ಗುರಿ ಬೆನ್ನಟ್ಟಿದ ಅಫ್ಘಾನಿಸ್ತಾನ 19.4 ಓವರ್‌ಗಳಲ್ಲಿ 187 ರನ್‌ಗಳಿಗೆ ಆಲೌಟ್ ಆಗಿ ಪಂದ್ಯ ಟೈ ಮಾಡಿತು.

ಮೊದಲ ಸೂಪರ್ ಓವರ್‌ನಲ್ಲಿ ಅಜ್ಮತ್ತುಲ್ಲ ಒಮರ್ಜಾಯಿ ಸ್ಫೋಟಕ ಬ್ಯಾಟಿಂಗ್ ಮೂಲಕ 17 ರನ್ ಗಳಿಸಿದರು. 18 ರನ್ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾಗೆ ಕೊನೆಯ ಎಸೆತದಲ್ಲಿ 7 ರನ್ ಬೇಕಾಗಿದ್ದಾಗ ಟ್ರಿಸ್ಟನ್ ಸ್ಟಬ್ಸ್ ಫಜಲ್ಹಕ್ ಫಾರೂಕಿ ಎಸೆತವನ್ನು ಸಿಕ್ಸರ್‌ಗೆ ಬಾರಿಸಿ ಪಂದ್ಯವನ್ನು ಮತ್ತೆ ಟೈ ಮಾಡಿದರು.

ಎರಡನೇ ಸೂಪರ್ ಓವರ್‌ನಲ್ಲಿ ಡೇವಿಡ್ ಮಿಲ್ಲರ್ ಕೇವಲ 4 ಎಸೆತಗಳಲ್ಲಿ 16 ರನ್ ಸಿಡಿಸಿ ತಂಡವನ್ನು 23 ರನ್‌ಗಳಿಗೆ ಕೊಂಡೊಯ್ದರು. 24 ರನ್ ಗುರಿ ಬೆನ್ನಟ್ಟಿದ ಅಫ್ಘಾನಿಸ್ತಾನ ಪರ ರಹಮಾನುಲ್ಲಾ ಗುರ್ಬಾಜ್ ಸತತ ಮೂರು ಸಿಕ್ಸರ್‌ಗಳನ್ನು ಬಾರಿಸಿ ಪಂದ್ಯವನ್ನು ತೀವ್ರ ರೋಚಕಗೊಳಿಸಿದರು. ಆದರೆ ಕೊನೆಯ ಎಸೆತದಲ್ಲಿ ಬೌಂಡರಿ ಯತ್ನದಲ್ಲಿ ಕ್ಯಾಚ್ ನೀಡಿ ಔಟಾದರು. ಹೀಗಾಗಿ ದಕ್ಷಿಣ ಆಫ್ರಿಕಾ ರೋಚಕ 4 ರನ್ ಜಯ ಸಾಧಿಸಿತು.

Continue Reading

ಕ್ರೀಡೆ

“ಈ ನಾಟಕ ಮೊದಲೇ ಗೊತ್ತಿತ್ತು” – ರಿಕಿ ಪಾಂಟಿಂಗ್

ಇಸ್ಲಾಮಾಬಾದ್:

ಹಲವು ಸುತ್ತಿನ ನಾಟಕದ ನಂತರ ಕೊನೆಗೂ ಪಾಕಿಸ್ತಾನ ಕ್ರಿಕೆಟ್ ತಂಡವು ಹೈವೋಲ್ಟೇಜ್ ಭಾರತ ವಿರುದ್ಧದ ಪಂದ್ಯವನ್ನು ಫೆಬ್ರವರಿ 15ರಂದು ಆಡಲು ಒಪ್ಪಿಗೆ ಸೂಚಿಸಿದೆ. ಕೊಲೊಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಶಿವರಾತ್ರಿ ದಿನದಂದು ಈ ಮಹತ್ವದ ಪಂದ್ಯ ನಡೆಯಲಿದೆ.

ಭಾರತ ವಿರುದ್ಧ ಪಂದ್ಯ ಆಡಲು ಮೊದಲಿಗೆ ಒಪ್ಪಿಕೊಂಡು, ಬಳಿಕ ಯು-ಟರ್ನ್ ಹೊಡೆದಿದ್ದ ಪಾಕಿಸ್ತಾನ ಕ್ರಿಕೆಟ್ ಬೋರ್ಡ್‌ (PCB) ನಿರ್ಧಾರಕ್ಕೆ ಈಗ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಈ ಬೆಳವಣಿಗೆಯ ಕುರಿತು ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ತೀವ್ರ ವ್ಯಂಗ್ಯವಾಡಿದ್ದು, “ಪಾಕಿಸ್ತಾನದ ಈ ಡ್ರಾಮಾ ಮೊದಲೇ ಗೊತ್ತಿತ್ತು” ಎಂದು ಲೇವಡಿ ಮಾಡಿದ್ದಾರೆ. ಇದೇ ಅಭಿಪ್ರಾಯವನ್ನು ಭಾರತದ ದಿಗ್ಗಜ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಕೂಡ ವ್ಯಕ್ತಪಡಿಸಿದ್ದರು.

