ದೇಶ
ಎನ್ ಡಿ ಎ ಮೈತ್ರಿಕೂಟಕ್ಕೆ ಗುಡ್ ಬೈ ಪವನ್ ಕಲ್ಯಾಣ್

ಆಂಧ್ರ ಪ್ರದೇಶ: ಕಷ್ಟದ ಸಮಯದಲ್ಲಿ ಟಿಡಿಪಿಯನ್ನು ಬೆಂಬಲಿಸಲು ಬಿಜೆಪಿ ನೇತೃತ್ವದ ಎನ್ಡಿಎಯಿಂದ ಹೊರಬಂದಿದ್ದೇನೆ ಎಂದು ನಟ ವiತ್ತು ರಾಜಕಾರಣಿ ಪವನ್ ಕಲ್ಯಾಣ್ ಘೋಷಿಸಿದ್ದಾರೆ, ಕೃಷ್ಣಾ ಜಿಲ್ಲೆಯ ಪೆಡನಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು ಟಿಡಿಪಿ ಬಲಿಷ್ಟ ಪಕ್ಷವಾಗಿದೆ, ಆಂಧ್ರ ಪ್ರದೇಶಸ ಉತ್ತಮ ಆಡಳಿತ ಮತ್ತು ಅಭಿವೃದ್ಧಿಗೆ ಜನಸೇನಾ ಟಿಡಿಪಿ ಅಗತ್ಯವಿದೆ, ಇಂದು ಟಿಡಿಪಿ ಹೋರಾಟ ನಡೆಸುತ್ತಿದೆ, ನಾನು ಅವರನ್ನು ಬೆಂಬಲಿಸುತ್ತೇವೆ, ಈ ಪರಿಸ್ಧಿತಿಯಲ್ಲಿ ಟಿಡಿಪಿಗೆ ಯುವ ರಕ್ತದ ಬೆಂಬಲ ಬೇಕು ಎಂದು ಹೇಳಿದರು, ಜುಲೈ 18ರಂದು ದೆಹಲಿಯಲ್ಲಿ ನಡೆದ ಎನ್ಡಿಎ ಸಭೆಯ ಬಳಿಕ ಜನಸೇನಾ ಪಕ್ಷದ ಮುಖ್ಯಸ್ಧ ಪವನ್ ಕಲ್ಯಾರ್ಣ ತಮ್ಮ ಪಕ್ಷವು ಪಿಎಂ ಮೋದಿ ಅವರ ದೃಷ್ಟಿಕೋನವನ್ನು ಬೆಂಬಲಿಸುತ್ತದೆ ಎಂದು ಹೇಳಿದ್ದರು, ಆಂಧ್ರಪ್ರದೇಶದಲ್ಲಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ವೈಎಸ್ಆರ್ಸಿಪಿ ವಿರುದ್ಧ ಹೋರಾಡಲು ಆಂಧ್ರಪ್ರದೇಶದಲ್ಲಿ ಟಿಡಿಪಿ, ಬಿಜೆಪಿ ಮತ್ತು ಅವರ ಪಕ್ಷದ ಮೈತ್ರಿಯನ್ನು ಪವನ್ ಕಲ್ಯಾಣ್ ಪ್ರಸ್ತಾಪಿಸಿದ್ದರು, ಈ ಬಗ್ಗೆ ಬಿಜೆಪಿ ಇನ್ನೂ ನಿರ್ಧಾರ ಕೈಕೊಳ್ಳಬೇಕಿದೆ, ಅದರೆ ಈಗ ಪವನ್ ಕಲ್ಯಾಣ್ ತಮ್ಮ ಪಕ್ಷ ಇನ್ನು ಮುಂದೆ ಎನ್ಡಿಎ ಭಾಗವಾಗುದಿಲ್ಲ ಎಂದು ಘೋಷಿಸಿದ್ದಾರೆ,
ದೇಶ
ಅಂಟಾಕ್ರ್ಟಿಕಾ ಧ್ರುವ ಪ್ರದೇಶದಲ್ಲಿ ನಿಗೂಢ ರೇಡಿಯೋ ತರಂಗಗಳು ಪತ್ತೆ..!