ಪಾಕಿಸ್ತಾನ ಟಿವಿ ಚರ್ಚೆಯಲ್ಲಿ ಭಾಗವಹಿಸಿದ್ದ ಮಾಜಿ ನಾಯಕ ಶಹೀದ್ ಅಫ್ರಿದಿ, ಪಿಸಿಬಿಯ ನಿರ್ಧಾರವನ್ನು ತೀವ್ರವಾಗಿ ಟೀಕಿಸಿದ್ದಾರೆ. “ಯು-ಟರ್ನ್ ತೆಗೆದುಕೊಳ್ಳುವುದೇ ಇದ್ದರೆ ಇಷ್ಟೊಂದು ನಾಟಕ ಯಾಕೆ? ಕೊನೆಗೆ ಪಿಸಿಬಿ ಬಿಸಿಸಿಐ ಮುಂದೆ ಮಂಡಿಯೂರಿದೆ” ಎಂದು ಅವರು ಕಿಡಿಕಾರಿದ್ದಾರೆ.

“ನಾವು ಹಿಂದೆ ಭಾರತದಲ್ಲಿ ಸಾಕಷ್ಟು ಕ್ರಿಕೆಟ್ ಆಡಿದ್ದೇವೆ. ಅಲ್ಲಿನ ಜನರು ಪಾಕಿಸ್ತಾನಿಗಳನ್ನು ಪ್ರೀತಿಸುತ್ತಿದ್ದರು. ಆದರೆ, ನರೇಂದ್ರ ಮೋದಿ ಪ್ರಧಾನಿಯಾದ ನಂತರ ಪರಿಸ್ಥಿತಿ ಸಂಪೂರ್ಣ ಬದಲಾಗಿದೆ. ನಾಲ್ಕು ಗುಜರಾತಿಗಳು ಭಾರತವನ್ನು ನಡೆಸುತ್ತಿದ್ದಾರೆ. ಅವರ ಆಟಕ್ಕೆ ಪಿಸಿಬಿ ಬುಗುರಿಯಂತೆ ಸುತ್ತುತ್ತಿದೆ” ಎಂದು ಅಫ್ರಿದಿ ಲೇವಡಿ ಮಾಡಿದ್ದಾರೆ.

ಇದೇ ವೇಳೆ, ರಿಕಿ ಪಾಂಟಿಂಗ್ ಕೂಡ ಪಾಕಿಸ್ತಾನ ಸರ್ಕಾರದ ಮಾನವನ್ನೂ ಈ ವಿಷಯದಲ್ಲಿ ಹರಾಜು ಹಾಕಲಾಗಿದೆ ಎಂದು ಕಟುವಾಗಿ ಟೀಕಿಸಿದ್ದಾರೆ. “ಪ್ರತಿ ಬಾರಿ ಪಿಸಿಬಿಯ ಮಾನ ಹೋಗುತ್ತಿತ್ತು. ಈ ಬಾರಿ ಸರ್ಕಾರದ ಮಾನವೂ ಹಾಳಾಗಿದೆ” ಎಂದು ಹೇಳಿದ್ದಾರೆ.

ಪಾಕಿಸ್ತಾನ ಭಾರತ ವಿರುದ್ಧ ಪಂದ್ಯ ಆಡಲು ಮೂರು ಷರತ್ತುಗಳನ್ನು ಮುಂದಿಟ್ಟಿತ್ತು. ದ್ವಿಪಕ್ಷೀಯ ಸರಣಿ ಹಾಗೂ ಬಾಂಗ್ಲಾದೇಶ ಸೇರಿ ತ್ರಿಕೋಣ ಸರಣಿಯ ಪ್ರಸ್ತಾಪವೂ ಇದರಲ್ಲಿ ಸೇರಿತ್ತು. ಆದರೆ, ಐಸಿಸಿ ಈ ಎಲ್ಲಾ ಷರತ್ತುಗಳನ್ನು ತಿರಸ್ಕರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

Continue Reading

ಕ್ರೀಡೆ

T20 WORLD CUP : ಪಾಕ್‌ಗೆ ಯುಎಸ್ಎ ಆಟಗಾರನ ಖಡಕ್ ಎಚ್ಚರಿಕೆ

ನವದೆಹಲಿ:
ಟಿ20 ವಿಶ್ವಕಪ್‌ ಟೂರ್ನಿಯ ಪಂದ್ಯಗಳಿಗಿಂತ ಇದೀಗ ನಡೆಯುತ್ತಿರುವ ಗೊಂದಲ, ವಿವಾದಗಳೇ ಭಾರೀ ಸದ್ದು ಮಾಡುತ್ತಿವೆ. ಫೆಬ್ರವರಿ 15ರಂದು ಭಾರತ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದಾಗಿ ಹೇಳಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB)ಯ ಅಹಂಕಾರದ ಮಾತುಗಳು ಇದೀಗ ಸಂಪೂರ್ಣವಾಗಿ ಹಿನ್ನಡೆ ಕಂಡಿವೆ. ಐಸಿಸಿ ತಿರಸ್ಕಾರ ಹಾಗೂ ಬಿಸಿಸಿಐ ಮನವಿಯ ಬಳಿಕ, ಟೀಮ್ ಇಂಡಿಯಾ ವಿರುದ್ಧದ ಹೈವೋಲ್ಟೇಜ್ ಪಂದ್ಯವನ್ನು ಆಡಲು ಪಾಕಿಸ್ತಾನ ಒಪ್ಪಿಗೆ ನೀಡಿದೆ.