ಮನುಷ್ಯರು ಒಂದು ಕ್ಷಣವೂ ಇರಲಾಗದ ನಿರ್ಜನ ಪ್ರದೇಶವಾದ ಅಂಟಾಕ್ರ್ಟಿಕಾದ ಧ್ರುವ ಪ್ರದೇಶದಲ್ಲಿ ಮಂಜುಗಡ್ಡೆಯ ಮೇಲ್ಮೈಯಿಂದ ಹೊರಹೊಮ್ಮುತ್ತಿರುವ ನಿಗೂಢ ರೇಡಿಯೋ ತರಂಗಗಳನ್ನು ಸಂಶೋಧಕರು ಪತ್ತೆಹಚ್ಚಿದ್ದಾರೆ,
ಮಂಜುಗಡ್ಡೆಯ ಆಳದಿಂದ ರೇಡಿಯೋ ಸಂಕೇತಗಳು ಹೊರಸೂಸುತ್ತಿವೆ, ಈ ತರಂಗಗಳು ಸಾವಿರಾರು ಕಿಲೋಮೀಟರ್ ಬಂಡೆಗಳ ಮೂಲಕ ಹಾದು ಹೋಗೇಕಾಗಿತ್ತು ಅದರೆ ಇವು ಬಂಡೆಗಳಲ್ಲಿ ಹೀರಲ್ಪಡುತ್ತಿವೆ, ಇದು ಭೌತಶಾಸ್ತ್ರದ ನಿಯಮದ ವಿರುದ್ಧವಾಗಿದೆ, ಭೂವಿಯನ್ನು ತಲುಪುವ ಸಂಕೇತಗಳನ್ನು ವಿಶ್ಲೇಷಿಸುವ ಮೂಲಕ ಸಂಶೋಧಕರು ಈ ನಿಗೂಢ ರೇಡಿಯೋ ತರಂಗಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಪ್ರಯತ್ನಿಸುತ್ತಿದ್ದಾರೆ,
ಸದ್ಯ ಈ ನಿಗೂಢ ರೇಡಿಯೋ ತರಂಗಗಳು ವಿಜ್ಞಾನದ ಎಲ್ಲಾ ಪ್ರಯೋಗಗಳಿಗೂ ವಿರುದ್ಧ ವಾಗಿರುವುದು ಸಂಶೋಧಕರಲ್ಲಿ ಕುತೂಹಲ ಹೆಚ್ಚಿಸಿದೆ, ಈ ಹಿನ್ನೆಲೆಯಲ್ಲಿ ಕೆಲ ಮಾದರಿಗಳನ್ನು ಸಂಗ್ರಹಿಸಿರುವ ಸಂಶೋಧಕರು ಈ ನಿಗೂಢತೆಯನ್ನು ಭೇದಿಸಲು ತಮ್ಮ ಪ್ರಯತ್ನಗಳನ್ನು ಆರಂಭಿಸಿದ್ದಾರೆ,
ಅಪರಾಧ
ನಕಲಿ ವೈದ್ಯನ ಚಿಕಿತ್ಸೆಯಿಂದ ಮಗು ಬಲಿ

ರಾಮನಗರ: ರಾಮನಗರದಲ್ಲಿ (Ramanagara news) ನಕಲಿ ವೈದ್ಯನ ಚಿಕಿತ್ಸೆಯಿಂದಾಗಿ (treatment) ಶಿವರಾಜ್ ಎಂಬವರ ಆರು ತಿಂಗಳ ಕಂದಮ್ಮ (child death) ಸಾವನ್ನಪ್ಪಿದೆ. 6 ತಿಂಗಳ ಮಗುವಿನ ಸಾವನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಕ್ತ ಕ್ರಮಕ್ಕೂ ಸೂಚನೆ ನೀಡಿದೆ. ಶಿವರಾಜ್ ಎಂಬವರ ಆರು ತಿಂಗಳ ಪ್ರಾಯದ ಮಗು ಶರಣ್ಯ ಮೃತಪಟ್ಟವಳು. ನಕಲಿ ವೈದ್ಯ (Fake Doctor) ಮಹಮ್ಮದ್ ಸೈಫುಲ್ಲ ಎಂಬಾತ ಎಂದು ಗುರುತಿಸಲಾಗಿದೆ.
ಮಹಮ್ಮದ್ ಸೈಫುಲ್ಲ ಎಂಬವನು ವೈದ್ಯಕೀಯ ಕೋರ್ಸ್ ಮಾಡದೇ, ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆಯದೇ ಸಣ್ಣ ಕೋಣೆಯೊಂದರಲ್ಲಿ ಚಿಕಿತ್ಸೆ ನೀಡುತ್ತಿದ್ದ. ಈತನಿಂದಾಗಿ ಮಗು ಮರಳಿ ಬಾರದ ಲೋಕಕ್ಕೆ ತೆರಳಿದೆ. ಇದು ಜಿಲ್ಲೆಯ ಜನರನ್ನು ಸಾಕಷ್ಟು ಆತಂಕಕ್ಕೆ ಒಳಗಾಗುವಂತೆ ಮಾಡಿದೆ. ರಾಮನಗರದಲ್ಲಿ ಸಾಕಷ್ಟು ನಕಲಿ ಕ್ಲಿನಿಕ್ಗಳು ತಲೆ ಎತ್ತಿದ್ದು ಅವುಗಳ ವಿರುದ್ಧ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.
ಬೆಂಗಳೂರು ದಕ್ಷಿಣ ಜಿಲ್ಲೆಯಾದ್ಯಂತ ಒಟ್ಟು 193 ಕ್ಲಿನಿಕ್ ಹಾಗೂ ಆಸ್ಪತ್ರೆಗಳಿಗೆ ಮಾತ್ರ ಆರೋಗ್ಯ ಇಲಾಖೆಯಿಂದ ಅನುಮತಿ ಸಿಕ್ಕಿದೆ. ಆದರೆ ಕೆಲವರು ಹಣದಾಸೆಗೆ ನಕಲಿ ಕ್ಲಿನಿಕ್ ನಡೆಸುತ್ತಿದ್ದಾರೆ. ಆರೋಗ್ಯ ಇಲಾಖೆ ಕಳೆದ ನಾಲ್ಕು ತಿಂಗಳಲ್ಲಿ ಆರು ನಕಲಿ ವೈದ್ಯರನ್ನು ಪತ್ತೆ ಮಾಡಿದೆ. ಇಬ್ಬರ ವಿರುದ್ಧ ಕ್ರಮ ತೆಗೆದುಕೊಂಡಿದ್ದರೂ ಇನ್ನೂ ಕೆಲವರು ಹಣದಾಸೆಗೆ ನಕಲಿ ಕ್ಲಿನಿಕ್ ನಡೆಸುತ್ತಿದ್ದಾರೆ. ನಕಲಿ ಕ್ಲಿನಿಕ್ಗಳ ಬಗ್ಗೆ ಜನರು ಎಚ್ಚರಿದಿಂದ ಇರಬೇಕು. ಗಮನಕ್ಕೆ ಬಂದ ಕೂಡಲೇ ಅವುಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ್ ಮನವಿ ಮಾಡಿದ್ದಾರೆ
ದೇಶ
ಪರಪ್ಪನ ಅಗ್ರಹಾರ ಜೈಲಿಗೆ ಸೇರಿದ ಕಾಂಗ್ರೆಸ್ ಶಾಸಕ ವಿನಯ್!

ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿ ಧಾರವಾಡ ಶಾಸಕ ವಿನಯ್ ಕುಲಕರ್ಣಿ ಜಾಮೀನು ರದ್ದಾಗಿದೆ, ಅದ್ದರಿಂದ ಕೋರ್ಟ್ ಆದೇಶದಂತೆ ಇಂದು ವಿನಯ್ ಕುಲಕರ್ಣಿಯವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಕೋಟ್ ವಿಚಾರಣೆ ಮುಗಿದ ಬಳಿಕ ಶಾಸಕ ವಿನಯ್ ಕುಲಕರ್ಣಿಯವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುವುದು, ಇತ್ತೀಚಿಗೆ ಸುಪ್ರೀಂ ಕೋರ್ಟ್ ವಿನಯ್ ಕುಲಕರ್ಣಿಯ ಜಾಮೀನನ್ನು ರದ್ದುಪಡಿಸಿತು, ಒಂದು ವಾರದೊಳಗೆ ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚಿಸಿತ್ತು,
ಇವರ ಬೆಂಬಲಿಗರು ಸಿಟಿ ಸಿವಿಲ್ ಕೋರ್ಟ್ ಮುಂಭಾಗ ಜಮಾಯಿಸಿದ್ರು, ಪರಪ್ಪನ ಅಗ್ರಹಾರ ಜೈಲಿಗೆ ವಿನಯ್ ಕುಲಕರ್ಣಿಯನ್ನು ಸಿಬಿಐ ಅಧಿಕಾರಿಗಳು ಕರೆದೊಯ್ದಿದ್ದಾರೆ, ಈ ವೇಳೆ ತಮ್ಮ ನಾಯಕ ಜೈಲು ಸೇರುತ್ತಿರೋದನ್ನು ಕಂಡು ಕೋರ್ಟ್ ಮುಂಭಾಗ ಬೆಂಬಲಿಗರು ಕಣ್ಣೀರು ಹಾಕಿದ್ದಾರೆ,
ಏನಿದು ಪ್ರಕರಣ?
9 ವರ್ಷಗಳ ಹಿಂದೆ ಅಂದರೆ 2016 ರ ಜೂನ್ 15 ರಂದು ಧಾರವಾಡ ತಾಲೂಕಿನ ಹೆಬ್ಬಳ್ಳಿ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡನನ್ನು ಅವರದ್ದೇ ಮಾಲೀಕತ್ವದ ಜಿಮ್ ನಲ್ಲಿ ಭೀಕರವಾಗಿ ಹತ್ಯೆಗೈಯ್ಯಲಾಗಿತ್ತು, ಇದರಲ್ಲಿ ಮಾಜಿ ಸಚಿವ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಕೈವಾಡ ಇದೆ ಎಂಬ ಆರೋಪವಿದೆ, ಪ್ರಕರಣಕ್ಕೆ ಸಂಬಂಧಿಸಿದಂತೆ 2020 ನವೆಂಬರ್ 5 ರಂದು ವಿನಯ್ ಕುಲಕರ್ಣಿಯನ್ನು ಸಿಬಿಐ ಬಂಧಿಸಿತ್ತು, ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚಿಗೆ ಸುಪ್ರೀಂಕೋರ್ಟ್ ಜಾಮೀನು ರದ್ದುಗೊಳಿಸಿ ಆದೇಶಿಸಿತ್ತು,
-
ಬಿಬಿಎಂಪಿ1 month ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು1 year ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು7 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