ಈ ಮಧ್ಯೆ, ಟಿ20 ವಿಶ್ವಕಪ್‌ ಟೂರ್ನಿಯ ಭಾಗವಾಗಿ ಮಂಗಳವಾರ (ಫೆ.10) ಕೊಲಂಬೊದಲ್ಲಿ ಪಾಕಿಸ್ತಾನ ಹಾಗೂ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ (USA) ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯಕ್ಕೂ ಮುನ್ನ ಯುಎಸ್ಎ ತಂಡದ ಆಟಗಾರ ಮೊಹಮ್ಮದ್ ಮೊಹ್ಸಿನ್ ನೀಡಿರುವ ಖಡಕ್‌ ಎಚ್ಚರಿಕೆ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

ಖಡಕ್‌ ಎಚ್ಚರಿಕೆ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೊಹಮ್ಮದ್ ಮೊಹ್ಸಿನ್,
“ನಮ್ಮ ತಂಡದ ಮೇಲೆ ಯಾವುದೇ ಒತ್ತಡವಿಲ್ಲ. ಎಲ್ಲಾ ಒತ್ತಡ ಇರುವುದು ಪಾಕಿಸ್ತಾನ ತಂಡದ ಮೇಲೇ. ಕಳೆದ ಕೆಲ ವರ್ಷಗಳಲ್ಲಿ ಯುಎಸ್ಎ ಆಟಗಾರರ ಕೌಶಲ್ಯಗಳು ಸಾಕಷ್ಟು ಸುಧಾರಿಸಿಕೊಂಡಿವೆ. ಈ ಕಾರಣಕ್ಕೆ ಮತ್ತೊಮ್ಮೆ ಪಾಕಿಸ್ತಾನ ವಿರುದ್ಧ ನಾವು ಗೆಲ್ಲುತ್ತೇವೆ ಎಂಬ ವಿಶ್ವಾಸ ನಮಗಿದೆ” ಎಂದು ಹೇಳಿದ್ದಾರೆ.

“2024ರ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನವನ್ನು ಸೋಲಿಸಿದ ಬಳಿಕ ನಮ್ಮ ಆತ್ಮವಿಶ್ವಾಸ ಇನ್ನಷ್ಟು ಹೆಚ್ಚಾಗಿದೆ. ಆಗ ಮತ್ತು ಈಗಿನ ನಡುವಿನ ವ್ಯತ್ಯಾಸವೆಂದರೆ – ನಮ್ಮ ಶಕ್ತಿ ಈಗ ದ್ವಿಗುಣವಾಗಿದೆ. ಈ ಪಂದ್ಯದಲ್ಲೂ ನಾವು ಗೆಲುವು ಸಾಧಿಸುತ್ತೇವೆ” ಎಂದು ಮೊಹ್ಸಿನ್ ಸ್ಪಷ್ಟಪಡಿಸಿದರು.

2024ರ ವಿಶ್ವಕಪ್‌: ಸೂಪರ್ ಓವರ್‌ನಲ್ಲಿ ಯುಎಸ್ಎ ರೋಚಕ ಗೆಲುವು

2024ರ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಆಡಿದ್ದ ಯುಎಸ್ಎ, ಆ ಪಂದ್ಯವನ್ನು ಟೈಗೆ ತಲುಪಿಸಿತ್ತು. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 159 ರನ್ ಗಳಿಸಿತ್ತು. ಗುರಿ ಬೆನ್ನಟ್ಟಿದ ಯುಎಸ್ಎ ಕೂಡ 20 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 159 ರನ್ ಗಳಿಸಿತು.

ಸೂಪರ್ ಓವರ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಯುಎಸ್ಎ 18 ರನ್ ಗಳಿಸಿತು. ಈ ಗುರಿಯನ್ನು ಬೆನ್ನಟ್ಟಿದ ಪಾಕಿಸ್ತಾನ ತಂಡ ಕೇವಲ 13 ರನ್ ಗಳಿಸುವ ಮೂಲಕ ಸೋಲು ಕಂಡಿತು. ಈ ಐತಿಹಾಸಿಕ ಗೆಲುವನ್ನೇ ಮುಂದಿಟ್ಟುಕೊಂಡು ಇಂದಿನ ಪಂದ್ಯದಲ್ಲೂ ಗೆಲುವು ಸಾಧಿಸುವ ವಿಶ್ವಾಸವನ್ನು ಮೊಹಮ್ಮದ್ ಮೊಹ್ಸಿನ್ ವ್ಯಕ್ತಪಡಿಸಿದ್ದಾರೆ. (ಏಜೆನ್ಸೀಸ್)

Continue Reading

Trending